Tag: ಸುಮಿತ್ರಾ ಮಹಾಜನ್

  • ನಾನು ಸ್ಪರ್ಧಿಸಲ್ಲ, ಯಾರನ್ನು ಬೇಕಾದ್ರೂ ಆಯ್ಕೆ ಮಾಡಬಹುದು: ಸುಮಿತ್ರಾ ಮಹಾಜನ್

    ನಾನು ಸ್ಪರ್ಧಿಸಲ್ಲ, ಯಾರನ್ನು ಬೇಕಾದ್ರೂ ಆಯ್ಕೆ ಮಾಡಬಹುದು: ಸುಮಿತ್ರಾ ಮಹಾಜನ್

    ನವದೆಹಲಿ: ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇಂದೋರ್ ಕ್ಷೇತ್ರದಿಂದ ಯಾರನ್ನು ಬೇಕಾದರೂ ಆಯ್ಕೆ ಮಾಡಬಹುದು ಎಂದು ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಹೇಳಿದ್ದಾರೆ.

    ಸುಮಿತ್ರಾ ಮಹಾಜನ್ ಅವರು 75 ವರ್ಷದವರಾಗಿದ್ದು, ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಿಂದ 8 ಬಾರಿ ಆಯ್ಕೆಯಾಗಿದ್ದಾರೆ. ಹೀಗಾಗಿ ಈ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಇಷ್ಟು ದಿನಗಳು ಕಳೆದರೂ ಇಂದೋರ್ ಕ್ಷೇತ್ರದ ಅಭ್ಯರ್ಥಿಯ ಹೆರನ್ನು ಪಕ್ಷದ ನಾಯಕರು ಅಂತಿಮಗೊಳಿಸಿರಲಿಲ್ಲ. ಹೀಗಾಗಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸಂದೇಶ ಹೊರಹಾಕಿದ್ದಾರೆ.

    ಈ ನಿರ್ಧಾರದ ಕುರಿತು ಪ್ರತಿಕ್ರಿಯೆ ನೀಡಿರುವ ಸುಮಿತ್ರಾ ಮಹಾಜನ್ ಅವರು, ನಾನು ಈ ಬಾರಿಯ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಈ ಮೂಲಕ ನನ್ನ ಸ್ಪರ್ಧೆಯ ಬಗ್ಗೆ ಇರುವ ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯುತ್ತಿರುವೆ. ಪಕ್ಷದ ನಾಯಕರು ಯಾರಿಗೆ ಬೇಕಾದರೂ ಇಂದೋರ್ ಕ್ಷೇತ್ರದ ಟಿಕೆಟ್ ನೀಡಲಿ. ಅದಕ್ಕೆ ನನ್ನ ವಿರೋಧವಿಲ್ಲ. ಅವರು ಘೋಷಣೆ ಮಾಡಿದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಬಿಜೆಪಿ ಹೈಕಮಾಂಡ್ 75 ವರ್ಷಕ್ಕಿಂತ ಹೆಚ್ಚು ವಯಸ್ಸಾದ ನಾಯಕರಿಗೆ ಟಿಕೆಟ್ ನೀಡದೇ ಇರಲು ನಿರ್ಧರಿಸಿದೆ. ಸುಮಿತ್ರಾ ಮಹಾಜನ್ ಅವರು ಮುಂದಿನ ವಾರ 76ನೇ ವಸಂತಕ್ಕೆ ಕಾಲಿಡಲಿದ್ದಾರೆ. ಹೀಗಾಗಿ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎನ್ನಲಾಗುತ್ತದೆ.

  • ಹನುಮಂತ ಲಂಕೆಯನ್ನು ಸುಟ್ಟಂತೆ ವಾಯುಪಡೆ ಉಗ್ರರನ್ನು ಮಟ್ಟ ಹಾಕಿದೆ: ಸ್ಪೀಕರ್ ಮೆಚ್ಚುಗೆ

    ಹನುಮಂತ ಲಂಕೆಯನ್ನು ಸುಟ್ಟಂತೆ ವಾಯುಪಡೆ ಉಗ್ರರನ್ನು ಮಟ್ಟ ಹಾಕಿದೆ: ಸ್ಪೀಕರ್ ಮೆಚ್ಚುಗೆ

    ನವದೆಹಲಿ: ಲಂಕೆಯನ್ನು ಸುಟ್ಟು ಹನುಮಂತ ಬಂದಂತೆ ಭಾರತೀಯ ವಾಯುಪಡೆ ಪಾಕಿಸ್ತಾನ ಉಗ್ರರ ಕ್ಯಾಂಪ್‍ಗಳನ್ನು ಸುಟ್ಟು ನೆಲಸಮ ಮಾಡಿದೆ ಎಂದು ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಏರ್‌ಸ್ಟ್ರೈಕ್‌ ಶೌರ್ಯವನ್ನು ಹೊಗಳಿದ್ದಾರೆ.

    ಭಾರತೀಯ ವಾಯುಪಡೆಗೆ ಇಂತಹ ಅದ್ಭುತ ಏರ್‌ಸ್ಟ್ರೈಕ್‌ ನಡೆಸಲು ಅನುಮತಿ ನೀಡಿದ ಪ್ರಧಾನಿ ನರೇಂದ್ರ ಮೋದಿಗೂ ಧನ್ಯವಾದಗಳು. ಈ ಮೂಲಕ ಪಾಕಿಸ್ತಾನ ಮತ್ತೆ ಭಾರತದತ್ತ ತನ್ನ ಕೆಟ್ಟ ದೃಷ್ಟಿ ಹಾಕಲು ಹೆದರುವಂತೆ ವಾಯುಸೇನೆ ಮಾಡಿದೆ ಎಂದು ಶ್ಲಾಘಿಸಿದ್ದಾರೆ.

    ಪವನ ಪುತ್ರ ಹನುಮಂತ ಲಂಕೆಯನ್ನು ಧ್ವಂಸ ಮಾಡಿ ವಾಪಸ್ ಆದಂತೆ ವಾಯುಪಡೆ ಉಗ್ರರನ್ನು ಧ್ವಂಸ ಮಾಡಿ ಸುರಕ್ಷಿತವಾಗಿ ದೇಶಕ್ಕೆ ಮರಳಿದೆ. ಒಂದೇ ಒಂದು ಸಣ್ಣ ಗಾಯವಾದಂತೆ ಚಾಣಾಕ್ಯತನದಿಂದ ಕೆಲಸ ಮುಗಿಸಿ ವಾಯುಪಡೆ ವಾಪಸ್ ಬಂದಿದೆ. ಈ ಮೂಲಕ ಪ್ರಜೆಗಳಲ್ಲಿ ದೇಶದಲ್ಲಿ ಭಯೋತ್ಪದನೆ ನೆಲಸಮವಾಗುತ್ತದೆ ಎಂಬ ನಂಬಿಕೆ ಮೂಡುತ್ತಿದೆ. ಇಷ್ಟೆಲ್ಲ ನಡೆದರೂ, ನೂರಾರು ಉಗ್ರರು ಮಣ್ಣಾದರೂ ಪಾಕ್ ಸೇನೆಗೆ ಮಾತ್ರ ಕಿಂಚಿತ್ತು ಈ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಇದು ಭಾರತೀಯ ಸೇನೆಯ ಶಕ್ತಿ ಎಂದು ಸುಮಿತ್ರಾ ಮಹಾಜನ್ ಹೆಮ್ಮೆಯಿಂದ ವಾಯುಪಡೆಯ ಏರ್‌ಸ್ಟ್ರೈಕ್‌ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಹುಲ್ ಗಾಂಧಿ ನಡೆಗೆ ಸ್ಪೀಕರ್ ಸುಮಿತ್ರಾ ಮಹಾಜನ್ ಅಸಮಾಧಾನ

    ರಾಹುಲ್ ಗಾಂಧಿ ನಡೆಗೆ ಸ್ಪೀಕರ್ ಸುಮಿತ್ರಾ ಮಹಾಜನ್ ಅಸಮಾಧಾನ

    ನವದೆಹಲಿ: ಭಾಷಣ ಮುಗಿಯುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರವರು ಪ್ರಧಾನಿ ನರೇಂದ್ರ ಮೋದಿ ರವರ ಆಲಂಗಿಸಿದ್ದು, ಸದನದ ಶಿಷ್ಟಾಚಾರದ ಉಲಂಘನೆ ಎಂದು ಎಂದು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಅವಿಶ್ವಾಸ ನಿರ್ಣಯ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ತಮ್ಮ ಭಾಷಣ ಮಾಡಿದ ಬಳಿಕ ಪ್ರಧಾನಿ ಮೋದಿ ಅವರನ್ನು ಆಲಂಗಿಸಿ ಕೊಂಡಿದ್ದರು. ರಾಹುಲ್ ನಡೆಯ ಬಳಿಕ ಮಾತನಾಡಿದ ಸ್ಪೀಕರ್, ನನಗೆ ನಿಮ್ಮ ನಡೆ ಇಷ್ಟವಾಗಲಿಲ್ಲ. ಸದನದಲ್ಲಿ ಇರುವುದು ಬರಿ ನರೇಂದ್ರ ಮೋದಿ ಅಲ್ಲ, ಅವರು ಭಾರತದ ಪ್ರಧಾನಿ. ಈ ಹುದ್ದೆಗೆ ತನ್ನದೇ ಆದ ಗೌರವ ಇದೆ ಎಂದರು.

    ಇದೇ ವೇಳೆ ತಮಗೇ ರಾಹುಲ್‍ಗಾಂಧಿ ಮೇಲೆ ಯಾವುದೇ ದ್ವೇಷವಿಲ್ಲ ಎಂದು ಸ್ಪಷ್ಟಪಡಿಸಿದ ಸ್ಪೀಕರ್, ರಾಹುಲ್ ತಮಗೇ ಮಗನ ಹಾಗೇ. ಸದನದಲ್ಲಿರುವ ಎಲ್ಲಾ ಸದಸ್ಯರು ಸಭೆಯ ಘನತೆ ಗೌರವವನ್ನು ಕಾಪಾಡಬೇಕು ಹಾಗೂ ಶಾಂತಿಯಿಂದ ವರ್ತಿಸಬೇಕು ಸೂಚಿಸಿದರು.

    ಸ್ಪೀಕರ್‍ ರವರ ಹೇಳಿಕೆ ನಂತರ ಗೃಹ ಸಚಿವ ರಾಜ್‍ನಾಥ್ ಸಿಂಗ್ ಪ್ರತಿಕ್ರಿಯೆ ನೀಡಿ, ರಾಹುಲ್ ಗಾಂಧಿಯ ಆಲಿಂಗನವನ್ನು ಚಿಪ್ಕೋ ಆಂದೋಲನ ರೀತಿಯಾಗಿತ್ತು ಎಂದು ವ್ಯಂಗ್ಯವಾಡಿದರು.

    ಸದ್ಯ ರಾಹುಲ್ ನಡೆಯನ್ನು ಸಮರ್ಥಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ, ಸಂಸದ ಶಶಿತರೂರ್, ರಾಹುಲ್ ಗಾಂಧಿರವರದ್ದು ಅದ್ಭುತವಾದ ಭಾಷಣವಾಗಿತ್ತು. ಅವರ ಭಾಷಣ ಗೇಮ್ ಚೇಂಜಿಂಗ್ ಆಗಿತ್ತು. ಸರ್ಕಾರದ ಹೇಳಿಕೆಗಳನ್ನು ಹೊರತುಪಡಿಸಿ, ಬಿಜೆಪಿ ಅಕ್ಷರಃ ಸಹ ಉಸಿರಾಡಲು ಸಾಧ್ಯವಿಲ್ಲವಾಗಿತ್ತು ಎಂದು ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.

    ಈ ರಾಹುಲ್ ರವರ ನಡೆಯನ್ನು ಟೀಕಿಸಿದ ಬಿಜೆಪಿ ಮುಖಂಡ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್, ರಾಹುಲ್ ರವರ ನಡೆ ಚಿಕ್ಕ ಮಕ್ಕಳ (ಚೈಲ್ಡಿಶ್) ವರ್ತನೆಯಂತಿತ್ತು. ರಾಹುಲ್ ಗಾಂಧಿ ಇಷ್ಟು ದೊಡ್ಡವರಾಗಿದ್ದು, ಚಿಕ್ಕ ಮಗುವಿನ ಹಾಗೇ ವರ್ತಿಸಿದರು ಅವರಿಗೆ ತಿಳುವಳಿಕೆ ಇಲ್ಲ ಎಂಬುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಆರೋಪಿಸಿದರು.

  • ಪ್ರಧಾನಿ ಮೋದಿ ದೊಡ್ಡ ಸುಳ್ಳುಗಾರ- ರಾಹುಲ್ ಆರೋಪಕ್ಕೆ ಸಿಡಿದೆದ್ದ ಬಿಜೆಪಿ-ರಾಹುಲ್ ಗಾಂಧಿ ಮಾತಿಗೆ ನಕ್ಕ ಚೌಕಿದಾರ

    ಪ್ರಧಾನಿ ಮೋದಿ ದೊಡ್ಡ ಸುಳ್ಳುಗಾರ- ರಾಹುಲ್ ಆರೋಪಕ್ಕೆ ಸಿಡಿದೆದ್ದ ಬಿಜೆಪಿ-ರಾಹುಲ್ ಗಾಂಧಿ ಮಾತಿಗೆ ನಕ್ಕ ಚೌಕಿದಾರ

    ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿ ಚರ್ಚೆಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ನೇರವಾಗಿ ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು.

    ಬಿಜೆಪಿ ಸರ್ಕಾರ ಕೇವಲ ಉದ್ಯಮಿಗಳ ಸರ್ಕಾರವಾಗಿ ಕಾರ್ಯನಿರ್ವಹಿಸುತ್ತಿದೆ. ಉದ್ಯಮಿಗಳ ಎರಡೂವರೆ ಸಾವಿರ ಕೋಟಿ ರೂ. ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದೆ. ದೇಶದ ರೈತರು ನಮ್ಮ ಸಾಲವನ್ನು ಮಾಡಿ ಎಂದು ಕೇಳಿಕೊಳ್ಳುತ್ತಿದ್ದಾರೆ. ಆದ್ರೆ ಹಣಕಾಸಿನ ಸಚಿವರು ಆಗೋದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿದರು. ಇದೇ ವೇಳೆ ರೆಫೆಲ್ ಡೀಲ್ ಮೂಲಕ ಬಿಜೆಪಿ ಕೋಟಿ ಕೋಟಿ ಹಣವನ್ನು ಮಾಡಿಕೊಂಡಿದೆ ಅಂತಾ ಆರೋಪಿಸಿದರು. ರೆಫೆಲ್ ಡೀಲ್ ಪ್ರಸ್ತಾವನೆ ಮಾಡಿದ್ದಕ್ಕೆ, ಅದು ದೇಶದ ಭದ್ರತಾ ವಿಷಯವಾಗಿದ್ದರಿಂದ ಮಾಹಿತಿಯನ್ನು ಬಹಿರಂಗಗೊಳಿಸಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದರು.

    ಅಮಿತ್ ಶಾ ಪುತ್ರನ ಹೆಸರು ಪ್ರಸ್ತಾವನೆ:
    ಮೋದಿ ಸರ್ಕಾರ ಕೇವಲ 15 ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಿದೆ. ಬೇರೆ ದೇಶಗಳಲ್ಲಿ ಪೆಟ್ರೋಲ್ ಬೆಲೆ ಇಳಿಮುಖವಾಗುತ್ತಿದೆ. ಆದ್ರೆ ನಮ್ಮಲ್ಲಿ ಮಾತ್ರ ದರ ಏರಿಕೆಯಾಗುತ್ತಿದೆ. ಇದೇ ವೇಳೆ ರಾಹುಲ್ ಗಾಂಧಿ ಅಕ್ರಮ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪುತ್ರ ಜಯ್ ಶಾರ ಹೆಸರನ್ನು ಪ್ರಸ್ತಾಪ ಮಾಡಿದರು. ಜಯ್ ಶಾ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿ, ಗಲಾಟೆ ಮಾಡಲಾರಂಭಿಸಿದರು. ಇದು ನೇರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಮಧ್ಯೆ ಮಾತಿನ ಚಕಮಕಿಗೆ ಕಾರಣವಾಯಿತು. ಕೂಡಲೇ ಮಧ್ಯ ಪ್ರವೇಶಿಸಿದ ಸ್ಪೀಕರ್ ಸುಮಿತ್ರಾ ಮಹಾಜನ್, ಅಮಿತ್ ಶಾ ಮತ್ತು ಜಯ್ ಶಾ ಹೆಸರನ್ನು ಕಡತದಿಂದ ತೆಗೆದು ಹಾಕುವಂತೆ ಸೂಚಿಸಿ, ಕಲಾಪ ಸುಗಮ ನಡೆಯುವಂತೆ ನೋಡಿಕೊಂಡರು.

    ಅತ್ಯಾಚಾರ ಪ್ರಕರಣಗಳ ಬಗ್ಗೆ ಮೋದಿ ಮೌನ:
    ಹಿಂದೂಸ್ತಾನ ಮಹಿಳೆಯರಿಗೆ ರಕ್ಷಣೆ ನೀಡುವ ವಿಚಾರದಲ್ಲಿ ಎಡವಿದೆ. ಇತ್ತೀಚಿನ ಕೆಲವು ದಿನಗಳಲ್ಲಿ ಮಹಿಳೆಯರ ದೌರ್ಜನ್ಯ, ಗ್ಯಾಂಗ್ ರೇಪ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಮೊದಲು ಈ ರೀತಿಯ ಪ್ರಕರಣಗಳು ದೇಶದಲ್ಲಿ ನಡೆದಿರಲಿಲ್ಲ. ಮಹಿಳೆಯರ ರಕ್ಷಣಾ ವಿಚಾರದಲ್ಲಿ ಪ್ರಧಾನಿ ಮೋದಿ ಎಡವಿದ್ದಾರೆ. ದಲಿತ ಮತ್ತು ಆದಿವಾಸಿ, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ಸತತವಾಗಿ ನಡೆಯುತ್ತಿವೆ. ಬಿಜೆಪಿ ಮಂತ್ರಿಗಳ ಹೆಸರುಗಳು ಅತ್ಯಾಚಾರದಂತಹ ಪ್ರಕರಣದಲ್ಲಿ ಕೇಳಿ ಬರುತ್ತಿವೆ. ಎಲ್ಲದರ ಬಗ್ಗೆ ಮಾತನಾಡುವ ಪ್ರಧಾನಿಗಳು ಈ ವಿಚಾರದಲ್ಲಿ ಮಾತ್ರ ಮೌನವಾಗಿದ್ದಾರೆ. ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಭಾರತೀಯರು ಅಲ್ಲವೇ ಎಂದು ಪ್ರಶ್ನಿಸಿದರು. ಈ ರೀತಿಯ ಪ್ರಕರಣಗಳು ದೇಶಕ್ಕೆ ಶೋಭೆ ತರುವುದಿಲ್ಲ. ಕೊಲೆಗಡುಕರಿಗೆ ಸಚಿವರೇ ಹಾರ ಹಾಕುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದರು.

    ಮೋದಿಯ ಕೈಕುಲುಕಿದ ರಾಹುಲ್:
    ಸಚಿವರಾದ ಅನಂತಕುಮಾರ್ ಹೆಗ್ಗಡೆ ಸಂವಿಧಾನ ಬದಲಿಸುವ ಮಾತುಗಳನ್ನು ಆಡುತ್ತಾರೆ. ಸ್ವಲ್ಪ ಸಮಯ ಕಲಾಪ ಮುಂದೂಡಿದಾಗ ನಿಮ್ಮ ಸಂಸದರೇ ನನ್ನ ಬಳಿ ಬಂದು ತುಂಬಾ ಚೆನ್ನಾಗಿ ಮಾತನಾಡಿದ್ದೀರಿ ಅಂತ ಕೈ ಕುಲುಕಿದರು. ಪ್ರಧಾನಿ ಮೋದಿಯವರನ್ನು ಸೋಲಿಸಲು ನಿಮ್ಮ ಪಕ್ಷದಲ್ಲಿಯೇ ಷಡ್ಯಂತ್ರ ರಚಿತವಾಗಿದೆ. ಬಿಜೆಪಿ, ಆರ್‍ಎಸ್‍ಎಸ್ ಗಳಿಗೆ ನಾನು ತುಂಬಾ ಆಭಾರಿಯಾಗಿದ್ದೇನೆ. ನನಗೆ ಹಿಂದೂಸ್ತಾನ್, ಭಾರತ, ಹಿಂದೂ, ನನ್ನ ಧರ್ಮದ ಬಗ್ಗೆ ಹೇಳಿಕೊಟ್ಟಿದ್ದೀರಿ. ನಾನು ಈ ವಿಷಯಕ್ಕಾಗಿ ನಿಮಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳುತ್ತಾ ನೇರವಾಗಿ ಮೋದಿಯವರ ಬಳಿ ತೆರಳಿ ಅಪ್ಪಿಕೊಂಡು ಕೈ ಕುಲುಕಿ ಬರುವ ಮೂಲಕ ಲೋಕಸಭೆಯಲ್ಲಿ ಅಚ್ಚರಿ ಮೂಡಿಸಿದರು.

    ರಾಹುಲ್ ಗಾಂಧಿ ಭಾಷಣದ ಉದ್ದಕ್ಕೂ ಬಿಜೆಪಿ ಸಂಸದರು ತೀವ್ರ ಗಲಾಟೆ ನಡೆಸಿದರು. ಈ ಮಧ್ಯೆ ಸ್ಪೀಕರ್ ಸಹ ಅಸಂಸದೀಯ ಪದಗಳನ್ನು ಬಳಸಬಾರದು. ಅನಾವಶ್ಯಕವಾಗಿ ಎಲ್ಲರ ಹೆಸರುಗಳ ಪ್ರಸ್ತಾವನೆ ಮಾಡಬಾರದು. ಒಬ್ಬರ ಮಾತುಗಳನ್ನು ಪೂರ್ಣವಾಗಿ ಕೇಲಿ ಬಳಿಕ ನಿಮ್ಮ ಅಭಿಪ್ರಾಯ ಮಂಡಿಸಿ ಎಂದು ಎಲ್ಲರಿಗೂ ಸೂಚಿಸಿದರು.