Tag: ಸೂಪರ್ ಓವರ್

  • ವಿಶ್ವಕಪ್‌ ಕ್ರಿಕೆಟ್‌ – ಸೂಪರ್‌ ಓವರ್‌ ಟೈ ಆದ್ರೆ ಬೌಂಡರಿಯನ್ನು ಪರಿಗಣಿಸಲಾಗುತ್ತಾ? 2019ರಲ್ಲಿ ಏನಾಗಿತ್ತು?

    ವಿಶ್ವಕಪ್‌ ಕ್ರಿಕೆಟ್‌ – ಸೂಪರ್‌ ಓವರ್‌ ಟೈ ಆದ್ರೆ ಬೌಂಡರಿಯನ್ನು ಪರಿಗಣಿಸಲಾಗುತ್ತಾ? 2019ರಲ್ಲಿ ಏನಾಗಿತ್ತು?

    ಅಹಮಾದಾಬಾದ್‌: ವಿಶ್ವಕಪ್‌ ಕ್ರಿಕೆಟ್‌ (World Cup Cricket) ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ತಂಡಗಳು ಅ‍ಭ್ಯಾಸ ಪಂದ್ಯವನ್ನು ಆಡುತ್ತಿದೆ. ಭಾರತದಲ್ಲಿ (India) ಈ ಟೂರ್ನಿ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೂಪರ್‌ ಓವರ್‌ನಲ್ಲಿ (Super Over) ಟೈ ಆದರೆ ಫಲಿತಾಂಶವನ್ನು ಹೇಗೆ ನಿರ್ಧಾರ ಮಾಡಲಾಗುತ್ತದೆ? ಬೌಂಡರಿಯನ್ನು ಪರಿಗಣನೆ ಮಾಡಲಾಗುತ್ತಾ? – ಈ ರೀತಿಯ ಪ್ರಶ್ನೆ ಅಭಿಮಾನಿಗಳಲ್ಲಿ ಹುಟ್ಟುವುದು ಸಹಜ.

    ಈ ಪ್ರಶ್ನೆ ಹುಟ್ಟಲು ಕಾರಣವಿದೆ. ಇಂಗ್ಲೆಂಡ್‌ (England) ಮತ್ತು ನ್ಯೂಜಿಲೆಂಡ್‌ (New Zealand) ನಡುವೆ 2019ರಲ್ಲಿ ನಡೆದ ಫೈನಲ್‌ ಪಂದ್ಯ ಟೈ ಆಗಿತ್ತು. ನಂತರ ಸೂಪರ್‌ ಓವರ್‌ನಲ್ಲೂ ಪಂದ್ಯ ಟೈ ಆಯ್ತು. ಟೈನಲ್ಲಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಬೌಂಡರಿ ಆಧಾರದ ಮೇಲೆ ಇಂಗ್ಲೆಂಡ್‌ ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು.

    ಐಸಿಸಿಯ ಈ ನಿಯಮ ಬಹಳ ಚರ್ಚೆಗೆ ಗ್ರಾಸವಾಗಿತ್ತು. ನೆಟ್ಟಿಗರ ತರಾಟೆಯ ನಂತರ ಎಚ್ಚೆತ್ತುಕೊಂಡ ಐಸಿಸಿ ನಿಯಮ ಬದಲಾವಣೆ ಮಾಡಿದ್ದು ಸೂಪರ್‌ ಓವರ್‌ ಪಂದ್ಯ ಟೈ ಆದರೂ ಮತ್ತೆ ಸೂಪರ್‌ ಓವರ್‌ ಆಡಿಸಲಾಗುತ್ತದೆ. ಆ ಸೂಪರ್‌ ಓವರ್‌ ಟೈ ಆದರೂ ಮತ್ತೆ ಆಡಿಸಲಾಗುತ್ತದೆ. ಅಂತಿಮ ಫಲಿತಾಂಶ ಬರುವರೆಗೂ ಸೂಪರ್‌ ಓವರ್‌ ನಡೆಯುತ್ತಲೇ ಇರುತ್ತದೆ. ಯಾವುದೇ ಕಾರಣಕ್ಕೂ ಬೌಂಡರಿಯನ್ನು ಪರಿಗಣಿಸಿ ಫಲಿತಾಂಶ ಪ್ರಕಟವಾಗುವುದಿಲ್ಲ.  ಇದನ್ನೂ ಓದಿ: ವಿಶ್ವಕಪ್‌ ಕ್ರಿಕೆಟ್‌ ಅಲ್ಲ, ವಿಶ್ವ ಟೆರರ್‌ ಕಪ್‌ ಮಾಡ್ತೀವಿ – ಖಲಿಸ್ತಾನ್‌ ಉಗ್ರನಿಂದ ಬೆದರಿಕೆ

     

    2019ರಲ್ಲಿ ಏನಾಗಿತ್ತು?
    ಇಂಗ್ಲೆಂಡಿನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಜುಲೈ 14 ರಂದು ನಡೆದ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಮಾಡಿತು. ನಿಗದಿತ 50 ಓವರ್‌ಗಳಲ್ಲಿ ಇಂಗ್ಲೆಂಡ್‍ಗೆ 241 ರನ್‍ಗಳ ಗುರಿ ನೀಡಿತು. ಆದರೆ ಈ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ಪರ ಕೊನೆಯ ಓವರಿನ ಮೂರನೇ ಎಸೆತದಲ್ಲಿ  ಬೆನ್‌ ಸ್ಟೋಕ್ಸ್‌ ಸಿಕ್ಸ್‌ ಹೊಡೆದರೆ 4ನೇ ಎಸೆತದಲ್ಲೂ 6ರನ್‌ ಬಂದಿತ್ತು. ಎರಡನೇ ರನ್‌ ಓಡುವ ವೇಳೆ  ಚೆಂಡು ಬೆನ್‌ ಸ್ಟೋಕ್ಸ್‌ ಬ್ಯಾಟ್‌ಗೆ ತಾಗಿ ಬೌಂಡರಿಗೆ ಹೋಗಿತ್ತು. ಇದು ಬಹಳ ವಿವಾದಕ್ಕೆ ಕಾರಣವಾಗಿತ್ತು. ಕೊನೆಯ ಎರಡು ಎಸೆತದಲ್ಲಿ ಸಿಂಗಲ್‌ ರನ್‌ ಬಂದ ಕಾರಣ ಪಂದ್ಯ ಟೈ ಆಗಿತ್ತು.

    ಟೈ ಆದ ಕಾರಣ ಐಸಿಸಿ ನಿಯಮದಂತೆ ಸೂಪರ್ ಓವರ್ ಆಡಿಸಲು ತೀರ್ಮಾನ ಮಾಡಲಾಯಿತು. ಸೂಪರ್ ಓವರ್‌ನಲ್ಲಿ ಮೊದಲ ಬ್ಯಾಟ್ ಮಾಡಿದ ಇಂಗ್ಲೆಂಡ್ ಬಟ್ಲರ್ ಮತ್ತು ಸ್ಟೋಕ್ಸ್ ಅವರು ತಲಾ ಒಂದೊಂದು ಬೌಡರಿ ಸಿಡಿಸಿ ನ್ಯೂಜಿಲೆಂಡ್ ತಂಡಕ್ಕೆ 15 ರನ್‍ಗಳ ಗುರಿ ನೀಡಿದರು. ಇದನ್ನು ಬೆನ್ನಟ್ಟಿದ ಕೀವೀಸ್ ಆಟಗಾರರಾದ ಜಿಮ್ಮಿ ನೀಶಮ್ ಮತ್ತು ಮಾರ್ಟಿನ್ ಗುಪ್ಟಿಲ್ ಜೋಫ್ರಾ ಆರ್ಚರ್ ಅವರ ಬೌಲಿಂಗ್‌ ಭರ್ಜರಿ ಬ್ಯಾಟ್ ಬೀಸಿದರು. ನೀಶಮ್ ಅವರು ಒಂದು ಸಿಕ್ಸರ್ ಸಿಡಿಸಿ ಗೆಲ್ಲುವ ಭರವಸೆ ಮೂಡಿಸಿದರು.

     

    ಕೊನೆಯ ಎಸೆತದಲ್ಲಿ ಗೆಲ್ಲಲು ನ್ಯೂಜಿಲೆಂಡ್‍ಗೆ 2 ರನ್ ಬೇಕಿತ್ತು. ಆಗ ಸ್ಟ್ರೈಕ್‍ನಲ್ಲಿ ಇದ್ದ ಅನುಭವಿ ಆಟಗಾರ ಮಾರ್ಟಿನ್ ಗುಪ್ಟಿಲ್ ಜೋಫ್ರಾ ಆರ್ಚರ್ ಎಸೆದ ಎಸೆತದಲ್ಲಿ 2 ರನ್ ಕದಿಯಲು ವಿಫಲರಾದರು. ಜೋಫ್ರಾ ಅವರ ಎಸೆತವನ್ನು ಮಿಡ್ ವಿಕೆಟ್ ಕಡೆಗೆ ತಳ್ಳಿದ ಗುಪ್ಟಿಲ್ ಎರಡು ರನ್ ಕದಿಯುವಲ್ಲಿ ಯಶಸ್ವಿಯಾಗಲಿಲ್ಲ. ರಾಯ್ ಅವರು ಎಸೆದ ಉತ್ತಮ ಥ್ರೋವನ್ನು ಬಟ್ಲರ್ ಹಿಡಿದು ರನೌಟ್‌ ಮಾಡಿದರು. ಈ ಮೂಲಕ ಸೂಪರ್ ಓವರ್ ಕೂಡ ಟೈ ಆಯ್ತು.

    ಫೈನಲ್‍ನಲ್ಲಿ ಸೂಪರ್ ಓವರ್ ಕೂಡ ಟೈ ಆದ ಕಾರಣ ಐಸಿಸಿ ನಿಯಮದಂತೆ ಹೆಚ್ಚು ಬೌಂಡರಿ ಸಿಡಿಸಿದ ತಂಡಕ್ಕೆ ಗೆಲುವು ಎಂದು ಘೋಷಣೆ ಮಾಡಲಾಯಿತು. ಪಂದ್ಯದಲ್ಲಿ ಹೆಚ್ಚು ಬೌಂಡರಿ ಹೊಡೆದಿದ್ದ ಇಂಗ್ಲೆಂಡ್ ಗೆಲುವು ಸಾಧಿಸಿತು. ಈ ಮೂಲಕ ಮೊದಲ ಬಾರಿಗೆ ಇಂಗ್ಲೆಂಡ್ ವಿಶ್ವಕಪ್ ಮುತ್ತಿಕ್ಕಿತು. ಸತತ ಎರಡನೇ ಬಾರಿ ಫೈನಲ್‍ನಲ್ಲಿ ಸೋತ ನ್ಯೂಜಿಲೆಂಡ್ ದ್ವಿತೀಯಸ್ಥಾನಿಯಾಗಿ ನಿರ್ಗಮಿಸಿತು. ಈ ಪಂದ್ಯದಲ್ಲಿ ಇಂಗ್ಲೆಂಡ್‌ 26 ಬೌಂಡರಿ ಹೊಡೆದಿದ್ದರೆ ನ್ಯೂಜಿಲೆಂಡ್‌ 17 ಬೌಂಡರಿ ಹೊಡೆದಿತ್ತು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೂಪರ್‌ ಓವರ್‌ನಲ್ಲಿ ಸಿಕ್ಸರ್‌, ಬೌಂಡರಿ – ಆಸೀಸ್‌ ವಿರುದ್ಧ ಭಾರತಕ್ಕೆ 4 ರನ್‌ ರೋಚಕ ಜಯ

    ಸೂಪರ್‌ ಓವರ್‌ನಲ್ಲಿ ಸಿಕ್ಸರ್‌, ಬೌಂಡರಿ – ಆಸೀಸ್‌ ವಿರುದ್ಧ ಭಾರತಕ್ಕೆ 4 ರನ್‌ ರೋಚಕ ಜಯ

    ಮುಂಬೈ: ರೋಚಕ ಸೂಪರ್‌ ಓವರ್‌ನಲ್ಲಿ(Super Over) ಭಾರತ(India) ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯವನ್ನು 4 ರನ್‌ಗಳಿಂದ ಗೆಲ್ಲುವ  ಮೂಲಕ  5 ಪಂದ್ಯಗಳ ಸರಣಿ 1-1 ರಲ್ಲಿ ಸಮವಾಗಿದೆ.

    ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ(Australia ) 1 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತು. 188 ರನ್‌ಗಳ ಗುರಿಯನ್ನು ಪಡೆದ ಭಾರತ 20 ಓವರ್‌ಗಳಲ್ಲಿ 187 ರನ್‌ ಗಳಿಸಿತು. ಪರಿಣಾಮ ಪಂದ್ಯ ಸೂಪರ್‌ ಓವರ್‌ನತ್ತ ತಿರುಗಿತು.

    ಸೂಪರ್‌ ಓವರ್‌ ಹೇಗಿತ್ತು?
    ಮೊದಲು ಬ್ಯಾಟ್‌ ಮಾಡಿದ ಭಾರತ ಪರ ರಿಚಾ ಘೋಷ್ ಮೊದಲ ಎಸೆತವನ್ನು ಸಿಕ್ಸರ್‌ಗೆ ಅಟ್ಟಿದರೆ ಎರಡನೇ ಎಸೆತದಲ್ಲಿ ಕ್ಯಾಚ್‌ ನೀಡಿ ಔಟಾದರು. ಹೀದರ್ ಗ್ರಹಾಂ ಅವರ ಮೂರನೇ ಎಸೆತದಲ್ಲಿ ಕೌರ್‌ 1 ರನ್‌ ಓಡಿದರು. ನಂತರ ಮೂರು ಎಸೆತಗಳಲ್ಲಿ ಸ್ಮೃತಿ ಮಂಧಾನ 4, 6, 3 ರನ್‌ ಚಚ್ಚಿದ ಪರಿಣಾಮ ಭಾರತ 20 ರನ್‌ ಗಳಿಸಿತು.

    ಭಾರತದ ಪರ ರೇಣುಕಾ ಸಿಂಗ್‌ ಬೌಲಿಂಗ್‌ ದಾಳಿಗೆ ಇಳಿದರು. ಮೊದಲ ಎಸೆತದಲ್ಲಿ ಬೌಂಡರಿ, ಎರಡನೇ ಎಸೆತದಲ್ಲಿ ಒಂಟಿ ರನ್‌ ಬಂತು. ಮೂರನೇ ಎಸೆತದಲ್ಲಿ ಗಾರ್ಡ್‌ನರ್‌ ಕ್ಯಾಚ್‌ ನೀಡಿ ಔಟಾದರು. ನಾಲ್ಕನೇ ಎಸೆತದಲ್ಲಿ ಒಂದು ರನ್‌ ಬಂದರೆ ಕೊನೆಯ ಎರಡು ಎಸೆತವನ್ನು ಹೀಲಿ ಬೌಂಡರಿ ಮತ್ತು ಸಿಕ್ಸರ್‌ಗೆ ಅಟ್ಟಿದರು. ಅಂತಿಮವಾಗಿ ಆಸ್ಟ್ರೇಲಿಯಾ ಸೂಪರ್‌ ಓವರ್‌ನಲ್ಲಿ 16 ರನ್‌ ಮಾತ್ರ ಗಳಿಸಿತು.  ಇದನ್ನೂ ಓದಿ: ವಿರಾಟ್ ಶತಕದ ಸರದಾರ – ಸಚಿನ್ ನಂತರ 2ನೇ ಸ್ಥಾನದಲ್ಲಿ ಕೊಹ್ಲಿ

    ಪಂದ್ಯ ಟೈ ಆಗಿದ್ದು ಹೇಗೆ?
    ಹೀದರ್ ಗ್ರಹಾಂ ಅವರ 19ನೇ ಓವರ್‌ನಲ್ಲಿ ಕೇವಲ 4 ರನ್‌ ಬಂದ ಕಾರಣ ಪಂದ್ಯ ರೋಚಕ ಘಟದತ್ತ ತಿರುಗಿತ್ತು. ಭಾರತಕ್ಕೆ ಕೊನೆಯ ಓವರ್‌ನಲ್ಲಿ 14 ರನ್‌ ಬೇಕಿತ್ತು, ಕ್ರೀಸ್‌ನಲ್ಲಿ ರಿಚಾ ಘೋಷ್‌ ಮತ್ತು ದೇವಿಕಾ ವೈದ್ಯಾ ಇದ್ದರು. ಮೊದಲ ಎಸೆತದಲ್ಲಿ ಘೋಷ್‌ 1 ರನ್‌ ಓಡಿದರೆ ಎರಡನೇ ಎಸೆತವನ್ನು ವೈದ್ಯ ಬೌಂಡರಿಗೆ ಅಟ್ಟಿದರು. ಮೂರನೇ ಎಸೆತದಲ್ಲಿ 1 ರನ್‌ ಬಂದರೆ 4 ಮತ್ತು ಐದನೇ ಎಸೆತದಲ್ಲಿ ಘೋಷ್‌ 2 ಮತ್ತು 1 ರನ್‌ ಓಡಿದರು. ಕೊನೆಯ ಎಸೆತವನ್ನು ದೇವಿಕಾ ಬೌಂಡರಿಗೆ ಅಟ್ಟಿದ್ದರಿಂದ ಪಂದ್ಯ ಟೈ ಆಯ್ತು.

    ಭಾರತದ ಪರ ಸ್ಮೃತಿ ಮಂಧಾನ 79 ರನ್‌(49 ಎಸೆತ, 9 ಬೌಂಡರಿ, 4 ಸಿಕ್ಸರ್‌), ಶಫಾಲಿ ವರ್ಮಾ 34 ರನ್‌( 23 ಎಸೆತ, 4 ಬೌಂಡರಿ, 1 ಸಿಕ್ಸರ್‌), ಹರ್ಮನ್‌ ಪ್ರೀತ್‌ ಕೌರ್‌ 21 ರನ್‌( 22 ಎಸೆತ, 2 ಬೌಂಡರಿ, 1 ಸಿಕ್ಸರ್‌), ರಿಚಾ ಘೋಷ್‌ ಔಟಾಗದೇ 26 ರನ್‌(13 ಎಸೆತ, 3 ಸಿಕ್ಸರ್‌), ದೇವಿಕಾ ವೈದ್ಯ ಔಟಾಗದೇ 11 ರನ್‌(5 ಬೌಂಡರಿ, 2 ಸಿಕ್ಸರ್‌) ಹೊಡೆದರು.

    ಆಸ್ಟ್ರೇಲಿಯಾ ಪರ ಅಲಿಸ್ಸಾ ಹೀಲಿ 25 ರನ್‌(15 ಎಸೆತ, 5 ಬೌಂಡರಿ) ಸಿಡಿಸಿ ಔಟಾದರು. ನಂತರ ಬೆತ್ ಮೂನಿ ಮತ್ತು ತಾಹಿಲಾ ಮೆಕ್‌ಗ್ರಾತ್ ಮುರಿಯದ ಎರಡನೇ ವಿಕೆಟ್‌ಗೆ 99 ಎಸೆತಗಳಲ್ಲಿ 158 ರನ್ ಚಚ್ಚಿದರು. ಮೂನಿ 82 ರನ್‌(54 ಎಸೆತ, 13 ಬೌಂಡರಿ) ಮೆಕ್‌ಗ್ರಾತ್ 70 ರನ್‌(51 ಎಸೆತ, 10 ಬೌಂಡರಿ, 1 ಸಿಕ್ಸರ್‌) ಚಚ್ಚಿದ್ದರು.

    Live Tv
    [brid partner=56869869 player=32851 video=960834 autoplay=true]

  • 2ನೇ ಸೂಪರ್ ಓವರಿನಲ್ಲಿ ಬುಮ್ರಾ ಬೌಲಿಂಗ್ ಮಾಡದಿರಲು ಕಾರಣವೇನು?

    2ನೇ ಸೂಪರ್ ಓವರಿನಲ್ಲಿ ಬುಮ್ರಾ ಬೌಲಿಂಗ್ ಮಾಡದಿರಲು ಕಾರಣವೇನು?

    -ಸೂಪರ್ ಓವರ್ ಟೈ ಆದ್ರೆ ಫಲಿತಾಂಶ ನಿರ್ಧಾರ ಹೇಗೆ?

    ದುಬೈ: ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ನಡೆದ ಡಬಲ್ ಸೂಪರ್ ಓವರಿನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸ್ಮರಣೀಯ ಗೆಲುವು ಪಡೆದಿದೆ. ಆದರೆ ಮೊದಲ ಸೂಪರ್ ಓವರ್ ಬೌಲ್ ಮಾಡಿದ ಬುಮ್ರಾ ಏಕೆ 2ನೇ ಓವರ್ ಬೌಲ್ ಮಾಡಲಿಲ್ಲ. ಸೂಪರ್ ಓವರ್ ಟೈ ಆದ್ರೆ ರೂಲ್ಸ್ ಏನು ಎಂಬ ಬಗ್ಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದಾರೆ.

    ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್ ತಂಡ 6 ವಿಕೆಟ್‍ಗಳ ನಷ್ಟಕ್ಕೆ 20 ಓವರ್ ಗಳಲ್ಲಿ 176 ರನ್ ಗಳಿಸಿತ್ತು. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೂಡ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತ್ತು. ಪರಿಣಾಮ ಪಂದ್ಯ ಸೂಪರ್ ಓವರಿಗೆ ದಾರಿ ಮಾಡಿಕೊಟ್ಟಿತ್ತು. ಮೊದಲ ಸೂಪರ್ ಓವರ್ ಕೂಡ ಟೈ ಆದ ಕಾರಣ 2ನೇ ಸೂಪರ್ ಓವರ್ ನಡೆಸಲಾಗಿತ್ತು. ಇದನ್ನೂ ಓದಿ: ಜೋರ್ಡಾನ್‌ ಎಡವಟ್ – ಒಂದು ಪಿಚ್‌ನಲ್ಲಿ ಬ್ಯಾಟಿಂಗ್‌ ಮತ್ತೊಂದು ಪಿಚ್‌ನಲ್ಲಿ ರನ್ನಿಂಗ್

    ಎರಡು ತಂಡಗಳ ಪರ ಮೊದಲ ಸೂಪರ್ ಓವರ್ ಬೌಲ್ ಮಾಡಿದ್ದ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಉತ್ತಮ ಬೌಲಿಂಗ್ ಮಾಡಿದ್ದರು. ಆದರೆ 2ನೇ ಸೂಪರ್ ಓವರಿನಿಂದ ಇಬ್ಬರು ಆಟಗಾರರು ದೂರ ಉಳಿದಿದ್ದರು. ಮೊದಲ ಸೂಪರ್ ಓವರಿನಲ್ಲಿ 5 ರನ್ ನೀಡಿ ಪೂರನ್, ರಾಹುಲ್ ವಿಕೆಟ್ ಪಡೆದು ಬುಮ್ರಾ ಮಿಂಚಿದ್ದರು. ಶಮಿ ಕೂಡ 5 ರನ್ ಮಾತ್ರ ನೀಡಿದ್ದರು. ಆದರೆ ಡಿ ಕಾಕ್ ಕೊನೆಯ ಎಸೆತದಲ್ಲಿ ರನೌಟ್ ಆಗಿದ್ದರು. ಇದನ್ನೂ ಓದಿ: ಚಂಗನೆ ಜಿಗಿದು ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂಪರ್‌ ಹ್ಯೂಮನ್‌ ಮಯಾಂಕ್‌

    ನಿಯಮಗಳ ಅನ್ವಯ ಸೂಪರ್ ಓವರ್ ಟೈ ಆದ್ರೆ, ಮೊದಲ ಸೂಪರ್ ಓವರ್ ಬೌಲ್ ಮಾಡಿದ ಬೌಲರ್ ಗಳು ಮತ್ತೆ ಬೌಲ್ ಮಾಡುವಂತಿಲ್ಲ. ಈ ನಿಯಮಗಳ ಅನ್ವಯ ಬುಮ್ರಾ, ಶಮಿ 2ನೇ ಬಾರಿ ಬೌಲಿಂಗ್ ಮಾಡಲಿಲ್ಲ. ಅಲ್ಲದೇ ಮೊದಲ ಸೂಪರ್ ಓವರಿನಲ್ಲಿ ಔಟಾದ ಬ್ಯಾಟ್ಸ್ ಮನ್ಸ್ ಕೂಡ 2ನೇ ಸೂಪರ್ ಓವರಿನಿಂದ ದೂರ ಉಳಿಯಬೇಕಿದೆ. ನಿನ್ನೆಯ ಪಂದ್ಯದಲ್ಲಿ ಮೊದಲ ಸೂಪರ್ ಓವರಿನಲ್ಲಿ ಅಜೇಯರಾಗಿ ಉಳಿದಿದ್ದ ಪೋಲಾರ್ಡ್, ಪಾಂಡ್ಯದೊಂದಿಗೆ 2ನೇ ಸೂಪರ್ ಓವರಿನಲ್ಲಿ ಬ್ಯಾಟಿಂಗ್ ಮಾಡಿದ್ದರು.

    2019ರ ವಿಶ್ವಕಪ್ ಚಾಂಪಿಯನ್ ಆಯ್ಕೆ ಕುರಿತಂತೆ ನಡೆದಿದ್ದ ವಿವಾದದ ಬಳಿಕ ಸೂಪರ್ ಓವರ್ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿತ್ತು. ವಿಶ್ವಕಪ್ ಸೂಪರ್ ಓವರಿನಲ್ಲಿ ಎದುರಾದ ಇಂಗ್ಲೆಂಡ್ ತಂಡ 15 ರನ್ ಗಳಿಸಿತ್ತು. ನ್ಯೂಜಿಲೆಂಡ್ ತಂಡ ಕೂಡ 15 ರನ್ ಗಳಿಸಿತ್ತು. ಅಂದು ಟ್ರೆಂಟ್ ಬೌಲ್ಟ್ ಎಸೆದ ಓವರಿನಲ್ಲಿ ಬೆನ್ ಸ್ಟೋಕ್ಸ್ ಮತ್ತು ಬಟ್ಲರ್ ತಲಾ ಒಂದು ಬೌಂಡರಿ ಸಿಡಿಸಿದ್ದರು. ಇತ್ತ ಜೋಫ್ರಾ ಅರ್ಚರ್ ಎಸೆದ ಓವರಿನಲ್ಲಿ ನಿಶಮ್ ಒಂದು ಸಿಕ್ಸರ್ ಸಿಡಿಸಿದ್ದರು. ಆದರೆ ಯಾವುದೇ ಬೌಂಡರಿ ಬಂದಿರಲಿಲ್ಲ. ಎರಡು ತಂಡಗಳ ರನ್ ಸಮವಾಗಿದ್ದರೂ ಬೌಂಡರಿಗಳ ಅನ್ವಯ ಇಂಗ್ಲೆಂಡ್ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು.

    ಪಂದ್ಯದ ಬಳಿಕ ಸೂಪರ್ ಓವರ್ ಟೈ ಆದ ಸಂದರ್ಭದಲ್ಲಿ ಬೌಂಡರಿ ಲೆಕ್ಕಾದಲ್ಲಿ ಗೆಲುವು ನಿರ್ಧರಿಸುವುದು ಸರಿಯಲ್ಲ ಎಂದು ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವು ಮಾಜಿ, ಹಾಲಿ ಕ್ರಿಕೆಟ್ ದಿಗ್ಗಜರು ಐಸಿಸಿಗೆ ಸಲಹೆ ನೀಡಿದ್ದರು. ಈ ಸಲಹೆಗಳ ಅನ್ವಯ ಸೂಪರ್ ಓವರ್ ಟೈ ಆದ್ರೆ 2ನೇ ಸೂಪರ್ ಓವರ್ ನಡೆಸಲು ಐಸಿಸಿ ನಿಯಮಗಳನ್ನು ಬದಲಿಸಿತ್ತು. ಇದನ್ನೂ ಓದಿ: ಇಳಿ ಸಂಜೆಯಲಿ ಪತ್ನಿಯ ಜೊತೆ ರೊಮ್ಯಾಂಟಿಕ್ ಮೂಡ್‍ನಲ್ಲಿ ಕೊಹ್ಲಿ

    2007ರ ಭಾರತ ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ ಲೀಗ್ ಪಂದ್ಯದಲ್ಲಿ ಭಾರತ ಬಾಲ್ ಔಟ್ ಮೂಲಕ ಪಾಕಿಸ್ತಾನವನ್ನು ಸೋಲಿಸಿತ್ತು. ಭಾರತದ ಬೌಲರ್ ಗಳು ಮೂರು ಬಾರಿ ವಿಕೆಟಿಗೆ ಬಾಲ್ ಹಾಕಿದರೆ ಆರಂಭದ ಮೂರು ಅವಕಾಶಗಳಲ್ಲಿ ಪಾಕಿಸ್ತಾನ ವಿಫಲವಾದ ಕಾರಣ ಭಾರತ ತಂಡ ಗೆದ್ದಿತ್ತು. ಈ ನಿಯಮಕ್ಕೆ ವ್ಯಾಪಕ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಒಂದು ಓವರ್ ಆಟ ಆಡಿಸಲು ಐಸಿಸಿ ನಿರ್ಧರಿಸಿತ್ತು. ಯಾವ ತಂಡ ಹೆಚ್ಚು ರನ್‍ಗಳಿಸುತ್ತದೋ ಆ ತಂಡ ವಿಜಯಿ ಎಂದು ಘೋಷಿಸಲಾಗುತ್ತಿತ್ತು. ಆದರೆ 2019ರ ವಿಶ್ವಕಪ್ ನಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯ ಸೂಪರ್ ಓವರ್‍ನಲ್ಲೂ ಟೈ ಆಗಿತ್ತು. ಆದರೆ ಅತಿ ಹೆಚ್ಚು ಬೌಂಡರಿ ಹೊಡೆದಿದ್ದ ಕಾರಣ ಇಂಗ್ಲೆಂಡ್ ವಿಶ್ವಕಪ್ ಜಯಿಸಿತ್ತು. ವಿಶ್ವಕಪ್‍ನಂತಹ ಮಹತ್ವದ ಪಂದ್ಯದಲ್ಲಿ ಬೌಂಡರಿ ಆಧಾರದ ಮೇಲೆ ಪಂದ್ಯ ನಿರ್ಧರಿಸುವುದಕ್ಕೆ ಘಟಾನುಘಟಿ ಆಟಗಾರರೇ ಭಾರೀ ವಿರೋಧ ವ್ಯಕ್ತಪಡಿಸಿದರು. ಟೀಕೆ ವ್ಯಕ್ತವಾದ ಬಳಿಕ ಐಸಿಸಿ 2020ರ ಫೆಬ್ರವರಿಯಲ್ಲಿ ಸೂಪರ್ ಓವರ್ ನಿಯಮಗಳನ್ನು ಬದಲಾವಣೆ ಮಾಡಿತು.

    ಉಳಿದಂತೆ ಸೂಪರ್ ಓವರಿನಲ್ಲಿ ಒಂದು ವೇಳೆ ಎಸೆತಗಳು ಬಾಕಿ ಇದ್ದರೂ ಎದುರಾಳಿ ತಂಡದ ಎರಡು ವಿಕೆಟ್ ಪತನವಾದರೆ ಆಲೌಟ್ ಎಂದು ಘೋಷಿಸಲಾಗುತ್ತದೆ. ಪ್ರತಿ ತಂಡಕ್ಕೆ ಒಂದು ಬಾರಿ ಅಂಪೈರ್ ತೀರ್ಮಾನವನ್ನು ಪುನರ್ ಪರಿಶೀಲಿಸಲು ಅವಕಾಶ ನೀಡಲಾಗುತ್ತದೆ.

     

  • ಚಂಗನೆ ಜಿಗಿದು ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂಪರ್‌ ಹ್ಯೂಮನ್‌ ಮಯಾಂಕ್‌

    ಚಂಗನೆ ಜಿಗಿದು ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂಪರ್‌ ಹ್ಯೂಮನ್‌ ಮಯಾಂಕ್‌

    ದುಬೈ: ಕ್ರಿಕೆಟ್‌ ಇತಿಹಾಸದಲ್ಲಿ ಎರಡು ಸೂಪರ್‌ ಓವರ್‌ ಕಂಡು ದಾಖಲೆ ಬರೆದ ಪಂದ್ಯದಲ್ಲಿ ಕನ್ನಡಿಗ ಮಯಾಂಕ್‌ ಅಗರ್‌ವಲ್‌ ಅವರ ಅತ್ಯುತ್ತಮ ಫೀಲ್ಡಿಂಗ್‌ ಕ್ರಿಕೆಟ್‌ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

    ಮೊದಲ ಸೂಪರ್‌ ಓವರ್‌ನಲ್ಲಿ ಬ್ಯಾಟ್‌ ಮತ್ತು ಬೌಲ್‌ ಮಾಡಿದವರು ಎರಡನೇ ಸೂಪರ್‌ ಓವರ್‌ನಲ್ಲಿ ಬ್ಯಾಟ್‌, ಬೌಲ್‌ ಮಾಡುವಂತಿಲ್ಲ ಎಂಬ ನಿಯಮದ ಹಿನ್ನೆಲೆಯಲ್ಲಿ ಪಂಜಾಬ್ ಪರ ಕ್ರಿಸ್ ಜೋರ್ಡಾನ್ ಅವರು ಎರಡನೇ ಸೂಪರ್ ಓವರ್ ಬೌಲ್ ಮಾಡಿದರು.

    ಮೊದಲ ಬಾಲ್‌ ವೈಡ್‌ ಆದರೆ ನಂತರದ ಬಾಲಿನಲ್ಲಿ ಒಂದು ಸಿಂಗಲ್ ಬಂತು. ಎರಡನೇ ಬಾಲಿನಲ್ಲಿ ಒಂದು ರನ್ ಬಂತು. ಮೂರನೇ ಎಸೆತವನ್ನು ಕೀರನ್ ಪೊಲಾರ್ಡ್ ಬೌಂಡರಿಗಟ್ಟಿದರು. ನಾಲ್ಕನೇ ಎಸೆತ ಮತ್ತೆ ವೈಡ್ ಆಯ್ತು. ನಾಲ್ಕನೇ ಬಾಲ್ ಸಿಂಗಲ್ ಬಂದು ಹಾರ್ದಿಕ್ ಪಾಂಡ್ಯ ಔಟ್ ಆದರು. ಐದನೇ ಬಾಲ್ ಡಾಟ್ ಬಾಲ್ ಆಯ್ತು. ಇದನ್ನೂ ಓದಿ: ಪಂದ್ಯ ಟೈ ಆಗಿ ಸೂಪರ್‌ ಓವರ್‌ ಗೆ ಹೋಗಿದ್ದು ಹೇಗೆ?

    ಸ್ಟ್ರೈಕ್‌ನಲ್ಲಿದ್ದ ಕೊನೆಯ ಎಸೆತವನ್ನು ಕೀರನ್‌ ಪೋಲಾರ್ಡ್‌ ಸಿಕ್ಸರ್‌ ಅಟ್ಟಲು ಬಲವಾಗಿ ಹೊಡೆದರು. ಚೆಂಡು ಸಿಕ್ಸ್‌ಗೆ ಹೋಗುತ್ತದೆ ಎನ್ನುವಷ್ಟರಲ್ಲಿ ಬೌಂಡರಿ ಗೆರೆ ಬಳಿ ಇದ್ದ ಮಯಾಂಕ್‌ ಜಿಗಿದು ಬಾಲನ್ನು ತಡೆದು ಎಸೆದರು. 4ರನ್‌ ತಡೆದ ಪರಿಣಾಮ ಮುಂಬೈ 11 ರನ್‌ ಗಳಿಸಿತು.

    ಒಂದು ವೇಳೆ ನೇರವಾಗಿ ಸಿಕ್ಸ್‌ ಹೋಗುತ್ತಿದ್ದರೆ ಅಥವಾ ತಡೆಯುವ ಪ್ರಯತ್ನದಲ್ಲಿ ಕೈಗೆ ಸಿಕ್ಕಿ ಬಾಲ್‌ ಬೌಂಡರಿ ಗೆರೆ ದಾಟುತ್ತಿದ್ದರೆ ಕ್ರಿಸ್‌ ಗೇಲ್‌ ಮತ್ತು ಮಯಾಂಕ್‌ ಮೇಲೆ ಒತ್ತಡ ಹೆಚ್ಚಾಗುವ ಸಾಧ್ಯತೆ ಇತ್ತು. ಆದರೆ ಮಯಾಂಕ್‌ ಅವರ ಅತ್ಯುತ್ತಮ ಫೀಲ್ಡಿಂಗ್‌ ಪಂದ್ಯವನ್ನೇ ಬದಲಾಯಿಸಿ ಬಿಟ್ಟಿತು. 4 ರನ್‌ ಸೇವ್‌ ಮಾಡಿ ಕೇವಲ 2 ರನ್‌ ನೀಡಿದ ಮಯಾಂಕ್‌ ಅವರ ಪ್ರಯತ್ನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    11 ರನ್‌ಗಳ ಗುರಿಯನ್ನು ಪಡೆದ ಪಂಜಾಬ್‌ ಪರ ಆಟವಾಡಲು ಗೇಲ್‌ ಮತ್ತು ಅಗರ್‌ವಾಲ್‌ ಕ್ರೀಸಿಗೆ ಬಂದರು. ಮುಂಬೈ ಪರ ಟ್ರೆಂಟ್ ‌‌‌‌ಬೌಲ್ಟ್ ಬೌಲ್ ಮಾಡಿದರು. ಮೊದಲ ಬಾಲನ್ನೇ ಕ್ರಿಸ್ ಗೇಲ್ ಸಿಕ್ಸರ್ ಗೆ ಅಟ್ಟಿದರು. ನಂತರ ಎರಡನೇ ಬಾಲನ್ನು ಗೇಲ್ ಅವರು ಸಿಂಗಲ್ ತೆಗೆದುಕೊಂಡರು. ನಂತರ ಮೂರನೇ ಬಾಲನ್ನು ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಬೌಂಡರಿಗಟ್ಟಿದರು. ನಂತರ ಒಂದು ರನ್ ಬೇಕಿದ್ದಾಗ ನಾಲ್ಕನೇ ಬಾಲನ್ನು ಕೂಡ ಮಯಾಂಕ್ ಬೌಂಡರಿ ಕಳುಹಿಸಿ ಪಂಜಾಬ್‍ಗೆ ಜಯ ತಂದುಕೊಟ್ಟರು.

    https://twitter.com/ShivamChatak/status/1317903973290893312

  • ಸೂಪರ್ ಓವರ್ ಕೂಡ ಟೈ – ಎರಡನೇ ಸೂಪರ್ ಓವರಿನಲ್ಲಿ ಪಂಜಾಬ್‍ಗೆ ರೋಚಕ ಜಯ

    ಸೂಪರ್ ಓವರ್ ಕೂಡ ಟೈ – ಎರಡನೇ ಸೂಪರ್ ಓವರಿನಲ್ಲಿ ಪಂಜಾಬ್‍ಗೆ ರೋಚಕ ಜಯ

    – ಗೇಲ್, ಮಯಾಂಕ್ ಸಿಕ್ಸರ್ ಬೌಂಡರಿಗಳಿಂದ ಮುಂಬೈಗೆ ಸೋಲು
    – ರೋಹಿತ್ ಪಡೆಯ ಗೆಲುವಿನ ಓಟಕ್ಕೆ ರಾಹುಲ್ ಬ್ರೇಕ್
    – ರಾಹುಲ್ ಹೋರಾಟಕ್ಕೆ ಕೊನೆಗೂ ಜಯ

    ಅಬುಧಾಬಿ: ಇಂದು ನಡೆದ ಸಂಡೇ ಧಮಾಕದ ಎರಡನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಎರಡನೇ ಸೂಪರ್ ಓವರಿನಲ್ಲಿ ಗೆದ್ದು, ಮುಂಬೈ ತಂಡದ ಸತತ ಐದು ಪಂದ್ಯಗಳ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದೆ.

    ಮೊದ್ಲು ಟೈ ಆಗಿದ್ದು ಹೇಗೆ?
    ಕೊನೆಯ ಎರಡು ಓವರಿನಲ್ಲಿ 22 ರನ್ ಬೇಕಿತ್ತು. ಆದರೆ 19ನೇ ಓವರಿನಲ್ಲಿ ಪಂಜಾಬ್‍ಗೆ 13 ರನ್ ಬಂದಿತ್ತು. ಅಂತಯೇ ಕೊನೆಯ ಓವರಿನಲ್ಲಿ 9 ರನ್ ಬೇಕಿತ್ತು. ಈ ವೇಳೆ 20ನೇ ಓವರಿನಲ್ಲಿ ಟ್ರೆಂಟ್ ಬೌಲ್ಟ್, ಎಸೆದ ಮೊದಲ ಬಾಲಲ್ಲಿ ದೀಪಕ್ ಹೂಡಾ ಸಿಂಗಲ್ ತೆಗೆದರು. ಎರಡನೇ ಬಾಲಿನಲ್ಲಿ ಕ್ರಿಸ್ ಜೋರ್ಡನ್ ಅವರು ಬೌಂಡರಿ ಹೊಡೆದರು. ಮುರನೇ ಬಾಲಿನಲ್ಲಿ ಮತ್ತೆ ಒಂದು ರನ್ ಬಂತು. ನಾಲ್ಕನೇ ಬಾಲಿನಲ್ಲಿ ಡಾಟ್ ಬಾಲ್ ಆಗಿತ್ತು. ಐದನೇ ಬಾಲಿನಲ್ಲಿ ಎರಡು ರನ್ ಬಂದಿತು. ಕೊನೆಯ ಬಾಲಿಗೆ 2 ರನ್ ಬೇಕಿತ್ತು ಆಗ ಒಂದು ರನ್ ಓಡಿ ಜಾರ್ಡನ್ ರನ್ ಔಟ್ ಆದರು. ಈ ಮೂಲಕ ಪಂದ್ಯ ಟೈ ಆಯ್ತು.

    ಮುಂಬೈ ಇಂಡಿಯನ್ಸ್ ಪರ ಸೂಪರ್ ಓವರ್ ಅನ್ನು ಬುಮ್ರಾ ಮಾಡಿದರು. ಮೊದಲ ಬಾಲಿನಲ್ಲಿ ರಾಹುಲ್ ಸಿಂಗಲ್ ತೆಗೆದರು. ಎರಡನೇ ಬಾಲಿನಲ್ಲಿ ನಿಕೋಲಸ್ ಪೂರನ್ ಕ್ಯಾಚ್ ಕೊಟ್ಟು ಹೊರನಡೆದರು. ಮೂರನೇ ಬಾಲ್ ಕೂಡ ಒಂದು ರನ್ ಬಂತು. ನಾಲ್ಕನೇ ಬಾಲಿನಲ್ಲೂ ಸಿಂಗಲ್ ಬಂತು. ಐದನೇ ಬಾಲಿನಲ್ಲಿ ರಾಹುಲ್ ಎರಡು ರನ್ ತೆಗೆದರು. ಕೊನೆಯ ಬಾಲಿನಲ್ಲಿ ರಾಹುಲ್ ಕೂಡ ಔಟ್ ಆದರು. ಈ ಮೂಲಕ ಮುಂಬೈ ಇಂಡಿಯನ್ಸ್ ಗೆ 6 ರನ್‍ಗಳ ಟಾರ್ಗೆಟ್ ಸಿಕಿತು.

    ಈ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡದಿಂದ ಬಂದ ನಾಯಕ ರೋಹಿತ್ ಶರ್ಮಾ ಮತ್ತು ಕ್ವಿಂಟನ್ ಡಿ ಕಾಕ್ ಶಮಿಯವರ ಮೊದಲ ಎರಡು ಬಾಲಿನಲ್ಲಿ ಸಿಂಗಲ್ ತೆಗೆದುಕೊಂಡರು. ನಂತರ ಮೂರನೇ ಎಸೆತದಲ್ಲಿ ಕೂಡ ಒಂದು ರನ್ ಬಂತು. ನಾಲ್ಕನೇ ಬಾಲ್ ಡಾಟ್ ಬಾಲ್ ಆಯ್ತು. ಐದನೇ ಬಾಲಿನಲ್ಲಿ ಒಂದು ರನ್ ಬಂತು. ಆದರೆ ಕೊನೆಯ ಬಾಲಿನಲ್ಲಿ ಎರಡು ರನ್ ಬೇಕಿದ್ದಾಗ ಡಿ ಕಾಕ್ ಅವರು ಮತ್ತೆ ರನೌಟ್ ಆದರು.

    ಎರಡನೇ ಸೂಪರ್ ಓವರ್
    ಹೊಸ ನಿಯಮದಂತೆ ಮತ್ತೆ ಸೂಪರ್ ಓವರ್ ಆರಂಭವಾಯ್ತು. ಪಂಜಾಬ್ ಪರ ಕ್ರಿಸ್ ಜೋರ್ಡಾನ್ ಅವರು ಸೂಪರ್ ಓವರ್ ಬೌಲ್ ಮಾಡಿದರು. ಮೊದಲ ಬಾಲಿನ್ನು ವೈಡಿಗೆ ಎಸೆದರು. ನಂತರದ ಬಾಲಿನಲ್ಲಿ ಒಂದು ಸಿಂಗಲ್ ಬಂತು. ಎರಡನೇ ಬಾಲಿನಲ್ಲಿ ಒಂದು ರನ್ ಬಂತು. ಮೂರನೇ ಎಸೆತವನ್ನು ಕೀರನ್ ಪೊಲಾರ್ಡ್ ಬೌಂಡರಿಗಟ್ಟಿದರು. ನಾಲ್ಕನೇ ಎಸೆತ ಮತ್ತೆ ವೈಡ್ ಆಯ್ತು. ನಾಲ್ಕನೇ ಬಾಲ್ ಸಿಂಗಲ್ ಬಂದು ಹಾರ್ದಿಕ್ ಪಾಂಡ್ಯ ಔಟ್ ಆದರು. ಐದನೇ ಬಾಲ್ ಡಾಟ್ ಬಾಲ್ ಆಯ್ತು. ಕೊನೆಯ ಬಾಲಿನಲ್ಲಿ ಮಯಾಂಕ್ ಅಗರ್ವಾಲ್ ಮಾಡಿದ ಸೂಪರ್ ಫೀಲ್ಡಿಂಗ್ ಇಂದ ಎರಡು ರನ್ ಬಂತು. ಈ ಮೂಲಕ ಪಂಜಾಬ್‍ಗೆ 12 ರನ್‍ಗಳ ಟಾರ್ಗೆಟ್ ಸಿಕ್ತು.

    ಈ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ತಂಡಕ್ಕೆ ಟ್ರೆಂಟ್ ‌‌‌‌ಬೌಲ್ಟ್ ಅವರು ಬೌಲ್ ಮಾಡಿದರು. ಅವರ ಎಸೆತದ ಮೊದಲ ಬಾಲನ್ನೇ ಕ್ರಿಸ್ ಗೇಲ್ ಸಿಕ್ಸರ್ ಗೆ ಅಟ್ಟಿದರು. ನಂತರ ಎರಡನೇ ಬಾಲನ್ನು ಗೇಲ್ ಅವರು ಸಿಂಗಲ್ ತೆಗೆದುಕೊಂಡರು. ನಂತರ ಮೂರನೇ ಬಾಲನ್ನು ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಬೌಂಡರಿಗಟ್ಟಿದರು. ನಂತರ ಒಂದು ರನ್ ಬೇಕಿದ್ದಾಗ ನಾಲ್ಕನೇ ಬಾಲನ್ನು ಕೂಡ ಮಯಾಂಕ್ ಬೌಂಡರಿ ಕಳುಹಿಸಿ ಪಂಜಾಬ್‍ಗೆ ಜಯ ತಂದಿತ್ತರು.

    ಸೂಪರ್ ಓವರ್ ನಿಯಮ
    ಸೂಪರ್ ಓವರ್ ನಿಯಮದಂತೆ ಒಂದು ಪಂದ್ಯದಲ್ಲಿ ಎರಡು ಸೂಪರ್ ಓವರ್ ಬಂದರೆ ಎರಡು ತಂಡದಲ್ಲಿ ಮೊದಲ ಸೂಪರ್ ಓವರಿನಲ್ಲಿ ಬೌಲ್ ಮಾಡಿದ ಬೌಲರ್ ಮತ್ತು ಬ್ಯಾಟ್ ಮಾಡಿದ ಬ್ಯಾಟ್ಸ್ ಮ್ಯಾನ್‍ಗಳು ಮತ್ತೆ ಬೌಲ್ ಆಥವಾ ಬ್ಯಾಟ್ ಮಾಡುವಂತಿಲ್ಲ. ಈ ಕಾರಣಕ್ಕೆ ಎರಡನೇ ಸೂಪರ್ ಓವರಿನಲ್ಲಿ ಬುಮ್ರಾ ಮತ್ತು ಶಮಿ ಮತ್ತೆ ಬೌಲ್ ಮಾಡಲಿಲ್ಲ. ಅಂತಯೇ ರಾಹುಲ್ ಹಾಗೂ ರೋಹಿತ್ ಬ್ಯಾಟಿಂಗ್ ಬಾರಲಿಲ್ಲ.

    ಇಂದು ಟಾಸ್ ಗೆದ್ದು ಮೊದಲ ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಕ್ವಿಂಟನ್ ಡಿ ಕಾಕ್ ಅವರ ಅರ್ಧಶತಕ ಮತ್ತು ಕೊನೆಯಲ್ಲಿ ಕೀರನ್ ಪೊಲಾರ್ಡ್ ಅವರ ಸ್ಫೋಟಕ ಆಟದಿಂದ ನಿಗದಿತ 20 ಓವರಿನಲ್ಲಿ 176 ರನ್‍ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ವಿಕೆಟ್ ಕಳೆದುಕೊಂಡು ನಾಯಕ ಕೆಎಲ್ ರಾಹುಲ್ ಅವರ ತಾಳ್ಮೆಯ ಅರ್ಧಶತಕದಿಂದ ಮ್ಯಾಚ್ ಟೈ ಆಗಿತು.

    ಇದಕ್ಕೂ ಮೊದಲು ಬ್ಯಾಟ್ ಮಾಡಿದ್ದ ಮುಂಬೈ ಇಂಡಿಯನ್ಸ್ ತಂಡ ನಾಯಕ ರೋಹಿತ್ ಶರ್ಮಾ ಬೇಗನೇ ಔಟ್ ಆದರು ದೊಡ್ಡ ಮೊತ್ತ ಕಲೆಹಾಕಿತ್ತು. ಕ್ವಿಂಟನ್ ಡಿ ಕಾಕ್ ಅವರು 43 ಬಾಲಿಗೆ 53 ರನ್ ಸಿಡಿಸಿ ಮಿಂಚಿದರು. ಜೊತೆಗೆ ಮಧ್ಯದಲ್ಲಿ 30 ಬಾಲಿಗೆ 34 ರನ್ ಸಿಡಿಸಿ ಕ್ರುನಾಲ್ ಪಾಂಡ್ಯ ತಾಳ್ಮೆಯ ಆಟವಾಡಿದರು. ಆದರೆ ಕೊನೆಯಲ್ಲಿ ಬಿಗ್ ಹಿಟಿಂಗ್ ಹೊಡೆದ ಕೀರನ್ ಪೊಲಾರ್ಡ್ ಕೇವಲ 12 ಬಾಲಿಗೆ 34 ರನ್ ಸಿಡಿಸಿ ಮುಂಬೈಯನ್ನು 176 ಗಡಿ ಮುಟ್ಟಿಸಿದರು.

  • ಟೆನ್ನಿಸ್ ಬಾಲ್ ಮ್ಯಾಚಿನಿಂದ ಸೂಪರ್ ಓವರ್ ಬೌಲರ್ – ಆರ್‌ಸಿಬಿ ಸೈನಿಯ ಕ್ರಿಕೆಟ್ ಪ್ರಯಾಣದ ಕಥೆ

    ಟೆನ್ನಿಸ್ ಬಾಲ್ ಮ್ಯಾಚಿನಿಂದ ಸೂಪರ್ ಓವರ್ ಬೌಲರ್ – ಆರ್‌ಸಿಬಿ ಸೈನಿಯ ಕ್ರಿಕೆಟ್ ಪ್ರಯಾಣದ ಕಥೆ

    – ಗಂಭೀರ್ ಗುರುತಿಸಿ ಕರೆತಂದ, ರಾಹುಲ್ ಡ್ರಾವಿಡ್ ಗರಡಿಯಲ್ಲಿ ಪಳಗಿದ ಪ್ರತಿಭೆ
    – ಬಸ್ ಚಾಲಕನ ಮಗ, ಸ್ವಾತಂತ್ರ್ಯ ಹೋರಾಟಗಾರನ ಮೊಮ್ಮಗ

    ನವದೆಹಲಿ: ಶ್ರದ್ಧೆ, ಪರಿಶ್ರಮ ಇದ್ದಾರೆ ಏನಾನ್ನದರೂ ಸಾಧಿಸಬಹುದು ಎಂಬುದಕ್ಕೆ ಉತ್ತಮ ಉದಾಹರಣೆ ಎಂದರೆ ಅದು ಆರ್‌ಸಿಬಿ ತಂಡದ ಸ್ಟಾರ್ ಬೌಲರ್ ನವದೀಪ್ ಸೈನಿ. ಹಣಕ್ಕಾಗಿ ಟೆನ್ನಿಸ್ ಬಾಲ್ ಮ್ಯಾಚ್ ಆಡುತ್ತಿದ್ದ ಸೈನಿ ಇಂದು ಭಾರತದ ಪರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೌಲ್ ಮಾಡಿದ್ದಾರೆ.

    ಹರಿಯಾಣದಲ್ಲಿ ಜನಿಸಿದ ಸೈನಿ ಅವರ ತಂದೆ ಸರ್ಕಾರಿ ಬಸ್ ಚಾಲಕರಾಗಿದ್ದಾರೆ. ಇವರ ತಾತ ಕರಮ್ ಸಿಂಗ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದು, ಸುಭಾಷ್ ಚಂದ್ರ ಭೋಸ್ ಅವರ ಇಂಡಿಯನ್ ನ್ಯಾಷನಲ್ ಆರ್ಮಿಯಲ್ಲಿ ಸದಸ್ಯರಾಗಿದ್ದರು. ಸೈನಿ 1992 ನವೆಂಬರ್ 23ರಂದು ಹರಿಯಾಣದ ಕರ್ನಾಲ್ ಅಲ್ಲಿ ಜನಿಸಿದ್ದರು.

    ಗಂಭೀರ್ ಗುರುತಿಸಿದ್ದ ಪ್ರತಿಭೆ
    ಸೈನಿಯವರು ಮೊದಲು ಖರ್ಚಿಗಾಗಿ ಟೆನ್ನಿಸ್ ಪಂದ್ಯಗಳನ್ನು ಆಡುತ್ತಿದ್ದರು. ಇದರಲ್ಲಿ ಒಂದು ಪಂದ್ಯಕ್ಕೆ 250ರಿಂದ 300ರೂ.ಗಳನ್ನು ಪಡೆಯುತ್ತಿದ್ದರು. ಟೆನ್ನಿಸ್ ಬಾಲಿನಲ್ಲಿ ಉತ್ತಮವಾಗಿ ಆಡುತ್ತಿದ್ದ ಸೈನಿಯವರನ್ನು ಒಂದು ದಿನ ಭಾರತ ಮಾಜಿ ಆಟಗಾರ ಗೌತಮ್ ಗಂಭೀರ್ ಅವರು ನೋಡಿದ್ದರು. 2013ರಲ್ಲಿ ಸೈನಿಯನ್ನು ಭೇಟಿ ಮಾಡಿದ್ದ ಗಂಭೀರ್ ಅವರನ್ನು ಡೆಲ್ಲಿ ತಂಡಕ್ಕೆ ನೆಟ್ ಪ್ರಾಕ್ಟೀಸ್ ವೇಳೆ ಬೌಲ್ ಮಾಡಲು ಕರೆ ತಂದಿದ್ದರು.

    2013ರ ಡಿಸೆಂಬರ್ ನಲ್ಲಿ ಸೈನಿ ಡೆಲ್ಲಿ ತಂಡಕ್ಕೆ ನೆಟ್ ಅಭ್ಯಾಸದ ವೇಳೆ ಬೌಲ್ ಮಾಡಿದ್ದರು. ಅಂದು ಸೈನಿಗೆ ಬೌಲಿಂಗ್ ಟಿಪ್ಸ್ ಕೊಟ್ಟಿದ್ದ ಗಂಭೀರ್, ಟಿನ್ನಿಸ್ ಬಾಲಿನಲ್ಲಿ ಹೇಗೆ ಬೌಲ್ ಮಾಡುತ್ತಿದ್ದೆ, ಹಾಗೇ ಇಲ್ಲಿಯೂ ಮಾಡು ಭಯಪಡಬೇಡ. ಉಳಿದಿದ್ದು ತಾನಾಗಿಯೇ ಸರಿ ಹೋಗುತ್ತೆ ಎಂದು ಹೇಳಿದ್ದರಂತೆ. ಇಂದು ನಾನು ಈ ಹಂತಕ್ಕೆ ಬಂದಿದ್ದೇನೆ ಎಂದರೆ ಅದಕ್ಕೆ ಗಂಭೀರ್ ಅವರೇ ಕಾರಣ, ಅವರ ಬಗ್ಗೆ ಮಾತನಾಡುವಾಗ ನಾನು ಭಾವುಕನಾಗುತ್ತೇನೆ ಎಂದು ಸೈನಿ ಈ ಹಿಂದೆ ಮಾಧ್ಯಮವೊಂದಕ್ಕೆ ಹೇಳಿದ್ದರು.

    ಡೆಲ್ಲಿ ಆಟಗಾರರಿಗೆ ಅಭ್ಯಾಸದ ವೇಳೆ ಬೌಲ್ ಮಾಡುತ್ತಿದ್ದ ಸೈನಿ, ಹಲವರ ವಿರೋಧದ ನಡುವೆಯೂ ಕೂಡ ಡೆಲ್ಲಿ ತಂಡದ ಅಧಿಕೃತ ಆಟಗಾರನಾಗಿ ಆಯ್ಕೆಯಾಗಿದ್ದರು. 15 ನಿಮಿಷ ಸೈನಿ ಬೌಲಿಂಗ್ ನೋಡಿದ್ದ ಗಂಭೀರ್ ನಿನಗೆ ಬಹಳ ಒಳ್ಳೆಯ ಟ್ಯಾಲೆಂಟ್ ಇದೆ ಎಂದು ಹೇಳಿದ್ದರು. ಜೊತೆಗೆ ಅವರನ್ನು ರಣಜಿ ಟ್ರೋಫಿಗೆ ಆಯ್ಕೆ ಮಾಡುವಂತೆ ಡೆಲ್ಲಿ ಆಯ್ಕೆಗಾರರ ಬಳಿ ಜಗಳವಾಡಿ ಗಂಭೀರ್ ಸೈನಿಯನ್ನು ರಣಜಿ ಟ್ರೋಫಿ ಆಡುವಂತೆ ಮಾಡಿದ್ದರು.

    ಈ ವೇಳೆ ರಣಜಿ ಟ್ರೋಫಿಯ ಸೆಮಿಫೈನಲ್ ಅನ್ನು ಡೆಲ್ಲಿ ತಂಡ ಪಶ್ಚಿಮಾ ಬಂಗಾಳದ ವಿರುದ್ಧ ಆಡಿತ್ತು. ಆ ಪಂದ್ಯದಲ್ಲಿ ಸೈನಿ 140 ಕಿಮೀ ವೇಗದಲ್ಲಿ ಬೌಲ್ ಮಾಡಿದ್ದರು. ಅಂದು ಸೈನಿ ಬಾಲಿಗೆ ಬ್ಯಾಟ್ ಕೊಡಲು ಬಂಗಾಳದ ಬ್ಯಾಟ್ಸ್ ಮ್ಯಾನ್‍ಗಳು ಸುಸ್ತಾಗಿದ್ದರು. ಇದಾದ ನಂತರ 2017ರ ಡಿಸೆಂಬರ್ ನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಏಕದಿನ ಸರಣಿ ಆರಂಭವಾಗಿತ್ತು. ಅಲ್ಲಿಯೂ ಕೂಡ ನೆಟ್ಸ್ ಅಭ್ಯಾಸದ ವೇಳೆ ಭಾರತದ ಬ್ಯಾಟ್ಸ್ ಮ್ಯಾನ್‍ಗಳಿಗೆ ಸೈನಿ ಬೌಲ್ ಮಾಡಿ ಸೈ ಎನಿಸಿಕೊಂಡಿದ್ದರು.

    ದ್ರಾವಿಡ್ ಗರಡಿಯ ಹುಡುಗ
    ಈ ವೇಳೆಗಾಗಲೇ ಭಾರತ ಕ್ರಿಕೆಟ್‍ನಲ್ಲಿ ಸೈನಿ ಒಂದು ಮಟ್ಟದ ಹೆಸರು ಮಾಡಿದ್ದರು. ಇದೇ ವೇಳೆಗೆ ಸೈನಿ ಭಾರತ-ಎ ತಂಡಕ್ಕೆ ಆಯ್ಕೆಯಾಗಿದ್ದರು. 2017ರಲ್ಲಿ ಭಾರತ-ಎ ತಂಡ ದಕ್ಷಿಣ ಆಫ್ರಿಕಾಗೆ ಟೂರ್ ಹೋಗಿತ್ತು. ಅಂದು ಭಾರತ-ಎ ತಂಡದ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರು ಸೈನಿಗೆ ಉತ್ತಮವಾಗಿ ತರಬೇತಿ ನೀಡಿದ್ದರು. ಕೆಲವು ಅಮೂಲ್ಯವಾದ ಬೌಲಿಂಗ್ ಸಲಹೆಗಳನ್ನು ಕೊಟ್ಟಿದ್ದರು.

    ನಂತರ 2017ರ ಐಪಿಎಲ್‍ನಲ್ಲಿ ಸೈನಿಯವರನ್ನು ಡೆಲ್ಲಿ ಡೇರ್ ಡೆವಿಲ್ಸ್ ತಂಡ 10 ಲಕ್ಷ ಕೊಟ್ಟ ಖರೀದಿ ಮಾಡಿತ್ತು. ಇದಾದ ನಂತರ 2018ರಲ್ಲಿ ಆರ್‍ಸಿಬಿ ಸೈನಿಯವರಿಗೆ ಬರೋಬ್ಬರಿ ಮೂರು ಕೋಟಿ ಕೊಟ್ಟು ಕೊಂಡುಕೊಂಡಿತ್ತು. 2019 ಡಿಸೆಂಬರ್ 22 ರಂದು ವೆಸ್ಟ್ ಇಂಡೀಸ್ ಪರ ಬೌಲಿಂಗ್ ಮಾಡುವ ಮೂಲಕ ಸೈನಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ್ದರು. ಈಗ ಅದೇ ಸೈನಿ ನಿನ್ನೆ ನಡೆದ ಪಂದ್ಯದಲ್ಲಿ ಆರ್‌ಸಿಬಿ ಪರ ಸೂಪರ್ ಓವರಿನಲ್ಲಿ ಬೌಲ್ ಮಾಡಿ ಕೇವಲ 7 ರನ್ ನೀಡಿದ್ದಾರೆ.

  • ಗರ್ಭಿಣಿಗೆ ತುಂಬ ರೋಮಾಂಚನಕಾರಿ ಪಂದ್ಯ : ಅನುಷ್ಕಾ ಶರ್ಮಾ

    ಗರ್ಭಿಣಿಗೆ ತುಂಬ ರೋಮಾಂಚನಕಾರಿ ಪಂದ್ಯ : ಅನುಷ್ಕಾ ಶರ್ಮಾ

    ನವದೆಹಲಿ: ಸೋಮವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೂಪರ್ ಓವರಿನಲ್ಲಿ ಗೆದ್ದು ಬೀಗಿತ್ತು.

    ಈಗ ಈ ಪಂದ್ಯದ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ತನ್ನ ಅಭಿಪ್ರಾಯವನ್ನು ಹಂಚಿಕೊಂಡಿರುವ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ, ವಾವ್, ಗರ್ಭಿಣಿಗೆ ತುಂಬ ರೋಮಾಂಚನಕಾರಿ ಪಂದ್ಯ. ಎಂಥ ತಂಡವಿದು ಎಂದು ಬರೆದುಕೊಂಡಿದ್ದಾರೆ.

    ಸೋಮವಾರ ದುಬೈ ಮೈದಾನದಲ್ಲಿ ನಡೆದ ಐಪಿಎಲ್-2020ಯ 10ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಮತ್ತು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿತ್ತು. ಈ ಪಂದ್ಯವನ್ನು ಕೊಹ್ಲಿ ಪಡೆ ಸೂಪರ್ ಓವರಿನಲ್ಲಿ ಗೆದ್ದುಕೊಂಡಿತ್ತು. ಈ ಮೂಲಕ ಐಪಿಎಲ್-2020ಯಲ್ಲಿ ಬೆಂಗಳೂರು ತಂಡ ಎರಡನೇ ಗೆಲುವನ್ನು ದಾಖಲಸಿದೆ.

    ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಬೆಂಗಳೂರು ತಂಡಕ್ಕೆ ಆರಂಭಿಕರಾದ ಪಡಿಕಲ್ (54 ರನ್, 40 ಎಸೆತ, 5 ಫೋರ್ 2 ಸಿಕ್ಸರ್) ಮತ್ತು ಫಿಂಚ್ (52 ರನ್, 35 ಎಸೆತ, 7 ಫೋರ್, 1 ಸಿಕ್ಸ್) ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದರು. ಇವರಿಬ್ಬರು ಅರ್ಧಶತಕ ಸಿಡಿಸಿ ತಂಡ ದೊಡ್ಡ ಮೊತ್ತ ಕಲೆಹಾಕುಲು ಭದ್ರಬುನಾದಿ ಹಾಕಿಕೊಟ್ಟರು. ಇವರ ನಂತರ ಕೊನೆಯಲ್ಲಿ ಒಂದಾದ ಎಬಿಡಿ ವಿಲಿಯರ್ಸ್ (55 ರನ್, 24 ಎಸೆತ, 4ಫೋರ್, 4 ಸಿಕ್ಸ್) ಮತ್ತು ಶಿವಮ್ ದುಬೆ ಸಿಕ್ಸ್ ಫೋರುಗಳ ಸುರಿಮಳೆಗೈದು ಬೆಂಗಳೂರು ತಂಡವನ್ನು 200ರ ಗಡಿ ದಾಟಿಸಿದರು.

    ಆರ್‌ಸಿಬಿ ನೀಡಿದ 202 ರನ್‍ಗಳ ಗುರಿಯನ್ನು ಬೆನ್ನತ್ತಿದ್ದ ಮುಂಬೈ ತಂಡ ಆರಂಭಕವಾಗಿ ಎಡವಿತ್ತು. ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡಿತ್ತು. ಆದರೆ ಈ ನಡುವೆ ಕ್ರೀಸಿಗೆ ಕಚ್ಚಿಕೊಂಡಿದ್ದ ಇಶಾನ್ ಕಿಶಾನ್ (99 ರನ್, 58 ಎಸೆತ, 2 ಫೋರ್, 9 ಸಿಕ್ಸ್) ಉತ್ತಮವಾಗಿ ಆಡಿಕೊಂಡು ಬರುತ್ತಿದ್ದರು. ಇವರಿಗೆ ನಾಲ್ಕನೇ ಕ್ರಮಾಂಕದಲ್ಲಿ ಬಂದ ಕೀರನ್ ಪೋಲಾರ್ಡ್ (60 ರನ್, 24 ಎಸೆತ, 3 ಫೋರ್, 5 ಸಿಕ್ಸ್) ಅವರು ಉತ್ತಮ ಸಾಥ್ ನೀಡಿದರು. ಸೋಲಿನತ್ತ ವಾಲಿದ್ದ ಮುಂಬೈ ತಂಡ ಇವರಿಬ್ಬರ ಉತ್ತಮ ಬ್ಯಾಟಿಂಗ್‍ನಿಂದ ಟೈ ಮಾಡಿಕೊಂಡಿತ್ತು.

    ಪಂದ್ಯ ಟೈ ಆದ ಕಾರಣ ಸೂಪರ್ ಓವರ ಜಾರಿಗೆ ಬಂದಿತ್ತು. ಅಂತೆಯೇ ಮುಂಬೈ ಪರವಾಗಿ ಪೋಲಾರ್ಡ್ ಮತ್ತು ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್‍ಗೆ ಬಂದರು. ಆದರೆ ಆರ್‍ಸಿಬಿ ಪರವಾಗಿ ಉತ್ತಮವಾಗಿ ಬೌಲ್ ಮಾಡಿದ ಸೈನಿ ಮುಂಬೈ ತಂಡವನ್ನು ಏಳು ರನ್ ಒಳಗೆ ಕಟ್ಟಿಹಾಕಿದ್ದರು. ಇದರನ್ನು ಬೆನ್ನಟ್ಟಿದ ಆರ್‌ಸಿಬಿ ತಂಡದ ಅನುಭವಿ ಆಟಗಾರರಾದ ವಿಲಿಯರ್ಸ್ ಮತ್ತು ಕೊಹ್ಲಿ ಸುಲಭವಾಗಿ ಬೆಂಗಳೂರು ತಂಡಕ್ಕೆ ಜಯವನ್ನು ತಂದು ಕೊಟ್ಟಿದ್ದರು.

  • ಸೂಪರ್ ಓವರ್‌ನಲ್ಲೂ ಟೈ ಆದ್ರೆ ಫಲಿತಾಂಶ ನಿರ್ಧಾರ ಹೇಗೆ?

    ಸೂಪರ್ ಓವರ್‌ನಲ್ಲೂ ಟೈ ಆದ್ರೆ ಫಲಿತಾಂಶ ನಿರ್ಧಾರ ಹೇಗೆ?

    ಬೆಂಗಳೂರು: ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್‌ಸಿಬಿ ಜಯಗಳಿಸಿದೆ. ಒಂದು ವೇಳೆ ಈ ಪಂದ್ಯವೂ ಟೈ ಆಗಿದ್ದರೆ ಏನಾಗುತ್ತಿತ್ತು ಎಂಬ ಪ್ರಶ್ನೆಯನ್ನು ಸೋಮವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಕೇಳುತ್ತಿದ್ದರು.

    ಟಿ-20 ಆರಂಭದಲ್ಲಿ ಪಂದ್ಯ ಟೈ ಆಗಿದ್ದರೆ ಬಾಲ್ ಔಟ್ ಮೂಲಕ ಫಲಿತಾಂಶವನ್ನು ನಿರ್ಧರಿಸಲಾಗುತ್ತಿತ್ತು. 6 ಎಸೆತಗಳ ಪೈಕಿ ಯಾವ ತಂಡ ಹೆಚ್ಚು ಬಾರಿ ವಿಕೆಟಿಗೆ ಬಾಲ್ ಹಾಕಿ ಔಟ್ ಮಾಡುತ್ತದೋ ಆ ತಂಡವನ್ನು ವಿಜಯಶಾಲಿಯಾಗಿ ಘೋಷಿಸಲಾಗುತ್ತಿತ್ತು.

    2007ರ ಭಾರತ ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ ಲೀಗ್ ಪಂದ್ಯದಲ್ಲಿ ಭಾರತ ಬಾಲ್ ಔಟ್ ಮೂಲಕ ಪಾಕಿಸ್ತಾನವನ್ನು ಸೋಲಿಸಿತ್ತು. ಭಾರತದ ಬೌಲರ್‌ಗಳು ಮೂರು ಬಾರಿ ವಿಕೆಟಿಗೆ ಬಾಲ್ ಹಾಕಿದರೆ ಆರಂಭದ ಮೂರು ಅವಕಾಶಗಳಲ್ಲಿ ಪಾಕಿಸ್ತಾನ ವಿಫಲವಾದ ಕಾರಣ ಭಾರತ ತಂಡ ಗೆದ್ದಿತ್ತು.

    ಈ ನಿಯಮಕ್ಕೆ ವ್ಯಾಪಕ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಒಂದು ಓವರ್ ಆಟ ಆಡಿಸಲು ಐಸಿಸಿ ನಿರ್ಧರಿಸಿತ್ತು. ಯಾವ ತಂಡ ಹೆಚ್ಚು ರನ್‍ಗಳಿಸುತ್ತದೋ ಆ ತಂಡ ವಿಜಯಿ ಎಂದು ಘೋಷಿಸಲಾಗುತ್ತಿತ್ತು. ಆದರೆ 2019ರ ವಿಶ್ವಕಪ್ ನಲ್ಲಿ ಇಂಗ್ಲೆಂಡ್‌ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್‌ ಪಂದ್ಯ ಸೂಪರ್ ಓವರ್‌ನಲ್ಲೂ ಟೈ ಆಗಿತ್ತು. ಆದರೆ ಅತಿ ಹೆಚ್ಚು ಬೌಂಡರಿ ಹೊಡೆದಿದ್ದ ಕಾರಣ ಇಂಗ್ಲೆಂಡ್ ವಿಶ್ವಕಪ್ ಜಯಿಸಿತ್ತು.

    ವಿಶ್ವಕಪ್‍ನಂತಹ ಮಹತ್ವದ ಪಂದ್ಯದಲ್ಲಿ ಬೌಂಡರಿ ಆಧಾರದ ಮೇಲೆ ಪಂದ್ಯ ನಿರ್ಧರಿಸುವುದಕ್ಕೆ ಘಟಾನುಘಟಿ ಆಟಗಾರರೇ ಭಾರೀ ವಿರೋಧ ವ್ಯಕ್ತಪಡಿಸಿದರು. ಟೀಕೆ ವ್ಯಕ್ತವಾದ ಬಳಿಕ ಐಸಿಸಿ 2020ರ ಫೆಬ್ರವರಿಯಲ್ಲಿ  ಸೂಪರ್ ಓವರ್ ನಿಯಮಗಳನ್ನು ಬದಲಾವಣೆ ಮಾಡಿತು.

    ಏನು ಬದಲಾವಣೆ?
    ಸೂಪರ್ ಓವರ್ ಪಂದ್ಯವೂ ಟೈ ಆದರೆ ಮತ್ತೊಂದು ಸೂಪರ್ ಓವರ್ ಆಡಿಸಲಾಗುತ್ತದೆ. ಇಲ್ಲಿಯೂ ಟೈ ಆದರೆ ಎರಡನೇ ಬಾರಿ ಸೂಪರ್ ಓವರ್ ಆಡಿಸಲಾಗುತ್ತದೆ. ಒಟ್ಟಿನಲ್ಲಿ ಸೂಪರ್ ಓವರ್ ಮೂಲಕವೇ ಅಂತಿಮ ಫಲಿತಾಂಶವನ್ನು ನಿರ್ಧಾರ ಮಾಡಲಾಗುತ್ತದೆ.

    ಒಂದು ವೇಳೆ ಎಸೆತಗಳು ಬಾಕಿ ಇದ್ದರೂ ಎದುರಾಳಿ ತಂಡದ ಎರಡು ವಿಕೆಟ್ ಪತನವಾದರೆ ಆಲೌಟ್ ಎಂದು ಘೋಷಿಸಲಾಗುತ್ತದೆ. ಪ್ರತಿ ತಂಡಕ್ಕೆ ಒಂದು ಬಾರಿ ಅಂಪೈರ್ ತೀರ್ಮಾನವನ್ನು ಪುನರ್ ಪರಿಶೀಲಿಸಲು ಅವಕಾಶ ನೀಡಲಾಗುತ್ತದೆ. ಇದನ್ನೂ ಓದಿ: ಭರ್ಜರಿ ಸಿಕ್ಸರ್‌ಗಳ ಹಿಂದಿನ ಸೀಕ್ರೆಟ್ ಬಿಚ್ಚಿಟ್ಟ ಸಂಜು ಸ್ಯಾಮ್ಸನ್

    ಈ ಹಿಂದಿನ ಬೌಂಡರಿ ನಿಯಮಗಳೇ ಈಗಲೂ ಇರುತ್ತಿದ್ದರೆ ಆರ್‌ಸಿಬಿ ಜಯಗಳಿಸುತ್ತಿತ್ತು. ಆರ್‌ಸಿಬಿ ಆಟಗಾರರು ಒಟ್ಟು 17 ಬೌಂಡರಿ ಹೊಡೆದಿದ್ದರೆ ಮುಂಬೈ ಆಟಗಾರರು 6 ಬೌಂಡರಿ ಹೊಡೆದಿದ್ದರು.

    ನಿನ್ನೆಯ ಪಂದ್ಯದಲ್ಲಿ ಆರ್‌ಸಿಬಿ ಪರ 10 ಸಿಕ್ಸ್ ಬಂದಿದ್ದರೆ ಮುಂಬೈ ಇಂಡಿಯನ್ಸ್ ಆಟಗಾರರು 16 ಸಿಕ್ಸ್ ಹೊಡೆದಿದ್ದರು. ಈ ಪೈಕಿ ಇಶಾನ್ ಕಿಶನ್ 9 ಸಿಕ್ಸ್ ಚಚ್ಚಿದ್ದರೆ ಪೋಲಾರ್ಡ್ 5 ಸಿಕ್ಸ್ ಹೊಡೆದಿದ್ದರು.

  • ಕನ್ನಡಿಗ ಅಗರ್ವಾಲ್ ಸ್ಫೋಟಕ ಆಟ – ಸೂಪರ್ ಓವರ್‌ನಲ್ಲಿ ಡೆಲ್ಲಿಗೆ ಜಯ

    ಕನ್ನಡಿಗ ಅಗರ್ವಾಲ್ ಸ್ಫೋಟಕ ಆಟ – ಸೂಪರ್ ಓವರ್‌ನಲ್ಲಿ ಡೆಲ್ಲಿಗೆ ಜಯ

    – ಗೆಲುವಿನ ಹತ್ತಿರ ಬಂದು ಸೋತ ಪಂಜಾಬ್
    – ಐಪಿಎಲ್ ಇತಿಹಾಸದಲ್ಲಿ 10ನೇ ಸೂಪರ್ ಓವರ್

    ದುಬೈ: ಕನ್ನಡಿಗ ಮಯಾಂಕ್ ಅಗರ್ವಾಲ್ ಸ್ಫೋಟಕವಾಗಿ ಆಡಿದ್ದರೂ ವಿಜಯ ಲಕ್ಷ್ಮಿ ಪಂಜಾಬ್ ತಂಡದ ಕೈ ಹಿಡಿಯಲಿಲ್ಲ. ಸೂಪರ್ ಓವರಿನಲ್ಲಿ  ಡೆಲ್ಲಿ ತಂಡ ಪಂಜಾಬ್ ತಂಡವನ್ನು ಸೋಲಿಸಿ ಶುಭಾರಂಭ ಮಾಡಿದೆ.

    ಗೆಲ್ಲಲು 157 ರನ್‍ಗಳ ಸುಲಭ ಸವಾಲನ್ನು ಪಡೆದಿದ್ದರೂ ಪಂಜಾಬ್ ತಂಡ ಬೇಗನೇ ವಿಕೆಟ್ ಕಳೆದುಕೊಂಡಿತ್ತು. ಆದರೆ ಒಂದು ಕಡೆ ಮಾಯಾಂಕ್ ಅಗರ್ವಾಲ್ ಬಂಡೆಯಂತೆ ನಿಂತು 89 ರನ್(60 ಎಸೆತ, 7 ಬೌಂಡರಿ, 4 ಸಿಕ್ಸರ್) ಹೊಡೆದು ತಂಡವನ್ನು ವಿಜಯದ ಬಾಗಿಲ ಬಳಿ ತಂದು ನಿಲ್ಲಿಸಿದ್ದರು. ಆದರೆ ಕೊನೆಯಲ್ಲಿ ಅದೃಷ್ಟ ಕೈಕೊಟ್ಟ ಪರಿಣಾಮ ಪಂದ್ಯ ಸೂಪರ್ ಓವರಿಗೆ ಹೋಯ್ತು.

    ಟೈ ಹೇಗಾಯ್ತು?
    ಕೊನೆಯ 18 ಎಸೆತಗಳಲ್ಲಿ ಪಂಜಾಬ್ 42 ರನ್ ಗಳಿಸಬೇಕಿತ್ತು. 18ನೇ ಓವರಿನಲ್ಲಿ 17 ರನ್ ಬಂದಿದ್ದರೆ, 19ನೇ ಓವರಿನಲ್ಲಿ 12 ರನ್ ಬಂದಿತ್ತು. ಕೊನೆಯ ಓವರಿನಲ್ಲಿ  13 ರನ್ ಬೇಕಿತ್ತು. ಮಾರ್ಕಸ್ ಸ್ಟೊಯಿನಿಸ್ ಎಸೆದ ಮೊದಲ ಎಸೆತವನ್ನು ಅಗರ್ವಾಲ್ ಸಿಕ್ಸರ್ ಗೆ ಅಟ್ಟಿದ್ದರೆ ಎರಡನೇ ಎಸೆತದಲ್ಲಿ 2 ರನ್ ಮೂರನೇ ಎಸೆತದಲ್ಲಿ ಬೌಂಡರಿ ಹೊಡೆದರು. ನಾಲ್ಕನೇ ಎಸೆತದಲ್ಲಿ ಯಾವುದೇ ರನ್ ಬರಲಿಲ್ಲ. 5ನೇ ಎಸೆತವನ್ನು ಬಲವಾಗಿ ಹೊಡೆದರೂ ಕ್ಯಾಚ್ ನೀಡಿ ಔಟಾದರು. ಕೊನೆಯ ಎಸೆತವನ್ನು ಎಡಗಡೆಗೆ ಜೋರ್ಡಾನ್ ಹೊಡೆದರೂ ಅದು ಕ್ಯಾಚ್ ಆಗಿತ್ತು. ಹೀಗಾಗಿ ಪಂದ್ಯ ಸೂಪರ್ ಓವರಿಗೆ  ಹೋಯ್ತು.

    ಸೂಪರ್ ಓವರಿನಲ್ಲಿ ರಬಾಡ ಎಸೆದ ಮೊದಲ ಓವರ್‍ನಲ್ಲಿ 2 ರನ್ ಬಂದರೆ ಎರಡನೇ ಎಸೆತದಲ್ಲಿ ಕೆಎಲ್ ರಾಹುಲ್ ಕ್ಯಾಚ್ ನೀಡಿ ಔಟಾದರು. ಮೂರನೇ ಎಸೆತದಲ್ಲಿ ಪೂರನ್ ಬೌಲ್ಡ್ ಆದರು. ಸೂಪರ್ ಓವರ್‍ನಲ್ಲಿ ಎರಡು ವಿಕೆಟ್ ಕಳೆದುಕೊಂಡರೆ ತಂಡ ಆಲೌಟ್ ಎಂದು ಘೋಷಿಸಲಾಗುತ್ತದೆ. ನಂತರ ಶಮಿ ಪಂಜಾಬ್ ಪರವಾಗಿ ಬೌಲಿಂಗ್ ಮಾಡಿದರು. ಒಂದು ವೈಡ್ ಜೊತೆಗೆ ರಿಷಬ್ ಪಂತ್ 2 ರನ್ ಹೊಡೆಯುವ ಮೂಲಕ ಡೆಲ್ಲಿ ತಂಡ ಪಂದ್ಯವನ್ನು ಜಯಗಳಿಸಿತು. ಐಪಿಎಲ್ ಇತಿಹಾಸದಲ್ಲಿ 10ನೇ ಸೂಪರ್ ಓವರ್ ಪಂದ್ಯ ಇದಾಗಿತ್ತು.

    ಆರಂಭದಲ್ಲೇ ಕುಸಿತ:
    ಕಿಂಗ್ಸ್ ಇಲೆವನ್ ಪಂಜಾಬ್ ತಂಡ 35 ರನ್‍ಗಳಿಗೆ 4 ವಿಕೆಟ್ ಕಳೆದುಕೊಂಡಿತ್ತು. ನಾಯಕ ಕೆಎಲ್ ರಾಹುಲ್ ಅವರು 19 ಬಾಲಿಗೆ 21 ರನ್ ಸಿಡಿಸಿ ಮೋಹಿತ್ ಶರ್ಮಾಗೆ ನಾಲ್ಕನೇ ಓವರಿನಲ್ಲಿ ಕ್ಲೀನ್ ಬೌಲ್ಡ್ ಆದರು. ನಂತರ ಕ್ರಿಸ್‍ಗೆ ಬಂದ ಮತ್ತೋರ್ವ ಆಟಗಾರ ಕರುಣ್ ನಾಯರ್ ಕೇವಲ ಒಂದು ರನ್ ಗಳಿಸಿ ಆರ್ ಅಶ್ವಿನ್ ಅವರಿಗೆ ವಿಕೆಟ್ ಒಪ್ಪಿಸಿದರು. ಇದಾದ ನಂತರ ಬಂದ ನಿಕೋಲಸ್ ಪೂರನ್ ಅವರ ಕೂಡ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಸೊನ್ನೆ ಸುತ್ತಿ ವಾಪಸ್ ಹೋದರು. ಅಶ್ವಿನ್ ಅವರ ಒಂದೇ ಓವರಿನಲ್ಲಿ ಎರಡು ವಿಕೆಟ್ ಕಿತ್ತರು.

    ನಾಲ್ಕನೇ ಬ್ಯಾಟ್ಸ್ ಮ್ಯಾನ್ ಆಗಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್ ವೆಲ್ ಒಂದು ರನ್ ಗಳಿಸಿ ಕಗಿಸೊ ರಬಾಡ ಅವರ ಬೌಲಿಂಗ್‍ನಲ್ಲಿ ಶ್ರೇಯಾಸ್ ಅಯ್ಯರ್ ಅವರಿಗೆ ಕ್ಯಾಚ್ ಕೊಟ್ಟು ಹೊರನಡೆದರು. ಇದಾದ ನಂತರ ಕೆಲ ಕಾಲ ಕ್ರಿಸ್‍ನಲ್ಲಿ ಉಳಿದುಕೊಳ್ಳುವ ಮುನ್ಸೂಚನೆ ನೀಡಿದ ಸರ್ಫರಾಜ್ ಖಾನ್ ದೊಡ್ಡ ಹೊಡೆತಕ್ಕೆ ಕೈ ಹಾಕಿ ಕೇವಲ 12 ರನ್ ಗಳಿಸಿ ಆಕ್ಸಾರ್ ಪಟೇಲ್ ಪಟೇಲ್‍ಗೆ ವಿಕೆಟ್ ಒಪ್ಪಿಸಿದರು.

    ಈ ವೇಳೆ ಜೊತೆಯಾದ ಕನ್ನಡಿಗರಾದ ಮಯಾಂಕ್ ಅಗರ್ವಾಲ್ ಮತ್ತು ಕೃಷ್ಣಪ್ಪ ಗೌತಮ್ ಉತ್ತಮ ಜೊತೆಯಾಟವಾಡಿದರು. 15 ಓವರ್ ಮುಕ್ತಾಕ್ಕೆ ಪಂಜಾಬ್ ತಂಡ 98 ರನ್ ಗಳಿಸಿ 5 ವಿಕೆಟ್ ಕಳೆದುಕೊಂಡಿತ್ತು. ಮಯಾಂಕ್ ಅಗರ್ವಾಲ್ ಮತ್ತು ಗೌತಮ್ 6ನೇ ವಿಕೆಟಿಗೆ 46 ರನ್, ಅಗರ್ವಾಲ್ ಮತ್ತು ಜೋರ್ಡಾನ್ 7ನೇ ವಿಕೆಟಿಗೆ 56 ರನ್ ಜೊತೆಯಾಟವಾಡಿದ ಪರಿಣಾಮ ವಿಜಯದತ್ತ ಪಂಜಾಬ್ ಬಂದಿತ್ತು.

    ಅಶ್ವಿನ್‍ಗೆ ಗಾಯ:
    ಸ್ಪಿನ್ನರ್ ಆರ್. ಅಶ್ವಿನ್ ಫಿಲ್ಡಿಂಗ್ ವೇಳೆ ಕೈಗೆ ಗಾಯಗೊಂಡ ಪರಿಣಾಮ ಕ್ರೀಡಾಂಗಣವನ್ನು ತೊರೆದಿದ್ದರು. ಅಶ್ವಿನ್ 1 ಓವರ್ ಎಸೆದು 2 ರನ್ ನೀಡಿ 2 ವಿಕೆಟ್ ಪಡೆದು ಪಂದ್ಯಕ್ಕೆ ತಿರುವು ನೀಡಿದ್ದರು.

  • ಶೈನಿ, ಶಾರ್ದೂಲ್, ರಾಹುಲ್, ಪಾಂಡೆ ಕಮಾಲ್- ಸೂಪರ್ ಓವರಿನಲ್ಲಿ ಮತ್ತೆ ಭಾರತಕ್ಕೆ ಜಯ

    ಶೈನಿ, ಶಾರ್ದೂಲ್, ರಾಹುಲ್, ಪಾಂಡೆ ಕಮಾಲ್- ಸೂಪರ್ ಓವರಿನಲ್ಲಿ ಮತ್ತೆ ಭಾರತಕ್ಕೆ ಜಯ

    – 1 ಸಿಕ್ಸರ್, 1 ಬೌಂಡರಿ ಸಿಡಿಸಿದ ರಾಹುಲ್
    – 13 ರನ್ ಬಿಟ್ಟುಕೊಟ್ಟ ಬುಮ್ರಾ
    – ಕೊನೆಯ ಓವರಿನಲ್ಲಿ 4 ವಿಕೆಟ್ ಕಳೆದುಕೊಂಡ ಕಿವೀಸ್

    ವೆಲ್ಲಿಂಗ್ಟನ್: ಸೂಪರ್ ಓವರಿನಲ್ಲಿ ಭಾರತ ಮತ್ತೊಮ್ಮೆ ಕಮಾಲ್ ಮಾಡಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದೆ. ಈ ಮೂಲಕ 5 ಪಂದ್ಯಗಳ ಟಿ 20 ಸರಣಿಯಲ್ಲಿ 4 ಪಂದ್ಯಗಳನ್ನು ಗೆದ್ದು  ಕ್ಲೀನ್ ಸ್ವೀಪ್‌ನತ್ತ ಚಿತ್ತ ಹರಿಸಿದೆ.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 8 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿದರೆ ನ್ಯೂಜಿಲೆಂಡ್ 7 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತು. ಪಂದ್ಯ ಟೈ ಆದ ಹಿನ್ನೆಲೆಯಲ್ಲಿ ಸೂಪರ್ ಓವರ್ ಮೊರೆ ಹೊಗಲಾಯಿತು. ಇದನ್ನೂ ಓದಿ: ಮಗುವಿನಂತೆ ಹಾರಿ ರೋಹಿತ್‍ರನ್ನು ಬಿಗಿದಪ್ಪಿ ಅಭಿನಂದಿಸಿದ ಕೊಹ್ಲಿ – ವಿಡಿಯೋ ವೈರಲ್

