Tag: ಸುಮತಲಾ ಅಂಬರೀಶ್

  • ಎಲ್ಲಾ ಸಿನಿಮಾದವರು ಈಗ ರಾಜ್ಯದ ಜನತೆಯ ಬಗ್ಗೆ ಬಂದಿದ್ದಾರೆ, ಬರಲಿ ಬಿಡಿ ಸಂತೋಷ: ಸಿಎಂ ಎಚ್‍ಡಿಕೆ

    ಎಲ್ಲಾ ಸಿನಿಮಾದವರು ಈಗ ರಾಜ್ಯದ ಜನತೆಯ ಬಗ್ಗೆ ಬಂದಿದ್ದಾರೆ, ಬರಲಿ ಬಿಡಿ ಸಂತೋಷ: ಸಿಎಂ ಎಚ್‍ಡಿಕೆ

    ಚಿಕ್ಕಮಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅವರು ಸ್ಪರ್ಧೆ ಮಾಡುವುದನ್ನು ಖಚಿತ ಪಡಿಸುತ್ತಿದಂತೆ ಇತ್ತ ಸಿಎಂ ಕುಮಾರಸ್ವಾಮಿ ಅವರು ಸುಮಲತಾ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ಜಿಲ್ಲೆಯ ಶೃಂಗೇರಿಯ ಶಾರದಂಬೆಯ ದರ್ಶನಕ್ಕೆ ಆಗಮಿಸಿದ್ದ ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಚುನಾವಣೆ ಎಂಬ ಯುದ್ಧ ಗೆಲ್ಲಲು ಶಾರದಾಂಬೆಯ ಆರ್ಶೀವಾದ ಬೇಕು. ಇಂದು ತಾಯಿ ಸನ್ನಿದಿಗೆ ಕೇವಲ ನಿಖಿಲ್ ಒಬ್ಬರಿಗಾಗಿ ಬಂದಿಲ್ಲ. 28 ಕ್ಷೇತ್ರದ ಜೆಡಿಎಸ್, ಕಾಂಗ್ರೆಸ್ ಮೈತ್ರಿಯ ಎಲ್ಲಾ ಅಭ್ಯರ್ಥಿಗಳ ಗೆಲುವಿಗಾಗಿ ಬಂದಿದ್ದೇನೆ ಎಂದರು.

    ನಮ್ಮ ಕುಟುಂಬದ ದೇವಿಯ ಮೇಲೆ ನಂಬಿಕೆಯನ್ನು ಹೊಂದ್ದಿದ್ದು, ಈ ಹಿನ್ನಲೆಯಲ್ಲಿ ಶೃಂಗೇರಿ ತಾಯಿಯ ಆರ್ಶೀವಾದ ಪಡೆಯಲು ಬಂದಿದ್ದೇನೆ. ಜಿಲ್ಲೆಯಲ್ಲಿ ಪ್ರಮೋದ್ ಮಧ್ವರಾಜ್ ಬೇರೆಯವರಲ್ಲ, ಅವರು ನಮ್ಮವರೇ ಕುಳಿತು ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು. ಇದೇ ವೇಳೆ ಸುಮಲತಾ ಲೋಕಸಭಾ ಚುನಾವಣೆ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಸುಮಲತಾ ಅವರ ಸ್ಪರ್ಧೆಯ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಎಲ್ಲಾ ಸಿನಿಮಾದವರು ಈಗ ರಾಜ್ಯದ ಜನತೆಯ ಬಗ್ಗೆ ಬಂದಿದ್ದಾರೆ. ಬರಲಿ ಬಿಡಿ ಸಂತೋಷ. ಮಂಡ್ಯ ಜಿಲ್ಲೆಯ ಜನರ ಪರವಾಗಿ ಏನೇನು ಮಾಡುತ್ತಾರೆ ನೋಡೋಣ ಎಂದು ಟಾಂಗ್ ನೀಡಿದರು.

    ಇತ್ತ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಅಧಿಕೃತವಾಗಿ ಘೋಷಣೆ ಮಾಡಿದ ಸುಮಲತಾ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ವೈಯಕ್ತಿಕವಾಗಿ ಯಾರಿಗೂ ನೋಯಿಸುವಂತಹ ಮಾತುಗಳನ್ನು ಹೇಳುವುದು ಬೇಡ ಎಂದು ಮನವಿ ಮಾಡಿಕೊಂಡರು. ಅಲ್ಲದೇ ರಾಜಕಾರಣ ಇರಬಹುದು ಅಥವಾ ಚುನಾವಣೆ ಇರಬಹುದು. ಜನಕ್ಕೆ ಏನೇನು ಒಳ್ಳೆಯದನ್ನು ಮಾಡಬೇಕು ಎಂಬುದರ ಬಗ್ಗೆ ಮಾತಾಡೋಣ. ಅದನ್ನು ಬಿಟ್ಟು ವೈಯಕ್ತಿಕವಾಗಿ ನೋವು ಕೊಡುವಂತಹ ಮಾತುಗಳು ಬೇಕಾಗಿಯೇ ಇಲ್ಲ. ಯುವಕರಿಗೆ ಮಾರ್ಗದರ್ಶನವಾಗಿ ನಿಂತುಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಅಂದ್ರು.

  • ಸುಮಲತಾ ಅಂಬರೀಶ್‍ಗೆ ದಚ್ಚು-ಕಿಚ್ಚನಿಂದ ಭಾವನಾತ್ಮಕ ಬರ್ತ್ ಡೇ ವಿಶ್

    ಸುಮಲತಾ ಅಂಬರೀಶ್‍ಗೆ ದಚ್ಚು-ಕಿಚ್ಚನಿಂದ ಭಾವನಾತ್ಮಕ ಬರ್ತ್ ಡೇ ವಿಶ್

    ಬೆಂಗಳೂರು: ಇಂದು ಹಿರಿಯ ನಟಿ ಸುಮತಲಾ ಅಂಬರೀಶ್ ಅವರ 55ನೇ ವರ್ಷದ ಹುಟ್ಟುಹಬ್ಬ. ಆದ್ದರಿಂದ ನಟರಾದ ದರ್ಶನ್ ಮತ್ತು ಕಿಚ್ಚ ಸುದೀಪ್ ಅವರು ಭಾವನಾತ್ಮಕವಾಗಿ ಶುಭಾಶಯವನ್ನು ತಿಳಿಸಿದ್ದಾರೆ.

    ಸುಮಲತಾ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಸ್ಯಾಂಡಲ್ ವುಡ್ ತಾರೆಯರು ಬರ್ತ್ ಡೇ ಶುಭಾಶಯದ ಮಹಾಪೂರವೇ ಹರಿದು ಬರುತ್ತಿದೆ. ನಟ ಸುದೀಪ್ ಮತ್ತು ದರ್ಶನ್ ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.

    ನಟ ದರ್ಶನ್ ಅವರು, “ನನ್ನ ನೆಚ್ಚಿನ ಮದರ್ ಇಂಡಿಯಾಗೆ ಹುಟ್ಟುಹಬ್ಬದ ಶುಭಾಶಯಗಳು. ಇನ್ನೊಂದು ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದೀರಾ. ನೀವು ನನಗೆ ಒಬ್ಬ ಅದ್ಭುತ ವ್ಯಕ್ತಿ. ಯಾವಾಗಲೂ ಸಂತೋಷದಿಂದ ಇರಿ” ಎಂದು ಬರೆದು ಅದರ ಜೊತೆಗೆ ಸುಮಲತಾ ಮತ್ತು ಅಂಬರೀಶ್ ಒಟ್ಟಿಗೆ ಇರುವ ಫೋಟೋ ಹಾಕಿ ಟ್ವೀಟ್ ಮಾಡಿದ್ದಾರೆ.

    ನಟ ಸುದೀಪ್ ಅವರು, “ನೀವು ಒಬ್ಬ ಅದ್ಭುತ ವ್ಯಕ್ತಿಯಾಗಿದ್ದೀರಿ. ನಿಮ್ಮ ನಗು ನಮಗೆ ಸ್ಪೂರ್ತಿದಾಯಕವಾಗಿದೆ. ಜೀವನದಲ್ಲಿ ಎದುರಾಗುವ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುವುದು ಎಂಬುದನ್ನು ನಿಮ್ಮನ್ನು ನೋಡಿ ಕಲಿತ್ತಿದ್ದೇವೆ. ನೀವು ನಮ್ಮ ಜೀವನದ ಒಂದು ಭಾಗವಾಗಿದ್ದೀರಿ ಅಕ್ಕ” ಎಂದು ಬರ್ತ್ ಡೇ ಶುಭಾಶಯವನ್ನು ತಿಳಿಸಿದ್ದಾರೆ.

    ಶುಭಾಶಯ ಕೋರಿದ ದರ್ಶನ್ ಮತ್ತು ಸುಸದೀಪ್ ಅವರಿಗೆ ಸುಮಲತಾ ಅವರು ರೀಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ. `ನಿಮ್ಮ ಪ್ರೀತಿಯ ಶುಭಾಶಯವಿಲ್ಲದೆ ನನ್ನ ಹುಟ್ಟುಹಬ್ಬ ಸಂಪೂರ್ಣವಾಗುವುದಿಲ್ಲ. ಥ್ಯಾಂಕ್ ಯು ಮೈ ಡಾರ್ಲಿಂಗ್ ದರ್ಶನ್” ಎಂದು ತಿಳಿಸಿದ್ದಾರೆ. ಸುದೀಪ್ ಅವರಿಗೆ `ನೀವು ಯಾವಗಾಲೂ ನನಗೆ ವಿಶೇಷ ಎಂದು ಧನ್ಯವಾದಗಳನ್ನು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv