Tag: ಸೂರತ್

  • ‘ಪಾಕಿಸ್ತಾನಿ ಆಹಾರೋತ್ಸವ’ ಎಂದು ಬರೆದ ಫ್ಲೆಕ್ಸ್ ಕಿತ್ತೆಸೆದು ಬೆಂಕಿಯಲ್ಲಿ ಸುಟ್ಟ ಬಜರಂಗ ದಳ

    ‘ಪಾಕಿಸ್ತಾನಿ ಆಹಾರೋತ್ಸವ’ ಎಂದು ಬರೆದ ಫ್ಲೆಕ್ಸ್ ಕಿತ್ತೆಸೆದು ಬೆಂಕಿಯಲ್ಲಿ ಸುಟ್ಟ ಬಜರಂಗ ದಳ

    ಸೂರತ್: ‘ಪಾಕಿಸ್ತಾನಿ ಆಹಾರೋತ್ಸವ’ ಎಂದು ಬರೆದ ಫ್ಲೆಕ್ಸ್ ಬ್ಯಾನರ್ ಅನ್ನು ಬಜರಂಗ ದಳದ ಕಾರ್ಯಕರ್ತರು ಕಿತ್ತೆಸೆದು ಬೆಂಕಿಯಲ್ಲಿ ಸುಟ್ಟ ಘಟನೆ ಗುಜರಾತ್ ನಲ್ಲಿ ನಡೆದಿದೆ.

    ಗುಜರಾತ್‍ನ ರಿಂಗ್ ರೋಡ್ ನಲ್ಲಿ ರೆಸ್ಟೋರೆಂಟ್ ಇರುವ ಕಟ್ಟಡದ ಮೇಲೆ ‘ಪಾಕಿಸ್ತಾನಿ ಆಹಾರೋತ್ಸವ’ ಎಂದು ಘೋಷಿಸುವ ಬೃಹತ್ ಫ್ಲೆಕ್ಸ್ ಬ್ಯಾನರ್ ಅನ್ನು ಹಾಕಲಾಗಿತ್ತು. ಇದನ್ನು ನೋಡಿದ ಬಜರಂಗ ದಳದ ಕಾರ್ಯಕರ್ತರು ಸೋಮವಾರ ‘ಜೈ ಶ್ರೀ ರಾಮ್’ ಎಂದು ಘೋಷಣೆಯನ್ನು ಕೂಗಿ ಬ್ಯಾನರ್ ಅನ್ನು ಕಿತ್ತೊಗೆದು ಬೆಂಕಿ ಹಚ್ಚಿ ಸುಟ್ಟಿದ್ದಾರೆ. ಇದನ್ನೂ ಓದಿ: 16.8 ಕೆಜಿ ತೂಕದ ಗೆಡ್ಡೆಯನ್ನ ಹೊರತೆಗೆದ ವೈದ್ಯರು

    ಈ ಆಹಾರೋತ್ಸವವನ್ನು ಡಿಸೆಂಬರ್ 12-22 ರ ನಡುವೆ ‘ಟೇಸ್ಟ್ ಆಫ್ ಇಂಡಿಯಾ’ ರೆಸ್ಟೋರೆಂಟ್‍ನಲ್ಲಿ ಆಯೋಜಿಸಲಾಗಿತ್ತು. ಬಜರಂಗ ದಳದ ಆಕ್ರೋಶಕ್ಕೆ ಗುರಿಯಾದ ನಂತರ ಇವರು ತಮ್ಮ ತಪ್ಪುಗಳನ್ನು ಒಪ್ಪಿಕೊಂಡಿದ್ದಾರೆ.

    ಈ ಕುರಿತು ದಕ್ಷಿಣ ಗುಜರಾತ್ ಬಜರಂಗ ದಳದ ಅಧ್ಯಕ್ಷ ದೇವಿಪ್ರಸಾದ್ ದುಬೆ ಮಾತನಾಡಿದ್ದು, ಸದಸ್ಯ ಕಾರ್ಯಕರ್ತರು ಇಂತಹ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ಕಾರಣ ಕಟ್ಟಡದಿಂದ ಫ್ಲೆಕ್ಸ್ ಬ್ಯಾನರ್ ತೆಗೆದು ಬೆಂಕಿ ಹಚ್ಚಿದ್ದಾರೆ. ಆ ರೆಸ್ಟೋರೆಂಟ್‍ನಲ್ಲಿ ಈ ರೀತಿಯ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಎಂದು ನಾವು ಖಚಿತಪಡಿಸಿದ್ದೇವೆ. ಅಂತಹ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ನಾವು ಸಹಿಸುವುದಿಲ್ಲ ಎಂದು ನಾವು ರೆಸ್ಟೋರೆಂಟ್ ನವರಿಗೆ ತಿಳಿಸಿದ್ದು, ಅದಕ್ಕೆ ಅವರು ತಪ್ಪನ್ನು ಒಪ್ಪಿಕೊಂಡಿದೆ ಎಂದು ಹೇಳಿದರು.

    ಈ ಕಾರ್ಯಕ್ರಮವನ್ನು ಆಯೋಜಿಸಿದ್ದ ಸಂದೀಪ್ ದಾವರ್ ಮಾತನಾಡಿದ್ದು, ಆಹಾರೋತ್ಸವದಲ್ಲಿ ಇನ್ನು ಮುಂದೆ ಪಾಕಿಸ್ತಾನಿ ಎಂಬ ಪದವನ್ನು ಬಳಸುವುದಿಲ್ಲ. ಅದು ಕೆಲವರ ಭಾವನೆಗಳಿಗೆ ಧಕ್ಕೆ ತರುತ್ತದೆ. ನಾವು ಆ ಪದವನ್ನು ಬಳಸಿದಾಗ, ಕೆಲವರು ಅದನ್ನು ಇಷ್ಟಪಡುವುದಿಲ್ಲ ಎಂದು ನಮಗೆ ತಿಳಿದುಬಂದಿದೆ. ಆದರೆ ಅದು ಹೀಗೆ ಆಗುತ್ತದೆ ಎಂದು ನಮಗೆ ಗೊತ್ತಿರಲಿಲ್ಲ. ಇದು ಪಾಕಿಸ್ತಾನದೊಂದಿಗೆ ಯಾವುದೇ ಸಂಬಂಧವಿಲ್ಲ. ಮುಘಲಾಯಿ ಪಾಕಪದ್ಧತಿಯ ಎರಡನೇ ಹೆಸರು ಪಾಕಿಸ್ತಾನಿ ಆಹಾರ ಎಂದು ತಿಳಿಸಿದರು. ಇದನ್ನೂ ಓದಿ: ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪುಟ ಸೇರಿದ 5 ವರ್ಷದ ಪೋರಿ

    ಈ ಘಟನೆಯ ವಿರುದ್ಧ ಯಾವುದೇ ಪೊಲೀಸ್ ಪ್ರಕರಣ ದಾಖಲಾಗಿಲ್ಲ.

  • ಪ್ರಿಯಕರನೊಂದಿಗೆ ಓಡಿಹೋಗಲು ಹೆತ್ತವರಿಗೆ ವಿಷ ಇಟ್ಟ ಮಗಳು

    ಪ್ರಿಯಕರನೊಂದಿಗೆ ಓಡಿಹೋಗಲು ಹೆತ್ತವರಿಗೆ ವಿಷ ಇಟ್ಟ ಮಗಳು

    ಗಾಂಧಿನಗರ: ಯುವತಿಯೊಬ್ಬಳು ಪ್ರಿಯಕರನೊಂದಿಗೆ ಓಡಿಹೋಗಲು ಹೆತ್ತ ತಂದೆ ತಾಯಿಗೆ ವಿಷ ಪ್ರಾಶನ ಮಾಡಿಸಿದ ಘಟನೆ ಸೂರತ್‍ನಲ್ಲಿ ನಡೆದಿದೆ.

    ಪ್ರೀತಿಸುತ್ತಿದ್ದ ಯುವಕನನ್ನು ಮದುವೆಯಾಗಲು ಹೆತ್ತ ತಂದೆ ತಾಯಿಗೆ ವಿಷ ಹಾಕಿದ್ದಾಳೆ. ಆರೋಪಿತ ಯುವತಿಯನ್ನು ಖುಷ್ಬು ಎಂದು ಗುರುತಿಸಲಾಗಿದೆ. ಈಕೆಯ ಪ್ರಿಯಕರ ಸಚಿನ್ ಆಗಿದ್ದಾನೆ. ಪ್ರಿಯಕರ ಸಚಿನ್ ಜೊತೆ ಓಡಿ ಹೋಗಲು ನಿರ್ಧಾರ ಮಾಡಿದ್ದಳು. ಇದಕ್ಕೆ ಪೋಷಕರು ಅಡ್ಡಿಯಾದ್ದರಿಂದ, ಆಹಾರದಲ್ಲಿ ವಿಷ ಹಾಕಿ ನೀಡಿದ್ದಾಳೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬೆಂಗ್ಳೂರು ಘಟನೆ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

    ಖುಷ್ಬು, ಸಚಿನ್ ಕುಟುಂಬವು ಸೂರತ್‍ನ ದಿಂಡೋಲಿ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಆ ಸಮಯದಲ್ಲಿ ಇಬ್ಬರಿಗೂ ಸ್ನೇಹ ಬೆಳೆದಿದೆ. ದಿನ ಕಳೆಯುತ್ತಿದ್ದಂತೆ ಸ್ನೇಹ ಪ್ರೀತಿಯಾಗಿ ಬದಲಾಗಿದೆ. ಖುಷ್ಬು ಅಪ್ರಾಪ್ತ ವಯಸ್ಸಿನವಳಾದ್ದರಿಂದ ಪೋಷಕರು ಆ ಸಂಬಂಧವನ್ನು ನಿರಾಕರಿಸಿದ್ದಾರೆ. ಇದರಿಂದಾಗಿ ಬೇಸರಗೊಂಡ ಖುಷ್ಬು ಸಚಿನ್‍ನೊಡನೆ ಮನೆಬಿಟ್ಟು ಓಡಿ ಹೋಗಿದ್ದಳು. ಖುಷ್ಬು ಕುಟುಂಬ ಅವರಿರುವ ಜಾಗವನ್ನು ಹುಡುಕಿ ಮರಳಿ ಮನೆಗೆ ಕರೆತಂದಿದ್ದರು. ಪ್ರೀತಿಯ ಮೋಹದಿಂದ ಖುಷ್ಬುವಿನ ಮನ ಬದಲಾಯಿಸಲು ಆ ನಗರವನ್ನು ಬಿಟ್ಟು ಬೇರೆಡೆಗೆ ಹೋಗಿ ಕುಟುಂಬ ವಾಸವಿದ್ದರು. ಇದನ್ನೂ ಓದಿ: 40 ಕೆಜಿ ತೂಕ ಇಳಿಸಿಕೊಂಡ ಬಾಲಿವುಡ್‍ನ ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಪತ್ನಿ

    ಬೇರೆಡೆಗೆ ವಾಸವಿದ್ದಾಗಲೂ ಸಹ ಖುಷ್ಬು ಮನ ಬದಲಾಗಿಲ್ಲ. ಸಚಿನ್ ಜೊತೆಗಿನ ಪ್ರೀತಿಯನ್ನು ಮತ್ತೆ ಮುಂದುವರೆಸಿದ್ದಳು. ಆದರೆ 18 ವರ್ಷ ವಯಸ್ಸಾಗುವುದನ್ನೇ ಕಾಯುತ್ತಿದ್ದು, ತನ್ನ 18ನೇ ವರ್ಷದ ಜನ್ಮದಿನದ ಎರಡು ದಿನಗಳ ಬಳಿಕ ಸಚಿನ್ ಜೊತೆಗೆ ಓಡಿ ಹೋಗಿ ಮದುವೆಯಾಗಲು ನಿರ್ಧರಿಸಿದ್ದಾಳೆ. ಸೆಪ್ಟೆಂಬರ್ 12ನೇ ತಾರೀಕಿನಂದು ಮೆಡಿಕಲ್ ಸ್ಟೋರ್ಸ್‍ನಿಂದ ಒಂದಿಷ್ಟು ಮಾತ್ರೆಗಳನ್ನು ತಂದು ಆಹಾರದಲ್ಲಿ ಬೆರೆಸಿ ಮನೆಯವರಿಗೆಲ್ಲಾ ನೀಡಿದ್ದಾಳೆ. ಸ್ವಲ್ಪ ಸಮಯದ ಬಳಿಕ ಮನೆಯವರು ಪ್ರಜ್ಞಾಹೀನ ಸ್ಥಿತಿಗೆ ತಲುಪುತ್ತಿದ್ದಂತೆಯೇ ಸಚಿನ್ ಆಕೆಯ ಮನೆಗೆ ಬಂದು ಖುಷ್ಬುಳನ್ನು ಕರೆದುಕೊಂಡು ಪರಾರಿಯಾಗಿದ್ದಾನೆ. ಇದನ್ನೂ ಓದಿ: ನಾಲಿಗೆ ಚಪ್ಪರಿಸಿ ತಿನ್ನುವ ಶುಂಠಿ ಉಪ್ಪಿನಕಾಯಿ ಮಾಡುವ ವಿಧಾನ 

    ಆಕೆಯ ತಂದೆ ವಂಜಾರಾ ಅವರಿಗೆ ಎಚ್ಚರವಾದ ಬಳಿಕ, ಎಚ್ಚರ ತಪ್ಪಿ ಬಿದ್ದಿದ್ದ ಮನೆಯವರನ್ನು ಎದ್ದೇಳಿಸಲು ಪ್ರಯತ್ನಿಸಿದ್ದಾರೆ. ಈ ಕಡೆ ಖುಷ್ಬು ಮತ್ತು ಸಚಿನ್ ಮದುವೆಯಾಗಲು ಪೊಲೀಸ್ ಠಾಣೆಯನ್ನು ತಲುಪಿದ್ದಾರೆ. ಖುಷ್ಬು ತಾಯಿ ಮತ್ತು ಸಹೋದರನ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು ಆಸ್ಪತ್ರೆಗೆ ಕರೆತರಲಾಗಿದೆ. ತಂದೆ ವಂಜಾರಾ ಅವರು ಖುಷ್ಬು, ಸಚಿನ್ ಮತ್ತು ಸಚಿನ್ ತಂದೆ ಅಶೋಕ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

  • ಕಲುಷಿತ ನೀರು ಸೇವಿಸಿ 6 ಮಂದಿ ಸಾವು – 50 ಮಂದಿ ಗಂಭೀರ

    ಕಲುಷಿತ ನೀರು ಸೇವಿಸಿ 6 ಮಂದಿ ಸಾವು – 50 ಮಂದಿ ಗಂಭೀರ

    ಗಾಂಧೀನಗರ: ಕಲುಷಿತ ನೀರನ್ನು ಸೇವಿಸಿದ ಪರಿಣಾಮ ಆರು ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೂರತ್ ನಗರದ ಕ್ಯಾಥೋರ್ ಗ್ರಾಮದಲ್ಲಿ ನಡೆದಿದೆ.

    ಮೇ 30 ಮತ್ತು ಮೇ 31ರ ಅವಧಿಯಲ್ಲಿ ಈ ಘಟನೆ ನಡೆದಿದ್ದು, ಈ ಮುನ್ನ ಸೂರತ್ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳು ವಿವೇಕ್ ನಗರದ ಕಾಲೋನಿಗೆ ಭೇಟಿ ನೀಡಿ ಗ್ರಾಮಸ್ಥರಿಗೆ ಕ್ಲೋರಿನ್ ಮೆಡಿಸಿನ್ ವಿತರಿಸಿದ್ದರು.

    ಘಟನೆ ಕುರಿತಂತೆ ತನಿಖೆ ವೇಳೆ ಗ್ರಾಮಸ್ಥರು ಕಲುಷಿತ ನೀರನ್ನು ಸೇವಿಸಿದ್ದರಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಅಲ್ಲದೆ ಕುಡಿಯುವ ನೀರಿನ ಪೈಪ್‍ಲೈನ್‍ನಲ್ಲಿ ಸೋರಿಕೆ ಕಂಡುಬಂದಿದ್ದು, ಒಳಚರಂಡಿ ನೀರಿನೊಂದಿಗೆ ಬೆರೆತು ನೀರು ಕಲುಷಿತಗೊಂಡಿರುವ ವಿಚಾರ ಬಹಿರಂಗಗೊಂಡಿದೆ. ಇದನ್ನು ಓದಿ: ಭಯೋತ್ಪಾದಕರ ಗುಂಡಿನ ದಾಳಿಗೆ ಬಿಜೆಪಿ ಕೌನ್ಸಿಲರ್ ಬಲಿ

    ಸೂರತ್ ಮಹಾನಗರ ಪಾಲಿಕೆ ಜನರಿಗೆ ಮೂಲಭೂತ ಸೌಲಭ್ಯ ಒದಗಿಸುತ್ತಿಲ್ಲ ಎಂದು ಸ್ಥಳೀಯ ಮುಖಂಡರಾದ ದರ್ಶನ್ ನಾಯಕ್ ಆರೋಪಿಸಿದ್ದಾರೆ ಹಾಗೂ ಮೃತರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ಒತ್ತಾಯಿಸಿದ್ದಾರೆ.

    ಸೂರತ್ ಮೇಯರ್ ಹೇಮಾಲಿ ವೋಘವಾಲಾರವರು ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಬುಧವಾರ ಒಂದು ಲಕ್ಷ ಪರಿಹಾರ ಘೋಷಿಸಿದ್ದಾರೆ.

  • ಲಾಕ್‍ಡೌನ್‍ನಿಂದ ಕೆಲಸ ಹೋಯ್ತು, ಕುರುಕಲು ತಿಂಡಿ ಮಾರಿ ತಿಂಗಳಿಗೆ 45 ಸಾವಿರ ಸಂಪಾದನೆ

    ಲಾಕ್‍ಡೌನ್‍ನಿಂದ ಕೆಲಸ ಹೋಯ್ತು, ಕುರುಕಲು ತಿಂಡಿ ಮಾರಿ ತಿಂಗಳಿಗೆ 45 ಸಾವಿರ ಸಂಪಾದನೆ

    – ಮಾದರಿ ಮಂಗಳಮುಖಿಯ ನೈಜ ಕಥೆ

    ಮಂಗಳಮುಖಿಯರನ್ನ ನೋಡುವ ದೃಷ್ಟಿಕೋನ ಸಮಾಜದಲ್ಲಿ ಬದಲಾಗಬೇಕಿದೆ. ಕೇವಲ ಭಿಕ್ಷಾಟನೆಗೆ ಮಾಡದೇ ಹಲವು ಮಂಗಳಮುಖಿಯರು ಸ್ವಾವಲಂಬಿ ಬದುಕು ಕಟ್ಟಿಕೊಂಡಿರುವ ಉದಾಹರಣೆಗಳು ನಮ್ಮ ಮುಂದಿವೆ. ಎಷ್ಟೋ ಜನರ ಉದ್ಯೋಗವನ್ನ ಲಾಕ್‍ಡೌನ್ ನುಂಗಿ ಸ್ವಾಹಃ ಮಾಡಿತ್ತು. ಆದ್ರೆ ಗುಜರಾತಿನ ಸ್ವಾವಲಂಬಿ ಮಂಗಳಮುಖಿ ದೃತಿಗೆಡದೇ ತಮ್ಮದೇ ಬ್ಯುಸಿನೆಸ್ ಆರಂಭಿಸಿ ತಿಂಗಳಿಗೆ ಸುಮಾರು 45 ಸಾವಿರ ಸಂಪಾದಿಸಿ, ಕೆಲಸ ಇಲ್ಲ ಅಂತ ಕೈಕಟ್ಟಿ ಕುಳಿತುಕೊಳ್ಳುವ ಸೋಮಾರಿಗಳಿಗೆ ಮಾದರಿಯಾಗಿದ್ದಾರೆ.

    ಗುಜರಾತ್ ರಾಜ್ಯದ ಸೂರತ್ ನಗರದ ನಿವಾಸಿ ರಾಜವಿ ಜಾನ್ ಬದುಕು ಕಟ್ಟಿಕೊಂಡ ಕಥೆ ಇಲ್ಲಿದೆ. ಸಮಾಜದಲ್ಲಿ ಮಂಗಳಮುಖಿ ಬದುಕು ಕಟ್ಟಕೊಳ್ಳುವುದು ಸುಲಭದ ಮಾತಲ್ಲ. ಆದ್ರೆ ತಮಗೆದುರಾದ ಎಲ್ಲ ಕಷ್ಟಗಳನ್ನ ಫೇಸ್ ಮಾಡಿರುವ ರಾಜವಿ ಕುರುಕಲ ತಿಂಡಿ ಅಂಗಡಿ ನಡೆಸುತ್ತಿದ್ದು, ಪ್ರತಿನಿತ್ಯ 1,500 ರೂ.ಯಿಂದ 2,000 ರೂ.ವರೆಗೂ ವ್ಯಾಪರ ಮಾಡುತ್ತಾರೆ.

    ಐದು ವರ್ಷಗಳಿಂದ ರಾಜವಿ ಪೆಟ್ಸ್ ಶಾಪ್ ನಲ್ಲಿ ಕೆಲಸ ಮಾಡಿಕೊಂಡು ಜೀವನ ಕಟ್ಟಿಕೊಂಡಿದ್ದರು. ಒಳ್ಳೆಯ ಸಂಬಳದ ಜೊತೆಗೆ ಗೌರವ ಎಲ್ಲವೂ ರಾಜವಿ ಅವರಿಗೆ ಸಿಕ್ಕಿತ್ತು. ಆದರೆ ದೇಶಕ್ಕೆ ಒಕ್ಕರಿಸಿದ ಕೊರೊನಾದಿಂದ ಎಲ್ಲ ವ್ಯಾಪಾರ ನಿಂತ ಪರಿಣಾಮ ರಾಜವಿ ಕೆಲಸ ಕಳೆದುಕೊಂಡರು. ಲಾಕ್‍ಡೌನ್ ನಿಂದಾಗಿ ಮಾಡಿಕೊಂಡು ಸಾಲ ಹಿಂದಿರುಗಿಸಲಾಗದೇ ರಾಜವೀ ಸಂಕಷ್ಟದಲ್ಲಿ ಸಿಲುಕಿಕೊಂಡರು. ಆರ್ಥಿಕ ಸಂಕಷ್ಟದಿಂದಾಗಿ ಎಷ್ಟೋ ಬಾರಿ ಆತ್ಮಹತ್ಯೆಗೆ ಯೋಚಿಸಿದ್ದೆ ಅಂತ ಸ್ವತಃ ರಾಜವಿ ಹೇಳ್ತಾರೆ. ಆದ್ರೆ ಆತ್ಮಸ್ಥೈರ್ಯ ಕಳೆದುಕೊಳ್ಳದ ರಾಜವಿ ಕಷ್ಟಗಳ ನಡುವೆಯೇ ಪುಟ್ಟದಾದ ಕುರುಕಲು ತಿಂಡಿ (ರೆಡಿಮೇಡ್ ಸ್ನಾಕ್ಸ್) ಅಂಗಡಿ ತೆರೆದರು. ಈಗ ಅಂಗಡಿಯಲ್ಲಿ ಪ್ರತಿನಿತ್ಯ 1,500 ರೂ.ಯಿಂದ 2 ಸಾವಿರ ರೂ.ವರೆಗೆ ವ್ಯಾಪಾರ ನಡೆಯುತ್ತಿದೆ.

    ಅಪ್ಪ-ಅಮ್ಮನ ಪ್ರೀತಿಯಲ್ಲಿ ಬೆಳೆದ ರಾಜವಿ: ಠಾಕೂರ್ ಕುಟುಂಬದಲ್ಲಿ ನನ್ನ ಜನ್ಮವಾಯ್ತು. ತಂದೆ-ತಾಯಿ ಚಿತೆಯೂ ಠಾಕೂರ್ ಅಂತ ಹೆಸರಿಟ್ಟಿದ್ದರು. ಮೂರನೇ ಲಿಂಗದಲ್ಲಿ ನಾನು ಹುಟ್ಟಿದ್ದರೂ ಕುಟುಂಬಸ್ಥರಿಂದ ಸಿಗುವ ಪ್ರೀತಿಯಲ್ಲಿ ಯಾವುದೇ ಕಡಿಮೆಯಾಗಲಿಲ್ಲ. ಅಮ್ಮನ ಪ್ರೀತಿಯ ಮಗುವಾಗಿ ಬೆಳೆದ ನನಗೆ ಎಲ್ಲದಕ್ಕೂ ಬೆನ್ನಲುಬಾಗಿ ನಿಂತರು. ಸಾಮಾನ್ಯವಾಗಿ ನನ್ನಂತಹ ಮಕ್ಕಳನ್ನ ಮಂಗಳಮುಖಿಯರಿಗೆ ನೀಡುತ್ತಾರೆ. ಆದ್ರೆ ನನ್ನ ಅಮ್ಮ ಹಾಗೆ ಮಾಡಲಿಲ್ಲ. ನನ್ನನ್ನು ಓರ್ವ ಹುಡುಗನ ರೀತಿಯಲ್ಲಿ ಬೆಳೆಸಿದ ಅಪ್ಪ-ಅಮ್ಮ ಸಮಾಜದಲ್ಲಿ ಮಾದರಿ ಪೋಷಕರು ಆಗಿದ್ದರು, ಇಂತಹ ಮಕ್ಕಳನ್ನ ಹೇಗೆ ಬೆಳೆಸಬೇಕು ಎಂಬುದರ ಬಗ್ಗೆ ಸಲಹೆ ನೀಡುತ್ತಿದ್ದರು. ತೃತೀಯ ಲಿಂಗಿಯಾದ್ರೂ ನನ್ನ ಮೇಲೆ ಅಪ್ಪ-ಅಮ್ಮನ ಪ್ರೀತಿ ಎಂದೂ ಕಡಿಮೆಯಾಗಿಲ್ಲ ಎಂದು ರಾಜವಿ ಸಂತೋಷ ವ್ಯಕ್ತಪಡಿಸುತ್ತಾರೆ.

    12ನೇ ವಯಸ್ಸಿನಲ್ಲಿ ಮಂಗಳಮುಖಿಯರ ಜೊತೆ ಸೇರ್ಪಡೆ: ಗುಜರಾತಿನಲ್ಲಿ ಹೆಚ್ಚು ಮಂಗಳಮುಖಿಯರನ್ನ ಕಾಣಬಹುದು. ಪೋಷಕರ ಜೊತೆಯಲ್ಲಿದ್ದರೂ ರಾಜವಿ ಮಂಗಳಮುಖಿ ಸಮುದಾಯವನ್ನ ಸೇರಿಕೊಂಡರು. ಅಲ್ಲಿಯೂ ರಾಜವಿ ಅವರಿಗೆ ಒಳ್ಳೆಯ ಸ್ನೇಹ, ಪ್ರೀತಿ ಸಿಕ್ತು. ಗುಜರಾತಿನ ಶೇ.95 ರಷ್ಟು ಮಂಗಳಮುಖಿಯರು ರಾಜವಿ ಅವರನ್ನ ಗುರುತಿಸುತ್ತಾರೆ. 18ನೇ ವಯಸ್ಸಿನಲ್ಲಿ ಮಕ್ಕಳಿಗೆ ಟ್ಯೂಷನ್ ಹೇಳುವ ಕೆಲಸವನ್ನ ರಾಜವಿ ಮೊದಲಿಗೆ ಆರಂಭಿಸುತ್ತಾರೆ. ಸುಮಾರು 11 ವರ್ಷ ಈ ಕೆಲಸ ಮಾಡಿದ್ರೂ ಎಂದೂ ಮಕ್ಕಳಲ್ಲಿ ಬೇದಭಾವ ಮಾಡಿಲ್ಲ. ಹಾಗಾಗಿ ಮಕ್ಕಳಿಗೆ ರಾಜವಿ ಅಚ್ಚುಮೆಚ್ಚಿನ ಟೀಚರ್. ಇಂದಿಗೂ ಬಹುತೇಕರು ರಾಜವಿ ಅವರ ಸಂಪರ್ಕದಲ್ಲಿದ್ದಾರೆ.

    32ನೇ ವಯಸ್ಸಿನಲ್ಲಿ ಮಹಿಳೆಯಾಗಿ ಬದಲು: ಕುಟುಂಬಸ್ಥರು ನನ್ನನ್ನ ಹುಡುಗನಾಗಿಯೇ ಬೆಳೆಸಿದರು. ಆದ್ರೆ ಶಾರೀರಿಕ ರಚನೆ, ಆಲೋಚನೆಗಳೂ ಬೇರೆ ಇತ್ತು. ಹಾಗಾಗಿ 32ನೇ ವಯಸ್ಸಿಗೆ ಪುರುಷರ ರೀತಿಯಲ್ಲಿ ಬಟ್ಟೆ ತೊಡುವುದನ್ನ ನಿಲ್ಲಿಸಿ, ಸೀರೆ ತೊಟ್ಟು, ಕುಂಕುಮ ಹಚ್ಚಿ, ಕೈತುಂಬ ಬಳೆ ಹಾಕಿಕೊಂಡು ನಿಜವಾದ ಮಂಗಳಮುಖಿಯಂತೆ ಜೀವನ ಆರಂಭಿಸಿದೆ. ಚಿತೆಯೂನಿಂದ ರಾಜವಿ ಜಾನ್ ಆಗಿ ಬದಲಾದೆ. ಕುಟುಂಬಸ್ಥರು ನನ್ನ ನಿರ್ಧಾರಕ್ಕೆ ಬೆಂಬಲ ನೀಡಿದರು ಎಂದು ರಾಜವಿ ಹೇಳುತ್ತಾರೆ.

    ಆರಂಭದಲ್ಲಿ ನನ್ನ ಅಂಗಡಿಗೆ ಬರಲು ಗ್ರಾಹಕರು ಹಿಂದೇಟು ಹಾಕುತ್ತಿದ್ದರು. ಈಗ ಸಮಯ ಬದಲಾಗಿದ್ದು, ಗ್ರಾಹಕರು ಆಗಮಿಸಿ ತಮಗೆ ಬೇಕಾದ ವಸ್ತುಗಳನ್ನ ಖರೀದಿಸುತ್ತಾರೆ. ದಿನದಿಂದ ದಿನಕ್ಕೆ ನಗರದಲ್ಲಿ ಅಂಗಡಿ ಚಿರಪರಿಚಿತವಾಗುತ್ತಿದ್ದು, ವ್ಯಾಪಾರವೂ ವೃದ್ಧಿ ಆಗ್ತಿದೆ. ಮುಂದಿನ ದಿನಗಳಲ್ಲಿ ನನ್ನ ಸಮಾಜದವರಿಗೆ ಗೌರವ ಸಿಗುವಂತಾಗಲಿ ಎಂದು ರಾಜವಿ ತಮ್ಮ ಆಸೆಯನ್ನ ಹೊರ ಹಾಕಿದರು.

  • ಸೆಕ್ಸ್ ಗೆ ಒಪ್ಪದ 6ನೇ ಪತ್ನಿ – ಏಳನೇ ಮದ್ವೆಗೆ ಸಿದ್ಧನಾದ ಮುದುಕ

    ಸೆಕ್ಸ್ ಗೆ ಒಪ್ಪದ 6ನೇ ಪತ್ನಿ – ಏಳನೇ ಮದ್ವೆಗೆ ಸಿದ್ಧನಾದ ಮುದುಕ

    – ತನಗಿಂತ 21 ವರ್ಷ ಚಿಕ್ಕವಳ ಜೊತೆ ಮದುವೆ
    – ಸೆಕ್ಸ್ ಗೆ ಒಪ್ಪುವ ಹೆಂಡ್ತಿಗಾಗಿ ವೃದ್ಧನ ಅಲೆದಾಟ

    ಗಾಂಧಿನಗರ: ತನಗಿಂತ 21 ವರ್ಷದ ಚಿಕ್ಕವಳಾದ ಆರನೇ ಪತ್ನಿ ಲೈಂಗಿಕ ಕ್ರಿಯೆಗೆ ಒಪ್ಪದ್ದಕ್ಕೆ 63 ವರ್ಷದ ಮುದುಕ ಏಳನೇ ಮದುವೆಗೆ ಸಿದ್ಧನಾಗಿದ್ದಾನೆ. ಗುಜರಾತಿನ ಸೂರತ್ ನಲ್ಲಿ ಈ ಘಟನೆ ನಡೆದಿದ್ದು, ವೃದ್ಧ ಪತಿ ವಿರುದ್ಧ ಆರನೇ ಪತ್ನಿ ಪೊಲೀಸ್ ಠಾಣೆಯಲ್ಲು ದೂರು ದಾಖಲಿಸಿದ್ದಾಳೆ.

    ಆಯುಬ್ ಖಾನ್ (63) ಏಳನೇ ಮದುವೆಗೆ ಸಿದ್ಧನಾಗಿರುವ ಮುದುಕ. ತನಗಿಂತ 21 ವರ್ಷ ಚಿಕ್ಕವಳಾದ ವಿಧವೆಗೆ ಬಾಳು ನೀಡುವದಾಗಿ ನಂಬಿಸಿ ಆಯುಬ್ ಮದುವೆಯಾಗಿದ್ದನು. ಮಹಿಳೆ ಸಹ ಕಷ್ಟಕಾಲದಲ್ಲಿ ಆಶ್ರಯ ಬಯಸಿ ಆಯೂಬ್ ನನ್ನ ಮದುವೆಯಾಗಿದ್ದಳು. ಮದುವೆ ಬಳಿಕ ಮಹಿಳೆಗೆ ತಾನು ಆರನೇ ಪತ್ನಿ ಅನ್ನೋ ವಿಚಾರ ತಿಳಿದಿದೆ. ಐದು ಮದುವೆಗಳನ್ನ ಸಹ ಆಯೂಬ್ ಯಾರಿಗೆ ತಿಳಿಯದಂತೆ ಮದುವೆಯಾಗಿದ್ದಾನೆ.

    ಪತಿಯ ನವರಂಗಿ ಆಟ ತಿಳಿದ ಆರನೇ ಪತ್ನಿ ಆತನಿಂದ ಅಂತರ ಕಾಯ್ದುಕೊಂಡಿದ್ದಳು. ಆದ್ರೆ ಮುದುಕ ಆಯೂಬ್ ಮಾತ್ರ ಸೆಕ್ಸ್ ಗಾಗಿ ಪತ್ನಿಯನ್ನ ಪೀಡಿಸಿದ್ದಾನೆ. ಆರನೇ ಹೆಂಡ್ತಿ ಲೈಂಗಿಕ ಕ್ರಿಯೆಗೆ ಸಹಕರಿಸುತ್ತಿಲ್ಲ. ನನಗೆ ಡಯಾಬಿಟಿಸ್, ಹೃದ್ರೋಗ ಸೇರಿದಂತೆ ವಯೋಸಹಜ ಕಾಯಿಲೆಗಳಿವೆ ಎಂದು ಹೇಳಿ ನನ್ನಿಂದ ದೂರವಾಗಿದ್ದಾಳೆ. ಹಾಗಾಗಿ ಏಳನೇ ಮದುವೆಗೆ ಸಿದ್ಧನಾಗಿದ್ದೇನೆ ಎಂದು ಆಯೂಬ್ ಆಪ್ತರ ಬಳಿ ಹೇಳಿಕೊಂಡಿರುವ ಬಗ್ಗೆ ವರದಿಯಾಗಿದೆ.

    ಗಂಡ ಏಳನೇ ಮದುವೆಗೆ ಸಿದ್ಧವಾಗುತ್ತಿರುವ ವಿಷಯ ಅರಿತ 6ನೇ ಪತ್ನಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ನನ್ನ ಹಾಗೆ ಇನ್ನೆಷ್ಟು ಮಹಿಳೆಯರಿಗೆ ಮೋಸ ಮಾಡಿದ್ದಾನೆ ಅನ್ನೋದರ ಬಗ್ಗೆ ತನಿಖೆ ನಡೆಸಿ ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾಳೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಟ್ರಕ್ ಹರಿದು 13 ಮಂದಿ ಸಾವು

    ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಟ್ರಕ್ ಹರಿದು 13 ಮಂದಿ ಸಾವು

    – ಸಂತಾಪ ಸೂಚಿಸಿ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ

    ಗಾಂಧಿನಗರ: ಟ್ರಕ್ ವಾಹನವೊಂದು ಹರಿದು 13 ಜನರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಗುಜರಾತ್‍ನ ಸೂರತ್ ಕೊಸಂಬಾ ನಗರದಲ್ಲಿ ನಡೆದಿದೆ.

    ವರದಿಗಳ ಪ್ರಕಾರ ಅಪಘಾತದಲ್ಲಿ ಮೃತಪಟ್ಟವರು ಕಾರ್ಮಿಕರಾಗಿದ್ದು, ರಾಜಸ್ಥಾನ ಮೂಲದವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇನ್ನೂ 6 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಕುರಿತಂತೆ ತನಿಖೆ ನಡೆಸಿದಾಗ ಪಾದಚಾರಿ ರಸ್ತೆಯಲ್ಲಿ ಕಾರ್ಮಿಕರು ಮಲಗಿದ್ದರು. ಅದೇ ಸಮಯಕ್ಕೆ ಕಬ್ಬಿನ ರಾಶಿ ತುಂಬಿದ್ದ ಟ್ರಕ್, ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ರಸ್ತೆಯಲ್ಲಿ ಮಲಗಿದ್ದ ಕಾರ್ಮಿಕರ ಮೈ ಮೇಲೆ ಹರಿದಿದೆ ಎಂದು ಸೂರತ್‍ನ ಕಾಮ್ರೆಜ್ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಸಿಎಂ ಜಡೇಜಾ ಹೇಳಿದ್ದಾರೆ.

    ಘಟನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಸೂರತ್‍ನಲ್ಲಿ ನಡೆದ ಟ್ರಕ್ ಅಪಘಾತ ಒಂದು ದುರಂತ. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

    ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ(ಪಿಎಂಎನ್‍ಆರ್‍ಎಫ್) ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಮತ್ತು ಸರ್ಕಾರ ಗಾಯಗೊಂಡವರಿಗೆ ತಲಾ 50,000 ರೂ ಪರಿಹಾರ ಘೋಷಿಸಿದೆ.

  • ಸೂರತ್‌ನಿಂದ ಕೋಲ್ಕತ್ತಾಗೆ ಹೊರಟ್ಟಿದ್ದ ಇಂಡಿಗೋ ವಿಮಾನ ಭೋಪಾಲ್‌ನಲ್ಲಿ ತುರ್ತು ಲ್ಯಾಂಡಿಂಗ್‌

    ಸೂರತ್‌ನಿಂದ ಕೋಲ್ಕತ್ತಾಗೆ ಹೊರಟ್ಟಿದ್ದ ಇಂಡಿಗೋ ವಿಮಾನ ಭೋಪಾಲ್‌ನಲ್ಲಿ ತುರ್ತು ಲ್ಯಾಂಡಿಂಗ್‌

    ಭೋಪಾಲ್‌: ಸೂರತ್‌ನಿಂದ ಕೋಲ್ಕತ್ತಾಗೆ ಹೊರಟ್ಟಿದ್ದ 172 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಇಂದು ಬೆಳಗ್ಗೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ತುರ್ತು ಲ್ಯಾಂಡಿಂಗ್‌ ಆಗಿದೆ.

    ತಾಂತ್ರಿಕ ಕಾರಣಗಳಿಂದಾಗಿ ಇಂಡಿಗೋ ವಿಮಾನವನ್ನು ತುರ್ತು ಲ್ಯಾಂಡಿಂಗ್‌ ಮಾಡಲು ಭೋಪಾಲ್‌ಗೆ ಕಡೆ ತಿರುಗಿಸಲಾಗಿತ್ತು. ನಿಲ್ದಾಣದಲ್ಲಿ ವಿಮಾನ ಸುರಕ್ಷಿತವಾಗಿ ಇಳಿಯಿತು ಎಂದು ಭೋಪಾಲ್ ವಿಮಾನ ನಿಲ್ದಾಣ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ ಇಂಡಿಗೋ ಕಂಪನಿ, “ಸೂರತ್‌ನಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ವಿಮಾನವನ್ನು ಮುನ್ನೆಚ್ಚರಿಕೆಯಾಗಿ ಭೋಪಾಲ್‌ ಕಡೆಗೆ ತಿರುಗಿಸಲಾಯಿತು. ಹಾರಾಟದ ಸಮಯದಲ್ಲಿ ಪೈಲಟ್‌ ಗಮನಕ್ಕೆ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಎಚ್ಚರಿಕೆಯಂತೆ ಭೋಪಾಲ್‌ನಲ್ಲಿ ಇಳಿಸಲಾಯಿತು. ಮತ್ತೊಂದು ವಿಮಾನದ ಮೂಲಕ ಪ್ರಯಾಣಿಕರನ್ನ ಕೋಲ್ಕತ್ತಾಗೆ ಕಳುಹಿಸಲಾಯಿತು. ಸದ್ಯ ಭೋಪಾಲ್‌ನಲ್ಲಿರುವ ವಿಮಾನವನ್ನು ಪರಿಶೀಲನೆ ಮಾಡಲಾಗುತ್ತಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ” ಎಂದು ಹೇಳಿದೆ.

    ಒಡಿಶಾದಿಂದ 50 ಕ್ಕೂ ಹೆಚ್ಚು ಪ್ರಯಾಣಿಕರೊಂದಿಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನದ ಕ್ಯಾಬಿನ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಸೋಮವಾರ ಸಂಜೆ ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಆಗಿತ್ತು.

  • ವರ್ಕ್ ಫ್ರಮ್ ಹೋಮ್‍ನಲ್ಲಿ ಹೆಚ್ಚಾದ ಒತ್ತಡ- ಟೆಕ್ಕಿ ನೇಣಿಗೆ ಶರಣು

    ವರ್ಕ್ ಫ್ರಮ್ ಹೋಮ್‍ನಲ್ಲಿ ಹೆಚ್ಚಾದ ಒತ್ತಡ- ಟೆಕ್ಕಿ ನೇಣಿಗೆ ಶರಣು

    ಸೂರತ್: ಕೊರೊನಾ ಸಂಕಷ್ಟದ ಸಮಯದಲ್ಲಿ ವರ್ಕ್ ಫ್ರಮ್ ಹೋಮ್ ಮಾತು ಸಾಮಾನ್ಯವಾಗಿ ಕೇಳಿ ಬರುತ್ತಿತ್ತು. ಕೆಲ ಸಂಸ್ಥೆಗಳು ತಮ್ಮ ಸಂಸ್ಥೆಯ ನೌಕರರಿಗೆ ವರ್ಕ್ ಫ್ರಮ್ ಹೋಮ್ ನೀಡುವ ನಿರ್ಧಾರ ಮಾಡಿದ್ದವು. ಆದರೆ ಸಾಕಷ್ಟು ಸಮಯದಿಂದ ಮನೆಯಿಂದಲೇ ಕೆಲಸ ಮಾಡುತ್ತಿರುವುದು ನೌಕರರ ಮೇಲೆ ಹೆಚ್ಚಿನ ಒತ್ತಡ ಬೀಳುವ ಪ್ರಮಾದ ಎದುರಾಗಿದೆ.

    ಇದಕ್ಕೆ ತಾಜಾ ಉದಾಹಣೆ ಎಂಬಂತೆ ಗುಜರಾತ್‍ನ ಸೂರತ್‍ನಲ್ಲಿ ವರ್ಕ್ ಫ್ರಮ್ ಹೋಮ್‍ ಮಾಡುತ್ತಿದ್ದ ಟೆಕ್ಕಿ ಕೆಲಸದ ಒತ್ತಡ ಸಹಿಸಿಕೊಳ್ಳಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. 32 ವರ್ಷದ ಎಂಜಿನಿಯರ್ ಜಿಗರ್ ಗಾಂಧಿ ತನ್ನ ಮನೆಯಲ್ಲೇ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದು, ಕಳೆದ 3 ವರ್ಷಗಳಿಂದ ನೋಡ್ಡಾ ಸೇರಿದ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ.

    ಕೊರೊನಾ ಕಾರಣದಿಂದ ತನ್ನ ನಿವಾಸಕ್ಕೆ ಕಳೆದ 2 ತಿಂಗಳ ಹಿಂದೆ ವಾಪಸ್ ಆಗಿದ್ದ ಟೆಕ್ಕಿ, ಮನೆಯಿಂದಲೇ ಕೆಲಸ ಮಾಡುತ್ತಿದ್ದ. ಕುಟುಂಬಸ್ಥರು ಡಿಸೆಂಬರ್ ನಲ್ಲಿ ಆತನಿಗೆ ನಿಶ್ಚಿತಾರ್ಥ ಮಾಡಲು ನಿರ್ಧರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಟೆಕ್ಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಅವರ ತಂದೆ ಬನ್ಸಿನಾಲ್ ಅವರು ವಿದ್ಯುತ್ ಉಪಕರಣಗಳ ಅಂಗಡಿಯನ್ನು ಹೊಂದಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಮಾನಸಿಕ ತಜ್ಞರು, ವರ್ಕ್ ಫ್ರಮ್ ಹೋಮ್ ಹೆಚ್ಚು ದಿನ ಮುಂದುವರಿದರೇ ಈ ರೀತಿಯ ಸಮಸ್ಯೆಗಳು ಎದುರಾಗುತ್ತದೆ. ಅಂತಹ ವ್ಯಕ್ತಿಗಳನ್ನು ಮೊದಲೇ ಗುರುತಿಸಿ ತಜ್ಞ ವೈದ್ಯರ ಸಲಹೆ ಪಡೆಯವುದು ಉತ್ತಮ ಎಂದಿದ್ದಾರೆ.

  • ಧಗಧಗನೇ ಹೊತ್ತಿ ಉರಿದ ಸೂರತ್‍ ಬಂದರಿನ ಒಎನ್‍ಜಿಸಿ- ಎದೆ ಝಲ್ ಎನಿಸೋ ಶಬ್ದ- ವಿಡಿಯೋ ನೋಡಿ

    ಧಗಧಗನೇ ಹೊತ್ತಿ ಉರಿದ ಸೂರತ್‍ ಬಂದರಿನ ಒಎನ್‍ಜಿಸಿ- ಎದೆ ಝಲ್ ಎನಿಸೋ ಶಬ್ದ- ವಿಡಿಯೋ ನೋಡಿ

    ಸೂರತ್: ದೇಶದ ಪ್ರಮುಖ ಬಂದರು ಎಂದು ಗುರುತಿಸಿಕೊಂಡಿರುವ ಸೂರತ್‍ನ ಹಜೀರಾ ಬಂದರಿನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‍ಜಿಸಿ) ಘಟಕದಲ್ಲಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ.

    ಇಂದು ಮುಂಜಾನೆ 3 ಗಂಟೆ ಸಮಯದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳು ಭಾರೀ ಶಬ್ದ ಕೇಳಿ ನಿದ್ದೆಯಿಂದ ಎಚ್ಚರಗೊಂಡಿದ್ದು, ಬೆಂಕಿಯ ತೀವ್ರತೆಯ ಕಂಡು ಆತಂಕಗೊಂಡಿದ್ದಾರೆ. ಸದ್ಯದ ಮಾಹಿತಿಯ ಅನ್ವಯ, ಹಜೀರಾ ಬಂದರಿನ ಟರ್ಮಿನಲ್‍ನಲ್ಲಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಬೆಂಕಿ ತೀವ್ರತೆಗೆ ಬಂದರಿನ ಆಕಾಶ ಸಂಪೂರ್ಣ ಕೆಂಪಾಗಿ ಬದಲಾಗಿತ್ತು.

    ಘಟನೆ ಕುರಿತಂತೆ ಸ್ಥಳೀಯ ನಿವಾಸಿಗಳು ಬೆಂಕಿ ಹೊತ್ತಿ ಉರಿಸುತ್ತಿರುವ ಸಂದರ್ಭದ ವಿಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಬೆಂಕಿಯ ಕಾರಣದಿಂದ ಘಟನೆ ನಡೆದ ಸ್ಥಳದಿಂದ ಸುಮಾರು 10 ಕಿಮೀ ದೂರದವರೆಗೂ ಗ್ಯಾಸ್ ವಾಸನೆ ಆವರಿಸಿದೆ ಎಂದು ನಿವಾಸಿಗಳು ಹೇಳಿದ್ದರೆ. ಘಟನೆ ನಡೆದ ಸಂದರ್ಭದಲ್ಲಿ ಹಲವರು ಭೂಕಂಪನದಿಂದ ದುರಂತ ನಡೆದಿದೆ ಎಂದು ಹಲವರು ತಪ್ಪಾಗಿ ಭಾವಿಸಿದ್ದರು ಎನ್ನಲಾಗಿದೆ.

    ಸ್ಫೋಟದ ಕುರಿತು ಸ್ಪಷ್ಟನೆ ನೀಡಿರುವ ಒಎನ್‍ಜಿಸಿ, ಹಜೀರಾ ಅನಿಲ ಸಂಸ್ಕರಣಾ ಘಟಕದಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಕೊಂಡಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಘಟನೆಯಲ್ಲಿ ಯಾವುದೇ ವ್ಯಕ್ತಿಗೆ ಅಪಘಾತ ಅಥವಾ ಗಾಯವಿಲ್ಲ ಎಂದು ಸ್ಪಷ್ಟಪಡಿಸಿದೆ.

    ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದ ಕೂಡಲೇ ಘಟನಾ ಸ್ಥಳಕ್ಕೆ ಹತ್ತಿರವಾಗಿದ್ದ ರಿಲಯನ್ಸ್, ಕ್ರಿಬ್ಕೊ, ಎನ್‍ಟಿಪಿಸಿ, ಅದಾನಿ, ಶೆಲ್, ಗೇಲ್, ಜಿಎಸ್‍ಇಜಿ ಮತ್ತು ಇತರ ಹಲವು ಸ್ಥಾವರಗಳನ್ನು ಮುನ್ನೆಚ್ಚರಿಕ ಕ್ರಮವಾಗಿ ಮುಚ್ಚಲಾಗಿದೆ ಎಂಬ ಮಾಹಿತಿ ಲಭಿಸಿದೆ. ಹಜೀರಾ ಬಂದರು ಅರಬ್ಬೀ ಸಮುದ್ರದಿಂದ 8 ಕಿಮೀ ದೂರಲ್ಲಿರುವ ತಪತಿ ನದಿಯ ದಡದಲ್ಲಿದೆ. ಆಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

  • ಸಿಕ್ಸರ್‌ಗಳ ಸುರಿಮಳೆ, ಕರ್ನಾಟಕ ಫೈನಲಿಗೆ – ಒಂದೇ ಓವರಿನಲ್ಲಿ 5 ವಿಕೆಟ್ ಕಿತ್ತು ಅಭಿಮನ್ಯು ದಾಖಲೆ

    ಸಿಕ್ಸರ್‌ಗಳ ಸುರಿಮಳೆ, ಕರ್ನಾಟಕ ಫೈನಲಿಗೆ – ಒಂದೇ ಓವರಿನಲ್ಲಿ 5 ವಿಕೆಟ್ ಕಿತ್ತು ಅಭಿಮನ್ಯು ದಾಖಲೆ

    ಸೂರತ್‍: ಸಯ್ಯದ್ ಮುಷ್ತಾಕ್ ಅಲಿ ಟಿ 20 ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಹರ್ಯಾಣ ವಿರುದ್ಧ 8 ವಿಕೆಟ್ ಗಳ ಜಯ ಸಾಧಿಸಿ  ಕರ್ನಾಟಕ ಫೈನಲ್ ಪ್ರವೇಶಿಸಿದೆ.

    ಇಂದು ಸೂರತ್‍ನ ಲಾಲ್ಬಾಯ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹರ್ಯಾಣ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿದರೆ ಕರ್ನಾಟಕ 15 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 195 ರನ್ ಗಳಿಸಿ ಜಯಗಳಿಸಿದೆ. ಒಂದೇ ಓವರಿನಲ್ಲಿ ಐದು ವಿಕೆಟ್ ಪಡೆದು ಮಿಂಚಿದ ಕರ್ನಾಟಕದ ವೇಗಿ ಅಭಿಮನ್ಯು ಮಿಥುನ್ ಭಾರತದ ಪರ ಹೊಸ ದಾಖಲೆ ಬರೆದಿದ್ದಾರೆ.

    ಇಂದು ನಡೆದ ಪಂದ್ಯದಲ್ಲಿ ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡ ಕರ್ನಾಟಕ ತಂಡ, ಹರ್ಯಾಣ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನ ನೀಡಿತು. ಹರ್ಯಾಣ ಆರಂಭಿಕ ಚೈತನ್ಯ ಬಿಷ್ಣೋಯಿ 55 ರನ್(35 ಎಸೆತ, 7 ಬೌಂಡರಿ, 1 ಸಿಕ್ಸರ್) ಅವರ ಅರ್ಧಶತಕ ಮತ್ತು ಹಿಮಾಂಶು ರಾಣ 61 ರನ್ (34 ಎಸೆತ, 6 ಬೌಂಡರಿ, 2 ಸಿಕ್ಸರ್) ಅವರ ಸ್ಫೋಟಕ ಬ್ಯಾಟಿಂಗ್ ನಿಂದ ಎಂಟು ವಿಕೆಟ್ ಕಳೆದುಕೊಂಡು 194 ರನ್‍ಗಳ ಬೃಹತ್ ಮೊತ್ತ ಸೇರಿಸಿತು.

    ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಕರ್ನಾಟಕ ತಂಡಕ್ಕೆ ಆರಂಭಿಕಾರದ ಕೆ.ಎಲ್ ರಾಹುಲ್ ಮತ್ತು ದೇವದುತ್ ಪಡಿಕ್ಕಲ್ ಇಬ್ಬರು ಅರ್ಧಶತಕ ಸಿಡಿಸುವ ಮೂಲಕ ಉತ್ತಮ ಆಡಿಪಾಯ ಹಾಕಿಕೊಟ್ಟರು. ಸೆಮಿಫೈನಲ್ ಪಂದ್ಯದಲ್ಲಿ ಸ್ಪೋಟಕ ಆಟ ಪ್ರದರ್ಶಿಸಿದ ಪಡಿಕ್ಕಲ್ ಕೇವಲ 42 ಎಸೆತಗಳಲ್ಲಿ ಭರ್ಜರಿ 11 ಬೌಂಡರಿ ಮತ್ತು 4 ಸಿಕ್ಸರ್ ಸಿಡಿಸಿ 87 ರನ್ ಹೊಡೆದರೆ, ಇವರಿಗೆ ಉತ್ತಮ ಸಾಥ್ ಕೊಟ್ಟ ಕೆ.ಎಲ್ ರಾಹುಲ್ 31 ಎಸೆತಗಳಲ್ಲಿ 4 ಬೌಂಡರಿ ಮತ್ತು ಆರು ಭರ್ಜರಿ ಸಿಕ್ಸರ್ ನೊಂದಿಗೆ 66 ರನ್ ಸಿಡಿಸಿ ಕರ್ನಾಟಕವನ್ನು ಗೆಲುವಿನ ಸಮೀಪ ತಂದರು.

    9.3 ಓವರ್ ಗಳಲ್ಲಿ ಮೊದಲ ವಿಕೆಟಿಗೆ 125 ರನ್ ಜೊತೆಯಾಟವಾಡಿ ರಾಹುಲ್ ಔಟ್ ಆದರು. ಮಯಾಂಕ್ ಅಗರವಾಲ್ ಔಟಾಗದೇ 30 ರನ್(14 ಎಸೆತ, 3 ಸಿಕ್ಸರ್) ನಾಯಕ ಮನಿಷ್ ಪಾಂಡೆ ಔಟಾಗದೇ 3 ರನ್ ಹೊಡೆದು ಜಯವನ್ನು ತಂದಿಟ್ಟರು. ಈ ಪಂದ್ಯದಲ್ಲಿ ಹರ್ಯಾಣ ಪರ 4 ಸಿಕ್ಸ್ ದಾಖಲಾದರೆ ಕರ್ನಾಟಕದ ಪರ 13 ಸಿಕ್ಸ್ ದಾಖಲಾಗಿದೆ.

    ಅಭಿಮನ್ಯು ದಾಖಲೆ:
    ಅಭಿಮನ್ಯು ಮಿಥುನ್ ಒಂದೇ ಓವರಿನಲ್ಲಿ ಐದು ವಿಕೆಟ್ ಪಡೆಯುವ ಮೂಲಕ ಭಾರತದ ಪರ ದಾಖಲೆ ಬರೆದಿದ್ದಾರೆ. ಈ ದಾಖಲೆ ಅಭಿಮನ್ಯು ಎಸೆದ 4ನೇ ಓವರಿನಲ್ಲಿ ಬಂದಿದ್ದು ವಿಶೇಷ. 3 ಓವರ್ ಗಳಲ್ಲಿ ಒಂದೇ ವಿಕೆಟ್ ಪಡೆಯದ ಅಭಿಮನ್ಯು ಕೊನೆಯ ಓವರಿನ 4 ಎಸೆತಗಳಲ್ಲಿ 4 ವಿಕೆಟ್ ಪಡೆದು ಒಂದು ವೈಡ್ ಒಂದು ರನ್ ಬಿಟ್ಟುಕೊಟ್ಟು ಕೊನೆಯ ಎಸೆತದಲ್ಲಿ ಮತ್ತೊಂದು ವಿಕೆಟ್ ಪಡೆದಿದ್ದಾರೆ. ಅಂತಿಮವಾಗಿ 4 ಓವರ್ ಗಳಲ್ಲಿ 39 ರನ್ ನೀಡಿದ್ದಾರೆ. ಈ ಹಿಂದೆ ಪ್ರಥಮ ದರ್ಜೆ ಕ್ರಿಕೆಟಿನಲ್ಲಿ ಶ್ರೀಲಂಕಾದ ವೇಗಿ ಲಸಿತ್ ಮಲಿಂಗ ಒಂದೇ ಓವರಿನಲ್ಲಿ 5 ವಿಕೆಟ್ ಪಡೆದಿದ್ದರು. ವಿಜಯ್ ಹಜಾರೆ ಟ್ರೋಫಿ ಫೈನಲ್ ಪಂದ್ಯದಲ್ಲಿ ಅಭಿಮನ್ಯು ಮಿಥುನ್ ಹ್ಯಾಟ್ರಿಕ್ ಸಾಧನೆ ನಿರ್ಮಿಸಿದ್ದರು.