Tag: ಸುಮಲತಾ ಅಂಬರೀಶ್

  • ಶಿಕ್ಷಕರ ದಿನಾಚರಣೆಯಂದು ಅಂಬಿಯನ್ನು ನೆನೆದ ಡಿ ಬಾಸ್

    ಶಿಕ್ಷಕರ ದಿನಾಚರಣೆಯಂದು ಅಂಬಿಯನ್ನು ನೆನೆದ ಡಿ ಬಾಸ್

    ಬೆಂಗಳೂರು: ಡಿ ಬಾಸ್ ದರ್ಶನ್ ಕಲಿಯುಗದ ಕರ್ಣ ಅಂಬರೀಶ್ ಅವರನ್ನು ಎಷ್ಟು ಇಷ್ಟಪಡುತ್ತಿದ್ದರು ಎಂಬುದು ತಿಳಿದೇ ಇದೆ. ಅದೇ ರೀತಿ ಅಂಬರೀಶ್-ಸುಮಲತಾ ದಂಪತಿ ಸಹ ದಾಸನನ್ನು ತಮ್ಮ ಮನೆ ಮಗನಂತೆ ಕಾಣುತ್ತಾರೆ. ಹೀಗಾಗಿ ಹಿರಿಯರಿಗೆ ಗೌರವ ನೀಡುವ ಸಮಯ ಸಿಕ್ಕಾಗಲೆಲ್ಲ ಡಿ ಬಾಸ್ ಇವರನ್ನು ನೆನದು ಪೋಸ್ಟ್ ಹಾಕುತ್ತಾರೆ. ಅದೇ ರೀತಿ ಇದೀಗ ಶಿಕ್ಷಕರ ದಿನಾಚರಣೆಯಂದು ವಿಶೇಷ ಪೋಸ್ಟ್ ಹಾಕಿದ್ದಾರೆ.

    ಶಿಕ್ಷಕರ ದಿನಾಚರಣೆ ಅಂಗವಾಗಿ ದರ್ಶನ್ ವಿಶೇಷ ಪೋಸ್ಟ್ ಹಾಕಿದ್ದು, ಈ ಮೂಲಕ ತಮ್ಮ ಜೀವನದಲ್ಲಿ ಪಾಠ ಕಲಿಸಿದ ಗುರುವಿನ ಸಮಾನರಾದ ಮಹತ್ವದ ವ್ಯಕ್ತಿಗಳನ್ನು ನೆನೆದಿದ್ದಾರೆ. ತಮ್ಮ ತಂದೆ, ತಾಯಿ ತುಗುದೀಪ ಶ್ರೀನಿವಾಸ್ ದಂಪತಿ ಹಾಗೂ ಅಂಬರೀಶ್- ಸುಮಲತಾ ದಂಪತಿಯ ಫೋಟೋ ಹಾಕಿ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದ್ದಾರೆ.

    ಈ ಕುರಿತು ಸಾಲುಗಳನ್ನು ಬರೆದಿರುವ ಅವರು, ಹುಟ್ಟಿನಿಂದ ಸಾಯುವ ವರೆಗೂ ಸರಿಯಾದ ಮಾರ್ಗದರ್ಶನ ನೀಡಿ ನಮ್ಮನ್ನು ನಮ್ಮ ಗುರಿಯತ್ತ ಕೊಂಡೊಯ್ಯಲು ಶ್ರಮಿಸುವ ಶಿಕ್ಷಕರಿಗೆ, ಗುರು ಹಿರಿಯರಿಗೆ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಹುಟ್ಟಿನಿಂದ ಸಾಯುವವರೆಗೂ ಸರಿಯಾದ ಮಾರ್ಗದರ್ಶನ ನೀಡಿ ನಮ್ಮನ್ನು ನಮ್ಮ ಗುರಿಯತ್ತ ಕೊಂಡೊಯ್ಯಲು ಶ್ರಮಿಸುವ ಶಿಕ್ಷಕರಿಗೆ, ಗುರು ಹಿರಿಯರಿಗೆ ಶಿಕ್ಷಕರ ದಿನಾಚರಣೆಯ ಹಾರ್ಧಿಕ ಶುಭಾಶಯಗಳು ????

    Posted by Darshan Thoogudeepa Srinivas on Saturday, September 5, 2020

    ಗುರು, ಹಿರಿಯರನ್ನು ನೆನೆಯುವ ಸಂದರ್ಭ ಬಂದಾಗಲೆಲ್ಲ ಅವರ ತಂದೆ ತಾಯಿ ಹಾಗೂ ಅಂಬರೀಶ್- ಸುಮಲತಾರನ್ನು ಡಿ ಬಾಸ್ ನೆನೆಯುತ್ತಾರೆ. ಅವರ ಹುಟ್ಟುಹಬ್ಬದ ಸಂದರ್ಭದಲ್ಲೂ ಸಹ ವಿಶೇಷ ಸಾಲುಗಳ ಮೂಲಕ ಭಾವನಾತ್ಮಕವಾಗಿ ಶುಭಕೋರುತ್ತಾರೆ. ಸುಮಲತಾ ಅಂಬರೀಶ್ ಸಹ ದರ್ಶನ್ ಹುಟ್ಟುಹಬ್ಬಕ್ಕೆ ಮುದ್ದಿನ ಮಗ ಎಂದೇ ಸಂಬೋೀಧಿಸಿ ಶುಭಾಶಯ ತಿಳಿಸುತ್ತಾರೆ.

    ಆಗಸ್ಟ್ 27ರಂದು ಸುಮಲತಾ ಅಂಬರೀಶ್ ಹುಟ್ಟುಹಬ್ಬದಂದು ವಿಶೇಷ ಪೋಸ್ಟ್ ಮೂಲಕ ದರ್ಶನ್ ಶುಭ ಕೋರಿದ್ದರು. ಮದರ್ ಇಂಡಿಯಾ ಸುಮಲತಾ ಅಂಬರೀಶ್ ಅಮ್ಮನವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡಿದ್ದರು. ಅದೇ ರೀತಿ ಸುಮಲತಾ ಅಂಬರೀಶ್ ಸಹ ಮಗ ಎಂದು ಹೇಳಿಯೇ ಹುಟ್ಟುಹಬ್ಬದ ಶುಭಾಶಯ ಕೋರುತ್ತಾರೆ.

    “ಮದರ್ ಇಂಡಿಯಾ” Sumalatha Ambareesh ಅಮ್ಮರವರಿಗೆ ಹುಟ್ಟು ಹಬ್ಬದ ಹಾರ್ಧಿಕ ಶುಭಾಶಯಗಳು.????????

    Posted by Darshan Thoogudeepa Srinivas on Wednesday, August 26, 2020

    ದರ್ಶನ್ ಹಾಗೂ ಅಂಬರೀಶ್ ಕುಟುಂಬ ಪರಸ್ಪರ ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತಾರೆ. ಈ ಮೂಲಕ ತಮ್ಮ ಪ್ರೀತಿಯನ್ನು ಮೆರೆಯುತ್ತಾರೆ. ಅಂಬರೀಶ್ ಕುಟುಂಬದ ಮಗನಂತೆ ದರ್ಶನ್ ಇದ್ದಾರೆ. ಹೀಗಾಗಿ ದರ್ಶನ್‍ಗೆ ಅಂಬರೀಶ್ ಹಾಗೂ ಸುಮಲತಾ ಎಂದರೆ ಎಲ್ಲಿಲ್ಲದ ಪ್ರೀತಿ. ಇಂದು ಶಿಕ್ಷಕರ ದಿನಾಚರಣೆ ದಿನ ಸಹ ತಂದೆ ತಾಯಿ ಜೊತೆ ಅಂಬರೀಶ್ ಅವರನ್ನೂ ನೆನೆದಿದ್ದಾರೆ.

