Tag: ಸುಮಲತಾ ಅಂಬರೀಶ್

  • ಸುಮಲತಾರಿಗೆ ರಾಜಕಾರಣದಲ್ಲಿ ಅನುಭವದ ಕೊರತೆ ಇದೆ: ನಿಖಿಲ್

    ಸುಮಲತಾರಿಗೆ ರಾಜಕಾರಣದಲ್ಲಿ ಅನುಭವದ ಕೊರತೆ ಇದೆ: ನಿಖಿಲ್

    ಕೋಲಾರ: ಸಂಸದೆ ಸುಮಲತಾ ಅಂಬರೀಶ್ ಅವರಿಗೆ ರಾಜಕರಾಣದಲ್ಲಿ ಅನುಭವದ ಕೊರತೆ ಇದೆ ಎಂದು ಜೆಡಿಎಸ್ ಮುಖಂಡ, ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

    ಎಲ್ಲಿ ಭ್ರಷ್ಟಾಚಾರ ಇರುತ್ತೋ ಅಲ್ಲಿ ಹೆಚ್‍ಡಿಕೆ ಇರ್ತಾರೆ ಅನ್ನೋ ಸುಮಲತಾ ಹೇಳಿಕೆಗೆ ಪ್ರತಿಕ್ರಿಯಿಸಿ, ಸುಮಲತಾಗೆ ರಾಜಕಾರಣದಲ್ಲಿ ಅನುಭವದ ಕೊರತೆ ಇದೆ. ಜೆಡಿಎಸ್ ಪಕ್ಷ, ಕುಮಾರಸ್ವಾಮಿ, ದೇವೇಗೌಡರು, ರಾಜ್ಯದ ಸಂಪತ್ತನ್ನು ಉಳಿಸುವ ಕೆಲಸ ಮಾಡಿದ್ದೇವೆ ಅನ್ನೋದು ರಾಜ್ಯದ ಜನರಿಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸುಮಲತಾ ನಟೋರಿಯಸ್, ಸಂಸದ ಸ್ಥಾನಕ್ಕೆ ಅರ್ಹರಲ್ಲ: ರವೀಂದ್ರ ಶ್ರೀಕಂಠಯ್ಯ

    ಪ್ರಜ್ವಲ್ ರೇವಣ್ಣರನ್ನು ಸುಮಲತಾ ಹೊಗಳಿದ ಬಗ್ಗೆ ಮಾತನಾಡಿ, ನನ್ನ ತಮ್ಮನ ಬಗ್ಗೆ ಸುಮಲತಾ ಪೊಲಿಟಿಕಲ್ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಅದಕ್ಕೆ ಅಭಿನಂದನೆ. ಮಂಡ್ಯದ ಸಂಸದರನ್ನಾಗಿ ಜನ ಆಯ್ಕೆ ಮಾಡಿದ್ದಾರೆ ಜನರ ಋಣ ತೀರಿಸಿಕೊಳ್ಳುವ ಕೆಲಸ ಮಾಡಿ. ಈ ರೀತಿಯ ವೈಯಕ್ತಿಕ ಕೆಸರೆರಚಾಟ ಮಾಡಿಕೊಂಡು ಟೀಕೆ ಮಾಡುವುದು ಬೇಡ ಎಂದರು.

    ಎಲ್ಲಿ ಗೆದ್ದಿದ್ದಾರೋ ಅಲ್ಲೇ ಸೋಲಿಸುತ್ತೇನೆ ಎಂಬ ಹೆಚ್‍ಡಿಕೆ ಹೇಳಿಕೆ ಬಗ್ಗೆ ಮಾತನಾಡಿ, ನಾನು ಮಂಡ್ಯದ ಚುನಾವಣೆಯಲ್ಲಿ ಸೋತಿದ್ದೇನೆ ನಾನು ಸೋಲು ಒಪ್ಪಿಕೊಂಡಿದ್ದೇನೆ. ಆದರೆ ಐದುಮುಕ್ಕಾಲು ಲಕ್ಷ ಜನ ಮತ ಹಾಕಿದ್ದಾರೆ ಬೇಜಾರಿಲ್ಲ. ಸಂಸದರಾಗಿದ್ದಾರೆ ಅದರ ಋಣ ತೀರಿಸುವ ಕೆಲಸ ಮಾಡಲಿ ಎಂದು ನಿಖಿಲ್ ವಾಕ್ಸಮರ ಮುಂದುವರಿಸಿದರು. ಇದನ್ನೂ ಓದಿ: ಅಂಬರೀಶ್ ಪಾರ್ಥಿವ ಶವ ತಂದಿದ್ದೇ ಹೆಚ್‍ಡಿಕೆ, ಆ ಫೋಟೋವನ್ನೂ ವೈರಲ್ ಮಾಡ್ಲಿ: ಕೆಟಿಎಸ್ ಆಗ್ರಹ

    ಇದೇ ವೇಳೆ ಮಂಡ್ಯದಲ್ಲಿನ ಬೆಳವಣಿಗೆ ಕುರಿತು ನಗರದಲ್ಲಿ ಪ್ರತಿಕ್ರಿಯೆ ನೀಡುತ್ತಾ ಕೆಆರ್‍ಎಸ್ ಡ್ಯಾಂಗೆ ಕಲ್ಲು ಹೊಡೆಯುವ ಕೆಲಸ ಮಾಡದಂತೆ ಸಂಸದೆ ಸುಮಾಲತಾಗೆ ಸಲಹೆ ನೀಡಿದರು. ಕೆಆರ್‍ಎಸ್ ಡ್ಯಾಂಗೆ ತನ್ನದೆ ಆದ ಇತಿಹಾಸವಿದೆ. ಮೀಡಿಯಾ ಮುಂದೆ ಫೋಕಸ್ ಗಾಗಿ ಮಂಡ್ಯದ ಜನತೆಯಲ್ಲಿ ಆತಂಕ ಸೃಷ್ಟಿ ಮಾಡಬೇಡಿ. ಕೆ.ಆರ್.ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎಂಬ ವಿಚಾರವಾಗಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಡ್ಯಾಂ ಬಿರುಕು ಬಿಟ್ಟಿದ್ದರೆ ಟೆಕ್ನಿಕಲ್ ಟೀಂ ಇದೆ. ಸರ್ಕಾರ ಅದರ ಬಗ್ಗೆ ಉತ್ತರ ಕೊಡ್ತಾರೆ. ಆದರೆ ಈ ರೀತಿ ಗೊಂದಲ ಸೃಷ್ಟಿಮಾಡಬಾರದು ಎಂದು ತಿಳಿ ಹೇಳಿದರು.

  • ಏನ್ ಬೇಕಾದ್ರೂ ಚರ್ಚೆ ಮಾಡಲಿ, ಆದ್ರೆ ಪದ ಬಳಕೆ ಸರಿಯಾಗಿರಲಿ: ಈಶ್ವರಪ್ಪ

    ಏನ್ ಬೇಕಾದ್ರೂ ಚರ್ಚೆ ಮಾಡಲಿ, ಆದ್ರೆ ಪದ ಬಳಕೆ ಸರಿಯಾಗಿರಲಿ: ಈಶ್ವರಪ್ಪ

    ಬೀದರ್: ಇಬ್ಬರು ಏನು ಬೇಕಾದ್ರು ಚರ್ಚೆ ಮಾಡಲಿ, ಆದರೆ ನೋಡಿಕೊಂಡು ಪದಗಳನ್ನು ಬಳಸಬೇಕು ಎಂದು ಸಚಿವ ಈಶ್ವರಪ್ಪ ಅವರು ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಬುದ್ಧಿವಾದ ಹೇಳಿದ್ದಾರೆ.

    ಸುಮಲತಾ ವರ್ಸ್‍ಸ್ ಹೆಚ್‍ಡಿಕೆ ಆರೋಪ-ಪ್ರತ್ಯಾರೋಪಕ್ಕೆ ಈಶ್ವರಪ್ಪ ತೀವ್ರ ಅಸಮಧಾನ ವ್ಯಕ್ತ ಪಡಿಸಿದ್ದಾರೆ. ಈ ವಿಚಾರವಾಗಿ ಬೀದರ್ ನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು, ಇಬ್ಬರ ಸಮರಕ್ಕೆ ಯಾವ ಪದ ಬಳಸಬೇಕು ಎಂದು ನನಗೂ ಗೊತ್ತಾಗುತ್ತಿಲ್ಲ. ಹೀಗಾಗಿ ಇಬ್ಬರು ಬಳಸುವ ಪದದಿಂದಾಗಿ ನನಗೆ ತುಂಬ ನೋವಾಗಿದೆ. ಇಬ್ಬರು ಏನು ಬೇಕಾದ್ರು ಚರ್ಚೆ ಮಾಡಲಿ, ಆದರೆ ನೋಡಿಕೊಂಡು ಪದಗಳನ್ನು ಬಳಸಬೇಕು ಎಂದು ಹೇಳಿದರು. ಇದನ್ನೂ ಓದಿ: ಅಂಬರೀಶ್ ಪಾರ್ಥಿವ ಶವ ತಂದಿದ್ದೇ ಹೆಚ್‍ಡಿಕೆ, ಆ ಫೋಟೋವನ್ನೂ ವೈರಲ್ ಮಾಡ್ಲಿ: ಕೆಟಿಎಸ್ ಆಗ್ರಹ

