Tag: ಸೃಜನ್ ಲೋಕೇಶ್

  • ಪ್ರಾಣಿಗಳನ್ನು ದತ್ತು ಪಡೆದ ದರ್ಶನ್, ಸೃಜನ್ ಲೋಕೇಶ್, ದೇವರಾಜ್ ಕುಟುಂಬ!

    ಪ್ರಾಣಿಗಳನ್ನು ದತ್ತು ಪಡೆದ ದರ್ಶನ್, ಸೃಜನ್ ಲೋಕೇಶ್, ದೇವರಾಜ್ ಕುಟುಂಬ!

    ಮೈಸೂರು: ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬಸ್ಥರು ಇಂದು ಪ್ರಾಣಿಗಳ ದತ್ತು ಸ್ವೀಕಾರ ಮಾಡಿದ್ರು. ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಪ್ರಾಣಿಗಳ ದತ್ತು ಪಡೆದಿದ್ದು, ನಟ ದೇವರಾಜ್ ಕುಟುಂಬ ಚಿರತೆ, ದರ್ಶನ್ ಮತ್ತು ಸೃಜನ್ ಲೋಕೇಶ್ ರಿಂದ ಜಿರಾಫೆ ಮರಿಯನ್ನು ದತ್ತು ಪಡೆಯಲಾಯಿತು.

    ಈ ವೇಳೆ ಜಿರಾಫೆ ಮರಿಗೆ `ತೂಗುಲೋಕ್’ ಎಂದು ಸೃಜನ್ ಲೋಕೇಶ್ ನಾಮಕರಣ ಮಾಡಿದ್ರು. ಈ ಹಿಂದೆ ಇಬ್ಬರು ಸೇರಿ ದತ್ತು ಪಡೆದ ಹುಲಿಗಳು ನಮ್ಮಂತೆಯೆ ಜೊತೆಯಾಗಿ ನಡೆಯುತ್ತಿವೆ. ಮೃಗಾಲಯದಲ್ಲಿ ಹುಲಿಗಳ ವಿಹಾರ ಕಂಡು ಸೃಜನ್ ಸಂತಸ ವ್ಯಕ್ತಪಡಿಸಿದ್ರು. ಹಾಸ್ಯ ನಟ ಕೀರ್ತಿ ಮೊಸಳೆಯನ್ನು ದತ್ತು ಸ್ವೀಕರಿಸಿದ್ರು.

    ಇತ್ತೀಚೆಗಷ್ಟೇ ದರ್ಶನ್ ಅವರು ಹುಲಿಯೊಂದನ್ನು ದತ್ತು ಪಡೆದಿದ್ದು, ಅದಕ್ಕೆ `ವಿನೀಶ್’ ಅಂತ ಹೆಸರಿಟ್ಟಿದ್ದಾರೆ. ನಾನು ಒಂದು ಹುಲಿನ ದತ್ತು ಪಡೆದುಕೊಂಡಿದ್ದು, ಅದರ ಹೆಸರು `ಅರ್ಜುನ’ ಎಂಬುದಾಗಿ ಇಟ್ಟಿದ್ದೇನೆ. ಒಟ್ಟಿನಲ್ಲಿ ಇಂದು ಎಲ್ಲರೂ ಸೇರಿ ಒಂದಷ್ಟು ಪ್ರಾಣಿಗಳನ್ನು ದತ್ತು ಪಡೆದುಕೊಂಡಿರುವುದು ಸಂತಸದ ವಿಚಾರ ಅಂತ ಸೃಜನ್ ಲೋಕೇಶ್ ತಿಳಿಸಿದ್ರು. ಇದನ್ನೂ ಓದಿ: ಕುಚುಕು ಗೆಳೆಯನನ್ನ ಹಿಂಬಾಲಿಸಿದ ಸೃಜನ್‍ಗೆ ದರ್ಶನ್ ಅಭಿನಂದನೆ

    ದರ್ಶನ್ ಕರೆ:
    ಇಂದು ನಾವು 5 ಸಾವಿರ ಅಥವಾ 10 ಸಾವಿರ ರೂ. ಗಳನ್ನು ಎಲ್ಲೋ ಕಳೆದು ಬಿಡ್ತೀವಿ. ಹೀಗಾಗಿ 1 ಸಾವಿರದಿಂದ ಹಿಡಿದು 1 ಲಕ್ಷದ 75 ಸಾವಿರದವರೆಗೆ ಪ್ರಾಣಿಗಳನ್ನು ಇಲ್ಲಿ ದತ್ತು ಪಡೆದುಕೊಳ್ಳಬಹುದು. ಅಷ್ಟು ಬೇಡ 10 ಅಥವಾ 20 ಸಾವಿರ ಖರ್ಚು ಮಾಡಿ ಜನರು ಪ್ರಾಣಿಗಳನ್ನು ದತ್ತು ಪಡೆದ್ರೆ ಅವುಗಳ ಸಂತತಿನೂ ಉಳಿಯುತ್ತದೆ. ಹಾಗೆಯೇ ಪ್ರಾಣಿಗಳನ್ನು ಸಾಕುವ ಖುಷಿಯೂ ನಮ್ಮದಾಗುತ್ತದೆ ಅಂತ ಸಲಹೆ ನೀಡಿದ್ರು.

    ಪ್ರಾಣಿಗಳನ್ನು ಮನೆಯಲ್ಲಿ ಸಾಕಲು ಸಾಧ್ಯವಿಲ್ಲ. ಹೀಗಾಗಿ ಇಲ್ಲೇ ಒಂದು ಪ್ರಾಣಿಯನ್ನು ಸಾಕಬಹುದು. ಹೀಗಾಗಿ ಎಲ್ಲಾ ಜನರು ಇಂತಹ ಒಂದು ಪ್ರಯೋಗಕ್ಕೆ ಕೈ ಜೋಡಿಸಿ ಅಂತ ದರ್ಶನ್ ಇದೇ ವೇಳೆ ಮನವಿ ಮಾಡಿಕೊಂಡರು.

    ಅರಣ್ಯ ಇಲಾಖೆ ರಾಯಾಭಾರಿಯಾದ ನಂತರ ಉತ್ತಮ ಗಾಳಿ ಸಿಕ್ಕಿದೆ. ಗಿಡ ಮರ ನೆಟ್ಟು ಸೆಲ್ಫಿ ತೆಗೆದುಕೊಳ್ಳುವುದು ದೊಡ್ಡದಲ್ಲ. ಕ್ರಮವಾಗಿ ಅರಣ್ಯ ಬೆಳೆಸಬೇಕು. ನಾವೂ ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದರಿಂದ ಪ್ರಾಣಿಗಳು ನಾಡಿಗೆ ಬರುತ್ತಿದೆ. ಯುವಕರು ದುಡ್ಡನ್ನು ವಿಕೆಂಡ್ ನೆಪದಲ್ಲಿ ಖರ್ಚು ಮಾಡುತ್ತಾರೆ. ಅದೇ ಹಣವನ್ನು ಉಳಿಸಿ ಪ್ರಾಣಿಗಳನ್ನ ದತ್ತು ಪಡೆಯಲಿ. ಕಾಡು ಪ್ರಾಣಿಗಳನ್ನ ಮನೆಯಲ್ಲಿ ಸಾಕಲು ಸಾಧ್ಯವಿಲ್ಲ. ಈ ಕಾರಣದಿಂದ ಮೃಗಾಲಯಕ್ಕೆ ಬಂದು ದತ್ತು ಪಡೆಯಿರಿ ಅಂತ ಹೇಳುವ ಮೂಲಕ ಪ್ರಾಣಿಗಳ ದತ್ತು ಸ್ವೀಕಾರ ಮಾಡಲು ಯುವಕರಿಗೆ ನಟ ದರ್ಶನ್ ಇದೇ ವೇಳೆ ಕರೆ ನೀಡಿದ್ರು.

    ದರ್ಶನ್ ಪ್ರೋತ್ಸಾಹ ಅಂದ್ರು ನಟ ದೇವರಾಜ್ ಪತ್ನಿ:
    ಇದೇ ವೇಳೆ ನಟ ಪ್ರಜ್ವಲ್ ತಾಯಿ ಮಾತನಾಡಿ, ತುಂಬಾ ಇಷ್ಟವಾಯಿತು. ನನ್ನ ಮಗ ದರ್ಶನ್ ಸರ್ ಅವರು ನನಗೆ ಮಾರ್ಗದರ್ಶನ ಮಾಡಿದ್ರು. ಹೀಗಾಗಿ ನಾನು ಚಿರತೆಯನ್ನು ದತ್ತು ಪಡೆದುಕೊಂಡಿದ್ದೇನೆ. ನನಗೆ ಪ್ರಾಣಿಗಳೆಂದರೆ ನನಗೆ ಮೊದಲಿನಿಂದಲೂ ತುಂಬಾ ಇಷ್ಟ. ಇದೀಗ ಅದಕ್ಕೆ ಪ್ರೋತ್ಸಾಹ ಕೊಟ್ಟಿದ್ದು ನನ್ನ ಮಗ. ಹೀಗಾಗಿ ತುಂಬಾ ಸಂತೋಷವಾಗ್ತಿದೆ. ಇತ್ತೀಚೆಗಷ್ಟೆ ನಾನು ಪ್ರಾಣಿಗಳನ್ನು ನೋಡಿಕೊಂಡು ಬಂದಿದ್ದೇನೆ ಅಂತ ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೃಜನ್ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ಚಾಲೆಂಜಿಂಗ್ ಸ್ಟಾರ್!

    ಸೃಜನ್ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ಚಾಲೆಂಜಿಂಗ್ ಸ್ಟಾರ್!

    ಬೆಂಗಳೂರು: ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಗುರುವಾರ ತಮ್ಮ 38ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ವೇಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಆತ್ಮೀಯ ಗೆಳೆಯ ಸೃಜನ್ ಅವರಿಗೆ ಸರ್ಪ್ರೈಸ್ ನೀಡಿ ಶುಭಾಶಯ ಕೋರಿದ್ದಾರೆ.

    ಸೃಜನ್ ನಡೆಸಿಕೊಡುವ ಕಾರ್ಯಕ್ರಮದಲ್ಲಿ ದರ್ಶನ್ ಶುಭಾಶಯ ಕೋರುವ ವಿಡಿಯೋವನ್ನು ಹಿರಿಯ ಹಾಸ್ಯ ನಟ ಮಂಡ್ಯ ರಮೇಶ್ ಸೃಜನ್ ಅವರಿಗೆ ತೋರಿಸಿದ್ದಾರೆ. ನಮಸ್ಕಾರ ಸೃಜನ್‍ಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಸೃಜನ್‍ಗೆ ಸೃಜ ತೂಗುದೀಪ ಎಂದು ಹೇಳಬೇಕು ಹಾಗೂ ನನಗೆ ದರ್ಶನ್ ಲೋಕೇಶ್ ಎಂದು ಕರೆಯುತ್ತಾರೆ. ನಾನು ಸೃಜನ್‍ಗೆ ಹುಟ್ಟುಹಬ್ಬದ ಶುಭಾಶಯ ಮಾತ್ರ ಕೋರುವುದಿಲ್ಲ. ಆದರೆ ಆತನ ಸಾಧನೆ ಬಗ್ಗೆ ತಿಳಿಸುತ್ತೇನೆ.

    ದರ್ಶನ್ ಹೇಳಿದ್ದೇನು..?
    ಸೃಜ ತನ್ನ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಅನುಭವಿಸಿ ಈಗ ಈ ಸ್ಥಾನದಲ್ಲಿ ನಿಂತಿದ್ದಾನೆ. ಸೃಜನ್ ‘ಲೋಕೇಶ್ ಪ್ರೊಡಕ್ಷನ್’ ಶುರು ಮಾಡಿ ತಾನು ಪಟ್ಟ ಕಷ್ಟವನ್ನು ಬೇರೆಯವರು ಪಡಬಾರದೆಂದು ಸುಮಾರು ಜನರನ್ನು ಇರಿಸಿಕೊಂಡು ಅವರನ್ನು ಬೆಳೆಸಿಕೊಂಡು, ತಾನು ಬೆಳೆಯುತ್ತಿದ್ದಾನೆ. ಸೃಜನ್ ಈಗ ತಿರುಗಿ ನೋಡಿದರೆ ಅವನ ಹಿಂದೆ ಸಾಕಷ್ಟು ಜನ ನಿಂತಿರುತ್ತಾರೆ. ಏಕೆಂದರೆ ಸಾಕಷ್ಟು ಜನ ಸೃಜನ್‍ನನ್ನು ನಂಬಿಕೊಂಡಿದ್ದಾರೆ.

    ನಾನು ಕೂಡ ಹಾಗೇ ಬೆಳೆದಿದ್ದು. ನನಗೆ ಲೋಕೇಶ್ ಪ್ರೊಡಕ್ಷನ್ ಬೇರೆ ಅಲ್ಲ ಹಾಗೂ ತೂಗುದೀಪ ಪ್ರೊಡಕ್ಷನ್ ಬೇರೆ ಅಲ್ಲ. ಅದು ಎರಡು ಒಂದೇ ಪ್ರೊಡಕ್ಷನ್ ಆಗಿ ಶುರು ಮಾಡಿದ್ದೇವು. ಏಕೆಂದರೆ ನಾವು ಇದ್ದರು ಇಲ್ಲದಿದ್ದರು ನಮ್ಮ ತಂದೆಯ ಪ್ರೊಡಕ್ಷನ್ ಹೌಸ್ ಅನ್ನು ಬೆಳೆಸಿಕೊಂಡು ಹೋಗಬೇಕು. ಆ ಕಾರ್ಯವನ್ನು ಸೃಜನ್ ಮಾಡುತ್ತಿದ್ದಾನೆ. ಸೃಜನ್‍ಗೆ ಮತ್ತೊಮ್ಮೆ ಹುಟ್ಟು ಹಬ್ಬದ ಶುಭಾಶಯ ಕೋರುತ್ತಿದ್ದೇನೆ ಎಂದು ದರ್ಶನ್ ವಿಡಿಯೋದಲ್ಲಿ ತಿಳಿಸಿದ್ದಾರೆ.

    ಈಗ ನಾನು ಸೃಜನ್‍ಗೆ ಹೇಳುತ್ತಿರುತ್ತೇನೆ. ನಮಗೆ 60-70 ವರ್ಷವಾದಾಗ ಒಂದು ಕಡೆ ಕುಳಿತುಕೊಂಡು ಆಗ ಏನು ಮಾತಡಬೇಕೋ ಈಗಿನಿಂದಲೇ ತಯಾರಿ ನಡೆಸಿಕೊಳ್ಳುತ್ತಿದ್ದೇವೆ. ಈ ವಿಷಯ ಸೃಜನ್‍ಗೂ ತುಂಬಾ ಚೆನ್ನಾಗಿ ಗೊತ್ತು. ನಾನು ಮತ್ತೊಮ್ಮೆ ಮಗದೊಮ್ಮೆ ನಿನಗೆ ಹುಟ್ಟುಹಬ್ಬ ಹಾರ್ದಿಕ ಶುಭಾಶಯ ಕೋರುತ್ತಿದ್ದೇನೆ. ನೀನು ಹೀಗೆ ಬೆಳೆಯುತ್ತಿರು. ನೀನು ಯಾವತ್ತು ಹಿಂದೆ ತಿರುಗಿ ನೋಡಿದರೂ ಆ ಭಗವಂತ ನಿನಗೆ ಕೊಡದೇ ಇದ್ದರು, ನಾನು ಯಾವಾಗಲೂ ನಿನ್ನ ಹಿಂದೆ ಇರುತ್ತೇನೆ ಎಂದು ದರ್ಶನ್ ತಮ್ಮ ವಿಡಿಯೋದಲ್ಲಿ ಹೇಳಿದ್ದಾರೆ.

  • ಮಜಾ ಟಾಕೀಸ್ ಮುಗೀತು, ಸೃಜನ್ ಮುಂದಿದೆ ಇನ್ನೊಂದು ಡ್ರೀಮ್

    ಮಜಾ ಟಾಕೀಸ್ ಮುಗೀತು, ಸೃಜನ್ ಮುಂದಿದೆ ಇನ್ನೊಂದು ಡ್ರೀಮ್

    ಬೆಂಗಳೂರು: ಚಂದನವನದ ಮಾತಿನಮಲ್ಲ ಸೃಜನ್ ನಿರೂಪಣೆಯ ಮಜಾಟಾಕೀಸ್ ಗ್ರಾಂಡ್ ಫಿನಾಲೆ ಶೋ ಪ್ರಸಾರಗೊಳ್ಳಲು ರೆಡಿಯಾಗಿದೆ. ಮಜಾಟಾಕೀಸ್ ನಿಂದ ಬ್ರೇಕ್ ತೆಗೆದುಕೊಂಡ ಸೃಜನ್ ಲೋಕೇಶ್ ಮುಂದೆ ಏನು ಮಾಡುತ್ತಾರೆ ಎಂಬುದಕ್ಕೆ ಉತ್ತರ ಸಿಕ್ಕಿದೆ.

    ಮಜಾ ಟಾಕೀಸ್ ಈ ಹೆಸರು ಕೇಳುತ್ತಿದ್ದರೆ ಹಲವರ ಮುಖದಲ್ಲಿ ಮಂದಹಾಸ ಮೂಡುತ್ತದೆ. ಕಾಮಿಡಿ ಕಚಗುಳಿಯ ಮೂಲಕ ಎಲ್ಲರ ಮನೆ-ಮನ ತಲುಪಿರೋ ಮಜಾಟಾಕೀಸ್ ಗೆ ಸ್ಯಾಂಡಲ್‍ವುಡ್‍ನ ಹಲವು ಸೂಪರ್ ಸ್ಟಾರ್‍ಗಳು ಕೂಡ ಫಿದಾ ಆಗಿದ್ದರು.

    ಮುಂದಿನ ಪ್ಲ್ಯಾನ್: ಫೈನಲ್ ಎಪಿಸೋಡ್ ಕಂಪ್ಲೀಟ್ ಮಾಡಿರೋ ಸೃಜನ್ ಕೊಂಚ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ರಿಲ್ಯಾಕ್ಸ್ ಬಳಿಕ ಬೆಳ್ಳಿತೆರೆಗೆ ಹೀರೋ ಕಮ್ ಪ್ರೊಡ್ಯೂಸರ್ ಆಗಿ ಎಂಟ್ರಿ ಕೊಡುತ್ತಿದ್ದಾರೆ. ಸೃಜನ್ ತಮ್ಮ ನಿರ್ಮಾಣ ಸಂಸ್ಥೆಯ ಮೂಲಕ ಸಿನಿಮಾಗಳಿಗೆ ಬಂಡವಾಳ ಹಾಕಲಿದ್ದಾರೆ. ಸಿನಿಮಾಗಳಿಗೆ ಹೆಚ್ಚು ಮಹತ್ವ ಕೊಡಲಿದ್ದು, ನಟನೇ ಜೊತೆ ನಿರ್ಮಾಣ ಕೂಡ ಮಾಡಲಿದ್ದಾರೆ.

    280 ಎಪಿಸೋಡ್ ಕಂಪ್ಲೀಟ್ ಮಾಡಿರೋ ಮಜಾಟಾಕೀಸ್ ಈಗ ಗ್ರಾಂಡ್ ಫಿನಾಲೆ ಹಂತವನ್ನು ತಲುಪಿದೆ. ಈ ವಾರ ಮಜಾಟಾಕೀಸ್‍ನ ಫೈನಲ್ ಎಪಿಸೋಡ್ ಪ್ರಸಾರವಾಗಲಿದ್ದು ಇದಾದ ಬಳಿಕ ಯಶಸ್ವಿ ಕಾರ್ಯಕ್ರಮಕ್ಕೆ ಒಂದು ಬ್ರೇಕ್ ಸಿಗಲಿದೆ.

    ಜಡ್ಜ್ ಆಗ್ತಾರ ಸೃಜನ್: ಕಾರ್ಯಕ್ರಮದ ನಿರೂಪಕರಾಗಿ ಕಮಾಲ್ ಮಾಡಿರುವ ಸೃಜನ್ ಈಗ ಜಡ್ಜ್ ಆಗಿ ಪ್ರಮೋಷನ್ ಸಿಗಲಿದೆ. ಹೊಸ ಹಾಸ್ಯ ಕಾರ್ಯಕ್ರಮ `ಕಾಮಿಡಿ ಟಾಕೀಸ್’ನಲ್ಲಿ ತೀರ್ಪುಗಾರನಾಗಿ ಕೆಲಸ ಮಾಡಲಿದ್ದಾರೆ. ಈ ಕಾಮಿಡಿ ಟಾಕೀಸ್ ಕಾರ್ಯಕ್ರಮವನ್ನು ಕಿರುತೆರೆ ನಟ ವಿಜಯ್ ಸೂರ್ಯ ನಿರೂಪಣೆ ಮಾಡಲಿದ್ದಾರೆ. ಗುಳಿಕೆನ್ನೆ ಚೆಲುವೆ ರಚಿತಾ ಕೂಡ ಸೃಜನ್‍ಗೆ ಸಾಥ್ ಕೊಡಲಿದ್ದಾರೆ ಎಂದು ಕೇಳಿಬರುತ್ತಿದೆ. ಇದರ ಜೊತೆ `ಸದಾ ನಿಮ್ಮೊಂದಿಗೆ’ ಅನ್ನೊ ಕಾರ್ಯಕ್ರಮದಲ್ಲಿ ನಿರೂಪಕರಾಗಿ ಕೂಡ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.