Tag: ಸೂಚನೆ

  • ಹೊರರಾಜ್ಯದಿಂದ ಬರುವವರು ಕಡ್ಡಾಯವಾಗಿ ಕ್ವಾರಂಟೈನ್ ಕೇಂದ್ರಕ್ಕೆ: ಹಾಸನ ಡಿಸಿ ಸೂಚನೆ

    ಹೊರರಾಜ್ಯದಿಂದ ಬರುವವರು ಕಡ್ಡಾಯವಾಗಿ ಕ್ವಾರಂಟೈನ್ ಕೇಂದ್ರಕ್ಕೆ: ಹಾಸನ ಡಿಸಿ ಸೂಚನೆ

    – ಕೊರೊನಾ ಸೋಂಕಿತರ ಟ್ರಾವೆಲ್ ಹಿಸ್ಟರಿ ಬಿಡುಗಡೆ

    ಹಾಸನ: ಹಾಸನಕ್ಕೆ ಮುಂಬೈನಿಂದ ಬರಲು ಸಾವಿರಕ್ಕೂ ಹೆಚ್ಚು ಜನರ ಸೇವಾಸಿಂಧು ಮೂಲಕ ನೋಂದಣಿ ಮಾಡಿಕೊಂಡಿದ್ದು, ಹಾಸನದಲ್ಲಿ ಕೊರೊನಾ ಭೀತಿ ಮತ್ತಷ್ಟು ಹೆಚ್ಚಾಗುವ ಆತಂಕ ಮೂಡಿದೆ.

    ಗ್ರೀನ್‍ಜೋನ್ ಆಗಿದ್ದ ಹಾಸನದಲ್ಲಿ ನಿನ್ನೆ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರಿಗೆ ಮತ್ತು ಇಂದು ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಹಾಸನದಲ್ಲಿ ಸೋಂಕಿತರ ಸಂಖ್ಯೆ ಒಂಬತ್ತಕ್ಕೆ ಏರಿಕೆಯಾಗಿದೆ. ಸೋಂಕಿತರೆಲ್ಲರೂ ಬಾಂಬೆಯಿಂದ ವಾಪಸ್ಸಾದವರೇ ಆಗಿದ್ದಾರೆ.

    ಈ ಹಿನ್ನೆಲೆಯಲ್ಲಿ ಮುಂಬೈನಿಂದ ಹಾಸನಕ್ಕೆ ಬರುವವರು ಸಾಧ್ಯವಾದಷ್ಟು ಇದ್ದಲ್ಲೇ ಇರಲು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಮನವಿ ಮಾಡಿದ್ದಾರೆ. ಒಂದು ವೇಳೆ ಹೊರರಾಜ್ಯದಿಂದ ಹಾಸನಕ್ಕೆ ಬಂದರೆ ಕಡ್ಡಾಯವಾಗಿ ಕ್ವಾರಂಟೈನ್‍ನಲ್ಲಿ ಇರಲು ಸೂಚನೆ ನೀಡಿದ್ದಾರೆ. ಇಂದು ಪಾಸಿಟಿವ್ ಕಂಡುಬಂದ ನಾಲ್ವರ ಟ್ರಾವೆಲ್ ಹಿಸ್ಟರಿ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ, ನಾಲ್ವರೂ ಒಂದೇ ಕುಟುಂಬದವರಾಗಿದ್ದು, ಗಂಡ ಹೆಂಡತಿ ಇಬ್ಬರು ಮಕ್ಕಳಾಗಿದ್ದಾರೆ ಎಂದಿದ್ದಾರೆ.

    ಸೋಂಕಿತರು ನಿನ್ನೆ ಮೇ 12 ರಂದು ಮುಂಬೈನಿಂದ ಸ್ವಂತ ಕಾರಿನಲ್ಲಿ ಹಾಸನಕ್ಕೆ ಬಂದಿದ್ದಾರೆ. ಈ ಕುಟುಂಬ ಎಲ್ಲೂ ಸುತ್ತಾಡದೆ ನೇರವಾಗಿ ಜಿಲ್ಲಾಡಳಿತ ಮಾಡಿರುವ ಕ್ವಾರಂಟೈನ್ ಗೆ ಹೋಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಪಾಸಿಟಿವ್ ಬಂದಿರುವವರ ಜೊತೆ ಕ್ವಾರಂಟೈನ್ ಕೇಂದ್ರದಲ್ಲಿದ್ದ 57 ಮಂದಿಯನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಆದರೆ ಅವರಲ್ಲಿ ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಕೋವಿಡ್ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾಗಿ ತಿಳಿಸಿದ್ದಾರೆ.

  • ಬಡವರ ಪಡಿತರದಲ್ಲಿ ಗೋಲ್‍ಮಾಲ್ – ವರದಿ ನೀಡುವಂತೆ ಸಿ.ಟಿ ರವಿ ಸೂಚನೆ

    ಬಡವರ ಪಡಿತರದಲ್ಲಿ ಗೋಲ್‍ಮಾಲ್ – ವರದಿ ನೀಡುವಂತೆ ಸಿ.ಟಿ ರವಿ ಸೂಚನೆ

    ಚಿಕ್ಕಮಗಳೂರು: ಕೊರೊನಾ ಆತಂಕದಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದ್ದು, ಸರ್ಕಾರ ಮನೆಯಲ್ಲೇ ಇರುವ ಬಡವರಿಗೆ ಕೊಡುತ್ತಿರುವ ಉಚಿತ ಅಕ್ಕಿಯಲ್ಲೂ ಸೊಸೈಟಿಯವರು ಗೋಲ್‍ಮಾಲ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಈ ಆರೋಪಕ್ಕೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಗಲ್, ನಿಡುವಾಳೆ, ಕೂವೆ ಗ್ರಾಮಗಳ ಸೊಸೈಟಿಯಲ್ಲಿ ಅಕ್ರಮ ನಡೆಯುತ್ತಿದ್ದು, ನಿಗದಿಗಿಂತ ಕಡಿಮೆ ಪಡಿತರ ನೀಡುತ್ತಿದ್ದಾರೆ. ಜೊತೆಗೆ ಎಲ್ಲರಿಂದಲೂ 30-50 ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪ ಮಾಡಲಾಗಿತ್ತು.

    ಹಮಾಲಿ ಕೂಲಿ, ಸಾಗಾಣಿಕ ವೆಚ್ಚ, ಲ್ಯಾಪ್‍ಟಾಪ್ ಚಾರ್ಜ್, ಅಕ್ಕಿ ತೂಗಿ ಹಾಕುವವನಿಗೆ ಹಾಗೂ ಗೋಣಿಚೀಲದ ಕರ್ಚನ್ನು ಬಡವರ ಮೇಲೆ ಹಾಕುತ್ತಿದ್ದಾರೆ. ಅತಿ ಬಡವರ ಅಂತ್ಯೋದಯ ಕಾರ್ಡ್‍ನಲ್ಲೂ ಅಕ್ರಮ ಮಾಡುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ. ಕೊಡುವ ಅಕ್ಕಿಯಲ್ಲೂ ಕಡಿಮೆ ಕೊಡುತ್ತಿದ್ದಾರೆ. ಪ್ರಶ್ನಿಸಿದರೆ ನಿಮಗೆ ಬರುವುದು ಅಷ್ಟೆ ಎಂದು ಹೇಳುತ್ತಿದ್ದರಂತೆ.

    ಸೀಮೆಎಣ್ಣೆ ಕೂಡ ಹಂಚಿಕೆ ಮಾಡಲಾಗಿದೆ. ಆದರೆ ಸೊಸೈಟಿಯವರು ಸೀಮೆ ಎಣ್ಣೆ ಇಲ್ಲ ಅಂತಾರೆ. ಲೀಟರ್ ಸೀಮೆಎಣ್ಣೆಗೆ 35 ರೂಪಾಯಿ. ಆದರೆ ಇವರು 50 ರೂಪಾಯಿವರೆಗೂ ಪಡೆದುಕೊಳ್ಳುತ್ತಾರೆ ಎಂದು ಸ್ಥಳೀಯರು ಸೊಸೈಟಿಯವರ ವಿರುದ್ಧ ಕಿಡಿಕಾರಿದ್ದಾರೆ. ಅಧಿಕಾರಿಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಸಚಿವ ಸಿ.ಟಿ ರವಿಗೆ ಲಿಖಿತ ದೂರು ನೀಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ ಸಿ.ಟಿ.ರವಿ ಸೂಚಿಸಿದ್ದಾರೆ.

  • ಜ್ವರ, ಕೆಮ್ಮಿಗೆ ಮಾತ್ರೆ ತೆಗೆದುಕೊಳ್ಳುವರ ವಿವರವನ್ನು ತೆಗೆದುಕೊಳ್ಳಿ

    ಜ್ವರ, ಕೆಮ್ಮಿಗೆ ಮಾತ್ರೆ ತೆಗೆದುಕೊಳ್ಳುವರ ವಿವರವನ್ನು ತೆಗೆದುಕೊಳ್ಳಿ

    – ಮೆಡಿಕಲ್ ಸ್ಟೋರ್‌ಗಳಿಗೆ ಆಂಧ್ರ ಸರ್ಕಾರ ಸೂಚನೆ

    ಹೈದರಾಬಾದ್: ಜ್ವರ, ಕೆಮ್ಮು ಮತ್ತು ಶೀತ ಎಂದು ಬಂದು ಮಾತ್ರೆ ತೆಗದುಕೊಂಡು ಹೋಗುವವರ ವಿವರವನ್ನು ಪಡೆದುಕೊಳ್ಳಿ ಎಂದು ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳು ಮೆಡಿಕಲ್ ಶಾಪ್‍ಗಳಿಗೆ ಸೂಚನೆ ನೀಡಿವೆ.

    ದೇಶದಲ್ಲಿ ದಿನೇ ದಿನೇ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ದೇಶನ್ನೇ ಲಾಕ್‍ಡೌನ್ ಮಾಡಿದ್ದರೂ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಸೋಂಕಿತರ ಪತ್ತೆಗಾಗಿ ರಾಜ್ಯ ಸರ್ಕಾರಗಳು ವಿವಿಧ ನಿಯಮಗಳನ್ನು ಅನುಸರಿಸುತ್ತಿವೆ. ಈ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳು ಈ ನಿರ್ಧಾರವನ್ನು ಕೈಗೊಂಡಿವೆ.

    ಲಾಕ್‍ಡೌನ್ ಇದ್ದರೂ ದೇಶದ್ಯಾಂತ ಮೆಡಿಕಲ್ ಶಾಪ್‍ಗಳು ಓಪನ್ ಇವೆ. ಈ ಮೆಡಿಕಲ್‍ಗಳಿಗೆ ನಮಗೆ ಶೀತ, ಕೆಮ್ಮು ಮತ್ತು ಜ್ವರ ಇದೆ ಎಂದು ಮಾತ್ರೆ ತೆಗೆದುಕೊಳ್ಳಲು ಬರುವವರ ವಿವರವನ್ನು ಮೆಡಿಕಲ್ ಶಾಪ್ ಮಾಲೀಕರು ಪಡೆದುಕೊಳ್ಳಬೇಕು. ಜೊತೆಗೆ ಪ್ರತಿದಿನ ನಾವು ಸೂಚಿಸಿದ ಸ್ಥಳೀಯ ಅಧಿಕಾರಿಗಳಿಗೆ ಅದನ್ನು ನೀಡಬೇಕು. ಆ ಅಧಿಕಾರಿಗಳು ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸುತ್ತಾರೆ ಎಂದು ಸರ್ಕಾರಗಳು ತಿಳಿಸಿವೆ.

    ಇತ್ತೀಚೆಗೆ ಕೊರೊನಾ ಲಕ್ಷಣಗಳು ಇಲ್ಲದಿರುವ ವ್ಯಕ್ತಿಗಳಲ್ಲಿ ಸೋಂಕು ಇರುವುದು ಪರೀಕ್ಷೆಯಲ್ಲಿ ಪತ್ತೆಯಾಗುತ್ತಿದೆ. ಕೆಲವರು ರೋಗದ ಲಕ್ಷಣ ಇದ್ದರೂ ಕೊರೊನಾ ಪರೀಕ್ಷೆಗೆ ಒಳಗಾಗುತ್ತಿಲ್ಲ ಆದ್ದರಿಂದ ಸರ್ಕಾರಗಳು ಈ ನಿರ್ಧಾರವನ್ನು ಕೈಗೊಂಡಿವೆ. ಈಗಾಗಲೇ ಅಂಧ್ರಪ್ರದೇಶದಲ್ಲಿ 603 ಕೊರೊನಾ ಪ್ರಕರಣಗಳು ಮತ್ತು ತೆಲಂಗಾಣದಲ್ಲಿ 800 ಕೊರೊನಾ ಪ್ರಕರಣಗಳು ದಾಖಲಾಗಿವೆ.

    ಇಡೀ ಭಾರತದಲ್ಲಿ 15,712 ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, 507 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ 2,231 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಹೀಗಾಗಿ ಈವರೆಗೆ ಇಡೀ ವಿಶ್ವದಲ್ಲಿ 23,29,651 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 1,60,721 ಜನರು ಮೃತಪಟ್ಟಿದ್ದಾರೆ. ವಿಶ್ವವ್ಯಾಪಿ 5,95,433 ಜನರು ರೋಗದಿಂದ ಗುಣವಾಗಿ ಹೊರಬಂದಿದ್ದಾರೆ.

  • ಹೊರ ಜಿಲ್ಲೆ, ರಾಜ್ಯಕ್ಕೆ ಹೋಗ್ತಿರೋ ಕಾಫಿನಾಡಿಗರು

    ಹೊರ ಜಿಲ್ಲೆ, ರಾಜ್ಯಕ್ಕೆ ಹೋಗ್ತಿರೋ ಕಾಫಿನಾಡಿಗರು

    ಚಿಕ್ಕಮಗಳೂರು: ಹೊಸ ವರ್ಷ ಆಚರಣೆಗೆ ಕಾಫಿನಾಡು ಈಗಾಗಲೇ ಸನ್ನದ್ಧವಾಗಿದೆ. ಹೊಸ ವರ್ಷವನ್ನು ವೆಲ್‍ಕಮ್ ಹೇಳಲು ಕಾಫಿನಾಡಿಗರು ಹೊರ ಜಿಲ್ಲೆ-ರಾಜ್ಯಕ್ಕೆ ಹೋಗುತ್ತಿದ್ದಾರೆ. ಹೊರರಾಜ್ಯ ಹಾಗೂ ಜಿಲ್ಲೆಯವರು ಕಾಫಿನಾಡಿನಲ್ಲಿ ಜಮಾಯಿಸಿದ್ದಾರೆ. ಆದರೆ ಪೊಲೀಸ್ ಇಲಾಖೆ ಹೊಸ ವರ್ಷ ಆಚರಣೆಗೆ ಚಿಕ್ಕಮಗಳೂರಿಗೆ ಬರೋ ಪ್ರವಾಸಿಗರಿಗೆ ಹಾಗೂ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

    ಪೊಲೀಸ್ ಇಲಾಖೆ ಪ್ರವಾಸಿಗರಿಗೆ ನೀಡಿರುವ ಸೂಚನೆಗಳು:
    ಸವಾರರು ಪಾನಮತ್ತರಾಗಿ ವಾಹನ ಚಲಾಯಿಸುವಂತಿಲ್ಲ. ಅಲ್ಲದೇ ಏಕಾಂಗಿಯಾಗಿ ಅಥವಾ ಸಣ್ಣ ಗುಂಪುಗಳಾಗಿ ಪ್ರತ್ಯೇಕ ಸ್ಥಳಗಳಿಗೆ ಹಾಗೂ ಎಲ್ಲೆಂದರಲ್ಲಿ ಹೋಗುವಂತಿಲ್ಲ. ಇನ್ನೂ ನೋಂದಾಯಿಸದೇ ಇರುವ ಸ್ಥಳ, ಅಂಗಡಿ ಅಥವಾ ವ್ಯಕ್ತಿಗಳಿಂದ ಮದ್ಯವನ್ನ ಖರೀದಿಸಬೇಡಿ ಎಂದು ಸೂಚಿಸಿದೆ.

    ಅಕ್ರಮ ಹಾಗೂ ಮಾದಕ ವಸ್ತುಗಳ ಬಳಕೆಯ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಅಂತಹ ವಸ್ತುಗಳ ಬಳಕೆದಾರರಾಗಲಿ ಅಥವಾ ಮಾರಾಟಗಾರರು ಕಂಡು ಬಂದಲ್ಲಿ ಅವರ ವಿರುದ್ಧ ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸೋದಾಗಿ ಎಚ್ಚರಿಸಿದ್ದಾರೆ. ಅಲ್ಲದೇ ರಸ್ತೆಗಳಲ್ಲಿ ಕುಡಿದು ಗಲಾಟೆ ಮಾಡೋದಾಗಲಿ, ಅವ್ಯವಸ್ಥೆ ಮಾಡೋದು ಕಂಡು ಬಂದಲ್ಲಿ ಅಥವಾ ವೇಗವಾಗಿ ವಾಹನಗಳನ್ನ ಓಡಿಸಿದರೆ ಅಂತಹ ವಾಹನಗಳನ್ನ ವಶಪಡಿಸಿಕೊಂಡು ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

    ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ ಮಾಲೀಕರಿಗೆ ನೀಡಿರೋ ಸೂಚನೆಗಳು:
    ಅನುಮತಿ ನೀಡಿರುವ ಸಮಯವನ್ನ ಮೀರಿ ಮದ್ಯ ಮಾರಾಟ ಮಾಡೋದಾದರೆ ಎಲ್ಲಾ ಸಂಸ್ಥೆಗಳು ಅಬಕಾರಿ ಹಾಗೂ ಪೊಲೀಸ್ ಇಲಾಖೆಯಿಂದ ಸೂಕ್ತವಾದ ಅನುಮತಿ ಪಡೆದಿರಬೇಕು. ಅನುಮತಿ ನೀಡಿದ ಸಮಯ ಬಿಟ್ಟು ಹೊರಾಂಗಣ ಅಥವಾ ಒಳಾಂಗಣದಲ್ಲಾಗಲಿ ಲೌಡ್‍ಸ್ಪೀಕರ್ ಹಾಗೂ ಡಿ.ಜೆ.ಗಳನ್ನ ಬಳಸುವಂತಿಲ್ಲ. ಒಂದು ವೇಳೆ ಬಳಸೋದಾದರೆ ಅನುಮತಿ ಕಡ್ಡಾಯ.

    ಹೋಂಸ್ಟೇಗಳು ಕೂಡ ವಾಣಿಜ್ಯೇತರ ಸಂಸ್ಥೆಗಳಾಗಿವೆ. ಆದ್ದರಿಂದ ಅನುಮತಿಯ ಸಮಯವನ್ನ ಮೀರಿ ಹೋಂಸ್ಟೇಗಳ ಹೊರಾಂಗಣದಲ್ಲಿ ಲೌಡ್ ಸ್ಪೀಕರ್ ಹಾಗೂ ಡಿ.ಜೆಗಳ ಬಳಕೆಗೆ ಅನುಮತಿ ಇಲ್ಲ. ಹೋಂಸ್ಟೇಗಳಲ್ಲಿ ಬಾರ್ ಹಾಗೂ ಮದ್ಯ ಮಾರಾಟಕ್ಕೆ ತಾತ್ಕಾಲಿಕ ಅಥವಾ ಶಾಶ್ವತವಾಗಿ ಅನುಮತಿ ಇಲ್ಲ. ಹೋಂಸ್ಟೇಗಳಿಗೆ ಸಂಬಂಧಿಸಿದ ಯಾರೇ ಆದರು ಮದ್ಯವನ್ನ ಮಾರಾಟ ಮಾಡುವುದು ಕಂಡು ಬಂದರೆ ಅವರ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆಯಡಿ ಕ್ರಮ ಕೈಗೊಳ್ಳುತ್ತದೆ.

    ಸಾರ್ವಜನಿಕ ಸ್ಥಳಗಳಲ್ಲಿ ಹೊರಾಂಗಣ ಚಟುವಟಿಕೆಗಳನ್ನ ಆಯೋಜಿಸಲು ಪೊಲೀಸ್ ಹಾಗೂ ನಗರಗಳಲ್ಲಿ ನಗರಸಭೆ ಅನುಮತಿಯನ್ನ ಕಡ್ಡಾಯವಾಗಿ ಪಡೆದಿರಬೇಕು. ಪ್ರವಾಸಿಗರು ತಮ್ಮ ವಾಹನಗಳನ್ನ ಎಲ್ಲೆಂದರಲ್ಲಿ, ಹೇಗಂದರೆ ಹಾಗೆ ಅಪಾಯಕಾರಿಯಾಗಿ ಪಾರ್ಕ್ ಮಾಡುವಂತಿಲ್ಲ. ಸಂಸ್ಥೆಗಳು ಅವರ ನಿರೀಕ್ಷಿತ ಜನಸಂದಣಿಗೆ ಅನುಗುಣವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಇದರಿಂದ ಟ್ರಾಫಿಕ್ ಜಾಮ್ ಆದರೆ ಸಂಬಂಧಪಟ್ಟ ಸಂಸ್ಥೆಗಳು ಸಮಾನ ಹೊಣೆ ಹೊರಬೇಕಾಗುತ್ತೆ.

    ಹೊಸ ವರ್ಷದ ಆಚರಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಪ್ರವಾಸಿಗರು ಹಾಗೂ ಹೊಸ ವರ್ಷದ ಆಚರಣೆಗೆ ಕಾಫಿನಾಡಿಗೆ ಬರೋರ ಸ್ವಾತಂತ್ರಕ್ಕೂ ಧಕ್ಕೆಯಾಗದಂತೆ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಂಡಿದೆ.

  • ನಾರಾಯಣಪುರ ಡ್ಯಾಂ ಭರ್ತಿ – ಪ್ರವಾಹ ಭೀತಿಯಲ್ಲಿ ಗ್ರಾಮಗಳು

    ನಾರಾಯಣಪುರ ಡ್ಯಾಂ ಭರ್ತಿ – ಪ್ರವಾಹ ಭೀತಿಯಲ್ಲಿ ಗ್ರಾಮಗಳು

    ರಾಯಚೂರು: ಮಳೆಯಿಂದ ಜಿಲ್ಲೆಯ ನಾರಾಯಣಪುರ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ಕೃಷ್ಣನದಿಯ ಅಕ್ಕಪಕ್ಕದಲ್ಲಿರುವ ಗ್ರಾಮಗಳಿಗೆ ಪ್ರವಾಹ ಭೀತಿ ಕಾಡುತ್ತಿದೆ.

    ನಾರಾಯಣಪುರ ಡ್ಯಾಂ ಸಂಪೂರ್ಣ ಭರ್ತಿಯಾದ ಕಾರಣ ಕೃಷ್ಣನದಿಗೆ 50 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ. ಸಂಜೆ 4 ಗಂಟೆ ವೇಳೆಗೆ ಒಂದು ಲಕ್ಷ ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇದ್ದು, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ಕೃಷ್ಣಾ ನದಿ ಅಕ್ಕಪಕ್ಕದ ಗ್ರಾಮದ ಗ್ರಾಮಸ್ಥರು ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.

    ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡಿ ಗ್ರಾಮ ನಡುಗಡ್ಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ಸುರಕ್ಷತಾ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇದರ ಜೊತೆಗೆ ಕೃಷ್ಣಾ ನದಿಗೆ ಇಳಿಯದಂತೆ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ.

  • ಈ ಬಾರಿ ಬೇಸಿಗೆ ಬೆಳೆಗೆ ನೀರು ಕಟ್- ಸರ್ಕಾರದ ಪತ್ರದಲ್ಲಿ ಏನಿದೆ?

    ಈ ಬಾರಿ ಬೇಸಿಗೆ ಬೆಳೆಗೆ ನೀರು ಕಟ್- ಸರ್ಕಾರದ ಪತ್ರದಲ್ಲಿ ಏನಿದೆ?

    ಬೆಂಗಳೂರು: ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯ ಇಳಿಕೆ ಹಿನ್ನಲೆಯಲ್ಲಿ ಈ ಬಾರಿ ಬೇಸಿಗೆ ಬೆಳೆಗೆ ರೈತರ ಜಮೀನಿಗೆ ನೀರು ಬಿಡದಂತೆ ಜಲಸಂಪನ್ಮೂಲ ಇಲಾಖೆಯ ಸೂಚನೆ ನೀಡಿದೆ.

    ರಾಜ್ಯದ ಹಲವು ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆಯಾಗಿದ್ದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೆ ಕೊರತೆ ಉಂಟಾಗುತ್ತದೆ. ಸದ್ಯ ಜಲಾಶಯಗಳಲ್ಲಿ ಇರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಬಳಸಬೇಕು. ಯಾವುದೇ ಕಾರಣಕ್ಕೂ ಬೇಸಿಗೆ ಬೆಳೆಗೆ ನೀರು ಬಿಡುಗಡೆ ಮಾಡಬಾರದು ಎಂದು ಜಲಸಂಪನ್ಮೂಲ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಪತ್ರದ ಮೂಲಕ ವಿವಿಧ ಜಲಾಶಯಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಬೆಳಗಾವಿ, ಕಲಬುರಗಿ, ಬೆಂಗಳೂರು, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಹಾಗೂ ಬೆಂಗಳೂರಿನ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ, ಕರ್ನಾಟಕ ನೀರಾವರಿ ನಿಗಮ ನಿಯಮಿತ, ಕಾವೇರಿ ನಿರಾವರಿ ನಿಗಮ ನಿಯಮಿತ, ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಿಗೆ ಬೇಸಿಗೆ ಬೆಳಗೆ ರೈತರಿಗೆ ನೀರು ಬಿಡದಂತೆ ಸೂಚಿಸಲಾಗಿದೆ.

    ಪತ್ರದಲ್ಲಿ ಏನಿದೆ?
    ಜಲ ಸಂಪನ್ಮೂಲ ಇಲಾಖೆ ಅಡಿಯಲ್ಲಿನ ಜಲಾಶಯಗಳಲ್ಲಿ ಸಂಗ್ರಹಿಸಿರುವ ನೀರನ್ನು ಬೇಸಿಗೆಯಲ್ಲಿ ಹಾಗೂ ನೀರಿನ ಅಭಾವವಿರುವ ಪರಿಸ್ಥಿತಿಯಲ್ಲಿ ವ್ಯವಸ್ಥಿತವಾಗಿ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಲು ನಿರ್ಧರಿಸಲು ಆಯಾ ಪ್ರಾದೇಶಿಕ ಆಯುಕ್ತರುಗಳಿಗೆ ಅಧ್ಯಕ್ಷತೆಯಲ್ಲಿ ಸಮಿತಿಗಳನ್ನು ರಚಿಸಲಾಗಿದೆ. 2018 ಡಿಸೆಂಬರ್ 16ರಂದು ಕಂದಾಯ ಸಚಿವರ ಅಧ್ಯಕ್ಷತೆಯ ಸಚಿವ ಸಂಪುಟ ಉಪ ಸಮಿತಿಯ ಸಭೆಯಲ್ಲಿ ಮಳೆ ಕೊರತೆಯ ಹಿನ್ನೆಲೆಗಳಲ್ಲಿ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಲಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಜಲಾಶಯದ ಪ್ರಾಧಿಕಾರಕ್ಕೆ ನಿರ್ದೇಶನ ನೀಡಲು ನಿರ್ಣಯಿಸಲಾಗಿದೆ.

    ಪ್ರಸ್ತುತ ಜಲಾಶಯಗಳಲ್ಲಿ ಒಳಹರಿವು ಇಲ್ಲದ ಕಾರಣದಿಂದ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಅಭಾವವನ್ನು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗುವುದನ್ನು ತಪ್ಪಿಸಲು, ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ವ್ಯವಸ್ಥಿತವಾಗಿ ಆಧ್ಯತೆಯ ಮೇರೆಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಸಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಗವಾನ್ ಬಾಯಿಗೆ ಬೀಗ ಹಾಕಿದ ಪೊಲೀಸರು!

    ಭಗವಾನ್ ಬಾಯಿಗೆ ಬೀಗ ಹಾಕಿದ ಪೊಲೀಸರು!

    ಮೈಸೂರು: ಯಾವುದೇ ಹೇಳಿಕೆ ನೀಡದಂತೆ ವಿಚಾರವಾದಿ ಕೆ.ಎಸ್ ಭಗವಾನ್ ಅವರಿಗೆ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.

    ಭಗವಾನ್ ಈಗಾಗಲೇ ಶ್ರೀ ರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಭಾರೀ ಖಂಡನೆ ವ್ಯಕ್ತವಾಗಿತ್ತು. ಇದರಿಂದ ಭಗವಾನ್ ಮನೆಯ ಮುಂದೆ ಹಲವರು ಪ್ರತಿಭಟನೆ ಮಾಡಲು ಮುಂದಾಗಿದ್ದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ಭಗವಾನ್ ಮನೆ ಮುಂದೆ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಇದೀಗ ಪೊಲೀಸರು ಭಗವಾನ್ ಅವರಿಗೆ ಯಾವುದೇ ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಾರೆ ಎಂದ ಮೂಲಗಳು ತಿಳಿಸಿವೆ.

    ಪೊಲೀಸರು ಭಗವಾನ್ ಮನೆಯ ಬಳಿ ಹೆಚ್ಚುವರಿ ಸಿಸಿಟಿವಿಗಳನ್ನು ಅಳವಡಿಸಿದ್ದಾರೆ. ರಾಮ ಮಂದಿರ ಯಾಕೆ ಬೇಡ ಎನ್ನುವ ಪುಸ್ತಕದ ಮೂಲಕ ರಾಮ, ಆಂಜನೇಯ, ಸೀತೆಯ ಬಗ್ಗೆ ನಿಂದಿಸಿದ ಪ್ರೊಫೆಸರ್ ಭಗವಾನ್ ಸದ್ಯ ತೀವ್ರ ಚರ್ಚೆಗೀಡಾಗಿದ್ದರು.

    ಜೀವಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಈಗಾಗಲೇ ಭಗವಾನ್ ಭದ್ರತೆಗಾಗಿ ರಾಜ್ಯ ಸರ್ಕಾರ ಬರೋಬ್ಬರಿ ಅರ್ಧ ಕೋಟಿಗೂ ಹೆಚ್ಚು ಹಣವನ್ನು ಖರ್ಚು ಮಾಡುತ್ತಿದೆ. ಸಶಸ್ತ್ರ ಮೀಸಲು ಪಡೆಯ ಮೂವರು ಪೊಲೀಸರು ಮತ್ತು ಓರ್ವ ಪೊಲೀಸ್ ಅಧಿಕಾರಿ ಭಗವಾನ್ ಮನೆಯನ್ನು ಕಾಯುತ್ತಿದ್ದಾರೆ. ಜೊತೆಗೆ ಭಗವಾನ್ ಹೋದ ಬಂದ ಕಡೆಯೆಲ್ಲಾ ಓರ್ವ ಗನ್‍ಮ್ಯಾನ್ ಇರುತ್ತಾರೆ. ಮೈಸೂರಿನಲ್ಲಿರುವ ಭಗವಾನ್ ಮನೆಗೆ ಸರ್ಕಾರ ಕಡೆಯಿಂದಲೇ ಸಿಸಿಟಿವಿ ಅಳವಡಿಸಲಾಗಿದೆ. ಅದರ ನಿರ್ವಹಣೆಯನ್ನೂ ಸರ್ಕಾರವೇ ಮಾಡುತ್ತಿದೆ.

    ಈ ಬಗ್ಗೆ ಭಗವಾನ್ ಅವರನ್ನು ಪಬ್ಲಿಕ್ ಟಿವಿ ಪ್ರಶ್ನಿಸಿದಾಗ, “ನನಗೆ ಈ ಬಗ್ಗೆ ಯಾವುದೇ ವಿಷಯ ಗೊತ್ತಿಲ್ಲ. ಇದು ಸರ್ಕಾರ ಮತ್ತು ಸದರಿ ಇಲಾಖೆಗೆ ಬಿಟ್ಟ ವಿಷಯವಾಗಿದೆ. ಸಂವಿಧಾನ ಪ್ರಕಾರವಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ. ನನ್ನ ಭದ್ರತೆಗೆ ಖರ್ಚು ಆಗುತ್ತಿರುವ ಹಣದ ಬಗ್ಗೆ ಹಾಗೂ ನನಗೂ ಯಾವುದೇ ಸಂಬಂಧವಿಲ್ಲ. ಇದು ಸರ್ಕಾರಕ್ಕೆ ಬಿಟ್ಟ ವಿಷಯ. ನನಗೆ ಈ ವಿಚಾರದ ಬಗ್ಗೆ ಕೇಳಬೇಡಿ” ಎಂದು ಹಾರಿಕೆಯ ಉತ್ತರ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜಿಟಿಡಿ ಬಾಯಲ್ಲಿ ಅಶ್ಲೀಲ ಪದ ಪ್ರಯೋಗ – ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ

    ಜಿಟಿಡಿ ಬಾಯಲ್ಲಿ ಅಶ್ಲೀಲ ಪದ ಪ್ರಯೋಗ – ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ

    ಮೈಸೂರು: ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಅವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಅವ್ಯಾಚ ಶಬ್ದ ಪ್ರಯೋಗ ಮಾಡಿದ್ದು, ನಿಯಮಗಳ ಅನುಸಾರ ಕಾರ್ಯನಿರ್ವಹಿಸಿ ಎಂದು ಎಚ್ಚರಿಕೆ ನೀಡಿದ್ದಾರೆ.

    ಚಾಮುಂಡೇಶ್ವರಿ ಕ್ಷೇತ್ರದ ಲಿಂಗದೇವರಕೊಪ್ಪಲಿನ ಮೈದಾನದಲ್ಲಿ ಏರ್ಪಡಿಸಿದ್ದ ಕೃತಜ್ಞತಾ ಸಮಾವೇಶದಲ್ಲಿ ಅಧಿಕಾರಿಗಳ ಭ್ರಷ್ಟಾಚಾರದ ಕುರಿತು ತಮ್ಮ ಅನುಭವ ಬಿಚ್ಚಿಟ್ಟ ಅವರು, ಅಧಿಕಾರಿಗಳು ಸಾರ್ವಜನಿಕರ ಜಮೀನು ಖಾತೆ ಮಾಡಿಲು ಮನವಿ ಮಾಡಿದರೆ ಸಾವಿರ ಕಥೆ ಹೇಳಿ ಲಂಚ ಕೇಳುತ್ತಾನೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಹ ಒಂದು ಖಾತೆಗಾಗಿ ಒಂದು ಲಕ್ಷ ರೂ. ಲಂಚ ಕೇಳಿದ್ದಾನೆ ಎಂದು ಏಕವಚನ ಪ್ರಯೋಗ ಮಾಡಿದರು.

    ಇದೇ ವೇಳೆ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಅಧಿಕಾರಿಗಳ ವರ್ತನೆ ಬಗ್ಗೆ ಕಿಡಿಕಾರಿದ ಅವರು, ಹಿಂದಿನ ಸರ್ಕಾರ ಇದ್ದಾಗ ಅವರು ಹೇಳಿದಂತೆ ಕುಣಿದಿದ್ದೀರಿ, ತಪ್ಪುಗಳನ್ನು ಮಾಡಿದ್ದೀರಿ. ಈಗ ನಿಮ್ಮ ವರ್ತನೆ ಬದಲಾಗದಿದ್ದರೆ ನಿಮಗೆ ಉಳಿಗಾಲವಿಲ್ಲ. ನಾನೂ ನಿಮಗೆ ತೊಂದರೆ ಕೊಡುವುದಿಲ್ಲ. ನೀವು ಬದಲಾಗಬೇಕು ಅಷ್ಟೆ. ಕ್ಷೇತ್ರ ವ್ಯಾಪ್ತಿಯಲ್ಲಿ ವಸತಿ ಇಲ್ಲದ ಎಲ್ಲಾ ಜನರ ಸರ್ವೇ ಕಾರ್ಯವನ್ನ ಈ ತಿಂಗಳ ಕೊನೆ ವೇಳೆಗೆ ಪಟ್ಟಿ ತಯಾರಿಸಿ ಮಾಹಿತಿ ನೀಡಿ ಎಂದು ವೇದಿಕೆಯಲ್ಲೇ ಸೂಚನೆ ನೀಡಿದರು.

    ತಮಗೆ ನೀಡಿರುವ ಉನ್ನತ ಶಿಕ್ಷಣ ಇಲಾಖೆ ಖಾತೆ ಸಮುದ್ರದಂತಹ ಖಾತೆ. ಈ ಖಾತೆಯಲ್ಲಿ ನಾನೂ ಪಾಸಾಗ ಬೇಕಾದರೆ ಕ್ಷೇತ್ರದ ಜನರ ಸಹಕಾರ ಬೇಕು. ಮೊದಲಿನಂತೆ ಮದುವೆ, ಸಾವು, ನಾಮಕರಣ ಎಲ್ಲಾ ಕಾರ್ಯಕ್ರಮಕ್ಕೆ ಬರುವುದಕ್ಕೆ ಆಗುವುದಿಲ್ಲ. ಎಲ್ಲಾ ಕಾರ್ಯಕ್ರಮಕ್ಕೆ ಬರುತ್ತ ಕುಳಿತರೆ ಖಾತೆಯಲ್ಲಿ ನಾನೂ ಫೇಲ್ ಆಗುತ್ತೇನೆ. ನಿಮ್ಮ ಕಾರ್ಯಕ್ರಮಗಳಿಗೆ ನನ್ನ ಮಗ ಅಥವಾ ಪತ್ನಿ ಬರುತ್ತಾರೆ. ನನಗೆ ಸಹಕಾರ ಕೊಡಿ ಎಂದು ಮನವಿ ಮಾಡಿದರು.

    https://www.youtube.com/watch?v=jVEnumeRcKA

    https://www.youtube.com/watch?v=Je5bZkJ7vf4