    ಮೋದಿ ಸಂಪುಟದಲ್ಲಿ ರಾಜ್ಯದ ನಾಲ್ವರು ಮಂತ್ರಿ ಸ್ಥಾನ ಪಡೆದ ವಿಚಾರವಾಗಿ ಪ್ರತಿಕ್ರಿಯಿಸಿ, ಮೋದಿ ದೇಶಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ದೇಶದ ಇತಿಹಾಸದಲ್ಲಿಯೇ ಐಎಎಸ್, ಐಪಿಎಸ್, ದಲಿತ, ಹಿಂದುಳಿದ ವರ್ಗ ಸೇರಿದಂತೆ ಎಲ್ಲರಿಗೂ ಮಂತ್ರಿ ಮಂಡಲದಲ್ಲಿ ಮೋದಿ ಅವಕಾಶ ನೀಡಿದ್ದಾರೆ ಎಂದರು.  ಇದನ್ನೂ ಓದಿ: ನಾನು ಕ್ಷಮೆ ಕೇಳೋದಿಲ್ಲ ಸುಮಲತಾ ಕುತಂತ್ರಿ: ಎಚ್‍ಡಿಕೆ

    ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಮಂತ್ರಿ ಮಂಡಲದಲ್ಲಿ ರಾಜ್ಯದ ಆರು ಜನಕ್ಕೆ ಅವಕಾಶ ನೀಡಿದ್ದಾರೆ. ಈ ಮೂಲಕ ರಾಜ್ಯದ ಎಲ್ಲಾ ಭಾಗಗಳಿಗೆ ಮೋದಿ ಕೊಡುಗೆ ನೀಡಿದ್ದು ವಿಶೇಷವಾಗಿದೆ. ಹೀಗಾಗಿ ನಾನು ರಾಜ್ಯದ ಜನರ ಪರವಾಗಿ ಮೋದಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ V/S ಕುಮಾರಸ್ವಾಮಿ – ಹೆಚ್‍ಡಿಕೆ ಪರ ಪ್ರತಾಪ್ ಸಿಂಹ ಬ್ಯಾಟಿಂಗ್

    ಇದೇ ವೇಳೆ ಕಾಂಗ್ರೆಸ್ಸಿನಲ್ಲಿ ಸಿಎಂ ಕೂಗಿನ ಬಗ್ಗೆ ಮಾತನಾಡಿದ ಈಶ್ವರಪ್ಪ, ಬಿಜೆಪಿಗೆ ಹೇಳೋರು ಕೇಳೋರು ಇದ್ದಾರೆ. ಆದರೆ ಕಾಂಗ್ರೆಸ್ಸಿನವರಿಗೆ ಹೇಳೋರು ಇಲ್ಲಾ, ಕೇಳೋರು ಯಾರೂ ಇಲ್ಲ. ಹೀಗಾಗಿ ಕಾಂಗ್ರೆಸ್ಸಿನಲ್ಲಿ ನಾನೇ ಸಿಎಂ, ನಾನೇ ಅಭ್ಯರ್ಥಿ ಎಂದು ಹೇಳಬಹುದು. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೈ ನಾಯಕರ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದ್ರು.

  • ಸುಮಲತಾ ನಟೋರಿಯಸ್, ಸಂಸದ ಸ್ಥಾನಕ್ಕೆ ಅರ್ಹರಲ್ಲ: ರವೀಂದ್ರ ಶ್ರೀಕಂಠಯ್ಯ

    ಸುಮಲತಾ ನಟೋರಿಯಸ್, ಸಂಸದ ಸ್ಥಾನಕ್ಕೆ ಅರ್ಹರಲ್ಲ: ರವೀಂದ್ರ ಶ್ರೀಕಂಠಯ್ಯ

    – ಅಂಬರೀಶ್ ಕಾಲದಲ್ಲಿಯೇ ಅಕ್ರಮ ಗಣಿಗಾರಿಕೆ ನಡೆದಿರೋದು

    ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ನಟೋರಿಯಸ್, ಅವರು ಸಂಸದ ಸ್ಥಾನಕ್ಕೆ ಆರ್ಹರಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ತಿರುಗೇಟು ನೀಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಸುಮಲತಾ ಅವರು ತಮ್ಮ ಕ್ರಿಮಿನಲ್ ಮೈಂಡ್ ಅನ್ನು ಚಿತ್ರರಂಗದಲ್ಲಿ ಬಳಸಲಿ. ರಾಜಕಾರಣಕ್ಕೆ ಕ್ರಿಮಿನಲ್ ಮೈಂಡ್ ಅಪ್ಲೇ ಮಾಡಬೇಡಿ. ಸುಮಲತಾ ಅವರು ಡ್ಯಾಂ ಬಿರುಕು ಬಿಟ್ಟಿದೆ ಅಂತಾ ನೂರು ಬಾರಿ ಹೇಳಿ ಆಣೆಕಟ್ಟಿಗೆ ದೃಷ್ಟಿಯಾಗಿಸಿದ್ದಾರೆ. ಎಂಪಿಯವರ ಕೆಟ್ಟು ಕಣ್ಣು ನಮ್ಮ ಆಣೆಕಟ್ಟೆಗೆ ತಾಗಿದೆ. ಹಾಗಾಗಿ ಡ್ಯಾಂನಲ್ಲಿ ಪೂಜೆ ಮಾಡಿಸೋದಕ್ಕೆ ಹೇಳಿದ್ದೇನೆ ಎಂದು ವ್ಯಂಗ್ಯ ಮಾಡಿದರು.

    1995-2008ರಲ್ಲಿ ಅಂಬರೀಶ್ ಸಂಸದರಾಗಿದ್ದಾಗಲೇ ಮಂಡ್ಯ ಹಂಗರಹಳ್ಳಿಯಲ್ಲಿ ಅಕ್ರಮ ಗಣಿಗಾರಿಕೆ ಶುರುವಾಗಿತ್ತು. ಈಗ ಅದೇ ಅಂಬರೀಶ್ ಅವರ ಅಕ್ರಮ ಗಣಿಗಾರಿಕೆ ಬಗ್ಗೆ ಮಾತಾಡ್ತಾ ಇದ್ದೀರಾ? ನೀವು ಮೊದಲು ನಿಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಿ. ನಿನ್ನೆ ನೋಡಿದ ಹಳ್ಳ-ಕೊಳ್ಳಗಳೆಲ್ಲ ಅಂಬರೀಶ್ ಅವರ ಕಾಲದಲ್ಲಿ ಆಗಿರೋದು. ಹಂಗರಹಳ್ಳಿಯಲ್ಲಿ 2007ರ ಹಿಂದೆ ಅಕ್ರಮ ಗಣಿಗಾರಿಕೆ ನಡೆದಿದೆ. ಅಂಬರೀಶ್ ಅವರ ಕಾಲದಲ್ಲಿಯೇ ಅಕ್ರಮ ದಾಳಿ ನಡೆದಿರೋದಕ್ಕೆ ನಮ್ಮ ಬಳಿ ದಾಖಲೆಗಳಿವೆ. ಸಂಸದರ ಎಲ್ಲ ಡೀಲ್ ಗಳ ಸಾಕ್ಷಿಗಳು ನಮ್ಮ ಬಳಿಯಲ್ಲಿದ್ದು, ಸಮಯ ಬಂದಾಗ ಬಿಡುಗಡೆ ಮಾಡೋದಾಗಿ ಹೇಳಿದರು.

    ಅದು ಸಂಸದರ ವ್ಯಕ್ತಿತ್ವವನ್ನು ತೋರಿಸುತ್ತೆ:
    ಈ ಹಿಂದೆ ಸುನಂದಾ ಜಯರಾಂನಂತಹ ರೈತ ಮಹಿಳೆಯರು ಅಹೋರಾತ್ರಿ ಧರಣಿ ಮಾಡಿ ಆಣೆಕಟ್ಟು ಕಾಪಾಡಿಕೊಂಡಿದ್ದರು. ಆ ರೀತಿ ರೈತ ಭಾಷೆಯಲ್ಲಿ ಕುಮಾರಣ್ಣ ಮಾತಾನಾಡಿದ್ರೆ, ಇವರೇ ಬೇರೆ ವ್ಯಾಖ್ಯಾನಿಸಿಕೊಂಡಿದ್ದಾರೆ. ಸಂಸದರು ಇಷ್ಟು ನೀಚಮಟ್ಟದಲ್ಲಿ ಅರ್ಥೈಸಿಕೊಂಡಿರುವ ಕಲ್ಪನೆ ಕುಮಾರಣ್ಣನಿಗೆ ಇರಲಿಲ್ಲ. ಅವರೇ ಬೇರೆ ಅರ್ಥೈಸಿಕೊಂಡು ಮಾತಾಡ್ತಿರೋದು ಅದು ಸಂಸದರ ವ್ಯಕ್ತಿತ್ವವನ್ನು ತೋರಿಸುತ್ತೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಂಬರೀಶ್ ಮುಂದೆ ಹೆಚ್‍ಡಿಕೆ ಕೈಕಟ್ಟಿ ನಿಂತ ಫೋಟೋ ವೈರಲ್

    ಆಣೆಕಟ್ಟಿನ 20 ಕಿ.ಮೀ.ವ್ಯಾಪ್ತಿಯಲ್ಲಿ ಮೈನಿಂಗ್ ಮಾಡಬಾರದು ಅಂತ ಕುಮಾರಸ್ವಾಮಿ ಅವರು ಕಾನೂನು ಮಾಡಿದ್ದರು. ಆದ್ರೆ ನಿನ್ನೆ ಸಂಸದರು 30 ಕಿಲೋ ಮೀಟರ್ ದೂರದಲ್ಲಿರುವ ಗಣಿಗಾರಿಕೆಗಳಿಗೆ ಭೇಟಿ ನೀಡಿದ್ದಾರೆ. ಮೊದಲು 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಅಕ್ರಮ ಗಣಿಗಾರಿಕೆ ಬಂದು ನೋಡಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಅಂಬರೀಶ್ ಪಾರ್ಥಿವ ಶವ ತಂದಿದ್ದೇ ಹೆಚ್‍ಡಿಕೆ, ಆ ಫೋಟೋವನ್ನೂ ವೈರಲ್ ಮಾಡ್ಲಿ: ಕೆಟಿಎಸ್ ಆಗ್ರಹ

    ನಾನು ನಮ್ಮ ಬಳಿ ರಾಜಕೀಯದಲ್ಲಿ ಪ್ರಜ್ವಲ್, ನಿಖಿಲ್ ಎಂಬ ಮಿಸೈಲ್ ಇವೆ ಅಂತಾ ಹೇಳಿದ್ದೆ. ಆದ್ರೆ ಅದನ್ನು ನೀವು ನಿಮ್ಮ ನಟೋರಿಯಸ್ ಬುದ್ಧಿ ಮೂಲಕ ತಿರುಚಿದ್ದಿರಿ. ನೀವು ಸಂಸದ ಸ್ಥಾನಕ್ಕೆ ಅರ್ಹರಲ್ಲ. ನೀವು ಬೆಂಗಳೂರಿನ ಹೋಟೆಲ್ ಗೆ ನಿಮ್ಮ ಇಬ್ಬರು ಬೆಂಬಲಿಗರನ್ನು ಯಾವ ಡೀಲ್ ಕಳಿಸಿದ್ರಿ ಎಂಬ ಸಾಕ್ಷಿ ನಮ್ಮ ಬಳಿ ಇದೆ ಎಂದು ಆರೋಪಿಸಿದರು. ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ V/S ಕುಮಾರಸ್ವಾಮಿ – ಹೆಚ್‍ಡಿಕೆ ಪರ ಪ್ರತಾಪ್ ಸಿಂಹ ಬ್ಯಾಟಿಂಗ್

     

  • ಅಂಬರೀಶ್ ಪಾರ್ಥಿವ ಶವ ತಂದಿದ್ದೇ ಹೆಚ್‍ಡಿಕೆ, ಆ ಫೋಟೋವನ್ನೂ ವೈರಲ್ ಮಾಡ್ಲಿ: ಕೆಟಿಎಸ್ ಆಗ್ರಹ

    ಅಂಬರೀಶ್ ಪಾರ್ಥಿವ ಶವ ತಂದಿದ್ದೇ ಹೆಚ್‍ಡಿಕೆ, ಆ ಫೋಟೋವನ್ನೂ ವೈರಲ್ ಮಾಡ್ಲಿ: ಕೆಟಿಎಸ್ ಆಗ್ರಹ

    – ಅಮಾವಾಸ್ಯೆ, ಹುಣ್ಣಿಮೆಗೆ ಬರುವ ಸಂಸದೆ ಸುಮಲತಾ

    ಮಂಡ್ಯ: ರೆಬೆಲ್ ಸ್ಟಾರ್ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತೆಗೆದುಕೊಂಡು ಬಂದಿದ್ದೇ ಕುಮಾರಸ್ವಾಮಿ. ಆ ಫೋಟೋಗಳನ್ನು ಕೂಡ ವೈರಲ್ ಮಾಡಲಿ ಎಂದು ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಆಗ್ರಹಿಸಿದ್ದಾರೆ.

    ಅಂಬರೀಶ್ ಮುಂದೆ ಕುಮಾರಸ್ವಾಮಿ ಕೈ ಕಟ್ಟಿನಿಂತಿರುವ ಫೋಟೋ ವೈರಲ್ ವಿಚಾರ ಜೆಡಿಎಸ್ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಎಂಎಲ್‍ಸಿ, ಎಲ್ಲಾ ಫೋಟೋಗಳನ್ನು ವೈರಲ್ ಮಾಡುವಂತೆ ಒತ್ತಾಯಿಸಿದ್ದಾರೆ. ಅಂಬರೀಶ್ ಒಳ್ಳೆಯ ನಟ, ಅವರಿಗೆ ಎಲ್ಲರೂ ಗೌರವ ಕೊಡುತ್ತೇವೆ. ಕುಮಾರಸ್ವಾಮಿ ಅವರು ಸಹ ಗೌರವ ಕೊಡುತ್ತಿದ್ದರು. ಅದನ್ನು ಹೀಗೆ ಫೋಟೋ ವೈರಲ್ ಮಾಡೋದು ಸರಿಯಲ್ಲ ಎಮದು ಕಿಡಿಕಾರಿದರು.

    ಅಂಬರೀಶ್‍ಗೆ ಜೆಡಿಎಸ್ ರಾಜಕೀಯ ಮರುಜೀವ ಕೊಟ್ಟಿದೆ. ಅವರನ್ನು ಸಂಸದರನ್ನಾಗಿ ಮಾಡಿದ ಫೋಟೋವನ್ನು ಕೂಡ ವೈರಲ್ ಮಾಡಲಿ. ಆ ದಿನಗಳಲ್ಲಿ ಕುಮಾರಸ್ವಾಮಿ ಅವರನ್ನು ಹೇಗೆ ನೋಡುತ್ತಿದ್ದರು ಅನ್ನೋದನ್ನು ವೈರಲ್ ಮಾಡಲಿ. ಅಂಬರೀಶ್ ಅವರ ಪಾರ್ಥಿವ ಶರೀರವನ್ನು ತಂದಿದ್ದೆ ಕುಮಾರಸ್ವಾಮಿ, ಆಗ ಸುಮಲತಾ ಬೇಡಾ ಅಂತ ಹೇಳಿದ್ರು. ಈ ಫೋಟೋವನ್ನು ಸಹ ವೈರಲ್ ಮಾಡಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ V/S ಕುಮಾರಸ್ವಾಮಿ – ಹೆಚ್‍ಡಿಕೆ ಪರ ಪ್ರತಾಪ್ ಸಿಂಹ ಬ್ಯಾಟಿಂಗ್

    ಅಮಾವಾಸ್ಯೆ-ಹುಣ್ಣಿಮೆಗೆ ಬರುವ ಸಂಸದೆ ಸುಮಲತಾ. ಕೊರೋನಾ ಕಾಲದಲ್ಲೂ ಸಂಸದೆ ಕೆಲಸ ಮಾಡಲ್ಲ. ನಾಲ್ಕು ತಿಂಗಳಲ್ಲಿ ಬಂದಿದ್ದೆ ನಾಲ್ಕು ದಿನ. ಈ ನಾಲ್ಕು ದಿನದಲ್ಲಿ ಇದ್ದಿದ್ದೇ ಒಂದೊಂದು ಗಂಟೆ. ಚುನಾವಣೆಯಲ್ಲಿ ಮಂಡ್ಯದಲ್ಲೇ ಇರ್ತೀನಿ ಅಂತಾ ಹೇಳಿದ್ರು. ಗೆದ್ದಾಗಿನಿಂದ ಇಲ್ಲಿಯವರೆಗೆ ಎಷ್ಟು ದಿನ ಉಳಿದುಕೊಂಡಿದ್ದಾರೆ. ಒಂದು ರಾತ್ರಿ-ಬೆಳಗ್ಗೆಯೂ ಇಲ್ಲಿಯೂ ಮಂಡ್ಯದಲ್ಲಿ ಇಲ್ಲ ಎಂದು ಕೆಟಿಎಸ್ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಂಬರೀಶ್ ಮುಂದೆ ಹೆಚ್‍ಡಿಕೆ ಕೈಕಟ್ಟಿ ನಿಂತ ಫೋಟೋ ವೈರಲ್

    ಫೋಟೋ ವೈರಲ್:
    ನಟ ಅಂಬರೀಶ್ ಮುಂದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೈಕಟ್ಟಿ ನಿಂತ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸಂಸದೆ ಸುಮಲತಾ ಮತ್ತು ಅಂಬರೀಶ್ ಬೆಂಬಲಿಗರು ಪೇಜ್ ಗಳಲ್ಲಿ ವಿವಿಧ ಬರಹಗಳಡಿ ಈ ಫೋಟೋ ಶೇರ್ ಮಾಡಲಾಗಿದೆ. ಇದನ್ನೂ ಓದಿ: ನಾನು ಕ್ಷಮೆ ಕೇಳೋದಿಲ್ಲ ಸುಮಲತಾ ಕುತಂತ್ರಿ: ಎಚ್‍ಡಿಕೆ

    ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಸುಮಲತಾ, ನಮ್ಮ ಪಕ್ಷ ನಿಮ್ಮಂತಹ ಸಾವಿರಾರೂ ಲೀಡರ್ ಗಳನ್ನು ತಯಾರು ಮಾಡಿದೆ ಅಂತ ಹೇಳುತ್ತಾರೆ. ನೀವು ಸಾವಿರಾರರು ಜನರನ್ನು ತಯಾರು ಮಾಡಿಸಿರಬಹುದು. ಆದ್ರೆ ನಿಮ್ಮ ಈ ರೀತಿಯ ನಡವಳಿಕೆ, ಮಾತುಗಳಿಂದಲೇ ಎಷ್ಟೋ ಒಳ್ಳೆಯ ಜನ ಬೇರೆ ಪಕ್ಷ ಸೇರಿಕೊಂಡಿದ್ದಾರೆ. ನಿಮ್ಮ ಮಾತುಗಳಿಂದಲೇ ಅವರೆಲ್ಲ ನಿಮ್ಮ ಪಕ್ಷ ತೊರೆದಿರೋದು. ನೀವು ತಯಾರು ಮಾಡಿರುವ ಸಾವಿರಾರರು ಜನ, ಅದಕ್ಕಿಂತ ದೊಡ್ಡವರು ಅಂಬರೀಶ್ ಅವರ ಮುಂದೆ ಕೈ ಕಟ್ಟಿ ನಮ್ಮ ಮನೆಯಲ್ಲಿ ನಿಂತಿರೋದನ್ನು ಹಲವು ವರ್ಷ ನೋಡಿದ್ದೇನೆ ಎಂದು ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ಫೋಟೋ ವೈರಲ್ ಮಾಡುವ ಮೂಲಕ ಸುಮಲತಾ ಬೆಂಬಲಿಗರು ದಳಪತಿಗಳಿಗೆ ಟಕ್ಕರ್ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದನ್ನೂ ಓದಿ: ಸುಮಲತಾ ಅಭಿಮಾನಿಗಳಿಗೆ ಹೆಚ್‍ಡಿಕೆ ಅಭಿಮಾನಿಗಳ ತಿರುಗೇಟು

  • ಮಂಡ್ಯದಲ್ಲಿ ಸುಮಲತಾ V/S ಕುಮಾರಸ್ವಾಮಿ – ಹೆಚ್‍ಡಿಕೆ ಪರ ಪ್ರತಾಪ್ ಸಿಂಹ ಬ್ಯಾಟಿಂಗ್

    ಮಂಡ್ಯದಲ್ಲಿ ಸುಮಲತಾ V/S ಕುಮಾರಸ್ವಾಮಿ – ಹೆಚ್‍ಡಿಕೆ ಪರ ಪ್ರತಾಪ್ ಸಿಂಹ ಬ್ಯಾಟಿಂಗ್

    ಮೈಸೂರು: ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಮಧ್ಯೆ ತೀವ್ರ ವಾಗ್ವಾದಗಳು ನಡೆಯುತ್ತಿದೆ. ಈ ನಡುವೆ ಸಂಸದ ಪ್ರತಾಪ್ ಸಿಂಹ ಅವರು ಹೆಚ್‍ಡಿಕೆ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಸಂಸದೆಗೆ ಟಾಂಗ್ ನೀಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‍ಎಸ್ ಡ್ಯಾಂ ಬಿರುಕು ಬಿಟ್ಟಿಲ್ಲ ಎಂದು ಅಧಿಕಾರಿಗಳೇ ತಿಳಿಸಿದ್ದಾರೆ. ಅಂಥಹದರಲ್ಲಿ ಡ್ಯಾಂ ಬಿರುಕು ಬಿಟ್ಟಿದೆ ಅನ್ನೋದು ಸರಿಯಲ್ಲ ಎಂದು ಪರೋಕ್ಷವಾಗಿ ಸಂಸದೆಗೆ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಅಂಬರೀಶ್ ಮುಂದೆ ಹೆಚ್‍ಡಿಕೆ ಕೈಕಟ್ಟಿ ನಿಂತ ಫೋಟೋ ವೈರಲ್

    ಅಕ್ರಮ ಗಣಿಗಾರಿಕೆ ಸ್ಥಳಗಳಲ್ಲಿ ಸುಮಲತಾಗೆ ಅಡ್ಡಿ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಅವರ ಹೇಳಿಕೆಯನ್ನೇ ಮಾಧ್ಯಮದವರು ಸತ್ಯ ಎಂದು ಭಾವಿಸಬೇಡಿ. ಸತ್ಯದ ಆಳಕ್ಕೆ ಹೋಗಿ ತಿಳಿದುಕೊಳ್ಳುವ ಮನಸ್ಥಿತಿ ಮಾಧ್ಯಮದವರಿಗೆ ಇರಬೇಕಾಗುತ್ತದೆ. ರಾಜಕೀಯವಾಗಿ ಯಾರೇ ಏನ್ ಬೇಕಾದರೂ ಹೇಳಿಕೆ ಕೊಡಬಹುದು. ಯಾರು ಕೂಡ ಎಲ್ಲಿಯೂ ಅಡ್ಡಿ ಪಡಿಸಿಲ್ಲ. ಇದೊಂದು ರಾಜಕೀಯ ಅಷ್ಟೇ ಎಂದು ಸಿಂಹ ಲೇವಡಿ ಮಾಡಿದರು. ಇದನ್ನೂ ಓದಿ: ನಾನು ಕ್ಷಮೆ ಕೇಳೋದಿಲ್ಲ ಸುಮಲತಾ ಕುತಂತ್ರಿ: ಎಚ್‍ಡಿಕೆ

    ಕೆ ಆರ್ ಎಸ್ ಅಧಿಕಾರಿಗಳ ಜೊತೆ ನಾನು ಮಾತನಾಡಿದ್ದೇನೆ. ಅಲ್ಲಿ ಯಾವುದು ಸಮಸ್ಯೆ ಇಲ್ಲ. ಈ ಹಿಂದೆಯೂ ಕೂಡ ಮೈಸೂರು-ಬೆಂಗಳೂರು ದಶಪಥ ರಸ್ತೆ ಮಾಡುವುದಕ್ಕೂ ಬಿಡಲಿಲ್ಲ. ಸುಳ್ಳು ನೆಪಗಳನ್ನ ಹೇಳಿ ಕೆಲಸ ಮಾಡಲು ಅಡ್ಡಿಪಡಿಸಿದ್ರು ಎಂದು ಪರೋಕ್ಷವಾಗಿ ಸುಮಲತಾ ವಿರುದ್ದ ಪ್ರತಾಪ್ ಸಿಂಹ ಆರೋಪ ಮಾಡಿದರು. ಇದನ್ನೂ ಓದಿ: ಸುಮಲತಾ ಅಭಿಮಾನಿಗಳಿಗೆ ಹೆಚ್‍ಡಿಕೆ ಅಭಿಮಾನಿಗಳ ತಿರುಗೇಟು

    ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಕೆರೆ ಮತ್ತು ಹಂಗರಹಳ್ಳಿಯಲ್ಲಿ ನಡೆಯುತ್ತಿದ್ದ ಗಣಿಗಾರಿಕೆ ವೀಕ್ಷಣೆಗೆ ಹೋಗದಂತೆ ಅಡ್ಡಿಪಡಿಸಿದ್ದನ್ನು ನೋಡಿ ಸುಮಲತಾ, ಇದೇನ್ ಭಾರತ-ಪಾಕಿಸ್ತಾನ ಗಡಿನಾ ಎಂದು ಆಘಾತ ವ್ಯಕ್ತಪಡಿಸಿದ್ದರು. ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಊರವರ ಮನೆಗಳನ್ನು ನೋಡಿ ಶಾಕ್ ಆದರು. ಅಕ್ರಮ ಗಣಿಗಾರಿಕೆ ಬಗ್ಗೆ ಮಾತಾಡುವ ವೇಳೆ ವಿಷಯವನ್ನು ಬೇರೆಡೆಗೆ ತಿರುಗಿಸುವ ಯತ್ನ ಮಾಡಲಾಗ್ತಿದೆ…? ಶಾಸಕರಿಗೆ ನಿಮ್ಮ ಕೊಡುಗೆ ಏನು..? ನಿಮ್ಮ ಕಣ್ಣ ಮುಂದೆಯೇ ಇಷ್ಟು ಭ್ರಷ್ಟಾಚಾರ, ಅನ್ಯಾಯ ನಡೆಯುತ್ತಿದ್ದರೂ ಏಕೆ ಸುಮ್ಮನಿದ್ದೀರಿ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯಗೆ ತಿರುಗೇಟು ನೀಡಿದ್ದರು.

  • ಸುಮಲತಾ ಅಭಿಮಾನಿಗಳಿಗೆ ಹೆಚ್‍ಡಿಕೆ ಅಭಿಮಾನಿಗಳ ತಿರುಗೇಟು

    ಸುಮಲತಾ ಅಭಿಮಾನಿಗಳಿಗೆ ಹೆಚ್‍ಡಿಕೆ ಅಭಿಮಾನಿಗಳ ತಿರುಗೇಟು

    ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೋಗೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಭಿಮಾನಿಗಳು ತಿರುಗೇಟು ನೀಡಿದ್ದಾರೆ. ಫೋಟೋದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೈ ಕಟ್ಟಿ ನಿಂತಿರೋದನ್ನು ಸಂಸದೆ ಸುಮಲತಾ ಮತ್ತು ಅಂಬಿ ಅಭಿಮಾನಿಗಳು ವಿವಿಧ ಬರಹಗಳನ್ನು ಬರೆದು ಶೇರ್ ಮಾಡಿಕೊಂಡಿದ್ದಾರೆ.

    ಕುಮಾರಸ್ವಾಮಿ ಅವರು ಆತ್ಮೀಯತೆ, ವಿನಮ್ರತೆಯಿಂದ ಕೈಕಟ್ಟಿ ನಿಂತಿರುವುದು ಸಹಜ. ಕುಮಾರಣ್ಣ-ಅಂಬರೀಶಣ್ಣರ ಬಾಂಧವ್ಯ ಅನನ್ಯ ಮತ್ತು ಅಮರ. ಇದು ಆಂಗಿಕ ಭಾಷೆಯೇ ಹೊರತು ಕುಮಾರಣ್ಣ ಶರಣಾಗತಿಯಿಂದ ಕೈಕಟ್ಟಿ ನಿಂತವರಲ್ಲ. ಸಾಮಾಜಿಕ ತಾಣದ ವಿಕೃತ, ವಿಲಕ್ಷಣ, ಅತೃಪ್ತ ಮತ್ತು ಹತಾಶಾ ಆತ್ಮಗಳಿಗೆ ಶಾಂತಿ ಸಿಗುವಂತಾಗಲಿ ಎಂದು ಕುಮಾರಸ್ವಾಮಿ ಅಭಿಮಾನಿ ನವೀನ್ ಕಾಡನಕುಪ್ಪೆ ಆಕ್ರೋಶ ಹೊರ ಹಾಕಿದ್ದಾರೆ.

    ಅಂಬರೀಷ್ ಎಂಬ ಆತ್ಮೀಯ ಗೆಳೆಯ ಹಾಗೂ ಚಿತ್ರರಂಗದ ಪ್ರಮುಖರೊಂದಿಗೆ ಆತ್ಮೀಯತೆ, ವಿನಯತೆ, ನಮ್ರತೆ ನಮ್ಮ ಕುಮಾರಣ್ಣನ ಸಂಸ್ಕಾರ. ಕೈಕಟ್ಟಿ ನಿಂತಿರುವುದನ್ನೇ ಶರಣಾಗತಿ ಎಂದು ಭಾವಿಸಿ ವಿಕೃತವಾಗಿ ಮುಖಪುಟಗಳಲ್ಲಿ ಕೂಗುಮಾರಿಗಳಂತೆ ಅರಚಿ-ಕಿರುಚುತ್ತಿರುವ ಮುಖಗೇಡಿಗಳೇ ಎಂದು ಕುಮಾರಸ್ವಾಮಿ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುವ ಮೂಲಕ ತಿರುಗೇಟು ನೀಡುತ್ತಿದ್ದಾರೆ. ಇದನ್ನೂ ಓದಿ: ನಾನು ಕ್ಷಮೆ ಕೇಳೋದಿಲ್ಲ ಸುಮಲತಾ ಕುತಂತ್ರಿ: ಎಚ್‍ಡಿಕೆ

    ಸುಮಲತಾ ಹೇಳಿಕೆ ಬೆನ್ನಲ್ಲೇ ಫೋಟೋ ವೈರಲ್:
    ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಸುಮಲತಾ, ನಮ್ಮ ಪಕ್ಷ ನಿಮ್ಮಂತಹ ಸಾವಿರಾರೂ ಲೀಡರ್ ಗಳನ್ನು ತಯಾರು ಮಾಡಿದೆ ಅಂತ ಹೇಳುತ್ತಾರೆ. ನೀವು ಸಾವಿರಾರರು ಜನರನ್ನು ತಯಾರು ಮಾಡಿಸಿರಬಹುದು. ಆದ್ರೆ ನಿಮ್ಮ ಈ ರೀತಿಯ ನಡವಳಿಕೆ, ಮಾತುಗಳಿಂದಲೇ ಎಷ್ಟೋ ಒಳ್ಳೆಯ ಜನ ಬೇರೆ ಪಕ್ಷ ಸೇರಿಕೊಂಡಿದ್ದಾರೆ. ನಿಮ್ಮ ಮಾತುಗಳಿಂದಲೇ ಅವರೆಲ್ಲ ನಿಮ್ಮ ಪಕ್ಷ ತೊರೆದಿರೋದು. ನೀವು ತಯಾರು ಮಾಡಿರುವ ಸಾವಿರಾರರು ಜನ, ಅದಕ್ಕಿಂತ ದೊಡ್ಡವರು ಅಂಬರೀಶ್ ಅವರ ಮುಂದೆ ಕೈ ಕಟ್ಟಿ ನಮ್ಮ ಮನೆಯಲ್ಲಿ ನಿಂತಿರೋದನ್ನು ಹಲವು ವರ್ಷ ನೋಡಿದ್ದೇನೆ ಎಂದು ಹೇಳಿದ್ದರು. ಇದನ್ನೂ ಓದಿ: ಅಂಬರೀಶ್ ಮುಂದೆ ಹೆಚ್‍ಡಿಕೆ ಕೈಕಟ್ಟಿ ನಿಂತ ಫೋಟೋ ವೈರಲ್

    ಸುಮಲತಾ ಕ್ಷಮೆ ಕೇಳಲ್ಲ:
    ನಾನು ಯಾಕೆ ಕ್ಷಮೆ ಕೇಳಲಿ. ನಾನು ಕ್ಷಮೆ ಕೇಳೊದಿಲ್ಲ. ನಾನು ಕ್ಷಮೆ ಕೇಳೋ ಪದ ಬಳಿಕೆ ಮಾಡಿಲ್ಲ. ಯಾವ ತರಹ ಪದ ಬಳಕೆ ಮಾಡಬೇಕಿತ್ತು ನಾನು. ನಾನು ಸಂಸ್ಕೃತಿ, ಕನ್ನಡ ಭಾಷೆ ತಿಳಿದುಕೊಂಡಿದ್ದೇನೆ. ಕ್ಷಮೆ ಕೇಳಬೇಕಾದ ಪದ ನಾನು ಬಳಕೆ ಮಾಡಿಲ್ಲ ಎಂದು ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಸುಮಲತಾ Vs ಕುಮಾರಸ್ವಾಮಿ – ಮೈ ಶುಗರ್ ವಿವಾದ ಈಗ ಎದ್ದಿದ್ದು ಯಾಕೆ?

  • ಅಂಬರೀಶ್ ಮುಂದೆ ಹೆಚ್‍ಡಿಕೆ ಕೈಕಟ್ಟಿ ನಿಂತ ಫೋಟೋ ವೈರಲ್

    ಅಂಬರೀಶ್ ಮುಂದೆ ಹೆಚ್‍ಡಿಕೆ ಕೈಕಟ್ಟಿ ನಿಂತ ಫೋಟೋ ವೈರಲ್

    – ಸುಮಲತಾ ಹೇಳಿಕೆ ಬೆನ್ನಲ್ಲೇ ಫೋಟೋ ಹರಿಬಿಟ್ಟ ಫ್ಯಾನ್ಸ್

    ಮಂಡ್ಯ: ನಟ ಅಂಬರೀಶ್ ಮುಂದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೈಕಟ್ಟಿ ನಿಂತ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸಂಸದೆ ಸುಮಲತಾ ಮತ್ತು ಅಂಬರೀಶ್ ಬೆಂಬಲಿಗರು ಪೇಜ್ ಗಳಲ್ಲಿ ವಿವಿಧ ಬರಹಗಳಡಿ ಈ ಫೋಟೋ ಶೇರ್ ಮಾಡಲಾಗಿದೆ.

    ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಸುಮಲತಾ, ನಮ್ಮ ಪಕ್ಷ ನಿಮ್ಮಂತಹ ಸಾವಿರಾರೂ ಲೀಡರ್ ಗಳನ್ನು ತಯಾರು ಮಾಡಿದೆ ಅಂತ ಹೇಳುತ್ತಾರೆ. ನೀವು ಸಾವಿರಾರರು ಜನರನ್ನು ತಯಾರು ಮಾಡಿಸಿರಬಹುದು. ಆದ್ರೆ ನಿಮ್ಮ ಈ ರೀತಿಯ ನಡವಳಿಕೆ, ಮಾತುಗಳಿಂದಲೇ ಎಷ್ಟೋ ಒಳ್ಳೆಯ ಜನ ಬೇರೆ ಪಕ್ಷ ಸೇರಿಕೊಂಡಿದ್ದಾರೆ. ನಿಮ್ಮ ಮಾತುಗಳಿಂದಲೇ ಅವರೆಲ್ಲ ನಿಮ್ಮ ಪಕ್ಷ ತೊರೆದಿರೋದು. ನೀವು ತಯಾರು ಮಾಡಿರುವ ಸಾವಿರಾರರು ಜನ, ಅದಕ್ಕಿಂತ ದೊಡ್ಡವರು ಅಂಬರೀಶ್ ಅವರ ಮುಂದೆ ಕೈ ಕಟ್ಟಿ ನಮ್ಮ ಮನೆಯಲ್ಲಿ ನಿಂತಿರೋದನ್ನು ಹಲವು ವರ್ಷ ನೋಡಿದ್ದೇನೆ ಎಂದು ಹೇಳಿದ್ದರು.

