Tag: ಸುಭಾಶ್ ಗುತ್ತೇದಾರ್

  • ಸಮುದಾಯ ನಂಬದೇ ಅಭಿವೃದ್ಧಿ ಕೆಲಸದಿಂದ ಜಯ: ಇದು ಕಲಬುರಗಿ ವಿಶೇಷತೆ

    ಸಮುದಾಯ ನಂಬದೇ ಅಭಿವೃದ್ಧಿ ಕೆಲಸದಿಂದ ಜಯ: ಇದು ಕಲಬುರಗಿ ವಿಶೇಷತೆ

    ಕಲಬುರಗಿ: ‌ ಚುನಾವಣೆಯಲ್ಲಿ ಗೆಲ್ಲಬೇಕಾದರೆ ಸಮುದಾಯದ ಜನರ ಸಂಖ್ಯೆ ಹೆಚ್ಚಿರಬೇಕು ಎಂಬ ಮಾತು ಪ್ರಚಲಿತದಲ್ಲಿದೆ. ಆದರೆ  ಸೂಫಿ ಸಂತರ ನಾಡು ಎಂದೇ ಖ್ಯಾತಿ ಪಡೆದಿರುವ ಕಲಬುರಗಿ (Kalaburagi) ಜಿಲ್ಲೆಯ ಹಲವು ನಾಯಕರು ಅವರ ಸಮುದಾಯದ (Community) ಮತಗಳು ಬೆರಳೆಣಿಕೆಯಷ್ಟಿದ್ದರೂ ಕ್ಷೇತ್ರದಲ್ಲಿ ಹಲವು ಬಾರಿ ಜಯಗಳಿಸಿದ್ದಾರೆ.‌ ಅಂತಹ ಸಾಲಿಗೆ‌ ಮಾಜಿ ಸಿಎಂ ದಿವಂಗತ ಧರಂ ಸಿಂಗ್ ಆಳಂದ ಶಾಸಕ ಸುಭಾಶ್ ಗುತ್ತೇದಾರ ಹಾಗೂ ಹಾಲಿ ಜೇವರ್ಗಿ ಶಾಸಕ ಧರಂಸಿಂಗ್ ಪುತ್ರ ಅಜಯ್ ಸಿಂಗ್ ಸಮುದಾಯ‌ ನಂಬದೇ ಅಭಿವೃದ್ಧಿ ಕೆಲಸಗಳಿಂದ ಜಯಗಳಿಸಿದವರು ಎಂದರೇ ತಪ್ಪಾಗಲಾರದು.

    ಧರಂಸಿಂಗ್: ರಾಜಕೀಯದಲ್ಲಿ ಅಜಾತ ಶತ್ರು ಎಂದೇ ಖ್ಯಾತಿ ಹೊಂದಿದ ಮಾಜಿ ಸಿಎಂ ಧರಂಸಿಂಗ್ (Dharam Singh) ಜೇವರ್ಗಿ ಕ್ಷೇತ್ರದಿಂದ ಸತತ 8 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಈ ಕ್ಷೇತ್ರದಲ್ಲಿ ಧರಂ ಸಿಂಗ್ ಅವರ ರಜಪೂತ ಜನಾಂಗದ ಮತಗಳು ಇರುವ ಮನೆಗಳು ಕೇವಲ ಬೆರಳೆಣಿಕೆಯಷ್ಟು ಮಾತ್ರ ಇದೆ. ಹೀಗಿದ್ದರೂ ಧರಂಸಿಂಗ್ ಅವರು ಜನಪರ‌ ಕಾಳಜಿ ಹಾಗೂ ಅಭಿವೃದ್ಧಿ ಹೆಚ್ಚು ಒತ್ತು ನೀಡಿದ್ದರು. ಎಲ್ಲಾ ಸಮುದಾಯದ ಜೊತೆ ಉತ್ತಮ ಸಂಬಂಧದಿಂದ ಅವರ ಸಮುದಾಯದ‌ ಜನಸಂಖ್ಯೆ ಇಲ್ಲದಿದ್ದರೂ ಸತತ ಜಯಗಳಿಸಿದ್ದರು. ಇದನ್ನೂ ಓದಿ: ಗೌರಿಬಿದನೂರು ಕ್ಷೇತ್ರದಲ್ಲಿ ಪಕ್ಷೇತರರದ್ದೇ ನಿರ್ಣಾಯಕ ಪಾತ್ರ – ಈ ಬಾರಿ ಶಿವಶಂಕರ ರೆಡ್ಡಿ ಗೆಲ್ತಾರಾ?

    ಸುಭಾಶ್ ಗುತ್ತೇದಾರ್: ಸದ್ಯ ಬಿಜೆಪಿಯ (BJP) ಆಳಂದ ಕ್ಷೇತ್ರದ ಶಾಸಕರಾದ ಸುಭಾಶ್ ಗುತ್ತೇದಾರ್ (Subhash Guttedar) ಅವರು ಈಡಿಗ ಸಮುದಾಯಕ್ಕೆ ಸೇರಿದ್ದಾರೆ. ಆಳಂದ ಕ್ಷೇತ್ರದಲ್ಲಿ 500 ರಿಂದ 600 ಮತಗಳು ಮಾತ್ರ ಅವರ ಸಮುದಾಯಕ್ಕೆ ಸೇರಿದ ಮತಗಳಾಗಿವೆ. ಆದರೆ ಸಮುದಾಯದ‌ ಮತ ಇಲ್ಲದಿದ್ದರೂ ಕ್ಷೇತ್ರದ ಬಹುಸಂಖ್ಯಾತ ಲಿಂಗಾಯತ, ದಲಿತ ಸೇರಿದಂತೆ ಹಿಂದುಳಿದ ವರ್ಗದ ಮತ ಪಡೆದು ಕ್ಷೇತ್ರದಲ್ಲಿ ಇಲ್ಲಿಯವರೆಗೆ ನಾಲ್ಕು ಬಾರಿ ಆಯ್ಕೆಯಾಗಿದ್ದಾರೆ.

    ಅಜಯ್‌ಸಿಂಗ್: ಸದ್ಯ ಜೇವರ್ಗಿ (Jevargi) ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಅಜಯ್ ಸಿಂಗ್ (Dr Ajay Singh) ಸಹ ತಂದೆ ಹಾಕಿಕೊಟ್ಟ ಮಾರ್ಗದಲ್ಲಿಯೇ ಸಾಗಿದ್ದು, ತಂದೆಯ ಬಳಿಕ ಎರಡನೇ ಬಾರಿ ಜೇವರ್ಗಿ ಕ್ಷೇತ್ರದ ಶಾಸಕರಾಗಿದ್ದಾರೆ. 2023ರಲ್ಲಿ ಮತ್ತೆ ಸ್ಪರ್ಧಿಸಿ ಹ್ಯಾಟ್ರಿಕ್ ಜಯಗಳಿಸಲು ಪ್ರಯತ್ನಿಸುತ್ತಿದ್ದಾರೆ.

  • ನೀ ಬಾರಣ್ಣ, ಬಾರಣ್ಣ ಅಂತ ಸಿಎಂ ನನ್ನನ್ನು ಜೆಡಿಎಸ್‍ಗೆ ಆಹ್ವಾನಿಸಿದ್ರು: ಸುಭಾಷ್ ಗುತ್ತೇದಾರ್

    ನೀ ಬಾರಣ್ಣ, ಬಾರಣ್ಣ ಅಂತ ಸಿಎಂ ನನ್ನನ್ನು ಜೆಡಿಎಸ್‍ಗೆ ಆಹ್ವಾನಿಸಿದ್ರು: ಸುಭಾಷ್ ಗುತ್ತೇದಾರ್

    ಕಲಬುರಗಿ: ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಸಿಎಂ ಕುಮಾರಸ್ವಾಮಿ ಇದೀಗ ಮುಂದಾಗಿದ್ದು ಸೋಮವಾರ ಕಲಬುರಗಿಯ ವಿಮಾನ ನಿಲ್ದಾಣದಲ್ಲಿ ಜೆಡಿಎಸ್‍ಗೆ ಬರುವಂತೆ ನನ್ನನ್ನು ಆಹ್ವಾನಿಸಿದರು ಎಂದು ಆಳಂದ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ್ ಗಂಭೀರ ಆರೋಪ ಮಾಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಗುತ್ತೇದಾರ್, ಸೋಮವಾರ ಹೈದಾರಾಬಾದ್ ಕರ್ನಾಟಕ ವಿಮೋಚನ ಅಂಗವಾಗಿ ಧ್ವಜರೋಹಣದ ಸಲುವಾಗಿ ಸಿಎಂ ಕುಮಾರಸ್ವಾಮಿ ಕಲಬುರಗಿಗೆ ಬಂದಿದ್ದರು. ಈ ವೇಳೆ ನಾನು ಕ್ಷೇತ್ರದಲ್ಲಿನ ಬರದ ಬಗ್ಗೆ ಮನವಿ ಕೊಡಲು ಕುಮಾರಸ್ವಾಮಿ ಅವರ ಬಳಿ ಹೋದಾಗ ನೀ ಬಾರಣ್ಣ ಬಾರಣ್ಣ ಅಂತ ಕರೆ ನೀಡಿದರು. ಅದಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಪ್ರತಿ ಬಾರಿಯು ಬಾರಣ್ಣ ಬಾರಣ್ಣ ಎಂದೇ ಕರೆಯುತ್ತಿದ್ದರು ಎಂದು ತಿಳಿಸಿದರು.

    ನಾನು ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆಯೇ ಬರುವುದಿಲ್ಲ. ಏನೇ ಇದ್ದರೂ ಬೆಂಗಳೂರಿಗೆ ಬಾರಣ್ಣ ಕೂತು ಮಾತಾಡೋಣ ಎಂದು ಹೇಳಿದ್ದಾರೆ. ಆದರೆ ನಾನು ಹೋಗುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಸ್ಥಾನಕೊಟ್ಟರೂ ನಾನು ಹೋಗುವುದಿಲ್ಲ ಅಂತ ಗುತ್ತೇದಾರ್ ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಾಜಿ ಶಾಸಕರ ಅವಧಿಯ ಕಾಮಗಾರಿಗಳಿಗೆ ಬ್ರೇಕ್ ಹಾಕಿದ ಹಾಲಿ ಶಾಸಕ

    ಮಾಜಿ ಶಾಸಕರ ಅವಧಿಯ ಕಾಮಗಾರಿಗಳಿಗೆ ಬ್ರೇಕ್ ಹಾಕಿದ ಹಾಲಿ ಶಾಸಕ

    ಕಲಬುರಗಿ: ವಿಧಾನಸಭಾ ಚುನಾವಣೆ ಮುಗಿದು ತಿಂಗಳುಗಳೇ ಕಳೆದು ಹೋಗಿವೆ. ಆದರೆ ಆಳಂದ ಕ್ಷೇತ್ರದಲ್ಲಿ ಮಾತ್ರ ಹಾಲಿ, ಮಾಜಿ ಶಾಸಕರ ಕಾಮಗಾರಿಯ ಕಮಿಷನ್ ರಾಜಕೀಯ ಮುಂದುವರಿದಿದೆ. ಇದೀಗ ಅಲ್ಲಿನ ಅಭಿವೃದ್ಧಿ ಕೆಲಸಗಳಿಗೆ ಬ್ರೇಕ್ ಬಿದ್ದಿದೆ.

    ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಆಳಂದ ಕ್ಷೇತ್ರಕ್ಕೆ ಕೋಟಿಗಟ್ಟಲೆ ಅನುದಾನ ನೀಡಿದ್ದರು. ಆದರೆ ಬದಲಾದ ರಾಜಕೀಯದಲ್ಲಿ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಕೆಲವೇ ಮತಗಳಲ್ಲಿ ಸೋಲು ಕಂಡಿದ್ದು, ಇದೀಗ ಅವರ ಅವಧಿಯಲ್ಲಿ ನಡೆದ ಕಾಮಗಾರಿಗೆ ಹಾಲಿ ಶಾಸಕ ಸುಭಾಷ್ ಗುತ್ತೇದಾರ ಬ್ರೇಕ್ ಹಾಕಿದ್ದಾರೆ. ಕಮಿಷನ್ ನೀಡಿ ಇಲ್ಲ ಅಂದರೆ ಕೆಲಸ ಬಿಡಿ ಅಂತ ಗುತ್ತಿಗೆದಾರರಿಗೆ ಹೇಳಿದ್ದಾರಂತೆ. ಹೀಗಾಗಿ 65 ಕೋಟಿ ರೂ. ಕಾಮಗಾರಿಯ ವಿವಿಧ ಕೆಲಸಗಳನ್ನು ನಿಲ್ಲಿಸಲಾಗಿದೆ ಎಂದು ಮಾಜಿ ಶಾಸಕ ಬಿ ಆರ್ ಪಾಟೀಲ್ ಅವರು ಹಾಲಿ ಶಾಸಕರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

    ಕ್ಷೇತ್ರದಲ್ಲಿ ಪ್ರಮುಖವಾಗಿ ಮಿನಿ ವಿಧಾನಸೌಧ, ಅಮರ್ಜಾ ಡ್ಯಾಂ, ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಈ ಬಗ್ಗೆ ಶಾಸಕ ಸುಭಾಷ್ ಗುತ್ತೇದಾರ್ ಅವರನ್ನು ಕೇಳಿದರೆ ಚುನಾವಣೆಯಲ್ಲಿ ಸೋತ ಹತಾಶೆಯಿಂದ ಬಿ.ಆರ್ ಪಾಟೀಲ್ ಇಲ್ಲದ ಆರೋಪ ಮಾಡುತ್ತಿದ್ದಾರೆ. ಅವರು ಮಾಡಿದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv