Tag: ಸುಮಲತಾ ಅಂಬರೀಶ್

  • ಮತ್ತೆ ಸುಮಲತಾ ಪರ ಬ್ಯಾಟ್ ಬೀಸಿ ರೇವಣ್ಣಗೆ ಟಾಂಗ್ ಕೊಟ್ಟ ಸುಧಾಕರ್

    ಮತ್ತೆ ಸುಮಲತಾ ಪರ ಬ್ಯಾಟ್ ಬೀಸಿ ರೇವಣ್ಣಗೆ ಟಾಂಗ್ ಕೊಟ್ಟ ಸುಧಾಕರ್

    ಚಿಕ್ಕಬಳ್ಳಾಪುರ: ಪತಿ ನಿಧನವಾದ ಬಳಿಕ ತಾಯಂದಿರು ರಾಜಕೀಯ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಮುಂದುವರಿಯಬಾರದು ಎನ್ನುವ ಆಲೋಚನೆ ಅನಾಗರಿಕತೆಯನ್ನು ತೋರಿಸುತ್ತದೆ ಎಂದು ಶಾಸಕ ಡಾ.ಸುಧಾಕರ್ ಅವರು, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

    ಸಚಿವ ರೇವಣ್ಣ ಅವರು ಮಹಾನ್ ದೈವ ಭಕ್ತರೆಂದು ನಾನು ತಿಳಿದುಕೊಂಡಿದ್ದೆ. ಅವರ ಬಾಯಿಂದ ಈ ಮಾತು ನಿರೀಕ್ಷೆ ಮಾಡಿರಲಿಲ್ಲ. ಸಚಿವರು ಯಾವ ಆಲೋಚನೆಯಿಂದ ಸುಮಲತಾ ಅವರ ಬಗ್ಗೆ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಆದರೆ ಸುಮಲತಾ ಅವರಲ್ಲಿ ತಕ್ಷಣ ಕ್ಷಮಾಪಣೆ ಕೇಳಬೇಕೆಂದು ಸಚಿವರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು. ಇದನ್ನು ಓದಿ: ಸುಮಲತಾ ಪರ ಬ್ಯಾಟ್ ಮಾಡಿ ಸಿಎಂಗೆ ಶಾಸಕ ಸುಧಾಕರ್ ಟಾಂಗ್!

    ಸುಮಲತಾ ಅಂಬರೀಶ್ ಅವರಿಗೆ ಕ್ಷಮೆ ಕೇಳಿದರೆ ಸಚಿವರಿಗೆ ಗೌರವ ಬರುತ್ತದೆ. ಈಗಾಗಲೇ ಸುಮಲತಾ ತುಂಬಾ ದುಃಖದಲ್ಲಿದ್ದಾರೆ. ಹೀಗಿದ್ದರೂ ಸಹ ಅವರು ಚುನಾವಣೆಗೆ ನಿಲ್ಲಲು ಹಾಗೂ ಮಂಡ್ಯದ ಜನರ ಜೊತೆ ನಿಲ್ಲುವ ಧೈರ್ಯ ತೋರಿದ್ದಾರೆ. ಅದನ್ನು ನಾವು ಮೆಚ್ಚಬೇಕು. ಅಂತಹವರಿಗೆ ನಮ್ಮಿಂದ ಆಗುವ ಸಹಾಯ ಮಾಡಬೇಕೇ ಹೊರತು ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೂರು ದಶಕಗಳಿಂದ ಸುಮಲತಾ ಮಂಡ್ಯದ ಮಗಳು – ರೇವಣ್ಣ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

    ಮೂರು ದಶಕಗಳಿಂದ ಸುಮಲತಾ ಮಂಡ್ಯದ ಮಗಳು – ರೇವಣ್ಣ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

    ಉಡುಪಿ: ಲೋಕೋಪಯೋಗಿ ಸಚಿವ ರೇವಣ್ಣ, ಸುಮಲತಾ ಅಂಬರೀಶ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದು ಅಕ್ಷಮ್ಯ. ಅವರು ಕೂಡಲೇ ಅವರು ಕ್ಷಮೆ ಕೇಳಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಮಲತಾ ಮೂರು ದಶಕದಿಂದ ಮಂಡ್ಯದ ಮಗಳು. ಅವರಿಗೆ ಈಗ ಅಂಬರೀಶ್ ಅವರಂತೆ ಜನಸೇವೆ ಮಾಡುವ ಮನಸ್ಸಾಗಿದೆ. ಸಚಿವ ರೇವಣ್ಣ ಜವಾಬ್ದಾರಿಯುತ ರಾಜಕಾರಣಿಯಾಗಿ ಈ ರೀತಿ ಹಗುರವಾಗಿ ಮಾತನಾಡಿರುವುದು ಅಕ್ಷಮ್ಯ. ಅಂಬರೀಶ್ ಸಾಯಲು ಸುಮಲತಾ ಕಾರಣವಲ್ಲ. ಈ ಹಿಂದೆ ಅಂಬರೀಶ್ ಅವರು ಕಾವೇರಿ ವಿಚಾರಕ್ಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದರು. ಅಂತಹ ವ್ಯಕ್ತಿಯ ಪತ್ನಿ ಬಗ್ಗೆ ಕೀಳಾಗಿ ಮಾತನಾಡಿದ್ದು ಸರಿಯಲ್ಲ ಎಂದರು.

    ಗಂಡ ಸತ್ತವರು ರಾಜಕೀಯಕ್ಕೆ ಬರಲು ಇಷ್ಟೇ ದಿನ ಆಗಬೇಕಾಗಿಲ್ಲ. ಅವರು ರಾಜಕಾರಣಿಯಾಗಿ ಜನಸೇವೆ ಮಾಡುತ್ತಾ ತಮ್ಮ ದುಃಖ ಮರೆಯುವ ಪ್ರಯತ್ನದಲ್ಲಿದ್ದಾರೆ. ಸಮಾಜಸೇವೆಗೆ ಬರುವ ಹೆಣ್ಣು ಮಕ್ಕಳ ಬಗ್ಗೆ ಹೀಗೆಲ್ಲಾ ಮಾತನಾಡಿದ್ದು ಸರಿಯಲ್ಲ. ಅದ್ದರಿಂದ ರೇವಣ್ಣ ಅವರು ಕೂಡಲೇ ಕ್ಷಮೆ ಯಾಚಿಸಲಿ. ಗಂಡ ಕಳೆದುಕೊಂಡ ನೋವಲ್ಲಿರುವವರಿಗೆ ಮತ್ತೆ ನೋವು ಕೊಡಬೇಡಿ. ಅದು ಕೂಡ ಮಹಿಳಾ ದಿನಾಚರಣೆ ದಿನ ರೇವಣ್ಣ ಅವರು ಹೀಗೆ ಮಾತನಾಡಬಾರದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸುಮಲತಾ ಸ್ಪರ್ಧೆ ಮಾಡುವ ಬಗ್ಗೆ ಪಕ್ಷದ ನಾಯಕರು ಸ್ಪಷ್ಟಪಡಿಸಿದ್ದು, ಅವರು ಪಕ್ಷೇತರವಾಗಿ ನಿಂತರೆ ಬಿಜೆಪಿ ಬೆಂಬಲ ನೀಡುತ್ತದೆ. ಆದರೆ ಈಗ ಸುಮಲತಾ ಅವರು ಕಾಂಗ್ರೆಸ್ ಮನೆಯ ರಾಜಕಾರಣಿ. ಅವರು ಬಿಜೆಪಿಗೆ ಬಂದರೆ ಸ್ವಾಗತ ಮಾಡುತ್ತೇವೆ ಎಂದರು.

    ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದಲ್ಲಿ ಕಾಂಗ್ರೆಸ್ ಸೋಲುವ ಭೀತಿಯಲ್ಲಿದೆ. ಹೀಗಾಗಿ ಕೀಳು ರಾಜಕಾರಣಕ್ಕೆ ಕಾಂಗ್ರೆಸ್ ಇಳಿದಿದೆ. ದೇಶದ ಸೈನಿಕರಿಗೆ ಅವರನ್ನು ಅವಮಾನ ಮಾಡುತ್ತಿದ್ದಾರೆ. ಅಧಿಕಾರಕ್ಕೆ ಬರಲ್ಲ ಎಂದು ಗೊತ್ತಿದ್ದು ನಾಯಕರು ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ದೇಶದ ವಿರುದ್ಧವಾಗಿ ಮಾತನಾಡಿದವರಿಗೆ ಕಾಂಗ್ರೆಸ್ ಪಕ್ಷ ಇದುವರೆಗೂ ಶಿಕ್ಷೆ ಕೊಟ್ಟಿಲ್ಲ. ಇಷ್ಟೆಲ್ಲಾ ಮಾತನಾಡುವ ನೀವು ಪುಲ್ವಾಮಾ ಘಟನೆ ಬಗ್ಗೆ ನಿಮ್ಮ ನಿಲುವನ್ನು ಸ್ಪಷ್ಟಪಡಿಸಿ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ವಿರುದ್ಧ ಕಿಡಿಕಾರಿದರು.

    ಮುಸಲ್ಮಾನರು ಒಪ್ಪಿದ್ರೆ ಎಲ್ಲ ಸಮಸ್ಯೆ ಬಗೆ ಹರಿಯುತ್ತೆ: ಮುಸಲ್ಮಾನರು ರಾಮ ಮಂದಿರ ನಿರ್ಮಾಣಕ್ಕೆ ಒಪ್ಪಿಗೆ ನೀಡಲಿ. ಆಗ ಎಲ್ಲಾ ಸಮಸ್ಯೆ ಬಗೆ ಹರಿದು, ಹಿಂದುಗಳ ಕನಸು ನನಸಾಗುತ್ತದೆ. ರಾಮಮಂದಿರ ವಿವಾದ ಸುಪ್ರೀಂ ಆದೇಶದಂತೆ ಸಂಧಾನದಲ್ಲೇ ಬಗೆಹರಿಯಲಿ. ಅಯೋಧ್ಯೆಯ ರಾಮಮಂದಿರ ವಿಚಾರವನ್ನು ನಾವು ಚುನಾವಣೆಗೆ ಬಳಸಲ್ಲ. ಅಯೋಧ್ಯೆ ಭಕ್ತಿಯ ಶ್ರದ್ಧಾಕೇಂದ್ರ. ಈ ಬಗ್ಗೆ ನ್ಯಾಯಾಲಯ ನೀಡಿದ ಆದೇಶಕ್ಕೆ ತಲೆಬಾಗುತ್ತೇವೆ. ಎಂಟು ವಾರದ ಗಡುವಿನಲ್ಲಿ ಏನಾಗುತ್ತೋ ಗೊತ್ತಿಲ್ಲ. ಮಾತುಕತೆ ಪ್ರಯತ್ನದಿಂದ ಸಮಸ್ಯೆ ಬಗೆಹರಿದರೆ ಸಂತಸ ಎಂದರು.

    2014 ರಲ್ಲಿ ಮೋದಿ ಅವರು ಜನತೆಯ ಮುಂದಿಟ್ಟ ನಾಲ್ಕು ಭರವಸೆ ಈಡೇರಿದೆ. ಇನ್ನೆರಡು ದಿನಗಳಲ್ಲಿ ಚುನಾವಣೆ ಘೋಷಣೆ ಆಗಲಿದೆ. 2014 ರಲ್ಲಿ ನೀಡಿರುವ ಭರವಸೆಯಂತೆ ಭ್ರಷ್ಟಾಚಾರ ರಹಿತ, ಅಭಿವೃದ್ಧಿ, ಸ್ವಚ್ಛತೆ, ವಿದೇಶಾಂಗ ನೀತಿ, ಕೃಷಿ ಸಹಿತ ರಕ್ಷಣೆ ಒತ್ತು ಕೊಟ್ಟಿದ್ದೇವೆ. ದೇಶದ ಸೈನಿಕರು ಮೋದಿ ಸರ್ಕಾರದ ಆಡಳಿತ ಮೆಚ್ಚಿದ್ದಾರೆ. ಒನ್ ರಾಂಕ್ ಒನ್ ಪೆನ್ಶನ್ ನಂತರ ಸೈನಿಕರು ಖುಷಿಯಲ್ಲಿದ್ದಾರೆ ಎಂದರು.

    ರಾಜ್ಯ ಸರ್ಕಾರ ಕೇಂದ್ರದ ಅನುದಾನ ಬಿಡುಗಡೆಯೇ ಮಾಡಿಲ್ಲ. ಟೆಂಡರ್ ಕರೆಯದೆ ಕೋಟಿ ಕೋಟಿ ರೂ. ಹಣ ನೆನೆಗುದಿಗೆ ಬಿದ್ದಿದೆ. ರಾಜ್ಯದಲ್ಲಿ ಅತೀ ಹೆಚ್ಚು ಅನುದಾನ ಉಡುಪಿ-ಚಿಕ್ಕಮಗಳೂರಿಗೆ ಬಂದಿದೆ. ರಸ್ತೆ, ಪಾಸ್ ಪೋರ್ಟ್, ಸಖಿ ಸೆಂಟರ್ ಸ್ಥಾಪನೆಯಾಗಿದೆ ತಮ್ಮ ಐದು ವರ್ಷದ ರಿಪೋಟ್ ಕಾರ್ಡನ್ನು ತೆರೆದಿಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂಡ್ಯದಲ್ಲಿ ಸುಮಲತಾ ವರ್ಸಸ್ ಜೆಡಿಎಸ್ – ರೇವಣ್ಣ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ತಲ್ಲಣ

    ಮಂಡ್ಯದಲ್ಲಿ ಸುಮಲತಾ ವರ್ಸಸ್ ಜೆಡಿಎಸ್ – ರೇವಣ್ಣ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ತಲ್ಲಣ

    ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿದೆ. ಈ ಮಧ್ಯೆ ಮಂಡ್ಯದಲ್ಲಿ ಜೆಡಿಎಸ್ ವರ್ಸಸ್ ಸುಮಲತಾ ಅಂಬರೀಶ್ ಮಧ್ಯೆ ಭಾರೀ ಫೈಟ್ ಆರಂಭವಾಗಿದೆ.

    ಮಾಜಿ ಮುಖ್ಯಮಂತ್ರಿ ಸಿದ್ದರಾಮುಯ್ಯ ಅವರು ಮಂಡ್ಯದಿಂದ ಸುಮಲತಾ ಅವರಿಗೆ ಟಿಕೆಟ್ ಕೊಡಲ್ಲ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಅಲ್ಲೋಲಕಲ್ಲೋವಾಗಿದೆ. ಆದ್ರೂ ಸುಮಲತಾ ಅವರು ಪಕ್ಷ ಟಿಕೆಟ್ ಕೊಡದಿದ್ದರೂ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಎದುರಿಸುವುದಾಗಿ ಪಣ ತೊಟ್ಟಿದ್ದಾರೆ. ಅಲ್ಲದೆ ಈ ಸಂಬಂಧ ಈಗಾಗಲೇ ಜಿಲ್ಲೆಯಲ್ಲಿ ಪ್ರಚಾರಕ್ಕೂ ಇಳಿದಿದ್ದಾರೆ.

    ಇಷ್ಟೆಲ್ಲಾ ಬೆಳವಣಿಗೆಗಳ ಮಧ್ಯೆ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರು `ಗಂಡ ಸತ್ತ ಒಂದೂವರೆ ತಿಂಗಳುಗಳೇ ಕಳೆದಿಲ್ಲ. ಈ ಸ್ಥಿತಿಯಲ್ಲಿ ಅವರಿಗೆ ರಾಜಕೀಯ ಬೇಕಿತ್ತಾ ಎಂದು ಪ್ರಶ್ನೆ ಮಾಡಿರುವ ವಿಚಾರ ಇದೀಗ ಭಾರೀ ಚರ್ಚೆಗೆ ಈಡಾಗಿದೆ.

    ಯಾಕಂದ್ರೆ 2018ರ ನ.24ಕ್ಕೆ ಅಂಬರೀಶ್ ಅವರು ಮರಣ ಹೊಂದಿರುವ ಸುದ್ದಿ ಕೇಳಿದಾಕ್ಷಣ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ದೌಡಾಯಿಸಿದ್ದರು. ಕುಟುಂಬದ ಸದಸ್ಯರನ್ನೇ ಕಳೆದುಕೊಂಡಷ್ಟು ಚಿಂತಾಕ್ರಾಂತರಾಗಿದ್ದರು. ಅಲ್ಲದೆ ಮರುದಿನ ಅಣ್ಣನ ಅಂತ್ಯಸಂಸ್ಕಾರಕ್ಕೆ ತಮ್ಮನಂತೆ ಹೆಗಲು ಕೂಡ ಕೊಟ್ಟಿದ್ದರು. ಮಂಡ್ಯಕ್ಕೆ ಸೇನಾ ಹೆಲಿಕಾಪ್ಟರ್ ತರಿಸುವುದರಿಂದ ಹಿಡಿದು ಅಂತಿಮ ದರ್ಶನಕ್ಕೆ ವ್ಯವಸ್ಥೆಯನ್ನೂ ಕಲ್ಪಿಸಿದ್ರು. ಮಂಡ್ಯಕ್ಕೆ ಖುದ್ದು ಭೇಟಿ ಕೊಟ್ಟು ಗಲಾಟೆ ಆಗದಂತೆ ನೋಡಿಕೊಂಡಿದ್ದರು. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಸಂಸ್ಕಾರಕ್ಕೂ ವ್ಯವಸ್ಥೆ ಮಾಡಿಕೊಟ್ಟಿದ್ದರು. ಹೀಗೆ ಮುಖ್ಯಮಂತ್ರಿ ಅನ್ನೋದನ್ನೂ ಕೂಡ ಮರೆತು ಕುಮಾರಸ್ವಾಮಿಯವರು ಅಂದು ಅಂಬರೀಶ್ ಅಂತ್ಯಸಂಸ್ಕಾರವನ್ನು ತೀರಾ ಮುತುವರ್ಜಿಯಿಂದ ನೆರವೇರಿಸಿದ್ದರು. ಆದ್ರೆ ಇಂದು ಸಿಎಂ ಸಹೋದರನ ಒಂದು ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ತಲ್ಲಣವೇ ಏರ್ಪಟ್ಟಿದೆ.

    ಈ ಕಡೆ, ತಂದೆಯಂತೆ ಮಗ ನಿಖಿಲ್ ಕೂಡ ಧೈರ್ಯ ತುಂಬಿದ್ದರು. ಅಣ್ಣನಂತೆ ಅಭಿಷೇಕ್‍ಗೆ ಸಾಂತ್ವಾನ ಹೇಳಿದ್ದರು. ಅಂತ್ಯಸಂಸ್ಕಾರ ಆಗುವವರೆಗೂ ಅಭಿಷೇಕ್ ಜೊತೆಯಲ್ಲಿದ್ದರು. ಈಗ ಕಾಲ ಬದಲಾಗಿ ಹೋಗಿದೆ. ಅಧಿಕಾರಕ್ಕಾಗಿ ಫೈಟ್ ಶುರುವಾಗಿದೆ. ಅಂಬಿ ನಿಧನದ ಎರಡೂವರೆ ತಿಂಗಳಲ್ಲಿ ರಾಜಕೀಯ ಬೇಕಿತ್ತಾ ಅನ್ನೋ ಪ್ರಶ್ನೆ ಇದೀಗ ಅಂಬಿ ಅಭಿಮಾನಿಗಳನ್ನು ಮತ್ತಷ್ಟು ಕೆರಳಿಸುವಂತೆ ಮಾಡಿದೆ.

    https://www.youtube.com/watch?v=BGvmKX3g6b8

    https://www.youtube.com/watch?v=1zAHuxijg6Q

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದುರುದ್ದೇಶದಿಂದ ಹೇಳಿಲ್ಲ: ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡ ರೇವಣ್ಣ

    ದುರುದ್ದೇಶದಿಂದ ಹೇಳಿಲ್ಲ: ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡ ರೇವಣ್ಣ

    ಬೆಂಗಳೂರು: ಪತಿ, ಮಾಜಿ ಸಚಿವ ಅಂಬರೀಶ್ ಸತ್ತು ಇನ್ನೂ ಒಂದೂವರೆ ತಿಂಗಳಾಗಿಲ್ಲ. ಸುಮಲತಾ ಅವರಿಗೆ ಇದೆಲ್ಲ ಬೇಕಿತ್ತಾ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದರು. ಈಗ ಈ ಹೇಳಿಕೆಯನ್ನು ರೇವಣ್ಣ ಅವರು ಸಮರ್ಥಿಸಿಕೊಂಡಿದ್ದಾರೆ.

    ಈ ಬಗ್ಗೆ ಮಾತನಾಡಿದ ರೇವಣ್ಣ ಅವರು, ನಾನು ಸುಮಲತಾ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ನಾನು ದುರುದ್ದೇಶದಿಂದ ಈ ರೀತಿ ಹೇಳಿಲ್ಲ. ಅವರು ಆ ರೀತಿ ಬರುವುದು ಏಕೆ ಎಂದು ಹೇಳಿದ್ದು ಅಷ್ಟೇ. ಹಿಂದೂ ಸಂಸ್ಕೃತಿ ಬಗ್ಗೆ ಹೇಳಿದೆ ಅಷ್ಟೇ. ಹಾಗಾಂತ ಅವರು ರಾಜಕೀಯಕ್ಕೆ ಬರುವುದು ಬೇಡ ಎಂದು ನಾನು ಹೇಳಿಲ್ಲ. ರಾಜಕೀಯಕ್ಕೆ ಬರುವುದಕ್ಕೆ ಎಲ್ಲರೂ ಸ್ವತಂತ್ರರು. ಅವರು ಚುನಾವಣೆಗೆ ನಿಲ್ಲುತ್ತಾರೋ ಅಥವಾ ಇಲ್ಲವೋ ಅದು ಅವರಿಷ್ಟ ಎಂದು ರೇವಣ್ಣ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಗಂಡ ಸತ್ತು ಒಂದೂವರೆ ತಿಂಗಳಾಗಿಲ್ಲ, ಇದೆಲ್ಲಾ ಬೇಕಾ?: ಸುಮಲತಾ ವಿರುದ್ಧ ರೇವಣ್ಣ ಕಿಡಿ

    ಕೆಟ್ಟ ಉದ್ದೇಶದಿಂದ ನಾನು ಈ ಹೇಳಿಕೆಯನ್ನು ನೀಡಿಲ್ಲ. ರಾಜಕೀಯಕ್ಕೆ ಎಂಟ್ರಿ ಕೊಡೋದು ಬಿಡೋದು ಅವರ ಇಷ್ಟ. ನಾನು ಅವರನ್ನು ಬೈದಿಲ್ಲ. ಅವರಿಗೆ ನಾನು ಏಕೆ ಬೈಯಬೇಕು. ಅಲ್ಲದೇ ಅವರು ಮಂಡ್ಯದಿಂದ ನಿಲ್ಲುತ್ತೇನೆ ಎಂದು ಅವರೇ ಸ್ವತಃ ಹೇಳಿದ್ದಾರೆ.

    ಸಚಿವ ರೇವಣ್ಣ ಅಂಬರೀಶ್ ಸತ್ತು ಇನ್ನೂ ಒಂದೂವರೆ ತಿಂಗಳಾಗಿಲ್ಲ. ಸುಮಲತಾ ಅವರಿಗೆ ಇದೆಲ್ಲ ಬೇಕಿತ್ತಾ. ಸಿಎಂ ಕುಮಾರಸ್ವಾಮಿ ಅವರು ಅಂಬರೀಶ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಿಕೊಟ್ಟರು. ಆದರೆ ಸುಮಲತಾ ಅವರಿಗೆ ಯಾವುದೇ ಕೃತಜ್ಞತೆಯೂ ಇಲ್ಲ. ಸುಮಲತಾ ಅವರು ಚಾಲೆಂಜ್ ಮಾಡುತ್ತಿದ್ದಾರೆ. ಇದನ್ನ ನಾವು ಎದುರಿಸಲು ಸಿದ್ಧರಾಗಿದ್ದೇವೆ ಎಂದು ವಾಗ್ದಾಳಿ ನಡೆಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗಂಡ ಸತ್ತು ಒಂದೂವರೆ ತಿಂಗಳಾಗಿಲ್ಲ, ಇದೆಲ್ಲಾ ಬೇಕಾ?: ಸುಮಲತಾ ವಿರುದ್ಧ ರೇವಣ್ಣ ಕಿಡಿ

    ಗಂಡ ಸತ್ತು ಒಂದೂವರೆ ತಿಂಗಳಾಗಿಲ್ಲ, ಇದೆಲ್ಲಾ ಬೇಕಾ?: ಸುಮಲತಾ ವಿರುದ್ಧ ರೇವಣ್ಣ ಕಿಡಿ

    ಬೆಂಗಳೂರು: ಪತಿ, ಮಾಜಿ ಸಚಿವ ಅಂಬರೀಶ್ ಸತ್ತು ಇನ್ನೂ ಒಂದೂವರೆ ತಿಂಗಳಾಗಿಲ್ಲ. ಸುಮಲತಾ ಅವರಿಗೆ ಇದೆಲ್ಲ ಬೇಕಿತ್ತಾ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.

    ಸಿಎಂ ಕುಮಾರಸ್ವಾಮಿ ಅವರು ಅಂಬರೀಶ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಿಕೊಟ್ಟರು. ಆದರೆ ಸುಮಲತಾ ಅವರಿಗೆ ಯಾವುದೇ ಕೃತಜ್ಞತೆಯೂ ಇಲ್ಲ. ಸುಮಲತಾ ಅವರು ಚಾಲೆಂಜ್ ಮಾಡುತ್ತಿದ್ದಾರೆ. ಇದನ್ನ ನಾವು ಎದುರಿಸಲು ಸಿದ್ಧರಾಗಿದ್ದೇವೆ ಎಂದು ವಾಗ್ದಾಳಿ ನಡೆಸಿದರು. ಇದನ್ನು ಓದಿ: ರಾತ್ರಿ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ್ರು ಸುಮಲತಾ..!

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಸುಮಲತಾ ಅವರು, ಈ ರೀತಿಯ ಟೀಕೆಗಳು ರಾಜಕಾರಣದಿಂದ ಹೊರತಾಗಿಲ್ಲ. ಕೆಲವರು ವೈಯಕ್ತಿಕ ವಿಚಾರಗಳನ್ನೇ ಬಳಸಿಕೊಂಡು ವಾಗ್ದಾಳಿ ನಡೆಸುತ್ತಾರೆ. ಇದು ಅವರಿಗೆ ಅಭ್ಯಾಸವಾಗಿರುತ್ತದೆ. ಇದಕ್ಕೆ ನಾನು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ. ಇದು ನಮ್ಮ ಸಂಸ್ಕಾರವೂ ಅಲ್ಲ. ಅಂಬರೀಶ್ ಅವರು 25 ವರ್ಷ ರಾಜಕೀಯದಲ್ಲಿ ಇದ್ದರೂ ಯಾರೊಬ್ಬರ ವಿರುದ್ಧವೂ ಟೀಕೆ ಮಾಡಲಿಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ. ಇದನ್ನು ಓದಿ: ದರ್ಶನ್ ಇರುವಾಗ ಅಲ್ಲಿ ನಾನ್ಯಾಕೆ- ಸುಮಲತಾ ರಾಜಕೀಯ ಎಂಟ್ರಿ ಬಗ್ಗೆ ಕಿಚ್ಚ ಸುದೀಪ್ ಪ್ರತಿಕ್ರಿಯೆ

    ಈ ರೀತಿಯ ಟೀಕೆಗಳಿಗೆ ಜನರೇ ಉತ್ತರ ನೀಡುತ್ತಾರೆ. ನನಗೆ ರಾಜಕಾರಣಕ್ಕಿಂತ ಸಂಬಂಧಗಳೇ ಮುಖ್ಯ. ಈ ನಿಟ್ಟಿನಲ್ಲಿ ನಾನು ರಾಜಕಾರಣಕ್ಕೆ ಬಂದಿದ್ದೇನೆ. ಮಂಡ್ಯದ ಜನರ ಜೊತೆಗೆ ಅಂಬರೀಶ್ ಹಾಗೂ ನನಗೆ ಋಣಾನುಬಂಧವಿದೆ ಎಂದು ಹೇಳಿದರು.

    ನನ್ನ ವಿರುದ್ಧ ಟೀಕೆ ಮಾಡಿದರೂ ಜನರು ಮಾತ್ರ ನನ್ನ ಬೆಂಬಲಕ್ಕೆ ನಿಲ್ಲುತ್ತಿದ್ದಾರೆ. ಚುನಾವಣೆಯಲ್ಲಿ ಮತದಾರರ ಬೆಂಬಲ ಮುಖ್ಯ. ಹೀಗಾಗಿ ನನಗೆ ಯಾವುದೇ ಹೆದರಿಕೆಯಿಲ್ಲ. ನನ್ನ ವಿರುದ್ಧ ಟೀಕೆ ಮಾಡುವವರು ತಿಳಿದು ಮಾತನಾಡಬೇಕು ಎಂದು ಕಿಡಿಕಾರಿದರು.

    ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಅಂಬರೀಶ್ ತಂದೆ ಸ್ಥಾನದಲ್ಲಿ ಕಾಣುತ್ತಿದ್ದರು. ಹೀಗಾಗಿ ಅವರ ಕುಟುಂಬದವರ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ. ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರಿಗೆ ಪಕ್ಷದಿಂದ ಮೆಚ್ಚುಗೆ ಬೇಕಿತ್ತು. ಹೀಗಾಗಿ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಗೆ ನಾನು ಬೇಜಾರು ಮಾಡಿಕೊಳ್ಳಲ್ಲ ಎಂದು ತಿರುಗೇಟು ಕೊಟ್ಟರು.

    ಅಂಬರೀಶ್ ಅವರು ಸ್ವಾರ್ಥ, ದ್ವೇಷ ರಾಜಕಾರಣ ಮಾಡಿಲ್ಲ. ಇತ್ತ ನನ್ನ ಬೆಂಬಲಕ್ಕೆ ಮಂಡ್ಯದ ಜನತೆ ನಿಂತಿದೆ. ನಾನು ರಾಜಕೀಯಕ್ಕೆ ಬಂದಿದ್ದ ಕಾರಣವೇ ಜನರು. ಯಾರನ್ನೂ ದ್ವೇಷಿಸುವ, ಎದುರು ಹಾಕಿಕೊಳ್ಳುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿಲ್ಲ. ನಾನು ಯಾರಿಗೂ ಸವಾಲು ಹಾಕಿಲ್ಲ ಎಂದು ತಿಳಿಸಿದರು.

    ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ಕುರಿತು ಪ್ರತಿಕ್ರಿಯೆ ನೀಡಿದ ಸುಮಲತಾ ಅವರು, ಮಂಡ್ಯದ ಸಮಸ್ಯೆಗಳ ಕುರಿತು ಮೀರಾ ಶಿವಲಿಂಗಯ್ಯ ಅವರು ಸಲಹೆ ನೀಡಿದ್ದಾರೆ. ಇದರ ಹೊರತಾಗಿ ನಾವು ರಾಜಕೀಯ ವಿಚಾರವಾಗಿ ಮಾತನಾಡಿಲ್ಲ. ಮಂಡ್ಯ ಅಭಿವೃದ್ಧಿಯ ಕುರಿತು ಕೆಲವು ಸಲಹೆ ನೀಡಿದ್ದಾರೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯಡಿಯೂರಪ್ಪನವರ ಹುಣ್ಣಿಮೆ, ಅಮವಾಸ್ಯೆ ಡೆಡ್‍ಲೈನ್ ಮುಗಿದಿವೆ: ಎಂಬಿಪಿ ಟಾಂಗ್

    ಯಡಿಯೂರಪ್ಪನವರ ಹುಣ್ಣಿಮೆ, ಅಮವಾಸ್ಯೆ ಡೆಡ್‍ಲೈನ್ ಮುಗಿದಿವೆ: ಎಂಬಿಪಿ ಟಾಂಗ್

    ವಿಜಯಪುರ: ಮಾಜಿ ಸಿಎಂ ಯಡ್ಡಿಯೂರಪ್ಪನವರ ಹುಣ್ಣಿಮೆ, ಅಮವಾಸ್ಯೆ, ದೀಪಾವಳಿ, ಸಂಕ್ರಾಂತಿ ಎಲ್ಲ ಮುಗಿದಿವೆ. ಈ ರೀತಿ ಅನೇಕ ಡೆಡ್ ಲೈನ್ ಮುಗಿದರೂ ಕಾಂಗ್ರೆಸ್ ಇರುತ್ತೆ ಎಂದು ಜಿಲ್ಲೆಯ ಕಳ್ಳಕವಟಿಗಿಯಲ್ಲಿ ಗೃಹ ಸಚಿವ ಎಂ.ಬಿ ಪಾಟೀಲ್ ವ್ಯಂಗ್ಯವಾಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡ್ಡಿಯೂರಪ್ಪನವರ ಹುಣ್ಣಿಮೆ, ಅಮವಾಸ್ಯೆ, ದೀಪಾವಳಿ, ಸಂಕ್ರಾಂತಿ ಅಂತ ಎಲ್ಲಾ ಡೆಡ್‍ಲೈನ್ ಮುಗಿದಿದೆ. ಅವರು ಆಪರೇಷನ್ ಕಮಲ ಮಾಡೋದು ಬಿಡಲ್ಲ. ಪದೇ ಪದೇ ಅದೇ ಮಾತನ್ನ ಕೇಳಿ ನಿಮಗೂ ಬೇಸರ ಆಗಿದೆ. ಮುಂದೆ ಅಸೆಂಬ್ಲಿ ಚುನಾವಣೆ ಬರುತ್ತೆ, ನಂತರ ಲೋಕಸಭಾ ಚುನಾವಣೆ ಬರುತ್ತೆ. ಆಗಲು ಕಾಂಗ್ರೆಸ್ ಇರುತ್ತೆ ಆಪರೇಷನ್ ಕಮಲ ನಡೆಯಲ್ಲ ಎಂದು ಯಡ್ಡಿಯೂರಪ್ಪ ಬಗ್ಗೆ ವ್ಯಂಗ್ಯವಾಡಿದ್ದಾರೆ.

    ದೋಸ್ತಿ ಸರ್ಕಾರದಲ್ಲಿ ಲೋಕಸಭೆ ಚುನಾವಣೆಯ ಟಿಕೆಟ್ ಹಂಚಿಕೆ ಬಗ್ಗೆ ಪ್ರತಿಕ್ರಿಯಿಸಿ, ಎಂಪಿ ಸ್ಥಾನದ 12 ಸೀಟುಗಳಿಗೆ ಯಾವುದೇ ಸಮಸ್ಯೆ ಇಲ್ಲ. ಈಗಾಗಲೇ ಜೆಡಿಎಸ್ 2, ಕಾಂಗ್ರೆಸ್‍ನ 10 ಸೀಟುಗಳ ಬಗ್ಗೆ ಯಾವುದೇ ಗೊಂದಲವಿಲ್ಲ. ಉಳಿದ 16 ಸೀಟ್‍ಗಳ ಬಗ್ಗೆ ಗುರುವಾರ ಚರ್ಚೆ ಆಗಿದೆ. ದೆಹಲಿಯಲ್ಲಿ ಮಾರ್ಚ್ 11ಕ್ಕೆ ಮೀಟಿಂಗ್ ಇದೆ. ಅಲ್ಲಿಯೇ ಎಲ್ಲವೂ ತೀರ್ಮಾನ ಆಗುತ್ತದೆ. 2014 ಹಾಗೂ 2018 ರ ವಿಜಯಪುರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮುಂದಿತ್ತು. ವಿಜಯಪುರ ನಮಗೆ ಬೇಕು ಎಂದು ನಾನು, ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಮತ್ತು ಶಾಸಕ ಯಶವಂತರಾಯಗೌಡ ಪಾಟೀಲ್ ಹೈಕಮಾಂಡ್‍ಗೆ ಮನವಿ ಮಾಡಿದ್ದೇವೆ ಎಂದರು.

    ಸುಮಲತಾ ಅವರ ಬಗ್ಗೆ ನಾನು ಮಾತನಾಡಲ್ಲ. ಬಹುತೇಕ ಮಂಡ್ಯ ಸೀಟ್ ಜೆಡಿಎಸ್ ಪಾಲಾಗಿದೆ. ಹಾಗಾಗಿ ಅದರ ಬಗ್ಗೆ ನಾನು ಹಸ್ತಕ್ಷೇಪ ಮಾಡಲ್ಲ. ಅವರು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲೋದರ ಬಗ್ಗೆ ನಾನು ಮಾತನಾಡಲ್ಲ ಎಂದು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವೈಯಕ್ತಿಕ ಟೀಕೆಯಿಂದ ನನ್ನ ಇಲ್ಲಿಂದ ಓಡಿಸಲು ಸಾಧ್ಯವಿಲ್ಲ: ಸುಮಲತಾ

    ವೈಯಕ್ತಿಕ ಟೀಕೆಯಿಂದ ನನ್ನ ಇಲ್ಲಿಂದ ಓಡಿಸಲು ಸಾಧ್ಯವಿಲ್ಲ: ಸುಮಲತಾ

    ಮೈಸೂರು: ಮಂಡ್ಯ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಚುನಾವಣಾ ಸ್ಪರ್ಧೆಗಾಗಿ ಚಾಮುಂಡಿ ಮೊರೆ ಹೋಗಿದ್ದಾರೆ.

    ಸುಮಲತಾ ಅಂಬರೀಶ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, “ವೈಯಕ್ತಿಕ ಟೀಕೆಯಿಂದ ನನ್ನ ಇಲ್ಲಿಂದ ಓಡಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

    ಅಂಬರೀಶ್ ಅವರು ತನ್ನ ಕುಟುಂಬದವರನ್ನು ರಾಜಕಾರಣಕ್ಕೆ ತರಬೇಕೆಂದು ಬಯಸಿರಲಿಲ್ಲ. ಅವರು ಇದ್ದಿದ್ದರೆ ನಾನು ರಾಜಕಾರಣಕ್ಕೆ ಬರುವ ಪ್ರಶ್ನೆಯೇ ಇರುತ್ತಿರಲಿಲ್ಲ. ವೈಯಕ್ತಿಕ ಟೀಕೆಯಿಂದ ನನ್ನ ಇಲ್ಲಿಂದ ಓಡಿಸಲು ಸಾಧ್ಯವಿಲ್ಲ. ಕೆಲವರ ವೈಯಕ್ತಿಕ ಟೀಕೆಯಿಂದ ನಾನು ಗಟ್ಟಿಯಾಗುತ್ತಿದ್ದೇನೆ. ಅಲ್ಲದೇ ವೈಯಕ್ತಿಕ ಟೀಕೆಗಳು ನೋವು ತಂದಿವೆ ಎಂದು ಹೇಳಿದ್ದಾರೆ.

    ಟೀಕೆ ಮಾಡುವುದನ್ನು ನಾನು ನಿರೀಕ್ಷಿಸಿದ್ದೆ. ಆದರೆ ತೀರಾ ಹತ್ತಿರದವರು ವೈಯಕ್ತಿಯವಾಗಿ ಟೀಕಿಸಿದ್ದಾಗ ಸಹಜವಾಗಿ ನೋವಾಗುತ್ತದೆ. ಕಾಂಗ್ರೆಸ್ ಟಿಕೆಟ್ ಕೊಡುವ ಲಕ್ಷಣಗಳು ಕ್ಷೀಣಿಸಿರುವುದು ಸತ್ಯ. ಆದರೆ ಜನ ಟಿಕೆಟ್ ಕೊಟ್ಟಾಗಿದೆ. ಸ್ಪರ್ಧೆ ಮಾಡುವುದು ಖಚಿತವಾಗಿದೆ ಎಂದು ಸುಮಲತಾ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಜಕಾರಣಕ್ಕೆ ಗ್ರ್ಯಾಂಡ್ ಎಂಟ್ರಿ ನಿರೀಕ್ಷೆಯಲ್ಲಿದ್ದ ಸುಮಲತಾ ಒಂಟಿಯಾದ್ರಾ?

    ರಾಜಕಾರಣಕ್ಕೆ ಗ್ರ್ಯಾಂಡ್ ಎಂಟ್ರಿ ನಿರೀಕ್ಷೆಯಲ್ಲಿದ್ದ ಸುಮಲತಾ ಒಂಟಿಯಾದ್ರಾ?

    -‘ಏಕಾಂಗಿ’ ಸುಮಲತಾ ಇನ್‍ಸೈಡ್ ಸ್ಟೋರಿ!

    ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಮಂಡ್ಯ ಕ್ಷೇತ್ರ ಮೈತ್ರಿಗೆ ಕಬ್ಬಿಣದ ಕಡಲೆಯಾಗಿತ್ತು. ಇಂದು ಕಾಂಗ್ರೆಸ್ ಶಾಸಕಾಂಗದ ನಾಯಕ ಸಿದ್ದರಾಮಯ್ಯನವರು, ಮಂಡ್ಯ ಜೆಡಿಎಸ್ ಗೆ ಬಿಟ್ಟುಕೊಡಲಾಗಿದ್ದು, ಸುಮಲತಾರಿಗೆ ಟಿಕೆಟ್ ನೀಡಲ್ಲ ಎಂದು ಹೇಳಿದರು. ಇತ್ತ ರಾಜಕಾರಣಕ್ಕೆ ಗ್ರ್ಯಾಂಡ್ ಎಂಟ್ರಿ ನಿರೀಕ್ಷೆಯಲ್ಲಿದ್ದ ಸುಮಲತಾ ಅಂಬರೀಶ್ ಒಂಟಿಯಾದ್ರಾ ಎಂಬ ಮಾತುಗಳು ಕೈ ಪಡಸಾಲೆಯಲ್ಲಿ ಕೇಳಿಬರುತ್ತಿವೆ.

    ನಟ, ರಾಜಕಾರಣಿ ಅಂಬರೀಶ್ ನಿಧನದ ಬಳಿಕ ಪತ್ನಿ ಸುಮಲತಾರಿಗೆ ಕಾಂಗ್ರೆಸ್ ಕೆಲ ಕಾರ್ಯಕರ್ತರು ಸೇರಿದಂತೆ ಅಂಬಿ ಅಭಿಮಾನಿಗಳು ರಾಜಕಾರಣಕ್ಕೆ ಬರಬೇಕೆಂದು ಮನವಿ ಮಾಡಿಕೊಂದ್ದರು. ಅಭಿಮಾನಿಗಳ ಮನವಿಯಂತೆ ರಾಜಕಾರಣಕ್ಕೆ ಎಂಟ್ರಿ ನೀಡಿದ್ದ ಸುಮಲತಾ ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ್ದರು. ಇದೀಗ ಅದೇ ಕಾಂಗ್ರೆಸ್ ನಾಯಕರು ಟಿಕೆಟ್ ನೀಡಲ್ಲ ಎಂದು ಹೇಳಿದ್ದು, ಈ ಹಿಂದೆ ಬೆಂಬಲ ನೀಡಿದ್ದ ಕೆಲ ಕಾಂಗ್ರೆಸ್ ನಾಯಕರು ಸುಮಲತಾರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

    ಸಿದ್ದರಾಮಯ್ಯ ಬುದ್ಧಿವಾದ:
    ಮಾಜಿ ಸಚಿವರಾದ ನರೇಂದ್ರಸ್ವಾಮಿ, ಚಲುವರಾಯಸ್ವಾಮಿ ಇಬ್ಬರು ಪರೋಕ್ಷವಾಗಿ ಸುಮಲತಾರಿಗೆ ಬೆಂಬಲ ನೀಡಿದ್ದರು. ಕೆಲ ಕಾರ್ಯಕರ್ತರು ಸುಮಲತಾ ಯಾವುದೇ ಪಕ್ಷ ಅಥವಾ ಪಕ್ಷೇತರರಾಗಿ ನಿಂತ್ರೆ ಪ್ರಚಾರಮಾಡಲು ಸಿದ್ಧ ಎಂದಿದ್ದರು. ಇಬ್ಬರು ಮಾಜಿ ಸಚಿವರನ್ನು ಕರೆಸಿಕೊಂಡು ಮಾತನಾಡಿರುವ ಸಿದ್ದರಾಮಯ್ಯ, ಏ….ಹೇಳ್ತೀನಿ ಕೇಳ್ರಿ….ಯಾವುದೇ ಕಾರಣಕ್ಕೂ ಸುಮಲತಾ ಪರ ನಿಲ್ಲಬೇಡಿ. ನಿಮ್ಮ ಪೊಲಿಟಿಕಲ್ ಕೆರಿಯರ್ ಹಾಳು ಮಾಡಿಕೊಳ್ಳಬೇಡಿ. ಮಂಡ್ಯ ಕ್ಷೇತ್ರ ಜೆಡಿಎಸ್ ಗೆ ಅಂತಾ ಹೈಕಮಾಂಡ್ ಈಗಾಗಲೇ ಹೇಳಿದೆ. ನೀವು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸುಮಲತಾ ಪರ ಕೆಲಸ ಮಾಡಬೇಡಿ.
    ಜೆಡಿಎಸ್ ಮೇಲಿನ ಕೋಪಕ್ಕೆ ನಿಮ್ಮ ರಾಜಕೀಯ ಬದುಕು ಹಾಳು ಮಾಡಿಕೊಳ್ಳಬೇಡಿ. ಹೈಕಮಾಂಡ್ ಏನಾದರೂ ಕ್ರಮ ಕೈಗೊಂಡರೆ ನಾನು ಜವಾಬ್ದಾರನಲ್ಲ ಎಂದು ಬುದ್ಧಿವಾದ ಹೇಳಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ಟಿಕೆಟ್ ತಪ್ಪಿದ್ಯಾಕೆ?:
    ವಿಧಾನಸಭಾ ಚುನಾವಣೆಯಲ್ಲಿ ಅಂಬರಿಶ್ ಟಿಕೆಟ್ ಬೇಡ ಅಂದಿದ್ದರು. ಚುನಾವಣೆ ಸಮಯದಲ್ಲಿ ಅಂಬರೀಶ್ ಹಣ ಖರ್ಚು ಮಾಡುತ್ತಿರಲಿಲ್ಲ. ಇನ್ನು ಸುಮಲತಾ ಎಲ್ಲಿಂದ ಹಣ ಖರ್ಚು ಮಾಡುತ್ತಾರೆ ಎಂಬ ಮಾತುಗಳು ಕಾಂಗ್ರೆಸ್ ಅಂಗಳದಲ್ಲಿಯೇ ಕೇಳಿ ಬಂದಿವೆ.

    ಅಂಬರೀಶ್ ನಿಮಗೆ ಹೇಗೆ ಸ್ನೇಹಿತರೋ, ನನಗೂ ಒಳ್ಳೆಯ ಹಿತೈಷಿಯಾಗಿದ್ದರು. ಸ್ನೇಹಿತನ ಪತ್ನಿ ಎಂದು ಚುನಾವಣೆ ಸಮಯದಲ್ಲಿ ಸುಮಲತಾರಿಗೆ ಹಣಕಾಸಿನ ನೆರವು ನೀಡಬೇಡಿ. ಒಂದು ವೇಳೆ ನಿಮ್ಮ `ಸಹಕಾರ’ದ ವಿಚಾರ ಗೊತ್ತಾದರೆ ಹೈಕಮಾಂಡ್ ಕ್ರಮ ಕೈಗೊಳ್ಳಬಹುದು. ಹಾಗಾಗಿ ಯಾವುದೇ ಹೇಳಿಕೆಗಳನ್ನು ನೀಡದೇ ಚುನಾವಣೆ ಮುಗಿಯವರೆಗೂ ತಟಸ್ಥರಾಗಿರಿ ಎಂದು ಸಚಿವರಾದ ಎಂ.ಬಿ. ಪಾಟೀಲ್ ಮತ್ತು ಕೆ.ಜೆ. ಜಾರ್ಜ್ ಅವರಿಗೆ ಸಿದ್ದರಾಮಯ್ಯನವರು ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.

    ಏಕಾಂಗಿಯಾದ್ರಾ ಸುಮಲತಾ?
    ಸಿದ್ದರಾಮಯ್ಯರ ಸೂಚನೆಯಂತೆ ಕೈ ನಾಯಕರು ಯಾವುದೇ ಹೇಳಿಕೆ ನೀಡದೇ ಸುಮಲತಾರಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರಂತೆ. ರಾಜಕಾರಣಕ್ಕೆ ಗ್ರ್ಯಾಂಡ್ ಎಂಟ್ರಿಯ ನಿರೀಕ್ಷೆಯಲ್ಲಿದ್ದ ಸುಮಲತಾ ಏಕಾಂಗಿಯಾದ್ರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇತ್ತ ಮಾಜಿ ಶಾಸಕರಾದ ನರೇಂದ್ರಸ್ವಾಮಿ ಮತ್ತು ಚಲುವರಾಯಸ್ವಾಮಿಯವರ ನಡೆಯ ಮೇಲೆ ನಿಗಾ ಇಡಿ ಎಂದು ಸಚಿವ ಜಮೀರ್ ಅಹ್ಮದ್‍ಗೆ ಸಿದ್ದರಾಮಯ್ಯನವರು ಸೂಚಿಸಿದ್ದಾರಂತೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲಕ್ಷ್ಮಿ ಅಶ್ವಿನ್ ಗೌಡರಿಗಿಂತ ನಿಖಿಲ್ ಅರ್ಹ ಅಭ್ಯರ್ಥಿ – ಸಚಿವ ಡಿ.ಸಿ ತಮ್ಮಣ್ಣ

    ಲಕ್ಷ್ಮಿ ಅಶ್ವಿನ್ ಗೌಡರಿಗಿಂತ ನಿಖಿಲ್ ಅರ್ಹ ಅಭ್ಯರ್ಥಿ – ಸಚಿವ ಡಿ.ಸಿ ತಮ್ಮಣ್ಣ

    ಬೆಂಗಳೂರು: ಮಂಡ್ಯಕ್ಕೆ ಹಾಲಿ ಸಂಸದ ಶಿವರಾಮೇಗೌಡ, ಟಿಕೆಟ್ ಆಕಾಂಕ್ಷಿ ಲಕ್ಷ್ಮಿ ಅಶ್ವಿನ್ ಗೌಡರಿಗಿಂತ ನಿಖಿಲ್ ಅರ್ಹ ಅಭ್ಯರ್ಥಿ. ನಮ್ಮ ಮನೆಯವರು ನಿಂತುಕೊಳ್ಳೋದು ತಪ್ಪಲ್ಲ ಅಂತ ಸಾರಿಗೆ ಸಚಿವ ಡಿಸಿ ತಮ್ಮಣ್ಣ, ನಿಖಿಲ್ ಕುಮಾರಸ್ವಾಮಿ ಪರ ಬ್ಯಾಟ್ ಬೀಸಿದ್ದಾರೆ.

    ಮಂಡ್ಯದಲ್ಲಿ ನಿಖಿಲ್ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ನಿಖಿಲ್ ಅಭ್ಯರ್ಥಿ ಎಂದು ದೇವೇಗೌಡರೇ ಘೋಷಣೆ ಮಾಡಿದ್ದಾರೆ. ಸೂಕ್ತ ಅಭ್ಯರ್ಥಿ ಇದ್ದರೆ ಕುಟುಂಬದಲ್ಲೇ ಯಾಕೆ ಟಿಕೆಟ್ ಕೊಡಬಾರದು ಎಂದು ಪ್ರಶ್ನಿಸಿದ ಅವರು, ನಮ್ಮ ರಾಜ್ಯದಲ್ಲಿ ಬೇರೆ ಅವರನ್ನು ಕರೆದುಕೊಂಡು ಬಂದು ಗೆಲ್ಲಿಸಿಲ್ವಾ, ಸುಷ್ಮಾ ಸ್ವರಾಜ್, ಸೋನಿಯಾ ಗಾಂಧಿ ಹೀಗೆ ಬೇರೆ ರಾಜ್ಯದವರನ್ನ ಗೆಲ್ಲಿಸಿಲ್ವಾ ಅಂತ ಪ್ರಶ್ನೆ ಮಾಡಿದ್ರು.

    ಹಾಲಿ ಸಂಸದ ಶಿವರಾಮೇಗೌಡ, ಆಶ್ವಿನಿಗೌಡ ಗಿಂತ ನಿಖಿಲ್ ಅವರೇ ಅರ್ಹ ಅಭ್ಯರ್ಥಿ. ನಿಖಿಲ್ ನಿಲ್ಲೋದು ತಪ್ಪಲ್ಲ. ಹಾಸನ, ಮಂಡ್ಯ, ಮೈಸೂರು ನಮ್ಮ ಮನೆ ಇದ್ದ ಹಾಗೆ. ನಮ್ಮ ಮನೆಯಲ್ಲಿ ನಾವು ಅಭ್ಯರ್ಥಿ ಹಾಕಿಕೊಳ್ತೀವಿ. ಉತ್ತರ ಕರ್ನಾಟಕಕ್ಕೆ ನಾವು ಹೋದ್ರೆ ಪ್ರಶ್ನೆ ಮಾಡಬೇಕು. ನಮ್ಮ ಮನೆಯಲ್ಲಿ ನಿಂತ್ರೆ ಏನು ಸಮಸ್ಯೆ ಅಂತ ನಿಖಿಲ್ ಸ್ಪರ್ಧೆಯನ್ನ ಸಮರ್ಥನೆ ಮಾಡಿಕೊಂಡರು

    ಸುಮಲತಾ ಅಂಬರೀಶ್ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಬೇಕಾದ್ರೂ ಸ್ಪರ್ಧೆ ಮಾಡಬಹುದು. ಅರ್ಹತೆ ಇರೋರು ಸ್ಪರ್ಧೆ ಮಾಡಬಹುದು. ಬೇಡ ಅನ್ನೋಕೆ ಆಗುತ್ತಾ ಎಂದು ಪ್ರಶ್ನಿಸಿ ಸುಮಲತಾಗೆ ಟಾಂಗ್ ಕೊಟ್ರು.

    ನಮ್ಮದು ಆರಂಭದಿಂದಲೂ ಕುಟುಂಬ ರಾಜಕಾರಣ ಇದೆ. ಅನೇಕರು ವಿರೋಧ ಮಾಡ್ತಾನೆ ಇದ್ದಾರೆ. ಇಷ್ಟೆಲ್ಲ ಆದ್ರೂ ನಾವು ಗೆದ್ದು ಬರುತ್ತಿಲ್ವಾ ಎಂದು ಕುಟುಂಬ ರಾಜಕಾರಣವನ್ನು ಸಮರ್ಥನೆ ಮಾಡಿಕೊಂಡ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಮಲತಾಗೆ `ಕೈ’ ಕೊಟ್ಟ ಕಾಂಗ್ರೆಸ್ – ಇತ್ತ ಪ್ರಚಾರಕ್ಕಾಗಿ ನಟಿ ಫೋಟೋಶೂಟ್

    ಸುಮಲತಾಗೆ `ಕೈ’ ಕೊಟ್ಟ ಕಾಂಗ್ರೆಸ್ – ಇತ್ತ ಪ್ರಚಾರಕ್ಕಾಗಿ ನಟಿ ಫೋಟೋಶೂಟ್

    ಮಂಡ್ಯ: ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಶ್ ಅವರಿಗೆ ಕಾಂಗ್ರೆಸ್ಸಿನಿಂದ ಟಿಕೆಟ್ ಸಿಗದಿದ್ದರೂ, ಅವರು ಚುನಾವಣಾ ಕೆಲಸಗಳಿಗೆ ಹಾಗೂ ಪ್ರಚಾರಕ್ಕೆ ಫೋಟೋಗಳನ್ನು ಬಳಸಲು ಫೋಟೋಶೂಟ್ ನಡೆಸಿದ್ದಾರೆ.

    ಚುನಾವಣಾ ಅಖಾಡಕ್ಕಿಳಿಯಲು ಸುಮಲತಾ ಅವರು ಭರ್ಜರಿ ತಯಾರಿ ನಡೆಸಿದ್ದಾರೆ. ಕಟೌಟ್ ಮತ್ತು ವೇದಿಕೆಗಳಲ್ಲಿ ಹೇಗೆ ರಾಜಕಾರಣಿಗಳ ಫೋಟೋ ಕಾಣುತ್ತದೋ ಅದೇ ರೀತಿಯಾಗಿ ಸುಮಲತಾ ಫೋಟೋಗಳನ್ನು ತೆಗೆಸಿಕೊಂಡಿದ್ದಾರೆ.

    ಬಿಜೆಪಿಯಿಂದ ಕಣಕ್ಕೆ ಇಳಿಯಲು ಸುಮಲತಾ ಯಾವುದೇ ಆಸಕ್ತಿ ತೋರಿಸುತ್ತಿಲ್ಲ ಎನ್ನಲಾಗಿದೆ. ಕಾಂಗ್ರೆಸ್ ಕೈ ಕೊಟ್ಟ ಹಿನ್ನೆಲೆಯಲ್ಲಿ ಅವರು ಬಿಜೆಪಿ ಬೆಂಬಲದೊಂದಿಗೆ ಪಕ್ಷೇತರರಾಗಿ ಸ್ಪರ್ಧೆ ನಡೆಸುವ ಸಾಧ್ಯತೆಗಳಿವೆ ಎನ್ನುವ ಮಾತುಗಳು ಈಗ ಹರಿದಾಡುತ್ತಿವೆ.

    ಲೋಕಸಭಾ ಚುನಾವಣಾ ತಯಾರಿ ನಡೆದಿದ್ದು ಮಂಡ್ಯದಿಂದ ಸುಮಲತಾಗೆ ಟಿಕೆಟ್ ಕೊಡಲು ಸಾಧ್ಯವಿಲ್ಲ. ಮಂಡ್ಯವನ್ನು ಜೆಡಿಎಸ್‍ಗೆ ಬಿಟ್ಟು ಕೊಟ್ಟಿದ್ದೇವೆ. ಈಗಾಗಲೇ ಹಾಲಿ ಜೆಡಿಎಸ್ ಸಂಸದರಿದ್ದಾರೆ. ಹಾಲಿ ಜೆಡಿಎಸ್ ಸಂಸದರು ಇರುವಾಗ ಟಿಕೆಟ್ ಕೇಳಲು ಬರಲ್ಲ. ನಮ್ಮ ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮೈತ್ರಿ ಹೆಚ್ಚು ಸ್ಥಾನ ಗೆಲುವು ಸಾಧಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

    ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮಂಡ್ಯದಲ್ಲಿ ಮನೆ ಹುಡುಕುತ್ತಿದ್ದ ಸುಮಲತಾ ಅವರು ಅಂಬರೀಶ್ ಇದ್ದ ಬಾಡಿಗೆ ಮನೆಗೆ ಹೋಗಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿತ್ತು. ಈ ಹಿಂದೆಯೇ ಮಂಡ್ಯಕ್ಕೆ ಬಂದಾಗ ಜಿಲ್ಲೆಯ ಜನರನ್ನು ಭೇಟಿ ಮಾಡಿ ಅವರ ಕಷ್ಟ ಸುಖ ಆಲಿಸಲು ಸುಮಲತಾ ಸ್ವಂತ ಮನೆ ಮಾಡಲು ನಿರ್ಧಾರ ಮಾಡಿದ್ದರು. ಸ್ವಂತ ಮನೆ ಮಾಡಲು ತಡವಾಗುವುದರಿಂದ ತಕ್ಷಣಕ್ಕೆ ಚಾಮುಂಡೇಶ್ವರಿ ನಗರದಲ್ಲಿರುವ ಬಾಡಿಗೆ ಮನೆಯಲ್ಲಿರಲು ಸುಮಲತಾ ನಿರ್ಧರಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv