Tag: ಸುಬ್ರಮಣ್ಯಪುರ

  • ಪ್ರೇಯಸಿ ಕಾರುಗಳಿಗೆ ಬೆಂಕಿ ಹಚ್ಚಿದ್ದ ಕೇಸ್‌ಗೆ ಟ್ವಿಸ್ಟ್ – ಇದಕ್ಕೂ ಮುನ್ನ ಯುವತಿ ತಂದೆಗೆ ಚಾಕು ಇರಿದಿದ್ದ ಪಾಗಲ್ ಪ್ರೇಮಿ

    ಪ್ರೇಯಸಿ ಕಾರುಗಳಿಗೆ ಬೆಂಕಿ ಹಚ್ಚಿದ್ದ ಕೇಸ್‌ಗೆ ಟ್ವಿಸ್ಟ್ – ಇದಕ್ಕೂ ಮುನ್ನ ಯುವತಿ ತಂದೆಗೆ ಚಾಕು ಇರಿದಿದ್ದ ಪಾಗಲ್ ಪ್ರೇಮಿ

    ಬೆಂಗಳೂರು: ಪ್ರೇಯಸಿ ಕಾರುಗಳಿಗೆ ಬೆಂಕಿ ಹಚ್ಚಿದ್ದ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಬೆಂಕಿ ಹಚ್ಚುವ ಮುನ್ನ ಯುವತಿ ಮನೆಗೆ ತೆರಳಿ ತಂದೆಗೆ ಚಾಕು ಇರಿದಿದ್ದ ಎನ್ನುವುದು ಬೆಳಕಿಗೆ ಬಂದಿದೆ.

    ಈ ಘಟನೆ ಬೆಂಗಳೂರಿನ (Bengaluru) ಸುಬ್ರಮಣ್ಯಪುರದಲ್ಲಿ ನಡೆದಿದ್ದು, ಆರೋಪಿಯನ್ನು ರೌಡಿಶೀಟರ್ ರಾಹುಲ್ ಎಂದು ತಿಳಿಯಲಾಗಿದೆ. ಕೊಲೆ ಯತ್ನ, ದರೋಡೆ, ರಾಬರಿ ಸೇರಿದಂತೆ 18 ಕೇಸ್‌ಗಳಿವೆ. ಕಳೆದ ಕೆಲವು ತಿಂಗಳುಗಳಿಂದ ಯುವತಿ ಆತನ ಪ್ರೀತಿಯನ್ನು ನಿರಾಕರಿಸುತ್ತಿದ್ದಳು. ಹೀಗಾಗಿ ಭಾನುವಾರ ಸ್ನೇಹಿತರ ಜೊತೆ ಬಂದು ಪ್ರೇಯಸಿಯ ಕಾರುಗಳಿಗೆ ಬೆಂಕಿ ಇಟ್ಟಿದ್ದ.ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕಾಗಿ ಯುವತಿಯ ಕಾರು, ಬೈಕ್‌ಗಳಿಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ

    ಪ್ರೇಯಸಿಯನ್ನು ಹುಡುಕಿಕೊಂಡ ಸಿಕೆ ಅಚ್ಚುಕಟ್ಟು ಮನೆಗೆ ಬಂದಿದ್ದಾನೆ. ಅಲ್ಲಿ ಗಲಾಟೆ ಮಾಡಿದ್ದು, ಯುವತಿಯ ಸಾಕು ತಂದೆ ಲಕ್ಷ್ಮೀನಾರಾಯಣ ವಿರೋಧಿಸಿದ್ದಕ್ಕೆ ರೊಚ್ಚಿಗೆದ್ದ ರಾಹುಲ್ ಅವರಿಗೆ ಚಾಕು ಇರಿದಿದ್ದ. ಬಳಿಕ ಅಲ್ಲಿ ಯುವತಿ ಇಲ್ಲದಿರುವುದನ್ನು ತಿಳಿದು ಸುಬ್ರಮಣ್ಯಪುರದ ಚಿಕ್ಕಲಸಂದ್ರ ಅಪಾರ್ಟ್ಮೆಂಟ್‌ಗೆ ತೆರಳಿದ್ದ. ಅಲ್ಲಿ ಅಪಾರ್ಟ್ಮೆಂಟ್‌ನ ಸೆಕ್ಯೂರಿಟಿ ಗಾರ್ಡ್‌ಗೆ ಯುವತಿಯ ಫೋಟೋ ತೋರಿಸಿ ಕಾರು ಯಾವುದು ಎಂದು ತಿಳಿದುಕೊಂಡಿದ್ದಾನೆ. ಕಾರು ಗ್ಲಾಸ್ ಒಡೆದು ಪೆಟ್ರೋಲ್ ಹಾಕಿ ಕಾರಿಗೆ ಬೆಂಕಿ ಹಚ್ಚಿದ್ದಾನೆ. ಇದರಿಂದ ಪಕ್ಕದ ಕಾರಿಗೆ ಬೆಂಕಿ ವ್ಯಾಪಿಸಿತ್ತು.

    ಸದ್ಯ ಆರೋಪಿಯ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಪ್ರಿಯತಮೆ ತಾಯಿಯಿಂದ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆ ಹಾಗೂ ವಿರೇಶ್ ಎಂಬುವವರಿಂದ ಕಾರಿಗೆ ಹಾನಿ ಮಾಡಿದ್ದ ಹಿನ್ನೆಲೆ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಏನಿದರ ಹಿನ್ನೆಲೆ?
    ಕಳೆದ 9 ವರ್ಷಗಳಿಂದ ರಾಹುಲ್ ಹಾಗೂ ಯುವತಿ ಪ್ರೀತಿಸುತ್ತಿದ್ದರು. ರಾಹುಲ್ ಹನುಮಂತನಗರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ. ಈತನ ಹಿನ್ನೆಲೆ ಗೊತ್ತಿದ್ದರೂ ಕೂಡ ಆತನನ್ನು ಪ್ರೀತಿಸಿದ್ದಳು. ಆದರೆ ಕಳೆದ ಕೆಲ ತಿಂಗಳುಗಳಿಂದ ಯುವತಿ ಪ್ರೀತಿ ನಿರಾಕರಿಸಿದ್ದಳು. ತನ್ನನ್ನು ಬಿಟ್ಟು ಬೇರೆ ಯಾರನ್ನೂ ಮದುವೆಯಾಗದಂತೆ ಎಚ್ಚರಿಕೆ ನೀಡಲು ತನ್ನ ಸಹಚರರನ್ನ ಕೆರದುಕೊಂಡು ಬಂದು ಭಾನುವಾರ ಕೃತ್ಯ ಎಸಗಿದ್ದ.

    ರೌಡಿ ರಾಹುಲ್ ಕೊಡಿಸಿದ್ದ ಕಾರು:
    ರೌಡಿಶೀಟರ್ ರಾಹುಲ್ ತನ್ನ ಪ್ರೀತಿಯ ಸಂಕೇತವಾಗಿ ಯುವತಿಗೆ ಕೆಲ ವರ್ಷಗಳ ಹಿಂದೆ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದ ಎಂದು ಹೇಳಲಾಗಿದೆ. ಶನಿವಾರ ತಡರಾತ್ರಿ ಕೂಡ ತಾನು ಕೊಡಿಸಿದ್ದ ಕಾರಿಗೆ ರಾಹುಲ್ ಬೆಂಕಿ ಹಚ್ಚಿದ್ದಾನೆ ಎಂದು ಹೇಳಲಾಗಿದೆ. ಮತ್ತೊಂದೆಡೆ ಪ್ರಿಯಕರ ಮನೆ ಬಳಿ ಬಂದು ಗಲಾಟೆ ಮಾಡುತ್ತಿದ್ದಂತೆ ಗಾಬರಿಗೊಂಡು ಯುವತಿ ಬೆಂಗಳೂರು ತೊರೆದಿದ್ದಾಳೆ. ಹೀಗಾಗಿ ಆಕೆಯನ್ನು ಸಂಪರ್ಕಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಆಕೆ ಬಂದ ಬಳಿಕ ಸಂಪೂರ್ಣ ಮಾಹಿತಿ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ: ಸಾಲಭಾದೆ ತಾಳಲಾರದೆ ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

  • ಪ್ರೀತಿ ನಿರಾಕರಿಸಿದ್ದಕ್ಕಾಗಿ ಯುವತಿಯ ಕಾರು, ಬೈಕ್‌ಗಳಿಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ

    ಪ್ರೀತಿ ನಿರಾಕರಿಸಿದ್ದಕ್ಕಾಗಿ ಯುವತಿಯ ಕಾರು, ಬೈಕ್‌ಗಳಿಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ

    ಬೆಂಗಳೂರು: ಯುವತಿ ಪ್ರೀತಿ ನಿರಾಕರಿಸಿದ್ದಕ್ಕಾಗಿ ಆಕೆಯ ಕಾರು ಹಾಗೂ ಬೈಕ್‌ಗಳಿಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ (Bengaluru) ಸುಬ್ರಮಣ್ಯಪುರದಲ್ಲಿ (Subramanyapura) ನಡೆದಿದೆ.

    ಆರೋಪಿಯನ್ನು ರಾಹುಲ್ ಎಂದು ಗುರುತಿಸಲಾಗಿದೆ. ಸ್ನೇಹಿತರ ಜೊತೆ ಬಂದು ಬೆಂಕಿ ಹಚ್ಚಿ, ಹಲ್ಲೆ ಎಸಗಿದ್ದಾರೆ.ಇದನ್ನೂ ಓದಿ: ಪಂದ್ಯಕ್ಕೂ ಮುನ್ನವೇ ಪಾಕ್‌ ಹೈಡ್ರಾಮಾ – ಏನೇ ಆದ್ರೂ ಭಾರತವನ್ನು ಸೋಲಿಸಬೇಕು ಎಂದ ಪಿಸಿಬಿ ಮುಖ್ಯಸ್ಥ

    ಯುವತಿ ತನ್ನ ಪ್ರೀತಿಯನ್ನು ಪದೇ ಪದೇ ನಿರಾಕರಿಸುತ್ತಿದ್ದರಿಂದ ರೊಚ್ಚಿಗೆದ್ದ ರಾಹುಲ್ ಹಾಗೂ ಗ್ಯಾಂಗ್ ಕೃತ್ಯ ಎಸಗಿದ್ದಾರೆ. ಮೂರು ನಾಲ್ಕು ಬೈಕ್‌ಗಳಲ್ಲಿ ಗ್ಯಾಂಗ್ ಸಮೇತ ಬಂದು, ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯ ಮುಂದಿದ್ದ ಮನೆಯ ಮುಂದಿನ ಬೈಕ್ ಹಾಗೂ ಎರಡು ಕಾರುಗಳಿಗೆ ಬೆಂಕಿ ಇಟ್ಟಿದ್ದಾರೆ.

    ಬಳಿಕ ಅಲ್ಲಿಂದ ಸುಬ್ರಮಣ್ಯಪುರ ಶ್ರೀನಿಧಿ ಅಪಾರ್ಟ್ಮೆಂಟ್ ಬಳಿ ತೆರಳಿದ್ದಾರೆ. ಈ ವೇಳೆ ಅಪಾರ್ಟ್ಮೆಂಟ್ ಬಳಿಯಿದ್ದ ಸೆಕ್ಯುರಿಟಿ ಗಾರ್ಡ್ ತಡೆಯಲು ಬಂದಾಗ ಆತನ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಬಳಿಕ ಅಲ್ಲಿದ್ದ ಕಾರುಗಳಿಗೆ ಕೂಡ ಬೆಂಕಿ ಇಟ್ಟಿದ್ದಾರೆ. ಸದ್ಯ ಘಟನೆ ಸಂಬಂಧ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಶಿವಸೇನೆ, ಮಹಾರಾಷ್ಟ್ರ ನವನಿರ್ಮಾಣ ಸೇನೆ ಕಾರ್ಯಕರ್ತರ ಪುಂಡಾಟ

     

  • ವಿದ್ಯಾರ್ಥಿನಿ ಪ್ರಬುದ್ಧಾ ಕೊಲೆ ಕೇಸ್ ಸಿಐಡಿ ಹೆಗಲಿಗೆ – ಸಿದ್ದರಾಮಯ್ಯ ಸೂಚನೆ

    ವಿದ್ಯಾರ್ಥಿನಿ ಪ್ರಬುದ್ಧಾ ಕೊಲೆ ಕೇಸ್ ಸಿಐಡಿ ಹೆಗಲಿಗೆ – ಸಿದ್ದರಾಮಯ್ಯ ಸೂಚನೆ

    ಬೆಂಗಳೂರು: ಸುಬ್ರಮಣ್ಯಪುರ (Subramanyapura) ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಪ್ರಬುದ್ಧಾ ಕೊಲೆ ಪ್ರಕರಣವನ್ನು (Prabuddha Murder Case) ಸಿಐಡಿ (CID) ಹೆಗಲಿಗೆ ವಹಿಸಲು ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ.

    ಬೆಂಗಳೂರು ದಕ್ಷಿಣದ ಸುಬ್ರಮಣ್ಯಪುರದಲ್ಲಿ ಪ್ರಬುದ್ಧಾ ಕೊಲೆ ನಡೆದಿತ್ತು. ಇದರಿಂದ ನೊಂದ ಪ್ರಬುದ್ಧಾ ತಾಯಿ ಸೌಮ್ಯಾ ಸಿಎಂಗೆ ಮನವಿ ಕೊಟ್ಟಿದ್ದರು. ತಾಯಿ ಮನವಿ ಮೇರೆಗೆ ಸಿಐಡಿಗೆ ಕೇಸ್ ನೀಡುವಂತೆ ಡಿಜಿ-ಐಜಿಪಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇದನ್ನೂ ಓದಿ: ಅಬ್ಬಿ ಫಾಲ್ಸ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ನೀರುಪಾಲದ ಯುವಕ

    ಸಿಎಂಗೆ ದೂರು ನೀಡಿದ ಬಳಿಕ ಕೊಲೆಯಾದ ಪ್ರಬುದ್ಧಾ ತಾಯಿ ಸೌಮ್ಯಾ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಮಗಳನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಬಳಿಕ ಆತನಿಗೆ ಜಾಮೀನು ಸಿಕ್ಕಿದೆ. ಈ ಸಂಬಂಧ ಸಿಎಂ ಅವರಿಗೆ ಮನವಿ ಕೊಟ್ಟಿದ್ದೇವೆ. ಸಿಐಡಿ ತನಿಖೆಗೆ ನೀಡುವಂತೆ ಮನವಿ ಮಾಡಿದ್ದೆ. ಸಿಎಂ ಸಿಐಡಿಗೆ ವಹಿಸಲು ಒಪ್ಪಿಗೆ ನೀಡಿದ್ದಾರೆ. ಕೇಸ್ ತನಿಖೆ ಆಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: 1 ಲಕ್ಷ ರೂ. ವ್ಯವಹಾರಕ್ಕೆ 1 ಸಾವಿರ ರೂ. ಕಮಿಷನ್‌ – ವಂಚನೆಗಾಗಿ ಬಾಡಿಗೆಗೆ ಸಿಗುತ್ತೆ ಬ್ಯಾಂಕ್‌ ಖಾತೆ!

     

     

    ಪ್ರಕರಣ ಏನು?
    ಮೇ 15 ರಂದು 20 ವರ್ಷದ ಪ್ರಬುದ್ಧಾ ಮೃತದೇಹ ಮನೆಯ ಬಾತ್‌ರೂಂನಲ್ಲಿ ಪತ್ತೆ ಆಗಿತ್ತು. ಕತ್ತು ಹಾಗೂ ಕೈ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಅಂತಾ ಪೊಲೀಸರು ಪರಿಗಣಿಸಿದ್ದರು. ಮಗಳ ಸಾವಿನ ಬಗ್ಗೆ ತಾಯಿ ಅನುಮಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಬಿಯರ್ ಬಾಟಲಿಯಿಂದ ಹಲ್ಲೆಗೈದು ಎಸ್ಕೇಪ್ ಆಗಲು ಯತ್ನ – ಆರೋಪಿ ಕಾಲಿಗೆ ಗುಂಡೇಟು

    ನನ್ನ ಮಗಳ ಕತ್ತು ಮತ್ತು ಕೈಯನ್ನ ಚಾಕುವಿನಿಂದ ಕುಯ್ದು ಕ್ರೂರವಾಗಿ ಕೊಲೆ ಮಾಡಿದ್ದಾರೆ. ಮುಖಕ್ಕೆ ಮತ್ತು ತಲೆಯ ಹಿಂಭಾಗಕ್ಕೆ ಬಲವಾಗಿ ಹೊಡೆಯಲಾಗಿದೆ. ಹೀಗಾಗಿ ನನ್ನ ಮಗಳದ್ದು ಆತ್ಮಹತ್ಯೆ ಅಲ್ಲ ಕೊಲೆ ಅಂತ ದೂರು ದಾಖಲಿಸಿದ್ದರು. ಈ ಕುರಿತು ತನಿಖೆ ಆರಂಭಿಸಿದ ಪೊಲೀಸರಿಗೆ ಸ್ನೇಹಿತನ ಕನ್ನಡಕ ರಿಪೇರಿ ವಿಚಾರದಲ್ಲಿ ಅಪ್ರಾಪ್ತನೇ ಪ್ರಬುದ್ಧಾ ಕೊಲೆ ಮಾಡಿರುವುದು ತಿಳಿದಿದೆ. ಇದನ್ನೂ ಓದಿ: ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಹೆಚ್‌ಡಿಕೆಯ ರಾಜಕಾರಣ, ದಿನಚರಿ ನಡೆಯಲ್ಲ: ಡಿ.ಕೆ.ಸುರೇಶ್

    ಕೊಲೆಮಾಡಿದ ಅಪ್ರಾಪ್ತ ತನ್ನ ಸ್ನೇಹಿತನ ಕನ್ನಡಕ ಡ್ಯಾಮೇಜ್ ಮಾಡಿದ್ದನು. ಇದನ್ನು ರಿಪೇರಿ ಮಾಡಿಸಿಕೊಡುವಂತೆ ಸ್ನೇಹಿತ ಪಟ್ಟು ಹಿಡಿದಿದ್ದನು. ಹಾಗಾಗಿ ಅಪ್ರಾಪ್ತ ಪ್ರಬುದ್ಧಾ ಮನೆಗೆ ಬಂದಿದ್ದನು. ಹೀಗೆ ಬಂದವನೇ ಪ್ರಬುದ್ಧಾ ಪರ್ಸ್‌ನಿಂದ 2 ಸಾವಿರ ರೂ. ಎಗರಿಸಿದ್ದಾನೆ. ಈ ವಿಚಾರ ಪ್ರಬುದ್ಧಾ ಗಮನಕ್ಕೆ ಬಂದಿದ್ದು, ಆಕೆ ಬಾಲಕನನ್ನು ಪ್ರಶ್ನೆ ಮಾಡಿದ್ದಾಳೆ. ಆಗ ಬಾಲಕ, ತಪ್ಪಾಯ್ತು ಕ್ಷಮಿಸಿಬಿಡು ಎಂದು ಕಾಲು ಹಿಡಿದುಕೊಂಡಿದ್ದಾನೆ. ಹೀಗೆ ಕಾಲು ಹಿಡಿದಾಗ ಪ್ರಬುದ್ಧಾ ಆಯಾತಪ್ಪಿ ಬಿದ್ದಿದ್ದಾಳೆ. ಇದನ್ನೂ ಓದಿ: ಮೂರು ಡಿಸಿಎಂ ಹುದ್ದೆ ಹೈಕಮಾಂಡ್ ತೀರ್ಮಾನ ಮಾಡುತ್ತೆ: ಯತೀಂದ್ರ ಸಿದ್ದರಾಮಯ್ಯ

    ಕೆಳಗಡೆ ಬಿದ್ದ ಕಾರಣ ಆಕೆಯ ತಲೆಗೆ ಬಲವಾದ ಪೆಟ್ಟು ಬಿದ್ದು ಮೂರ್ಛೆ ಹೋಗಿ ಪ್ರಜ್ಞೆ ತಪ್ಪಿದ್ದಾಳೆ. ಇದರಿಂದ ಭಯಬಿದ್ದ ಅಪ್ರಾಪ್ತ ಆತ್ಮಹತ್ಯೆ ಎಂಬಂತೆ ಬಿಂಬಿಸಲು ಯುವತಿ ಕೈ ಕುಯ್ದಿದ್ದನು. ಕೈಯಲ್ಲಿ ರಕ್ತಸ್ರಾವ ಆಗಿ ಪ್ರಬುದ್ಧಾ ಸಾವನ್ನಪ್ಪಿದ್ದಾಳೆ ಎಂಬ ವಿಚಾರ ಬಹಿರಂಗವಾಗಿದೆ. ಇದನ್ನೂ ಓದಿ: ಸಚಿವ ರಾಜಣ್ಣ ಹೈಕಮಾಂಡ್ ಬಳಿ ಹೋಗಿ ಸಿಎಂ ಹುದ್ದೆಯೇ ಕೇಳಲಿ: ಪ್ರಿಯಾಂಕ್ ಖರ್ಗೆ ಕಿಡಿ

  • ಪ್ರಬುದ್ಧಾ ಹತ್ಯೆಯನ್ನು ಆತ್ಮಹತ್ಯೆ ಅಂತಾ ಬಿಂಬಿಸಲು ಪ್ಲಾನ್- ಕುತ್ತಿಗೆ, ಕೈಯಲ್ಲಿದ್ದ ಕಲೆಗಳನ್ನೇ ಬಂಡವಾಳ ಮಾಡಿಕೊಂಡಿದ್ದ ಅಪ್ರಾಪ್ತ

    ಪ್ರಬುದ್ಧಾ ಹತ್ಯೆಯನ್ನು ಆತ್ಮಹತ್ಯೆ ಅಂತಾ ಬಿಂಬಿಸಲು ಪ್ಲಾನ್- ಕುತ್ತಿಗೆ, ಕೈಯಲ್ಲಿದ್ದ ಕಲೆಗಳನ್ನೇ ಬಂಡವಾಳ ಮಾಡಿಕೊಂಡಿದ್ದ ಅಪ್ರಾಪ್ತ

    ಬೆಂಗಳೂರು: ಪ್ರಬುದ್ಧಾಳ ಹತ್ಯೆ (Prabuddha Murder Case) ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಇದೀಗ ಅಪ್ರಾಪ್ತ (Minor) ಬಾಲಕ ಪ್ರಬುದ್ಧಾ ಹತ್ಯೆಯನ್ನು ಆತ್ಮಹತ್ಯೆ (Suicide) ಎಂದು ಬಿಂಬಿಸಲು ಮಾಡಿದ್ದ ಪ್ಲಾನ್ ಬಗ್ಗೆ ಪೊಲೀಸರ ಬಳಿ ಎಳೆಎಳೆಯಾಗಿ ಮಾಹಿತಿ ಬಿಚ್ಚಿಟ್ಟಿದ್ದಾನೆ.

    ಕೊಲೆಯಾದ ಪ್ರಬುದ್ಧಾ ಮೈಮೇಲೆ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಂತ ಕಲೆ ಮತ್ತು ಗುರುತನ್ನು ಬಂಡವಾಳ ಮಾಡಿಕೊಂಡು ಕೊಲೆಗೈದಿರುವುದಾಗಿ ಅಪ್ರಾಪ್ತ ಪೊಲೀಸರಿಗೆ ತಿಳಿಸಿದ್ದಾನೆ. ಪ್ರಬುದ್ಧಾಳ ಕುತ್ತಿಗೆ ಹಾಗೂ ಕೈಯಲ್ಲಿದ್ದ ಕಲೆಗಳನ್ನೇ ಬಂಡವಾಳ ಮಾಡಿಕೊಂಡಿದ್ದ ಆರೋಪಿ, ಯುವತಿ ಮೈಮೇಲೆ ಇದ್ದ ಗುರುತುಗಳ ಮಾದರಿಯಲ್ಲಿ ಚಾಕುವಿನಿಂದ ಕೈ ಭಾಗಕ್ಕೆ ಕೊಯ್ದಿದ್ದಾನೆ. ಕೈ ಕೊಯ್ದ ಪರಿಣಾಮ ಅತಿಯಾಗಿ ರಕ್ತಸ್ರಾವವಾಗಿ ಪ್ರಬುದ್ಧಾ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಮತಗಟ್ಟೆಯೊಳಗೆ ಬಿಜೆಪಿಯವರು ಕರಪತ್ರ ತರುತ್ತಿದ್ದಾರೆ: ಆಪ್‌ ಆರೋಪ

     

    ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಪ್ರಬುದ್ಧಾ ಅನುಮಾನಾಸ್ಪದ ಸಾವಿನ ರಹಸ್ಯವನ್ನು ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರಂಭದಲ್ಲಿ ಪ್ರಬುದ್ಧಾ ಸಾವಿನ ಬಗ್ಗೆ ಕ್ಲಾರಿಟಿ ಸಿಗದೇ ಪೊಲೀಸರು ಮೇಲ್ನೋಟಕ್ಕೆ ಇದೊಂದು ಕ್ಲಿಯರ್ ಕಟ್ ಸೂಸೈಡ್ ಎಂದು ಯುಡಿಆರ್ ಕೇಸ್ ದಾಖಲಿಸಿಕೊಂಡಿದ್ದರು. ಪ್ರಬುದ್ಧಾ ತಾಯಿ ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದರು. ಅನುಮಾನಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮರಣೋತ್ತರ ಪರೀಕ್ಷೆ ಮಾಡಿಸಿರುತ್ತಾರೆ. ಮರಣೋತ್ತರ ಪರೀಕ್ಷೆಯ ರಿಪೋರ್ಟ್‌ನಲ್ಲಿ ಕೂಡ ಆತ್ಮಹತ್ಯೆಯೋ ಅಥವಾ ಕೊಲೆಯಾ ಎಂಬ ಬಗ್ಗೆ ಕ್ಲಿಯರ್ ಕಟ್ ಆಗಿ ಪೊಲೀಸರಿಗೆ ಮಾಹಿತಿ ಸಿಗೋದಿಲ್ಲ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆಯೇ ಕಲ್ಲು ತೂರಾಟ!

    ಪೊಲೀಸರು ವಿದ್ಯಾರ್ಥಿನಿ ಪ್ರಬುದ್ಧಾ ಸಾವಿನ ಬಗ್ಗೆ ತಲೆಕೆಡಿಸಿಕೊಂಡು ತನಿಖೆ ಮಾಡಿದಾಗ ಕೊಲೆಯ ಬಗ್ಗೆ ಸಣ್ಣ ಸುಳಿವು ಸಿಗೋದಿಲ್ಲ. ತನಿಖಾಧಿಕಾರಿಗಳ ನಿರಂತರ ಪ್ರಯತ್ನದಿಂದ ಕೊಲೆಯಾಗಿದ್ದ ಮನೆಯಿಂದ ಮೂರ್ನಾಲ್ಕು ರಸ್ತೆಯ ಪಕ್ಕದ ಸಿಸಿಟಿವಿಯಲ್ಲಿ ಸಂಜೆ ಐದು ಗಂಟೆ ಆಸುಪಾಸಿನಲ್ಲಿ ಅಪ್ರಾಪ್ತನೊಬ್ಬ ಹೋಗಿರುವುದರ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಗುತ್ತದೆ. ಮೊದಮೊದಲು ಅಪ್ರಾಪ್ತನ ಬಗ್ಗೆ ಪೊಲೀಸರಿಗೆ ಅಷ್ಟೇನು ಅನುಮಾನ ಬರೋದಿಲ್ಲ. ಮನೆಗೆ ಬಂದವನು ಮರಳಿ ಹೋಗಿದ್ದರ ಮಾಹಿತಿ ಪೊಲೀಸರಿಗೆ ಸಿಗೋದಿಲ್ಲ. ಇದನ್ನೂ ಓದಿ: ರಾತ್ರಿ ಸುರಿದ ಮಳೆಗೆ ರಾಜಕಾಲುವೆಗೆ ಉರುಳಿದ ಆಟೋ – ಚಾಲಕ ದುರ್ಮರಣ

    ಪೊಲೀಸರು ಅನುಮಾನ ವ್ಯಕ್ತಪಡಿಸಿ ಅಪ್ರಾಪ್ತನನ್ನು ಕರೆದುಕೊಂಡು ಬಂದು ಪುಸಲಾಯಿಸಿ ಕೇಳಿದಾಗ ಪ್ರಬುದ್ಧಾ ಅನುಮಾನಸ್ಪದ ಸಾವಿನ ರಹಸ್ಯ ಎಳೆ ಎಳೆಯಾಗಿ ಬಿಚ್ಚಿಡುತ್ತಾನೆ. ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಮಾಡಿದ್ದ ಪ್ಲಾನ್ ಬಗ್ಗೆ ಪೊಲೀಸರ ಮುಂದೆ ಹೇಳಿದ್ದಾನೆ. ಇದನ್ನೂ ಓದಿ: ಚನ್ನಗಿರಿಯಲ್ಲಿ ಲಾಕಪ್ ಡೆತ್ ಆರೋಪ- ಕುಟುಂಬಸ್ಥರಿಂದ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ

  • ಮಧ್ಯರಾತ್ರಿ ನಡುರಸ್ತೆಯಲ್ಲಿಯೇ ಕೊಚ್ಚಿ ರೌಡಿಶೀಟರ್ ನ ಬರ್ಬರ ಹತ್ಯೆ!

    ಮಧ್ಯರಾತ್ರಿ ನಡುರಸ್ತೆಯಲ್ಲಿಯೇ ಕೊಚ್ಚಿ ರೌಡಿಶೀಟರ್ ನ ಬರ್ಬರ ಹತ್ಯೆ!

    ಬೆಂಗಳೂರು: ವಸಂತನನಗರದ ಕುಖ್ಯಾತ ರೌಡಿ ಕವಳನ ಬಾಮೈದ ರಾಕೇಶ್ ಹತ್ಯೆ ಬೆನ್ನಲ್ಲೆ, ಬೆಂಗಳೂರಿನಲ್ಲಿ ಮತ್ತೊಬ್ಬ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

    ನಗರದ ಕೋಣನಕುಂಟೆ ಕ್ರಾಸ್ ಬಳಿ ಮಧ್ಯರಾತ್ರಿ 2:30ರ ಸುಮಾರಿಗೆ ಈ ಘಟನೆ ನಡೆದಿದೆ. ಜಯಂತ್ (28) ಮೃತ ರೌಡಿಶೀಟರ್ ಆಗಿದ್ದು, ಈತ ಜಯಂತ್ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಪಟ್ಟಿಗೆ ಸೇರಿದವನಾಗಿದ್ದಾನೆ.  ಇದನ್ನು ಓದಿ: ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

    ಸ್ನೇಹಿತರೊಟ್ಟಿಗೆ ಪಾರ್ಟಿಗೆ ಹೋಗಿದ್ದ ಜಯಂತ್ ಮದ್ಯಪಾನ ಮಾಡಿದ್ದ. ಪಾರ್ಟಿ ಮುಗಿಸಿಕೊಂಡು ಬಾರಿನಿಂದ ಹೊರಬಂದ ಜಯಂತನನ್ನು ಹಿಂಬಾಲಿಸಿದ ದುಷ್ಕರ್ಮಿಗಳು, ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ತೀವ್ರ ಹಲ್ಲೆಗೊಳಗಾದ ಜಯಂತ್ ಕುಸಿದು ಬಿದ್ದಿದ್ದು, ರಸ್ತೆ ಮಧ್ಯದಲ್ಲಿಯೇ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಕೃತ್ಯದಲ್ಲಿ ಆತನ ಸ್ನೇಹಿತರು ಭಾಗಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನು ಓದಿ:  ಬೆಳ್ಳಂಬೆಳಗ್ಗೆ ಬೆಂಗ್ಳೂರಲ್ಲಿ ರೌಡಿಶೀಟರ್ ಮೇಲೆ ಗುಂಡಿನ ದಾಳಿ

    ಸ್ಥಳಕ್ಕೆ ಸುಬ್ರಹ್ಮಣ್ಯಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಕಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಜಯಂತ್ ಮೃತ ದೇಹವನ್ನು ಸಾಗಿಸಲಾಗಿದೆ.

    ಮೃತ ಜಯಂತ್ ವಿರುದ್ಧ ಕೊಲೆಗೆ ಯತ್ನ, ದರೋಡೆ, ಸುಲಿಗೆ ಸೇರಿದಂತೆ ಒಟ್ಟು 8 ಪ್ರಕರಣ ದಾಖಲಾಗಿದ್ದವು. ಜಯಂತ್ ಮೇಲೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ರೌಡಿ ಪಟ್ಟಿ ತೆರೆಯಲಾಗಿತ್ತು.