    ಈ ಹೇಳಿಕೆ ಬೆನ್ನಲ್ಲೇ ಫೋಟೋ ವೈರಲ್ ಮಾಡುವ ಮೂಲಕ ಸುಮಲತಾ ಬೆಂಬಲಿಗರು ದಳಪತಿಗಳಿಗೆ ಟಕ್ಕರ್ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ನಿನ್ನೆ ಅಂಬರೀಶ್ ಎದುರು ಕೈಕಟ್ಟಿ ನಿಲ್ಲುತ್ತಿದ್ದವರೆಲ್ಲಾ ಈಗ ಮಾತನಾಡುತ್ತಿದ್ದಾರೆ ಎಂದು ಸುಮಲತಾ ಅಂಬರೀಶ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ನಾನು ಕ್ಷಮೆ ಕೇಳೋದಿಲ್ಲ ಸುಮಲತಾ ಕುತಂತ್ರಿ: ಎಚ್‍ಡಿಕೆ

    ಚೈಲ್ಡಿಶ್ ಹೇಳಿಕೆ:
    ಸ್ಥಳೀಯ ಜೆಡಿಎಸ್ ಶಾಸಕರುಗಳು ಕಳೆದ ಎರಡು ವರ್ಷದಿಂದ ನಾನು ಏನು ಮಾಡಿದರೂ ಅದನ್ನು ವಿರೋಧ ಮಾಡಿಕೊಂಡು ಬಂದಿದ್ದಾರೆ. ಅವರಿಂದ ಸಹಕಾರವನ್ನ ಬಯಸುವುದು ಕನಸಿನ ಮಾತು. ಯಾರಾದರೂ ಒಳ್ಳೆ ಕೆಲಸ ಮಾಡಿದರೆ ಅದನ್ನ ತಿರುಚುವ ಕೆಲಸ ಮಾಡುತ್ತಿದ್ದಾರೆ. ಕೊರೊನದ ಸಂದರ್ಭದಲ್ಲಿ ಆಕ್ಸಿಜನ್ ಹಾಗೂ ಐಸಿಯು ಅಂಬ್ಯುಲೆನ್ಸ್ ನಾನು ಪರ್ಸನಲ್ ಆಗಿ ಕೊಡಿಸಿದ್ದೇನೆ. ಒಂದೊಂದು ಜೀವಕ್ಕೂ ಬೆಲೆ ಇಲ್ವಾ? ಅವರು ಎಲ್ಲವನ್ನು ತಿರುಚಿ ತಿರುಗಿಸಿ ಹೇಳ್ತಾರೆ. ಕಳೆದ ಲೋಕ ಸಭೆ ಚುನಾವಣೆ ಸೋಲು ಇದುವರೆಗೆ ಡೈಜೆಸ್ಟ್ ಮಾಡಿಕೊಳ್ಳೋಕೆ ಅವರಿಗೆ ಆಗಿಲ್ಲ. ಈ ಬೆಳವಣಿಗೆಯೆ ಅದಕ್ಕೆಲ್ಲಾ ದೊಡ್ಡ ಕಾರಣ. ಅವರು ಮಂಡ್ಯಕ್ಕೆ ಬಂದಾಗಲೆಲ್ಲಾ ಆ ನೋವನ್ನು ಹೊರ ಹಾಕ್ತಿದಾರೆ. ಆದರೆ ಜನ ಒಂದು ಸರಿ ತೀರ್ಪು ಕೊಟ್ಟ ನಂತರ ಅದನ್ನ ಒಪ್ಪಿಕೊಳ್ಳಬೇಕು. ಮುಂದಿನ ಬಾರಿ ಪ್ರಯತ್ನ ಪಡೋಣ ಅನ್ನಬೇಕು ಎರೆಡು ಬಾರಿ ಸಿಎಂ ಆದವರು ಅದನ್ನ ಸ್ವೀಕರಿಸಬೇಕು ಹೊರತು ಈ ರೀತಿಯ ಚೈಲ್ಡಿಶ್ ಹೇಳಿಕೆ ಅವರಿಗೆ ಶೋಭೆ ತರಲ್ಲ ಎಂದರು. ಇದನ್ನೂ ಓದಿ: ಹೆಣ್ಣಿನ ಬಗ್ಗೆ ಹೇಗೆ ಮಾತಾಡ್ಬೇಕು ಅಂತ ಮಾಜಿ ಸಿಎಂ ಅರ್ಥ ಮಾಡಿಕೊಳ್ಳಬೇಕು: ಸುಮಲತಾ ಕಿಡಿ

    ಡೀಲ್ ಗಳಲ್ಲಿ ಮಾಸ್ಟರ್ ಯಾರು ಅಂತ ಕರ್ನಾಟಕದ ಜನರಿಗೆ ಗೊತ್ತು. ನಾನು ಜಾಸ್ತಿ ಮಾತನಾಡಿದರೆ ಅವರಿಗೆ ಹೇಸಿಗೆ ಆಗುತ್ತೆ. ಡೀಲ್ ಅವರಿಗೆ ಪ್ರಧಾನ ಅಜೆಂಡ ರೀತಿ ಆಗಿದೆ. ಪ್ರತಿ ಒಂದು ಕೆಲಸದಲ್ಲೂ ಡೀಲ್ ಮಾಡ್ತಾರೆ. ಆಡಿಯೋ, ವೀಡಿಯೋ ಏನೇ ಇದ್ರೂ ರಿಲೀಸ್ ಮಾಡಲಿ ಅದನ್ನ ಫೇಸ್ ಮಾಡ್ತೀನಿ ಅವರಿಗೆ ಚಾಲೆಂಜ್ ಮಾಡ್ತೀನಿ. ಅಂಬರೀಶ್ ಮನೆಯಲ್ಲಿ ನಾನೇ ಆಗಲಿ, ನನ್ನ ಮಗನಾಗಲಿ ಭ್ರಷ್ಟಾಚಾರದ ದಾರಿಯಲ್ಲಿ ಹೋಗುವ ಕರ್ಮ ನಮಗೆ ಇಲ್ಲ ಎಂದು ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆ ಆಗಬೇಕು – ಮಂಡ್ಯ ಸಂಸದೆ ಸುಮಲತಾ ಆಗ್ರಹ

  • ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆ ಆಗಬೇಕು – ಮಂಡ್ಯ ಸಂಸದೆ ಸುಮಲತಾ ಆಗ್ರಹ

    ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆ ಆಗಬೇಕು – ಮಂಡ್ಯ ಸಂಸದೆ ಸುಮಲತಾ ಆಗ್ರಹ

    – ದಾಳಿ ಹೆಸರಲ್ಲಿ ದುಡ್ಡು ವಸೂಲಿಗೆ ಹೋಗಿರ್ಬೇಕು, ಹೆಚ್‍ಡಿಕೆ ಕಿಡಿ

    ಮಂಡ್ಯ: ಕನ್ನಂಬಾಡಿ ಅಣೆಕಟ್ಟು ವಿಷಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ನಡುವಿನ ನೇರ ಸಂಘರ್ಷ ಇನ್ನಷ್ಟು ತೀವ್ರಗೊಂಡಿದೆ. ಅಕ್ರಮ ಕಲ್ಲುಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿರುವ ಸುಮಲತಾ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

    ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಕೆರೆ ಮತ್ತು ಹಂಗರಹಳ್ಳಿಯಲ್ಲಿ ನಡೆಯುತ್ತಿದ್ದ ಗಣಿಗಾರಿಕೆ ವೀಕ್ಷಣೆಗೆ ಹೋಗದಂತೆ ಅಡ್ಡಿಪಡಿಸಿದ್ದನ್ನು ನೋಡಿ ಸುಮಲತಾ, ಇದೇನ್ ಭಾರತ-ಪಾಕಿಸ್ತಾನ ಗಡಿನಾ ಎಂದು ಆಘಾತ ವ್ಯಕ್ತಪಡಿಸಿದ್ದಾರೆ. ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಊರವರ ಮನೆಗಳನ್ನು ನೋಡಿ ಶಾಕ್ ಆದರು. ಅಕ್ರಮ ಗಣಿಗಾರಿಕೆ ಬಗ್ಗೆ ಮಾತಾಡುವ ವೇಳೆ ವಿಷಯವನ್ನು ಬೇರೆಡೆಗೆ ತಿರುಗಿಸುವ ಯತ್ನ ಮಾಡಲಾಗ್ತಿದೆ…? ಶಾಸಕರಿಗೆ ನಿಮ್ಮ ಕೊಡುಗೆ ಏನು..? ನಿಮ್ಮ ಕಣ್ಣ ಮುಂದೆಯೇ ಇಷ್ಟು ಭ್ರಷ್ಟಾಚಾರ, ಅನ್ಯಾಯ ನಡೆಯುತ್ತಿದ್ದರೂ ಏಕೆ ಸುಮ್ಮನಿದ್ದೀರಿ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯಗೆ ತಿರುಗೇಟು ನೀಡಿದ್ದಾರೆ. ಆದ್ರೆ ಸಂಸದೆ ಬೇಬಿ ಬೆಟ್ಟಕ್ಕೆ ಭೇಟಿ ನೀಡಲಿಲ್ಲ. ಇದನ್ನೂ ಓದಿ: ಹೆಣ್ಣಿನ ಬಗ್ಗೆ ಹೇಗೆ ಮಾತಾಡ್ಬೇಕು ಅಂತ ಮಾಜಿ ಸಿಎಂ ಅರ್ಥ ಮಾಡಿಕೊಳ್ಳಬೇಕು: ಸುಮಲತಾ ಕಿಡಿ

    ಇನ್ನು ಶ್ರೀರಂಗಪಟ್ಟಣದಲ್ಲಿ ಸಂಸದೆ ಕಾರಿಗೆ ಮುತ್ತಿಗೆ ಹಾಕಿದ ಶಾಸಕರ ಬೆಂಬಲಿಗರು ಮಾಜಿ ಶಾಸಕ ಬಂಡಿಸಿದ್ದೇಗೌಡ ಮಾಲೀಕತ್ವದ ಗಣಿಗಾರಿಕೆಗೂ ಭೇಟಿ ನೀಡುವಂತೆ ಘೋಷಣೆ ಕೂಗಿದರು. ಆ ಬಳಿಕ ಬಂಡಿಸಿದ್ದೇಗೌಡ ಮಾಲೀಕತ್ವದ ಗಣಿಗಾರಿಕೆಗೂ ಸುಮಲತಾ ಭೇಟಿ ನೀಡಿ ಪರಿಶೀಲಿಸಿದರು. ಇದನ್ನೂ ಓದಿ: ನಾನು ಕ್ಷಮೆ ಕೇಳೋದಿಲ್ಲ ಸುಮಲತಾ ಕುತಂತ್ರಿ: ಎಚ್‍ಡಿಕೆ

    ಇನ್ನು ಸುಮಲತಾ ಮತ್ತು ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರಿದಿದೆ. ತಮ್ಮನ್ನು ಭ್ರಷ್ಟಾಚಾರದ ರಾಯಭಾರಿ, ಡೀಲ್ ಮಾಸ್ಟರ್, ಚೈಲ್ಡಿಶ್ ಎಂದು ಕರೆದಿರುವ ಸುಮಲತಾಗೆ ಕುಮಾರಸ್ವಾಮಿ ‘ಗಣಿ ಮಾಲೀಕರಿಂದ ಹಣ ವಸೂಲಿಗೆ ಹೋಗಿರಬಹುದು’ ತಿರುಗೇಟು ನೀಡಿದ್ದಾರೆ. ಪ್ರಜ್ವಲ್ ರೇವಣ್ಣ ಭವಿಷ್ಯದ ಬಗ್ಗೆ ಮಾತಾಡಲು ಸುಮಲತಾ ಏನು ಜ್ಯೋತಿಷಿನಾ ಎಂದು ಮಾಜಿ ಪ್ರಧಾನಿ ದೇವೇಗೌಡರು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಹೆಚ್‍ಡಿಕೆ ಪ್ರತಿಯೊಂದು ಕೆಲಸದಲ್ಲಿ ಡೀಲ್ ಮಾಡುವ ಮಾಸ್ಟರ್: ಸುಮಲತಾ ಅಂಬರೀಶ್

  • ಮಾಜಿ ಸಿಎಂ ಹೆಚ್‍ಡಿಕೆ ಪ್ರತಿಯೊಂದು ಕೆಲಸದಲ್ಲಿ ಡೀಲ್ ಮಾಡುವ ಮಾಸ್ಟರ್: ಸುಮಲತಾ ಅಂಬರೀಶ್

    ಮಾಜಿ ಸಿಎಂ ಹೆಚ್‍ಡಿಕೆ ಪ್ರತಿಯೊಂದು ಕೆಲಸದಲ್ಲಿ ಡೀಲ್ ಮಾಡುವ ಮಾಸ್ಟರ್: ಸುಮಲತಾ ಅಂಬರೀಶ್

    – ಭ್ರಷ್ಟಾಚಾರದ ಬ್ರಾಂಡ್ ಅಂಬಾಸಿಡರ್, ಚೈಲ್ಡಿಶ್ ರೀತಿಯ ಮಾತು

    ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರೇ ಭ್ರಷ್ಟಾಚಾರದ ಬ್ರಾಂಡ್ ಅಂಬಾಸಿಡರ್. ಡೀಲ್ ಗಳ ಮಾಸ್ಟರ್ ಯಾರು ಅನ್ನೋದು ರಾಜ್ಯದ ಜನತೆ ಗೊತ್ತಿದೆ ಎಂದು ಹೇಳುವ ಮಾಜಿ ಸಿಎಂ ವಿರುದ್ಧ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುಮಲತಾ ಅಂಬರೀಶ್, ನನ್ನ ಮಂಡ್ಯ ಕಾರ್ಯಕ್ರಮ ಮೊದಲೇ ನಿಗದಿ ಆಗಿತ್ತು. ಶ್ರೀರಂಗ ಪಟ್ಟಣಕ್ಕೆ ಹೋಗುತ್ತೇನೆ, ಒಟ್ಟು ಮೂರು ಕಡೆ ಅಕ್ರಮ ಗಣಿಗಾರಿಕೆಯ ಪರಿಶೀಲನೆಗೆ ಹೋಗುತ್ತಿದ್ದೇನೆ. ಅಕ್ರಮ ಗಣಿಗಾರಿಕೆ ಸೀಜ್ ಆಗಿದೆ, ಬೇಬಿ ಬೆಟ್ಟಕ್ಕೆ ಸಹಾ ಭೇಟಿ ಕೊಡುತ್ತಿದ್ದೇನೆ. ನಾನು ಯಾರ ಮೇಲು ಆರೋಪ ಮಾಡ್ತಿಲ್ಲ. ಈ ಹಿಂದೆಯೇ ಕೆಆರ್‍ಎಸ್ ಬಿರುಕಿನ ಸಮಸ್ಯೆ ಆಗಿತ್ತು ಅದು ಮತ್ತೆ ಆಗಬಾರದು ಅಲ್ಲಿ ಬ್ಲಾಸ್ಟ್ ಆಗಬಾರದು ಅಂತ ಅದನ್ನು ತಡಿಬೇಕು ಅನ್ನೋದು. ಅದು ಲೋ ಅರ್ಥ್ ಕ್ವಿಕ್ ಝೋನ್. ಈ ಹಿಂದೆ ಶೇ.2.5 ನಷ್ಟು ಪ್ರಮಾಣದಲ್ಲಿ ಭೂಮಿ ನಡುಗಿತ್ತು. ಅದು ಶೇ.6.5 ರಷ್ಟು ಆದರೆ ಆಗುವ ಅಪಾಯ ದೊಡ್ಡದು ಎಂದು ಆತಂಕ ವ್ಯಕ್ತಪಡಿಸಿದರು.

    ಅಲ್ಲಿ ರಾತ್ರಿ ಯುವಕರು ಕೆಆರ್‍ಎಸ್ ಒಳಗೆ ಹೋಗಿ ಪಾರ್ಟಿ ಮಾಡಿದ ಘಟನೆಯು ನಡೆದಿದೆ. ಓರ್ವ ಸಂಸದೆಯಾಗಿ ನನ್ನ ಕೆಲಸ ನಾನು ಮಾಡುತ್ತೇನೆ. ಒಂದು ಕಡೆ ಅಕ್ರಮ ನಡೆಯುವಾಗ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಅಧಿಕಾರಿಗಳಿಗೆ ಸೂಚಿಸಬೇಕು. ಆದರೆ ಇವರು ಅಕ್ರಮದ ಪರ ನಿಲ್ಲುತ್ತಿದ್ದಾರೆ. ಕೋಟ್ಯಾಂತರ ರೂಪಾಯಿ ರಾಜಧನ ಸರ್ಕಾರಕ್ಕೆ ಬರುವುದು ತಪ್ಪಿ ಹೋಗ್ತಿದೆ. ಇದರಿಂದ ಜಿಲ್ಲೆಗೆ ಬರುವ ಆದಾಯ ಬರುತ್ತಿಲ್ಲ ನಿಂತು ಹೋಗಿದೆ.

    ಸ್ಥಳೀಯ ಜೆಡಿಎಸ್ ಶಾಸಕರುಗಳು ಕಳೆದ ಎರಡು ವರ್ಷದಿಂದ ನಾನು ಏನು ಮಾಡಿದರೂ ಅದನ್ನು ವಿರೋಧ ಮಾಡಿಕೊಂಡು ಬಂದಿದ್ದಾರೆ. ಅವರಿಂದ ಸಹಕಾರವನ್ನ ಬಯಸುವುದು ಕನಸಿನ ಮಾತು. ಯಾರಾದರೂ ಒಳ್ಳೆ ಕೆಲಸ ಮಾಡಿದರೆ ಅದನ್ನ ತಿರುಚುವ ಕೆಲಸ ಮಾಡುತ್ತಿದ್ದಾರೆ. ಕೊರೊನದ ಸಂದರ್ಭದಲ್ಲಿ ಆಕ್ಸಿಜನ್ ಹಾಗೂ ಐಸಿಯು ಅಂಬ್ಯುಲೆನ್ಸ್ ನಾನು ಪರ್ಸನಲ್ ಆಗಿ ಕೊಡಿಸಿದ್ದೇನೆ. ಒಂದೊಂದು ಜೀವಕ್ಕೂ ಬೆಲೆ ಇಲ್ವಾ? ಅವರು ಎಲ್ಲವನ್ನು ತಿರುಚಿ ತಿರುಗಿಸಿ ಹೇಳ್ತಾರೆ. ಕಳೆದ ಲೋಕ ಸಭೆ ಚುನಾವಣೆ ಸೋಲು ಇದುವರೆಗೆ ಡೈಜೆಸ್ಟ್ ಮಾಡಿಕೊಳ್ಳೋಕೆ ಅವರಿಗೆ ಆಗಿಲ್ಲ. ಈ ಬೆಳವಣಿಗೆಯೆ ಅದಕ್ಕೆಲ್ಲಾ ದೊಡ್ಡ ಕಾರಣ. ಅವರು ಮಂಡ್ಯಕ್ಕೆ ಬಂದಾಗಲೆಲ್ಲಾ ಆ ನೋವನ್ನು ಹೊರ ಹಾಕ್ತಿದಾರೆ. ಆದರೆ ಜನ ಒಂದು ಸರಿ ತೀರ್ಪು ಕೊಟ್ಟ ನಂತರ ಅದನ್ನ ಒಪ್ಪಿಕೊಳ್ಳಬೇಕು. ಮುಂದಿನ ಬಾರಿ ಪ್ರಯತ್ನ ಪಡೋಣ ಅನ್ನಬೇಕು ಎರೆಡು ಬಾರಿ ಸಿಎಂ ಆದವರು ಅದನ್ನ ಸ್ವೀಕರಿಸಬೇಕು ಹೊರತು ಈ ರೀತಿಯ ಚೈಲ್ಡಿಶ್ ಹೇಳಿಕೆ ಅವರಿಗೆ ಶೋಭೆ ತರಲ್ಲ ಎಂದರು. ಇದನ್ನೂ ಓದಿ: ಹೆಣ್ಣಿನ ಬಗ್ಗೆ ಹೇಗೆ ಮಾತಾಡ್ಬೇಕು ಅಂತ ಮಾಜಿ ಸಿಎಂ ಅರ್ಥ ಮಾಡಿಕೊಳ್ಳಬೇಕು: ಸುಮಲತಾ ಕಿಡಿ

    ಡೀಲ್ ಗಳಲ್ಲಿ ಮಾಸ್ಟರ್ ಯಾರು ಅಂತ ಕರ್ನಾಟಕದ ಜನರಿಗೆ ಗೊತ್ತು. ನಾನು ಜಾಸ್ತಿ ಮಾತನಾಡಿದರೆ ಅವರಿಗೆ ಹೇಸಿಗೆ ಆಗುತ್ತೆ. ಡೀಲ್ ಅವರಿಗೆ ಪ್ರಧಾನ ಅಜೆಂಡ ರೀತಿ ಆಗಿದೆ. ಪ್ರತಿ ಒಂದು ಕೆಲಸದಲ್ಲೂ ಡೀಲ್ ಮಾಡ್ತಾರೆ. ಆಡಿಯೋ, ವೀಡಿಯೋ ಏನೇ ಇದ್ರೂ ರಿಲೀಸ್ ಮಾಡಲಿ ಅದನ್ನ ಫೇಸ್ ಮಾಡ್ತೀನಿ ಅವರಿಗೆ ಚಾಲೆಂಜ್ ಮಾಡ್ತೀನಿ. ಅಂಬರೀಶ್ ಮನೆಯಲ್ಲಿ ನಾನೇ ಆಗಲಿ, ನನ್ನ ಮಗನಾಗಲಿ ಭ್ರಷ್ಟಾಚಾರದ ದಾರಿಯಲ್ಲಿ ಹೋಗುವ ಕರ್ಮ ನಮಗೆ ಇಲ್ಲ. ಇದನ್ನೂ ಓದಿ: ಸುಮಲತಾ Vs ಕುಮಾರಸ್ವಾಮಿ – ಮೈ ಶುಗರ್ ವಿವಾದ ಈಗ ಎದ್ದಿದ್ದು ಯಾಕೆ?

    ರಾಜಕಾರಣ ನನಗೆ ಆಕಸ್ಮಿಕ ಜನ ವಿಶ್ವಾಸ ಇಟ್ಟು ಗೆಲ್ಲಿಸಿದ ಋಣ ನನ್ನ ಮೇಲಿದೆ. ಜನ ಇರು ಅಂದಷ್ಟು ದಿನ ಇರ್ತಿನಿ ಬೇಡ ಅಂದಾಗ ಹೊರಟು ಹೋಗ್ತಿನಿ, ಅಲ್ಲಿ ಅಧಿಕಾರಕ್ಕೆ ಅಂಟಿಕೊಳ್ಳಲ್ಲ ಯಾರಿಗೆ ದುರಾಸೆ ಇದೆಯೋ ಅವರಿಗೆ ಆತಂಕ ಆಗ್ತಿದೆ. ಒಂದೊಂದಾಗಿ ನಾನು ಬಿಚ್ಚಿಟ್ಟಿದ್ದರಿಂದ ಕೆಲವರಿಗೆ ಆತಂಕವಾಗಿದೆ. ಭ್ರಷ್ಟಾಚಾರ ಎಷ್ಡು ದಿನ ಹೀಗೆ ನಡೆಯಬೇಕು. ಭ್ರಷ್ಟಾಚಾರವನ್ನು ಪ್ರಶ್ನಿಸಬಾರದಾ..? ಭ್ರಷ್ಟಾಚಾರದ ಬ್ರಾಂಡ್ ಅಂಬಾಸಿಡರ್ ತರ ಕಾಣಿಸ್ತಿದಿರ ನೀವು. ನಮ್ಮಲ್ಲಿ ಸತ್ಯ ಇರುವಾಗ ಯಾರಿಗು ಹೆದರಬಾರದು. ನನ್ನಲ್ಲಿ ಸತ್ಯ ಇದೆ ಹಾಗಾಗಿ ಹೆದರುವ ಪ್ರೆಶ್ನೆ ಇಲ್ಲಾ. ನಿಮ್ಮಲ್ಲಿ ತಪ್ಪಿಲ್ಲ ಅಂದರೆ ಭಯ ಏಕೆ. ನಿಮಗೆ ಗಿಲ್ಟ್ ಕಾಡಿದಾಗ ಭಯ ಆಗುತ್ತೆ ಅಷ್ಟೇ ಎಂದು ವ್ಯಂಗ್ಯ ಮಾಡಿದರು.

  • ಮಾಜಿ ಸಿಎಂ ಪದ ಬಳಕೆ ತಪ್ಪು, ಕೆಲಸವನ್ನ ಟೀಕಿಸಲಿ: ಶಾಸಕಿ ಪೂರ್ಣಿಮಾ

    ಮಾಜಿ ಸಿಎಂ ಪದ ಬಳಕೆ ತಪ್ಪು, ಕೆಲಸವನ್ನ ಟೀಕಿಸಲಿ: ಶಾಸಕಿ ಪೂರ್ಣಿಮಾ

    ಚಿತ್ರದುರ್ಗ: ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ವಾಗ್ದಾಳಿ ನಡೆಸುವಾಗ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಪದ ಬಳಕೆ ತಪ್ಪು. ಸಂಸದೆಯವರ ಕೆಲಸಗಳ ಟೀಕಿಸಲಿ, ಅವರ ಹೇಳಿಕೆಗಳನ್ನು ಖಂಡಿಸಲಿ. ಆದ್ರೆ ಮಹಿಳಾ ಸಂಸದರ ಬಗ್ಗೆ ಮಾತನಾಡುವಾಗ ಬಳಕೆ ಸರಿಯಾಗಿರಬೇಕೆಂದು ಬಿಜೆಪಿ ಶಾಸಕಿ ಪೂರ್ಣಿಮಾ ಹೇಳಿದ್ದಾರೆ.

    ಸಂಸದರ ಹೇಳಿಕೆಗಳ ತಪ್ಪಿದ್ರೆ ರಾಜಕೀಯವಾಗಿ ಟೀಕಿಸಲಿ. ಟೀಕೆ ಮಾಡುವ ಆಡುವ ಮಾತುಗಳು ಬೇರೆ ಅರ್ಥ ನೀಡುವಂತಿರಬಾರದು. ಮುಂದಿನ ದಿನಗಳಲ್ಲಿ ರಾಜಕಾರಣಿಗಳು ಹೇಗೆ ಇರಬೇಕು ಎಂಬುದನ್ನ ನೋಡಿ ಕಲಿಯುವ ಜನರು ಇರ್ತಾರೆ. ಕುಮಾರಸ್ವಾಮಿ ಅವರು ಸರಳತೆಗೆ ಎಲ್ಲರಿಗೂ ಇಷ್ಟ ಆಗ್ತಾರೆ. ಕೆಲವೊಮ್ಮೆ ಕೋಪದಲ್ಲಿ ಮಾತನಾಡುವಾಗ ಸರಿಯಾದ ಪದ ಬಳಸಲಿ ಅನ್ನೋದು ನನ್ನ ಅಭಿಪ್ರಾಯ ಎಂದರು. ಇದನ್ನೂ ಓದಿ: ಇಂದು ಗಣಿಗಾರಿಕೆ ಪ್ರದೇಶಕ್ಕೆ ಸಂಸದೆ ಸುಮಲತಾ ಅಂಬರೀಶ್ ಭೇಟಿ

    ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?:ಕೆಆರ್‍ಎಸ್ ಜಲಾಶಯದ ಗೇಟ್ ಗೆ ಮಂಡ್ಯ ಸಂಸದರನ್ನು ಮಲಗಿಸಿಬಿಟ್ಟರೆ ನೀರು ಹೋಗುವುದು ನಿಲ್ಲಬಹುದೇನೊ? ಅನುಕಂಪದ ಅಲೆ ಮೇಲೆ ಮಂಡ್ಯ ಸಂಸದೆಯಾಗಿ ಆಯ್ಕೆಯಾದ ಮೇಲೆ ಜನರ ಕೆಲಸ ಮಾಡಬೇಕು. ಇಲ್ಲದಿದ್ರೆ, ಮುಂದಿನ ಚುನಾವಣೆಯಲ್ಲಿ ಜನರೇ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಹೆಣ್ಣಿನ ಬಗ್ಗೆ ಹೇಗೆ ಮಾತಾಡ್ಬೇಕು ಅಂತ ಮಾಜಿ ಸಿಎಂ ಅರ್ಥ ಮಾಡಿಕೊಳ್ಳಬೇಕು: ಸುಮಲತಾ ಕಿಡಿ – ಇಂತಹ ಮಾತುಗಳಿಗೆ ನಾನು ಐ ಡೋಂಟ್ ಕೇರ್ ಅಂದ್ರು ಸಂಸದೆ