Tag: ಸುರ್ಜೆವಾಲ

  • ಬಿಜೆಪಿ, ಭಜರಂಗದಳ, ಪಿಎಫ್‍ಐ, ಸಿಎಫ್‍ಐ ಸೇರ್ಕೊಂಡು ಸಿಎಂ ಸಾಮರಸ್ಯ ಹಾಳು ಮಾಡ್ತಿದ್ದಾರೆ: ಸುರ್ಜೆವಾಲ

    ಬಿಜೆಪಿ, ಭಜರಂಗದಳ, ಪಿಎಫ್‍ಐ, ಸಿಎಫ್‍ಐ ಸೇರ್ಕೊಂಡು ಸಿಎಂ ಸಾಮರಸ್ಯ ಹಾಳು ಮಾಡ್ತಿದ್ದಾರೆ: ಸುರ್ಜೆವಾಲ

    ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರು ಬಿಜೆಪಿ, ಭಜರಂಗದಳ, ಪಿಎಫ್‍ಐ ಹಾಗೂ ಸಿಎಫ್‍ಐ ಈ ರಾಜ್ಯದ ಸಾಮರಸ್ಯ ಹಾಳು ಮಾಡುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಆರೋಪಿಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಒಬ್ಬ ಸಚಿವರ ಮೇಲೆ ಆಪಾದನೆ ಬಂದಿದೆ. 40% ಕಮಿಷನ್ ಪಡೆಯುತ್ತಿದ್ದಾರೆ ಅಂತ ಆರೋಪ ಬಂದಿದೆ. ಅವರ ಮೇಲೆ ಕ್ರಮ ಕೈಗೊಳ್ಳಲಾಗದಷ್ಟು ಸಿಎಂ ವೀಕ್ ಆಗಿದ್ದಾರೆ. ಈಗ ಒಬ್ಬ ಬಿಜೆಪಿ ಕಾರ್ಯಕರ್ತ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾಕೆಂದರೆ ಅವರ ವಿರುದ್ಧ ಕಿರುಕುಳ ಹೆಚ್ಚಾಯ್ತು. ಹೀಗಾಗಿ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ. ಕೇವಲ ಈಶ್ವರಪ್ಪನವರ ಮಾತ್ರ ವಜಾ ಮಾಡೋದಲ್ಲ ಮುಖ್ಯಮಂತ್ರಿಯೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ – ಡೆತ್‍ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

    ಈ ಸರ್ಕಾರದ ಎಲ್ಲಾ ಕಳಂಕಿತ ಸಚಿವರು ತೊಲಗಬೇಕು. ಭ್ರಷ್ಟ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರ ಹೊಸ ಡೆಸಿಬಲ್ ಲೆವೆಪ್ ಸೆಟ್ ಮಾಡುತ್ತಿದೆ. ನಿತ್ಯ ಸಿಎಂ ಬೊಮ್ಮಾಯಿ ಕೋಮು ವಿಚಾರಗಳ ಹಿಂದೆ ಅಡಗಿ ಕುಳಿತುಕೊಳ್ತಿದ್ದಾರೆ. ಸಿಎಂ ಅವರು ಬಿಜೆಪಿ, ಭಜರಂಗದಳ ಮೂರೂ ಸಹ ಪಿಎಫ್‍ಐ, ಸಿಎಫ್‍ಐ ಜೊತೆ ಕೈ ಜೋಡಿಸಿ ಈ ರಾಜ್ಯದ ಸಾಮರಸ್ಯ ಹಾಳು ಮಾಡುತ್ತಿದೆ. ಶೇ. 50 ರಷ್ಟು ಗುತ್ತಿಗೆದಾರರು ರಾಜ್ಯ ಸರ್ಕಾರದ ವಿರುದ್ಧ ಆಪಾದನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

    ಕೆಲವರು ಬೇಲ್ ಮೇಲಿದ್ದಾರೆ, ಇನ್ನೂ ಕೆಲವರು ಬೇಲ್ ನ ನಿರೀಕ್ಷೆಯಲ್ಲಿದ್ದಾರೆ. ಅವರೆಲ್ಲರನ್ನೂ ವಜಾ ಮಾಡಬೇಕು, ಇಲ್ಲದಿದ್ದರೆ ಸಿಎಂ ಬೊಮ್ಮಾಯಿ ರಾಜೀನಾಮೆ ಕೊಟ್ಟು ಹೋಗಬೇಕು ಎಂದಿದ್ದಾರೆ. ಇದನ್ನೂ ಓದಿ: ಓಲೈಕೆ ರಾಜಕಾರಣ ಗೊತ್ತಿಲ್ಲ: ಇಬ್ಬರು ಮಾಜಿ ಸಿಎಂಗಳಿಗೆ ಕುಟುಕಿದ  ಬೊಮ್ಮಾಯಿ

  • ಬೊಮ್ಮಾಯಿ ಗೃಹಮಂತ್ರಿಯಾಗಿದ್ದಾಗ ಬಿಟ್ ಕಾಯಿನ್ ಹಗರಣ ನಡೆದಿದೆ: ಸುರ್ಜೆವಾಲಾ

    ಬೊಮ್ಮಾಯಿ ಗೃಹಮಂತ್ರಿಯಾಗಿದ್ದಾಗ ಬಿಟ್ ಕಾಯಿನ್ ಹಗರಣ ನಡೆದಿದೆ: ಸುರ್ಜೆವಾಲಾ

    ನವದೆಹಲಿ: ಬಸವರಾಜ ಬೊಮ್ಮಾಯಿ ಅವರು ಗೃಹಸಚಿವರಾಗಿದ್ದಾಗ ಬಿಟ್ ಕಾಯಿನ್ ಹಗರಣ ನಡೆದಿದೆ. ಬಹುಕೋಟಿ ಹಗರಣದಲ್ಲಿ ಕರ್ನಾಟಕ ಸರ್ಕಾರವೇ ಭಾಗಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಗಂಭೀರ ಆರೋಪ ಮಾಡಿದ್ದಾರೆ.

    ದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವತಂತ್ರ ಭಾರತದ ಬಳಿಕದ ಅತಿದೊಡ್ಡ ಹಗರಣ ಇದಾಗಿದೆ. ಒಂದು ಕಾಯಿನ್ ಬೆಲೆ 51 ಲಕ್ಷ ರೂ. ಇದೆ. ಕರ್ನಾಟಕ ಸರ್ಕಾರ ಕೂಡ ಈ ಹಗರಣದಲ್ಲಿ ಭಾಗಿಯಾಗಿದೆ. ಇಷ್ಟು ದೊಡ್ಡ ಹಗರಣ ನಡೆದರೂ ಇಂಟರ್ ಪೋಲ್, ಎನ್‍ಐಎ, ಇಡಿ ಎಲ್ಲವೂ ಸುಮ್ಮನೆ ಇವೆ. ಇದೆಲ್ಲವನ್ನೂ ಗಮನಿಸಿದರೆ ಸರ್ಕಾರ ಹಗರಣವನ್ನು ಮುಚ್ಚಿಡುವ ಪ್ರಯತ್ನ ನಡೆಸುತ್ತಿದೆ ಎಂದು ದೂರಿದ್ದಾರೆ.

    ಈ ಹಗರಣದಲ್ಲಿ ತನಿಖಾ ಸಂಸ್ಥೆಗಳ ದಾರಿ ತಪ್ಪಿಸಲಾಗುತ್ತಿದೆ. ನವೆಂಬರ್ 14ರಂದು ಹ್ಯಾಕರ್ ಶ್ರೀಕಿ ಬಂಧನವಾಗಿತ್ತು. ಆಗ ಶ್ರೀಕಿ ತಾನು ಕದ್ದಿದ್ದ ಒಂದು ಬಿಟ್ ಕಾಯಿನ್ ವರ್ಗಾವಣೆ ಮಾಡಿದ್ದಾನೆ. ಪೊಲೀಸ್ ಕಸ್ಟಡಿಯಲ್ಲಿ ಇದೆಲ್ಲ ನಡೆಯಲು ಹೇಗೆ ಸಾಧ್ಯ? 5,240 ಕೋಟಿ ಮೊತ್ತದ ಬಿಟ್ ಕಾಯಿನ್ ವರ್ಗಾವಣೆ ಆಗಿದೆ. ಅಧಿಕಾರದಲ್ಲಿ ಇರುವವರ ಪಾತ್ರದ ಬಗ್ಗೆ ಅನುಮಾನ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ಯಾರಾ ಒಲಿಂಪಿಕ್ಸ್ ಆಟಗಾರ ಸುಹಾಸ್ ಯತೀರಾಜ್‍ಗೆ ಬಂಪರ್ – ವಿಶೇಷ ಗೌರವಕ್ಕೆ ಭಾಜನರಾದ ಕನ್ನಡಿಗ

    ಇಷ್ಟು ದೊಡ್ಡ ಹಗರಣ ನಡೆದರೂ ಕರ್ನಾಟಕ ಸರ್ಕಾರ ಯಾಕೆ ಸುಮ್ಮನಿದೆ. ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ಅವರು ಏಕೆ ಮೌನವಹಿಸಿದ್ದಾರೆ. ನೀವು ತಲೆಕೆಡಿಸಿಕೊಳ್ಳಬೇಡಿ ಎಂದು ಸಿಎಂಗೆ ಪ್ರಧಾನಿ ಯಾಕೆ ಹೇಳಿದ್ದಾರೆ ಎಂದು ಸುರ್ಜೆವಾಲಾ ಪ್ರಶ್ನಿಸಿದ್ದಾರೆ.

    ಕರ್ನಾಟಕ ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣ ಭಾರೀ ಸದ್ದು ಮಾಡುತ್ತಿದೆ. ಇದರ ಮಧ್ಯೆ ಆಡಳಿತ ಹಾಗೂ ಪ್ರತಿಪಕ್ಷಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ.