Tag: ಸೆಲೆಬ್ರಿಟಿ

  • ರಸ್ತೆಯಲ್ಲಿ ಅಡುಗೆ ಮಾಡಿ ಖುಷಿಪಟ್ಟ ನಾಗಾರ್ಜುನ ಸೊಸೆ

    ರಸ್ತೆಯಲ್ಲಿ ಅಡುಗೆ ಮಾಡಿ ಖುಷಿಪಟ್ಟ ನಾಗಾರ್ಜುನ ಸೊಸೆ

    ಸೆಲೆಬ್ರಿಟಿಗಳು ಕೆಲವೊಮ್ಮೆ ಸಿಂಪಲ್ ಲೈಫ್ ಇಷ್ಟ ಪಡ್ತಾರೆ ಅನ್ನೋದನ್ನ ನಾವೆಲ್ಲರೂ ಕೇಳಿದ್ದೇವೆ. ಇಂಥಹ ಜೀವನ ಇಷ್ಟ ಪಡುವ ಸೆಲೆಬ್ರಿಟಿಗಳು ಕಡಿಮೆ ಜನರಿರುವ ಜಾಗಕ್ಕೆ ಹೋಗಿ ಸಾಮಾನ್ಯರಂತೆ ಕೆಲ ಸಮಯ ಕಳೆದು ಬರ್ತಾರೆ.

     

    View this post on Instagram

     

    A post shared by Sobhita Dhulipala (@sobhitad)

    ಇದೀಗ ಇಂಥದ್ದೇ ಲೈಫ್ ಫೀಲ್ ಮಾಡಿರುವ ನಟಿ ಶೋಭಿತಾ ಧೂಲಿಪಲಾ (Sobhita Dhulipala) ಸೋಷಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋ ಹಾಗೂ ವೀಡಿಯೋಗಳನ್ನ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ‘ಮಹಾನ್’ ಚಿತ್ರ ಒಪ್ಪಿಕೊಂಡ ಬಿಗ್ ಬಾಸ್ ಖ್ಯಾತಿಯ ನಟಿ ನಮ್ರತಾ

    ಸೂಪರ್ ಸ್ಟಾರ್ ನಾಗಾರ್ಜುನ ಸೊಸೆ, ನಟ ನಾಗಚೈತನ್ಯ ಪತ್ನಿ ಶೋಭಿತಾ ಪ್ರವಾಸದ ವೇಳೆ ಅಡುಗೆ ಮಾಡ್ತಿರುವ ಫೋಟೋ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ಬಿಗ್‌ ಬಾಸ್‌ ಪ್ರೋಮೋ ರಿಲೀಸ್‌ – ಸ್ಪರ್ಧಿಗಳ ಬಗ್ಗೆ ಮಾಹಿತಿಯೂ ಔಟ್‌

    ರಸ್ತೆಯಲ್ಲೇ ಅಡುಗೆ ಸಾಂಬಾರ್ ಮಾಡೋದು, ಬೆಂಡೇಕಾಯಿ ಕಟ್ ಮಾಡುವುದು, ತೆಂಗಿನಕಾಯಿ ಒಡೆಯೋದು,‌ ಕುಟಾಣಿಯಲ್ಲಿ ಕುಟ್ಟುವ ಕೆಲಸ ಮಾಡುತ್ತಿರುವ ಫೋಟೋಸ್ ಗಾಗೂ ವಿಡಿಯೋಗಳನ್ನ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಮ್ಮನೆ ಅವ್ರ ಮನೆ ಒಂದೇ, ನಾವೆಲ್ಲ ಒಂದೇ ಕುಟುಂಬದವರು: ಯಶ್‌ ತಾಯಿ ಪುಷ್ಪ ಅರುಣ್‌ಕುಮಾರ್

    ನಾಗಚೈತನ್ಯ 2ನೇ ಪತ್ನಿಯಾಗಿರುವ ಶೋಭಿತಾ ಸೂಪರ್ ಮಾಡೆಲ್ ಹಾಗೂ ನಟಿಯಾಗಿಯೂ ಗುರುತಿಸಿಕೊಂಡವರು. ಆದ್ರೆ ಇಷ್ಟು ಸರಳವಾಗಿರುತ್ತಾರೆಯೇ ಎಂದು ನೆಟ್ಟಿಗರು ಆಶ್ಚರ್ಯ ಪಡುವಂತೆ ನಡೆದುಕೊಂಡಿದ್ದಾರೆ. ಅಂದಹಾಗೆ ಶೋಭಿತಾಗೆ ಅಡುಗೆ ಮಾಡೋದು ಅಂದ್ರೆ ಇಷ್ಟ ಅನ್ನೋದು ಸಾಬೀತಾಗಿದೆ.

  • ಆಪರೇಷನ್ ಸಿಂಧೂರದ ಬಗ್ಗೆ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

    ಆಪರೇಷನ್ ಸಿಂಧೂರದ ಬಗ್ಗೆ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

    – ಸೆಲೆಬ್ರಿಟಿಗಳಿಂದ ದೇಶಭಕ್ತಿ ನಿರೀಕ್ಷಿಸಬೇಡಿ ಎಂದ ಆಂಧ್ರ ಡಿಸಿಎಂ

    ಪರೇಷನ್ ಸಿಂಧೂರದ (Operation Sindoor) ಬಗ್ಗೆ ನಟರು, ಸೆಲೆಬ್ರಿಟಿಗಳು ಮಾತನಾಡುತ್ತಿಲ್ಲ ಎಂದು ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ (Pawan Kalyan) ಅಸಮಾಧಾನ ಹೊರಹಾಕಿದ್ದಾರೆ.

    ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಮಾತನಾಡಿದ ಅವರು, ಸೆಲೆಬ್ರಿಟಿಗಳು (Celebrities) ಮಾತಾನಾಡುತ್ತಿಲ್ಲ, ಹೀರೋಗಳು ಮಾತಾನಾಡುತ್ತಿಲ್ಲ. ಬಾಲಿವುಡ್ ಹೀರೋಗಳು ಮಾತಾನಾಡುತ್ತಿಲ್ಲ ಅಂದರೆ ಅವರು ಮನರಂಜನೆ ಕೊಡುವವರು, ಒಳ್ಳೆಯ ಪ್ರದರ್ಶನ ಕೊಡುವವರು ಅಷ್ಟೇ. ಅರ‍್ಯಾರು ದೇಶವನ್ನು ನಡೆಸುವ ವ್ಯಕ್ತಿಗಳಲ್ಲ. ಸೆಲೆಬ್ರಿಟಿಗಳಿಂದ ದೇಶಭಕ್ತಿ ನಿರೀಕ್ಷಿಸಬೇಡಿ ಎಂದರು. ಇದನ್ನೂ ಓದಿ: ಇಂದು RCB vs KKR ಪಂದ್ಯ – ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಬಾಂಬ್ ಸ್ಕ್ವಾಡ್‌ ಪರಿಶೀಲನೆ

    ದೇಶಭಕ್ತಿ ಎಂದರೆ ಮುರಳಿ ನಾಯ್ಕ್‌ನಂಥವರು. ಮುರಳಿ ನಾಯ್ಕ್ 24 ವರ್ಷದ ಯುವಕ. ದೇಶಕ್ಕೋಸ್ಕರ ಸಿನಿಮಾ ನೋಡಲಿಲ್ಲ, ಸಿನಿಮಾ ಬಗ್ಗೆ ಹೇಳಲಿಲ್ಲ. ಆದರೆ ಭಾರತ್ ಮಾತಾ ಕೀ ಜೈ ಹೇಳಿದ. ಯಾವಾಗ ಭಾರತ ಮಾತೆಯನ್ನು ಪ್ರೀತಿಸುತ್ತಾರೋ ಅವರು ನಿಜವಾದ ದೇಶ ಪ್ರಜೆಗಳು. ಸಿನಿಮಾ ಬರಬಹುದು, ಹೋಗಬಹುದು ಎಂದು ಯೋಧ ಮುರಳಿ ಶೌರ್ಯಕ್ಕೆ ಸೆಲ್ಯೂಟ್ ಹೊಡೆದರು. ಇದನ್ನೂ ಓದಿ: ಆಪರೇಷನ್‌ ಸಿಂಧೂರದ ಬಗ್ಗೆ ಪಾಕ್‌ಗೆ ಮಾಹಿತಿ ನೀಡುತ್ತಿದ್ದ ಹರಿಯಾಣದ ಯುವಕ ಅರೆಸ್ಟ್

  • ಸೆಲೆಬ್ರಿಟಿಯ ಬದುಕನ್ನು ಜೈಲುವಾಸಕ್ಕೆ ಹೋಲಿಸಿದ ನಟ ಜಗ್ಗೇಶ್

    ಸೆಲೆಬ್ರಿಟಿಯ ಬದುಕನ್ನು ಜೈಲುವಾಸಕ್ಕೆ ಹೋಲಿಸಿದ ನಟ ಜಗ್ಗೇಶ್

    ಜಗ್ಗೇಶ್ (Jaggesh) ಸೆಲೆಬ್ರಿಟಿ ಬದುಕು ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಜೊತೆಗೆ ತಾವು ಕಂಡುಂಡ ಅನುಭವಗಳನ್ನು ಅದರಲ್ಲಿ ಸೇರಿಸಿದ್ದಾರೆ. ಅವರ ಬರಹ ಇಲ್ಲಿದೆ.

    ಸೆಲಿಬ್ರಿಟಿ (Celebrity) ಆಗಲು ಎಲ್ಲರೂ ಒಂದಿಲ್ಲಾ ಒಂದು ರೀತಿ ಯತ್ನಿಸುತ್ತಾರೆ ಕೆಲವರು ನಟ ನಟಿ, ಇನ್ನೂ ಕೆಲವರು ರಂಗಕಲಾವಿದರಾಗಿ, ಕೆಲವರು ಟಿವಿ, ಕೆಲವರು ತಮ್ಮ ಮೊಬೈಲ್ ಮೂಲಕ, ಮತ್ತೆ ಕೆಲವರು ಯೂಟ್ಯೂಬ್ ಮೂಲಕ ಒಟ್ಟಾರೆ ಹೇಗಾದರು ಸರಿ ಸೆಲಿಬ್ರಿಟಿ ಆಗಲೆಬೇಕು. ಆಗದಿದ್ದರೆ ಡಿಪ್ರೇಷನ್ ಗೆ ಒಳಗಾಗುತ್ತಾರೆ. ಆದರೆ ನಾನು ಸೆಲಿಬ್ರಿಟಿ ಕನಸು ಕಂಡವನಲ್ಲ. ಕಟ್ಟಿಕೊಂಡ ಮಡದಿ ಹಾಗು ಸಾಧಿಸಿ ಸಾಯಬೇಕು ಎಂಬ ಸಾಮಾನ್ಯ ಮನುಷ್ಯನ ಕನಸು ಮಾತ್ರ ಆಗಿತ್ತು. ಯಾವ ದೇವರ ವರವೋ ಯಾವ ಗುರುವಿನ ಕೃಪೆಯೋ ಅನ್ನದ ಸೂರಿನ ಜೊತೆ ದೊಡ್ಡ ಹೆಸರು ಪ್ರಾಪ್ತವಾಯಿತು. ಜೊತೆಗೆ ನನ್ನ ವೈಯಕ್ತಿಕ ಸಂತೋಷ ಕಮರಿಹೋಯಿತು.

    JAGGESH

    ಎಲ್ಲರಂತೆ ಎಲ್ಲಾ ಕಡೆ ಎಲ್ಲಾ ಸಂತೋಷ ನೋಡುವ ಯೋಗ ಇಲ್ಲವಾಯಿತು. ಪ್ರತಿದಿನ ಯಾರು ಏನು ಹೇಳುತ್ತಾರೋ, ಯಾರು ತಪ್ಪು ಕಂಡು ಹಂಗಿಸುತ್ತಾರೋ, ಯಾರು ನಮ್ಮ ಬಾಯಿಂದ ಬಂದ ಅರಿಯದ ಮಾತು ಬಳಸಿ ಲೈಕ್ಸ್ ಪಡೆದು ಗಹಗಹಿಸಿ ನಗುತ್ತಾರೋ, ನನ್ನ ಖಾಸಗಿ ಸಂತೋಷವನ್ನು ಕಾಣದಂತೆ ಮೊಬೈಲ್ ನಲ್ಲಿ ಚಿತ್ರಿಸಿ ಲೈಕ್ಸ್ ಗಾಗಿ ಸಂಭ್ರಮಿಸೋ ಪುಣ್ಯಾತ್ಮರು ಬರುತ್ತಾರೋ.. ಯಾರು ನನ್ನ ಕೇಡು ಬಯಸುತ್ತಾರೋ ಒಟ್ಟಾರೆ ಸೆಲಿಬ್ರಿಟಿ ಬದುಕು ಜೀವನ ಪರ್ಯಂತ ಜೈಲುವಾಸ ಬದುಕು ಅಥವ ಮಹಡಿ ಮನೆಯ ಒಂಟಿ ಭಿಕ್ಷುಕನ ಜೀವನ ಸೆಲಿಬ್ರಿಟಿಯ ಬದುಕು.

    ಇದನ್ನೆಲ್ಲಾ ಬದಿಗೊತ್ತಿ ನಾನು ಎಲ್ಲರಂತೆ ಸ್ವತಂತ್ರ ಜೀವಿಯೋ ಅಥವಾ ಪಂಜರದಿಂದ ಹಾರಿ ಪರಿಸರ ಸವಿಯೋ ಪಕ್ಷಿಯಂತೆ ಒಬ್ಬಂಟಿಯಾಗಿ ಆನಂದ ಪಡೆಯೋ ಯತ್ನ ಮಾಡುತ್ತಿದ್ದೇನೆ. ಇದರಲ್ಲಿ ಪೂರ್ಣಸಂತೋಷ ಸಿಗುತ್ತಿದೆಯೇ ಸತ್ಯವಾಗಿಯೂ ಇಲ್ಲ. ಏನೋ ಒಂದೆ ಕಡೆ ಗೂಬೆಯಂತೆ ಇರಬಾರದು ಎಂಬ ಸಣ್ಣ ಪರಿವರ್ತನೆ ಅಷ್ಟೆ ಈ ಸೆಲಿಬ್ರಿಟಿಯ ಬದುಕು.

     

    ನಾನು ನನ್ನ ಸಹಾಯಕ ರಸ್ತೆಯಲ್ಲಿ ಸಿಕ್ಕ ತಾಟಿಲಿಂಗು ವ್ಯಾಪಾರಿಯ ಜೊತೆ ವ್ಯಾಪಾರ ಮುಗಿಸಿ ಅವನಿಗೆ ಸಂತೋಷ ಆಗುವಂತೆ ಅವನ ಬಂಡವಾಳ ಎರಡು ಹಣ್ಣಿಗೆ ನೀಡಿದಾಗ ಅವನ ಕಂಗಳ ಆನಂದಭಾಷ್ಪ. ಶಿವನ ಜಲಾಭಿಷೇಕದಂತೆ ಭಾಸವಾಯಿತು. ಸೆಲೆಬ್ರಿಟಿಯ ಬದುಕು ಕಂಡು ನೀವು ಸೆಲಿಬ್ರಿಟಿ ಆಗಬೇಕಾ, ಇಲ್ಲಾ ಸೆಲಿಬ್ರಿಟಿಯ ಮೇಲೆ ಪ್ರೀತಿ ಕರುಣೆ ತೋರಬೇಕ. ದೇವರು ವಾಸಮಾಡೋ ನಿಮ್ಮ ಹೃದಯಕ್ಕೆ ಸೇರಿದ್ದು. ಜೀವನ ನಾಟಕರಂಗ, ಸಮಾಜವೆ ರಂಗಮಂದಿರ, ದೇವರೆ ಸೂತ್ರದಾರ, ಅಭಿಮಾನಿಗಳೆ ಬಂಧುಮಿತ್ರರ.

  • ವಿಧಾನಸಭೆ ಚುನಾವಣೆ 2023: ಕಣದಲ್ಲಿದ್ದ ಸಿನಿಮಾ ಸೆಲೆಬ್ರಿಟಿಗಳ ಕನಸು ನನಸಾಗತ್ತಾ?

    ವಿಧಾನಸಭೆ ಚುನಾವಣೆ 2023: ಕಣದಲ್ಲಿದ್ದ ಸಿನಿಮಾ ಸೆಲೆಬ್ರಿಟಿಗಳ ಕನಸು ನನಸಾಗತ್ತಾ?

    ಬಾರಿ ವಿಧಾನಸಭೆ (Assembly) ಚುನಾವಣೆಯಲ್ಲಿ (Election) ಕನ್ನಡ ಸಿನಿಮಾ (Sandalwood) ರಂಗದೊಂದಿಗೆ ಗುರುತಿಸಿಕೊಂಡಿರುವ ಹಲವು ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ ಇದ್ದು, ನಾಳೆ ಅವರ ಭವಿಷ್ಯ ಏನಾಗಲಿದೆ ಎನ್ನುವ ಕುತೂಹಲ ಮೂಡಿದೆ. ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಮತ್ತು ಆಮ್ ಆದ್ಮಿ ಪಾರ್ಟಿ ಪಕ್ಷದ ಚಿಹ್ನೆಯಲ್ಲಿ ಸ್ಪರ್ಧೆ ಮಾಡಿರುವ ಅವರು ಗೆಲ್ಲುತ್ತಾರಾ? ಅಥವಾ ಸೋಲುತ್ತಾರಾ ಎನ್ನುವ ಲೆಕ್ಕಾಚಾರ ನೆಡೆದಿದೆ.

    ನಟ ಹಾಗೂ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಸ್ವಾಮಿ, ನಿರ್ಮಾಪಕ ಹಾಗೂ ವಿತರಕ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ, ನಿರ್ಮಾಪಕರಾದ ಮುನಿರತ್ನ ಹಾಗೂ ಉಮಾಪತಿ, ನಟ ಹಾಗೂ ನಿರ್ಮಾಪಕ ಬಿ.ಸಿ.ಪಾಟೀಲ್, ನಟರಾದ ಕುಮಾರ್ ಬಂಗಾರಪ್ಪ, ನಿರ್ದೇಶಕ ಸ್ಮೈಲ್ ಶ್ರೀನು, ನಟ ಟೆನ್ನಿಸ್ ಕೃಷ್ಣ ಈ ಬಾರಿ ವಿಧಾನಸಭೆ ಚುನಾವಣೆ ಕಣದಲ್ಲಿದ್ದಾರೆ. ವಿಜಯಲಕ್ಷ್ಮಿ ಯಾರಿಗೆ ಒಲಿಯಲಿದ್ದಾಳೆ ಎನ್ನುವ ಕುತೂಹಲ ಹೆಚ್ಚಾಗಿದೆ. ಇದನ್ನೂ ಓದಿ:ಕಸ್ಟಡಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆದ ನಾಗ ಚೈತನ್ಯ

    ಸಿಎಂ ಕುಮಾರಸ್ವಾಮಿ, ನಿರ್ಮಾಪಕ ಮುನಿರತ್ನ, ನಟ ಬಿ.ಸಿ.ಪಾಟೀಲ್ ಮತ್ತು ಕುಮಾರ್ ಬಂಗಾರಪ್ಪ ಈಗಾಗಲೇ ಹಲವು ಬಾರಿ ಗೆದ್ದಿದ್ದಾರೆ. ಉಮಾಪತಿ, ಸ್ಮೈಲ್ ಶ್ರೀನು ಮತ್ತು ಟೆನ್ನಿಸ್ ಕೃಷ್ಣ ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗೆ ತಮ್ಮನ್ನು ತಾವು ಒಡ್ಡಿಕೊಂಡಿದ್ದಾರೆ. ಈಗಾಗಲೇ ಲೋಕಸಭೆ ಚುನಾವಣೆಗೆ ನಿಂತು ಸೋತಿರುವ ನಿಖಿಲ್ ಕುಮಾರಸ್ವಾಮಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡಲು ಸಕಲ ತಯಾರಿ ಮಾಡಿಕೊಂಡಿದ್ದಾರೆ. ನಾಳೆ ಈ ಎಲ್ಲರ ಭವಿಷ್ಯವನ್ನು ಮತದಾರ ಯಾವ ರೀತಿಯಲ್ಲಿ ಬರೆದಿದ್ದಾನೆ ಕಾದು ನೋಡಬೇಕು.

    ಸಿನಿಮಾ ರಂಗಕ್ಕೆ ಸಂಬಂಧಿಸಿದ ಒಟ್ಟು ಎಂಟು ಜನರು ಸ್ಪರ್ಧಾ ಕಣದಲ್ಲಿದ್ದು, ಕನಿಷ್ಠ ಐದು ಜನರಾದರೂ ಗೆಲ್ಲಲಿದ್ದಾರೆ ಎಂಬ ಲೆಕ್ಕಾಚಾರ ಶುರುವಾಗಿದ್ದು, ಐದು ಜನರೂ ಹಳೆಹುಲಿಗಳು ಎನ್ನುವುದು ಗಾಂಧಿನಗರದ ಮಾತು. ಯಾರು ಗೆಲ್ಲುತ್ತಾರೋ, ಯಾರು ಸೋಲುತ್ತಾರೆ ನಾಳೆ ಗೊತ್ತಾಗಲಿದೆ.

  • Photo Album: ವಿಧಾನಸಭೆ ಚುನಾವಣೆ 2023 ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಮತದಾನ

    Photo Album: ವಿಧಾನಸಭೆ ಚುನಾವಣೆ 2023 ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಮತದಾನ

    ಕುಟುಂಬ ಸಮೇತ ಸಾಮಾನ್ಯರಂತೆ ಮತದಾನ ಕೇಂದ್ರಕ್ಕೆ ಬಂದ ಡಾಲಿ ಧನಂಜಯ್ ಮತದಾನ ಮಾಡಿದ್ದಾರೆ. ಸಹೋದರಿ, ಸಹೋದರ ಸೇರಿದಂತೆ ಕುಟುಂಬದ ಸದಸ್ಯರೊಂದಿಗೆ ಅರಸಿಕೆರೆ ತಾಲ್ಲೂಕು ಕಾಳೇನಹಳ್ಳಿ ಮತದಾನ ಕೇಂದ್ರಕ್ಕೆ ಆಗಮಸಿದ್ದ ಧನಂಜಯ್, ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.

    ಬಿಳಿ ಶರ್ಟ್ ಹಾಗೂ ಲುಂಗಿ ಧರಿಸಿದ್ದ ಧನಂಜಯ್, ತಾವು ಕಲಿತಿದ್ದ ಶಾಲೆಯಲ್ಲೇ ಮತದಾನ ಮಾಡಿ ಸಂಭ್ರಮಿಸಿದ್ದರು. ಅದೇ ಸಮಯದಲ್ಲಿ ಆಗಮಿಸಿದ್ದ ಅಭಿಮಾನಿಗಳ ಜೊತೆ ಸೆಲ್ಫಿಗೆ ಸಹಕರಿಸಿದರು. ನೆಚ್ಚಿನ ನಟನ ಜೊತೆ ಅನೇಕರು ಫೋಟೋ ತಗೆಸಿಕೊಂಡು ಖುಷಿ ಪಟ್ಟರು. ಮತದಾನ ಎಷ್ಟು ಶ್ರೇಷ್ಠ ಎನ್ನುವ ಕುರಿತು ಡಾಲಿ ಮಾತನಾಡಿದರು.

    ಡಿವೈನ್ ಸ್ಟಾರ್, ನಟ ರಿಷಬ್ ಶೆಟ್ಟಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ. ಉಡುಪಿ ಜಿಲ್ಲೆ, ಬೈಂದೂರು ತಾಲೂಕಿನ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವೈಟ್ ಅಂಡ್ ವೈಟ್ ಡ್ರೆಸ್ ನಲ್ಲಿ ಬಂದಿದ್ದ ರಿಷಬ್ ಶೆಟ್ಟಿ ಮತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

    ಬೆಳಗ್ಗೆ 7 ಗಂಟೆಯಿಂದಲೇ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದ್ದು, ದಿನದ ಮೊದಲರ್ಧದಲ್ಲೇ ಸ್ಯಾಂಡಲ್ ವುಡ್ ನ ಬಹುತೇಕ ನಟ-ನಟಿಯರು ಹಾಗೂ ತಂತ್ರಜ್ಞರು ಮತದಾನ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. ತಮ್ಮ ಹಕ್ಕನ್ನು ಚಲಾಯಿಸುವುದರ ಜೊತೆಗೆ ಅಭಿಮಾನಿಗಳಿಗೆ ಸಂದೇಶವನ್ನೂ ಸಾರಿದ್ದಾರೆ.

    ನಟ ಯಶ್ ಕತ್ರಿಗುಪ್ಪೆಯಲ್ಲಿ ಮತದಾನ ಮಾಡಿದರೆ, ಸುದೀಪ್ ಪುಟ್ಟೇನಹಳ್ಳಿ, ಶಿವರಾಜ್ ಕುಮಾರ್ ಬ್ಯಾಟರಾಯನ ಪುರ (ರಾಚೇನಹಳ್ಳಿ), ರವಿಚಂದ್ರನ್ ರಾಜಾಜಿನಗರ, ಉಪೇಂದ್ರ ಕತ್ರಿಗುಪ್ಪೆ, ಧ್ರುವ ಸರ್ಜಾ ತ್ಯಾಗರಾಜನಗರ(ಶಾಸ್ರ್ತಿ ನಗರ)

    ರಾಘವೇಂದ್ರ ರಾಜ್ ಕುಮಾರ್  ಸದಾಶಿವನಗರ, ಅಶ್ವಿನಿ ಪುನೀತ್ ರಾಜ್ ಕುಮಾರ್ ಸದಾಶಿವನಗರ, ರಾಧಿಕ ಪಂಡಿತ್ ದೇವಯ್ಯ ಪಾರ್ಕ್, ಸುಧಾರಾಣಿ ಮಲ್ಲೇಶ್ವರಂ, ರಕ್ಷಿತಾ ಪ್ರೇಮ್ ಚಂದ್ರ ಲೇಔಟ್ ಪ್ರೇಮ್ ಚಂದ್ರ ಲೇಔಟ್ ನಲ್ಲಿ ತಮ್ಮ ಮತದಾನ ಮಾಡಿದ್ದಾರೆ.

    ಅಮೂಲ್ಯ ಆರ್ ಆರ್ ನಗರದಲ್ಲಿ ಮತದಾನ ಮಾಡಿದರೆ, ನೆನಪಿರಲಿ ಪ್ರೇಮ್ ಆರ್ ಆರ್ ನಗರ,  ರಚಿತಾ ರಾಮ್ ಆರ್ ಆರ್ ನಗರ, ಮೇಘನಾ ಸರ್ಜಾ ಜೆಪಿ ನಗರ, ತಾರಾ ಜೆ ಪಿ ನಗರ, ದ್ವಾರಕೀಶ್ ಬೊಮ್ಮನಹಳ್ಳಿ, ಸೃಜನ್ ಲೋಕೇಶ್  ಕತ್ರಿಗುಪ್ಪೆ, ಅಜಯ್ ರಾವ್ ರಾಜಾಜಿನಗರ, ಬಿ.ಸರೋಜದೇವಿ ಮಲ್ಲೇಶ್ವರಂ

     ಹರ್ಷಿಕಾ ಪೂಣಚ್ಚ ಕೆ ಆರ್ ಪುರ, ಪೂಜಾ ಗಾಂಧಿ  ಕತ್ರಿಗುಪ್ಪೆ, ಯೋಗರಾಜ್ ಭಟ್ ಗಿರಿ ನಗರ, ಅನಂತ್ ನಾಗ್  ಮಲ್ಲೇಶ್ವರಂ ಮತ ಕೇಂದ್ರಗಳಲ್ಲಿ ತಮ್ಮ ಮತದಾನ ಮಾಡಿದ್ದಾರೆ.

    ಚಂದನ್ ಶೆಟ್ಟಿ ನಾಗರಭಾವಿಯಲ್ಲಿ ಮತದಾನ ಮಾಡಿದರೆ, ಕಾರುಣ್ಯ ರಾಮ್ ಆರ್ ಆರ್ ನಗರ, ಅವಿನಾಶ್  ಆರ್ ಆರ್ ನಗರ, ಜಗ್ಗೇಶ್ ಮಲ್ಲೇಶ್ವರಂ, ಶರಣ್ ಹೊಸಕೆರೆಹಳ್ಳಿ, ದುನಿಯಾ ವಿಜಯ್ ಕತ್ತಿಗುಪ್ಪೆ,  ಸಾಧು ಕೋಕಿಲ ನಾಗರಭಾವಿ, ಅರ್ಜುನ್ ಜನ್ಯ ಹೆಬ್ಬಾಳ, ಶ್ರೀಮುರುಳಿ ವಸಂತನಗರ, ವಿಜಯ್ ರಾಘವೇಂದ್ರ ಯಲಹಂಕ

     ಸಪ್ತಮಿಗೌಡ ಜೆ ಪಿ ನಗರ, ರಮೇಶ್ ಅರವಿಂದ್ ಪದ್ಮನಾಭ ನಗರ, ಮಾಲಾಶ್ರೀ ಶಿವಾಜಿನಗರದಲ್ಲಿ ಮತ ಚಲಾವಣೆ ಮಾಡಿದ್ದಾರೆ.

    ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆರ್ ಆರ್ ನಗರದಲ್ಲಿ ಮತದಾನ ಮಾಡಿದರೆ, ಶ್ರುತಿ ಹೊಸಕೆರೆ ಹಳ್ಳಿ,  ಭಾರತಿ ಜಯನಗರ, ಅನಿರುದ್ದ್ ಜಯನಗರ, ಅಭಿಷೇಕ್ ಅಂಬರೀಶ್ ಹಾಗೂ ಸುಮಲತಾ ಅಂಬರೀಶ್ ಜೆ ಪಿ ನಗರ, ಪ್ರಶಾಂತ್ ನೀಲ್ ವಸಂತನಗರದಲ್ಲಿ ತಮ್ಮ ಮತದಾನದ ಹಕ್ಕುಗಳನ್ನು ಚಲಾಯಿಸಿದ್ದಾರೆ.

    ರಿಷಬ್ ಶೆಟ್ಟಿ ಕೆರಾಡಿ, ಕುಂದಾಪುರ, ರಕ್ಷಿತ್ ಶೆಟ್ಟಿ ಉಡುಪಿ, ರಾಜ್ ಬಿ ಶೆಟ್ಟಿ ಉಡುಪಿ, ನಿಖಿಲ್ ಕುಮಾರಸ್ವಾಮಿ ಕೇತಗನಹಳ್ಳಿ (ಬಿಡದಿ), ಡಾಲಿ ಧನಂಜಯ ಅರಸೀಕೆರೆ, ಅಶಿಕಾ ರಂಗನಾಥ್ ತುಮಕೂರು, ಚಿಕ್ಕಣ್ಣ ಮೈಸೂರು, ಲೀಲಾವತಿ ಸೋಲದೇವನಹಳ್ಳಿ, ವಿನೋದ್ ರಾಜ್ ಸೋಲದೇವನ ಹಳ್ಳಿ, ದೊಡ್ಡಣ್ಣ ಬಿದರುಕಲ್ಲು ಮತದಾನ ಮಾಡಿದ್ದಾರೆ.

  • ವಿಧಾನಸಭೆ ಚುನಾವಣೆ 2023: ಬೈಂದೂರಿನ ಕೆರಾಡಿಯಲ್ಲಿ ನಟ ರಿಷಬ್ ಶೆಟ್ಟಿ ಮತದಾನ

    ವಿಧಾನಸಭೆ ಚುನಾವಣೆ 2023: ಬೈಂದೂರಿನ ಕೆರಾಡಿಯಲ್ಲಿ ನಟ ರಿಷಬ್ ಶೆಟ್ಟಿ ಮತದಾನ

    ಡಿವೈನ್ ಸ್ಟಾರ್, ನಟ ರಿಷಬ್ ಶೆಟ್ಟಿ (Rishabh Shetty) ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ. ಉಡುಪಿ ಜಿಲ್ಲೆ, ಬೈಂದೂರು ತಾಲೂಕಿನ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವೈಟ್ ಅಂಡ್ ವೈಟ್ ಡ್ರೆಸ್ ನಲ್ಲಿ ಬಂದಿದ್ದ ರಿಷಬ್ ಶೆಟ್ಟಿ ಮತದಾನ (Voting) ಮಾಡುವ ಮೂಲಕ ಮಾದರಿಯಾಗಿದ್ದಾರೆ.

    ಕಾಂತಾರ-2 ಸ್ಕ್ರಿಪ್ಟ್ ವರ್ಕ್ ನಲ್ಲಿ ಬ್ಯುಸಿಯಾಗಿರುವ ರಿಷಬ್ ಶೆಟ್ಟಿ, ಮತದಾನಕ್ಕೋಸ್ಕರ ಬಿಡುವು ಮಾಡಿಕೊಂಡು ಮನೆಗೆ ಆಗಮಿಸಿದ್ದರು. ಬೆಳಗ್ಗೆ 11 ಗಂಟೆಗೆ ಮತಗಟ್ಟೆಗೆ ಆಗಮಿಸಿದ ರಿಷಬ್ ಸಾರ್ವಜನಿಕರ ಜೊತೆ ಸರದಿ ಸಾಲಿನಲ್ಲಿ ನಿಂತರು. ಸುಮಾರು 20 ನಿಮಿಷಗಳ ಕಾಲ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಿದರು. ಮತಗಟ್ಟೆ ಸಮೀಪ ಇದ್ದ ರಿಷಬ್ ಅಭಿಮಾನಿಗಳು ಸೆಲ್ಫಿ ತೆಗೆದುಕೊಂಡರು.

    ಬೆಳಗ್ಗೆ 7 ಗಂಟೆಯಿಂದಲೇ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದ್ದು, ದಿನದ ಮೊದಲರ್ಧದಲ್ಲೇ ಸ್ಯಾಂಡಲ್ ವುಡ್ (Sandalwood) ನ ಬಹುತೇಕ ನಟ (Actor) -ನಟಿಯರು (Actress) ಹಾಗೂ ತಂತ್ರಜ್ಞರು ಮತದಾನ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. ತಮ್ಮ ಹಕ್ಕನ್ನು ಚಲಾಯಿಸುವುದರ ಜೊತೆಗೆ ಅಭಿಮಾನಿಗಳಿಗೆ ಸಂದೇಶವನ್ನೂ ಸಾರಿದ್ದಾರೆ.

    ನಟ ಯಶ್ ಕತ್ರಿಗುಪ್ಪೆಯಲ್ಲಿ ಮತದಾನ ಮಾಡಿದರೆ, ಸುದೀಪ್ ಪುಟ್ಟೇನಹಳ್ಳಿ, ಶಿವರಾಜ್ ಕುಮಾರ್ ಬ್ಯಾಟರಾಯನ ಪುರ (ರಾಚೇನಹಳ್ಳಿ), ರವಿಚಂದ್ರನ್ ರಾಜಾಜಿನಗರ, ಉಪೇಂದ್ರ ಕತ್ರಿಗುಪ್ಪೆ, ಧ್ರುವ ಸರ್ಜಾ ತ್ಯಾಗರಾಜನಗರ(ಶಾಸ್ರ್ತಿ ನಗರ), ರಾಘವೇಂದ್ರ ರಾಜ್ ಕುಮಾರ್  ಸದಾಶಿವನಗರ, ಅಶ್ವಿನಿ ಪುನೀತ್ ರಾಜ್ ಕುಮಾರ್ ಸದಾಶಿವನಗರ, ರಾಧಿಕ ಪಂಡಿತ್ ದೇವಯ್ಯ ಪಾರ್ಕ್, ಸುಧಾರಾಣಿ ಮಲ್ಲೇಶ್ವರಂ, ರಕ್ಷಿತಾ ಪ್ರೇಮ್ ಚಂದ್ರ ಲೇಔಟ್ ಪ್ರೇಮ್ ಚಂದ್ರ ಲೇಔಟ್ ನಲ್ಲಿ ತಮ್ಮ ಮತದಾನ ಮಾಡಿದ್ದಾರೆ.

    ಅಮೂಲ್ಯ ಆರ್ ಆರ್ ನಗರದಲ್ಲಿ ಮತದಾನ ಮಾಡಿದರೆ, ನೆನಪಿರಲಿ ಪ್ರೇಮ್ ಆರ್ ಆರ್ ನಗರ,  ರಚಿತಾ ರಾಮ್ ಆರ್ ಆರ್ ನಗರ, ಮೇಘನಾ ಸರ್ಜಾ ಜೆಪಿ ನಗರ, ತಾರಾ ಜೆ ಪಿ ನಗರ, ದ್ವಾರಕೀಶ್ ಬೊಮ್ಮನಹಳ್ಳಿ, ಸೃಜನ್ ಲೋಕೇಶ್  ಕತ್ರಿಗುಪ್ಪೆ, ಅಜಯ್ ರಾವ್ ರಾಜಾಜಿನಗರ, ಬಿ.ಸರೋಜದೇವಿ ಮಲ್ಲೇಶ್ವರಂ, ಹರ್ಷಿಕಾ ಪೂಣಚ್ಚ ಕೆ ಆರ್ ಪುರ, ಪೂಜಾ ಗಾಂಧಿ  ಕತ್ರಿಗುಪ್ಪೆ, ಯೋಗರಾಜ್ ಭಟ್ ಗಿರಿ ನಗರ, ಅನಂತ್ ನಾಗ್  ಮಲ್ಲೇಶ್ವರಂ ಮತ ಕೇಂದ್ರಗಳಲ್ಲಿ ತಮ್ಮ ಮತದಾನ ಮಾಡಿದ್ದಾರೆ.

    ಚಂದನ್ ಶೆಟ್ಟಿ ನಾಗರಭಾವಿಯಲ್ಲಿ ಮತದಾನ ಮಾಡಿದರೆ, ಕಾರುಣ್ಯ ರಾಮ್ ಆರ್ ಆರ್ ನಗರ, ಅವಿನಾಶ್  ಆರ್ ಆರ್ ನಗರ, ಜಗ್ಗೇಶ್ ಮಲ್ಲೇಶ್ವರಂ, ಶರಣ್ ಹೊಸಕೆರೆಹಳ್ಳಿ, ದುನಿಯಾ ವಿಜಯ್ ಕತ್ತಿಗುಪ್ಪೆ,  ಸಾಧು ಕೋಕಿಲ ನಾಗರಭಾವಿ, ಅರ್ಜುನ್ ಜನ್ಯ ಹೆಬ್ಬಾಳ, ಶ್ರೀಮುರುಳಿ ವಸಂತನಗರ, ವಿಜಯ್ ರಾಘವೇಂದ್ರ ಯಲಹಂಕ, ಸಪ್ತಮಿಗೌಡ ಜೆ ಪಿ ನಗರ, ರಮೇಶ್ ಅರವಿಂದ್ ಪದ್ಮನಾಭ ನಗರ, ಮಾಲಾಶ್ರೀ ಶಿವಾಜಿನಗರದಲ್ಲಿ ಮತ ಚಲಾವಣೆ ಮಾಡಿದ್ದಾರೆ.

    ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆರ್ ಆರ್ ನಗರದಲ್ಲಿ ಮತದಾನ ಮಾಡಿದರೆ, ಶ್ರುತಿ ಹೊಸಕೆರೆ ಹಳ್ಳಿ,  ಭಾರತಿ ಜಯನಗರ, ಅನಿರುದ್ದ್ ಜಯನಗರ, ಅಭಿಷೇಕ್ ಅಂಬರೀಶ್ ಹಾಗೂ ಸುಮಲತಾ ಅಂಬರೀಶ್ ಜೆ ಪಿ ನಗರ, ಪ್ರಶಾಂತ್ ನೀಲ್ ವಸಂತನಗರದಲ್ಲಿ ತಮ್ಮ ಮತದಾನದ ಹಕ್ಕುಗಳನ್ನು ಚಲಾಯಿಸಿದ್ದಾರೆ.

    ರಿಷಬ್ ಶೆಟ್ಟಿ ಕೆರಾಡಿ, ಕುಂದಾಪುರ, ರಕ್ಷಿತ್ ಶೆಟ್ಟಿ ಉಡುಪಿ, ರಾಜ್ ಬಿ ಶೆಟ್ಟಿ ಉಡುಪಿ, ನಿಖಿಲ್ ಕುಮಾರಸ್ವಾಮಿ ಕೇತಗನಹಳ್ಳಿ (ಬಿಡದಿ), ಡಾಲಿ ಧನಂಜಯ ಅರಸೀಕೆರೆ, ಅಶಿಕಾ ರಂಗನಾಥ್ ತುಮಕೂರು, ಚಿಕ್ಕಣ್ಣ ಮೈಸೂರು, ಲೀಲಾವತಿ ಸೋಲದೇವನಹಳ್ಳಿ, ವಿನೋದ್ ರಾಜ್ ಸೋಲದೇವನ ಹಳ್ಳಿ, ದೊಡ್ಡಣ್ಣ ಬಿದರುಕಲ್ಲು ಮತದಾನ ಮಾಡಿದ್ದಾರೆ.

  • ವಿಧಾನಸಭೆ ಚುನಾವಣೆ 2023 : ಕುಟುಂಬ ಸಮೇತ ಕಾಳೇನಹಳ್ಳಿಯಲ್ಲಿ ಡಾಲಿ ಮತದಾನ

    ವಿಧಾನಸಭೆ ಚುನಾವಣೆ 2023 : ಕುಟುಂಬ ಸಮೇತ ಕಾಳೇನಹಳ್ಳಿಯಲ್ಲಿ ಡಾಲಿ ಮತದಾನ

    ಕುಟುಂಬ ಸಮೇತ ಸಾಮಾನ್ಯರಂತೆ ಮತದಾನ ಕೇಂದ್ರಕ್ಕೆ ಬಂದ ಡಾಲಿ ಧನಂಜಯ್ (Dolly Dhananjay) ಮತದಾನ (Voting) ಮಾಡಿದ್ದಾರೆ. ಸಹೋದರಿ, ಸಹೋದರ ಸೇರಿದಂತೆ ಕುಟುಂಬದ ಸದಸ್ಯರೊಂದಿಗೆ ಅರಸಿಕೆರೆ ತಾಲ್ಲೂಕು ಕಾಳೇನಹಳ್ಳಿ ಮತದಾನ ಕೇಂದ್ರಕ್ಕೆ ಆಗಮಸಿದ್ದ ಧನಂಜಯ್, ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.

    ಬಿಳಿ ಶರ್ಟ್ ಹಾಗೂ ಲುಂಗಿ ಧರಿಸಿದ್ದ ಧನಂಜಯ್, ತಾವು ಕಲಿತಿದ್ದ ಶಾಲೆಯಲ್ಲೇ ಮತದಾನ ಮಾಡಿ ಸಂಭ್ರಮಿಸಿದ್ದರು. ಅದೇ ಸಮಯದಲ್ಲಿ ಆಗಮಿಸಿದ್ದ ಅಭಿಮಾನಿಗಳ ಜೊತೆ ಸೆಲ್ಫಿಗೆ ಸಹಕರಿಸಿದರು. ನೆಚ್ಚಿನ ನಟನ ಜೊತೆ ಅನೇಕರು ಫೋಟೋ ತಗೆಸಿಕೊಂಡು ಖುಷಿ ಪಟ್ಟರು. ಮತದಾನ ಎಷ್ಟು ಶ್ರೇಷ್ಠ ಎನ್ನುವ ಕುರಿತು ಡಾಲಿ ಮಾತನಾಡಿದರು.

    ಬೆಳಗ್ಗೆ 7 ಗಂಟೆಯಿಂದಲೇ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದ್ದು, ದಿನದ ಮೊದಲರ್ಧದಲ್ಲೇ ಸ್ಯಾಂಡಲ್ ವುಡ್ (Sandalwood) ನ ಬಹುತೇಕ ನಟ (Actor)-ನಟಿಯರು (Actress) ಹಾಗೂ ತಂತ್ರಜ್ಞರು ಮತದಾನ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. ತಮ್ಮ ಹಕ್ಕನ್ನು ಚಲಾಯಿಸುವುದರ ಜೊತೆಗೆ ಅಭಿಮಾನಿಗಳಿಗೆ ಸಂದೇಶವನ್ನೂ ಸಾರಿದ್ದಾರೆ.

    ನಟ ಯಶ್ ಕತ್ರಿಗುಪ್ಪೆಯಲ್ಲಿ ಮತದಾನ ಮಾಡಿದರೆ, ಸುದೀಪ್ ಪುಟ್ಟೇನಹಳ್ಳಿ, ಶಿವರಾಜ್ ಕುಮಾರ್ ಬ್ಯಾಟರಾಯನ ಪುರ (ರಾಚೇನಹಳ್ಳಿ), ರವಿಚಂದ್ರನ್ ರಾಜಾಜಿನಗರ, ಉಪೇಂದ್ರ ಕತ್ರಿಗುಪ್ಪೆ, ಧ್ರುವ ಸರ್ಜಾ ತ್ಯಾಗರಾಜನಗರ(ಶಾಸ್ರ್ತಿ ನಗರ), ರಾಘವೇಂದ್ರ ರಾಜ್ ಕುಮಾರ್  ಸದಾಶಿವನಗರ, ಅಶ್ವಿನಿ ಪುನೀತ್ ರಾಜ್ ಕುಮಾರ್ ಸದಾಶಿವನಗರ, ರಾಧಿಕ ಪಂಡಿತ್ ದೇವಯ್ಯ ಪಾರ್ಕ್, ಸುಧಾರಾಣಿ ಮಲ್ಲೇಶ್ವರಂ, ರಕ್ಷಿತಾ ಪ್ರೇಮ್ ಚಂದ್ರ ಲೇಔಟ್ ಪ್ರೇಮ್ ಚಂದ್ರ ಲೇಔಟ್ ನಲ್ಲಿ ತಮ್ಮ ಮತದಾನ ಮಾಡಿದ್ದಾರೆ.

    ಅಮೂಲ್ಯ ಆರ್ ಆರ್ ನಗರದಲ್ಲಿ ಮತದಾನ ಮಾಡಿದರೆ, ನೆನಪಿರಲಿ ಪ್ರೇಮ್ ಆರ್ ಆರ್ ನಗರ,  ರಚಿತಾ ರಾಮ್ ಆರ್ ಆರ್ ನಗರ, ಮೇಘನಾ ಸರ್ಜಾ ಜೆಪಿ ನಗರ, ತಾರಾ ಜೆ ಪಿ ನಗರ, ದ್ವಾರಕೀಶ್ ಬೊಮ್ಮನಹಳ್ಳಿ, ಸೃಜನ್ ಲೋಕೇಶ್  ಕತ್ರಿಗುಪ್ಪೆ, ಅಜಯ್ ರಾವ್ ರಾಜಾಜಿನಗರ, ಬಿ.ಸರೋಜದೇವಿ ಮಲ್ಲೇಶ್ವರಂ, ಹರ್ಷಿಕಾ ಪೂಣಚ್ಚ ಕೆ ಆರ್ ಪುರ, ಪೂಜಾ ಗಾಂಧಿ  ಕತ್ರಿಗುಪ್ಪೆ, ಯೋಗರಾಜ್ ಭಟ್ ಗಿರಿ ನಗರ, ಅನಂತ್ ನಾಗ್  ಮಲ್ಲೇಶ್ವರಂ ಮತ ಕೇಂದ್ರಗಳಲ್ಲಿ ತಮ್ಮ ಮತದಾನ ