Tag: ಸೃಜನ್ ಲೋಕೇಶ್

  • ನಟಿ ಹರಿಪ್ರಿಯಾ ಜೊತೆ ಸೃಜನ್ ಲಿಪ್‍ಲಾಕ್

    ನಟಿ ಹರಿಪ್ರಿಯಾ ಜೊತೆ ಸೃಜನ್ ಲಿಪ್‍ಲಾಕ್

    ಬೆಂಗಳೂರು: ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರು ನಟಿ ಹರಿಪ್ರಿಯಾ ಅವರ ಜೊತೆ ಕಿಸ್ಸಿಂಗ್ ದೃಶ್ಯದಲ್ಲಿ ನಟಿಸಿದ್ದಾರೆ.

    ಸೃಜನ್ ಲೋಕೇಶ್ ಹಾಗೂ ಹರಿಪ್ರಿಯಾ ಅವರು ‘ಎಲ್ಲಿದೆ ಇಲ್ಲಿ ತನಕ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದ್ದು, ಈ ಹಾಡಿನಲ್ಲಿ ಸೃಜನ್ ಹಾಗೂ ಹರಿಪ್ರಿಯಾ ಕಿಸ್ಸಿಂಗ್ ಸೀನ್ ಮಾಡಿದ್ದಾರೆ.

    ಎಲ್ಲಿದೆ ಇಲ್ಲಿ ತನಕ ಚಿತ್ರದ ಟೈಟಲ್ ಹಾಡು ಭಾನುವಾರ ಬಿಡುಗಡೆ ಆಗಿದೆ. ಇದು ರೊಮ್ಯಾಂಟಿಕ್ ಸಾಂಗ್ ಆಗಿದ್ದು, ಸೃಜನ್ ಹಾಗೂ ಹರಿಪ್ರಿಯಾ ಕಿಸ್ಸಿಂಗ್ ಸೀನ್ ಮಾಡಿರುವುದು ಕಂಡು ಬಂದಿದೆ. ಈ ಹಾಡಿನಲ್ಲಿ ಇಬ್ಬರು ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ.

    ಈ ಚಿತ್ರ ತೇಜಸ್ವಿ ಅವರ ಚೊಚ್ಚಲ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, ಚಿತ್ರಕ್ಕೆ ವೇಣು ಛಾಯಾಗ್ರಹಣ ಹಾಗೂ ಅರ್ಜುನ್ಯ ಜನ್ಯ ಅವರು ಸಂಗೀತ ನೀಡಿದ್ದಾರೆ. ಸಿನಿಮಾದಲ್ಲಿ ಗಿರಿಜಾ ಲೋಕೇಶ್, ಅವಿನಾಶ್, ತಬಲಾನಾಣಿ, ರಾಧಿಕಾ ರಾವ್, ಯಶಸ್ ಸೂರ್ಯ ಸೇರಿದಂತೆ ಬಹುದೊಡ್ಡ ತಾರಾಗಣವೇ ಇದ್ದು, ಮುಖ್ಯವಾಗಿ ಸೃಜನ್ ಲೋಕೇಶ್ ಪುತ್ರ ಕೂಡ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

  • ಎಲ್ಲಿದ್ದೆ ಇಲ್ಲಿ ತನಕ: ಸೃಜಾ ಸ್ಪೆಷಲ್ ಲಿರಿಕಲ್ ವೀಡಿಯೋ ಸಾಂಗ್!

    ಎಲ್ಲಿದ್ದೆ ಇಲ್ಲಿ ತನಕ: ಸೃಜಾ ಸ್ಪೆಷಲ್ ಲಿರಿಕಲ್ ವೀಡಿಯೋ ಸಾಂಗ್!

    ಬೆಂಗಳೂರು: ಮಜಾ ಟಾಕೀಸ್ ಮೂಲಕ ಮನೋರಂಜನೆ ನೀಡುತ್ತಲೇ ಟಾಕಿಂಗ್ ಸ್ಟಾರ್ ಎಂಬ ಬಿರುದನ್ನೂ ತಮ್ಮದಾಗಿಸಿಕೊಂಡಿರುವವರು ಸೃಜನ್ ಲೋಕೇಶ್. ಈ ಕಿರುತೆರೆ ಶೋ ಮೂಲಕವೇ ಪ್ರಸಿದ್ಧಿ ಪಡೆದುಕೊಂಡಿರೋ ಅವರೀಗ ಒಂದಷ್ಟು ಕಾಲದ ನಂತರ ‘ಎಲ್ಲಿದ್ದೆ ಇಲ್ಲಿತನಕ’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಲೋಕೇಶ್ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ಮೂಡಿ ಬಂದಿರೋ ಈ ಚಿತ್ರದ ಟೀಸರ್ ಮತ್ತು ಟೈಟಲ್ ಟ್ರ್ಯಾಕ್‍ಗಳು ಈಗಾಗಲೇ ಹೊರಬಂದು ಹಿಟ್ ಆಗಿವೆ. ಇದೀಗ ಸೃಜಾ ಸ್ಪೆಷಲ್ ಅನ್ನಬಹುದಾದ ಸ್ಪೆಷಲ್ ಲಿರಿಕಲ್ ವೀಡಿಯೋವೊಂದು ಬಿಡುಗಡೆಯಾಗಿದೆ.

    ನೀ ನಗೆ ಹಂಚಿ ಮಿಂಚುವಾ ನಮ್ಮ ಕನ್ನಡದವ ಎಂಬ ಈ ಹಾಡು ನಾಯಕ ಸೃಜನ್ ಲೋಕೇಶ್ ಅವರ ಬಗ್ಗೆ ರಚಿಸಿರೋ ಸಾಹಿತ್ಯದ ಸಾಲುಗಳನ್ನೊಳಗೊಂಡಿದೆ. ಭರ್ಜರಿ ಚೇತನ್ ಕುಮಾರ್ ಬರೆದಿರೋ ಈ ಹಾಡಿಗೆ ಅರ್ಜುನ್ ಜನ್ಯಾ ಸಂಗೀತ ನೀಡಿದ್ದಾರೆ. ಸಂತೋಷ್ ವೆಂಕಿ ಹಾಡಿದ್ದಾರೆ. ಈ ಮೂಲಕವೇ ಎಲ್ಲಿದ್ದೆ ಇಲ್ಲಿತನಕ ಚಿತ್ರದಲ್ಲಿ ಸೃಜನ್ ಗೆಟಪ್ಪುಗಳ ಝಲಕ್‍ಗಳೂ ಕೂಡಾ ಅನಾವರಣಗೊಂಡಿವೆ. ಇದು ಮಜಾ ಟಾಕೀಸ್‍ಗಿಂತಲೂ ಮುಂಚೆಯೇ ನಿರ್ದೇಶನ ವಿಭಾಗದಲ್ಲಿ ಸೃಜನ್ ತಂಡದಲ್ಲಿ ಗುರುತಿಸಿಕೊಂಡಿದ್ದ ತೇಜಸ್ವಿ ನಿರ್ದೇಶನದ ಚಿತ್ರ. ಇದುವರೆಗೂ ನೂರಾರು ಎಪಿಸೋಡುಗಳ ಧಾರಾವಾಹಿ, ಕಿರುತೆರೆ ರಿಯಾಲಿಟಿ ಶೋಗಳನ್ನು ನಿರ್ದೇಶನ ಮಾಡಿರೋ ತೇಜಸ್ವಿ ಸೃಜನ್ ಅವರಿಗೆ ಪಕ್ಕಾ ಹೊಂದಿಕೆಯಾಗೋ ಕಥೆಯೊಂದಿಗೆ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

    ಎಲ್ಲಿದ್ದೆ ಇಲ್ಲಿ ತನಕ ಹಲವಾರು ವರ್ಷಗಳ ತಯಾರಿಯೊಂದಿಗೆ ರೂಪುಗೊಂಡಿರೋ ಚಿತ್ರ. ಈ ಮೂಲಕ ಹರಿಪ್ರಿಯಾ ಸೃಜನ್‍ಗೆ ಜೋಡಿಯಾಗಿ ನಟಿಸಿದ್ದಾರೆ. ಹರಿಪ್ರಿಯಾ ಕೂಡ ಇಲ್ಲಿ ವಿಶೇಷವಾದ ಗೆಟಪ್ಪಿನಲ್ಲಿ, ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಕಾಣಿಸಿಕೊಳ್ಳಲಿದ್ದಾರಂತೆ.  ಆಕ್ಷನ್, ಕಾಮಿಡಿ, ಫ್ಯಾಮಿಲಿ ಸಬ್ಜೆಕ್ಟ್ ಸೇರಿದಂತೆ ಎಲ್ಲ ಅಂಶಗಳನ್ನೂ ಹದವಾಗಿ ಬರೆಸಿದ ಮಜವಾದ ಕಥೆ ಈ ಚಿತ್ರದಲ್ಲಿದೆಯಂತೆ. ಟಾಕಿಂಗ್ ಸ್ಟಾರ್ ಈ ಸಿನಿಮಾ ಮೂಲಕ ನಾಯಕ ನಟನಾಗಿಯೂ ಭರ್ಜರಿ ಗೆಲುವು ದಕ್ಕಿಸಿಕೊಳ್ಳುವ ಉತ್ಸಾಹದಿಂದಿದ್ದಾರೆ.

     

  • 2ನೇ ಮಗುವಿನ ತಂದೆಯಾದ ಖುಷಿಯಲ್ಲಿ ಸೃಜನ್

    2ನೇ ಮಗುವಿನ ತಂದೆಯಾದ ಖುಷಿಯಲ್ಲಿ ಸೃಜನ್

    ಬೆಂಗಳೂರು: ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರ ಪತ್ನಿ ಎರಡನೇ ಮಗುವಿಗೆ ಇಂದು ಜನ್ಮ ನೀಡಿದ್ದಾರೆ. ಈ ಮೂಲಕ ಸೃಜನ್ ಅವರು ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿದ್ದಾರೆ.

    ನಟ ಸೃಜನ್ ಲೋಕೇಶ್ ಪತ್ನಿ ಗ್ರೀಷ್ಮಾ ಅವರು ಇಂದು ಖಾಸಗಿ ಆಸ್ಪತ್ರೆಯೊಂದರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ಇತ್ತೀಚೆಗಷ್ಟೆ ಗ್ರೀಷ್ಮಾ ಅವರ ಸೀಮಂತ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿತ್ತು. ಗ್ರೀಷ್ಮಾ ಅವರ ಸೀಮಂತ ಕಾರ್ಯಕ್ರಮದ ಫೋಟೋಗಳನ್ನು ನಟಿ ಶ್ವೇತಾ ಚಂಗಪ್ಪ ಅವರು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು.

    ಸೃಜನ್ ಮತ್ತು ಗ್ರೀಷ್ಮಾ ಅವರು 2010ರಲ್ಲಿ ದಾಪಂತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗಾಗಲೇ ಈ ಜೋಡಿಗೆ ಒಬ್ಬ ಮಗನಿದ್ದಾನೆ.

  • ಸೀಮಂತ ಸಂಭ್ರಮದಲ್ಲಿ ಸೃಜನ್ ಪತ್ನಿ ಗ್ರೀಷ್ಮಾ

    ಸೀಮಂತ ಸಂಭ್ರಮದಲ್ಲಿ ಸೃಜನ್ ಪತ್ನಿ ಗ್ರೀಷ್ಮಾ

    ಬೆಂಗಳೂರು: ನಟ, ನಿರೂಪಕ ಸೃಜನ್ ಲೋಕೇಶ್ ಅವರ ಪತ್ನಿ ಗ್ರೀಷ್ಮಾ ಅವರ ಸೀಮಂತ ಕಾರ್ಯಕ್ರಮ ಇತ್ತೀಚೆಗೆ ಅದ್ಧೂರಿಯಾಗಿ ನೆರವೇರಿದೆ.

    ಗ್ರೀಷ್ಮಾ ಅವರು ಸೀಮಂತ ಕಾರ್ಯಕ್ರಮದ ಸಂತಸದ ಕ್ಷಣಗಳ ಫೋಟೋಗಳನ್ನು ನಟಿ ಶ್ವೇತಾ ಚಂಗಪ್ಪ ಅವರು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ನೀಲಿ ಬಣ್ಣದ ಸೀರೆಯನ್ನು ಸೃಜನ್ ಲೋಕೇಶ ಪತ್ನಿ ಗ್ರೀಷ್ಮಾ ಧರಿಸಿದ್ದು, ಮುದ್ದಾಗಿ ನಗುತ್ತಿರುವುದನ್ನು ಕಾಣಹುದಾಗಿದೆ.

    ನಟಿ ಶ್ವೇತಾ ಚಂಗಪ್ಪ ಅವರು, “ನಾವೆಲ್ಲರೂ ಸ್ನೇಹಿತರು, ಒಂದೇ ಕುಟಂಬದವರು ಕೂಡ ಆಗಿದ್ದೇವೆ. ಶ್ರೀಘದಲ್ಲೇ ಈ ಕುಟುಂಬಕ್ಕೆ ಪುಟ್ಟ ಕಂದಮ್ಮ ಬರುತ್ತದೆ. ಅದಕ್ಕಾಗಿ ನಾನು ಕಾಯುತ್ತಿದ್ದೇವೆ. ಐ ಲವ್ ಯೂ ಗ್ರೀಷ್ಮಾ” ಎಂದು ಟ್ವೀಟ್ ಮಾಡಿ ಸೀಮಂತ ಕಾರ್ಯಕ್ರಮದಲ್ಲಿ ತೆಗೆದುಕೊಂಡಿದ್ದ ಫೋಟೋಗಳನ್ನು ಅಪ್ಲೋಡ್ ಮಾಡಿದ್ದಾರೆ.

    ಸೃಜನ್ ಲೋಕೇಶ್ ಅವರು 2010ರಲ್ಲಿ ಕಿರುತೆರೆ ನಟಿ ಗ್ರೀಷ್ಮಾರವನ್ನು ಮದುವೆಯಾಗಿದ್ದರು. ಈಗಾಗಲೇ ಈ ಜೊಡಿಗೆ ಒಂದು ಮುದ್ದಾದ ಮಗು ಇದೆ.

    https://www.instagram.com/p/Bu1RsJngn2c/

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸತಿ-ಪತಿಗಳಾದ್ರು ಹರಿಪ್ರಿಯಾ-ಸೃಜನ್ ಲೋಕೇಶ್!

    ಸತಿ-ಪತಿಗಳಾದ್ರು ಹರಿಪ್ರಿಯಾ-ಸೃಜನ್ ಲೋಕೇಶ್!

    ಬೆಂಗಳೂರು: ನಟ ಸೃಜನ್ ಲೋಕೇಶ್ ಸ್ವಲ್ಪ ದಿನದಿಂದ ಸಿನಿಮಾರಂಗದಿಂದ ದೂರವಿದ್ದು, ಈಗ ಮತ್ತೆ ‘ಎಲ್ಲಿದ್ದೆ ಇಲ್ಲಿ ತನಕ’ ಎಂಬ ಸಿನಿಮಾದ ಮೂಲಕ ನಟರಾಗಿ ವಾಪಸ್ ಬಂದಿದ್ದಾರೆ. ಈ ಸಿನಿಮಾದಲ್ಲಿ ಸೃಜನ್ ಅವರಿಗೆ ನಟಿ ಹರಿಪ್ರಿಯಾ ಅವರು ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

    ನಟ ಸೃಜನ್ ಮತ್ತು ನಟಿ ಹರಿಪ್ರಿಯಾ ಅವರು ‘ಎಲ್ಲಿದ್ದೆ ಇಲ್ಲಿ ತನಕ’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಈ ಸಿನಿಮಾದಲ್ಲಿ ಇವರಿಬ್ಬರು ಪತಿ-ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಮವಾರಷ್ಟೇ ಈ ಸಿನಿಮಾದ ಮುಹೂರ್ತ ನೆರವೇರಿದ್ದು, ಈ ಕಾರ್ಯಕ್ರಮದಲ್ಲಿ ನಟ ರವಿಚಂದ್ರನ್, ದರ್ಶನ್, ನಟಿ ತಾರಾ ಹಾಗೂ ಪ್ರಿಯಾಂಕ ಉಪೇಂದ್ರ ಅವರು ಭಾಗಿಯಾಗಿದ್ದರು.

    ಈ ಸಿನಿಮಾವನ್ನು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಮಜಾ ಟಾಕೀಸ್ ಶೋ ನಿರ್ದೇಶಕ ತೇಜಸ್ವಿ ಅವರೇ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ಸಿನಿಮಾಕ್ಕಾಗಿ ಸೃಜನ್ ಮತ್ತು ಹರಿಪ್ರಿಯಾ ಫೋಟೋ ಶೂಟ್ ಮಾಡಿಸಿದ್ದು, ಇವರಿಬ್ಬರು ಸತಿ-ಪತಿಗಳಂತೆ ಪೋಸ್ ಕೊಟ್ಟಿದ್ದಾರೆ.

    ತಮ್ಮ ಸಿನಿಮಾದ ಬಗ್ಗೆ ನಟಿ ಹರಿಪ್ರಿಯಾ ಅವರು ಕೂಡ ಟ್ವೀಟ್ ಮಾಡಿದ್ದು, ಇಂದು ನಾನು ಅಭಿನಯಿಸುತ್ತಿರುವ ‘ಬಿಚ್ಚುಗಾತ್ತಿ’ ಸಿನಿಮಾ ಮುಹೂರ್ತ ನಡೆಯಲಿದ್ದು, ಕಳೆದ ದಿನವಷ್ಟೆ ‘ಎಲ್ಲಿದ್ದ ಇಲ್ಲಿ ತನಕ’ ಸಿನಿಮಾ ಲಾಂಚ್ ಆಗಿದೆ. ಈ ಎರಡು ಸಿನಿಮಾದಲ್ಲಿ ನಾನು ತುಂಬಾ ಪ್ರಮುಖವಾದ ಪಾತ್ರವನ್ನು ಮಾಡುತ್ತಿದ್ದೇನೆ. ಆದ್ದರಿಂದ ನನಗೆ ತುಂಬಾ ಖುಷಿಯಾಗುತ್ತಿದೆ. ಇದೆಲ್ಲಾ ನಿಮ್ಮ ಪ್ರೀತಿ ಮತ್ತು ಶುಭಾಶಯಗಳು” ಎಂದು ಧನ್ಯವಾದಗಳನ್ನು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸೃಜಾಗೆ ಹರಿಪ್ರಿಯಾ ನಾಯಕಿ!

    ಸೃಜಾಗೆ ಹರಿಪ್ರಿಯಾ ನಾಯಕಿ!

    ಬೆಂಗಳೂರು: ಖಾಸಗಿ ವಾಹಿನಿಯ ರಿಯಾಲಿಟಿ ಶೋ ಮೂಲಕವೇ ಖ್ಯಾತಿ ಗಳಿಸಿಕೊಂಡಿರುವ ಸೃಜನ್ ಲೋಕೇಶ್ ಒಂದಷ್ಟು ಕಾಲದಿಂದ ಚಿತ್ರರಂಗದಿಂದ, ನಟನೆಯಿಂದ ದೂರವಿದ್ದಂತಿದ್ದರು. ಆದರೀಗ ಅವರು ಮತ್ತೆ ನಾಯಕನಾಗಿ ಮರಳಿದ್ದಾರೆ.

    ‘ಎಲ್ಲಿದ್ದೆ ಇಲ್ಲಿ ತನಕ’ ಎಂಬುದು ಅವರು ನಟಿಸಲಿರೋ ಹೊಸ ಚಿತ್ರದ ಶೀರ್ಷಿಕೆ. ಈ ಚಿತ್ರವನ್ನು ಮಜಾ ಟಾಕೀಸ್ ಶೋ ನಿರ್ದೇಶಕ ತೇಜಸ್ವಿ ಅವರೇ ಮಾಡಲಿದ್ದಾರಂತೆ. ಈ ಚಿತ್ರಕ್ಕೀಗ ಹರಿಪ್ರಿಯಾ ನಾಯಕಿಯಾಗಿ ನಿಕ್ಕಿಯಾಗಿದ್ದಾರೆ.

    ಸೃಜನ್ ತಂದೆ ಲೋಕೇಶ್ ಅವರು ನಟಿಸಿದ್ದ ಪ್ರಸಿದ್ಧ ಚಿತ್ರ ಪರಸಂಗದ ಗೆಂಡೆತಿಮ್ಮ. ಎಲ್ಲಿದ್ದೆ ಇಲ್ಲೀ ತನಕ ಎಂಬುದು ಅದರ ಜನಪ್ರಿಯ ಹಾಡಿನ ಸಾಲು. ತಮ್ಮ ತಂದೆಯ ಹಾಡಿನ ಸಾಲುಗಳನ್ನೇ ಸೃಜನ್ ತಮ್ಮ ಚಿತ್ರದ ಶೀರ್ಷಿಕೆಯಾಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಮಜಾ ಟಾಕೀಸ್ ಕಂತುಗಳಿಗೆ ಸಂಭಾಷಣೆ ಬರೆಯುತ್ತಾ ಬಂದಿರೋ ರಾಕೇಶ್ ಸಂಭಾಷಣೆ ಬರೆಯಲಿದ್ದಾರೆ.

    ಸೃಜನ್ ಲೋಕೇಶ್ ಸ್ವತಃ ನಿರ್ಮಾಣ ಮಾಡಲಿರೋ ಇದು ಪಕ್ಕಾ ಕಮರ್ಶಿಯಲ್ ಕಥನ ಹೊಂದಿರೋ ಚಿತ್ರವಂತೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನನ್ನ ಹೋಗೋ ಬಾರೋ ಅಂತಿದ್ರು ಅಂಬಿ: ಬಿಕ್ಕಿ ಬಿಕ್ಕಿ ಅತ್ತ ಜಯಂತಿ

    ನನ್ನ ಹೋಗೋ ಬಾರೋ ಅಂತಿದ್ರು ಅಂಬಿ: ಬಿಕ್ಕಿ ಬಿಕ್ಕಿ ಅತ್ತ ಜಯಂತಿ

    ಬೆಂಗಳೂರು: ಅಂಬರೀಶ್ ನನ್ನನ್ನು ಬಾರೋ ಹೋಗೋ ಅಂತಾ ಕರೆಯುತ್ತಿದ್ದರು ಎಂದು ಹಿರಿಯ ನಟಿ ಜಯಂತಿ ಕಣ್ಣೀರಿಟ್ಟಿದ್ದಾರೆ.

    ಅಂಬರೀಶ್ ಅವರನ್ನು ನಾನು ಎಂದು ಅವರು, ಇವರು ಅಂತಾ ಕರೆಯಲಿಲ್ಲ. ನಮ್ಮದು 40 ವರ್ಷಗಳ ಸ್ನೇಹ. ಅವಸರ ಮಾಡಿ ನಮ್ಮನ್ನೆಲ್ಲ ಬಿಟ್ಟು ಹೋಗಿದ್ದಾನೆ. ಇಷ್ಟು ಬೇಗ ಹೋಗಿದ್ದಕ್ಕೆ ನನಗೆ ನೋವಾಗಿದೆ. ಇಡೀ ಕರುನಾಡಿನ ಜನತೆ ಅಂಬರೀಶ್ ನಿಧನಕ್ಕೆ ಕಣ್ಣೀರು ಹಾಕುತ್ತಿದೆ. ಆರೋಗ್ಯದ ಗಮನ ಕೊಡಬೇಕು ಅಂತಾ ಕುಟುಂಬಸ್ಥರು ಹೇಳುತ್ತಿದ್ದರು. ಆದ್ರೂ ಅಂಬರೀಶ್ ಆರೋಗ್ಯದ ಬಗ್ಗೆ ಕಾಳಜಿ ನೀಡಲಿಲ್ಲ. ಕುಟುಂಬಸ್ಥರಿಗೆ ಚಾಮುಂಡೇಶ್ವರಿ ತಾಯಿ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಜಯಂತಿ ಅವರು ಪ್ರಾರ್ಥಿಸಿದರು.

    ಇದೇ ವೇಳೆ ಮಾತನಾಡಿದ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್, ಏನೇ ಸಮಸ್ಯೆ ಬಂದರೂ ಅಂಬಿ ಅಣ್ಣ ನಮ್ಮ ಹಿಂದೆ ಇದ್ದಾರೆ ಎಂಬ ಧೈರ್ಯವಿತ್ತು. ಚಿತ್ರರಂಗಕ್ಕೆ ದೊಡ್ಡ ಆಧಾರಸ್ಥಂಭ ಆಗಿದ್ದರು. ಪ್ರೀತಿಯಿಂದು ಬೈದು ಬುದ್ಧಿ ಹೇಳುತ್ತಿದ್ದರು. ಅವರಲ್ಲಿರುವ ಗುಣಗಳನ್ನು ನಾವು ಅಳವಡಿಸಿಕೊಳ್ಳಬೇಕಿದೆ. ಅಣ್ಣನನ್ನು ನಾವು ಇಂದು ಮಿಸ್ ಮಾಡಿಕೊಳ್ಳುತ್ತಿದೆ ಎಂದು ಹೇಳಿ ಭಾವುಕರಾದರು.

    https://youtu.be/Bkld1mGV-uQ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಸೃಜನ್‍ಗೆ ಸಿಕ್ತು ಬಿರುದು

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಸೃಜನ್‍ಗೆ ಸಿಕ್ತು ಬಿರುದು

    ಬೆಂಗಳೂರು: ಇತ್ತೀಚೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರನ್ನು ವಿದೇಶದಲ್ಲಿ ಗೌರವಿಸಲಾಗಿತ್ತು. ಇಬ್ಬರು ಗೆಳೆಯರನ್ನು ಸನ್ಮಾನ ಮಾಡುವುದರ ಜೊತೆಗೆ ಇಬ್ಬರಿಗೂ ಬಿರುದನ್ನು ನೀಡಿದ್ದಾರೆ.

    63ನೇ ಕನ್ನಡ ರಾಜ್ಯೋತ್ಸವದಂದು ಗೆಳೆಯರಾದ ದರ್ಶನ್ ಹಾಗೂ ಸೃಜನ್ ಲೋಕೇಶ್ ಅವರನ್ನು ವಿದೇಶದಲ್ಲಿ ಗೌರವಿಸಲಾಗಿದೆ. ಈ ವೇಳೆ ದರ್ಶನ್ ಅವರಿಗೆ ‘ಕರುನಾಡ ಕಲಾಕುಲತಿಲಕ’ ಬಿರುದು ನೀಡಿದರೆ, ಸೃಜನ್ ಅವರಿಗೆ ‘ಅಭಿನಯ ರತ್ನ’ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತು.

    ಕತಾರ್ ದೇಶದಲ್ಲಿ 63ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ವೇಳೆ ಆ ದೇಶದ ಕನ್ನಡ ಸಂಘವೊಂದು ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಈ ಕಾರ್ಯಕ್ರಮಕ್ಕೆ ದರ್ಶನ್ ಹಾಗೂ ಸೃಜನ್ ಲೋಕೇಶ್ ಅತಿಥಿಯಾಗಿ ಭಾಗವಹಿಸಿದ್ದರು.

    ಅಲ್ಲಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಹಾಗೂ ಸೃಜನ್ ಅವರನ್ನು ಅಲ್ಲಿನ ಸಂಘ ಗೌರವಿಸಿದೆ. ಕತಾರ್ ನಲ್ಲಿದ್ದ ಕನ್ನಡಿಗರು ತಮ್ಮ ನೆಚ್ಚಿನ ನಟ ದರ್ಶನ್ ಹಾಗೂ ಸೃಜನ್ ಅವರನ್ನು ನೋಡಿ ಸಂತೋಷಪಟ್ಟಿದ್ದಾರೆ.

    ಸದ್ಯ ದರ್ಶನ್ ಹಾಗೂ ಸೃಜನ್ ಅವರನ್ನು ಸನ್ಮಾನ ಮಾಡುತ್ತಿರುವ ಫೋಟೋವನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಸನ್ಮಾನ ಮಾಡಿರುವುದು ಅಭಿಮಾನಿಗಳಲ್ಲಿ ಖುಷಿ ತಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ವಿದೇಶದಲ್ಲಿ ಗೆಳೆಯರಾದ ದರ್ಶನ್- ಸೃಜನ್‍ಗೆ ಸನ್ಮಾನ

    ವಿದೇಶದಲ್ಲಿ ಗೆಳೆಯರಾದ ದರ್ಶನ್- ಸೃಜನ್‍ಗೆ ಸನ್ಮಾನ

    ಬೆಂಗಳೂರು: 63ನೇ ಕನ್ನಡ ರಾಜ್ಯೋತ್ಸವದಂದು ಗೆಳೆಯರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರನ್ನು ವಿದೇಶದಲ್ಲಿ ಗೌರವಿಸಲಾಗಿದೆ.

    ಇತ್ತೀಚೆಗೆ ಕತಾರ್ ದೇಶದಲ್ಲಿ 63ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ವೇಳೆ ಆ ದೇಶದ ಕನ್ನಡ ಸಂಘವೊಂದು ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಈ ಕಾರ್ಯಕ್ರಮಕ್ಕೆ ದರ್ಶನ್ ಹಾಗೂ ಸೃಜನ್ ಲೋಕೇಶ್ ಅತಿಥಿಯಾಗಿ ಭಾಗವಹಿಸಿದ್ದರು.

    ಅಲ್ಲಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಹಾಗೂ ಸೃಜನ್ ಅವರನ್ನು ಅಲ್ಲಿನ ಸಂಘ ಗೌರವಿಸಿದೆ. ಕತಾರ್ ನಲ್ಲಿದ್ದ ಕನ್ನಡಿಗರು ತಮ್ಮ ನೆಚ್ಚಿನ ನಟ ದರ್ಶನ್ ಹಾಗೂ ಸೃಜನ್ ಅವರನ್ನು ನೋಡಿ ಸಂತೋಷಪಟ್ಟಿದ್ದಾರೆ.

    ಸದ್ಯ ದರ್ಶನ್ ಹಾಗೂ ಸೃಜನ್ ಅವರನ್ನು ಸನ್ಮಾನ ಮಾಡುತ್ತಿರುವ ಫೋಟೋವನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಸನ್ಮಾನ ಮಾಡಿರುವುದು ಅಭಿಮಾನಿಗಳಲ್ಲಿ ಖುಷಿ ತಂದಿದೆ.

    ಕಳೆದ ವರ್ಷ ದರ್ಶನ್ ಅವರು ಬ್ರಿಟಿಷ್ ಪಾರ್ಲಿಮೆಂಟ್‍ನಲ್ಲಿ ಯುಕೆ ಸರ್ಕಾರ ನೀಡಿದ್ದ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಈ ಮೂಲಕ ಪ್ರಶಸ್ತಿಗೆ ಭಾಜನಾಗಿರುವ ದಕ್ಷಿಣ ಭಾರತ ಹಾಗೂ ಕನ್ನಡ ಮೊದಲ ಎಂಬ ಹೆಗ್ಗಳಿಕೆಗೆ ದರ್ಶನ್ ಅವರು ಪಾತ್ರರಾಗಿದ್ದರು.

    ಲಂಡನ್ ಸರ್ಕಾರದಿಂದ ಪ್ರತಿ ವರ್ಷ ವಿವಿಧ ವಲಯಗಳಲ್ಲಿ ಸೇವೆ ಸಲ್ಲಿಸಿರುವ ಸಾಧಕರಿಗೆ ಸನ್ಮಾನಿಸಲಾಗುತ್ತದೆ. ಭಾರತ ಮೂಲದ ವಿರೇಂದ್ರ ಶರ್ಮಾ ಲಂಡನ್ ಪಾರ್ಲಿಮೆಂಟ್‍ನಲ್ಲಿ ಸಂಸದರಾಗಿದ್ದು, ಈ ಹಿಂದೆ ಸಲ್ಮಾನ್ ಖಾನ್, ಅಮಿತಾಬ್ ಬಚ್ಚನ್ ಸೇರಿದಂತೆ ಹಲವರಿಗೆ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ದರ್ಶನ್ ಸೇಫ್ ಆಗಿದ್ದು, ಯಾರಾದ್ರು ರೂಮರ್ಸ್ ಹಬ್ಬಿಸಿದ್ರೆ ನಂಬಬೇಡಿ: ಸೃಜನ್ ಲೋಕೇಶ್

    ದರ್ಶನ್ ಸೇಫ್ ಆಗಿದ್ದು, ಯಾರಾದ್ರು ರೂಮರ್ಸ್ ಹಬ್ಬಿಸಿದ್ರೆ ನಂಬಬೇಡಿ: ಸೃಜನ್ ಲೋಕೇಶ್

    ಮೈಸೂರು: ದರ್ಶನ್ ಆರಾಮವಾಗಿದ್ದು, ಅಪಘಾತವಾಗಿದೆ ಅಷ್ಟೇ. ಎಲ್ಲರೂ ಸೇಫ್ ಆಗಿದ್ದಾರೆ. ಯಾವುದೇ ರೂಮರ್ಸ್ ಹಬ್ಬಿಸಿದ್ರೆ ನಂಬಬೇಡಿ ಎಂದು ನಟ ಸೃಜನ್ ಲೋಕೇಶ್ ಅಭಿಮಾನಿಗಳಲ್ಲಿ ಮನವಿಮಾಡಿಕೊಂಡಿದ್ದಾರೆ.

    ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅಪಘಾತ ನಮಗೆ ಗೊತ್ತಿಲ್ಲದೆ ಆಗುವಂತದ್ದು. ಆಗಬಾರದಿತ್ತು ಆಗಿ ಹೋಗಿದೆ. ಸದ್ಯಕ್ಕೆ ಪ್ರಜ್ವಲ್ ಮತ್ತು ದೇವರಾಜ್ ನಾಳೆ ಬೆಳಗ್ಗೆ ಡಿಸ್ಚಾರ್ಜ್ ಆಗುತ್ತಾರೆ. ದರ್ಶನ್ ನಾಳೆ ರಾತ್ರಿ ಅಥವಾ ನಾಳಿದ್ದು ಬೆಳಗ್ಗೆ ಡಿಸ್ಚಾರ್ಜ್ ಆಗುತ್ತಾರೆ. ಈಗಾಗಲೇ ಎಲ್ಲ ಸರ್ಜರಿ ಮುಗಿದಿದೆ. ಅವರು ಮಲಗಿ ವಿಶಾಂತ್ರಿ ಮಾಡಬೇಕು. ಅಭಿಮಾನಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

    ಡಾಕ್ಟರ್ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುತ್ತಿರುವುದರಿಂದ ಚೇತರಿಸಿಕೊಳ್ಳುತ್ತಿದ್ದಾರೆ. ದೇವರ ದಯೆ ಯಾರಿಗೂ ಏನೂ ಹಾಗಿಲ್ಲ. ಪ್ರತಿಯೊಬ್ಬರು ಸುರಕ್ಷಿತವಾಗಿದ್ದಾರೆ. ಅಭಿಮಾನಿಗಳೆಲ್ಲ ಅವರಿಗಾಗಿ ಪಾರ್ಥನೆ ಮಾಡಿ ಎಂದು ಸೃಜನ್ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv