Tag: ಸುಶ್ಮಿತಾ

  • ತೆರೆಯ ಮೇಲೆಯೂ ಜಗಪ್ಪ- ಸುಶ್ಮಿತಾ ಜೋಡಿ

    ತೆರೆಯ ಮೇಲೆಯೂ ಜಗಪ್ಪ- ಸುಶ್ಮಿತಾ ಜೋಡಿ

    ಕಿರುತೆರೆ ಖ್ಯಾತಿಯ ಯುವಜೋಡಿ ಜಗ್ಗಪ್ಪ (Jaggappa), ಸುಶ್ಮಿತಾ (Sushmita) ಅಭಿನಯದ,  ವೇಂಪಲ್ಲಿ ಬಾವಾಜಿ  ಅವರ ನಿರ್ದೇಶನದ  ಆನ್‌ಲೈನ್ ಮದುವೆ, ಆಫ್‌ಲೈನ್ ಶೋಭನ ಚಿತ್ರದ ಟ್ರೈಲರ್ ಹಾಗೂ 2 ಹಾಡುಗಳ ಪ್ರದರ್ಶನ  ಇತ್ತೀಚೆಗೆ ನಡೆಯಿತು, ಆನ್ ಲೈನ್ ಆಪ್ ಮೂಲಕ ಜೊತೆಯಾದ ಯುವಜೋಡಿಯ ಸುತ್ತ ನಡೆಯುವ   ಹಾಸ್ಯಪ್ರದಾನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಅಪ್ಸರ ಮೂವೀಸ್ ಬ್ಯಾನರ್ ಅಡಿಯಲ್ಲಿ ವೇಂಪಲ್ಲಿ ಬಾವಾಜಿ (Vempalli Bawaji)  ಅವರೇ  ನಿರ್ಮಾಣ ಮಾಡಿದ್ದಾರೆ. ಜಗಪ್ಪ, ಸುಶ್ಮಿತ, ಸೀರುಂಡೆ ರಘು  ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

    ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ವೇಂಪಲ್ಲಿ ಬಾವಾಜಿ ಪೂರ್ಣ ಪ್ರಮಾಣದ ಎಂಟರ್‌ಟೈನರ್ ಕಥಾಹಂದರ ಈ ಚಿತ್ರದಲ್ಲಿದ್ದು, ಈ ಕಥೆಗೆ ಯಾರು ಸೂಟ್ ಆಗ್ತಾರೆ ಅಂತ ಹುಡುಕಿದಾಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಫೇಮಸ್ ಆಗಿದ್ದ ಜಗಪ್ಪ , ಸುಶ್ಮಿತಾ ಸಿಕ್ಕರು. ಇಡೀ ಚಿತ್ರದಲ್ಲಿ ನಗದೇ ಇರೋದಕ್ಕೆ ಗ್ಯಾಪ್ ಕೊಟ್ಟಿಲ್ಲ, ನಗದೇ ಇರುವವರಿಗೆ ಲಕ್ಷ ರೂಪಾಯಿ ಬಹುಮಾನ ಕೊಡುತ್ತೇವೆ. ಈ ಚಿತ್ರಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದ ಅತ್ತಿಬೆಲೆ ಸುತ್ತಮುತ್ತ  ಅಲ್ಲದೇ ಹಾಡುಗಳನ್ನು ಆನೇಕಲ್‌ನ ಸುಗ್ಗಿ ರೆಸಾರ್ಟ್ ಹಾಗೂ ಕೋರಮಂಗಲದ ಪಬ್‌ವೊಂದರಲ್ಲಿ  ಚಿತ್ರೀಕರಣ

    ನಡೆಸಿದ್ದೇವೆ. ಈಗಿನ ಯೂಥ್ ಎಲ್ಲದಕ್ಕೂ ಸೋಷಿಯಲ್ ಮೀಡಿಯಾ ನೋಡುತ್ತಾರೆ, ಅದೇರೀತಿ‌ ಇದ್ದ ನಾಯಕ ನಾಯಕಿ ಹೇಗೆ ಮದುವೆಯಾಗ್ತಾರೆ ಅಂತ ಸಿನಿಮಾದಲ್ಲಿ ಹೇಳಿದ್ದೇವೆ. ಮನರಂಜನೆಗಾಗಿ ಮಾಡಿದ ಚಿತ್ರವಿದು ಎಂದು ಹೇಳಿದರು, ನಂತರ ನಾಯಕಿ ಸುಶ್ಮಿತಾ ಮಾತನಾಡುತ್ತ ಆರಂಭದಲ್ಲಿ ಹಾಡು ಇದ್ದಿಲ್ಲ, ನಂತರ ಸೇರಿಸಲಾಯಿತು, ಆಡಂಬರ ಅಬ್ಬರ ಇಲ್ಲದ ಫ್ಯಾಮಿಲಿ ಸ್ಟೋರಿಯಿದು ಎಂದರು.

    ನಂತರ ನಾಯಕ ಜಗಪ್ಪ ಮಾತನಾಡಿ ಚಿತ್ರದಲ್ಲಿ ಎಲ್ಲ ಪಾತ್ರಗಳೂ ಲೀಡ್ ಆಗಿವೆ, ನಾನು ಮದುವೆಯಾಗಲು ಹುಡುಗಿಯನ್ನು ಹುಡುಕುತ್ತ ಇರುತ್ತೇನೆ, ಆಗ ಆನ್‌ಲೈನ್ ಆಪ್‌ನಲ್ಲಿ ಹುಡುಗಿಯಬ್ಬಳು ಸಿಗುತ್ತಾಳೆ.  ಗಂಡ ಹೆಂಡತಿಯ ಜಗಳದ ಡೈಲಾಗ್‌ಗಳು ಚೆನ್ನಾಗಿ ಬಂದಿವೆ ಎಂದು ಹೇಳಿದರು, ನಾಯಕಿಯ ಸಹೋದರನಾಗಿ ಕಾಣಿಸಿಕೊಂಡಿರುವ ಸೀರುಂಡೆ ರಘು ಮಾತನಾಡಿ ನಾವೆಲ್ಲ ರಿಯಾಲಿಟಿ ಶೋನಿಂದ ಬಂದವರು, ೮ ವರ್ಷಗಳಿಂದಲೂ ಸ್ನೇಹಿತರು ಎಂದು ಹೇಳಿಕೊಂಡರು. ಸಂಗೀತ ನಿರ್ದೇಶಕ ಅರುಣ್ ಪ್ರಸಾದ್ ಮಾತನಾಡುತ್ತ ಬಾವಾಜಿ ನನಗೆ ೮ ವರ್ಷಗಳಿಂದ ಸ್ನೇಹಿತರು, ಉತ್ತಮ ಕಾರ್ಟೂನಿಸ್ಟ್ ಕೂಡ, ಅಡ್ಜಸ್ಟ್ ಮಾಡ್ಕೊಳಿ ಸಾಂಗ್ ನಾನೇ ಬರೆದಿದ್ದೇನೆ ಎಂದು ಹೇಳಿದರು. ನಿರ್ಮಾಪಕ ಕುಮಾರ್ ಮಾತನಾಡಿ ಬಾವಾಜಿ ನನಗೆ ತುಂಬಾ ವರ್ಷಗಳ  ಸ್ನೇಹಿತರು, ಒಂದೊಳ್ಳೇ ಸಿನಿಮಾ ಮಾಡಿದ್ದೇವೆ ಎಂದು ಹೇಳಿದರು.

     

    ಜಗಪ್ಪ, ಸುಶ್ಮಿತ, ಸೀರುಂಡೆ ರಘು, ಗಜೇಂದ್ರ, ರಾಘವಿ ಸೇರಿದಂತೆ ಗಿಚ್ಚಿ ಗಿಲಿಗಿಲಿ, ಮಜಾಭಾರತ, ಕಾಮಿಡಿ ಕಿಲಾಡಿಗಳು, ಕಾರ್ಯಕ್ರಮದ ಅನೇಕ ಕಲಾವಿದರು ಅಲ್ಲದೆ ಯಶಸ್ವಿನಿ, ಚಂದನ, ಶರಣ್ಯರೆಡ್ಡಿ ಅಲ್ಲದೆ ಆಂಕರ್ ದಯಾನಂದ್ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಾಹಿತ್ಯ ಹಾಗೂ ಸಂಭಾಷಣೆಯನ್ನು ನಿರ್ದೇಶಕ ವೇಂಪಲ್ಲಿ ಬಾವಾಜೀ ಅವರೇ ಬರೆದಿದ್ದಾರೆ. ಬಾಲು ಅವರ ಕ್ಯಾಮೆರಾವರ್ಕ, ರೋಹಿತ್ ಅವರ ಸಂಕಲನ, ಅಲೆಕ್ಸ್ ಅವರ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಮಜಾಭಾರತ’ ಖ್ಯಾತಿಯ ಸುಶ್ಮಿತಾ-ಜಗಪ್ಪ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಮಜಾಭಾರತ’ ಖ್ಯಾತಿಯ ಸುಶ್ಮಿತಾ-ಜಗಪ್ಪ

    ‘ಮಜಾಭಾರತ’ (Majabharatha) ಖ್ಯಾತಿಯ ಸುಶ್ಮಿತಾ (Sushmitha) ಮತ್ತು ಜಗಪ್ಪ (Jagappa) ಜೋಡಿ ಇದೀಗ ಹಲವು ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಿದ್ದಾರೆ. ಕನ್ನಡ ಕಿರುತೆರೆಯ ಸೆಲೆಬ್ರಿಟಿಗಳ ದಂಡೇ ಸುಶ್ಮಿತಾ, ಜಗಪ್ಪ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.

    ನಿನ್ನೆಯಷ್ಟೇ (ನ.18) ಸುಶ್ಮಿತಾ-ಜಗಪ್ಪ ಮೆಹೆಂದಿ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿತ್ತು. ಇಂದು (ನವೆಂಬರ್ 19) ಸಿಂಧೂರ ಕನ್ವೆಷನ್ ಹಾಲ್ ಜೆ.ಪಿ ನಗರ ಬೆಂಗಳೂರಿನಲ್ಲಿ ಮದುವೆ ಅದ್ದೂರಿಯಾಗಿ ನಡೆದಿದೆ. ಬೆಳಿಗ್ಗೆ 10 ಗಂಟೆಯ ಶುಭ ಮುಹೂರ್ತ ಮದುವೆದಲ್ಲಿ (Wedding) ನೆರವೇರಿದೆ. ಇದನ್ನೂ ಓದಿ:ಡಾಲಿ, ರಮ್ಯಾ ನಟನೆಯ ‘ಉತ್ತರಕಾಂಡ’ ಚಿತ್ರದ ಶೂಟಿಂಗ್‌ಗೆ ಶಿವಣ್ಣ ಎಂಟ್ರಿ

     

    View this post on Instagram

     

    A post shared by ALLU ARYA (@mr_alluarya)

    ಮದುವೆಗೆ ರವಿಚಂದ್ರನ್, ಪ್ರಜ್ವಲ್ ದೇವರಾಜ್, ಸಿತಾರಾ, ನಿರಂಜನ್ ದೇಶಪಾಂಡೆ ದಂಪತಿ, ಮಂಜು ಪಾವಗಡ, ಮಜಭಾರತ ರಿಯಾಲಿಟಿ ಶೋ ತಂಡ ಸೇರಿದಂತೆ ಹಲವರು ಭಾಗಿಯಾಗಿ ನವಜೋಡಿಗೆ ಶುಭಹಾರೈಸಿದ್ದಾರೆ.

    ಅಂದಹಾಗೆ ಇತ್ತೀಚೆಗೆ ಜಗಪ್ಪ ‘ಭರ್ಜರಿ ಬ್ಯಾಚುಲರ್ಸ್‌’ ಶೋನಲ್ಲಿ ಭಾಗಿಯಾಗಿದ್ದರು. ವೇದಿಕೆಯಲ್ಲಿ ಸುಶ್ಮಿತಾ ಭಿನ್ನವಾಗಿ ಪ್ರಪೋಸ್ ಮಾಡಿ ರಿಂಗ್ ತೊಡಿಸಿದ್ದರು. ಸದ್ಯ ನವ ಜೋಡಿಗೆ ಫ್ಯಾನ್ಸ್ ಶುಭಕೋರುತ್ತಿದ್ದಾರೆ.

  • ‘ಆನ್ ಲೈನ್ ಮದುವೆ ಆಫ್ ಲೈನ್ ಶೋಭನ’ಕ್ಕೆ ಸಜ್ಜಾದ ಜಗ್ಗಪ್ಪ

    ‘ಆನ್ ಲೈನ್ ಮದುವೆ ಆಫ್ ಲೈನ್ ಶೋಭನ’ಕ್ಕೆ ಸಜ್ಜಾದ ಜಗ್ಗಪ್ಪ

    ಪ್ಸರ ಮೂವೀಸ್ ಲಾಂಛನದಲ್ಲಿ ವೇಂಪಲ್ಲಿ ಬಾವಾಜಿ (Bavaji) ಅವರ ನಿರ್ದೇಶನದಲ್ಲಿ ‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ (Online Maduve, Offline Shobhana) ಎಂಬ ಹಾಸ್ಯ ಪ್ರಧಾನ ಕಥಾಹಂದರ ಹೊಂದಿದ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ‌. ಈ ಹಿಂದೆ ಗರ್ಭದಗುಡಿ, 141, ಅಕ್ಕ ಬಾವ ಬಾಮೈದ, ನೀನೇನಾ ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಬಾವಾಜಿ ಈಗ ಮತ್ತೊಂದು ಅಪ್ಪಟ ಕಾಮಿಡಿ ಚಿತ್ರವನ್ನು ಕನ್ನಡಿಗರಿಗೆ ನೀಡುತ್ತಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ನಿರ್ದೇಶಕ ಬಾವಾಜಿ ಅವರೇ ಬರೆದಿದ್ದಾರೆ.

    ಈಗಿನ ಟ್ರೆಂಡ್ ಗೆ ತಕ್ಕಂತೆ ಕಾಮಿಡಿ, ಫ್ಯಾಮಿಲಿ ಎಂಟರ್ ಟೈನರ್, ಕಥಾಹಂದರ ಹೊಂದಿರುವ  ಚಿತ್ರ ಇದಾಗಿದ್ದು,  ಕುಟುಂಬ ಸಮೇತ ಕುಳಿತು ವೀಕ್ಷಿಸುವಂಥ ಅನ್ ಲಿಮಿಟೆಡ್ ಕಾಮಿಡಿ ಜೊತೆಗೆ ಡಿಫರೆಂಟ್ ಕಾನ್ಸೆಪ್ಟ್ ಇದರಲ್ಲಿದೆ. ಇದನ್ನೂ ಓದಿ:ಶರ್ವಾನಂದ್ ರಿಸೆಪ್ಷನ್ ಸಂಭ್ರಮದಲ್ಲಿ ಸಿನಿ ತಾರೆಯರ ದಂಡು

    ಈ ಚಿತ್ರದ ಮಾತಿನ ಭಾಗವನ್ನು ಬೆಂಗಳೂರು, ಬೆಂಗಳೂರು ಗ್ರಾಮಾಂತರದ ಅತ್ತಿಬೆಲೆ ಸುತ್ತಮುತ್ತ  ಅಲ್ಲದೇ ಹಾಡುಗಳನ್ನು ಆನೇಕಲ್ ನ ಸುಗ್ಗಿ ರೆಸಾರ್ಟ್ ಹಾಗೂ ಕೋರಮಂಗಲದ ಪಬ್ ವೊಂದರಲ್ಲಿ  ಚಿತ್ರೀಕರಣ ನಡೆಸಲಾಗಿದೆ. ಈಗಾಗಲೇ ಚಿತ್ರದ ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

     

    ಜಗ್ಗಪ್ಪ(Jaggappa) , ಸುಶ್ಮಿತಾ, (Sushmita)  ಸೀರುಂಡೆ ರಘು, ಗಜೇಂದ್ರ, ರಾಘವಿ ಸೇರಿದಂತೆ  ಗಿಚ್ಚಿ ಗಿಲಿ ಗಿಲಿ, ಮಜಾಭಾರತ, ಕಾಮಿಡಿ ಕಿಲಾಡಿಗಳು, ಕಾರ್ಯಕ್ರಮದ ಅನೇಕ ಕಲಾವಿದರು ಅಲ್ಲದೆ  ಯಶಸ್ವಿನಿ, ಚಂದನ, ಶರಣ್ಯ ರೆಡ್ಡಿ ಮುಂತಾದವರು  ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.  ಬಾಲು ಅವರ ಕ್ಯಾಮೆರಾ ವರ್ಕ್, ಅಲೆಕ್ಸ್ ಕಲಾವಿದರ ಸಂಗೀತ, ಅರುಣ ಪ್ರಸಾದ್, ವೇಂಪಲ್ಲಿ ಬಾಲಾಜಿ ಅವರ ಸಾಹಿತ್ಯ, ಗಣೇಶ್, ಸದಾಶಿವ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

  • ಬೆಳಗ್ಗೆ 4 ಗಂಟೆಗೆ ಎಬ್ಬಿಸು ಎಂದು ಹೇಳಿದ್ದೆ, ಎದ್ದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ಲು: ಸುಶ್ಮಿತಾ ತಮ್ಮ

    ಬೆಳಗ್ಗೆ 4 ಗಂಟೆಗೆ ಎಬ್ಬಿಸು ಎಂದು ಹೇಳಿದ್ದೆ, ಎದ್ದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ಲು: ಸುಶ್ಮಿತಾ ತಮ್ಮ

    – ಸುಶ್ಮಿತಾ ಕಣ್ಣು ದಾನ ಮಾಡಲು ಮುಂದಾದ ಪೋಷಕರು

    ಬೆಂಗಳೂರು: ಬೆಳಗ್ಗೆ 4 ಗಂಟೆಗೆ ಎಬ್ಬಿಸು ಎಂದು ಹೇಳಿದ್ದೆ. ಆದರೆ ಬೆಳಗ್ಗೆ ಎದ್ದು ನೋಡಿದಾಗ ನನ್ನ ಅಕ್ಕ ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂದು ಗಾಯಕಿ ಸುಶ್ಮಿತಾ ಸಹೋದರ ಯಶವಂತ್ ಹೇಳಿದರು.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಯಶವಂತ್, ನನ್ನ ಅಕ್ಕ ಏನೂ ಹೇಳಲಿಲ್ಲ. ನಾನು ದಿನ ಕೆಲಸಕ್ಕೆ ಹೋಗುತ್ತೇನೆ. ಬೆಳಗ್ಗೆ 4 ಗಂಟೆಗೆ ಎಬ್ಬಿಸು ಎಂದು ನಾನು ಸುಶ್ಮಿತಾಗೆ ಹೇಳಿ ಲೈಟ್ ಆಫ್ ಮಾಡಿ ಮಲಗಿದ್ದೆ. ನಾನು ಹಾಲ್‍ನಲ್ಲಿ ಮಲಗಿದ್ದೆ. ನನ್ನ ಅಕ್ಕ ರೂಮಿನಲ್ಲಿ ಮಲಗಿದ್ದಳು. ಬೆಳಗ್ಗೆ ನನ್ನ ಮೊಬೈಲಿನಲ್ಲೇ ಅಲಾರಾಂ ಆನ್ ಆಗಿತ್ತು. ಆಗ ನಾನು ಎದ್ದು ರೂಮಿಗೆ ಹೋಗಿ ನೋಡಿದಾಗ ಆಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು ಎಂದರು. ಇದನ್ನೂ ಓದಿ: ‘ಅಮ್ಮಾ, ನನ್ನ ಪತಿಯನ್ನು ಸುಮ್ಮನೆ ಬಿಡಬೇಡ’ – ಖ್ಯಾತ ಗಾಯಕಿ ಸುಶ್ಮಿತಾ ಆತ್ಮಹತ್ಯೆ

    ಮಧ್ಯರಾತ್ರಿ ಸುಮಾರು 1.30ಕ್ಕೆ ನನ್ನ ಅಕ್ಕ ಮೆಸೇಜ್ ಮಾಡಿದ್ದಾಳೆ. ಬೆಳಗ್ಗೆ ಎದ್ದು ನಾನು ರೂಮಿಗೆ ಹೋಗಿ ನೋಡಿದ್ದೆ ಆಗ ನನ್ನ ಅಕ್ಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ವಿಷಯ ನನ್ನ ಭಾವನಿಗೆ ತಿಳಿಸಿದ್ದೇವೆ. ನನ್ನ ತಮ್ಮ ಕೂಡ ಹೋಗಿ ಹೇಳಿದ್ದಾನೆ. ಆದರೆ ಅವರು ಎಲ್ಲಿ ಇದ್ದಾರೆ ಎಂಬುದು ಗೊತ್ತಿಲ್ಲ. ಈ ವಿಷಯ ತಿಳಿದ ತಕ್ಷಣ ನನ್ನ ಭಾವ ಓಡಿ ಹೋಗಿರಬಹುದು ಎಂದು ಯಶವಂತ್ ತಿಳಿಸಿದರು. ಇದನ್ನೂ ಓದಿ: ಹಣದ ಹಿಂದೆ ಬಿದ್ದಿದ್ದ, ಚಿನ್ನ ಮಾರಿ ಮನೆ ಖರೀದಿಸಿ ಹೊರ ಹಾಕ್ದ: ಗಾಯಕಿ ಸುಶ್ಮಿತಾ ತಾಯಿ

    ಇತ್ತ ಶರತ್ ಕುಟುಂಬಸ್ಥರು ವಿಕ್ಟೋರಿಯಾ ಆಸ್ಪತ್ರೆಗೆ ಆಗಮಿಸಿದ್ದು, ಅವರನ್ನು ನೋಡುತ್ತಿದ್ದಂತೆ ಸುಶ್ಮಿತಾ ಕುಟುಂಬಸ್ಥರು ಮುಗಿ ಬಿದ್ದರು. ಶರತ್ ತಪ್ಪೇ ಇಲ್ಲ ಎಂದು ಆತನ ದೊಡ್ಡಮ್ಮ ಸಮರ್ಥನೆ ಮಾಡಿಕೊಳ್ಳಲು ಮುಂದಾದರು. ಇದನ್ನು ಕೇಳಿ ಕೋಪಗೊಂಡ ಸುಶ್ಮಿತಾ ಶರತ್ ದೊಡ್ಡಮ್ಮನ ಮೇಲೆ ಗಲಾಟೆಗೆ ಮುಂದಾದರು. ಈ ವೇಳೆ ಪ್ರಕರಣ ತಿಳಿಗೊಳಿಸಲು ಪೊಲೀಸರು ಹರಸಾಹಸಪಟ್ಟರು.

    ಇನ್ನೂ ಸುಶ್ಮಿತಾ ಸಾವಿನಲ್ಲೂ ಪೋಷಕರು ಕಣ್ಣು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.

  • ಹಣದ ಹಿಂದೆ ಬಿದ್ದಿದ್ದ, ಚಿನ್ನ ಮಾರಿ ಮನೆ ಖರೀದಿಸಿ ಹೊರ ಹಾಕ್ದ: ಗಾಯಕಿ ಸುಶ್ಮಿತಾ ತಾಯಿ

    ಹಣದ ಹಿಂದೆ ಬಿದ್ದಿದ್ದ, ಚಿನ್ನ ಮಾರಿ ಮನೆ ಖರೀದಿಸಿ ಹೊರ ಹಾಕ್ದ: ಗಾಯಕಿ ಸುಶ್ಮಿತಾ ತಾಯಿ

    ಬೆಂಗಳೂರು: ಖ್ಯಾತ ಗಾಯಕಿ ಸುಶ್ಮಿತಾ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಾಯಿ ಪ್ರತಿಕ್ರಿಯಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುಶ್ಮಿತಾ ಅವರ ತಾಯಿ, ಎಲ್ಲರೂ ಸೇರಿ ನನ್ನ ಮಗಳನ್ನು ಪ್ಲಾನ್ ಮಾಡಿ ಕೊಲೆ ಮಾಡಿದ್ದಾರೆ. 150 ಗ್ರಾಂ ಚಿನ್ನ ಕೊಟ್ಟು ನಾನು ನನ್ನ ಮಗಳ ಮದುವೆ ಮಾಡಿಸಿದ್ದೆ. ಆದರೆ ಶರತ್ ಆ ಚಿನ್ನವನ್ನು ಮಾರಿ ತನ್ನ ಹೆಸರಿನಲ್ಲಿ ಮನೆಯನ್ನು ಖರೀದಿಸಿದ್ದಾನೆ. ಬಳಿಕ ನನ್ನ ಮಗಳಿಗೆ ಮನೆಯಿಂದ ಹೊರ ಹೋಗು ಎಂದು ಬಲವಂತ ಮಾಡುತ್ತಿದ್ದನು. ಶರತ್ ಹಣದ ಹಿಂದೆ ಬಿದ್ದಿದ್ದನು. ನನ್ನ ಮಗಳಿಗೆ ಪ್ರೀತಿ ನೀಡಿಲ್ಲ. ಆಕೆಗೆ ಏನೂ ಕೊಡಿಸಲಿಲ್ಲ. ನನ್ನ ಮಗಳು ಬೇರೆ ಬೇರೆ ಶಾಲೆಯಲ್ಲಿ ಮ್ಯೂಸಿಕ್ ಟೀಚರ್ ಆಗಿ ಕೆಲಸ ಮಾಡುತ್ತಿದ್ದಳು. ಆಕೆಗೆ 45 ಸಾವಿರ ರೂ. ಸಂಬಳ ಬರುತ್ತಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ‘ಅಮ್ಮಾ, ನನ್ನ ಪತಿಯನ್ನು ಸುಮ್ಮನೆ ಬಿಡಬೇಡ’ – ಖ್ಯಾತ ಗಾಯಕಿ ಸುಶ್ಮಿತಾ ಆತ್ಮಹತ್ಯೆ

    ಶರತ್ ನನ್ನ ಮಗಳಿಗೆ ಯಾವುದೋ ಮಾತ್ರೆಗಳನ್ನು ನೀಡುತ್ತಿದ್ದನು. ಅಲ್ಲದೆ ಆಕೆಗೆ ನೀನು ಮಗುವಿನ ಆಸೆ ಇಟ್ಟುಕೊಳ್ಳಬೇಡ ಎಂದು ಹೇಳಿದ್ದನಂತೆ. ನನ್ನ ಮಗಳು ಸಾವನ್ನಪ್ಪಿದ್ದಾಳೆ ಎಂಬ ವಿಷಯ ಶರತ್ ಕುಟುಂಬಸ್ಥರಿಗೆ ತಿಳಿಸಿದರೆ, ಅವಳು ಬದುಕಿದ್ದಾಳಾ, ಸತ್ತಿದ್ದಾಳಾ ಎಂದು ಶರತ್ ದೊಡ್ಡಮ್ಮ ಕೇಳಿದ್ದಾರೆ. ನಾನು ಕೂಲಿ ಮಾಡಿ ನನ್ನ ಮಗಳನ್ನು ಸಾಕಿದ್ದೇನೆ. ನಾನು ನನ್ನ ಮಗಳನ್ನು ಪುರುಷನಂತೆ ಸಾಕಿದ್ದೇನೆ. ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ ಎಂದು ನಾನು ಎಂದುಕೊಂಡಿರಲಿಲ್ಲ. ನನ್ನ ಮಗಳಿಲ್ಲದ ಜೀವನ ನನಗೆ ಬೇಡ. ನಾನು ಸತ್ತು ಹೋಗುತ್ತೇನೆ ಎಂದು ಸುಶ್ಮಿತಾ ತಾಯಿ ಕಣ್ಣೀರು ಹಾಕಿದ್ದಾರೆ.

    ಶರತ್, ಆತನ ದೊಡ್ಡಮ್ಮ ಹಾಗೂ ಕುಟುಂಬಸ್ಥರು ಆಕೆಯನ್ನು ಮನೆಯಿಂದ ಹೊರ ಹಾಕಲು ಪ್ಲಾನ್ ಮಾಡಿದ್ದಾರೆ. ಆದರೆ ನನ್ನ ಮಗಳು ಮರ್ಯಾದೆಗೆ ಅಂಜಿ ಮನೆಯಿಂದ ಹೊರ ಹೋಗಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಶರತ್ ಹಾಗೂ ಆತನ ಕುಟುಂಬಸ್ಥರು ನನ್ನ ಮಗಳಿಗೆ ಕಿರುಕುಳ ನೀಡಿದ್ದಾರೆ. ಆದರೆ ಈಗ ನನ್ನ ತಾಯಿಯ ಮರ್ಯಾದೆ ಹೋಗುತ್ತೆ ಎಂದು ಸುಶ್ಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶರತ್ ನನ್ನ ಮಗಳ ಮೇಲೆ ಹಲ್ಲೆ ಮಾಡಿದ್ದಾನೆ. ನನ್ನ ಮಗಳು ಶರತ್ ಕಾಲು ಹಿಡಿದುಕೊಂಡು ನನ್ನನ್ನು ಬಿಡಬೇಡ ಎಂದು ಅಂಗಲಾಚಿದರೂ, ಆತನ ಮನಸ್ಸು ಕರಗಲಿಲ್ಲ ಎಂದು ಸುಶ್ಮಿತಾ ತಾಯಿ, ಶರತ್ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

  • ‘ಅಮ್ಮಾ, ನನ್ನ ಪತಿಯನ್ನು ಸುಮ್ಮನೆ ಬಿಡಬೇಡ’ – ಖ್ಯಾತ ಗಾಯಕಿ ಸುಶ್ಮಿತಾ ಆತ್ಮಹತ್ಯೆ

    ‘ಅಮ್ಮಾ, ನನ್ನ ಪತಿಯನ್ನು ಸುಮ್ಮನೆ ಬಿಡಬೇಡ’ – ಖ್ಯಾತ ಗಾಯಕಿ ಸುಶ್ಮಿತಾ ಆತ್ಮಹತ್ಯೆ

    – ನನ್ನನ್ನು ನಮ್ಮ ಊರಿನಲ್ಲಿ ಮಣ್ಣು ಮಾಡು ಅಥವಾ ಸುಡು
    – ಎಷ್ಟೇ ಬೇಡಿಕೊಂಡರೂ ಪತಿ ಮನಸ್ಸು ಕರಗಲಿಲ್ಲ

    ಬೆಂಗಳೂರು: ನನ್ನ ಪತಿಯನ್ನು ಸುಮ್ಮನೆ ಬಿಡಬೇಡ ಎಂದು ತಾಯಿಗೆ ವಾಟ್ಸಪ್ ಮೆಸೇಜ್ ಕಳುಹಿಸಿ ಎಂದು ಬೆಂಗಳೂರಿನಲ್ಲಿ ಖ್ಯಾತ ಗಾಯಕಿ ಸುಶ್ಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಸುಶ್ಮಿತಾ(26) ಆತ್ಮಹತ್ಯೆಗೆ ಶರಣಾದ ಗಾಯಕಿ. ಸುಶ್ಮಿತಾ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುವ ಶರತ್ ಕುಮಾರ್ ಅವರನ್ನು ಮದುವೆ ಆಗಿದ್ದರು. ಸುಶ್ಮಿತಾ ತನ್ನ ತಾಯಿ ಹಾಗೂ ತಮ್ಮನಿಗೆ ವಾಟ್ಸಪ್ ಮೂಲಕ ಸಂದೇಶ ರವಾನಿಸಿ ನಾಗರಬಾವಿಯಲ್ಲಿರುವ ತನ್ನ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ವಾಟ್ಸಪ್‍ನಲ್ಲಿ ಕಳುಹಿಸಿದ್ದೇನು?
    ಅಮ್ಮ ನನ್ನನ್ನು ಕ್ಷಮಿಸು. ನಾನು ಮಾಡಿಕೊಂಡ ತಪ್ಪಿಗೆ ನಾನೇ ಶಿಕ್ಷೆ ಅನುಭವಿಸಿದ್ದೇನೆ. ನನ್ನನ್ನು ದಯವಿಟ್ಟು ಕ್ಷಮಿಸು. ನನ್ನ ಪತಿ ತನ್ನ ದೊಡ್ಡಮ್ಮನ ಮಾತು ಕೇಳಿ ನನಗೆ ಚಿತ್ರಹಿಂಸೆ ಕೊಡುತ್ತಿದ್ದರು. ನಾನು ಏನೇ ಮಾತನಾಡಿದ್ರೂ ನನಗೆ ಮನೆ ಬಿಟ್ಟು ಹೋಗು ಎಂದು ಹೇಳುತ್ತಿದ್ದರು. ನನಗೆ ಮಾನಸಿಕವಾಗಿ ತುಂಬಾ ಕಿರುಕುಳ ನೀಡುತ್ತಿದ್ದರು. ಅವರನ್ನು ಮಾತ್ರ ಸುಮ್ಮನೆ ಬಿಡಬೇಡ. ನನ್ನ ಸಾವಿಗೆ ಶರತ್, ವೈದೇಹಿ, ಗೀತಾ ನೇರವಾಗಿ ಕಾರಣ. ನಾನು ಎಷ್ಟು ಬೇಡಿಕೊಂಡರೂ ಕಾಲು ಹಿಡಿದರೂ ಅವನ ಮನಸ್ಸು ಕರಗಲಿಲ್ಲ.

    ಅಲ್ಲದೆ ಶರತ್ ಮನೆಯಲ್ಲಿ ನನಗೆ ಸಾಯಲು ಇಷ್ಟವಿರಲಿಲ್ಲ. ಮದುವೆ ಆದಾಗಿನಿಂದ ಇದೇ ರೀತಿ ಹಿಂಸೆ. ಅಮ್ಮ ಯಾರ ಹತ್ತಿರ ಈ ನೋವನ್ನು ಹೇಳಿಕೊಂಡಿರಲಿಲ್ಲ. ನನ್ನನ್ನು ನಮ್ಮ ಊರಿನಲ್ಲಿ ಮಣ್ಣು ಮಾಡು ಅಥವಾ ಸುಡು. ನನ್ನ ಕಾರ್ಯವನ್ನು ತಮ್ಮನೇ ಮಾಡಲಿ. ಅವರನ್ನ ಮಾತ್ರ ಸುಮ್ಮನೆ ಬಿಡಬೇಡ, ಇಲ್ಲದಿದ್ದರೆ ನನ್ನ ಆತ್ಮಕ್ಕೆ ಶಾಂತಿ ಸಿಗಲ್ಲ. ಅಮ್ಮ ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ನಿನಗೋಸ್ಕರ ನನ್ನ ತಮ್ಮ ಸಚಿನ್ ಇದ್ದಾನೆ. ಅವನನ್ನು ಚೆನ್ನಾಗಿ ನೋಡಿಕೊ. ಕೊನೆಯಾದಾಗಿ ತಮ್ಮ ಬಳಿ ಮತ್ತೊಮ್ಮೆ ಕ್ಷಮೆಯಾಚಿಸುತ್ತೇನೆ. ಅಮ್ಮನಿಗೆ ತೊರಿಸು ಮರಿಬೇಡ ಎಂದು ಸುಶ್ಮಿತಾ ವಾಟ್ಸಪ್‍ನಲ್ಲಿ ಕಳುಹಿಸಿದ್ದರು.

    ಎಂಬಿಎ ಪದವೀಧರೆ ಆಗಿರುವ ಸುಶ್ಮಿತಾ ‘ಹಾಲು-ತುಪ್ಪ’, ‘ಶ್ರೀಸಾಮಾನ್ಯ’ ಸೇರಿ ಹಲವು ಸಿನಿಮಾಗಳಲ್ಲಿ ಹಾಡಿದ್ದಾರೆ. ಸದ್ಯ ಈ ಬಗ್ಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.