Tag: ಸುವರ್ಣ ಸುಂದರಿ

  • ಮೇ 31ರಂದು ‘ಸುವರ್ಣ ಸುಂದರಿ’ ಬಿಡುಗಡೆ

    ಮೇ 31ರಂದು ‘ಸುವರ್ಣ ಸುಂದರಿ’ ಬಿಡುಗಡೆ

    ಎಸ್.ಟೀಂ ಪಿಕ್ಚರ್ಸ್ ಲಾಂಛನದಲ್ಲಿ ಎಂ.ಎಲ್ ಲಕ್ಷ್ಮೀ ನಿರ್ಮಿಸುತ್ತಿರುವ ನ್ಯಾಚುರಲ್, ಥ್ರಿಲ್ಲರ್ ಜಾನರ್ ನ ಹೊಸಬರ ಸಿನಿಮಾ ಸುವರ್ಣ ಸುಂದರಿ. ಚರಿತ್ರೆ ಭವಿಷ್ಯತ್ತನ್ನು ಹಿಂಬಾಲಿಸುತ್ತದೆ ಎಂಬ ಅಡಿ ಬರಹವನ್ನು ಸುವರ್ಣ ಸುಂದರಿ ಹೊಂದಿದೆ. ಈ ಸಿನಿಮಾವನ್ನು ಎಂ.ಎಸ್.ಎನ್ ಸೂರ್ಯ ನಿರ್ದೇಶನ ಮಾಡುತ್ತಿದ್ದು, ಇದೇ ಮೇ 31ರಂದು ಸಿನಿಮಾ ರಿಲೀಸ್ ಆಗಲಿದೆ.

    ಇತ್ತೀಚಿಗೆ ಸುವರ್ಣ ಸುಂದರಿ ಚಿತ್ರತಂಡ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಡೈರೆಕ್ಟರ್ ಸೂರ್ಯ ಮಾತಾಡುತ್ತಾ, ಸುವರ್ಣಸುಂದರಿ ಚಿತ್ರದಲ್ಲಿ ವಿಎಫ್‍ಎಕ್ಸ್ ಗಾಗಿ ಒಂದು ವರ್ಷದವರೆಗೂ ಕೆಲಸ ನಡೆಯಿತು. ಟೈಂ ತೆಗೆದುಕೊಂಡರು. ಔಟ್ ಪುಟ್ ಅದ್ಭುತವಾಗಿ ಬಂದಿದೆ. ಈಗಿನ ಕನ್ನಡ ಚಿತ್ರಗಳಲ್ಲಿ ಸ್ಕ್ರೀನ್ ಪ್ಲೇ ಬೇಸ್ಡ್ ಚಿತ್ರಗಳಲ್ಲಿ ಒಳ್ಳೆಯ ಪ್ರಶಂಸೆಗಳಿವೆ. ಅದೇ ರೀತಿಯಲ್ಲಿ ಸುವರ್ಣಸುಂದರಿ ಮೂರು ಜನ್ಮಗಳ ಕಾನ್ಸೆಪ್ಟ್ ನಿಂದ ಇಂಟ್ರೆಸ್ಟಿಂಗ್ ಸ್ಕ್ರೀನ್ ಪ್ಲೇಯೊಂದಿಗೆ ಮಾಡಿದ್ದೇವೆ. ಪ್ರೇಕ್ಷಕರನ್ನು ಆಕರ್ಷಿಸುವುದರೊಂದಿಗೆ ಕಮರ್ಷಿಯಲ್ ಆಗಿ ಪಕ್ಕಾ ಹಿಟ್ ಆಗಬಹುದೆಂಬ ನಂಬಿಕೆಯಲ್ಲಿದ್ದೇವೆ ಎಂದಿದ್ದಾರೆ.

    ನಿರ್ಮಾಪಕಿ ಲಕ್ಷ್ಮೀ ಮಾತನಾಡಿ, ಸುವರ್ಣ ಸುಂದರಿ ಚಿತ್ರದ ಟ್ರೇಲರ್ ಸಾಧಾರಣ ಪ್ರೇಕ್ಷಕರಿಂದ ಹಿಡಿದು ಸೆಲೆಬ್ರೆಟಿಗಳವರೆಗೂ ಎಲ್ಲರಿಗೂ ಇಷ್ಟವಾಗಿದೆ. ಬಜೆಟ್ ಹೆಚ್ಚಾದರೂ ಕ್ವಾಲಿಟಿ ಔಟ್ ಪುಟ್ ನೋಡಿದ ಮೇಲೆ ಸಿನಿಮಾ ಗೆಲ್ಲುವುದರ ಬಗ್ಗೆ ತುಂಬಾ ಕಾನ್ಫಿಡೆಂಟ್ ಆಗಿ ಇದ್ದೀವಿ. ಶೀಘ್ರದಲ್ಲಿ ಧ್ವನಿ ಸುರುಳಿ ಬಿಡುಗಡೆ ಮಾಡಿ ಮೇ 31ರಂದು ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ ಎಂದರು.

    ಸುವರ್ಣ ಸುಂದರಿಯಲ್ಲಿ ಜಯಪ್ರದ, ಪೂರ್ಣ, ಸಾಕ್ಷಿ, ಇಂದ್ರ, ರಾಮ್ ಮುದ್ದು ಕುಮಾರಿ, ಸಾಯಿ ಕುಮಾರ್, ತಿಲಕ್, ಅವಿನಾಶ್, ಜಯ ಜಗದೀಶ್, ಸತ್ಯ ಪ್ರಕಾಶ್ ಇನ್ನಿತರರು ನಿಟಿಸಿದ್ದಾರೆ. ಸಾಯಿ ಕಾರ್ತಿಕ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದ್ದು, ರಾಮ ಸುಂಕರ ಸಾಹಸ ಸಂಯೋಜನೆಯನ್ನು ಮಾಡುತ್ತಿದ್ದಾರೆ. ಯುವ ಮಹಂತಿ ಛಾಯಾಗ್ರಹಣ, ನಾಗು ಕಲಾ ನಿರ್ದೇಶನ, ಪ್ರವೀಣ್ ಪುಡಿ ಸಂಕಲನ ಈ ಚಿತ್ರಕ್ಕಿದೆ.

  • ನಾಲ್ಕು ತಲೆಮಾರಿನ ಕಥನ ‘ಸುವರ್ಣ ಸುಂದರಿ’!

    ನಾಲ್ಕು ತಲೆಮಾರಿನ ಕಥನ ‘ಸುವರ್ಣ ಸುಂದರಿ’!

    ಎರಡು ವರ್ಷದ ಹಿಂದೆ ಮುಹೂರ್ತ ಆಚರಿಸಿಕೊಂಡಿದ್ದ ‘ಸುವರ್ಣ ಸುಂದರಿ’ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. ಕ್ರಿ.ಶ. 1508 ರಿಂದ 2018ರವರೆಗಿನ ನಾಲ್ಕು ತಲೆಮಾರಿನ ಕತೆ ಈ ಚಿತ್ರದಲ್ಲಿದೆ. ಶ್ರೀ ಕೃಷ್ಣದೇವರಾಯರ ಅವಧಿಯಲ್ಲಿ ರಾಜಾ ಮಹಾದೇವರೆಡ್ಡಿ ಸಾಮ್ರಾಜ್ಯದಲ್ಲಿ ನಡೆದ ಘಟನೆಗಳನ್ನು ಈ ಚಿತ್ರದ ಸನ್ನಿವೇಶಗಳಿಗೆ ವಿಶೇಷವಾಗಿ ಬಳಸಲಾಗಿದೆ.

    ಮೈ ನವಿರೇಳಿಸುವ ರೋಚಕ ಸ್ಟಂಟ್ಸ್ ಗಳು ಈ ಚಿತ್ರದಲ್ಲಿರಲಿವೆ. ಸುವರ್ಣ ಸುಂದರಿಗಾಗಿ ಕೇರಳ, ಹೈದರಾಬಾದ್, ಬೀದರ್, ವಿಧಾನಸೌಧ ರಸ್ತೆ, ನೈಸ್ ರೋಡ್‍ಗಳಲ್ಲಿ 90 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಕತೆಗೆ ಪೂರಕವಾಗಿ 50 ನಿಮಿಷ ಗ್ರಾಫಿಕ್ಸ್ ಬಳಸಲಾಗಿದೆ. ನಾಯಕಿಯಾಗಿ ಡೆಹರಾಡೂನ್ ಮೂಲದ ಸಾಕ್ಷಿ ಎರಡು ಗೆಟಪ್‍ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಾರಂಭದ ಅವಧಿಯಲ್ಲಿ ಸಾಯಿಕುಮಾರ್ ಪಾತ್ರವಿರುತ್ತದೆ. ಹಾಗೆಯೇ 1960ರ ಕಲೆಕ್ಟರ್ ಪಾತ್ರದಲ್ಲಿ ತಿಲಕ್ ನಟಿಸಿದ್ದಾರೆ. ಮತ್ತೊಬ್ಬ ನಾಯಕಿ ಪೂರ್ಣ ಮತ್ತು ಜಯಪ್ರದಾ ಪಾತ್ರದ ವಿವರವನ್ನು ಚಿತ್ರತಂಡ ಇನ್ನೂ ಜಾಹೀರು ಮಾಡಿಲ್ಲ. ಈ ಚಿತ್ರದಲ್ಲಿರುವ ಎರಡು ಹಾಡುಗಳಿಗೆ ಸಾಯಿಕಾರ್ತಿಕ್ ಸಂಗೀತ ಸಂಯೋಜಿಸಿದ್ದಾರೆ.

    ಇತಿಹಾಸ ವಿಷಯದಲ್ಲಿ ಪದವಿ ಪಡೆದುಕೊಂಡಿರುವ ಎಂ.ಎಸ್.ಎನ್.ಸೂರ್ಯ ಕತೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಅವರ ಸಹೋದರಿ ನಿರ್ಮಾಪಕಿಯಾಗಿದ್ದಾರೆ. ಬಾಹುಬಲಿ-2 ಚಿತ್ರದ ಸೆಕೆಂಡ್ ಕ್ಯಾಮರಾಮೆನ್ ಯಲ್ಲಮಹಂತಿ ಈಶ್ವರ್ ಛಾಯಾಗ್ರಹಣವಿದ್ದು, ರಾಮ್ ಸುಂಕರ ಸಾಹಸ ಸಂಯೋಜಿಸಿದ್ದಾರೆ.

    ಅನುಷ್ಕಾ ಶೆಟ್ಟಿ ಅಭಿನಯದ ಆರುಂಧತಿ ನಿರ್ಮಾಣದ ಸಂದರ್ಭದಲ್ಲಿ ತಂತ್ರಜ್ಞಾನ ಈಗಿನಷ್ಟು ಮುಂದುವರಿದಿರಲಿಲ್ಲ. ಆದರೆ ಸುವರ್ಣ ಸುಂದರಿಗೆ ಈಗಿನ ಅಪ್‍ಡೇಟೆಡ್ ಟೆಕ್ನಾಲಜಿಯನ್ನು ಬಳಸಿಕೊಂಡಿರುವುದರಿಂದ ದೃಶ್ಯಗಳು ಮತ್ತಷ್ಟು ನೈಜವಾಗಿ ಮೂಡಿಬಂದಿವೆ. ಇದೆಲ್ಲದರ ಪರಿಣಾಮವೆನ್ನುವಂತೆ ಆರು ಕೋಟಿಯಲ್ಲಿ ನಿರ್ಮಾಣಗೊಳ್ಳಬೇಕಿದ್ದ ಸುವರ್ಣ ಸುಂದರಿ ಪ್ರಚಾರದ ಹಂತಕ್ಕೆ ಬರುವ ಹೊತ್ತಿಗೆ ಹತ್ತು ಕೋಟಿಗೆ ಬಂದು ನಿಂತಿದೆಯಂತೆ. ಆದರೂ ಇದಕ್ಕೆಲ್ಲಾ ಚಿಂತೆ ಮಾಡದೆ ಎಂ.ಎನ್.ಲಕ್ಷೀ ಖರ್ಚು ಮಾಡಿದ್ದಾರೆ. ಈ ಚಿತ್ರವು ಇದೇ 31ರಂದು ರಾಜ್ಯದ್ಯಂತ ತೆರೆ ಕಾಣುವ ಸಾಧ್ಯತೆ ಇದೆ.

  • ಸುವರ್ಣ ಸುಂದರಿ ಟ್ರೈಲರ್ ಜ.19ಕ್ಕೆ ರಿಲೀಸ್

    ಸುವರ್ಣ ಸುಂದರಿ ಟ್ರೈಲರ್ ಜ.19ಕ್ಕೆ ರಿಲೀಸ್

    ಬೆಂಗಳೂರು: ಬಾಹುಬಲಿ ಚಿತ್ರ ನೋಡಿ ಅದರ ಅದ್ಧೂರಿತನಕ್ಕೆ ಮಾರು ಹೋಗದವರಿಲ್ಲ. ಆದರೀಗ ಅಂಥಾದ್ದೇ ಗುಣಲಕ್ಷಣ ಹೊಂದಿರೋ ಅಪ್ಪಟ ಕನ್ನಡ ಚಿತ್ರವೊಂದನ್ನು ನೋಡೋ ಭಾಗ್ಯ ಕನ್ನಡದ ಪ್ರೇಕ್ಷಕರಿಗೆ ಒದಗಿ ಬಂದಿದೆ. ಅದಕ್ಕೆ ಕಾರಣವಾಗಿರೋದು ಎಸ್ ಟೀಮ್ ಪಿಕ್ಚರ್ಸ್ ಲಾಂಛನದಡಿಯಲ್ಲಿ ತಯಾರಾಗಿರುವ ‘ಸುವರ್ಣ ಸುಂದರಿ’ ಚಿತ್ರ. ಇದೀಗ ಈ ಚಿತ್ರದ ಟ್ರೈಲರ್ ಬಿಡುಗಡೆಗೆ ಮಹೂರ್ತ ಫಿಕ್ಸಾಗಿದೆ.

    ಇದೇ 19ನೇ ತಾರೀಕಿನ ಶನಿವಾರದಂದು ಸುವರ್ಣ ಸುಂದರಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಲಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಒಂದು ಟ್ರೈಲರ್ ಮತ್ತು ಪೋಸ್ಟರ್ ಗಳೇ ಜನಮನ ಸೆಳೆದಿದ್ದವು. ಇದೀಗ ಪ್ರೇಕ್ಷಕರಿಗೆ ಎರಡನೇ ಟ್ರೈಲರ್ ನೋಡೋ ಅವಕಾಶ ಸಿಗಲಿದೆ. ಸೂರ್ಯ ನಿರ್ದೇಶನದ ಈ ಚಿತ್ರ ನಾಲ್ಕು ಕಾಲಮಾನಗಳ ವಿಶಿಷ್ಟವಾದ ಕಥಾ ಹಂದರ ಹೊಂದಿದೆ.

    ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಸುತ್ತಾಡಿ ಇಂದಿನ ಕಾಲಮಾನದವರೆಗೆ ಪ್ರಯಾಣ ಬೆಳೆಸೋ ಕಥೆ ಹೊಂದಿರುವ ಈ ಚಿತ್ರ ಸೂಕ್ಷ್ಮವಾಗಿ ಪುನರ್ಜನ್ಮದ ಕಥನವನ್ನೂ ಹೊಂದಿದೆ. ಎಸ್ ಟೀಮ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರದ ಬಗೆಗೀಗ ತೆಲುಗು ಮತ್ತು ಕನ್ನಡದಲ್ಲಿ ಬಾಹುಬಲಿಯಂಥಾದ್ದೇ ಭಾರೀ ನಿರೀಕ್ಷೆ ಮೂಡಿಕೊಳ್ಳಲು ಸಾಕಷ್ಟು ಕಾರಣಗಳಿವೆ!

    ಬಾಹುಬಲಿ ಚಿತ್ರ ಜನಮನ ಸೂರೆಗೊಂಡಿದ್ದಕ್ಕೆ ಅದರಲ್ಲಿನ ಗ್ರಾಫಿಕ್ಸ್ ಕೈಚಳಕವೂ ಮೂಲ ಕಾರಣ. ಆದರೆ ಕನ್ನಡದಂಥಾ ಸೀಮಿತ ಮಾರುಕಟ್ಟೆಯಿರೋ ಚಿತ್ರರಂಗದಲ್ಲಿ ಅಂಥಾ ಅದ್ಧೂರಿ ಚಿತ್ರ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂಬಂಥಾ ವಾತಾವರಣವಿತ್ತು. ಆದರೆ ಸುವರ್ಣ ಸುಂದರಿ ಚಿತ್ರ ಅದನ್ನು ಸುಳ್ಳು ಮಾಡಿದೆ ಎಂಬುದು ಚಿತ್ರತಂಡದ ಖಚಿತ ಅಭಿಪ್ರಾಯ. ಯಾಕೆಂದರೆ ಈ ಚಿತ್ರದಲ್ಲಿಯೂ ಶೇಕಡಾ ನಲವತ್ತರಷ್ಟು ಭಾಗ ಅದ್ಭುತವಾದ ಗ್ರಾಫಿಕ್ಸ್ ನಿಂದ ತುಂಬಿದೆ. ಎಲ್ಲಿಯೂ ಅಸಹಜ ಅನ್ನಿಸದಂತೆ ಇದನ್ನು ಕ್ರಿಯೇಟ್ ಮಾಡಲು ಕೋಟಿ ಕೋಟಿ ಖರ್ಚು ಮಾಡಲಾಗಿದೆ.

    ಬಾಹುಬಲಿ ಚಿತ್ರಕ್ಕೆ ಸಿಜಿ ವರ್ಕ್ ಮಾಡಿದ್ದ ತಂತ್ರಜ್ಞರೇ ಈ ಚಿತ್ರಕ್ಕೆ 45 ನಿಮಿಷಗಳ ಸಿಜಿ ವರ್ಕ್ ಮಾಡಿದ್ದಾರಂತೆ. ಪೂರ್ಣ, ಸಾಕ್ಷಿ, ತಿಲಕ್, ಸಾಯಿ ಕುಮಾರ್, ಜೈ ಜಗದೀಶ್, ರಾಮ್, ಅವಿನಾಶ್, ಇಂದಿರಾ, ಸತ್ಯಪ್ರಕಾಶ್ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ.

    https://www.youtube.com/watch?time_continue=18&v=cbbnvnvU00I

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುವರ್ಣ ಸುಂದರಿಯಾಗಿ ಬಂದರು ಜಯಪ್ರದಾ!

    ಸುವರ್ಣ ಸುಂದರಿಯಾಗಿ ಬಂದರು ಜಯಪ್ರದಾ!

    ಬಾಹುಬಲಿ ಚಿತ್ರದ ನಂತರ ಅದರಂಥಾದ್ದೇ ಗ್ರಾಫಿಕ್ಸ್ ಅದ್ಧೂರಿತನದೊಂದಿಗೆ ಬಿಡುಗಡೆಯ ಹೊಸ್ತಿಲಲ್ಲಿರುವ ಚಿತ್ರ `ಸುವರ್ಣ ಸುಂದರಿ’. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲದಲ್ಲಿ ನಿರ್ಮಾಣಗೊಂಡಿರೋ ಈ ಭರ್ಜರಿ ಬಜೆಟ್ಟಿನ ಚಿತ್ರದ ಮೂಲಕ ಬಹುಭಾಷಾ ತಾರೆ ಜಯಪ್ರದಾ ಕನ್ನಡಕ್ಕೆ ಮತ್ತೆ ಮರಳಿದ್ದಾರೆ!

    ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಸುತ್ತಾಡಿ ಇಂದಿನ ಕಾಲಮಾನದವರೆಗೆ ಪ್ರಯಾಣ ಬೆಳೆಸೋ ಕಥೆ ಹೊಂದಿರುವ ಈ ಚಿತ್ರ ಸೂಕ್ಷ್ಮವಾಗಿ ಪುನರ್ಜನ್ಮದ ಕಥನವನ್ನೂ ಹೊಂದಿದೆ. ಎಸ್ ಟೀಮ್ ಲಾಂಛನದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರದ ಬಗೆಗೀಗ ತೆಲುಗು ಮತ್ತು ಕನ್ನಡದಲ್ಲಿ ಬಾಹುಬಲಿಯಂಥಾದ್ದೇ ಭಾರೀ ನಿರೀಕ್ಷೆ ಮೂಡಿಕೊಳ್ಳಲು ಸಾಕಷ್ಟು ಕಾರಣಗಳಿವೆ!

    ಬಾಹುಬಲಿ ಚಿತ್ರ ಜನಮನ ಸೂರೆಗೊಂಡಿದ್ದಕ್ಕೆ ಅದರಲ್ಲಿನ ಗ್ರಾಫಿಕ್ಸ್ ಕೈಚಳಕವೂ ಮೂಲ ಕಾರಣ. ಆದರೆ ಕನ್ನಡದಂಥಾ ಸೀಮಿತ ಮಾರುಕಟ್ಟೆಯಿರೋ ಚಿತ್ರರಂಗದಲ್ಲಿ ಅಂಥಾ ಅದ್ಧೂರಿ ಚಿತ್ರ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂಬಂಥಾ ವಾತಾವರಣವಿತ್ತು. ಆದರೆ ಸುವರ್ಣ ಸುಂದರಿ ಚಿತ್ರ ಅದನ್ನು ಸುಳ್ಳು ಮಾಡಿದೆ ಎಂಬುದು ಚಿತ್ರತಂಡದ ಖಚಿತ ಅಭಿಪ್ರಾಯ. ಯಾಕೆಂದರೆ ಈ ಚಿತ್ರದಲ್ಲಿಯೂ ಶೇಕಡಾ ನಲವತ್ತರಷ್ಟು ಭಾಗ ಅದ್ಭುತವಾದ ಗ್ರಾಫಿಕ್ಸ್ ನಿಂದ ತುಂಬಿದೆ. ಎಲ್ಲಿಯೂ ಅಸಹಜ ಅನ್ನಿಸದಂತೆ ಇದನ್ನು ಕ್ರಿಯೇಟ್ ಮಾಡಲು ಕೋಟಿ ಕೋಟಿ ಖರ್ಚು ಮಾಡಲಾಗಿದೆ.

    ಈಗಾಗಲೇ ಈ ಚಿತ್ರದ ಮೋಷನ್ ಪೋಸ್ಟರನ್ನು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರು ಬಿಡುಗಡೆ ಮಾಡಿದ್ದಾರೆ. ಶಿವಣ್ಣ ಬಿಡುಗಡೆ ಮಾಡಿರುವ ಮೋಷನ್ ಪೋಸ್ಟರ್ ಸುವರ್ಣ ಸುಂದರಿಯ ಅಸಲೀ ಅದ್ಧೂರಿತನವನ್ನು ಧ್ವನಿಸುವಂತಿದೆ. ಟೀಸರ್ ಮತ್ತು ಟ್ರೈಲರ್ ಗಳನ್ನು ಸಿದ್ಧಪಡಿಸುವ ಕೆಲಸ ಭರದಿಂದ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಅದೂ ಕೂಡಾ ಬಿಡುಗಡೆಯಾಗಲಿದೆ. ಈ ಚಿತ್ರದ ಮೂಲಕವೇ ತುಂಬಾ ವರ್ಷಗಳ ನಂತರ ಜಯಪ್ರದಾ ಅವರು ಕನ್ನಡ ಚಿತ್ರರಂಗಕ್ಕೆ ಮರಳಿದ್ದಾರೆ. ಡಾ.ರಾಜ್‍ಕುಮಾರ್ ಅವರಿಗೆ ಜೋಡಿಯಾಗಿ ನಟಿಸುತ್ತಲೇ ಕನ್ನಡದ ಪ್ರೇಕ್ಷಕರನ್ನು ಆವರಿಸಿಕೊಂಡಿದ್ದವರು ಜಯಪ್ರದಾ. ಕವಿರತ್ನ ಕಾಳಿದಾಸ ಚಿತ್ರದಲ್ಲಿನ ಅವರ ಮೋಹಕ ಅಭಿನಯವನ್ನು ಯಾರೂ ಮರೆಯಲು ಸಾಧ್ಯವೇ ಇಲ್ಲ.

    ಹಾಗೆ ಕನ್ನಡದಲ್ಲಿಯೂ ಅಪಾರ ಅಭಿಮಾನಿಗಳನ್ನು ಹೊಂದಿರುವ ಜಯಪ್ರದಾ ಭಿನ್ನವಾದ ಮುಖ್ಯ ಪಾತ್ರದಲ್ಲಿ ಸುವರ್ಣ ಸುಂದರಿ ಸಿನಿಮಾದ ಮೂಲಕ ಮತ್ತೆ ಬಂದಿದ್ದಾರೆ. ರಿಯಲ್ ಆಗಿಯೂ ಎವರ್ ಗ್ರೀನ್ ಸುಂದರಿಯಾಗಿರುವ ಜಯಪ್ರದಾ ಈ ಚಿತ್ರದ ಮುಖ್ಯ ಆಕರ್ಷಣೆ. ಈ ಚಿತ್ರಕ್ಕೆ ತೆಲುಗು ಸಿನಿಮಾಗಳಿಗೆ ಕಥೆಯ ರಚನೆಯಲ್ಲಿ ಅನುಭವ ಪಡೆದಿರುವ ಎಂ ಎಸ್ ಎನ್ ಸೂರ್ಯ ಕಥೆ ಬರೆದು ನಿರ್ದೇಶಿಸಿದ್ದಾರೆ. ಸರಿಸುಮಾರು ನಲವತ್ತು ಭಾಗದಷ್ಟು ಅದ್ಧೂರಿ ಫ್ಲಾಷ್ ಬ್ಯಾಕ್‍ನೊಂದಿಗೆ ಅದ್ಭುತ ಗ್ರಾಫಿಕ್ಸ್ ತಂತ್ರಜ್ಞಾನ ಅಳವಡಿಸಿಕೊಂಡಿರುವ ಈ ಚಿತ್ರದಲ್ಲಿ ರಾಮ್, ಸಾಕ್ಷಿ, ಪೂರ್ಣ, ಡಾ ಜಯಪ್ರದಾ, ಮಹಮ್ಮದ್ ಖಾನ್, ಸಾಯಿಕುಮಾರ್, ಅವಿನಾಶ್ ಮತ್ತಿತರರು ನಟಿಸಿದ್ದಾರೆ. ಸಾಯಿ ಕಾರ್ತಿಕ್ ಅವರ ಸಂಗೀತ, ಯಲ್ಲುಮಹಂತಿ ಈಶ್ವರ್ ಅವರ ಛಾಯಾಗ್ರಹಣ, ಎಸ್ ಟೀಮ್ ನಿರ್ಮಾಣ, ಪ್ರವೀಣ್ ಪುಡಿ ಸಂಕಲನ ಈ ಚಿತ್ರಕ್ಕಿದೆ. ಎಂ.ಎಲ್ ಲಕ್ಷ್ಮಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv