Tag: ಸುಳ್ಳು ದಾಖಲೆ

  • ಮಟಮಟ ಮಧ್ಯಾಹ್ನ ಬರ್ತಾರೆ – ಫೇಕ್ ದಾಖಲೆ ಹಿಡಿದು ಮನೆ ಧ್ವಂಸ ಮಾಡ್ತಾರೆ

    ಮಟಮಟ ಮಧ್ಯಾಹ್ನ ಬರ್ತಾರೆ – ಫೇಕ್ ದಾಖಲೆ ಹಿಡಿದು ಮನೆ ಧ್ವಂಸ ಮಾಡ್ತಾರೆ

    ಬೆಂಗಳೂರು: ಕೊರೊನಾ ಸಮಯದಲ್ಲಿಯೇ ಡೆಡ್ಲಿ ಗ್ಯಾಂಗ್ ಒಂದು ಸಿಲಿಕಾನ್ ಸಿಟಿಗೆ ಎಂಟ್ರಿಯಾಗಿದೆ. ಸುಳ್ಳು ದಾಖಲೆ ಸೃಷ್ಟಿಸಿ ಮನೆ ಧ್ವಂಸ ಮಾಡಿದ ಘಟನೆ ಬೆಂಗಳೂರಿನ ಪ್ಯಾಲೇಸ್ ಗುಟ್ಟಹಳ್ಳಿ ಮುನೇಶ್ವರ ಟೆಂಪಲ್ ಬಳಿ ನಡೆದಿದೆ.

    ಹೌದು. ಖದೀಮರ ತಂಡವೊಂದು ಮಟಮಟ ಮಧ್ಯಾಹ್ನವೇ ಬಂದು ಜೆಸಿಬಿ ಮೂಲಕ ಮನೆ ಕೆಡವಿ ಮನೆಯಲ್ಲಿದ್ದ ಹಣ, ಒಡವೆ, ವಸ್ತುಗಳನ್ನ ಕದ್ದೊಯ್ದಿದೆ. ಈ ವೇಳೆ ಪ್ರಶ್ನೆ ಮಾಡಿದ ಮನೆಯಲ್ಲಿದ್ದ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಸಿದ್ದಲ್ಲದೆ, ಹಲ್ಲೆ ಮಾಡಿದ ಆರೋಪ ಕೂಡ ಕೇಳಿ ಬಂದಿದೆ.

    ಸದ್ಯ ಮನೆ ಕಳೆದುಕೊಂಡು ಕುಟುಂಬ ಬೀದಿಗೆ ಬಿದ್ದಿದ್ದು, ರಾತ್ರಿ ಇಡೀ ಮಹಿಳೆಯರು ಬೀದಿಯಲ್ಲೇ ಮಲಗಿದ್ದಾರೆ. ಈ ಸಂಬಂಧ ಎಫ್‍ಐಆರ್ ಕೊಟ್ಟರೂ ವೈಯಾಲಿಕಾವಲ್ ಪೊಲೀಸರು ಸ್ಥಳಕ್ಕೆ ಬಂದಿಲ್ಲ ಎಂದು ಕುಟುಂಬ ಪೊಲೀಸರ ವಿರುದ್ಧವೂ ಆಕ್ರೋಶ ಹೊರಹಾಕಿದೆ.

    ಗಂಗಮ್ಮ (53) ಮತ್ತು ಅವರ ಮಕ್ಕಳು ಪ್ಯಾಲೆಸ್ ಗುಟ್ಟಹಳ್ಳಿಯ 4ನೇ ಕ್ರಾಸ್ ಮುನೇಶ್ವರ ಬ್ಲ್ಯಾಕ್ ನಲ್ಲಿ ಕಳೆದ 40 ವರ್ಷಗಳಿಂದ ವಾಸವಿದ್ದರು. 2008 ರಲ್ಲಿ ಕೃಷ್ಣಸ್ವಾಮಿ ಪಿಳ್ಳೆ ಎಂಬವರು ಈ ಮನೆಯನ್ನ ಗಂಗಮ್ಮ ಅವರಿಗೆ ಜಿಪಿಎ ಮಾಡಿಕೊಟ್ಟಿದ್ರು. ಈ ಸ್ವತ್ತಿನ ಮೇಲೆ ಸಿಟಿ ಸಿವಿಲ್ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. ಈ ನಡುವೆಯೇ ಭಾನುವಾರ ಮಧ್ಯಾಹ್ನ ವೇಣು, ರಮೇಶ್, ಮಹೇಶ್ ಎಂಬವರು ಮನೆಗೆ ನುಗ್ಗಿ, ಮನೆಯಲ್ಲಿರುವ ವಸ್ತುಗಳನ್ನ ಕದ್ದು ಜೆಸಿಬಿಯಿಂದ ಮನೆಯನ್ನ ನೆಲಸಮ ಮಾಡಿದ್ದಾರೆ.

    ಇತ್ತ ಘಟನಾ ಸ್ಥಳಕ್ಕೆ ಪಬ್ಲಿಕ್ ಟಿವಿ ಬರುತ್ತಿದ್ದಂತೆ ಪೊಲೀಸರು ಎದ್ನೋ ಬಿದ್ನೋ ಅಂತ ಸ್ಥಳಕ್ಕೆ ದೌಡಾಯಿಸಿದ್ದಾರೆ. ಆರೋಪಿಗಳನ್ನ ಯಾಕೆ ಇನ್ನೂ ಬಂಧಿಸಿಲ್ಲ ಎಂದು ಸಬ್ ಇನ್ಸ್ ಪೆಕ್ಟರ್ ಗೆ ಇನ್ಸ್‍ಪೆಕ್ಟರ್ ಕ್ಲಾಸ್ ಮಾಡದ ಪ್ರಸಂಗವೂ ನಡೆಯಿತು.

    ಮಹಿಳೆಯ ಮೇಲೆ ಹಲ್ಲೆ ಮಾಡಿ ಮನೆಯಲ್ಲಿ ಅಡಗಿ ಕೂತಿದ್ದ ಮೊದಲ ಆರೋಪಿ ವೇಣುವನ್ನು ವಶಕ್ಕೆ ಪಡೆದು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಎರಡನೇ ಆರೋಪಿ ಮಹೇಶ್, ಮೂರನೇ ಆರೋಪಿ ಮಹೇಶ್ ಪರಾರಿಯಾಗಿದ್ದಾರೆ. ಎರಡನೇ ಆರೋಪಿ ಮಹೇಶ್ ನಕಲಿ ದಾಖಲೆಗಳನ್ನ ಮಾಡಿಕೊಡುವ ವಿಚಾರದಲ್ಲಿ ಸಿಸಿಬಿಯಿಂದ ಅರೆಸ್ಟ್ ಆಗಿದ್ದ ಎಂಬ ಆರೋಪವಿದೆ.

    ಘಟನೆ ಸಂಬಂಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸುಳ್ಳು ದಾಖಲೆ ನೀಡಿ ಪ್ರೊಫೆಸರ್ ಹುದ್ದೆ ಗಿಟ್ಟಿಸಿಕೊಂಡ ಡಾಕ್ಟರ್?

    ಸುಳ್ಳು ದಾಖಲೆ ನೀಡಿ ಪ್ರೊಫೆಸರ್ ಹುದ್ದೆ ಗಿಟ್ಟಿಸಿಕೊಂಡ ಡಾಕ್ಟರ್?

    ಹಾಸನ: ಸುಳ್ಳು ದಾಖಲೆ ನೀಡಿ ಹಾಸನ ಮೆಡಿಕಲ್ ಕಾಲೇಜಿನಲ್ಲಿ (ಹಿಮ್ಸ್) ಡಾಕ್ಟರ್ ರವಿಕುಮಾರ್ ಪ್ರೊಫೆಸರ್ ಹುದ್ದೆ ಗಿಟ್ಟಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ನ್ಯಾಯಾಲಯ ವಿಚಾರಣೆಗೆ ಆದೇಶ ನೀಡಿದೆ.

    ಡಾಕ್ಟರ್ ರವೀಂದ್ರ ಸುಳ್ಳು ಸೇವಾನುಭವ ದಾಖಲೆ ಪತ್ರ ನೀಡಿ ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ರೊಫೆಸರ್ ಹುದ್ದೆ ಗಿಟ್ಟಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಹಾಸನದ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ವಕೀಲ ಧರ್ಮೇಂದ್ರ ನೇತೃತ್ವದಲ್ಲಿ ಖಾಸಗಿ ಕೇಸ್ ಹಾಕಲಾಗಿತ್ತು. ಹೀಗಾಗಿ ನ್ಯಾಯಾಲಯ ಡಾಕ್ಟರ್ ರವಿಕುಮಾರ್ ವಿರುದ್ಧ ವಿಚಾರಣೆಗೆ ಆದೇಶ ನೀಡಿದೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಕೀಲ ಧರ್ಮೇಂದ್ರ, ಸುಳ್ಳು ದಾಖಲೆ ಪತ್ರ ನೀಡಿರುವ ಡಾಕ್ಟರ್ ರವೀಂದ್ರ ವಿರುದ್ಧ ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ಮೋಸ ಮಾಡಿದ್ದಾರೆ ಎಂದು ಕೋರ್ಟ್ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿಕೊಂಡಿದೆ. ಒಂದು ವೇಳೆ ಆರೋಪ ಸಾಬೀತಾದರೆ ಡಾಕ್ಟರ್ ರವಿಕುಮಾರ್ ತಮ್ಮ ಹುದ್ದೆ ಕಳೆದುಕೊಂಡು, ಏಳು ವರ್ಷದವರೆಗೆ ಶಿಕ್ಷೆಗೆ ಗುರಿಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.

  • ಕೃತಿ ಕಾರಂತ್ ಯಾರು, ನನಗೆ ಗೊತ್ತಿಲ್ಲ – ಅರಣ್ಯ ಸಂರಕ್ಷಾಣಾಧಿಕಾರಿ

    ಕೃತಿ ಕಾರಂತ್ ಯಾರು, ನನಗೆ ಗೊತ್ತಿಲ್ಲ – ಅರಣ್ಯ ಸಂರಕ್ಷಾಣಾಧಿಕಾರಿ

    ಚಾಮರಾಜನಗರ: ಬರೋಬ್ಬರಿ 1.5 ಕೋಟಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗಾಗಿ ಖ್ಯಾತ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಸುಳ್ಳು ದಾಖಲೆ ನೀಡಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿತ್ತು. ಈಗ ಈ ವಿಚಾರದ ಬಗ್ಗೆ ಮಾತನಾಡಿರುವ ಅರಣ್ಯಸಂರಕ್ಷಾಣಾಧಿಕಾರಿ ಕೃತಿಕಾರಂತ್ ಯಾರೆಂಬುದೇ ಗೊತ್ತಿಲ್ಲ ಎಂದು ಹೇಳಿದ್ದಾರೆ.

    ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅರಣ್ಯಸಂರಕ್ಷಾಣಾಧಿಕಾರಿ ಬಾಲಚಂದರ್, ಕೃತಿಕಾರಂತ್ ಯಾರು ಎನ್ನುವುದೇ ನಮಗೆ ಗೊತ್ತಿಲ್ಲ. ನಾವು ಅವರನ್ನು ಭೇಟಿಯೂ ಆಗಿಲ್ಲ. ಅವರು ಬಂಡೀಪುರ ವ್ಯಾಪ್ತಿಯಲ್ಲಿ ಏನು ಸೇವೆ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

    ಕೃತಿಕಾರಂತ್ ಅವರಿಂದ ಅರಣ್ಯ ಸಂರಕ್ಷಣೆಗಾಗಲಿ, ಪರಿಹಾರ ನೀಡುವುದಕ್ಕಾಗಲಿ ಯಾವುದೇ ಸಹಾಯ ಪಡೆದುಕೊಂಡಿಲ್ಲ. ಮಾನವ ವನ್ಯಜೀವಿ ಸಂಘರ್ಷದಲ್ಲಿ ಉಂಟಾದ ಪ್ರಾಣಹಾನಿ ಹಾಗೂ ಬೆಳೆಹಾನಿಗೆ ಸರ್ಕಾರದ ವತಿಯಿಂದಲೇ ಪರಿಹಾರ ನೀಡಲಾಗಿದೆ. ಕಳೆದ ವರ್ಷ ಸುಮಾರು ಎರಡು ಸಾವಿರ ರೈತರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಹೀಗೆ ಪರಿಹಾರ ನೀಡಲು ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯ ನೆರವನ್ನು ನಾವು ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.

    https://www.facebook.com/aranya.kfd/posts/2238629792893031

    ನಮಗೆ ಬೇರೆ ವ್ಯಕ್ತಿಯಿಂದ ಅಥವಾ ಸಂಸ್ಥೆಯಿಂದ ನೆರವು ಪಡೆಯಲು ಕಾನೂನಿನಲ್ಲಿ ಅವಕಾಶವಿಲ್ಲ. ಒಂದು ವೇಳೆ ಕೃತಿಕಾರಂತ್ ರೈತರಿಗೆ ಪರಿಹಾರ ಕೊಡಿಸಿದ್ದರೆ ಆದರ ಬಗ್ಗೆ ರೈತರೇ ಹೇಳಬೇಕು. ವೈಲ್ಡ್ ಸೇವ್ ಹೆಸರಿನಲ್ಲಿ ಪರಿಹಾರ ಕೊಡಿಸುತ್ತಿರುವುದಾಗಿ ಕೆಲವರು ಹೇಳಿಕೊಳ್ಳುತ್ತಿದ್ದಾರೆಂಬ ವಿಚಾರ ನಮ್ಮ ಗಮನಕ್ಕೆ ಬಂದಿತ್ತು. ಹೀಗಾಗಿ ಇಂತಹದ್ದನ್ನೆಲ್ಲ ನಂಬಬಾರದು ಎಂದು ಕಳೆದು ತಿಂಗಳು ಪತ್ರಿಕಾ ಪ್ರಕಟಣೆಯನ್ನು ನಾವು ನೀಡಿದ್ದೇವು ಎಂದು ಹೇಳಿದ್ದಾರೆ.

    ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಪುತ್ರಿ ಕೃತಿ ಕಾರಂತ್ ವನ್ಯಜೀವಿ ತಜ್ಞೆ ಆಗಿದ್ದು, ಈ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಆದರೆ ಈಗ ಅವರು ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗಾಗಿ ಸುಳ್ಳು ದಾಖಲೆ ನೀಡಿದ್ದಾರೆ ಎಂದು ಆರೋಪಿಸಿ, ಪತ್ರಿಕಾ ಪ್ರಕಟಣೆ ಹಾಗೂ ಟ್ವಿಟ್ಟರ್, ಫೇಸ್‍ಬುಕ್ ಪೇಜ್‍ಗಳಲ್ಲಿ ಕೃತಿ ವಿರುದ್ಧ ಅರಣ್ಯ ಇಲಾಖೆ ಆರೋಪಿಸಿತ್ತು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • 1.5 ಕೋಟಿ ರೂ. ಪ್ರಶಸ್ತಿಗಾಗಿ ಸುಳ್ಳು ದಾಖಲೆ ಸೃಷ್ಟಿ- ಕೃತಿ ಕಾರಂತ್ ವಿರುದ್ಧ ಅರಣ್ಯ ಇಲಾಖೆ ಆರೋಪ

    1.5 ಕೋಟಿ ರೂ. ಪ್ರಶಸ್ತಿಗಾಗಿ ಸುಳ್ಳು ದಾಖಲೆ ಸೃಷ್ಟಿ- ಕೃತಿ ಕಾರಂತ್ ವಿರುದ್ಧ ಅರಣ್ಯ ಇಲಾಖೆ ಆರೋಪ

    ಮೈಸೂರು: ಬರೋಬ್ಬರಿ 1.5 ಕೋಟಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗಾಗಿ ಖ್ಯಾತ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಸುಳ್ಳು ದಾಖಲೆ ನೀಡಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ.

    ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಪುತ್ರಿ ಕೃತಿ ಕಾರಂತ್ ವನ್ಯಜೀವಿ ತಜ್ಞೆ ಆಗಿದ್ದು, ಈ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಆದರೆ ಈಗ ಅವರು ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗಾಗಿ ಸುಳ್ಳು ದಾಖಲೆ ನೀಡಿದ್ದಾರೆ ಎಂದು ಆರೋಪಿಸಿ, ಪತ್ರಿಕಾ ಪ್ರಕಟಣೆ ಹಾಗೂ ಟ್ವಿಟ್ಟರ್, ಫೇಸ್‍ಬುಕ್ ಪೇಜ್‍ಗಳಲ್ಲಿ ಕೃತಿ ವಿರುದ್ಧ ಅರಣ್ಯ ಇಲಾಖೆ ವಾರ್ ಶುರು ಮಾಡಿದೆ.

    2019ನೇ ಸಾಲಿನ ಅಂತರಾಷ್ಟ್ರೀಯ ರೋಲೆಕ್ಸ್ ಅವಾರ್ಡ್ ಅನ್ನು ಕೃತಿ ಕಾರಂತ್ ಪಡೆದುಕೊಂಡಿದ್ದಾರೆ. ಸಾರ್ವಜನಿಕ ಕ್ಷೇತ್ರದಲ್ಲಿ ಅಸಾಮಾನ್ಯ ಸಾಧನೆ ಮಾಡಿದವರಿಗೆ ರೋಲೆಕ್ಸ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಬರೋಬ್ಬರಿ 1.5 ಕೋಟಿ ಮೊತ್ತದ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು, ಈ ಪ್ರಶಸ್ತಿ ಪಡೆಯಲು ಕೃತಿ ಅವರು ಸುಳ್ಳು ದಾಖಲೆ ನೀಡಿದ್ದಾರೆ ಎಂದು ಅರಣ್ಯ ಇಲಾಖೆ ಗರಂ ಆಗಿದೆ.

    https://www.facebook.com/aranya.kfd/posts/2238629792893031

    ಸಮುದಾಯ ಆಧಾರಿತ ಸಂರಕ್ಷಣಾ ಸೇವೆ ಮಾಡಿರುವ ಬಗ್ಗೆ ಕೃತಿ ಅರಣ್ಯ ಇಲಾಖೆಗೆ ದಾಖಲೆಗಳನ್ನು ನೀಡಿದ್ದಾರೆ. ವೈಲ್ಡ್ ಸೇವೆ, ವೈಲ್ಡ್ ಶಾಲೆ ಹೆಸರಿನಲ್ಲಿ ಬಂಡೀಪುರ, ನಾಗರಹೊಳೆ ಅರಣ್ಯದಂಚಿನ ಜನರಿಗೆ ಸಹಾಯ ಮಾಡಿರುವ ದಾಖಲೆ, ಕಾಡುಪ್ರಾಣಿ-ಮಾನವ ಸಂಘರ್ಷದಿಂದ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ಕೊಡಿಸಿದ್ದೇವೆ ಎಂದು ಕೃತಿ ಹೇಳಿಕೊಂಡಿದ್ದಾರೆ. 6505 ಜನರ ಪರವಾಗಿ 13.702 ಅರ್ಜಿಗಳಿಗೆ ಸ್ಪಂದಿಸಿರುವುದಾಗಿ ಘೋಷಿಸಿದ್ದಾರೆ. ಅಷ್ಟೇ ಅಲ್ಲದೆ ಇದೇ ದಾಖಲೆಗಳನ್ನ ರೋಲೆಕ್ಸ್ ಸಂಸ್ಥೆಗೂ ಕೃತಿ ನೀಡಿದ್ದಾರೆ.

    ಆದರೆ ಈ ದಾಖಲೆಗಳು ನಿಜವಲ್ಲ. ಕೃತಿ ಅವರು ಪ್ರಶಸ್ತಿಗೋಸ್ಕರ ಈ ರೀತಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಅವರ ವಿರುದ್ಧ ತಿರುಗಿ ಬಿದ್ದಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]