Tag: ಸುಳ್ಳು

  • ಮದುವೆ ಸಮಯ ಬಂದಾಗ ಎಲ್ಲರಿಗೂ ತಿಳಿಸ್ತೀನಿ, ಎರಡನೇ ಮದುವೆ ಸುಳ್ಳು : ನಟಿ ಪ್ರೇಮಾ

    ಮದುವೆ ಸಮಯ ಬಂದಾಗ ಎಲ್ಲರಿಗೂ ತಿಳಿಸ್ತೀನಿ, ಎರಡನೇ ಮದುವೆ ಸುಳ್ಳು : ನಟಿ ಪ್ರೇಮಾ

    ವಾರದ ಹಿಂದೆಯಷ್ಟೇ ಉಡುಪಿಯ ಕಾಪುನಲ್ಲಿರುವ ಕೊರಗಜ್ಜ (Koragajja) ದೇವಸ್ಥಾನಕ್ಕೆ ನಟಿ ಪ್ರೇಮಾ (Prema) ಭೇಟಿ ನೀಡಿ, ದೈವದ ದರ್ಶನ ಪಡೆದಿದ್ದರು. ಕೊರಗಜ್ಜನ ದೇವಸ್ಥಾನಕ್ಕೆ ಭೇಟಿ ಹಿನ್ನೆಲೆಯಲ್ಲಿ ನಟಿ ಪ್ರೇಮಾ ಅಲ್ಲಿಗೆ ಹೋಗಿದ್ದು ತಮ್ಮ ಎರಡನೇ ಮದುವೆ (second marriage) ವಿಚಾರವಾಗಿ ಎನ್ನುವ ಸುದ್ದಿ ಹರಡಿತ್ತು. ಪ್ರೇಮಾ ಸದ್ಯ ಎರಡನೇ ಮದುವೆ ತಯಾರಿಯಲ್ಲಿದ್ದಾರೆ ಎಂದೂ ಹೇಳಲಾಗಿತ್ತು. ಈ ಎಲ್ಲ ವಿಷಯಗಳ ಕುರಿತು ಸ್ವತಃ ಪ್ರೇಮಾ ಅವರೇ ಸ್ಪಷ್ಟನೆ (clarification) ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಪ್ರೇಮಾ, ‘ಮದುವೆ ಬಗ್ಗೆ ಹಬ್ಬಿರುವ ಸುದ್ದಿ ಕೇವಲ ಗಾಸಿಪ್. ಎರಡನೇ ಮದುವೆ ವಿಚಾರ ಎಲ್ಲವೂ ಸುಳ್ಳು. ನಾನು ಹೊಸ ಹೊಸ ಕೆಲಸಗಳ ಬಗ್ಗೆ ಯೋಚನೆ ಮಾಡ್ತಿದ್ದಿನಿ. ಮದುವೆ ಸಮಯ ಬಂದಾಗ ಎಲ್ಲರಿಗೂ ತಿಳಿಸ್ತಿನಿ. ಕೊರಗಜ್ಜನ ದೇವಸ್ಥಾನಕ್ಕೆ ಭೇಟಿ ಕೊಟ್ಟಿದು ಮದುವೆ ವಿಚಾರವಾಗಿ ಅಲ್ಲ. ಸ್ನೇಹಿತೆಯ ಮದುವೆಗೆ ಹೋಗಿ ಅಲ್ಲಿಂದ ದೇವರ ದರ್ಶನ ಮಾಡಿ ಬಂದೆ. ಮದುವೆ ವಿಚಾರ ಸುಳ್ಳು’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ವಿಕ್ರಮ್’ ನಟಿ ಸ್ವಾತಿಷ್ಟ ಕೃಷ್ಣನ್

    ಪ್ರೇಮಾ ಅವರ ಮದುವೆ ವಿಚಾರವಾಗಿ ಈ ರೀತಿ ಸುಳ್ಳು ಸುದ್ದಿ ಹರಡುತ್ತಿರುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆಯೂ ಇಂಥದ್ದೊಂದು ಸುದ್ದಿ ಆಗಿತ್ತು. ರೇಡಿಯೋ ಜಾಕಿ ಜೊತೆ ಅವರು ಮದುವೆ ಆಗಲಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸಲಾಗಿತ್ತು. ಅದೆಲ್ಲವೂ ಸುಳ್ಳು ಎಂದು ರೇಡಿಯೋ ಜಾಕಿ ಅವರೇ ಉತ್ತರ ಕೊಟ್ಟಿದ್ದರು. ಇದೀಗ ಮತ್ತೆ ಎರಡನೇ ಮದುವೆ ವಿಚಾರ ಮುನ್ನೆಲೆಗೆ ಬಂದಿದೆ. ಈ ಕುರಿತು ಪ್ರೇಮಾ ಸ್ಪಷ್ಟನೆಯನ್ನೂ ಕೊಟ್ಟೂ ಆಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೋವಿಡ್‌ 19 – ಬೆಳಕಿಗೆ ಬಂತು ಚೀನಾದ ಮತ್ತೊಂದು ಮಹಾ ಕಳ್ಳಾಟ

    ಕೋವಿಡ್‌ 19 – ಬೆಳಕಿಗೆ ಬಂತು ಚೀನಾದ ಮತ್ತೊಂದು ಮಹಾ ಕಳ್ಳಾಟ

    ಜಿನಿವಾ: ಕೊರೊನಾ ವಿಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವ ಚೀನಾ ಮತ್ತೊಂದು ಮಹಾ ಕಳ್ಳಾಟ ಈಗ ಬಯಲಾಗಿದೆ. ಹುಬೆ ಪ್ರಾಂತ್ಯದ ವುಹಾನ್‌ನಲ್ಲಿ ವೈರಸ್‌ ಇದೆ ಎಂಬ ವಿಚಾರ ವಿಶ್ವ ಆರೋಗ್ಯ ಸಂಸ್ಥೆಗೆ ಗೊತ್ತಾಗಿದ್ದು ಚೀನಾದಲ್ಲಿರುವ ತನ್ನ ಸಂಸ್ಥೆಯ ಕಚೇರಿಯಿಂದ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ.

    ಹೌದು. ಯಾವುದೇ ಮಾರಣಾಂತಿಕ ಕಾಯಿಲೆ ಬಂದಾಗ ಸರ್ಕಾರಗಳು ಡಬ್ಲ್ಯೂಎಚ್‌ಒಗೆ ಮಾಹಿತಿ ನೀಡಬೇಕು. ಆದರೆ ಕೊರೊನಾ ವೈರಸ್‌ ಬಂದಿರುವ ವಿಚಾರವನ್ನು ಆರಂಭದಲ್ಲೇ ಚೀನಾ ಮರೆಮಾಚಿತ್ತು.

    ಕೊರೊನಾ ವೈರಸ್‌ ವಿಚಾರದಲ್ಲಿ ಮೊದಲ ಮಾಹಿತಿ ಚೀನಾ ಸರ್ಕಾರದಿಂದ ಬಂದಿರಲಿಲ್ಲ. ಚೀನಾದಲ್ಲಿರುವ ನಮ್ಮ ಕಚೇರಿಯಿಂದ ಮಾಹಿತಿ ಸಿಕ್ಕಿತ್ತು ಎಂದು ಡಬ್ಲ್ಯೂಎಚ್‌ಒ ತಿಳಿಸಿದೆ.

    ಡಬ್ಲ್ಯೂಎಚ್‌ಒ ಹೇಳಿದ್ದು ಏನು?
    2019ರ ಡಿಸೆಂಬರ್‌ 31 ರಂದು ಚೀನಾ ಮಾಧ್ಯಮಗಳಲ್ಲಿ ಉಲ್ಲೇಖಿಸಲ್ಪಟ್ಟಿದ್ದ ನ್ಯೂಮೋನಿಯಾ ಮಾದರಿಯ ಸೋಂಕು ಹರಡುವಿಕೆಯ ಬಗ್ಗೆ ಮಾಹಿತಿ ನೀಡುವಂತೆ ಜನವರಿ 1 ಮತ್ತು 2 ರಂದು ಸರ್ಕಾರವನ್ನು ಕೇಳಿದ್ದೇವು. ಜ. 3 ರಂದು ಚೀನಾ ನಮಗೆ ಈ ರೀತಿಯ ಸೋಂಕಿನ ಮಾಹಿತಿಯನ್ನು ತಿಳಿಸಿತ್ತು ಎಂದು ಡಬ್ಲ್ಯೂಎಚ್‌ಒ ಹೇಳಿದೆ. ಇದನ್ನೂ ಓದಿ: ಉದ್ದೇಶಪೂರ್ವಕವಾಗಿ ಚೀನಾದಿಂದ ಸುಳ್ಳು ಮಾಹಿತಿ – 5 ದೇಶಗಳ ಗುಪ್ತಚರ ವರದಿಯಲ್ಲಿದೆ ಸ್ಫೋಟಕ ವಿಷಯ

    ವುಹಾನ್​ನಲ್ಲಿ ಸಾರ್ಸ್​ ರೀತಿಯ ರೋಗ ಹರಡುತ್ತಿದೆ ಎಂದು ವೈದ್ಯ ಲಿ ವೆನ್ಲಿಯಾಂಗ್ ಶಂಕೆ ವ್ಯಕ್ತಪಡಿಸಿದ್ದರು. 34 ವರ್ಷದ ಕಣ್ಣಿನ ವೈದ್ಯರಾಗಿದ್ದ ಲಿ ವೆನ್ಲಿಯಾಂಗ್ ಡಿಸೆಂಬರ್ 30ರ ವೇಳೆ ಈ ಮಾರಕ ವೈರಸ್ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು. ಮೆಸೆಜಿಂಗ್​ ಆ್ಯಪ್​ ವೀಚ್ಯಾಟ್​ ಮೂಲಕವು ಇತರೆ ವೈದ್ಯರಿಗೂ ಮಾಹಿತಿಯನ್ನು ತಿಳಿಸಿದ್ದರು.

    ಸಾರ್ಸ್ ರೀತಿಯ ಹೊಸ ರೋಗ ಲಕ್ಷಣ ಹೊಂದಿರುವ 7 ಮಂದಿ ರೋಗಿಗಳನ್ನು ನಾನು ಗುರುತಿಸಿದ್ದೇನೆ. ಹೀಗಾಗಿ ಸುರಕ್ಷಾ ಸಾಧನಗಳನ್ನು ಬಳಸಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಕೊಂಡಿದ್ದರು. ಈ ಜಾಗೃತಿ ಸುದ್ದಿಗಳನ್ನು ಹರಡಿದ್ದಕ್ಕಾಗಿ ಜನವರಿ 1 ರಂದು ಡಾ. ಲಿ ವೆನ್ಲಿಯಾಂಗ್ ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಖಂಡಿಸಲಾಗಿತ್ತು. ವುಹಾನ್ ಮುನ್ಸಿಪಾಲ್ ಆರೋಗ್ಯ ಆಯೋಗ ಪ್ರಾಥಮಿಕ ತನಿಖೆಯಲ್ಲಿ ಮನುಷ್ಯರಿಂದ ಮನುಷ್ಯರಿಗೆ ಹರಡುವ ಬಗ್ಗೆ ಯಾವುದೇ ಪುರಾವೆಗಳು ಸಿಕ್ಕಿಲ್ಲ ಎಂದು ಹೇಳಿತ್ತು.

    ಚೀನಾದ ಹೇಳಿಕೆಯನ್ನು ಜನವರಿ 14ರಂದು ವಿಶ್ವ ಆರೋಗ್ಯ ಸಂಸ್ಥೆ ಕೂಡಾ ಸಮರ್ಥಿಸಿಕೊಂಡು ಪ್ರಾಥಮಿಕ ತನಿಖೆಯಲ್ಲಿ ಈ ವೈರಸ್ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತಿರುವ ಬಗ್ಗೆ ಯಾವುದೇ ದಾಖಲೆ ಸಿಕ್ಕಿಲ್ಲ ಎಂದು ಟ್ವೀಟ್ ಮಾಡಿತ್ತು. ಇದಾದ ಬಳಿಕ ಫೆ.6 ರಂದು ಕೊರೊನಾ ವೈರಸ್ ಬಗ್ಗೆ ಮೊದಲ ಬಾರಿಗೆ ಎಚ್ಚರಿಕೆ ನೀಡಿದ್ದ ವೈದ್ಯ ಲಿ ವೆನ್ಲಿಯಾಂಗ್ ಮೃತಪಟ್ಟಿದ್ದರು.

    ಆರಂಭದಲ್ಲಿ ಕೊರೊನಾ ವೈರಸ್‌ ಕುರಿತ ಸುದ್ದಿ ತಡೆಗಟ್ಟಲು ಚೀನಾ ಸರ್ಕಾರ ಇಂಟರ್‌ನೆಟ್‌ ಸೆನ್ಸಾರ್‌ ಮಾಡಿತ್ತು. ಕೊರೊನಾ ವೈರಸ್‌ ಕುರಿತ ಸುದ್ದಿಗಳು, ಕೀ ವರ್ಡ್‌ಗಳು ಓಪನ್‌ ಆಗದೇ ಬ್ಲಾಕ್‌ ಮಾಡಿತ್ತು.

  • ‘ಮನೆಯಲ್ಲಿ ಸಾವಾಗಿದೆ’- ಸುಳ್ಳು ಹೇಳಿ ಹೈದರಾಬಾದ್‍ನಿಂದ ಹಾಸನಕ್ಕೆ ಬಂದ ಟೆಕ್ಕಿ

    ‘ಮನೆಯಲ್ಲಿ ಸಾವಾಗಿದೆ’- ಸುಳ್ಳು ಹೇಳಿ ಹೈದರಾಬಾದ್‍ನಿಂದ ಹಾಸನಕ್ಕೆ ಬಂದ ಟೆಕ್ಕಿ

    ಹಾಸನ: ಮನೆಯಲ್ಲಿ ಸಾವಾಗಿದೆ ಎಂದು ಸುಳ್ಳು ಹೇಳಿ ಹೈದರಬಾದ್‍ನಿಂದ ಹಾಸನಕ್ಕೆ ಟೆಕ್ಕಿಯೊಬ್ಬ ಬಂದಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ ಹೈದರಾಬಾದ್‍ನಲ್ಲಿ ಆತನಿದ್ದ ಬಿಲ್ಡಿಂಗ್‍ನಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಇತ್ತು ಎಂಬ ಅನುಮಾನ ಆತಂಕಕ್ಕೆ ಕಾರಣವಾಗಿದೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಾಸನದ ಎಸ್‍ಪಿ ಶ್ರೀನಿವಾಸ್ ಗೌಡ, ಜಿಲ್ಲೆಯಲ್ಲಿ 21 ಕಡೆ ಚೆಕ್ ಪೋಸ್ಟ್ ಹಾಕಿದ್ದೇವೆ. ಅಗತ್ಯ ದಾಖಲೆ ಇಲ್ಲದಿದ್ದರೆ ಜಿಲ್ಲೆಯೊಳಗೆ ಯಾರನ್ನೂ ಬಿಡುವುದಿಲ್ಲ. ಆದರೆ ಮನೆಯಲ್ಲಿ ಸಾವಾಗಿದೆ ಎಂದು ಹೇಳಿದಾಗ ಮಾನವೀಯತೆಯಿಂದ ಬಿಡುತ್ತೇವೆ. ಅದನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಹಾಸನ ಟೆಕ್ಕಿ ಹೈದರಾಬಾದ್‍ನಲ್ಲಿ ವಾಸವಿದ್ದ ಬಿಲ್ಡಿಂಗ್‍ನಲ್ಲಿ ಒಬ್ಬರಿಗೆ ಕೊರೊನಾ ಪಾಸಿಟಿವ್ ಇತ್ತು ಎಂಬ ಸಂಶಯದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದೇವೆ. ಟೆಕ್ಕಿಯ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಇದುವರೆಗೂ ಯಾವುದೇ ಸೋಂಕಿನ ಲಕ್ಷಣ ಕಂಡು ಬಂದಿಲ್ಲ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

  • 9 ದಿನಗಳಲ್ಲಿ 3ನೇ ಬಾರಿ ಪತ್ರಕರ್ತರಿಗೆ ನೋ ಎಂಟ್ರಿ: ಬಾಲಕೋಟ್ ಪ್ರದೇಶಕ್ಕೆ ಮಾಧ್ಯಮಗಳಿಗೆ ನಿಷೇಧ

    9 ದಿನಗಳಲ್ಲಿ 3ನೇ ಬಾರಿ ಪತ್ರಕರ್ತರಿಗೆ ನೋ ಎಂಟ್ರಿ: ಬಾಲಕೋಟ್ ಪ್ರದೇಶಕ್ಕೆ ಮಾಧ್ಯಮಗಳಿಗೆ ನಿಷೇಧ

    ಇಸ್ಲಾಮಾಬಾದ್: ಜೈಷ್ ಉಗ್ರ ಸಂಘಟನೆಯ ಅಡಗು ತಾಣವಿರುವ ಬಾಲಕೋಟ್ ಪ್ರದೇಶಕ್ಕೆ ಭೇಟಿ ನೀಡಲು ಪತ್ರಕರ್ತರಿಗೆ ಅನುಮತಿಯನ್ನು ನಿರಾಕರಿಸಲಾಗಿದೆ.

    ಪಾಕಿಸ್ತಾನ ಸರ್ಕಾರ ರಾಯಟರ್ಸ್ ಸುದ್ದಿಸಂಸ್ಥೆಯ ಪ್ರತಿನಿಧಿಗಳಿಗೆ ಉಗ್ರ ಸಂಘಟನೆಯ ಮದರಸಾ ಇರುವ ಸ್ಥಳಕ್ಕೆ ಭೇಟಿ ನೀಡಲು ಮತ್ತೊಮ್ಮೆ ಅವಕಾಶ ನಿರಾಕರಿಸಿದೆ. ಕಳೆದ 9 ದಿನಗಳಲ್ಲಿ ಮೂರನೇ ಬಾರಿ ಮಾಧ್ಯಮ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ.

    ಬಾಂಬ್ ಬಿದ್ದ ಸ್ಥಳಕ್ಕೆ ಭೇಟಿ ನೀಡಲು ನಾವು ಮೂರು ಬಾರಿ ಪ್ರಯತ್ನಿಸಿ ವಿಫಲರಾಗಿದ್ದೇವೆ. ಪಾಕ್ ಸೇನೆ ಭದ್ರತೆಯ ನೆಪ ಹೇಳಿ ಯಾರಿಗೂ ಅವಕಾಶವನ್ನೇ ನೀಡುತ್ತಿಲ್ಲ. ನಮ್ಮನ್ನು 100 ಮೀಟರ್ ದೂರದಿಂದ ತಡೆಯಲಾಗಿತ್ತು ಎಂದು ರಾಯಟರ್ಸ್ ವರದಿಗಾರರು ಹೇಳಿದ್ದಾರೆ.

    ದಾಳಿ ನಡೆದ ಸಮೀಪದ ಗ್ರಾಮಸ್ಥರನ್ನು ಮಾಧ್ಯಮ ಪ್ರತಿನಿಧಿಗಳು ಮಾತನಾಡಿಸಿದ್ದಾರೆ. ಈ ವೇಳೆ ಜೈಷ್ ಸಂಘಟನೆ ಬಾಲಕೋಟ್ ಎತ್ತರದ ಪ್ರದೇಶದಲ್ಲಿ ಮದರಸಾ ನಡೆಸುತಿತ್ತು. ಇಲ್ಲಿ ಉಗ್ರರಿಗೆ ಜಿಹಾದ್ ಬಗ್ಗೆ ಪಾಠ ಹೇಳಿಕೊಡುತಿತ್ತು ಎಂದು ತಿಳಿಸಿದ್ದಾರೆ.

     ಬಾಲಕೋಟ್ ನಲ್ಲಿರುವ ಅರಣ್ಯ ಪ್ರದೇಶದಲ್ಲಿ ಬಾಂಬ್ ದಾಳಿ ನಡೆದಿದ್ದು, 15 ಪೈನ್ ಮರಗಳು ನಾಶವಾಗಿದೆ. ಯಾವುದೇ ಕಟ್ಟಡಗಳ ಮೇಲೆ ಬಾಂಬ್ ದಾಳಿ ನಡೆದಿಲ್ಲ ಎಂದು ಪಾಕ್ ಸರ್ಕಾರ ಹೇಳಿಕೆ ನೀಡಿತ್ತು. ಆದರೆ ಮಾಧ್ಯಮ ಪ್ರತಿನಿಧಿಗಳಿಗೆ ಅನುಮತಿ ನಿರಾಕರಿಸಿದ್ದನ್ನು ನೋಡಿದಾಗ ಪಾಕ್ ಈ ವಿಚಾರದಲ್ಲಿ ಸುಳ್ಳು ಹೇಳುತ್ತಿರುವುದು ಸ್ಪಷ್ಟವಾಗಿದೆ. ಪತ್ರಕರ್ತರಿಗೆ ಅನುಮತಿ ನೀಡಿದರೆ ದಾಳಿಯ ಬಳಿಕ ಹೇಳಿಕೊಂಡು ಬಂದಿರುವ ಸುಳ್ಳು ಬಯಲಾಗಬಹುದು ಎನ್ನುವ ಭೀತಿಗೆ ಭದ್ರತಾ ನೆಪದ ತಂತ್ರ ಹೂಡಿದೆ.

    ಭಾರತ ಸರ್ಕಾರ ಉಗ್ರರ ಕ್ಯಾಂಪ್ ಮೇಲೆ ನಾವು ಬಾಂಬ್ ದಾಳಿ ನಡೆಸಿದ್ದೇವೆ. ಈ ದಾಳಿಯಲ್ಲಿ ಹಲವು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಹೇಳಿತ್ತು. ಏರ್ ಚೀಫ್ ಮಾರ್ಷಲ್ ಧನೋವಾ ಅವರು ನಮಗೆ ನೀಡಿದ ಗುರಿಗಳಿಗೆ ಸೈನಿಕರು ಬಾಂಬ್ ದಾಳಿ ಮಾಡಿದ್ದಾರೆ. ಎಷ್ಟು ಜನ ಉಗ್ರರು ಸಾವನ್ನಪ್ಪಿದ್ದಾರೆ ಎನ್ನುವುದನ್ನು ಲೆಕ್ಕ ಹಾಕುವುದು ನಮ್ಮ ಕೆಲಸವಲ್ಲ ಎಂದು ಪ್ರತಿಕ್ರಿಯಿಸಿದ್ದರು. ಇದನ್ನೂ ಓದಿ: ಸುಳ್ಳು ಹೇಳಿ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಪಾಕಿಸ್ತಾನ – ಇಲ್ಲಿದೆ ಪ್ರೂಫ್

    ಹೇಳೋದೆಲ್ಲ ಸುಳ್ಳು:
    ಸುಳ್ಳು ಹೇಳುವುದರಲ್ಲಿ ಪಾಕಿಸ್ತಾನದಷ್ಟು ನಿಸ್ಸೀಮ ದೇಶ ಬೇರೊಂದಿಲ್ಲ. 2017 ರಲ್ಲಿ ವಿಶ್ವಸಂಸ್ಥೆಯಲ್ಲಿ ಭಾರತವನ್ನು ಟೀಕಿಸಲು ಹೋಗಿ ತನ್ನ ಮಾನವನ್ನು ಕಳೆದುಕೊಂಡು ನಗೆಪಾಟಲಿಗೆ ಗುರಿಯಾಗಿತ್ತು. ವಿಶ್ವ ಸಂಸ್ಥೆಯ 72ನೇ ಮಹಾ ಅಧಿವೇಶನದಲ್ಲಿ ಭಾರತದ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನದ ನೈಜ ಬಣ್ಣವನ್ನು ತೆರೆದಿಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಭಾರತ ಭಯೋತ್ಪಾದನೆಯ ತವರು ನೆಲ ಎಂಬ ಆರೋಪವನ್ನು ಮಾಡಿತ್ತು. ಆದರೆ ಈ ಆರೋಪವನ್ನು ಮಾಡಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಮಾನ ವಿಶ್ವಸಂಸ್ಥೆಯಲ್ಲಿ ತನ್ನ ಅಧಿಕಾರಿಯ ಮೂಲಕ ಹರಾಜು ಆಗಿತ್ತು.

    ಪಾಕಿಸ್ತಾನ ಪ್ರತಿನಿಧಿ ಮಲೇಹಾ ಲೋಧಿ ಭಾರತದಲ್ಲಿ ಹೇಗೆ ಹಿಂಸಾಚಾರ ನಡೆಯುತ್ತಿದೆ ಎನ್ನುವುದನ್ನು ವಿಶ್ವಕ್ಕೆ ತೋರಿಸಲು ಪೆಲೆಟ್ ಗನ್‍ನಿಂದ ಗಾಯಗೊಂಡಿದ್ದ ಯುವತಿ ಫೋಟೋ  ಪ್ರದರ್ಶಿಸಿದ್ದರು. ಆದರೆ ಈ ಫೋಟೋ ಗಾಜಾ ಯುದ್ಧ ಸಂದರ್ಭದಲ್ಲಿನ ಫೋಟೋ ಎಂದು ಮಾಧ್ಯಮಗಳು ಪ್ರಕಟಿಸುವ ಮೂಲಕ ಪಾಕ್ ನೈಜ ಬಣ್ಣವನ್ನು ಬಯಲು ಮಾಡಿತ್ತು.

    ಗಾಜಾ ಯುದ್ಧದ ಸಂದರ್ಭದಲ್ಲಿ ದಾವಿ ಅಬು ಜೊಮ್(17) ಯುವತಿ ಗಾಯಗೊಂಡಿದ್ದಳು. ಈ ಫೋಟೋವನ್ನು ಪಾಕ್ ಅಧಿಕಾರಿ ಪ್ರದರ್ಶಿಸಿದ ಬಳಿಕ ವಿಶ್ವದಾದ್ಯಂತ ಪಾಕ್ ವಿರುದ್ಧ ಟೀಕೆಗಳು ವ್ಯಕ್ತವಾಗಿತ್ತು.

     

  • ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು

    ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು

    ಬೆಂಗಳೂರು: ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ.

    1. ನಿಮ್ಮ ಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:
    ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ. ಹಾಗಾಗಿ ಅದನ್ನು ತ್ವಜೆ ಮೇಲೆ ನೇರವಾಗಿ ಉಜ್ಜುವುದು ಒಳ್ಳೆಯದಲ್ಲ. ನಿಂಬೆಹಣ್ಣನ್ನು ನೇರವಾಗಿ ಸ್ಕೀನ್‍ಗೆ ಉಜ್ಜುವುದರ ಬದಲು ಅದನ್ನು ಗ್ಲಿಸರಿನ್ ಅಥವಾ ಫೇಸ್‍ಪ್ಯಾಕ್‍ನಲ್ಲಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.

    2. ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆ ಮಾಯ:
    ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆಗಳು ಮಾಯವಾಗುತ್ತದೆ ಎಂದು ತುಂಬಾ ಜನ ನಂಬುತ್ತಾರೆ. ಆದರೆ ಇದು ಶುದ್ಧ ಸುಳ್ಳು. ಪದೇ ಪದೇ ನೀರಿನಿಂದ ಮುಖ ತೊಳೆದರೆ ನಿಮ್ಮ ಸ್ಕಿನ್‍ಗೆ ಬೇಕಾದ ಆಯಿಲ್ ಕಡಿಮೆ ಆಗುತ್ತದೆ. ಇದರಿಂದ ನಿಮ್ಮ ಸ್ಕೀನ್ ಡ್ರೈ ಆಗಿ ಮೊಡವೆ ಜಾಸ್ತಿಯಾಗುವ ರೀತಿ ಮಾಡುತ್ತದೆ. ಹೀಗಾಗಿ ದಿನಕ್ಕೆ 2 ಅಥವಾ 3 ಬಾರಿ ಮಾತ್ರ ಫೇಸ್ ವಾಶ್ ಮಾಡಬೇಕು.

    3. ಸ್ಕ್ರಬ್ ಹಾಗೂ ಫೇಶಿಯಲ್‍ನಿಂದ ಪಿಂಪಲ್ ಫ್ರೀ:
    ಸ್ಕ್ರಬ್, ಕ್ಲೀನಿಂಗ್ ಹಾಗೂ ಫೇಶಿಯಲ್ ಮಾಡುವುದರಿಂದ ಪಿಂಪಲ್ ಕಡಿಮೆಯಾಗುತ್ತದೆ ಎಂದು ಎಲ್ಲರು ನಂಬುತ್ತಾರೆ. ಆದರೆ ಇದರಿಂದ ನಿಮ್ಮ ಹಣ ಮಾತ್ರ ವ್ಯರ್ಥ ಆಗುವುದು ಹೊರತು ಪಿಂಪಲ್ ದೂರವಾಗುವುದಿಲ್ಲ. ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಯ ಪೋರ್ ಓಪನ್ ಆಗಿ ನಿಮ್ಮ ಸ್ಕೀನ್ ಅನ್ನು ಸೆನ್ಸಿಟಿವ್ ಮಾಡುತ್ತದೆ. ಅಲ್ಲದೇ ಇದರಿಂದ ನಿಮ್ಮ ಮುಖದ ಮೇಲೆ ಇನ್ನಷ್ಟೂ ಪಿಂಪಲ್ ಜಾಸ್ತಿ ಮಾಡುತ್ತದೆ.

    4. ಫೇರ್ ನೆಸ್ ಕ್ರೀಂ ಬೆಳ್ಳಗೆ ಮಾಡುತ್ತದೆ:
    ಫೇರ್ ನೆಸ್ ಕ್ರೀಂ ನಿಮ್ಮ ಮುಖವನ್ನು ಹೊಳೆಯುವಂತೆ ಮಾಡುತ್ತದೆ ಎಂದು ಅಂದುಕೊಂಡಿದ್ದಾರೆ. ಆದರೆ ಈ ಕ್ರೀಂಗಳು ಹಾಗೇ ಮಾಡುವುದಿಲ್ಲ. ಕಂಪೆನಿಗಳು ತಮ್ಮ ಪ್ರಾಡೆಕ್ಟ್ ಗಳನ್ನು ಮಾರಾಟ ಮಾಡಲು ಈ ರೀತಿಯ ಐಡಿಯಾ ಉಪಯೋಗಿಸುತ್ತಾರೆ. ಈ ಕ್ರೀಂಗಳನ್ನು ಉಪಯೋಗಿಸಿದ್ದರೆ ಅದು ನಿಮ್ಮ ತ್ವಚೆಯ ಫಿಗ್ಮೆಂಟೇಶನ್‍ನನ್ನು ತೆಗೆಯುತ್ತದೆ. ಹಾಗಾಗಿ ಕ್ರೀಂಗಳ ಬದಲು ನಿಮ್ಮ ಬಗ್ಗೆ ನೀವು ವಿಶ್ವಾಸವನ್ನು ಹೊಂದಿರಿ.

    5. ಕ್ಲೌಡಿ ಡೇ ದಿನ ಸನ್‍ಸ್ಕ್ರೀನ್ ಬಳಸಬಾರದು:
    ಸನ್ ಸ್ಕ್ರೀನ್ ಉಪಯೋಗಿಸುವುದರಿಂದ ಅದು ನಮ್ಮನ್ನು ಅಲ್ಟ್ರಾವೈಲೆಟ್ ಕಿರಣಗಳಿಂದ ಕಾಪಾಡುತ್ತದೆ. ಬಿಸಿಲು ಇದ್ದಾಗ ಮಾತ್ರ ಜನರು ಸನ್ ಸ್ಕ್ರೀನ್ ಉಪಯೋಗಿಸುತ್ತಾರೆ. ಮೋಡ ಕವಿದ ದಿನವೂ ಕೂಡ ಸೂರ್ಯನ ಕಿರಣವೂ ನಮ್ಮ ಮೇಲೆ ಸುಲಭವಾಗಿ ಬೀಳುತ್ತದೆ. ಹಾಗಾಗಿ ನೀವು ದಿನವೂ ಸನ್ ಸ್ಕ್ರೀನ್‍ನನ್ನು ಉಪಯೋಗಿಸುವುದನ್ನು ಮರೆಯಬೇಡಿ. ಹೀಗಾಗಿ ಕ್ಲೌಡಿ ಡೇ ದಿನ ಸನ್‍ಸ್ಕ್ರೀನ್ ಬಳಸಬಾರದು ಎಂಬುವುದು ಶುದ್ಧ ಸುಳ್ಳಾಗಿದೆ.

    ಈ ಎಲ್ಲಾ ಟಿಪ್ಸ್ ಜನರು ನಿಜವೆಂದು ನಂಬಿದ್ದರು. ಆದರೆ ಇದು ಶುದ್ಧ ಸುಳ್ಳು ಎಂಬುದು ಈಗ ಗೊತ್ತಾಗಿದೆ. ಸದ್ಯ ನೀವು ಕೂಡ ಈ ಟಿಪ್ಸ್ ನನ್ನು ಅನುಸರಿಸಿದರೆ ಸುಂದರವಾಗಿ ಕಾಣಿಸಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪರಿಹಾರಕ್ಕಾಗಿ ಮಗ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾನೆಂದು ಸುಳ್ಳು ಹೇಳಿದ ದಂಪತಿ

    ಪರಿಹಾರಕ್ಕಾಗಿ ಮಗ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾನೆಂದು ಸುಳ್ಳು ಹೇಳಿದ ದಂಪತಿ

    ಮಡಿಕೇರಿ: ಪರಿಹಾರಕ್ಕಾಗಿ ತಮ್ಮ ಮಗ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾನೆಂದು ಸುಳ್ಳು ಹೇಳಿ ದಂಪತಿ ಸಿಕ್ಕಿಬಿದ್ದ ಘಟನೆ ಮಡಿಕೇರಿ ನಗರದ ಮೈತ್ರಿ ಭವನದಲ್ಲಿ ನಡೆದಿದೆ.

    ಭೂ ಕುಸಿತದ ಸಂದರ್ಭ ಮನೆಯಿಂದ ಓಡಿ ಬರುವಾಗ ಕೈಯಲ್ಲಿದ್ದ ಏಳು ವರ್ಷದ ಮಗ ಪ್ರವಾಹದಲ್ಲಿ ಬಿದ್ದು ಕೊಚ್ಚಿ ಹೋಗಿದ್ದಾನೆ ಎಂದು ಪರಿಹಾರದ ಆಸೆಗಾಗಿ ಮಾಧ್ಯಮಗಳಿಗೆ ಸುಳ್ಳು ಹೇಳಿರುವುದು ಬಹಿರಂಗವಾಗಿದ್ದು, ಪೊಲೀಸರು ದಂಪತಿಯನ್ನು ವಶಕ್ಕೆ ಪಡೆದಿದ್ದಾರೆ.

    ಮಹಾಮಳೆ ಹಾಗೂ ಭೂ ಕುಸಿತದಿಂದಾಗಿ ಜಿಲ್ಲೆಯಲ್ಲಿ ಸಾವಿರಾರು ಮಂದಿ ನಿರಾಶ್ರಿತರಾಗಿದ್ದು, ಪುನರ್ ವಸತಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ಪರಿಹಾರಕ್ಕಾಗಿ ಹಲವು ಮಂದಿ ನಿರಾಶ್ರಿತರೆಂದು ಸೌಲಭ್ಯ ಪಡೆಯುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. ಇದಕ್ಕೆ ಪುಷ್ಟಿ ನೀಡುವಂತೆ ಮಗನೇ ಬಲಿಯಾಗಿದ್ದಾನೆ ಎಂದು ಹಾಗೂ ತಾವು ನೋಡದ ಕಾಲೂರಿನ ನಿವಾಸಿಗಳೆಂದು ಇವರು ವಂಚಿಸಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

    ಆಗಸ್ಟ್ 23ರಂದು ಮಡಿಕೇರಿಯ ಮೈತ್ರಿ ಭವನದಲ್ಲಿರುವ ನಿರಾಶ್ರಿತರ ಶಿಬಿರಕ್ಕೆ ಸೋಮಶೇಖರ್ ಹಾಗೂ ಸುಮಾ ಆಗಮಿಸಿದರು. ತಾವು ಕಾಲೂರು ಗ್ರಾಮದವರಾಗಿದ್ದು, ಭೂ ಕುಸಿತಕ್ಕೆ ಸಿಲುಕಿ ತಮ್ಮ ಮನೆ ಕೊಚ್ಚಿಕೊಂಡು ಹೋಗಿದೆ. ನಾವು ಮನೆಯಿಂದ ಹೊರಗೋಡಿ ಬಂದಿದ್ದು, ತಪ್ಪಿಸಿಕೊಂಡು ಬರುವ ಸಂದರ್ಭ ಕೈಯಲ್ಲಿದ್ದ ಏಳು ವರ್ಷದ ಮಗ ಗಗನ್ ಗಣಪತಿ ನೀರಿನಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾನೆ ಎಂದು ಹೇಳಿದರು. ನಿಮ್ಮ ಪಬ್ಲಿಕ್ ಟಿವಿ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದರು. ಆದರೆ ಅದು ಈಗ ಸುಳ್ಳು ಆಗಿದ್ದು, ಇಬ್ಬರು ಪೊಲೀಸರ ಅತಿಥಿಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv