Tag: ಸುಶೀಲ್ ಮೋದಿ

  • 2,000 ರೂ. ಮುಖಬೆಲೆಯ ನೋಟುಗಳನ್ನ ಬ್ಯಾನ್ ಮಾಡಿ – BJP ಸಂಸದ ಸುಶೀಲ್ ಮೋದಿ ಆಗ್ರಹ

    2,000 ರೂ. ಮುಖಬೆಲೆಯ ನೋಟುಗಳನ್ನ ಬ್ಯಾನ್ ಮಾಡಿ – BJP ಸಂಸದ ಸುಶೀಲ್ ಮೋದಿ ಆಗ್ರಹ

    ನವದೆಹಲಿ: 2000 ರೂ. ಮುಖಬೆಲೆಯ ನೋಟುಗಳನ್ನು (2000 Indian Currency) ಹಿಂಪಡೆಯುವಂತೆ ಬಿಜೆಪಿ (BJP) ಸಂಸದ ಸುಶೀಲ್ ಮೋದಿ (Sushil Modi) ಸಂಸತ್ತಿನಲ್ಲಿ ಆಗ್ರಹಿಸಿದ್ದರೆ.

    ರಾಜ್ಯಸಭೆಯ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, 2000 ರೂ. ಮುಖಬೆಲೆಯ ನೋಟುಗಳು ದೇಶದ ಬಹುತೇಕ ಎಟಿಎಂಗಳಿಂದ ಕಣ್ಮರೆಯಾಗಿವೆ. ಸದ್ಯದಲ್ಲೇ ಅವು ಚಲಾವಣೆ ಕಳೆದುಕೊಳ್ಳಲಿವೆ ಎಂಬ ವದಂತಿಯೂ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ, ಶ್ರೀಲಂಕಾ, ಮಾರಿಷಸ್‌ ಜೊತೆ ಕ್ಲಿಕ್‌ – ಮತ್ತಷ್ಟು ದೇಶಗಳೊಂದಿಗೆ ರುಪಿ ವ್ಯವಹಾರಕ್ಕೆ ಮುಂದಾದ ಭಾರತ

    ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಳೆದ 3 ವರ್ಷಗಳಿಂದ 2000 ರೂ. ಮುಖಬೆಲೆಯ ನೋಟುಗಳನ್ನು ಮುದ್ರಿಸೋದನ್ನೇ ನಿಲ್ಲಿಸಿದೆ. ಈ ನೋಟುಗಳು ಭಯೋತ್ಪಾದಕ ನಿಧಿ (Terror Funding), ಮಾದಕವಸ್ತು ಕಳ್ಳಸಾಗಣೆ ಮತ್ತು ಕಪ್ಪುಹಣಕ್ಕೆ ಬಳಕೆಯಾಗುತ್ತಿದೆ ಎಂಬ ಮಾಹಿತಿ ಇದೆ. ಈ ಎಲ್ಲ ವಿಷಯಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: 

    ಯುಎಸ್ (US), ಚೀನಾ, ಜರ್ಮನಿ, ಜಪಾನ್‌ನಂತಹ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಆರ್ಥಿಕತೆ ನೋಡಿದ್ರೆ, ಅವರ ಬಳಿ 100ಕ್ಕಿಂತ ಹೆಚ್ಚಿನ ಮುಖಬೆಲೆಯ ಕರೆನ್ಸಿಗಳಿಲ್ಲ. ಆದ್ದರಿಂದ ಕೇಂದ್ರ ಸರ್ಕಾರ ಯೋಚಿಸಿ 2000 ರೂ. ಮುಖಬೆಲೆಯ ನೋಟುಗಳನ್ನು ಹಂತ ಹಂತವಾಗಿ ನಿಷೇಧಿಸಬೇಕು. ಕಪ್ಪುಹಣಕ್ಕೆ ಕಡಿವಾಣ ಹಾಕಲು ಈ ಮುಖಬೆಲೆ ನೋಟು ಚಲಾವಣೆಯನ್ನು ನಿಲ್ಲಿಸಬೇಕು. ನೋಟು ವಿನಿಮಯ ಮಾಡಿಕೊಳ್ಳಲು ಜನರಿಗೆ 2 ವರ್ಷ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಿತೀಶ್ ಕುಮಾರ್ ಕೊರಳಿಗೆ ಬಿ’ಹಾರ’ – ಸೋಮವಾರ ಪದಗ್ರಹಣ

    ನಿತೀಶ್ ಕುಮಾರ್ ಕೊರಳಿಗೆ ಬಿ’ಹಾರ’ – ಸೋಮವಾರ ಪದಗ್ರಹಣ

    – ನಾಳೆ 7ನೇ ಬಾರಿ ಸಿಎಂ ಆಗಿ ನಿತೀಶ್ ಪ್ರಮಾಣ ವಚನ ಸ್ವೀಕಾರ

    ಪಾಟ್ನಾ: ನಿತೀಶ್ ಕುಮಾರ್ ಮತ್ತೊಮ್ಮೆ ಬಿಹಾರದ ಸಿಎಂ ಪಟ್ಟವನ್ನೇರಲಿದ್ದಾರೆ. ಇಂದು ನಡೆದ ಎನ್‍ಡಿಎ ಕೂಟದ ಸಭೆಯಲ್ಲಿ ಶಾಸಕಾಂಗ ಸಭೆಯ ನಾಯಕ ಮತ್ತು ಸಿಎಂ ಆಗಿ ನಿತೀಶ್ ಕುಮಾರ್ ಅವರನ್ನ ಆಯ್ಕೆ ಮಾಡಲಾಗಿದೆ.

    ಸೋಮವಾರ ಸಂಜೆ 4 ಗಂಟೆಗೆ ರಾಜಭವನದಲ್ಲಿ ನಿತೀಶ್ ಕುಮಾರ್ ಏಳನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಹಾರ ಚುನಾವಣೆ ಫಲಿತಾಂಶದ ಬಳಿಕ ಜೆಡಿಯುಗಿಂದ ಬಿಜೆಪಿ ಹೆಚ್ಚು ಸ್ಥಾನದಲ್ಲಿ ಜಯಭೇರಿ ಬಾರಿಸಿದ್ದರಿಂದ ಸಿಎಂ ಯಾರಾಗ್ತಾರೆ ಅನ್ನೋದರ ಬಗ್ಗೆ ತೀವ್ರ ಕುತೂಹಲ ಉಂಟಾಗಿತ್ತು.

    ಇಂದು ನಡೆದ ಬೈಟೆಕ್ ನಲ್ಲಿ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್, ಬಿಹಾರ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಮತ್ತು ಬಿಹಾರ ಬಿಜೆಪಿ ಪ್ರಮುಖ ಭೂಪೇಂದ್ರ ಯಾದವ್ ಉಪಸ್ಥಿತರಿದ್ದರು. ಆದ್ರೆ ಉಪ ಮುಖ್ಯಮಂತ್ರಿ ಹೆಸರನ್ನ ಎನ್‍ಡಿಎ ಘೋಷಣೆ ಮಾಡಿಲ್ಲ.

    ಉಪಮುಖ್ಯಮಂತ್ರಿ ರೇಸ್ ನಲ್ಲಿ ಸುಶೀಲ್ ಮೋದಿ ಹೆಸರು ಮುನ್ನಲೆಗೆ ಬಂದಿತ್ತು. ಆದ್ರೆ ಈ ಬಗ್ಗೆ ಬಿಜೆಪಿ ನಿರ್ಣಯ ತೆಗೆದುಕೊಂಡಿಲ್ಲ. ಬದಲಾಗಿ ಸುಶೀಲ್ ಮೋದಿ ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಲು ಬಿಜೆಪಿ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಬೈಟೆಕ್ ಬಳಿಕ ರಾಜ್ಯಪಾಲ ಫಾಗೂ ಚೌಹಾಣ್ ಅವರನ್ನ ಭೇಟಿಯಾಗಿರುವ ನಿತೀಶ್ ಕುಮಾರ್ ಸರ್ಕಾರ ರಚನೆಯ ಅನುಮತಿ ಕೇಳಿದ್ದಾರೆ.

    ಬಿಹಾರ ಚುನಾವಣೆ ಫಲಿತಾಂಶ: 50:50 ಅನುಪಾತದಲ್ಲಿ ಚುನಾವಣೆ ಪೂರ್ವ ಮೈತ್ರಿ ಮಾಡಿಕೊಂಡಿದ್ದ ನಿತೀಶ್ ಕುಮಾರ್ ಕೇವಲ 43 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದಾರೆ. ಬಿಜೆಪಿ 74ರಲ್ಲಿ ವಿಜಯ ಪತಾಕೆ ಹಾರಿಸಿದ್ದು, ಎನ್‍ಡಿಎ ಕೂಟದ ವಿಐಪಿ ಮತ್ತು ಹೆಚ್‍ಎಎಂ ತಲಾ ನಾಲ್ಕರಲ್ಲಿ ಗೆದ್ದಿವೆ. 243ರ ಪೈಕಿ ಎನ್‍ಡಿಎ 125 ಸ್ಥಾನಗಳನ್ನ ಗೆಲ್ಲುವ ಮೂಲಕ ಬಹುಮತವನ್ನ ಪಡೆದುಕೊಂಡಿದೆ.

    ಮಹಾಘಟಬಂಧನದ ಆರ್ ಜೆಡಿ 75, ಕಾಂಗ್ರೆಸ್ 19, ಸಿಪಿಐ ಎಂಎಲ್ 12, ಸಿಪಿಐ ಮತ್ತು ಸಿಪಿಎಂ ತಲಾ ಎರಡರಲ್ಲಿ ಗೆದ್ದಿವೆ. ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ 5 ಮತ್ತು ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‍ಜೆಪಿ ಒಂದು ಕ್ಷೇತ್ರದಲ್ಲಿ ಗೆದ್ದಿದೆ.

  • ಎಲ್ಲ ಮೋದಿಗಳು ಕಳ್ಳರು ಎಂದ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕ್ತೀನಿ: ಸುಶೀಲ್ ಮೋದಿ

    ಎಲ್ಲ ಮೋದಿಗಳು ಕಳ್ಳರು ಎಂದ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕ್ತೀನಿ: ಸುಶೀಲ್ ಮೋದಿ

    ಪಾಟ್ನಾ: ಎಲ್ಲಾ ಕಳ್ಳರು ಮೋದಿಗಳೇ ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಬಿಹಾರದ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಹೇಳಿದ್ದಾರೆ.

    ಬಿಹಾರದ ಪಾಟ್ನಾದಲ್ಲಿ ಮಾತನಾಡಿದ ಅವರು, ಮೋದಿ ಉಪನಾಮ (ಅಡ್ಡ ಹೆಸರು) ಹೊಂದುವುದು ತಪ್ಪೇ? ರಾಹುಲ್ ಗಾಂಧಿ ಅವರು ಕೋಟ್ಯಂತರ ಜನರಿಗೆ ಚೋರ್ ಎಂದು ಕರೆದಿದ್ದಾರೆ ಹಾಗೂ ಅವರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಅವರ ವಿರುದ್ಧ ಪಾಟ್ನಾ ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ತಿಳಿಸಿದರು.

    ರಾಹುಲ್ ಗಾಂಧಿ ಹೇಳಿದ್ದೇನು?:
    ಮಹಾರಾಷ್ಟ್ರದ ನಾಂದೇಡ್‍ನಲ್ಲಿ ನಡೆದಿದ್ದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು, ವಜ್ರ ವ್ಯಾಪಾರಿ ನೀರವ್ ಮೋದಿ, ಉದ್ಯಮಿ ಲಲಿತ್ ಮೋದಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಎಲ್ಲರ ಕೊನೆಯಲ್ಲಿ ಮೋದಿ ಅಂತ ಇದೆ. ಎಲ್ಲ ಕಳ್ಳರ ಹೆಸರಿನಲ್ಲಿ ಮೋದಿ ಸಾಮಾನ್ಯ ಹೆಸರಾಗಿರುವುದು ಹೇಗೆ? ನನಗೆ ಒಂದು ಸಂಗತಿಯ ಬಗ್ಗೆ ಪ್ರತಿಕ್ರಿಯೆ ನೀಡಿ ಎಂದು ರಾಹುಲ್ ಗಾಂಧಿ ಹೇಳಿದ್ದರು.