    ಸೂಪರ್ ಓವರ್ ಹೀಗಿತ್ತು:
    ನ್ಯೂಜಿಲೆಂಡ್ ಪರವಾಗಿ ಸೀಫರ್ಟ್ ಮತ್ತು ಮನ್ರೋ ಕ್ರೀಸಿಗೆ ಆಗಮಿಸಿದರು. ಬುಮ್ರಾ ಎಸೆದ ಮೊದಲ ಓವರಿನಲ್ಲಿ ಸೀಫರ್ಟ್ ಬಲವಾಗಿ ಹೊಡೆದಿದ್ದು ಶ್ರೇಯಸ್ ಅಯ್ಯರ್ ಕ್ಯಾಚ್ ಕೈ ಚೆಲ್ಲಿದ ಪರಿಣಾಮ 2 ರನ್ ಬಂತು. ನಂತರ ಸೀಫರ್ಟ್ ಬೌಂಡರಿ ಹೊಡೆದರೆ ನಂತರದ ಎಸೆತದಲ್ಲಿ ಎರಡು ರನ್ ಕದ್ದರು. 4ನೇ ಎಸೆತದಲ್ಲಿ ಸೀಫರ್ಟ್ ಕ್ಯಾಚ್ ನೀಡಿ ಔಟಾದರು. 5ನೇ ಎಸೆತದಲ್ಲಿ ಮನ್ರೋ ಬೌಂಡರಿ ಹೊಡೆದರೆ, ಕೊನೆಯ ಎಸೆತದಲ್ಲಿ 1 ರನ್ ಬಂತು. ಇದನ್ನೂ ಓದಿ: ನ್ಯೂಜಿಲೆಂಡ್ ತಂಡವನ್ನು ಹಾಡಿ ಹೊಗಳಿದ ಹಿಟ್‍ಮ್ಯಾನ್

    14 ರನ್ ಗಳ ಸವಾಲು ಪಡೆದ ಭಾರತ ಪರವಾಗಿ ಕೆ.ಎಲ್. ರಾಹುಲ್ ಟಿಮ್ ಸೌಥಿ ಎಸೆದ ಮೊದಲ ಎಸೆತವನ್ನು ಸಿಕ್ಸರ್ ಗೆ ಅಟ್ಟಿದರೆ ಎರಡನೇ ಎಸೆತವನ್ನು ಬೌಂಡರಿಗೆ ಹೊಡೆದರು. ಮೂರನೇ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದರು. ನಂತರ ಕೊಹ್ಲಿ ಎರಡು ರನ್ ತೆಗೆದರೆ, 5ನೇ ಎಸೆತವನ್ನು ಬೌಂಡರಿಗೆ ಹೊಡೆಯುವ ಮೂಲಕ ಭಾರತಕ್ಕೆ ಜಯವನ್ನು ತಂದಿಟ್ಟರು.

    ತಿರುವು ನೀಡಿದ್ದು ಕೊನೆಯ 2 ಓವರ್:
    ಕೊನೆಯ ಎರಡು ಓವರಿನಲ್ಲಿ ನ್ಯೂಜಿಲೆಂಡ್ ಗೆಲ್ಲಲು 11 ರನ್ ಬೇಕಿತ್ತು. 19ನೇ ಓವರ್ ಶೈನಿ ಎಸೆದಿದ್ದು ಯಾವುದೇ ವಿಕೆಟ್ ಪಡೆಯದೇ ಕೇವಲ 4 ರನ್ ನೀಡುವ ಮೂಲಕ ಪಂದ್ಯವನ್ನು ರೋಚಕ ಘಟ್ಟಕ್ಕೆ ತಂದು ನಿಲ್ಲಿಸಿದರು.

    ಕೊನೆಯ ಓವರ್ ಎಸೆಯಲು ಬಂದಿದ್ದು ಶಾರ್ದೂಲ್ ಠಾಕೂರ್. ಮೊದಲ ಎಸೆತದಲ್ಲಿ ಸಿಕ್ಸ್ ಹೊಡೆಯಲು ಯತ್ನಿಸಿದ ಟೇಲರ್ ಶ್ರೇಯಸ್ ಅಯ್ಯರ್ ಗೆ  ಕ್ಯಾಚ್ ನೀಡಿ ಔಟಾದರು. ನಂತರದ ಎಸೆತವನ್ನು ಮಿಚೆಲ್ ಬೌಂಡರಿ ಹೊಡೆದರು. ಮೂರನೇ ಎಸೆತಕ್ಕೆ ಬೈ ಮೂಲಕ ರನ್ ಕದಿಯುವ ಯತ್ನದಲ್ಲಿದ್ದಾಗ ರಾಹುಲ್ ನೇರವಾಗಿ ವಿಕೆಟಿಗೆ ಎಸೆದ ಪರಿಣಾಮ ಸೀಫರ್ಟ್ ರನ್‍ಔಟ್ ಆದರು. ನಂತರ ಬಂದ ಸ್ಯಾಂಟ್ನರ್ 1 ರನ್ ಓಡಿದರು. ಕೊನೆಯ ಎರಡು ಎಸೆತದಲ್ಲಿ 2 ರನ್ ಬೇಕಿತ್ತು. 5ನೇ ಎಸೆತವನ್ನು ಬಲವಾಗಿ ಹೊಡೆದ ಮಿಚೆಲ್ ಶಿವಂ ದುಬೆಗೆ ಕ್ಯಾಚ್ ನೀಡಿ ಔಟಾದರು. ಕೊನೆಯ ಒಂದು ಎಸೆತದಲ್ಲಿ 2 ರನ್ ಬೇಕಿತ್ತು. ಕೊನೆಯ ಎಸೆತವನ್ನು ಬಲವಾಗಿ ಸ್ಯಾಂಟ್ನರ್ ಹೊಡೆದರೂ ಬಾಲ್ ಸಂಜು ಸ್ಯಾಮ್ಸನ್ ಕೈಗೆ ಸೇರಿತು. ಎರಡು ರನ್ ಕದಿಯಲು ಹೋಗಿ ರನೌಟ್ ಆದ ಪರಿಣಾಮ ಪಂದ್ಯ ಸೂಪರ್ ಓವರ್ ಕಡೆ ತಿರುಗಿತು. ಕೊನೆಯ ಓವರಿನಲ್ಲಿ ರನ್ ನಿಯಂತ್ರಿಸಿದ್ದಕ್ಕೆ ಶಾರ್ದೂಲ್‍ಗೆ ಪಂದ್ಯಶ್ರೇಷ್ಠ ಗೌರವ ನೀಡಲಾಯಿತು.

    ಕಾಲಿನ್ ಮನ್ರೋ 64 ರನ್ (47 ಎಸೆತ, 6 ಬೌಂಡರಿ, 3 ಸಿಕ್ಸರ್), ಟೀಂ ಸೀಫರ್ಟ್ 57 ರನ್ (39 ಎಸೆತ, 4 ಬೌಂಡರಿ, 3 ಸಿಕ್ಸರ್) ಹಾಗೂ ರಾಸ್ ಟೇಲರ್ 24 ರನ್ (18 ಎಸೆತ, 2 ಬೌಂಡರಿ) ಗಳಿಸಿದರು.

    ಸ್ಯಾಮ್ಸನ್ ವೈಫಲ್ಯ:
    ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ನ್ಯೂಜಿಲೆಂಡ್ ತಂಡವು ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳನ್ನು ಕಾಡಿತು. ಈ ಪಂದ್ಯದಲ್ಲಿ ಅನುಭವಿ ಆಟಗಾರ ರೋಹಿತ್ ಶರ್ಮಾ ಅವರ ಸ್ಥಾನದಲ್ಲಿ ಇನಿಂಗ್ಸ್ ಆರಂಭಿಸುವ ಅವಕಾಶವನ್ನು ಸಂಜು ಸ್ಯಾಮ್ಸನ್‍ಗೆ ನೀಡಲಾಗಿತ್ತು. ಆದರೆ ಅವರು ಮತ್ತೊಮ್ಮೆ ನಿರಾಸೆ ಮೂಡಿಸಿದರು. ಇತ್ತೀಚೆಗೆ ಶ್ರೀಲಂಕಾ ವಿರುದ್ಧದ ಸರಣಿಯಲ್ಲೂ ಸ್ಯಾಮ್ಸನ್ ಅವರಿಗೆ ಅವಕಾಶ ನೀಡಲಾಗಿತ್ತು. ಆಗ ಸಿಕ್ಸರ್ ಸಿಡಿಸಿ ವಿಕೆಟ್ ಒಪ್ಪಿಸಿದ್ದರು. ಅದೇ ರೀತಿ ಈ ಪಂದ್ಯದಲ್ಲೂ ಸಿಕ್ಸರ್ ಬಾರಿಸಿ ನಂತರ ವಿಕೆಟ್ ಕಳೆದುಕೊಂಡರು.

    ಸ್ಯಾಮ್ಸನ್ 8 ರನ್ (5 ಎಸೆತ, ಸಿಕ್ಸ್) ಗಳಿಸಿ ವಿಕೆಟ್ ಒಪ್ಪಿಸಿದರು. 14 ರನ್ ಗಳಿಗೆ ಭಾರತ ಮೊದಲ ವಿಕೆಟ್ ಕಳೆದುಕೊಂಡಿತು. ಬಳಿಕ ಮೈದಾಕ್ಕಿಳಿಸಿದ ವಿರಾಟ್ ಕೊಹ್ಲಿ 11 ರನ್, ಶ್ರೇಯಸ್ ಅಯ್ಯರ್ 1 ರನ್ ಪೆವಿಲಿಯನ್ ಕಡೆಗೆ ಪರೇಡ್ ನಡೆಸಿದರು. ವಿಕೆಟ್ ಕಾಯ್ದುಕೊಂಡು ರನ್ ಹೊಡೆಯುತ್ತಿದ್ದ ಕೆ.ಎಲ್.ರಾಹುಲ್ ಕ್ಯಾಚ್ ನೀಡಿ ಔಟಾದರು. ರಾಹುಲ್ 39 ರನ್ (26 ಎಸೆತ, 3 ಬೌಂಡರಿ, 2 ಸಿಕ್ಸರ್) ಸಿಡಿಸಿ ವಿಕೆಟ್ ಕಳೆದುಕೊಂಡರು. ಈ ಬೆನ್ನಲ್ಲೇ ಶಿವಂ ದುಬೆ 12 ರನ್ ಹಾಗೂ ವಾಷಿಂಗ್ಟನ್ ಸುಂದರ್ ಯಾವುದೇ ರನ್ ಗಳಿಸದೆ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು.

    ಇನ್ನಿಂಗ್ಸ್ ನ 12ನೇ ಓವರಿನ 3ನೇ ಎಸೆತದ ವೇಳೆ 6 ವಿಕೆಟ್ ಕಳೆದುಕೊಂಡಿದ್ದ ಭಾರತ 88 ರನ್ ಪೇರಿಸಿತ್ತು. ಈ ವೇಳೆ ಮನೀಶ್ ಪಾಂಡೆ ಹಾಗೂ ಶಾರ್ದೂಲ್ ಠಾಕೂರ್ ವಿಕೆಟ್ ಕಾಯ್ದುಕೊಂಡು ಉತ್ತಮ ಜೊತೆಯಾಟ ಕಟ್ಟಿದರು. ಈ ಜೋಡಿಯು 7ನೇ ವಿಕೆಟ್‍ಗೆ 43 ರನ್ ಗಳಿಸಿ ತಂಡವನ್ನು 130 ರನ್‍ಗಳ ಗಡಿದಾಟಿಸಿತು.

    ಮನೀಶ್ ಅರ್ಧಶತಕ:
    15 ಎಸೆತಗಳಲ್ಲಿ 22 ರನ್‍ಗಳಿಸಿದ್ದ ಶಾರ್ದೂಲ್ ಠಾಕೂರ್ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು. ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಮನೀಶ್ ಪಾಂಡೆ ಔಟಾಗದೆ 50 ರನ್ (36 ಎಸೆತ, 3 ಬೌಂಡರಿ) ಗಳಿಸಿ ತಂಡದ ಮೊತ್ತವನ್ನು ಏರಿಸಿದರು. ಇನಿಂಗ್ಸ್ ಅಂತ್ಯದಲ್ಲಿ ಯಜುವೇಂದ್ರ ಚಾಹಲ್ 1 ರನ್ ಹಾಗೂ ನವದೀಪ್ ಸೈನಿ ಔಟಾಗದೆ 11 ರನ್ ಗಳಿಸಿದರು. ಈ ಮೂಲಕ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್‍ಗೆ 165 ರನ್‍ಗಳ ಸವಾಲಿನ ಮೊತ್ತ ಪೇರಿಸಿತು.

    ಹಿರಿಯರಿಗೆ ವಿಶ್ರಾಂತಿ:
    ಸರಣಿ ಗೆದ್ದಿರುವ ಟೀಂ ಇಂಡಿಯಾ ಅನುಭವಿ ಆಟಗಾರರಾದ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡಿತ್ತು. ಅವರ ಸ್ಥಾನದಲ್ಲಿ ಕ್ರಮವಾಗಿ ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್ ಮತ್ತು ನವದೀಪ್ ಸೈನಿಗೆ ಅವಕಾಶ ನೀಡಲಾಗಿತ್ತು.