Tag: ಸೃಷ್ಟಿ ಪಾಟೀಲ್

  • ಕೊರೊನಾ ವಿರುದ್ಧದ ಹೋರಾಟಕ್ಕೆ 50 ಸಾವಿರ ರೂ. ದೇಣಿಗೆ ನೀಡಿದ ಕೌರವನ ಪುತ್ರಿ

    ಕೊರೊನಾ ವಿರುದ್ಧದ ಹೋರಾಟಕ್ಕೆ 50 ಸಾವಿರ ರೂ. ದೇಣಿಗೆ ನೀಡಿದ ಕೌರವನ ಪುತ್ರಿ

    ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಅನೇಕರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ದೇಣಿಗೆ ನೀಡಿ ಬೆಂಬಲ ಸೂಚಿಸಿದ್ದಾರೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಪುತ್ರಿ ಸೃಷ್ಟಿ ಪಾಟೀಲ್ ಅವರು ಕೂಡ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ 50 ಸಾವಿರ ರೂ. ದೇಣಿಗೆ ನೀಡಿದ್ದಾರೆ.

    ತಾವು ದೇಣಿಗೆ ನೀಡುವ ಮಾಹಿತಿಯನ್ನು ಟ್ವೀಟ್ ಮಾಡಿರುವ ಸೃಷ್ಟಿ ಪಾಟೀಲ್, ಮಹಾಮಾರಿ ಕೊರೊನಾ ವೈರಸ್ ಅನ್ನು ತಡೆಗಟ್ಟಲು ರಾಜ್ಯ ಸರ್ಕಾರವು, ನಮ್ಮಲೆಲ್ಲರ ಹಿತ ಕಾಯುತ್ತಿದೆ. ನಾವೆಲ್ಲರೂ ಸೇರಿ ನಮ್ಮ ಕೈಯಲ್ಲಿ ಎಷ್ಟಾಗುತ್ತೋ ಅಷ್ಟು ಧನಸಹಾಯವನ್ನು ರಾಜ್ಯ ಸರ್ಕಾರಕ್ಕೆ ಮಾಡೋಣ. ನನ್ನ ಕಡೆಯಿಂದ ಆದಷ್ಟು ನಾನು ಮಾಡಿದ್ದೇನೆ. ನೀವೂ ಕೂಡ ಸಿಎಂ ರಿಲೀಫ್ ಫಂಡ್‍ಗೆ ಧನ ಸಹಾಯ ಮಾಡಬಹುದು ಎಂದು ಬರೆದುಕೊಂಡಿದ್ದಾರೆ.

    ಕೊರೊನಾ ವೈರಸ್‍ನಿಂದಾಗಿ ದೇಶಾದ್ಯಂತ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಲಾಗಿದೆ. ಇದರಿಂದಾಗಿ ಸಾಮಾನ್ಯ ಜನರ ಜೀವನ ಕಷ್ಟವಾಗಿದೆ. ಹೀಗಾಗಿ ಸೃಷ್ಟಿ ಪಾಟೀಲ್ ಕಳೆದ ಕೆಲವು ದಿನಗಳಿಂದ ತಂದೆ ಬಿ.ಸಿ.ಪಾಟೀಲ್ ಅವರ ಕ್ಷೇತ್ರದ ಜನರ ಸಹಾಯಕ್ಕೆ ನಿಂತಿದ್ದಾರೆ.

    ಸೃಷ್ಟಿ ಪಾಟೀಲ್ ಅವರು ಏಪ್ರಿಲ್ 5ರಂದು ಹಂಸಭಾವಿ ಹಾಗೂ ರಟ್ಟಿಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತರು, ಪೊಲೀಸ್, ಗ್ರಾಮ ಪಂಚಾಯತಿ ಸ್ವಚ್ಛತಾ ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡಿದ್ದರು. ಜೊತೆಗೆ ಅಂದು ಅನೇಕರಿಗೆ ಮಾಸ್ಕ್ ಗಳನ್ನು ವಿತರಿಸಿದ್ದರು. ಹೀಗೆ ಹಾವೇರಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಜನರಿಗೆ ಸಹಾಯ ಮಾಡುತ್ತಿದ್ದಾರೆ.

  • ಯಾವುದೇ ಅನರ್ಹ ಭೀತಿ ಇಲ್ಲ, ಆರಾಮಾಗಿದ್ದಾರೆ: ಬಿ.ಸಿ.ಪಾಟೀಲ್ ಪುತ್ರಿ

    ಯಾವುದೇ ಅನರ್ಹ ಭೀತಿ ಇಲ್ಲ, ಆರಾಮಾಗಿದ್ದಾರೆ: ಬಿ.ಸಿ.ಪಾಟೀಲ್ ಪುತ್ರಿ

    ಹಾವೇರಿ: ಕಾಂಗ್ರೆಸ್ ನಾಯಕರು ಮೊದಲು ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಮೂರನೇ ಬಾರಿ ಅವರು ಕೇಳಲಿಲ್ಲ. ಆದರೂ ಅವರೇ ಕರೆದು ಸಚಿವ ಸ್ಥಾನ ನೀಡುವ ಭರವಸೆ ಕೊಟ್ಟಿದ್ದರು. ಕೊನೆಗೆ ಮೋಸ ಮಾಡಿದರು ಎಂದು ರಾಜೀನಾಮೆ ನೀಡಿದ ಅತೃಪ್ತ ಶಾಸಕ ಬಿ.ಸಿ ಪಾಟೀಲ್ ಪುತ್ರಿ ಸೃಷ್ಟಿ ಪಾಟೀಲ್ ಹೇಳಿದ್ದಾರೆ.

    ಹಿರೇಕೆರೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರು ಅವರ ಪರವಾಗಿ ನಿಂತಿದ್ದಾರೆ. ಅವರೊಬ್ಬರೇ ರಾಜೀನಾಮೆ ನಿರ್ಧಾರ ಮಾಡಿಲ್ಲ. ಮುಂಚಿತವಾಗಿ ಬೆಂಬಲಿಗರಿಗೆ ತಿಳಿಸಿ ರಾಜೀನಾಮೆ ನೀಡಿದ್ದಾರೆ. ಯಾವುದೇ ಅರ್ನಹತೆ ಭೀತಿ ಅವರಿಗಿಲ್ಲ. ಅವರು ಆರಾಮಾಗಿದ್ದಾರೆ. ಅವರು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಬಿ.ಸಿ.ಪಾಟೀಲ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಸೃಷ್ಟಿ ಪಾಟೀಲ್ ತಿಳಿಸಿದರು. ಇದನ್ನೂ ಓದಿ: ಕ್ಷೇತ್ರದ ಅಭಿವೃದ್ಧಿಗಾಗಿ ರಾಜೀನಾಮೆ, ಪತಿಯ ನಡೆಗೆ ನಾವು ಬದ್ಧ – ಬಿ.ಸಿ ಪಾಟೀಲ್ ಪತ್ನಿ

    ಮನಷ್ಯನಿಗೆ ಪದೆ ಪದೇ ಮೋಸ ಮಾಡಿದರೆ ಯಾರು ತಡೆದುಕೊಳ್ಳುತ್ತಾರೆ. ಪಕ್ಷದ ಉಳಿವಿಗಾಗಿ ಒಂದು ಸಚಿವ ಸ್ಥಾನ ನೀಡಬೇಕಿತ್ತು. ಪಕ್ಷೇತರರಿಗೆ ಸಚಿವ ಸ್ಥಾನ ನೀಡುವ ಅವಶ್ಯಕತೆ ಇರಲಿಲ್ಲ. ಪಕ್ಷ ಕಟ್ಟಿ ಬೆಳೆಸಿದ ವ್ಯಕ್ತಿಗೆ ಬೆಲೆ ಕೊಟ್ಟಿಲ್ಲ. ಹೀಗಾಗಿ ಅವರಿಗೆ ಬೇಜಾರಾಗಿ ರಾಜೀನಾಮೆ ಕೊಟ್ಟಿದ್ದಾರೆ. ಬಿ.ಸಿ.ಪಾಟೀಲ್ ಯಾವುದೇ ಆಸೆ ಆಮಿಷಕ್ಕೆ ಒಳಗಾಗಿಲ್ಲ. ಅದು ಸುಳ್ಳು. ಪಕ್ಷದ ನಡವಳಿಕೆಯಿಂದ ಬೇಜಾರಾಗಿ ರಾಜೀನಾಮೆ ನೀಡಿದ್ದಾರೆ. ಆದರೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ ಎಂದರು.

    ಮೊನ್ನೆ ಫೋನ್ ಮಾಡಿದ್ದಾಗ ಇದೇ ಮೊದಲ ಬಾರಿಗೆ ನಾನು ಹಿರೇಕೆರೂರು ಬಿಟ್ಟು ಒಂದು ತಿಂಗಳಾಗಿದೆ. ನಾನು ಜನರನ್ನು ನೋಡಬೇಕು. ಅವರ ಜೊತೆ ಮಾತನಾಡಬೇಕು ಎಂದು ಹೇಳುತ್ತಿದ್ದರು. ಆದಷ್ಟು ಬೇಗ ಹಿರೇಕೆರೂರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಕ್ಷೇತ್ರಕ್ಕೆ ಬಾರದೇ ಎಲ್ಲೂ ಹೋಗಲ್ಲ. ಅನರ್ಹ ಮಾಡಿದರೆ 5 ವರ್ಷದ ಚುನಾವಣೆಯಲ್ಲಿ ನಿಲ್ಲಬಾರದು ಎಂಬುದು ಇಲ್ಲ. 6 ತಿಂಗಳ ಒಳಗೆ ಚುನಾವಣೆಗೆ ನಿಲ್ಲಬಹುದು ಎಂದು 2018ರ ತೀರ್ಪಿನಲ್ಲಿ ರಾವತ್ ಹೇಳಿದ್ದಾರೆ ಎಂದು ಸೃಷ್ಟಿ ಹೇಳಿದರು.