Tag: ಸುರೇಶ್ ಗೋಪಿ

  • ಇಂದಿರಾ ಗಾಂಧಿ ‘ಭಾರತ ಮಾತೆ’: ಕೇಂದ್ರ ಸಚಿವ ಸುರೇಶ್‌ ಗೋಪಿ ಬಣ್ಣನೆ

    ಇಂದಿರಾ ಗಾಂಧಿ ‘ಭಾರತ ಮಾತೆ’: ಕೇಂದ್ರ ಸಚಿವ ಸುರೇಶ್‌ ಗೋಪಿ ಬಣ್ಣನೆ

    – ಮಾರ್ಕ್ಸ್‌ವಾದಿ ನಾಯನಾರ್‌ ನನ್ನ ರಾಜಕೀಯ ಗುರು ಎಂದ ಬಿಜೆಪಿ ನಾಯಕ

    ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಅವರು ‘ಭಾರತ ಮಾತೆ’ ಹಾಗೂ ಕಾಂಗ್ರೆಸ್‌ನ ಮಾಜಿ ಸಿಎಂ ದಿವಂಗತ ಕೆ.ಕರುಣಾಕರನ್‌ ‘ಧೈರ್ಯಶಾಲಿ ಆಡಳಿತಗಾರ’ ಎಂದು ಕೇಂದ್ರ ಸಚಿವ ಸುರೇಶ್‌ ಗೋಪಿ (Suresh Gopi) ನೀಡಿರುವ ಹೇಳಿಕೆ ಭಾರಿ ಸದ್ದು ಮಾಡುತ್ತಿದೆ.

    ಇಲ್ಲಿನ ಪುಂಕುನ್ನಂನಲ್ಲಿರುವ ಕರುಣಾಕರನ್ ಅವರ ಸ್ಮಾರಕ ‘ಮುರಳಿ ಮಂದಿರಂ’ಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರುಣಾಕರನ್‌ ಮತ್ತು ಮಾರ್ಕ್ಸ್‌ವಾದಿ ಇ.ಕೆ.ನಾಯನಾರ್‌ ನನ್ನ ರಾಜಕೀಯ ಗುರುಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಕ್ಷ ಬಿಟ್ಟುಹೋದವರನ್ನ ಮತ್ತೆ ಸೇರಿಸಲ್ಲ – ಉದ್ಧವ್ ಠಾಕ್ರೆ ಗುಡುಗು

    ಕರುಣಾಕರನ್ ಸ್ಮಾರಕಕ್ಕೆ ಭೇಟಿ ನೀಡಿದ ಬಗ್ಗೆ ಯಾವುದೇ ರಾಜಕೀಯ ಅರ್ಥವನ್ನು ಕಲ್ಪಿಸಬೇಡಿ. ನನ್ನ ಗುರುಗಳಿಗೆ ಗೌರವ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ ಎಂದು ಬಿಜೆಪಿ ನಾಯಕ ಸ್ಪಷ್ಟಪಡಿಸಿದ್ದಾರೆ.

    ಸುರೇಶ್‌ ಗೋಪಿ ಅವರು ತ್ರಿಶೂರ್‌ ಲೋಕಸಭಾ ಕ್ಷೇತ್ರದಲ್ಲಿ ಕೇರಳ ಕೇರಳ ಸಿಎಂ ಆಗಿದ್ದ ದಿ. ಕರುಣಾಕರನ್‌ ಅವರ ಪುತ್ರ ಕಾಂಗ್ರೆಸ್‌ ಅಭ್ಯರ್ಥಿ ಮುರಳೀಧರನ್‌ ಅವರನ್ನು ಮಣಿಸಿದ್ದರು. 74,686 ಮತಗಳ ಅಂತರದಿಂದ ಸುರೇಶ್‌ ಗೋಪಿ ಗೆಲುವು ದಾಖಲಿಸಿದ್ದರು. ಇದನ್ನೂ ಓದಿ: ತಿರುಪತಿಗೆ ತೆರಳಿ ದೇವರ ದರ್ಶನ ಪಡೆದ ಹೆಚ್‌ಡಿಕೆ

  • ನನ್ನ ಬಗ್ಗೆ ತಪ್ಪು ವರದಿಯಾಗಿದೆ, ಕೇರಳದ ಅಭಿವೃದ್ಧಿಗೆ ಬದ್ಧ: ರಾಜೀನಾಮೆ ವಿಚಾರಕ್ಕೆ ಸುರೇಶ್‌ ಗೋಪಿ ಸ್ಪಷ್ಟನೆ

    ನನ್ನ ಬಗ್ಗೆ ತಪ್ಪು ವರದಿಯಾಗಿದೆ, ಕೇರಳದ ಅಭಿವೃದ್ಧಿಗೆ ಬದ್ಧ: ರಾಜೀನಾಮೆ ವಿಚಾರಕ್ಕೆ ಸುರೇಶ್‌ ಗೋಪಿ ಸ್ಪಷ್ಟನೆ

    ನವದೆಹಲಿ: ನನ್ನ ಬಗ್ಗೆ ಕೆಲ ಮಾಧ್ಯಮಗಳಲ್ಲಿ ತಪ್ಪು ವರದಿ ಬರುತ್ತಿದೆ ಎಂದು ತ್ರಿಶೂರು (Thrissur) ಬಿಜೆಪಿ ಸಂಸದ ಸುರೇಶ್‌ ಗೋಪಿ (Suresh Gopi) ಹೇಳಿದ್ದಾರೆ.

    ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು ನಾನು ಕೌನ್ಸಿಲ್‌ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದೆ. ಇದು ತಪ್ಪು. ಪಿಎಂ ನರೇಂದ್ರ ಮೋದಿ (PM Narendra Modi) ಅವರ ನೇತೃತ್ವದಲ್ಲಿ ನಾವು ಕೇರಳದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಬದ್ಧರಾಗಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.


    ಸುರೇಶ್‌ ಗೋಪಿ ಅವರು ಭಾನುವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಇಂದು ನನಗೆ ಮಂತ್ರಿ ಸ್ಥಾನ ಬೇಡ ಎಂದು ಹೇಳಿರುವುದಾಗಿ ವರದಿಯಾಗಿತ್ತು.

    ತ್ರಿಶೂರ್ ಜನರಿಗಾಗಿ ಸಂಸದನಾಗಿ ಕೆಲಸ ಮಾಡಲು ನಾನು ಬಯಸುತ್ತೇನೆ. ಸಂಸದನಾಗಿ ಕೆಲಸ ಮಾಡುವುದೇ ನನ್ನ ಗುರಿ, ನಾನು ಏನನ್ನೂ ಕೇಳಿಲ್ಲ, ನನಗೆ ಈ ಹುದ್ದೆ ಬೇಕಾಗಿಲ್ಲ ಎಂದು ಹೇಳಿರುವಾಗಿ ವರದಿ ತಿಳಿಸಿತ್ತು. ಇದನ್ನೂ ಓದಿ: ನನಗೆ ಯಾರೂ ಹಿತಶತ್ರುಗಳಿಲ್ಲ, ನನಗೆ ನಾನೇ ಶತ್ರು, ಸೋಲಿಗೆ ನಾನೇ ಹೊಣೆ: ಡಿಕೆ ಸುರೇಶ್

    ಸುರೇಶ್‌ ಗೋಪಿ ಈಗಾಗಲೇ ಕೆಲ ಚಲನಚಿತ್ರಗಳಿಗೆ ಸಹಿ ಹಾಕಿದ್ದಾರೆ. ಸಹಿ ಹಾಕಿದ ಎಲ್ಲಾ ಚಲನ ಚಿತ್ರಗಳ ಕೆಲಸ ಪೂರ್ಣಗೊಂಡ ನಂತರ ಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ವರದಿಯಾಗಿದೆ.

     

  • ಕೇರಳದಲ್ಲಿ ಮೊದಲ ಬಾರಿಗೆ ಅರಳಿದ ಕಮಲ – ಸುರೇಶ್‌ ಗೋಪಿಗೆ ಗೆಲುವು

    ಕೇರಳದಲ್ಲಿ ಮೊದಲ ಬಾರಿಗೆ ಅರಳಿದ ಕಮಲ – ಸುರೇಶ್‌ ಗೋಪಿಗೆ ಗೆಲುವು

    ತಿರುವನಂತಪುರಂ: ಕೇರಳದಲ್ಲಿ (Kerala) ಮೊದಲ ಬಾರಿಗೆ ಕಮಲ ಅರಳಿದೆ. ತ್ರಿಶ್ಯೂರ್‌ನಲ್ಲಿ (Thrissur) ಸುರೇಶ್‌ ಗೋಪಿ (Suresh Gopi) ಜಯಗಳಿಸಿದ್ದಾರೆ.

    74 ಸಾವಿರ ಮತಗಳ ಅಂತರದಿಂದ ಸುರೇಶ್‌ ಗೋಪಿ ಜಯಗಳಿಸಿದ್ದಾರೆ. ಸುರೇಶ್‌ ಗೋಪಿ 4,09,302 ಮತಗಳನ್ನು ಪಡೆದರೆ ಸಮೀಪದ ಪ್ರತಿ ಸ್ಪರ್ಧಿ ಸಿಪಿಐ ವಿಎಸ್‌ ಸುನಿಲ್‌ ಕುಮಾರ್‌ 3,34,462 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್‌ನ (Congress) ಕೆ ಮುರಳೀಧರನ್‌ 3,22,102 ಮತಗಳನ್ನು ಗಳಿಸಿದ್ದಾರೆ.

    2019ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರತಾಪನ್‌ ಜಯಗಳಿಸಿದ್ದರು. ಸುರೇಶ್‌ ಗೋಪಿ 2,93,822 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು.

    ಕೇರಳದಲ್ಲಿ ಬಿಜೆಪಿ ಗೆಲ್ಲಿಸಲೇಬೇಕೆಂದು ಸುರೇಶ್‌ ಗೋಪಿ ಅವರಿಗೆ ಬಿಜೆಪಿ ರಾಜ್ಯಸಭಾ ಸ್ಥಾನಮಾನ ನೀಡಿತ್ತು. 2016 ರಿಂದ 2022ವರೆಗೆ ಸುರೇಶ್‌ ಗೋಪಿ ರಾಜ್ಯಸಭಾ ಸದಸ್ಯರಾಗಿ ಈ ಕ್ಷೇತ್ರದಲ್ಲಿ ಬಹಳಷ್ಟು ಕೆಲಸ ಮಾಡಿದ್ದರು.

  • ಖ್ಯಾತನಟ ಸುರೇಶ್ ಗೋಪಿ ಪುತ್ರಿಯ ಮದುವೆಯಲ್ಲಿ ಪ್ರಧಾನಿ ಮೋದಿ

    ಖ್ಯಾತನಟ ಸುರೇಶ್ ಗೋಪಿ ಪುತ್ರಿಯ ಮದುವೆಯಲ್ಲಿ ಪ್ರಧಾನಿ ಮೋದಿ

    ಲಯಾಳಂ ಖ್ಯಾತ ನಟ, ರಾಜ್ಯಸಭಾ ಮಾಜಿ ಸಂಸದ ಸುರೇಶ್ ಗೋಪಿ (Suresh Gopi) ಅವರ ಪುತ್ರಿ ಭಾಗ್ಯ ಸುರೇಶ್ (Bhagya Suresh) -ಶ್ರೇಯಸ್ ಮೋಹನ್ ವಿವಾಹಕ್ಕೆ (Marriage) ಪ್ರಧಾನಿ ನರೇಂದ್ರ ಮೋದಿ (Narendra Modi) ಸಾಕ್ಷಿಯಾಗಿದ್ದಾರೆ.

    ಅತ್ಯಂತ ಮಾದರಿಯಾಗಿ ನಡೆದ ಮದುವೆಯಲ್ಲಿ ಪಾಳ್ಗೊಂಡಿದ್ದ ಮೋದಿ, ವಧುವರರಿಗೆ ಶುಭ ಕೋರಿದರು. ಇದೇ ವೇಳೆ ದೇವಸ್ಥಾನದಲ್ಲಿ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಳಿದ ಜೋಡಿಗೂ ಮೋದಿ ಶುಭ ಹಾರೈಸಿದರು.

    ಗುರುವಾಯೂರ್ ಶ್ರೀಕೃಷ್ಣ ದೇಗುಲದಲ್ಲಿ ನಡೆದ ವಿವಾಹಕ್ಕೆ ಮಲಯಾಳಂ ಚಿತ್ರರಂಗದ ಗಣ್ಯರಾದ ಮೋಹನ್ ಲಾಲ್, ಮಮ್ಮುಟ್ಟಿ, ದಿಲೀಪ್, ಬಿಜು ಮೆನನ್, ಜಯರಾಂ, ಪಾರ್ವತಿ, ಖುಷ್ಬೂ, ಶಾಜಿ ಕೈಲಾಸ್, ಹರಿಹರನ್, ರಚನಾ ನಾರಾಯಣನ್ ಕುಟ್ಟಿ, ಸರಯೂ ಭಾಗಿ ಮೊದಲಾದವರು ಆಗಮಿಸಿದ್ದರು.

    ಸುರೇಶ್ ಗೋಪಿ ಮಲಯಾಳಂ ಸಿನಿಮಾ ರಂಗ ಕಂಡ ಅತ್ಯಂತ ಪ್ರತಿಭಾವಂತ ನಟ, ಅಲ್ಲದೇ ಮಾದರಿಯ ಬದುಕನ್ನು ನಡೆಸಿದವರು. ರಾಜಕಾರಣದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

     

    ಸಮಾಜಸೇವೆಯಲ್ಲೂ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ತಮ್ಮ ಬದುಕಿನಂತೆಯೇ ಮಗಳ ಮದುವೆಯೂ ಸರಳವಾಗಿ ಇರಲಿ ಎನ್ನುವುದು ಅವರ ಉದ್ದೇಶವಾಗಿತ್ತು.