  • ಅಂಬಿ ಅಭಿಮಾನಿಗಳಿಂದ ಹಸು ದಾನ

    ಅಂಬಿ ಅಭಿಮಾನಿಗಳಿಂದ ಹಸು ದಾನ

    ಮಂಡ್ಯ: ಕೊರೊನಾ ಲಾಕ್‍ಡೌನ್‍ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಮಂಡ್ಯದ ಜನತೆ ಹಾಗೂ ರೈತರಿಗೆ ದಿವಂಗತ ನಟ ಅಂಬರೀಶ್ ಅವರ ಅಭಿಮಾನಿಗಳು ಮಿಡಿದಿದ್ದಾರೆ.

    ನಟ ಅಂಬರೀಶ್ ಹಾಗೂ ಸಂಸದೆ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರು ಇಂದು ಅಂಬಿ ಅಭಿಮಾನಿಗಳ ಸೇವಾ ಕಾರ್ಯಕ್ಕೆ ಚಾಲನೆ ನೀಡಿದರು. ಜೊತೆಗೆ ಅಭಿಮಾನಿಗಳೊಂದಿಗೆ ಸಂಕಷ್ಟದಲ್ಲಿರುವವರ ಮನೆಗೆ ತೆರಳಿ ದಿನಸಿ, ತರಕಾರಿ ಕಿಟ್ ವಿತರಣೆ ಮಾಡಿದರು.

    ಮದ್ದೂರು ತಾಲೂಕಿನ ಗೆಜ್ಜಲಗೆರೆ ಹಾಗೂ ಕುದರಗುಂಡಿ ಗ್ರಾಮದ ಕೆಲವು ಬಡ ರೈತರು, ನಾಗರಿಕರಿಗೆ ಅಂಬಿ ಅಭಿಮಾನಿಗಳು ನೆರವು ನೀಡಿದ್ದಾರೆ. ಜೊತೆಗೆ ಎರಡು ಕುಟುಂಬಗಳ ನಿರ್ವಹಣೆಗೆ ಹಸು ದಾನ ಮಾಡಿದ್ದಾರೆ. ಅಂಬಿ ಅಭಿಮಾನಿಗಳ ಸೇವೆಗೆ ಅಭಿಷೇಕ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ರಾಜ್ಯದಲ್ಲಿ  ಇಂದು 12 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ. ದಾವಣಗೆರೆಯ 55 ವರ್ಷದ ಮಹಿಳೆ (ರೋಗಿ-694) ಕೊರೊನಾಗೆ ಇಂದು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ದಾವಣಗೆರೆಯಲ್ಲಿ ಈವರೆಗೂ ಕೊರೊನಾದಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಬಾಗಕೋಟೆಯಲ್ಲಿ ರೋಗಿ-607ರಿಂದ ಮೂವರಿಗೆ ಕೊರೊನಾ ತಗುಲಿದೆ.

    ರಾಜ್ಯ ಆರೋಗ್ಯ ಇಲಾಖೆ ಇಂದು ಮಧ್ಯಾಹ್ನ ಬಿಡುಗಡೆಯಾದ ಬುಲೆಟಿನ್‍ನಲ್ಲಿ, ದಾವಣಗೆರೆ, ಬಾಗಲಕೋಟೆ ಮತ್ತು ಕಲಬುರಗಿಯಲ್ಲಿ ತಲಾ ಮೂರು, ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿಯ 13 ವರ್ಷದ ಬಾಲಕಿಯಲ್ಲಿಯೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

  • ಗೂಂಡಾಗಿರಿ ಮಾಡಿ ಎಂಎಲ್‍ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ: ಶ್ರೀಕಂಠೇಗೌಡ ವಿರುದ್ಧ ಸುಮಲತಾ ಕಿಡಿ

    ಗೂಂಡಾಗಿರಿ ಮಾಡಿ ಎಂಎಲ್‍ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ: ಶ್ರೀಕಂಠೇಗೌಡ ವಿರುದ್ಧ ಸುಮಲತಾ ಕಿಡಿ

    ಮಂಡ್ಯ: ಇಂದು ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸುತ್ತಿದ್ದ ವೇಳೆ ಅಡ್ಡಿಪಡೆಸಿ, ಗಲಾಟೆ ಮಾಡಿದ ಎಂಎಲ್‍ಸಿ ಕೆ.ಟಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಕಿಡಿಕಾರಿದ್ದಾರೆ. ಈ ರೀತಿ ಗೂಂಡಾಗಿರಿ ಮಾಡಿ, ಗಲಾಟೆ ಮಾಡೋರಿಗೆ ಎಂಎಲ್‍ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ ಎಂದು ಪ್ರಶ್ನಿಸಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಅವರು, ಎಸ್‍ಪಿ, ಪೊಲೀಸ್ ಅಧಿಕಾರಿಗಳು, ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿದ್ದ ಪತ್ರಕರ್ತರ ಕೋವಿಡ್-19 ಪರೀಕ್ಷೆಗೆ ಅಡ್ಡಿಪಡೆಸಿ, ರೌಡಿಗಿರಿ ಮೆರೆದಿದ್ದು ಖಂಡನೀಯ. ಶ್ರೀಕಂಠೇಗೌಡರು ತಪ್ಪು ಮಾಡಿದ್ದಾರೆ. ಅವರ ವಿರುದ್ಧ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುತ್ತೆ, ಅದನ್ನು ಅವರು ಎದುರಿಸಲೇಬೇಕು. ಅವರು ನಿಯಮಗಳನ್ನು ಉಲ್ಲಂಘಿಸಿ ಕಾನೂನಿನ ವಿರುದ್ಧ ಹೋಗಿದ್ದಾರೆ. ಸರ್ಕಾರದ ಅನುಮತಿ ಪಡೆದು ಮಂಡ್ಯದಲ್ಲಿ ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿದೆ. ಫೀಲ್ಡ್ ಅಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಸೋಂಕು ತಗುಲಿದರೆ ಅದು ಬೇರೆ ಅವರಿಗೆ ಹರಡುವ ಸಾಧ್ಯತೆ ಹೆಚ್ಚು, ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಪರೀಕ್ಷೆ ಕೈಗೊಳ್ಳಲಾಗಿದೆ ಅದನ್ನು ಶ್ರೀಕಂಠೇಗೌಡರು ಅರ್ಥ ಮಾಡಿಕೊಳ್ಳಬೇಕು ಎಂದು ಹರಿಹಾಯ್ದರು.

    ಇಲ್ಲಿ ಪರೀಕ್ಷೆ ಮಾಡಬೇಡಿ, ನಮ್ಮ ಮನೆ ಇದೆ ಎಂದರೆ ಬೇರೆ ಕಡೆ ಪರೀಕ್ಷೆ ಮಾಡಿದರೂ ಮನೆಗಳು ಇರುತ್ತೆ ಅಲ್ವಾ? ಪರಿಸ್ಥಿತಿ ಅರ್ಥಮಾಡಿಕೊಳ್ಳದೇ ಹೀಗೆ ಗಲಾಟೆ ಮಾಡಿದರೆ ಈ ಘಟನೆಗೂ ಪಾದರಾಯನಪುರದಲ್ಲಿ ನಡೆದ ಘಟನೆಗೂ ಏನು ವ್ಯತ್ಯಾಸ? ಇಲ್ಲಿ ಕೋವಿಡ್-19 ಪರೀಕ್ಷೆ ನಡೆಸಿದರೆ ನಿಮಗೂ ಕೊರೊನಾ ಬರುತ್ತೆ, ಇದನ್ನು ವಿರೋಧಿಸಿ ಎಂದು ಶ್ರೀಕಂಠೆಗೌಡರು ಸ್ಥಳೀಯರಿಗೆ ಹೇಳಿರುವುದು ಅವರ ಸಂಸ್ಕಾರವನ್ನು ತೋರಿಸುತ್ತದೆ. ಇದು ಬಹಳ ಶೋಷನೀಯ. ಒಬ್ಬರು ಎಂಎಲ್‍ಸಿ ಆಗಿ ಈ ರೀತಿ ಹೇಳಿಕೆ ಕೊಡುತ್ತಾರೆ ಎಂದರೆ ಅವರ ಶಿಕ್ಷಣ ಹಾಗೂ ಮಾಹಿತಿ ಎಷ್ಟರ ಮಟ್ಟಿಗೆ ತಿಳಿದುಕೊಂಡಿದ್ದಾರೆ ಎನ್ನೋದನ್ನ ನಾವು ಪ್ರಶ್ನಿಸಬೇಕಾಗಿದೆ ಎಂದರು.

    ಕೊರೊನಾ ಪರೀಕ್ಷೆ ಮಾಡಿದರೆ ಸೋಂಕು ಹರಡುತ್ತೆ ಎಂದು ಎಲ್ಲೂ ಹೇಳಿಲ್ಲ. ಬದಲಾಗಿ ಅತೀ ಹೆಚ್ಚು ಪರೀಕ್ಷೆ ಮಾಡಿ ಎಂದಿದ್ದಾರೆ. ಕೊರೊನಾ ಇರುವ ಅದೆಷ್ಟೋ ಮಂದಿಗೆ ಸೋಂಕಿನ ಲಕ್ಷಣಗಳು ಇರುವುದಿಲ್ಲ. ಹೀಗಾಗಿ ಪರೀಕ್ಷೆ ಮಾಡುವುದು ಅಗತ್ಯ. ಇದನ್ನು ಅರ್ಥ ಮಾಡಿಕೊಳ್ಳದೇ ಈ ಸಂಕಷ್ಟದ ಪರಿಸ್ಥಿತಿಯಲ್ಲೂ ಬೇರೆ ಸಮಯದಲ್ಲಿ ಮಾಡುವಂತೆ ಗೂಂಡಾಗಿರಿ, ಗಲಾಟೆ, ರಾಜಕಾರಣ ಮಾಡುವುದು ಸರಿಯಲ್ಲ. ಹೀಗೆ ಮಾಡಿ ಜನಪ್ರತಿನಿಧಿಯಾಗುವ ಅರ್ಹತೆಯನ್ನೇ ಇವರು ಕಳೆದುಕೊಂಡಿದ್ದಾರೆ ಎನ್ನಬಹುದು ಎಂದು ಕಿಡಿಕಾರಿದ್ದಾರೆ.

    ಈಗಾಗಲೇ ನಾನು ಪೊಲೀಸ್ ಅಧಿಕಾರಿಗಳ ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಅವರು ಎಫ್‍ಐಆರ್ ದಾಖಲಾದ ಮೇಲೆ ಅದರ ಕಾಫಿಯನ್ನ ಕಳುಹಿಸುವುದಾಗಿ ಹೇಳಿದ್ದಾರೆ. ಈ ರೀತಿ ತಪ್ಪು ಮಾಡಿದರೆ ಸಾಮಾನ್ಯ ವ್ಯಕ್ತಿ ಮೇಲೆ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತಾರೋ ಅದೇ ರೀತಿ ಕ್ರಮವನ್ನು ಎಂಎಲ್‍ಸಿ ಮೇಲೂ ತೆಗೆದುಕೊಳ್ಳಬೇಕು. ತಪ್ಪು ಯಾರೇ ಮಾಡಿದರು ತಪ್ಪು ತಪ್ಪೇ. ಎಂಎಲ್‍ಸಿ, ಎಂಪಿ, ಎಂಎಲ್‍ಎ ಯಾರೇ ಮಾಡಿದರೂ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಎಷ್ಟೆಲ್ಲಾ ರಿಸ್ಕ್ ತೆಗೆದುಕೊಂಡು ಅಗತ್ಯ ಸೇವೆಗಳಲ್ಲಿ ಇರುವವರು ಕೆಲಸ ಮಾಡುತ್ತಿದ್ದಾರೆ ಎನ್ನುವುದು ಇವರಿಗೆ ಅರ್ಥ ಆಗುತ್ತಿಲ್ಲ. ಇವರು ನಾವು ಮಾತ್ರ ಸುರಕ್ಷಿತವಾಗಿರಬೇಕು ಎನ್ನುವ ಉದ್ದೇಶದಲ್ಲಿ ಇದ್ದಾರೋ ಏನೋ ಗೊತ್ತಿಲ್ಲ. ಆದರೆ ಈ ಸಂಬಂಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸುಮಲತಾ ಅವರು ಒತ್ತಾಯಿಸಿದ್ದಾರೆ.

  • 50 ಲಕ್ಷ ದೇಣಿಗೆ ನೀಡಿದ ಸುಮಲತಾ ಅಂಬರೀಶ್

    50 ಲಕ್ಷ ದೇಣಿಗೆ ನೀಡಿದ ಸುಮಲತಾ ಅಂಬರೀಶ್

    ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದ್ದು, ಇದೀಗ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ದೇಣಿಗೆ  ನೀಡಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದೆ, ಕೋವಿಡ್ -19 ಮಹಾಮಾರಿ ದೇಶದಲ್ಲಿ ಹರಡುತ್ತಿದ್ದು, ಅದರ ವಿರುದ್ಧದ ಹೋರಾಟದ ಸಂದರ್ಭದಲ್ಲಿ ನನ್ನ ಕಳಕಳಿಯ ಕೊಡುಗೆಯಾಗಿದೆ. ಮೊದಲಿಗೆ ಮಂಡ್ಯದ ಮಿಮ್ಸ್ ಗೆ ಕೊರೊನ ವಿರುದ್ಧ ಹೊರಾಡುವ ಸಲುವಾಗಿ ವೆಂಟಿಲೇಟರ್ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50 ಲಕ್ಷ ರೂ. ಗಳನ್ನು ನೀಡಿದ್ದೇನೆ ಎಂದು ಲೆಟರ್ ಪೋಸ್ಟ್ ಮಾಡಿದ್ದಾರೆ.

    ಇನ್ನೊಂದು ಟ್ವೀಟ್ ಮಾಡಿ, ಪ್ರಧಾನ ಮಂತ್ರಿಗಳ ತುರ್ತು ಪರಿಹಾರ ನಿಧಿಗೆ ನನ್ನ ಎರಡು ತಿಂಗಳ ವೇತನ 2 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿದ್ದೇನೆ. ಅಲ್ಲದೆ ಎರಡು ತಿಂಗಳ ವೇತನ 2 ಲಕ್ಷ ರೂ. ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19ಕ್ಕೆ ನೀಡಿದ್ದೇನೆ ಎಂದು ಬರೆದುಕೊಂಡು ನರೇಂದ್ರ ಮೋದಿ, ಬಿಎಸ್ ಯಡಿಯೂರಪ್ಪ, ಶ್ರೀರಾಮುಲುಗೆ ಟ್ಯಾಗ್ ಮಡಿದ್ದಾರೆ.

    ನಿನ್ನೆಯಷ್ಟೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಕೊರೊನಾದಿಂದ ಕಂಗೆಟ್ಟವರಿಗೆ ಪ್ರಧಾನಿ ಮಂತ್ರಿ ನಿಧಿಯಿಂದ 1.70 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ 21 ದಿನಗಳ ಕಾಲ ಲಾಕ್‍ಡೌನ್ ಘೋಷಿಸಿದ್ದಾರೆ. ಇದು ಜೀವನ ಮತ್ತು ಆರ್ಥಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅಕ್ಕಿ ಯೋಜನೆ ಅಡಿ ಈಗಾಗಲೇ 5 ಕೆಜಿ ಅಕ್ಕಿ, ಗೋಧಿ ನೀಡಲಾಗುತ್ತಿದೆ. ಇದರ ಜೊತೆ ಹೆಚ್ಚುವರಿಯಾಗಿ ಮೂರು ತಿಂಗಳ ಕಾಲ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು.

  • ದರ್ಶನ್ ನನ್ನ ದತ್ತು ಮಗನಲ್ಲ ಸ್ವಂತ ಮಗ: ಸುಮಲತಾ

    ದರ್ಶನ್ ನನ್ನ ದತ್ತು ಮಗನಲ್ಲ ಸ್ವಂತ ಮಗ: ಸುಮಲತಾ

    ಬೆಂಗಳೂರು: ಐತಿಹಾಸಿಕ ಗಂಡುಗಲಿ ಮದಕರಿ ನಾಯಕ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಇಂದು ನಟಿ, ಸಂಸದೆ ಸುಮಲತಾ ಅಂಬರೀಶ್ ಭಾಗಿಯಾಗಿದ್ದಾರೆ. ಈ ವೇಳೆ ದರ್ಶನ್ ನನ್ನ ದತ್ತು ಮಗನಲ್ಲ ಸ್ವಂತ ಮಗ ಎಂದು ಖುಷಿಯಿಂದ ಹೇಳಿಕೊಂಡಿದ್ದಾರೆ.

    ಮುಹೂರ್ತದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಕ್ ಲೈನ್ ಪ್ರೊಡಕ್ಷನ್ ಹಾಗೂ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದ ದರ್ಶನ್ ನಟನೆಯ ಸಿನಿಮಾ ಇದಾಗಿದ್ದು, ಸಿನಿಮಾ ಯಶಸ್ಸಿನಲ್ಲಿ ಇತಿಹಾಸ ಸೃಷ್ಟಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಮದಕರಿ ನಾಯಕನ ಪಾತ್ರದಿಂದ ಚಿತ್ರ ಜನರಿಗೆ ಇನ್ನಷ್ಟು ಹತ್ತಿರವಾಗಲಿದೆ: ದರ್ಶನ್

    ಐತಿಹಾಸಿಕ ಚಿತ್ರದಲ್ಲಿ ದರ್ಶನ್ ನಟಿಸುತ್ತಿರುವುದೇ ಒಂದು ಖುಷಿಯ ವಿಚಾರವಾಗಿದೆ. ದರ್ಶನ್ ನಟಿಸುತ್ತಿರುವುದು ಒಂದು ಹಿಸ್ಟರಿ ಕ್ರಿಯೇಟ್ ಮಾಡುತ್ತದೆ. ದರ್ಶನ್ ನನ್ನ ದತ್ತು ಮಗ ಅಲ್ಲ ನನ್ನ ಸ್ವಂತ ಮಗನೇ. ಐತಿಹಾಸಿಕ ಚಿತ್ರದಲ್ಲಿ ನಾನು ರಾಜಮಾತೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಇದನ್ನೂ ಓದಿ: ಗಂಡುಗಲಿ ಮದಕರಿ ನಾಯಕ ಸಿನಿಮಾ ಮೂಹೂರ್ತದಲ್ಲಿ ಸುಮಲತಾ ಭಾಗಿ

    ಇದಕ್ಕೂ ಮೊದಲು ದರ್ಶನ್ ಮಾತನಾಡಿ, ಇಂದು ಸುಮಲತಾ ಅಮ್ಮ ಚಿತ್ರದ ಮುಹೂರ್ತಕ್ಕೆ ಚಾಲನೆ ಕೊಟ್ಟಿದ್ದಾರೆ. ಚಿತ್ರದಲ್ಲಿ ಎಲ್ಲರೂ ಹಿರಿಯ ಕಲಾವಿದರಿದ್ದಾರೆ. ಅವರು ದರ್ಶನ್ ಕೂತ್ಕೋ ಅಂದರೆ ಕುತ್ಕೋಬೇಕು, ನಿಂತ್ಕೋ ಅಂದರೆ ನಿಂತ್ಕೋಬೇಕು. ಯಾಕೆಂದರೆ ಎಲ್ಲರೂ ನನ್ನ ಸಿನಿಯರ್ಸ್ ಎಂದು ಹೇಳಿದರು.

    ಚಿತ್ರದಲ್ಲಿರುವ ಬಹಳ ಕಲಾವಿದರು ನಮ್ಮ ತಂದೆ ಜೊತೆಗೆ ಕೆಲಸ ಮಾಡಿದ್ದಾರೆ. ಗಂಡುಗಲಿ ಮದಕರಿ ನಾಯಕನ ಚಿತ್ರಕ್ಕಾಗಿ ದೊಡ್ಡ ಟೀಮ್ ಸೇರಿದ್ದೀವಿ. ಮದಕರಿ ನಾಯಕನ ಪಾತ್ರದಿಂದ ಚಿತ್ರ ಇನ್ನಷ್ಟು ಜನರಿಗೆ ಹತ್ತಿರವಾಗಲಿದೆ. ಅಲ್ಲದೆ ರಾಜಮಾತೆ ಪಾತ್ರದಲ್ಲಿ ಸುಮಲತಾ ಅವರು ಕಾಣಿಸಿಕೊಳ್ಳಲಿದ್ದಾರೆ. ಈಗ ಆರಂಭವಾಗಿದೆ, ತಯಾರಿಗಳು ನಡೆಯುತ್ತಿದೆ ಎಂದು ದರ್ಶನ್ ತಿಳಿಸಿದರು. ಇದನ್ನೂ ಓದಿ: ದುರ್ಗದ ಕೋಟೆಯಲ್ಲಿ ‘ವೀರ ಮದಕರಿ ನಾಯಕ’ನಾಗಿ ಸಾರಥಿಯ ಪಯಣ

    ದರ್ಶನ್ ಅಭಿನಯದ ಐತಿಹಾಸಿಕ ಗಂಡುಗಲಿ ಮದಕರಿ ನಾಯಕ ಚಿತ್ರದ ಮಹೂರ್ತ ಇಂದು ನೆರವೇರಿದೆ. ಪುರಾತನ ಗವಿ ಗಂಗಾಧರೆಶ್ವರ ದೇವಸ್ಥಾನದಲ್ಲಿ ಮಹೂರ್ತ ನಡೆದಿದ್ದು, ಚಿತ್ರದ ಮೊದಲ ಸೀನ್ ಗೆ ಚಾಲನೆ ನೀಡಲಾಗಿದೆ. ಮಹೂರ್ತ ಕಾರ್ಯಕ್ರಮದಲ್ಲಿ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಶ್ರೀನಿವಾಸ್ ಮೂರ್ತಿ ಭಾಗಿಯಾಗಿದ್ದಾರೆ.

  • ಮದಕರಿ ನಾಯಕನ ಪಾತ್ರದಿಂದ ಚಿತ್ರ ಜನರಿಗೆ ಇನ್ನಷ್ಟು ಹತ್ತಿರವಾಗಲಿದೆ: ದರ್ಶನ್

    ಮದಕರಿ ನಾಯಕನ ಪಾತ್ರದಿಂದ ಚಿತ್ರ ಜನರಿಗೆ ಇನ್ನಷ್ಟು ಹತ್ತಿರವಾಗಲಿದೆ: ದರ್ಶನ್

    ಬೆಂಗಳೂರು: ಐತಿಹಾಸಿಕ ಗಂಡುಗಲಿ ಮದಕರಿ ನಾಯಕ ಚಿತ್ರದ ಮುಹೂರ್ತಕ್ಕೆ ಇಂದು ಚಾಲನೆ ಸಿಕ್ಕಿದ್ದು, ಮದಕರಿ ನಾಯಕನ ಪಾತ್ರದಿಂದ ಚಿತ್ರ ಜನರಿಗೆ ಇನ್ನಷ್ಟು ಹತ್ತಿರವಾಗಲಿದೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ನಟ ದರ್ಶನ್, ಇಂದು ಸುಮಲತಾ ಅಮ್ಮ ಚಿತ್ರದ ಮುಹೂರ್ತಕ್ಕೆ ಚಾಲನೆ ಕೊಟ್ಟಿದ್ದಾರೆ. ಚಿತ್ರದಲ್ಲಿ ಎಲ್ಲರೂ ಹಿರಿಯ ಕಲಾವಿದರಿದ್ದಾರೆ. ಅವರು ದರ್ಶನ್ ಕೂತ್ಕೊ ಅಂದರೆ ಕುತ್ಕೋಬೇಕು, ನಿಂತ್ಕೊ ಅಂದರೆ ನಿಂತ್ಕೋಬೇಕು. ಯಾಕೆಂದರೆ ಎಲ್ಲರೂ ನನ್ನ ಸಿನಿಯರ್ಸ್ ಎಂದು ಹೇಳಿದರು. ಇದನ್ನೂ ಓದಿ: ಗಂಡುಗಲಿ ಮದಕರಿ ನಾಯಕ ಸಿನಿಮಾ ಮೂಹೂರ್ತದಲ್ಲಿ ಸುಮಲತಾ ಭಾಗಿ

    ಚಿತ್ರದಲ್ಲಿರುವ ಬಹಳ ಕಲಾವಿದರು ನಮ್ಮ ತಂದೆ ಜೊತೆಗೆ ಕೆಲಸ ಮಾಡಿದ್ದಾರೆ. ಗಂಡುಗಲಿ ಮದಕರಿ ನಾಯಕನ ಚಿತ್ರಕ್ಕಾಗಿ ದೊಡ್ಡ ಟೀಮ್ ಸೇರಿದ್ದೀವಿ. ಮದಕರಿ ನಾಯಕನ ಪಾತ್ರದಿಂದ ಚಿತ್ರ ಇನ್ನಷ್ಟು ಜನರಿಗೆ ಹತ್ತಿರವಾಗಲಿದೆ. ಅಲ್ಲದೆ ರಾಜಮಾತೆ ಪಾತ್ರದಲ್ಲಿ ಸುಮಲತಾ ಅವರು ಕಾಣಿಸಿಕೊಳ್ಳಲಿದ್ದಾರೆ. ಈಗ ಆರಂಭವಾಗಿದೆ, ತಯಾರಿಗಳು ನಡೆಯುತ್ತಿದೆ ಎಂದು ದರ್ಶನ್ ತಿಳಿಸಿದರು. ಇದನ್ನೂ ಓದಿ: ದುರ್ಗದ ಕೋಟೆಯಲ್ಲಿ ‘ವೀರ ಮದಕರಿ ನಾಯಕ’ನಾಗಿ ಸಾರಥಿಯ ಪಯಣ

    ದರ್ಶನ್ ಅಭಿನಯದ ಐತಿಹಾಸಿಕ ಗಂಡುಗಲಿ ಮದಕರಿ ನಾಯಕ ಚಿತ್ರದ ಮಹೂರ್ತ ಇಂದು ನೆರವೇರಿದೆ. ಪುರಾತನ ಗವಿ ಗಂಗಾಧರೆಶ್ವರ ದೇವಸ್ಥಾನದಲ್ಲಿ ಮಹೂರ್ತ ನಡೆದಿದ್ದು, ಚಿತ್ರದ ಮೊದಲ ಸೀನ್ ಗೆ ಚಾಲನೆ ನೀಡಲಾಗಿದೆ. ಮಹೂರ್ತ ಕಾರ್ಯಕ್ರಮದಲ್ಲಿ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಶ್ರೀನಿವಾಸ್ ಮೂರ್ತಿ ಭಾಗಿಯಾಗಿದ್ದಾರೆ.

    ದರ್ಶನ್ ಅವರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ, ಕುರುಕ್ಷೇತ್ರ ಚಿತ್ರಗಳ ನಂತ ಇದೀಗ ಮತ್ತೊಂದು ಐತಿಹಾಸಿಕ ಚಿತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಬಿ.ಎಲ್.ವೇಣು ಕಾದಂಬರಿಯನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಬಿಗ್ ಬಜೆಟ್ ಚಿತ್ರವಾಗಿದೆ. ತಾರಾಗಣ, ತಂತ್ರಜ್ಞರ ತಂಡ ಕೂಡ ತುಂಬಾ ವಿಶಾಲವಾಗಿರಲಿದೆ. ಬೆಂಗಳೂರು, ರಾಜಸ್ಥಾನ, ಚಿತ್ರದುರ್ಗ, ಮುಂಬೈನಲ್ಲೂ ಕೂಡ ಶೂಟಿಂಗ್ ನಡೆಯಲಿದೆ ಎಂಬುದಾಗಿ ತಿಳಿದುಬಂದಿದೆ.

  • ಕೆಆರ್‌ಪೇಟೆ ಬೈಎಲೆಕ್ಷನ್- ಸುಮಲತಾ ಬೆಂಬಲದ ನಿರೀಕ್ಷೆಯಲ್ಲಿದ್ದವ್ರಿಗೆ ಶಾಕ್

    ಕೆಆರ್‌ಪೇಟೆ ಬೈಎಲೆಕ್ಷನ್- ಸುಮಲತಾ ಬೆಂಬಲದ ನಿರೀಕ್ಷೆಯಲ್ಲಿದ್ದವ್ರಿಗೆ ಶಾಕ್

    ಬೆಂಗಳೂರು: ನಮ್ಮ ನೆರವಿಗೆ ಬರುತ್ತಾರೆ ಅನ್ನೋ ನಿರೀಕ್ಷೆಯಲ್ಲಿದ್ದ ಎರಡೂ ಬಣದವರ ನಿರೀಕ್ಷೆ ಹುಸಿಯಾಗಿದೆ. ನನಗೆ ನೀವೂ ಬೇಕು, ಅವರೂ ಬೇಕು. ಹೀಗಾಗಿ ನಾನು ಯಾರ ಪರವೂ ಪ್ರಚಾರಕ್ಕೆ ಬರಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

    ಹೌದು. ಮಂಡ್ಯ ಅಖಾಡದ ಲೇಟೆಸ್ಟ್ ಬೆಳವಣಿಗೆಯಾಗಿದ್ದು, ಕೆ.ಆರ್. ಪೇಟೆ ಅಖಾಡದಲ್ಲಿ ಸಂಸದೆ ಸುಮಲತಾ ಸೈಲೆಂಟಾಗಿರಲು ತೀರ್ಮಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಸುಮಲತಾ ಅವರು ತನ್ನ ಬೆಂಬಲ ನಿರೀಕ್ಷಿಸಿದವರಿಗೆ ಶಾಕ್ ನೀಡಿದ್ದಾರೆ.

    ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಬಣದವರು ತಮ್ಮ ಪರವಾಗಿ ಪ್ರಚಾರಕ್ಕೆ ಬರುವಂತೆ ಸುಮಲತಾರ ಮೇಲೆ ಒತ್ತಡ ಹೇರತೊಡಗಿದ್ರು. ಸುಮಲತಾ ಅವರು ಮಂಡ್ಯದ ಅಖಾಡದಿಂದ ಸ್ಪರ್ಧೆ ಮಾಡಿದಾಗ ಬಿಜೆಪಿ ಬಾಹ್ಯ ಬೆಂಬಲ ಘೋಷಣೆ ಮಾಡಿತ್ತು. ಕಾಂಗ್ರೆಸ್ಸಿನ ಚಲುವರಾಯ ಸ್ವಾಮಿ ಮತ್ತು ಟೀಮ್ ಪರವಾಗಿ ಕೆಲಸ ಮಾಡಿದ್ದರು. ಅಸಹಜವಾಗಿಯೇ ಕೆ.ಆರ್.ಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ ಚಂದ್ರಶೇಖರ್ ನಾನು ನಿಮ್ಮನ್ನ ಬೆಂಬಲಿಸಿದ್ದೆ. ಉಪ ಚುನಾವಣೆಯಲ್ಲಿ ನೀವು ನಮ್ಮನ್ನು ಬೆಂಬಲಿಸಿ ಎಂದು ಒತ್ತಡ ಹೇರತೊಡಗಿದ್ದರು. ಇನ್ನೊಂದೆಡೆ ಲೋಕಸಭಾ ಚುನಾವಣೆಯಲ್ಲಿ ಬಾಹ್ಯ ಬೆಂಬಲ ಘೋಷಿಸಿದ್ದ ಬಿಜೆಪಿ ಉಪ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸುವಂತೆ ಒತ್ತಡ ಹೇರತೊಡಗಿತ್ತು. ಹೀಗಾಗಿ ಧರ್ಮ ಸಂಕಟಕ್ಕೆ ಸಿಲುಕಿದ್ದ ಸಂಸದೆ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದರು.

    ಈಗ ಎರಡು ಬಣದವರಿಗೂ ಸ್ಪಷ್ಟವಾಗಿ ಸಂಸದೆ ತಿಳಿಸಿದ್ದಾರೆ. ಯಾವ ಕಾರಣಕ್ಕೂ ಯಾರ ಪರವಾಗಿಯೂ ಪ್ರಚಾರಕ್ಕೆ ಬರಲ್ಲ ಎಂದಿದ್ದಾರೆ. ಈ ಮೂಲಕ ಸಂಸದೆ ಸುಮಲತಾರನ್ನು ಕರೆತಂದು ತಮ್ಮ ಪರವಾಗಿ ಪ್ರಚಾರ ಮಾಡಿಸಿ ಸುಲಭವಾಗಿ ಗೆಲ್ಲಬಹುದು ಎಂದುಕೊಂಡಿದ್ದ ಕೆ.ಆರ್ ಪೇಟೆಯ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಈಗ ನಿರಾಸೆ ಅನುಭವಿಸುವಂತಾಗಿದೆ ಎನ್ನಲಾಗಿದೆ.

  • ಧರ್ಮ ಸಂಕಟದಲ್ಲಿ ಸುಮಲತಾ ಅಂಬರೀಶ್

    ಧರ್ಮ ಸಂಕಟದಲ್ಲಿ ಸುಮಲತಾ ಅಂಬರೀಶ್

    ಬೆಂಗಳೂರು: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ಸಂಸದೆ ಸುಮಲತಾ ಅಂಬರೀಶ್ ಯಾರಿಗೆ ಬೆಂಬಲ ನೀಡ್ತಾರೆ ಎಂಬ ಪ್ರಶ್ನೆ ಹುಟ್ಟುಕೊಂಡಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇರವಾಗಿ ಸುಮಲತಾರಿಗೆ ಬೆಂಬಲ ನೀಡಿತ್ತು. ಇತ್ತ ಕಾಂಗ್ರೆಸ್‍ನಲ್ಲಿದ್ದ ಚಲುವರಾಯಸ್ವಾಮಿ & ಟೀಂ ಸಹ ಪರೋಕ್ಷವಾಗಿ ಬೆಂಬಲ ನೀಡಿತ್ತು. ಹೀಗಾಗಿ ಯಾರಿಗೆ ಬೆಂಬಲ ನೀಡಬೇಕು ಎಂದು ಸುಮಲತಾ ಅಂಬರೀಶ್ ಧರ್ಮಸಂಕಟದಲ್ಲಿದ್ದಾರೆ ಎನ್ನಲಾಗಿದೆ.

    ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹಾಕದೇ ಸಂಪೂರ್ಣ ಬೆಂಬಲ ನೀಡಿತ್ತು. ಅಂದು ನಾವು ಬೆಂಬಲಿಸಿದ್ದೀವಿ, ಇಂದು ನೀವು ಬೆಂಬಲಿಸಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಮತ್ತೊಂದು ಕಡೆ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಅವರಿಗೆ ಬೆಂಬಲ ನೀಡಬೇಕೆಂದು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

    ನವೆಂಬರ್ 24ರಂದು ಅಂಬರೀಶ್ ಅವರ ಮೊದಲ ಪುಣ್ಯಸ್ಮರಣೆಯ ದಿನವೇ ನಿರ್ಧಾರವನ್ನು ತಿಳಿಸಬೇಕೆಂದು ಕಾಂಗ್ರೆಸ್ ಮತ್ತು ಬಿಜೆಪಿ ಬಿಗಿಪಟ್ಟು ಹಿಡಿದಿವೆಯಂತೆ. ಹೀಗಾಗಿ ಸುಮಲತಾ ಅಂಬರೀಶ್ ಆಪ್ತ ಬೆಂಬಲಿಗರ ಸಭೆ ಕರೆದು ಚರ್ಚಿಸಿ ನವೆಂಬರ್ 24ರಂದು ತಮ್ಮ ನಿರ್ಧಾರವನ್ನು ತಿಳಿಸುವ ಸಾಧ್ಯತೆಗಳಿವೆ.

    ಕೆಲವು ದಿನಗಳ ಹಿಂದೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುಮಲತಾ ಅಂಬರೀಶ್, ಅಭಿಮಾನಿಗಳು ಒತ್ತಾಯಿಸಿದ್ದರಿಂದ ಚುನಾವಣೆಗೆ ನಿಂತೆ. ನನಗಿಂತ ಅವರೇ ಓಡಾಡಿ ಚುನಾವಣೆಯಲ್ಲಿ ಗೆಲ್ಲಿಸಿದರು. ಉಪಚುನಾವಣೆಯಲ್ಲಿ ಪಕ್ಷೇತರ ಸಂಸದೆಯಾಗಿರುವ ನಾನು ಯಾರನ್ನಾದರನ್ನ ಬೆಂಬಲಿಸಬೇಕಾ ಅಥವಾ ತಟಸ್ಥವಾಗಿರಬೇಕಾ ಎಂಬುದನ್ನು ಅವರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದರು.

  • ಹಿಂದೆ ನಾವು ಬೆಂಬಲ ಕೊಟ್ಟಿದ್ದೇವೆ, ಈಗ ಸುಮಲತಾ ಕೊಡಲೇಬೇಕು – ಕರಂದ್ಲಾಜೆ

    ಹಿಂದೆ ನಾವು ಬೆಂಬಲ ಕೊಟ್ಟಿದ್ದೇವೆ, ಈಗ ಸುಮಲತಾ ಕೊಡಲೇಬೇಕು – ಕರಂದ್ಲಾಜೆ

    ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ನಾವು ಬೆಂಬಲ ಕೊಟ್ಟಿದ್ದೇವೆ. ಈಗ ಸಂಸದೆ ಸುಮಲತಾ ಅಂಬರೀಶ್ ಅವರು ನಮಗೆ ಬೆಂಬಲ ಕೊಡಲೇ ಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಸುಮಲತಾ ಬೆಂಬಲ ನೀಡುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಿಂದ ನಾವು ಬೆಂಬಲ ಕೊಟ್ಟಿದ್ದೇವೆ. ಈ ಸುಮಲತಾ ಬೆಂಬಲ ಕೊಡಲೇ ಬೇಕು. ಏಕೆಂದರೆ ನಾವು ಬೆಂಬಲ ಕೊಟ್ಟಿದ್ದೆವು. ಹೀಗಾಗಿ ಬೆಂಬಲ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.

    ಬೆಂಬಲಿಸಿ ಎಂದು ನಾವು ಒತ್ತಾಯ ಮಾಡುವ ಪ್ರಶ್ನೆಯೇ ಇಲ್ಲ. ಅವರೇ ಕೇಂದ್ರ, ರಾಜ್ಯ ಸರ್ಕಾರಕ್ಕೆ ನನ್ನ ಬೆಂಬಲ ಇದೆ ಎಂದು ಹೇಳಿದ್ದಾರೆ. ಈಗ ಏನು ಬದಲಾವಣೆ ಆಗಿದೆಯೋ ಗೊತ್ತಿಲ್ಲ ಎಂದರು.

    ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯ ಎಂದರೆ ಸುಳ್ಳು, ಸುಳ್ಳು ಎಂದರೆ ಸಿದ್ದರಾಮಯ್ಯ. ಅನ್ನ ಭಾಗ್ಯ ಯೋಜನೆ ನನ್ನದು ಎಂದು ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ. ಆದರೆ ಅದು ಕೇಂದ್ರ ಸರ್ಕಾರದ ಯೋಜನೆ, ಕೇಂದ್ರ ಸರ್ಕಾರ ಅದಕ್ಕೆ ಹಣ ನೀಡಿದೆ. ಕೇಂದ್ರದ ಯೋಜನೆಯನ್ನು ನನ್ನದು ಎನ್ನುತ್ತಾರೆ. ಅವರದು ಸ್ವಂತ ಸಾಧನೆ ಏನೆಂದು ಹೇಳಲಿ ಎಂದು ಸವಾಲು ಹಾಕಿದರು.

    ಒಂದು ಜನಾಂಗಕ್ಕೆ ಒಂದು ಸಾಧನೆ ಹೇಳಲಿ, ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪತನದಲ್ಲಿದೆ. ಈ ಅಧಃಪತನಕ್ಕೆ ಸಿದ್ದರಾಮಯ್ಯ ನವರ ಕೊಡುಗೆ ಅಪಾರ. ನಿಜಕ್ಕೂ ಅವರಿಗೆ ನಾವು ಅಭಿನಂದನೆ ಸಲ್ಲಿಸಬೇಕು ಎಂದು ಹರಿಹಾಯ್ದರು.

  • ಮಂಡ್ಯ ರೈಲು ಚಾಲನೆ ವಿಚಾರದಲ್ಲಿ ಯಾವುದೇ ತಪ್ಪಾಗಿಲ್ಲ – ಸ್ಪಷ್ಟನೆ ನೀಡಿದ ಸುಮಲತಾ

    ಮಂಡ್ಯ ರೈಲು ಚಾಲನೆ ವಿಚಾರದಲ್ಲಿ ಯಾವುದೇ ತಪ್ಪಾಗಿಲ್ಲ – ಸ್ಪಷ್ಟನೆ ನೀಡಿದ ಸುಮಲತಾ

    ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರು ಗುರುವಾರ ಮಂಡ್ಯದ ರೈಲಿನಲ್ಲಿ ಮಹಿಳೆಯರಿಗಾಗಿ ಇದ್ದ ವಿಶೇಷ ಬೋಗಿಗಳಿಗೆ ಚಾಲನೆ ನೀಡುವಾಗ, ರೈಲನ್ನು ತಾವಿದ್ದ ಜಾಗಕ್ಕೆ ಕರೆಸಿಕೊಂಡಿದ್ದಾರೆ ಎಂದು ಆರೋಪಿಸಿ ಭಾರೀ ಚರ್ಚೆನಡೆದಿತ್ತು. ಈ ಬಗ್ಗೆ ಇಂದು ಸುಮಲತಾ ಅವರು ಪ್ರತಿಕ್ರಿಯಿಸಿ ಈ ಕಾರ್ಯಕ್ರಮದಲ್ಲಿ ಯಾವುದೇ ತಪ್ಪಾಗಿಲ್ಲ ಎಂದು ತಿಳಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ನನ್ನ ಬಗ್ಗೆ ವಿರೋಧ ಸುದ್ದಿಗಳು ಬರಬಾರದು ಎಂದು ನಾನು ಹೇಳೋದಿಲ್ಲ. ಆದರೆ ನಾನು ತಪ್ಪು ಮಾಡಿದ್ದನ್ನು ವಿರೋಧಿಸಿ ಬೇಸರವಿಲ್ಲ. ಆದರೆ ಗುರುವಾರ ಮಂಡ್ಯ ರೈಲು ಚಾಲನೆ ವಿಚಾರವಾಗಿ ಪ್ರಸಾರವಾದ ಸುದ್ದಿಯಿಂದ ನನಗೆ ಬೇಸರವಾಗಿದೆ ಎಂದು ತಿಳಿಸಿದರು.

    ನಿನ್ನೆ ನಾನು ರೈಲಿನ ಮಹಿಳಾ ಬೋಗಿಗಳಿಗೆ ಚಾಲನೆ ನೀಡುವಾಗ, ನಾನು ನಿಂತ ಸ್ಥಳದಲ್ಲೆ ಚಾಲನೆ ನೀಡಬೇಕು ಎಂದು ನಿಗದಿಯಾಗಿತ್ತು. ಅಧಿಕಾರಿಗಳು ಕೂಡ ರೈಲು ಇಲ್ಲಿಗೆ ಬಂದಾಗಲೇ ಚಾಲನೆ ನೀಡಬೇಕೆಂದು ತಿಳಿಸಿದ್ದರು. ಆ ಪ್ರಕಾರ ನಾನು ಆ ಸ್ಥಳದಲ್ಲಿಯೇ ನಿಂತಿದ್ದೆ. ರೈಲು ಅಲ್ಲಿಗೆ ಬಂದಮೇಲೆ ಚಾಲನೆ ಕೊಟ್ಟೆ ಎಂದು ಸ್ಪಷ್ಟಪಡಿಸಿದರು.

    ನಿಲ್ದಾಣಕ್ಕೆ ಆಗ ತಾನೇ ರೈಲು ಬಂದು ಸ್ವಲ್ಪ ದೂರ ನಿಂತಿತ್ತು. ರೈಲಿನಲ್ಲಿ ಇರುವ ಪ್ರಯಾಣಿಕರು ಇಳಿಯುವಾಗ ನೂಕುನುಗ್ಗಲು ಆಗಬಾರದು ಎಂದು ರೈಲಿನ ಲೊಕೋ ಪೈಲಟ್ ನಾವು ನಿಂತಿದ್ದ ಸ್ಥಳದಿಂದ ಸುಮಾರು 10 ಹೆಜ್ಜೆ ದೂರದಲ್ಲಿ ರೈಲು ನಿಲ್ಲಿಸಿದ್ದರು. ಆದರೆ ಕೊನೆ ಬೋಗಿಗಳಲ್ಲಿ ಇದ್ದ ಜನರು ಇಳಿಯುವ ಸ್ಥಳದಲ್ಲಿ ಪ್ಲಾಟ್‍ಫಾರ್ಮ್ ಇಲ್ಲದಿದ್ದ ಕಾರಣ, ಅಧಿಕಾರಿಗಳು ರೈಲನ್ನು ಮುಂದೆ ತರುವಂತೆ ಸೂಚಿಸಿದ್ದಕ್ಕೆ ರೈಲನ್ನು ಸ್ವಲ್ಪ ಮುಂದೆ ತರಲಾಯಿತು. ಆಗ ನಿಗದಿಯಾದ ಸ್ಥಳಕ್ಕೆ ರೈಲು ಬಂದಮೇಲೆ ನಾನು ಬೋಗಿಗಳಿಗೆ ಚಾಲನೆ ನೀಡಿದೆ ಅಷ್ಟೇ. ಇಲ್ಲಿ ಯಾವುದೇ ರೀತಿಯ ತಪ್ಪಾಗಿಲ್ಲ ಎಂದು ನಡೆದ ವಿಚಾರವನ್ನು ತಿಳಿಸಿದರು.

    ಗುರುವಾರ ಮಂಡ್ಯದ ರೈಲು ನಿಲ್ದಾಣದಲ್ಲಿ ಮೆಮೋ ರೈಲಿನ ಮಹಿಳಾ ವಿಶೇಷ ಬೋಗಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿ ಮಾತನಾಡಿದ್ದ ಅವರು, ಮೆಮು ರೈಲಿಗೆ ಅಳವಡಿಸಿದ ಮಹಿಳಾ ಮೀಸಲು ಬೋಗಿಗಳಿಗೆ ಚಾಲನೆ ನೀಡಿದ್ದು ತುಂಬಾ ಖುಷಿಯಾಗಿದೆ. ಇದು ಹೆಮ್ಮೆಯ ವಿಷಯ ನಾನು ಚುನಾವಣೆ ಸಮಯದಲ್ಲಿ ಪ್ರಚಾರ ಮಾಡುವ ವೇಳೆ ಜಿಲ್ಲೆಯ ಮಹಿಳೆಯರು ವಿಶೇಷ ಮಹಿಳಾ ಮೀಸಲು ಬೋಗಿಗಾಗಿ ಮನವಿ ಮಾಡಿದ್ದರು ಎಂದು ತಿಳಿಸಿದ್ದರು.

    ನಾನು ಈ ವಿಚಾರವಾಗಿ ರೈಲ್ವೆ ಸಚಿವರಾದ ಪಿಯುಷ್ ಗೋಯಲ್ ಹಾಗೂ ಸುರೇಶ್ ಅಂಗಡಿ ಅವರಲ್ಲಿ ಮನವಿ ಮಾಡಿದ್ದೆ. ನನ್ನ ಮನವಿಯಂತೆ ಮೆಮೋ ರೈಲಿಗೆ ಎರಡು ಬೋಗಿಗಳನ್ನು ಅಳವಡಿಸಲು ಅವಕಾಶ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅವಶ್ಯಕತೆ ಇದ್ದರೆ ಹೆಚ್ಚಿನ ಬೋಗಿ ಅಳವಡಿಸಲಾಗುವುದು ಎಂದು ಹೇಳಿದರು.

    ಈ ಮೆಮೋ ರೈಲು ಬೆಂಗಳೂರು- ಮೈಸೂರು ಮಾರ್ಗವಾಗಿ ಸಂಚರಿಸುತ್ತದೆ. ರೈಲಿನಲ್ಲಿ ಮಹಿಳಾ ಬೋಗಿಯನ್ನು ಅಳವಡಿಸಲಾಗಿರಲಿಲ್ಲ. ಇದಕ್ಕಾಗಿ ಸುಮಲತಾ ಅವರು ಕೇಂದ್ರ ರೈಲ್ವೆ ಇಲಾಖೆಗೆ ಮನವಿ ಮಾಡಿದ್ದರು. ಈ ಬೋಗಿಯಲ್ಲಿ 80 ಆಸನಗಳಿದ್ದು, ಪ್ರತ್ಯೇಕ ಮಹಿಳಾ ಬೋಗಿ ಅಳವಡಿಕೆಯಿಂದ ನಿತ್ಯ ಬೆಂಗಳೂರಿಗೆ ತೆರಳುವ ಮಹಿಳಾ ಕಾರ್ಮಿಕರಿಗೆ ಅನುಕೂಲವಾಗಿಲಿದೆ.