Tag: ಸೂರ್ಯ ರಶ್ಮಿ

  • 4 ವರ್ಷದ ಬಳಿಕ ಬೇಲೂರು ಶ್ರೀ ಚನ್ನಕೇಶವಸ್ವಾಮಿ ವಿಗ್ರಹ ಸ್ಪರ್ಶಿಸಿದ ಸೂರ್ಯನ ರಶ್ಮಿ

    4 ವರ್ಷದ ಬಳಿಕ ಬೇಲೂರು ಶ್ರೀ ಚನ್ನಕೇಶವಸ್ವಾಮಿ ವಿಗ್ರಹ ಸ್ಪರ್ಶಿಸಿದ ಸೂರ್ಯನ ರಶ್ಮಿ

    ಹಾಸನ: 4 ವರ್ಷಗಳ ನಂತರ ಮತ್ತೇ ಅಪರೂಪದ ಕ್ಷಣ ಸೃಷ್ಟಿಯಾಗಿದ್ದು, ಇಂದು ಬೆಳಗ್ಗೆ ಐತಿಹಾಸಿಕ ಬೇಲೂರು (Beluru) ಶ್ರೀ ಚನ್ನಕೇಶವಸ್ವಾಮಿ (Chennakeshavaswamy) ವಿಗ್ರಹವನ್ನು ಸೂರ್ಯನ ರಶ್ಮಿ ಸ್ಪರ್ಶಿಸಿದೆ.

    ದೇವಾಲಯದಲ್ಲಿ ಕಳೆದ 4 ವರ್ಷಗಳಿಂದ ಸೂರ್ಯನ ರಶ್ಮಿ ಶ್ರೀ ಚನ್ನಕೇಶವಸ್ವಾಮಿ ವಿಗ್ರಹವನ್ನು ಸ್ಪರ್ಶಿಸಿರಲಿಲ್ಲ. ಮಳೆ, ಮೋಡ ಕವಿದ ವಾತಾವರಣದಿಂದ ವಿಗ್ರಹದ ಮೇಲೆ ಸೂರ್ಯನ ರಶ್ಮಿ ಬೀಳಲು ಅಡ್ಡಿಯುಂಟಾಗಿತ್ತು. ಈ ವರ್ಷ ಅಡೆತಡೆ ನಿವಾರಣೆಯಾಗಿದ್ದು, ಭಕ್ತರಲ್ಲಿ ಸಾರ್ಥಕದ ಕ್ಷಣ ಮನೆ ಮಾಡಿತ್ತು. ಇದನ್ನೂ ಓದಿ: ನಗದಿನ ಮೂಲಕ ಸಂಭಾವನೆ – ಮಹೇಶ್‌ ಬಾಬುಗೆ ಇಡಿ ನೋಟಿಸ್‌

    ಪ್ರತಿ ವರ್ಷ ಏ.21 ಅಥವಾ ಏ.22ರಂದು ದೇವರ ವಿಗ್ರಹಕ್ಕೆ ಸ್ಪರ್ಶಿಸುತ್ತಿದ್ದ ಸೂರ್ಯ ಇಂದು ಬೆಳಿಗ್ಗೆ 6:10ಕ್ಕೆ ಗೋಪುರವನ್ನು ಸ್ಪರ್ಶಿಸಿ, ಬಳಿಕ 6:15ಕ್ಕೆ ದೇವರ ವಿಗ್ರಹಕ್ಕೆ ಸ್ಪರ್ಶಿಸಿದ. ದೇವರ ವಿಗ್ರಹದ ಮೇಲೆ ಸೂರ್ಯನ ರಶ್ಮಿ ಬೀಳುವುದನ್ನು ನೂರಾರು ಭಕ್ತರು ಕಣ್ತುಂಬಿಕೊಂಡರು. ಇದನ್ನೂ ಓದಿ: ಕುತ್ತಿಗೆ ಹಿಡಿದು ಕೊಲೆಗೆ ಯತ್ನಿಸಿದ್ದ – ವಿಂಗ್‌ ಕಮಾಂಡರ್‌ ವಿರುದ್ಧ ಕೊನೆಗೂ ಎಫ್‌ಐಆರ್‌ ದಾಖಲು

    ಸೂರ್ಯನ ರಶ್ಮಿ ಶ್ರೀ ಚನ್ನಕೇಶವಸ್ವಾಮಿ ವಿಗ್ರಹ ಸ್ಪರ್ಶಿಸುತ್ತಿದ್ದಂತೆ ಗರ್ಭಗುಡಿ ಬಂದ್ ಮಾಡಲಾಯಿತು. ಬಳಿಕ 9 ಗಂಟೆ ನಂತರ ಅರ್ಚಕರು ಹಾಲಿನಿಂದ ದೇವರ ಪಾದ ತೊಳೆದು ಪೂಜೆ ಸಲ್ಲಿಸಲಿದರು. ಕಳೆದ 4 ವರ್ಷಗಳಿಂದ ಕಾದು ಕಾದು ಬೇಸರದಿಂದ ಹಿಂದಿರುಗುತ್ತಿದ್ದ ಭಕ್ತರು, ಈ ಬಾರಿ ಅಪರೂಪದ ದೃಶ್ಯ ಕಣ್ತುಂಬಿಕೊಂಡು ಸಂತಸ ವ್ಯಕ್ತಪಡಿಸಿದರು.

  • ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶ- ಐತಿಹಾಸಿಕ ದೇವಾಲಯದಲ್ಲಿ ಕೌತುಕ

    ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶ- ಐತಿಹಾಸಿಕ ದೇವಾಲಯದಲ್ಲಿ ಕೌತುಕ

    ಬಳ್ಳಾರಿ: ಯುಗಾದಿ ಹಬ್ಬ (Ugadi Festival) ಭಾರತೀಯರ ಹೊಸ ವರ್ಷದ ಮೊದಲ ಹಬ್ಬ. ಈ ವಿಶೇಷ ದಿನದಂದು ವಿಜಯನಗರ ಜಿಲ್ಲೆಯ ಹಳ್ಳಿಯಲ್ಲಿ ಸೂರ್ಯನ ಕೌತುಕವೊಂದು ನಡೆಯುತ್ತೆ. ಸಾವಿರ ವರ್ಷ ಇತಿಹಾಸ ಇರುವ ಲಿಂಗಕ್ಕೆ ಸೂರ್ಯ ರಶ್ಮಿ ನೇರವಾಗಿ ಬೀಳುತ್ತದೆ. ಹೀಗಾಗಿ ಇಲ್ಲಿನ ಭಕ್ತರು ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ.

    ಯುಗಾದಿ ಹಬ್ಬವನ್ನು ಹಿಂದು ಸಂಸ್ಕೃತಿ ಪ್ರಕಾರ, ಹೊಸ ವರ್ಷವಾಗಿ ಆಚರಣೆ ಮಾಡಲಾಗುತ್ತೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಗ್ರಾಮದ ಕಟ್ಟಿ ಬಸವೇಶ್ವರ ದೇವಸ್ಥಾನದಲ್ಲಿ ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ. ಈ ದೇವಸ್ಥಾನದಲ್ಲಿ ಯುಗಾದಿ ವೇಳೆ ಎರಡ್ಮೂರು ದಿನಗಳ ಕಾಲ ಸೂರ್ಯ ರಶ್ಮಿ ಲಿಂಗದ ಮೇಲೆ ಬೀಳುತ್ತದೆ. ಆದರೆ ಹಬ್ಬದ ದಿನ ಮಾತ್ರ ಸೂರ್ಯೋದಯವಾಗುತ್ತಿದ್ದಂತೆ ನೇರವಾಗಿ ಹೊಂಗಿರಣಗಳು ಲಿಂಗದ ಮೇಲೆ ಬೀಳುತ್ತದೆ.

    ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಈ ದೇವಸ್ಥಾನವನ್ನು ನಿರ್ಮಾಣ ಮಾಡಲಾಗಿದೆ. ಸೂರ್ಯನ ಚಲನೆ ಆಧಾರದ ಮೇಲೆ ನಿರ್ಮಿಸಲಾಗಿರುವ ವಿಶಿಷ್ಟ ವಾಸ್ತುಶಿಲ್ಪ ಹೊಂದಿರುವ ಈ ದೇವಾಲಯ ಪ್ರತಿವರ್ಷ ಯುಗಾದಿಯ ದಿನ ಈ ಅಚ್ಚರಿಗೆ ಕಾರಣವಾಗುತ್ತಿದೆ. ದೇವಸ್ಥಾನದಲ್ಲಿ ಯುಗಾದಿ ಹಬ್ಬದ ದಿನದಂದು, ವಿಶೇಷ ಪೂಜೆ ಮಾಡಲಾಗುತ್ತದೆ. ನೂರಾರು ಭಕ್ತರು ಸೂರ್ಯನ ಮೊದಲ ಕಿರಣ ಶಿವಲಿಂಗದ ಮೇಲೆ ಬೀಳುವ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಾರೆ.

    ವರ್ಷಕ್ಕೆ ಒಂದು ಬಾರಿ ನಡೆಯುವ ಈ ದೇವಸ್ಥಾನದ ಕುತೂಹಲವನ್ನು ಜನರು ಕಾತುರದಿಂದ ಎದರು ನೋಡುತ್ತಾರೆ. ಶತಮಾನದ ಇತಿಹಾಸ ಇರುವ ಈ ದೇವಾಲಯ ಖಗೋಳ ಕೌತುಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಸಮುದಾಯ ನಂಬದೇ ಅಭಿವೃದ್ಧಿ ಕೆಲಸದಿಂದ ಜಯ: ಇದು ಕಲಬುರಗಿ ವಿಶೇಷತೆ

  • ಈ ಬಾರಿ ಗವಿಗಂಗಾಧರನಿಗಿಲ್ಲ ಸೂರ್ಯ ರಶ್ಮಿಯ ಅಭಿಷೇಕ

    ಈ ಬಾರಿ ಗವಿಗಂಗಾಧರನಿಗಿಲ್ಲ ಸೂರ್ಯ ರಶ್ಮಿಯ ಅಭಿಷೇಕ

    ಬೆಂಗಳೂರು: ಸೂರ್ಯ ರಶ್ಮಿ ಸ್ಪರ್ಶಕ್ಕೆ ಮೋಡ ಅಡ್ಡವಾದ ಪರಿಣಾಮ ಈ ಬಾರಿ ಗವಿಗಂಗಾಧರನಿಗೆ ಸೂರ್ಯ ರಶ್ಮಿಯ ಅಭಿಷೇಕ ಇಲ್ಲ.

    ಸಂಕ್ರಾಂತಿ ಸಡಗರದ ನಡುವೆ ಸೂರ್ಯ ತನ್ನ ಪಥ ಬದಲಾವಣೆಗಾಗಿ ಪ್ರತಿ ವರ್ಷ ಭಾಸ್ಕರನ ಅನುಮತಿಯನ್ನ ಇಂದು ಪಡೆಯುತ್ತಾನೆ ಎಂಬ ನಂಬಿಕೆ ಇದೆ. ನಗರದ ಐತಿಹಾಸಿಕ ದೇವಾಲಯ ಗವಿಗಂಗಾಧರೇಶ್ವರನ ದೇವಾಲಯದಲ್ಲಿ ವಿಶೇಷ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಆದರೆ ಮೋಡ ಅಡ್ಡವಾದ ಪರಿಣಾಮ ಸೂರ್ಯ ತನ್ನ ಪಥ ಬದಲಿಸಿದ್ದಾನೆ.

    ಇಂದು 5.25 ರಿಂದ 5.27 ಕ್ಕೆ ಸೂರ್ಯ ರಶ್ಮಿ ಸ್ಪರ್ಶವಾಗಬೇಕಿತ್ತು. ಗವಿಗಂಗಾಧರನನ್ನು ಸ್ಪರ್ಶಿಸದೆ ಭಾಸ್ಕರ ತನ್ನ ಪಥ ಬದಲಿಸಿದ್ದಾನೆ. ಮೋಡ ಅಡ್ಡ ಬಂದ ಪರಿಣಾಮ ಸೂರ್ಯ ರಶ್ಮಿಯ ಸ್ಪರ್ಶ ಅಗೋಚರವಾಗಿದೆ. ಈ ಹಿನ್ನೆಲೆಯಲ್ಲಿ ಅಗೋಚರವಾಗಿಯೇ ಗವಿ ಗಂಗಾಧರನನ್ನು ಸ್ಪರ್ಶಿಸಿ ಸೂರ್ಯ ಮುಂದೆ ಹೋಗಿದ್ದಾನೆ.

    ಗವಿಗಂಗಾಧರ ಸನ್ನಿಧಿಯಲ್ಲಿ ಬೆಳಗ್ಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಇಂದು ಮುಂಜಾನೆಯಿಂದಲೇ ದೇವಾಲಯದಲ್ಲಿ ಶಿವನಿಗೆ ರುದ್ರಾಭಿಷೇಕ ಸೇರಿ ವಿಶೇಷ ಪೂಜಾ ಕೈಂಕರ್ಯ ಜರುಗಿತ್ತು. ಸಂಜೆಯ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಭಕ್ತಾದಿಗಳಿಗೆ ದೇವಸ್ಥಾನದ ಆವರಣದಲ್ಲಿ ಪೆಂಡಲ್ ಹಾಕಿ ಎಲ್‍ಇಡಿ ಟಿವಿ ಅಳವಡಿಸಲಾಗಿತ್ತು.

    ಒಂದು ವೇಳೆ ಭಕ್ತಾದಿಗಳು ಸಹಕರಿಸದಿದ್ದರೆ ದೇವಸ್ಥಾನ ಕ್ಲೋಸ್ ಮಾಡ್ತೇವೆ. ಭಕ್ತಾದಿಗಳಿಗೆ ಒಳಗಡೆ ಬಿಡಬೇಡಿ ಅಂತ ಸರ್ಕಾರ ಈಗಾಗಲೇ ಹೇಳಿದೆ. ನೂಕು ನುಗ್ಗಲು ಆಗುತ್ತೆ. ಕೊರೊನಾ ಪರಿಸ್ಥಿತಿಗೆ ಅನುಗುಣವಾಗಿ ಈ ಆದೇಶ ಕೊಟ್ಟಿದ್ದಾರೆ. ಆದ್ದರಿಂದ ಭಕ್ತಾದಿಗಳು ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಂಡು ಬಂದರೆ ಮೂಲಮೂರ್ತಿಯ ದರ್ಶನಕ್ಕೆ ಅವಕಾಶ ಮಾಡಿಕೊಡ್ತೇವೆ ಅಂತ ದೇವಾಲಯದ ಪ್ರಧಾನ ಅರ್ಚಕರಾದ ಸೋಮಸುಂದರ್ ಹೇಳಿದ್ದರು.