Tag: ಸೆನ್ಸಾರ್ ಮಂಡಳಿ

  • ನಟ ವಿಶಾಲ್ ಸೆನ್ಸಾರ್ ಮಂಡಳಿ ಲಂಚ ಪ್ರಕರಣ: ತನಿಖೆಗೆ ಆದೇಶಿಸಿದ ಸಚಿವಾಲಯ

    ನಟ ವಿಶಾಲ್ ಸೆನ್ಸಾರ್ ಮಂಡಳಿ ಲಂಚ ಪ್ರಕರಣ: ತನಿಖೆಗೆ ಆದೇಶಿಸಿದ ಸಚಿವಾಲಯ

    ನಿನ್ನೆಯಷ್ಟೇ ತಮಿಳಿನ ಖ್ಯಾತ ನಟ ವಿಶಾಲ್, ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್ (ಸಿ.ಬಿ.ಎಫ್.ಸಿ) ಮೇಲೆ ಗುರುತರ ಆರೋಪ ಮಾಡಿದ್ದರು. ತಾವು ತಮ್ಮ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ಪಡೆಯುವುದಕ್ಕಾಗಿ 6.50 ಲಕ್ಷ ರೂಪಾಯಿಯನ್ನು ನೀಡಿರುವುದಾಗಿ ಅವರು ಹೇಳಿಕೊಂಡಿದ್ದರು. ಯಾರಿಗೆ ಎಷ್ಟೆಲ್ಲ ಹಣ ನೀಡಲಾಗಿದೆ ಎಂದು ವಿವರ ಸಮೇತ ವಿಡಿಯೋ ಮಾಡಿದ್ದರು. ಸೆನ್ಸಾರ್ ಮಂಡಳಿಯ ಅಧಿಕಾರಿಗಳಾದ ಎಂ.ರಾಜನ್ ಎನ್ನುವವರು ಮೂರು ಲಕ್ಷ ಮತ್ತು ಜೀಜಾ ರಾಮದಾಸ್ ಎನ್ನುವವರಿಗೆ 3.5 ಲಕ್ಷ ರೂಪಾಯಿಯನ್ನು ಬ್ಯಾಂಕ್ ಖಾತೆಗೆ ಹಾಕಿರುವ ವಿವರವನ್ನು ವಿಶಾಲ್ ಹೇಳಿದ್ದರು.

    ಸಾಕ್ಷಿ ಸಮೇತವಾಗಿ ವಿಶಾಲ್ ವಿಡಿಯೋ ಮಾಡಿ ಅದನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿಗಳಿಗೆ ಟ್ಯಾಗ್ ಮಾಡಿದ್ದರು. ಇದರ ಗಂಭೀರತೆಯನ್ನು ಅರಿತ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಕೂಡಲೇ ತನಿಖೆಗೆ ಆದೇಶ ಮಾಡಿದೆ. ಸಿ.ಬಿ.ಎಫ್.ಸಿಯ ಹಿರಿಯ ಅಧಿಕಾರಿಯನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿ, ತನಿಖೆಗೆ ಆದೇಶ ಮಾಡಿದೆ. ಈ ಕುರಿತು ಇದೊಂದು ದುರಾದೃಷ್ಟ ಸಂಗತಿ ಎಂದು ವಿಷಾದ ವ್ಯಕ್ತ ಪಡಿಸಿದೆ.

    ಲಂಚಮುಕ್ತ ಆಡಳಿತ ಕೊಡಬೇಕು ಎನ್ನುವುದು ನಮ್ಮ ಗುರಿ. ಆದರೆ, ಇಂತಹ ಬೆಳವಣಿಗೆ ನಡೆದಿದ್ದು ನೋವು ತಂದಿದೆ. ವಿಶಾಲ್ ಅವರು ವಿಡಿಯೋ ಹಾಕಿದ 24 ಗಂಟೆಯೊಳಗೆ ತನಿಖೆಗೆ ಆದೇಶ ಮಾಡಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದು ಎಂದು ಸಚಿವಾಲಯ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ. ವಿಶಾಲ್ ಅವರಿಗೆ ಟ್ಯಾಗ್ ಮಾಡಲಾಗಿದೆ.

    ಏನಿದು ಪ್ರಕರಣ?

    ಸಿನಿಮಾಗಳಿಗೆ ಪ್ರಮಾಣಪತ್ರ ನೀಡುವ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್ (ಸಿಬಿಎಫ್‍ಸಿ) (Censor Board) ಅಥವಾ ಸೆನ್ಸಾರ್ ಮಂಡಳಿಗಳ ಮೇಲೆ ಒಂದಿಲ್ಲೊಂದು ಆರೋಪಗಳು ಬರುತ್ತಲೇ ಇವೆ. ಇದೀಗ ತಮಿಳಿನ (Tamil) ಹೆಸರಾಂತ ನಟ ವಿಶಾಲ್ (Vishal) ಗುರುತರ ಆರೋಪವೊಂದನ್ನು ಮಾಡಿದ್ದರು. ತಮ್ಮ ತಮಿಳು ಚಿತ್ರದ ಹಿಂದಿ ಆವೃತ್ತಿಗೆ ಪ್ರಮಾಣ ಪತ್ರ ನೀಡಲು ಮುಂಬೈ ಸಿಬಿಎಫ್‍ಸಿ ಅಧಿಕಾರಿಗಳು ಲಂಚ ಕೇಳಿದ್ದರು ಎಂದು ಆರೋಪ ಮಾಡಿದ್ದರು. 

     

    ತಮಿಳು ನಟನೆಯ ಮಾರ್ಕ್ ಆಂಟೋನಿ (Mark Antony)ರಿಲೀಸ್ ಆಗಿ, ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಸಿನಿಮಾದ ಹಿಂದಿ ಆವೃತ್ತಿಗೆ ಪ್ರಮಾಣ ಪತ್ರ ಪಡೆಯಲು ಚಿತ್ರತಂಡ ಮುಂದಾಗಿದೆ. ಈ ಸಿನಿಮಾಗೆ ಪ್ರಮಾಣ ಪತ್ರ ನೀಡಲು ಅಧಿಕಾರಿಗಳು ಬರೋಬ್ಬರಿ 6.50 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು ಎಂದು ವಿಶಾಲ್ ಹೇಳಿದ್ದರು. ಈ ಕುರಿತು ಸಾಕ್ಷಿ ಸಮೇತ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.

    ಹಿಂದಿಯಲ್ಲಿ ಚಿತ್ರವನ್ನು ಡಬ್ ಮಾಡಿ ಬಿಡುಗಡೆ ಮಾಡಲು ನಿರ್ಧಾರ ಮಾಡಿದೆವು. ತಾಂತ್ರಿಕ ಕಾರಣಗಳಿಂದಾಗಿ ಹಿಂದಿಯಲ್ಲಿ ಚಿತ್ರವನ್ನು ರೆಡಿ ಮಾಡಲು ಕಷ್ಟವಾಯಿತು. ಬಿಡುಗಡೆ ದಿನಾಂಕ ತೀರಾ ಹತ್ತಿರವಿದ್ದ ಕಾರಣದಿಂದಾಗಿ ಬೇಗ ಪ್ರಮಾಣ ಪತ್ರ ನೀಡುವಂತೆ ವಿನಂತಿಸಿದೆವು. ಆದರೆ, ಅಧಿಕಾರಿಗಳು ಬೇಗ ಪ್ರಮಾಣ ಪತ್ರ ಬೇಕು ಅಂದರೆ ಲಂಚ ನೀಡಿ ಎಂದರು ಎಂದು ವಿಶಾಲ್ ಮಾತನಾಡಿದ್ದರು.

     

    ಮತ್ತೊಂದು ಅಚ್ಚರಿಯ ಸಂಗತಿ ಅಂದರೆ, ಚಿತ್ರತಂಡವು ಅವರು ಕೇಳಿದ ಹಣವನ್ನು ಲಂಚದ ರೂಪದಲ್ಲಿ ನೀಡಿರುವುದಾಗಿಯೂ ವಿಶಾಲ್ ಹೇಳಿಕೊಂಡಿದ್ದರು. ತಾವು ಹಣ ಕಳುಹಿಸಿದ ಬ್ಯಾಂಕ್ ಖಾತೆಯ ವಿವರವನ್ನೂ ಅವರು ಹಂಚಿಕೊಂಡಿದ್ದರು. ನಿಮಗೆ ಯಾವುದೇ ದಾರಿ ಕಾಣದೇ ಹಣವನ್ನು ಕೊಡಬೇಕಾಯಿತು ಎಂದು ಅವರು ಹೇಳಿಕೊಂಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿನಿಮಾ ಸೆನ್ಸಾರ್ ಮಾಡಲು ಲಂಚ ಕೇಳಿದ ಆರೋಪ : ಸಾಕ್ಷಿ ನೀಡಿದ ನಟ ವಿಶಾಲ್

    ಸಿನಿಮಾ ಸೆನ್ಸಾರ್ ಮಾಡಲು ಲಂಚ ಕೇಳಿದ ಆರೋಪ : ಸಾಕ್ಷಿ ನೀಡಿದ ನಟ ವಿಶಾಲ್

    ಸಿನಿಮಾಗಳಿಗೆ ಪ್ರಮಾಣಪತ್ರ ನೀಡುವ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್ (ಸಿಬಿಎಫ್‍ಸಿ) (Censor Board) ಅಥವಾ ಸೆನ್ಸಾರ್ ಮಂಡಳಿಗಳ ಮೇಲೆ ಒಂದಿಲ್ಲೊಂದು ಆರೋಪಗಳು ಬರುತ್ತಲೇ ಇವೆ. ಇದೀಗ ತಮಿಳಿನ (Tamil) ಹೆಸರಾಂತ ನಟ ವಿಶಾಲ್ (Vishal) ಗುರುತರ ಆರೋಪವೊಂದನ್ನು ಮಾಡಿದ್ದಾರೆ. ತಮ್ಮ ತಮಿಳು ಚಿತ್ರದ ಹಿಂದಿ ಆವೃತ್ತಿಗೆ ಪ್ರಮಾಣ ಪತ್ರ ನೀಡಲು ಮುಂಬೈ ಸಿಬಿಎಫ್‍ಸಿ ಅಧಿಕಾರಿಗಳು ಲಂಚ ಕೇಳಿದ್ದರು ಎಂದು ಆರೋಪ ಮಾಡಿದ್ದಾರೆ.

    ತಮಿಳು ನಟನೆಯ ಮಾರ್ಕ್ ಆಂಟೋನಿ (Mark Antony)ರಿಲೀಸ್ ಆಗಿ, ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಕೆ ಪಡೆದುಕೊಂಡಿದೆ. ಈ ಸಿನಿಮಾದ ಹಿಂದಿ ಆವೃತ್ತಿಗೆ ಪ್ರಮಾಣ ಪತ್ರ ಪಡೆಯಲು ಚಿತ್ರತಂಡ ಮುಂದಾಗಿದೆ. ಈ ಸಿನಿಮಾಗೆ ಪ್ರಮಾಣ ಪತ್ರ ನೀಡಲು ಅಧಿಕಾರಿಗಳು ಬರೋಬ್ಬರಿ 6.50 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು ಎಂದು ವಿಶಾಲ್ ಹೇಳಿದ್ದಾರೆ. ಈ ಕುರಿತು ಸಾಕ್ಷಿ ಸಮೇತ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ಹಿಂದಿಯಲ್ಲಿ ಚಿತ್ರವನ್ನು ಡಬ್ ಮಾಡಿ ಬಿಡುಗಡೆ ಮಾಡಲು ನಿರ್ಧಾರ ಮಾಡಿದೆವು. ತಾಂತ್ರಿಕ ಕಾರಣಗಳಿಂದಾಗಿ ಹಿಂದಿಯಲ್ಲಿ ಚಿತ್ರವನ್ನು ರೆಡಿ ಮಾಡಲು ಕಷ್ಟವಾಯಿತು. ಬಿಡುಗಡೆ ದಿನಾಂಕ ತೀರಾ ಹತ್ತಿರವಿದ್ದ ಕಾರಣದಿಂದಾಗಿ ಬೇಗ ಪ್ರಮಾಣ ಪತ್ರ ನೀಡುವಂತೆ ವಿನಂತಿಸಿದೆವು. ಆದರೆ, ಅಧಿಕಾರಿಗಳು ಬೇಗ ಪ್ರಮಾಣ ಪತ್ರ ಬೇಕು ಅಂದರೆ ಲಂಚ ನೀಡಿ ಎಂದರು ಎಂದು ವಿಶಾಲ್ ಮಾತನಾಡಿದ್ದಾರೆ.

     

    ಮತ್ತೊಂದು ಅಚ್ಚರಿಯ ಸಂಗತಿ ಅಂದರೆ, ಚಿತ್ರತಂಡವು ಅವರು ಕೇಳಿದ ಹಣವನ್ನು ಲಂಚದ ರೂಪದಲ್ಲಿ ನೀಡಿರುವುದಾಗಿಯೂ ವಿಶಾಲ್ ಹೇಳಿಕೊಂಡಿದ್ದಾರೆ. ತಾವು ಹಣ ಕಳುಹಿಸಿದ ಬ್ಯಾಂಕ್ ಖಾತೆಯ ವಿವರವನ್ನೂ ಅವರು ಹಂಚಿಕೊಂಡಿದ್ದಾರೆ. ನಿಮಗೆ ಯಾವುದೇ ದಾರಿ ಕಾಣದೇ ಹಣವನ್ನು ಕೊಡಬೇಕಾಯಿತು ಎಂದು ಅವರು ಹೇಳಿಕೊಂಡಿದ್ದಾರೆ.

    ವಿಶಾಲ್ ಆಡಿದ ಮಾತುಗಳಿಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ. ಲಂಚ ತೆಗೆದುಕೊಳ್ಳುವುದು ಎಷ್ಟು ಅಪರಾಧವೋ, ಕೊಡುವುದು ಕೂಡ ಅಷ್ಟೇ ಅಪರಾಧ. ಹಾಗಾಗಿ ಕೊಟ್ಟಿರುವ ಚಿತ್ರತಂಡಕ್ಕೆ ಮತ್ತು ತೆಗೆದುಕೊಂಡಿರುವ ಅಧಿಕಾರಿಗಳಿಗೆ ಯಾವ ರೀತಿಯಲ್ಲಿ ಶಿಕ್ಷೆ ಕಾದಿದೆ ನೋಡಬೇಕು ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುಳ್ಳು ಸುದ್ದಿಗೆ ತೆರೆ ಎಳೆದ ಪೈಲ್ವಾನ್ ನಿರ್ದೇಶಕ

    ಸುಳ್ಳು ಸುದ್ದಿಗೆ ತೆರೆ ಎಳೆದ ಪೈಲ್ವಾನ್ ನಿರ್ದೇಶಕ

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಹೈವೊಲ್ಟೇಜ್ ಸಿನಿಮಾ ಪೈಲ್ವಾನ್ ನಾಳೆ ಅದ್ಧೂರಿಯಾಗಿ ದೇಶಾದ್ಯಂತ ರಿಲೀಸ್ ಆಗುತ್ತಿದೆ. ಆದರೆ ಸಿನಿಮಾಗೆ ಸೆನ್ಸಾರ್ ಮಂಡಳಿ ಸೆನ್ಸಾರ್ ನೀಡಿಲ್ಲ ಎಂಬ ಸುದ್ದಿ ಹಬ್ಬಿತ್ತು. ಇದಕ್ಕೆ ತೆರೆ ಎಳೆದಿರುವ ನಿರ್ದೇಶಕ ಕೃಷ್ಣ ಸೆನ್ಸಾರ್ ಸಿಕ್ಕಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.

    ಪೈಲ್ವಾನ್ ಚಿತ್ರ ಪ್ಯಾನ್ ಇಂಡಿಯಾ ಬ್ಯಾನರ್ ಆಡಿಯಲ್ಲಿ 5 ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಎಲ್ಲವೂ ಸರಿಯಾಗಿದೆ ಅನ್ನುವಾಗಲೇ ಕೊನೆಯ ಕ್ಷಣದಲ್ಲಿ ಕನ್ನಡ ಚಿತ್ರತಂಡಕ್ಕೆ ಆತಂಕ ಶುರುವಾಗಿದೆ. ಸೆನ್ಸಾರ್ ಮಂಡಳಿಯವರು ಹಿಂದಿ ಚಿತ್ರಕ್ಕೆ ಇನ್ನು ಸೆನ್ಸಾರ್ ನೀಡಿಲ್ಲ ಎಂಬ ಗಾಳಿ ಸುದ್ದಿ ಗಾಂಧಿನಗರದಲ್ಲಿ ಹರಡಿತ್ತು. ಈಗ ಈ ಗಾಸಿಪ್‍ಗೆ ಕೃಷ್ಣ ಟ್ವೀಟ್ ಮಾಡುವ ಮೂಲಕ ತೆರೆ ಎಳೆದಿದ್ದಾರೆ.

    ಬಿಗ್ ಬಜೆಟ್ ಸಿನಿಮಾ ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿದು, ಸದ್ಯ ಇಂದು ಸೆನ್ಸಾರ್ ಸಾಧ್ಯವಾಗದಿದ್ದರೆ ಹಿಂದಿ ವರ್ಷನ್ ಒಂದು ದಿನ ತಡವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಇ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಕೃಷ್ಣ ಸೆನ್ಸಾರ್ ಸಿಕಿದೆ ಸೆನ್ಸಾರ್ ಮಂಡಳಿ ಸೆನ್ಸಾರ್ ಕಾಪಿ ಸಹ ನೀಡಿದ್ದಾರೆ. ಸೆನ್ಸಾರ್ ಆಗಿಲ್ಲ ಎಂಬ ಸುಳ್ಳು ಸುದ್ದಿಯನ್ನು ಹಬ್ಬಿಸದಂತೆ ಮನವಿ ಮಾಡಿಕೊಂಡಿದ್ದಾರೆ.

    ಈ ಚಿತ್ರವನ್ನು ಎಸ್ ಕೃಷ್ಣ ನಿರ್ದೇಶನ ಮಾಡಿದ್ದು, ಅವರ ಪತ್ನಿ ಸ್ವಪ್ನ ಕೃಷ್ಣ ಅವರು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಕಿಚ್ಚ ಸುದೀಪ್‍ಗೆ ನಾಯಕಿಯಾಗಿ ಆಕಾಂಕ್ಷ ಸಿಂಗ್ ನಟಿಸಿದ್ದಾರೆ. ಬಾಲಿವುಡ್‍ನ ಸುನೀಲ್ ಶೆಟ್ಟಿ, ಕಬೀರ್ ದುಹಾನ್ ಸಿಂಗ್ ಮತ್ತು ಸುಶಾಂತ್ ಸಿಂಗ್ ನಟನೆ ಮಾಡಿರುವ ಈ ಚಿತ್ರಕ್ಕೆ ಅರ್ಜನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ.

    ಒಟ್ಟು ಐದು ಬಾಷೆಯಲ್ಲಿ ಪೈಲ್ವಾನ್ ಚಿತ್ರ ರೆಡಿಯಾಗಿದ್ದು, ಕರ್ನಾಟಕದಲ್ಲಿ 400 ಚಿತ್ರಮಂದಿರಗಳಲ್ಲಿ, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ 450ಕ್ಕೂ ಹೆಚ್ಚು ಚಿತ್ರಮಂದಿರ ತಮಿಳುನಾಡಿನಲ್ಲಿ 150ಕ್ಕೂ ಹೆಚ್ಚು ಚಿತ್ರಮಂದಿರ ಹಾಗೂ ವಿಶ್ವಾದ್ಯಂತ 3000 ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.

  • ನನ್ನಪ್ರಕಾರ ಸ್ಕ್ರೀನ್ ಪ್ಲೇ ಕಂಡು ಖುಷಿಗೊಂಡ ಸೆನ್ಸಾರ್ ಮಂಡಳಿ!

    ನನ್ನಪ್ರಕಾರ ಸ್ಕ್ರೀನ್ ಪ್ಲೇ ಕಂಡು ಖುಷಿಗೊಂಡ ಸೆನ್ಸಾರ್ ಮಂಡಳಿ!

    ಬೆಂಗಳೂರು: ಈ ವಾರವೇ ಅದ್ದೂರಿಯಾಗಿ ಬಿಡುಗಡೆಯಾಗಲು ನನ್ನಪ್ರಕಾರ ಚಿತ್ರ ಸಜ್ಜುಗೊಂಡಿದೆ. ಇದು ವಿನಯ್ ಬಾಲಾಜಿ ನಿರ್ದೇಶನದ ಚೊಚ್ಚಲ ಚಿತ್ರವಾಗಿದ್ದರೂ ಕೂಡಾ ಯಾವ ಸ್ಟಾರ್ ಸಿನಿಮಾಗಳಿಗೂ ಕಡಿಮೆ ಇಲ್ಲದಂತೆ ಸದ್ದು ಮಾಡುತ್ತಿರೋದಂತೂ ನಿಜ. ಇದೆಲ್ಲ ಹೇಗೆ ಸಾಧ್ಯವಾಯಿತೆಂಬ ಅಚ್ಚರಿ ಯಾರಿಗಾದರೂ ಇದ್ದರೆ ಅದಕ್ಕೆ ಕ್ರಿಯೇಟಿವಿಟಿ, ಹೊಸತನಕ್ಕಾಗಿನ ಹುಡುಕಾಟ ಎಂಬುದಕ್ಕಿಂತ ಬೇರ್ಯಾವ ಉತ್ತರವೂ ಸಿಗಲು ಸಾಧ್ಯವಿಲ್ಲ. ಈ ಚಿತ್ರದಲ್ಲಿ ಪ್ರತೀ ವಿಚಾರದಲ್ಲಿಯೂ ಪ್ರಯೋಗಾತ್ಮಕ ಅಂಶಗಳನ್ನು ಬೆರೆಸಿರೋ ನಿರ್ದೇಶಕರು ನನ್ನಪ್ರಕಾರ ಸ್ಕ್ರೀನ್‍ಪ್ಲೇನಲ್ಲಿ ನವೀನ ಪ್ರಯೋಗ ಹೊಂದಿದೆ ಅನ್ನೋ ವಿಚಾರವನ್ನು ಹೇಳಿದ್ದರು. ಇದೀಗ ಆ ಸ್ಕ್ರೀನ್ ಪ್ಲೇ ಚಮತ್ಕಾರ ಸೆನ್ಸಾರ್ ಮಂಡಳಿ ಅಧಿಕಾರಿಗನ್ನೂ ಥ್ರಿಲ್ ಆಗಿಸಿದೆ.

    ನನ್ನ ಪ್ರಕಾರ ಚಿತ್ರಕ್ಕೆ ಯು/ಎ ಸರ್ಟಿಫಿಕೆಟ್ ಸಿಕ್ಕಿದೆ. ಇದರೊಂದಿಗೆ ಸೆನ್ಸಾರ್ ಮಂಡಳಿ ಅಧಿಕಾರಿಗಳ ಕಡೆಯಿಂದ ಭರಪೂರವಾದ ಮೆಚ್ಚುಗೆಗಳೂ ಸಿಕ್ಕಿವೆ. ಪ್ರಧಾನವಾಗಿ ಅವರಿಗೆ ನನ್ನಪ್ರಕಾರದಲ್ಲಿ ಮಾಡಲಾಗಿರೋ ಸ್ಕ್ರೀನ್ ಪ್ಲೇ ಪ್ರಯೋಗಗಳು ಇಷ್ಟವಾಗಿವೆ. ಇತ್ತೀಚೆಗೆ ತಾವು ನೋಡಿದ ಚಿತ್ರಗಳ ಸಾಲಿನಲ್ಲಿ ಇದೊಂದು ಅದ್ಭುತವಾದ ಸ್ಕ್ರೀನ್‍ಪ್ಲೇ ಪ್ರಯೋಗ ಹೊಂದಿರೋ ಚಿತ್ರ ಎಂಬ ಮುಕ್ತಕಂಠದ ಮೆಚ್ಚುಗೆಯೂ ಅವರ ಕಡೆಯಿಂದ ಸಿಕ್ಕಿದೆ. ಇದರಿಂದ ನಿರ್ದೇಶಕ ವಿನಯ್ ಬಾಲಾಜಿ ಸೇರಿದಂತೆ ಇಡೀ ಚಿತ್ರತಂಡವೇ ಸಂತಸಗೊಂಡಿದೆ.

    ಸೆನ್ಸಾರ್ ಮಂಡಳಿ ಅಧಿಕಾರಿಗಳು ಹೀಗೆ ಮೆಚ್ಚುಗೆ ಸೂಚಿಸಿರೋದು ಇಡೀ ಚಿತ್ರದಲ್ಲಿ ಸ್ಕ್ರೀನ್ ಪ್ಲೇ ಕಸುವೆಂಥಾದ್ದಿದೆ ಅನ್ನೋದಕ್ಕೆ ಸ್ಪಷ್ಟ ಸಾಕ್ಷಿ. ಕೇವಲ ಸ್ಕ್ರೀನ್ ಪ್ಲೇನಲ್ಲಿ ಮಾತ್ರವಲ್ಲದೇ ಎಲ್ಲ ವಿಚಾರಗಳಲ್ಲಿಯೂ ಇಂಥಾದ್ದೇ ಹೊಸತನ ಮತ್ತು ಹೊಸಾ ಪ್ರಯೋಗಗಳೊಂದಿಗೆ ನನ್ನಪ್ರಕಾರ ಚಿತ್ರ ರೂಪಿಸಲ್ಪಟ್ಟಿದೆಯಂತೆ. ಇದೆಲ್ಲವೂ ಪ್ರೇಕ್ಷಕರಿಗೆ ಹೊಸಾ ಫೀಲ್ ನೀಡಲಿವೆ. ಇದು ಸಸ್ಪೆನ್ಸ್ ಥ್ರಿಲ್ಲರ್ ಮಾದರಿಯ ಚಿತ್ರವಾದರೂ ಅದನ್ನು ಮೀರಿದ ಸಸ್ಪೆನ್ಸುಗಳು ಪ್ರೇಕ್ಷಕರಿಗಾಗಿ ಕಾದಿವೆ.

  • `ದಿ ವಿಲನ್’ ಸಿನಿಮಾಗೆ ಸೆನ್ಸಾರ್ ಸಂಕಷ್ಟ!

    `ದಿ ವಿಲನ್’ ಸಿನಿಮಾಗೆ ಸೆನ್ಸಾರ್ ಸಂಕಷ್ಟ!

    ಬೆಂಗಳೂರು: ಸ್ಯಾಂಡಲ್‍ವುಡ್ ನ ಬಹುನಿರೀಕ್ಷಿತ ಮಲ್ಟಿಸ್ಟಾರ್ ಅಭಿನಯದ `ದಿ ವಿಲನ್’ ಸಿನಿಮಾಗೆ ಸೆನ್ಸಾರ್ ಮಂಡಳಿಯಿಂದ ಸಂಕಷ್ಟ ಎದುರಾಗಿದೆ.

    `ದಿ ವಿಲನ್’ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಅಭಿನವ ಚಕ್ರವರ್ತಿ ಸುದೀಪ್ ಒಟ್ಟಿಗೆ ಅಭಿನಯಿಸಿದ್ದಾರೆ. ಸದ್ಯಕ್ಕೆ ಈ ಸಿನಿಮಾ ಸೆನ್ಸಾರ್ ಅಂಗಳದಲ್ಲಿದೆ. ಸೆನ್ಸಾರ್ ಮಂಡಳಿ `ದಿ ವಿಲನ್’ ಸಿನಿಮಾ ವೀಕ್ಷಿಸಿದ ಬಳಿಕ `ಎ’ ಸರ್ಟಿಫಿಕೇಟ್ ಕೊಡಲು ಮುಂದಾಗಿದೆ. ಆದರೆ `ಎ’ ಸರ್ಟಿಫಿಕೇಟ್ ಬಗ್ಗೆ ನಿರ್ದೇಶಕ ಪ್ರೇಮ್ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

    ಮಲ್ಟಿಪ್ಲೆಕ್ಸ್ ನಲ್ಲಿ `ಎ’ ಸರ್ಟಿಫಿಕೇಟ್ ನೀಡುವುದರಿಂದ ಹೆಚ್ಚಿನ ಎಫೆಕ್ಟ್ ಆಗುತ್ತದೆ ಎಂದು ಚಿತ್ರತಂಡದ ಜೊತೆ ಚರ್ಚೆ ನಡೆಸಿದ್ದಾರೆ. ಬಳಿಕ ಸೆನ್ಸಾರ್ ಮಂಡಳಿ `ಯು’ ಸರ್ಟಿಫಿಕೇಟ್ ನೀಡಲು ಮುಂದಾಗಿದ್ದು, `ಯು’ ಸರ್ಟಿಫಿಕೇಟ್ ಬೇಕಾದರೆ ಸಿನಿಮಾದಲ್ಲಿಯ 10 ನಿಮಿಷದ ದೃಶ್ಯವನ್ನು ಕತ್ತರಿಸುವುದಕ್ಕೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

    ಇತ್ತೀಚೆಗಷ್ಟೇ `ದಿ ವಿಲನ್’ ಚಿತ್ರತಂಡ ಅದ್ಧೂರಿಯಾಗಿ ಕಾರ್ಯವನ್ನು ಆಯೋಜನೆ ಮಾಡಿ ಅಲ್ಲಿ ಆಡಿಯೋ ಲಾಂಚ್ ಮಾಡಿತ್ತು. ಈ ಹಿಂದೆಯೂ ಕೂಡ `ದಿ ವಿಲನ್’ ಸಿನಿಮಾದ ಟೀಸರ್ ಬಿಡುಗಡೆಗೊಂಡಾಗ ವಿವಾದವೂ ಹುಟ್ಟಿಕೊಂಡಿತ್ತು. ಅನೇಕ ಕಾರಣಗಳನ್ನ ಮುಂದಿಟ್ಟು ಶಿವಣ್ಣ ಅವರಿಗೆ ಈ ಚಿತ್ರದಲ್ಲಿ ಅವಮಾನ ಮಾಡಲಾಗಿದೆ ಎಂದು ಶಿವರಾಜ್‍ಕುಮಾರ್ ಅಭಿಮಾನಿಗಳು `ದಿ ವಿಲನ್’ ಸಿನಿಮಾ ಬಹಿಷ್ಕಾರ ಹಾಕುತ್ತೇವೆ ಎಂದು ಹಠ ಹಿಡಿದು, ಅನೇಕ ಷರತ್ತುಗಳನ್ನ ಮುಂದಿಟ್ಟಿದ್ದರು.

    ಈ ಬಗ್ಗೆ ನಿರ್ದೇಶಕ ಪ್ರೇಮ್ ಪ್ರತಿಕ್ರಿಯಿಸಿ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ್ದರು. “ಕಳೆದ ಕೆಲ ದಿನಗಳಿಂದ ಕೆಲ ಮಾಧ್ಯಮಗಳಲ್ಲಿ ಶಿವಣ್ಣ ಅವರ ವಿಚಾರವಾಗಿ ಪ್ರೇಮ್ ಅವರಿಗೆ ಅಸಮಾಧಾನವಿದೆ ಎಂದು ವರದಿಯಾಗಿತ್ತು. ಆದರೆ ಈ ಕುರಿತು ನಿರ್ಧಾರ ಮಾಡಬೇಕಾಗಿದ್ದು ಶಿವಣ್ಣ ಅವರು, ಒಂದೊಮ್ಮೆ ಶಿವಣ್ಣ ಅವರು ಪ್ರಶ್ನೆ ಮಾಡಿದರೆ ಅದಕ್ಕೆ ಉತ್ತರಿಸುತ್ತೇನೆ. ಸಿನಿಮಾ ಬಿಡುಗಡೆಗೂ ಮೊದಲೇ ಅಸಮಾಧಾನ ವ್ಯಕ್ತಪಡಿಸಿದರೆ ನಾನು ಏನು ಮಾಡಲು ಸಾಧ್ಯ. ಆದ್ದರಿಂದ ಸಿನಿಮಾ ಬಂದರೆ ನಿಮಗೆ ಈ ಕುರಿತು ಸಂಪೂರ್ಣ ಮಾಹಿತಿ ಲಭಿಸಲಿದೆ. ತಾಳ್ಮೆವಹಿಸಿ, ಅತೀ ಶೀಘ್ರದಲ್ಲಿ ನಿಮ್ಮ ಮುಂದೇ ಸಿನಿಮಾ ತರುತ್ತೇನೆ ಎಂದು ಹೇಳಿದ್ದರು.

    ಸ್ಯಾಂಡಲ್‍ವುಡ್‍ನ ಬಹು ನಿರೀಕ್ಷಿತ `ದಿ ವಿಲನ್’ ಸಿನಿಮಾವು ಪ್ರೇಮ್ ನಿರ್ದೇಶನದಲ್ಲಿ ಮೂಡಿಬರುತ್ತಿದ್ದು, ಇದೊಂದು ಮಲ್ಟಿ ಸ್ಟಾರ್ ಗಳ ಚಿತ್ರವಾಗಿದೆ. ಇದರಲ್ಲಿ ವಿಶೇಷತೆ ಎಂದರೆ ಕಿಚ್ಚ ಮತ್ತು ಶಿವಣ್ಣ ಒಟ್ಟಾಗಿ ಆಭಿನಯಿಸುತ್ತಿರುವುದು. ಈ ಸಿನಿಮಾದಲ್ಲಿ ಬಹುಭಾಷಾ ನಟಿ ಆಮಿ ಜಾಕ್ಸನ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತದಲ್ಲಿ ಈ ಚಿತ್ರ ಮೂಡಿಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಂಜನಿಪುತ್ರದ ವಿರುದ್ಧ ನಾನು ದೂರು ನೀಡಿದ್ದು ಯಾಕೆ? ವಕೀಲ ನಾರಾಯಣಸ್ವಾಮಿ ಆರೋಪಿಸಿದ್ದು ಹೀಗೆ

    ಅಂಜನಿಪುತ್ರದ ವಿರುದ್ಧ ನಾನು ದೂರು ನೀಡಿದ್ದು ಯಾಕೆ? ವಕೀಲ ನಾರಾಯಣಸ್ವಾಮಿ ಆರೋಪಿಸಿದ್ದು ಹೀಗೆ

    ಬೆಂಗಳೂರು: ಈ ವರ್ಷದ ಬಹುನಿರೀಕ್ಷಿತ ಸಿನಿಮಾ ಮೂರು ದಿನಗಳ ಹಿಂದೆ ಬಿಡುಗಡೆಗೊಂಡಿದೆ. ಸಿನಿಮಾ ರಿಲೀಸ್ ಆದ ಬಳಿಕ ಒಂದಿಲ್ಲೊಂದು ತೊಂದರೆಗಳನ್ನು ಅನುಭವಿಸುತ್ತಾ ಬಂದಿದೆ. ಈಗ ಸಿನಿಮಾದಲ್ಲಿ ವಕೀಲರ ಬಗ್ಗೆ ವಿವಾದಾತ್ಮಕ ಹೇಳಿಕೆ ಇದೆ ಎಂದು ಆರೋಪಿಸಿ ವಕೀಲ ನಾರಾಯಣಸ್ವಾಮಿ ಚಿತ್ರ ಪ್ರದರ್ಶನಕ್ಕೆ ತಡೆ ತಂದಿದ್ದಾರೆ.

    ಸಿನಿಮಾ ವಿರುದ್ಧ ನಾನು ದೂರು ನೀಡಿದ್ದು ಯಾಕೆ ಎನ್ನುವುದಕ್ಕೆ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ನಾರಾಯಣಸ್ವಾಮಿ, ಚಿತ್ರದಲ್ಲಿ ನಟ ರವಿಶಂಕರ್ ಪೊಲೀಸ್ ಪಾತ್ರಧಾರಿಯಲ್ಲಿ ಕಾಣಿಸಿಕೊಂಡಿದ್ದಾರೆ. ರವಿಶಂಕರ್ ಅವರ ಕಡೆಯಿಂದ ವಕೀಲರೊಬ್ಬರ ಎದುರು ಪಂಚಿಂಗ್ ಡೈಲಾಗ್ ಹೇಳಿಸಲಾಗಿದೆ. ಈ ಡೈಲಾಗ್ ನಿಂದ ಎಲ್ಲ ವಕೀಲರಿಗೂ ಅವಮಾನವಾಗಿದ್ದು, ಚಿತ್ರದ ಬಗ್ಗೆ ಎಲ್ಲ ವಕೀಲರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಕೋರ್ಟ್ ನಲ್ಲಿ ಸಿನಿಮಾದಲ್ಲಿರುವ ವಿವಾದಾತ್ಮಕ ಡೈಲಾಗ್ ತೆಗೆಯುವರೆಗೂ ತಡೆಕೋರುವಂತೆ ದೂರು ಸಲ್ಲಿಸಲಾಗಿತ್ತು. ಇಂದು ಕೋರ್ಟ್ ತನ್ನ ಆದೇಶ ನೀಡಿದ್ದು, ಈ ಕೂಡಲೇ ಸಿನಿಮಾದ ಪ್ರದರ್ಶನ ನಿಲ್ಲಿಸಬೇಕಾಗುತ್ತದೆ ಎಂದು ಆದೇಶಿಸಿದೆ ಎಂದು ತಿಳಿಸಿದರು.

    ಸಿನಿಮಾದ ದೂರಿನ ಬಗ್ಗೆ ವಕೀಲರ ಸಂಘದ ಅಧ್ಯಕ್ಷ ಶಿವರಾಮ್ ಪ್ರತಿಕ್ರಿಯಿಸಿದ್ದು, ಚಿತ್ರದ ಒಂದು ಭಾಗದಲ್ಲಿ ಪೊಲೀಸ್ ಪಾತ್ರಧಾರಿ ರವಿಶಂಕರ್, ವಕೀಲರ ಬಗ್ಗೆ ಅವಹೇಳನಾಕಶರಿ ಹೇಳಿಕೆ ನೀಡಿದ್ದಾರೆ. ಪೊಲೀಸರು ಮಾತನಾಡುತ್ತಿರುವ ಈ ಡೈಲಾಗ್ ಇರುವ ದೃಶ್ಯವನ್ನು ತೆಗೆದು ಹಾಕುವಂತೆ ಮನವಿ ಮಾಡಲಾಗಿದೆ. ಸದ್ಯ ಈ ಕ್ಷಣದಲ್ಲಿ ಆದೇಶ ಬಂದಿದ್ದು, ಎಲ್ಲಾ ಶೋಗಳನ್ನು ರದ್ದು ಮಾಡಬೇಕಾಗುತ್ತದೆ. ಸಿನಿಮಾದಲ್ಲಿ ಬಳಸಿದ ಆ ಪದವನ್ನು ತೆಗೆದರೆ ನಮ್ಮ ಅಭ್ಯಂತರವಿಲ್ಲ. ಕೋರ್ಟ್ ಆರ್ಡರ್ ಕಾಪಿ ಇಂದು ಸಿಗೋದು ಅನುಮಾನ. ಆದ್ರೆ ನಮ್ಮ ಕೋರ್ಟ್ ವೆಬ್ ಸೈಟ್ ನಲ್ಲಿ ಆದೇಶದ ಪ್ರತಿ ಸಿಗಲಿದೆ. ಇದೂವರೆಗೂ ಚಿತ್ರದ ನಿರ್ಮಾಪಕರು, ನಿರ್ದೇಶಕರು ನಮ್ಮನ್ನು ಸಂಪರ್ಕಿಸಿಲ್ಲ. ಆ ಒಂದು ಪಂಚಿಂಗ್ ಡೈಲಾಗ್ ಡಿಲೀಟ್ ಮಾಡಬೇಕು ಎನ್ನುವುದೇ ನಮ್ಮ ಒತ್ತಾಯವಾಗಿದೆ. ಚಿತ್ರತಂಡ ಜನವರಿ 2 ರವರೆಗೆ ಕಾಯುವ ಅಗತ್ಯವಿಲ್ಲ, ಸಿನಿಮಾದಿಂದ ಎಷ್ಟು ಬೇಗ ಆ ಪದವನ್ನು ತೆಗೆಯುತ್ತಾರೋ ಅಷ್ಟು ಬೇಗ ಪುನಃ ಪ್ರದರ್ಶನ ಮಾಡಬಹುದಾಗಿದೆ. ಪುನೀತ್ ಈ ರೀತಿಯ ಸಿನಿಮಾ ಮಾಡುವವವರಲ್ಲ ಎಲ್ಲೋ ಏನೋ ತಪ್ಪಾಗಿರಬಹುದು ಎಂದು ಹೇಳಿದರು.

    ಏನದು ವಿವಾದಾತ್ಮಕ ಡೈಲಾಗ್? “ನೀನು ಗಂಟೆ ಅಲ್ಲಾಡಿಸೋ ಹಾಗಿದ್ರೆ, ಕೋರ್ಟ್ ನಲ್ಲಿ ಅಲ್ಲಾಡ್ಸು. ಇಲ್ಲಿ ಅಲ್ಲಾಡಿಸಿದ್ರೆ ಕಟ್ ಮಾಡಿ ಬಿಡ್ತೀನಿ” ಎಂದು ರವಿ ಶಂಕರ್ ಇನ್ಸ್ ಪೆಕ್ಟರ್ ಆಗಿ ವಕೀಲರಿಗೆ ಹೇಳುವ ದೃಶ್ಯ ಸಿನಿಮಾದಲ್ಲಿದೆ. ಈ ಸಂಭಾಷಣೆಯಿಂದ ವಕೀಲರಿಗೆ ಅವಮಾನವಾಗಿದೆ. ಹೀಗಾಗಿ ಒಂದೋ ಸಿನಿಮಾ ಪ್ರದರ್ಶನ ರದ್ದು ಮಾಡಿ, ಇಲ್ಲವೇ ವಕೀಲರ ಬಗೆಗಿನ ಅವಹೇಳನಕಾರಿ ಮಾತನ್ನು ತೆಗೆಯುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಅಂಜನಿಪುತ್ರ ಸಿನಿಮಾಗೆ ಅಭಿಮಾನಿಯಿಂದ ಬಿಗ್ ಶಾಕ್!

    ಸಿನಿಮಾದಲ್ಲಿ ವಕೀಲರ ಬಗ್ಗೆ ವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಚಿತ್ರ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದ್ದು, ಸ್ಯಾಂಡಲ್‍ವುಡ್ ನ ದೊಡ್ಮನೆ ಹುಡುಗ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರದ’ ಸಿನಿಮಾ ಇನ್ನೂ 10 ದಿನಗಳ ಕಾಲ ರದ್ದಾಗಿದೆ. ವಕೀಲ ಜಿ. ನಾರಾಯಣಸ್ವಾಮಿ ಅವರು ನಿರ್ದೇಶಕ, ನಿರ್ಮಾಪಕ, ಸೆನ್ಸಾರ್ ಬೋರ್ಡ್, ಫಿಲಂ ಚೇಂಬರ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಅರ್ಜಿ ವಿಚಾರಣೆಯನ್ನು ಶನಿವಾರ ನಡೆಸಿದ ಕೋರ್ಟ್ ಅಂಜನಿಪುತ್ರ ಸಿನಿಮಾ ಪ್ರದರ್ಶನ ಮಾಡದಂತೆ ಆದೇಶಿಸಿ ಜ. 2ಕ್ಕೆ ವಿಚಾರಣೆ ಮುಂದೂಡಿದೆ.

    https://www.youtube.com/watch?v=f7IZoviKUvA

    ಎ.ಹರ್ಷ ನಿರ್ದೇಶನದಲ್ಲಿ, ಎಮ್.ಎನ್.ಕುಮಾರ್ ನಿರ್ಮಾಣದಲ್ಲಿ ಅಂಜನಿಪುತ್ರ ಮೂಡಿಬಂದಿದ್ದು ಗುರುವಾರ ಬಿಡುಗಡೆಯಾಗಿತ್ತು. ಉಗ್ರಂ ಖ್ಯಾತಿಯ ರವಿಬಸ್ರೂರು ಅಂಜನಿಪುತ್ರ ಚಿತ್ರದ ಸಂಗೀತದ ಸಾರಥ್ಯ ವಹಿಸಿದ್ದಾರೆ. ಚಿತ್ರಕ್ಕೆ ಎಂ.ಎನ್. ಕುಮಾರ್ ಅವರು ಬಂಡವಾಳ ಹೂಡಿದ್ದಾರೆ. ಚಿತ್ರದಲ್ಲಿ ರಮ್ಯಾಕೃಷ್ಣ, ರವಿಶಂಕರ್, ಚಿಕ್ಕಣ್ಣ ಸೇರಿದಂತೆ ಬಹುದೊಡ್ಡ ತಾರಾಗಣವಿದ್ದು, ನಟಿ ಹರಿಪ್ರಿಯಾ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಪವರ್ ಸ್ಟಾರ್ ಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಕೃಷ್ಣ ಕೂಡ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.