Tag: ಸುವರ್ಣ ತ್ರಿಭುಜ ಬೋಟ್

  • ಸಮುದ್ರದಲ್ಲಿ ಮುಳುಗಡೆಯಾಗಿದ್ದ ಸುವರ್ಣ ತ್ರಿಭುಜ ಬೋಟಿನ ಚಿತ್ರ ಬಿಡುಗಡೆ

    ಸಮುದ್ರದಲ್ಲಿ ಮುಳುಗಡೆಯಾಗಿದ್ದ ಸುವರ್ಣ ತ್ರಿಭುಜ ಬೋಟಿನ ಚಿತ್ರ ಬಿಡುಗಡೆ

    ಕಾರವಾರ: ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿದ್ದ ಅವಶೇಷಗಳ ಚಿತ್ರಗಳನ್ನು ಭಾರತೀಯ ನೌಕಾಸೇನೆಯು ಇಂದು ಬಿಡುಗಡೆಗೊಳಿಸಿದೆ.

    ಮಲ್ಪೆಯಿಂದ ಹೊರಟಿದ್ದ ಸುವರ್ಣ ತ್ರಿಭುಜ ಬೋಟ್ ಮಹಾರಾಷ್ಟ್ರದ ಮಾಲ್ವಾನ್‍ನ ಅರಬ್ಬೀ ಸಮುದ್ರದಲ್ಲಿ ಡಿಸೆಂಬರ್ 16 ರಂದು ಮುಳುಗಡೆಯಾಗಿ ನಾಪತ್ತೆಯಾಗಿತ್ತು. ನಾಲ್ಕು ತಿಂಗಳ ಹುಡುಕಾಟದ ನಂತರ ಕೆಲ ದಿನಗಳ ಹಿಂದಷ್ಟೇ ಬೋಟಿನ ಅವಶೇಷಗಳು ನೌಕಾಸೇನೆ ಮಲ್ಪೆಯ ಮೀನುಗಾರರೊಂದಿಗೆ ತೆರಳಿ ಪತ್ತೆ ಹಚ್ಚಿತ್ತು.

    ಉಡುಪಿಯ ಮಲ್ಪೆ ಬಂದರಿನಿಂದ ಹೊರಟಿದ್ದ ಬೋಟ್ ನಲ್ಲಿ ಉತ್ತರಕನ್ನಡ ಜಿಲ್ಲೆಯ 5, ಉಡುಪಿಯ ಇಬ್ಬರು ಸೇರಿ 7 ಮಂದಿ ಮೀನುಗಾರಿಕೆಗೆ ತೆರಳಿದ್ದು, ಎಲ್ಲರೂ ಬೋಟ್ ನಲ್ಲಿ ಜಲಸಮಾಧಿಯಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ನೌಕಾದಳದವರು ಮಾಹಿತಿಯನ್ನು ಹೊರಹಾಕಬೇಕಿದೆ.

    ಡಿಸೆಂಬರ್ 13 ರಂದು ಉಡುಪಿಯ ಮಲ್ಪೆಯಿಂದ ಹೊರಟ ಸುವರ್ಣ ತ್ರಿಭುಜ ಬೋಟ್ ಮಹಾರಾಷ್ಟ್ರದ ರತ್ನಗಿರಿ ಪ್ರದೇಶದ ಸಮುದ್ರದಲ್ಲಿ ಡಿಸೆಂಬರ್ 15 ರ ರಾತ್ರಿ 1 ಘಂಟೆ ವರೆಗೆ ಸಂಪರ್ಕದಲ್ಲಿತ್ತು. ನಂತರ ಸಂಪರ್ಕ ಕಳೆದುಕೊಂಡಿತ್ತು. ಸಹಜವಾಗಿ ಮೀನುಗಾರರು ಅಪಾಯದಲ್ಲಿ ಸಿಲುಕಿದಾಗ ಜಿಪಿಎಸ್ ಅಥವಾ ಮೊಬೈಲ್ ಸಂಪರ್ಕ ದಲ್ಲಿ ಒಬ್ಬರಿಗೊಬ್ಬರು ಸಂಪರ್ಕದಲ್ಲಿರುತ್ತಾರೆ. ಆದರೆ ಸುವರ್ಣ ತ್ರಿಭುಜ ಬೋಟ್ ನ ಯಾವೊಬ್ಬ ಮೀನುಗಾರರೂ ಬೇರೆ ಮೀನುಗಾರರ ಸಂಪರ್ಕ ಮಾಡಿಲ್ಲ. ಇದಲ್ಲದೇ ಜಿಪಿಎಸ್ ಮೊಬೈಲ್ ಸಿಗ್ನಲ್ ಸಹ ಸಂಪರ್ಕ ಕಳೆದುಕೊಂಡಿತ್ತು. ಈ ಕಾರಣದಿಂದ ಯಾವುದೋ ಕಡಲಗಳ್ಳರು ಬೋಟನ್ನು ಅಪಹರಿಸಿರಬಹುದು ಎಂದು ಹೇಳಲಾಗಿತ್ತು.

    ಕಾಣೆಯಾದ ಒಂದೂವರೆ ತಿಂಗಳಲ್ಲಿ ಬೋಟಿನ ಮೀನು ತುಂಬುವ ಬಾಕ್ಸ್ ಸಿಕ್ಕಿದ್ದು ಯಾವುದೋ ಹಡಗು ಡಿಕ್ಕಿ ಹೊಡೆದಿದೆ ಎನ್ನಲಾಗಿತ್ತು. ಇದರ ಅವಶೇಷಗಳು ಅಥವಾ ಮೀನುಗಾರರ ಶವವಾದರೂ ಸಿಗಬೇಕಿತ್ತು, ಅದೂ ಕೂಡ ದೊರೆಯದೆ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ನೌಕಾದಳ ನಿರಂತರ ಐದು ತಿಂಗಳಿಂದ ಹುಡುಕಾಟ ನಡೆಸಿ ಮಹಾರಾಷ್ಟ್ರದ ಮಲ್ವಾನ್ ನ ಕಡಲತೀರದಿಂದ ಅರಬ್ಬೀ ಸಮುದ್ರದ 33 ಕಿಲೋಮೀಟರ್ ದೂರದಲ್ಲಿ ಅವಶೇಷಗಳನ್ನು ಪತ್ತೆ ಮಾಡಿದೆ.

  • ಸುವರ್ಣ ತ್ರಿಭುಜಕ್ಕೆ ಡಿಕ್ಕಿ ಹೊಡೆದಿತ್ತ ಐಎನ್‍ಎಸ್ ಕೊಚ್ಚಿ?

    ಸುವರ್ಣ ತ್ರಿಭುಜಕ್ಕೆ ಡಿಕ್ಕಿ ಹೊಡೆದಿತ್ತ ಐಎನ್‍ಎಸ್ ಕೊಚ್ಚಿ?

    – ದುರಂತಕ್ಕೆ ಕಾರಣವಾಗಿದ್ದು ನೌಕಾದಳದ ನಿರ್ಲಕ್ಷವೇ!

    ಕಾರವಾರ: ಸುವರ್ಣ ತ್ರಿಭುಜ ಬೋಟ್‍ಗೆ ನೌಕಾದಳದ ಐಎನ್‍ಎಸ್ ಕೊಚ್ಚಿ ಯುದ್ಧ ನೌಕೆಯು ಡಿಕ್ಕಿ ಹೊಡೆದಿತ್ತು ಎನ್ನುವ ಶಂಕೆ ವ್ಯಕ್ತವಾಗಿದೆ.

    163 ಮೀಟರ್ ಉದ್ದವಿರುವ ಐಎನ್‍ಎಸ್ ಕೊಚ್ಚಿ ಯುದ್ಧ ನೌಕೆಯು ಡಿಸೆಂಬರ್ 15ರ ಮಧ್ಯರಾತ್ರಿ ಸುವರ್ಣ ತ್ರಿಭುಜ ಬೋಟ್ ಇದ್ದ ಜಾಗದಲ್ಲಿ ವೇಗವಾಗಿ ಹೋಗಿತ್ತು. ಈ ವೇಳೆ ಬೋಟ್ ಇರುವುದನ್ನು ಗಮನಿಸದ ಐಎನ್‍ಎಸ್ ನೌಕೆಯ ನಾವಿಕ ಡಿಕ್ಕಿ ಹೊಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ನೌಕಾಸೇನೆಯಿಂದ ಏಳು ಮೀನುಗಾರರ ಕೊಲೆ – ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ

    ಐಎನ್‍ಎಸ್ ಕೊಚ್ಚಿನ ಮುಂಭಾಗದ ತಳಭಾಗವು ಡ್ಯಾಮೇಜ್ ಆಗಿತ್ತು. ಅಷ್ಟೇ ಅಲ್ಲದೆ ನೌಕೆಗೆ ಅಳವಡಿಸಿದ್ದ ಕ್ಯಾಮೆರಾ ಸಹ ಸಂಪೂರ್ಣ ಜಖಂಗೊಂಡಿತ್ತು. ನಂತರ ಇದನ್ನು ಮುಂಬೈನ ಶಿಪ್‍ಯಾರ್ಡನಲ್ಲಿ ಸತತ ಮೂರು ತಿಂಗಳ ಕಾಲ ದುರಸ್ತಿಗೊಳಿಸಿ ಬಳಿಕ ಸಮುದ್ರಕ್ಕೆ ಇಳಿಸಲಾಗಿತ್ತು. ಹೀಗಾಗಿ ಸುವರ್ಣ ತ್ರಿಭುಜ ಮುಳುಗಿತ್ತು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಸುವರ್ಣ ತ್ರಿಭುಜ ಅವಶೇಷ ಪತ್ತೆ- ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ

    ಈ ಸಂಬಂಧ ತನಿಖೆ ಕೈಗೊಳ್ಳಬೇಕು. ಐಎನ್‍ಎಸ್ ಕೊಚ್ಚಿ ಯುದ್ಧ ನೌಕೆ ಎಲ್ಲಿ? ಯಾವಾಗ ಡ್ಯಾಮೆಜ್ ಆಗಿತ್ತು ಅಂತ ನೌಕಾದಳದ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು. ತನಿಖೆ ಕೈಗೊಂಡಲ್ಲಿ ಸುವರ್ಣ ತ್ರಿಭುಜದ ರಹಸ್ಯ ಬಯಲಾಗಲಿದೆ ಎಂದು ಮೀನುಗಾರರು ಆಗ್ರಹಿಸಿದ್ದಾರೆ.