Tag: ಸುವರ್ಣ ವಿಧಾನಸೌಧ

  • 600 ಕೋಟಿ ರೂ. ವೆಚ್ಚದ ಸುವರ್ಣ ವಿಧಾನಸೌಧ ಇಲ್ಲಿವರೆಗೂ ಉಪಯೋಗವಾಗಿಲ್ಲ: ಬಿಎಸ್​ವೈ

    600 ಕೋಟಿ ರೂ. ವೆಚ್ಚದ ಸುವರ್ಣ ವಿಧಾನಸೌಧ ಇಲ್ಲಿವರೆಗೂ ಉಪಯೋಗವಾಗಿಲ್ಲ: ಬಿಎಸ್​ವೈ

    ಬೆಳಗಾವಿ: ಜಿಲ್ಲೆಯಲ್ಲಿ 600 ರೂ. ಖರ್ಚು ಮಾಡಿ ಕಟ್ಟಲಾದ ವಿಧಾನಸೌಧ ಇಲ್ಲಿಯವರೆಗೂ ಅದು ಸರಿಯಾಗಿ ಉಪಯೋಗ ಆಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

    ಸುವರ್ಣ ವಿಧಾನಸೌಧದ ಮುಂದೆ ಪ್ರತಿಭಟನಾ ನಿರತರ ಜೊತೆ ಸಂಧಾನ ನಡೆಸಿ ಮಾತನಾಡಿದ ಅವರು, ಸಿಎಂ ಮಾತಿನಿಂದ ಇಂದು ಹೋರಾಟ ಮಾಡಬೇಕಾದ ಅನಿವಾರ್ಯತೆ ಬಂದಿದೆ. ಹೀಗಾಗಿ ನಾನು ವಿರೋಧ ಪಕ್ಷದ ನಾಯಕನಾಗಿ ಇಲ್ಲಿಗೆ ಬಂದಿದ್ದೇನೆ. ದೇವೇಗೌಡರೆ ನಿಮ್ಮ ಮಗನೇ ಇವತ್ತು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಎಲ್ಲ ಭಾಗಕ್ಕೂ ಸರಿಯಾಗಿ ಅನುದಾನ ನೀಡಬೇಕು. ನಂಜುಂಡಪ್ಪ ವರದಿ ನನ್ನ ಬಳಿ ಬಂದಾಗ 1800 ಕೋಟಿ ಅನುದಾನವನ್ನು ಕೊಟ್ಟಿದ್ದೇನೆ. ಇಲ್ಲಿನ ಜನಕ್ಕೆ ನ್ಯಾಯ ಒದಗಿಸಿಕೊಡುವ ಕೆಲಸ ನಾನು ಮಾಡುತ್ತೇನೆ ಎಂದು ಹೇಳಿದರು.

    ಸದ್ಯ 13 ಜಿಲ್ಲೆಯಲ್ಲಿ ಬಂದ್ ಮಾಡದೆ ಸಹಕರಿಸಿ, ಹೋರಾಟ ಹಿಂದೆ ಪಡೆಯಬೇಕು ಎಂದು ಹೋರಾಟಗಾರರಲ್ಲಿ ವಿನಂತಿಸಿದ ಅವರು, ಅಖಂಡ ಕರ್ನಾಟಕ ಕಟ್ಟಲು 13 ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು.

  • ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ- ರಮೇಶ್ ಜಾರಕಿಹೊಳಿ ಹೊಸ ಬಾಂಬ್

    ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ- ರಮೇಶ್ ಜಾರಕಿಹೊಳಿ ಹೊಸ ಬಾಂಬ್

    ಬೆಳಗಾವಿ: ಪಕ್ಷಕ್ಕೆ ಬರುವ ಕಾಂಗ್ರೆಸ್- ಜೆಡಿಎಸ್ ಮುಖಂಡರ ಬಳಿ ಚರ್ಚಿಸಿ ಅವರನ್ನು ಪಕ್ಷಕ್ಕೆ ಕರೆತನ್ನಿ ಎಂಬ ಬಿಎಸ್‍ವೈ ಹೇಳಿಕೆ ಬೆನ್ನಲ್ಲೆ ಬಿಜೆಪಿ ಶಾಸಕರು ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

    ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಪಕ್ಷ ಸೇರ್ಪಡೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ಎಂದರು.

    ಡಿಕೆಶಿ ಗೆ ಟಾಂಗ್: ಇನ್ನು ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಪೂಜೆಗೆ ಆದ್ಯತೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಹೇಳಿಕೆಗೆ ಟಾಂಗ್ ನೀಡಿದ ರಮೇಶ್ ಜಾರಕಿಹೊಳಿ, ಅದು ಸಚಿವ ಡಿಕೆ ಶಿವಕುಮಾರ್ ವೈಯಕ್ತಿಕ ಅಭಿಪ್ರಾಯ. ಉಪಕಾರ ಮಾಡಿದವರನ್ನು ಸ್ಮರಿಸಿಕೊಳ್ಳುವುದು ನಮ್ಮ ಕರ್ತವ್ಯ. ಸಿದ್ದರಾಮಯ್ಯ ಕಾಂಗ್ರೆಸ್ ಗೆ ಉಪಕಾರ ಮಾಡಿದ್ದಾರೆ ಎಂದರು.

    ಇದೇ ವೇಳೆ ಸಿದ್ದರಾಮಯ್ಯ ಗುಂಪಿನಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಆರೋಪಕ್ಕೂ ತಿರುಗೇಟುಕೊಟ್ಟ ರಮೇಶ್ ಜಾರಕಿಹೊಳಿ, ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಕಾಮಾಲೆ ಕಣ್ಣಿಗೆ ಕಾಣೋದು ಹಳದಿಯಂತೆ ಹಾಗೇ ನಾವೇನು ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ಹೊಸ ಬಜೆಟ್ ಕುರಿತು ಹೊಸ ಸರ್ಕಾರಕ್ಕೆ ಕೇವಲ ಸಲಹೆ ಕೊಟ್ಟಿದ್ದಾರೆ. ಸಲಹೆ ಸ್ವೀಕರಿಸುವುದು ಬಿಡುವುದು ಸಿಎಂ ಅವರಿಗೆ ಬಿಟ್ಟಿದ್ದು. ಹಿಂದಿನ ಸರ್ಕಾರದ ಯೋಜನೆ ಮುಂದುವರೆಸುವುದು ನಮ್ಮ ಉದ್ದೇಶ ಎಂದು ಹೇಳಿದರು.

    ಉತ್ತರಕರ್ನಾಟಕ ನಾಯಕರಿಗೆ ನೀಡಲಿ: ಇದೇ ವೇಳೆ ಡಿಸಿಎಂ ಪರಮೇಶ್ವರ್ ಅವರ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಉತ್ತರ ಕರ್ನಾಟಕಕ್ಕೆ ನೀಡಿದರೆ ಒಳ್ಳೆಯದು. ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಎಚ್‍ಕೆ ಪಾಟೀಲ್ ಯಾರಿಗಾದರು ನೀಡಿದರೂ ಒಳ್ಳೆಯದು ಎಂದು ತಿಳಿಸಿದರು.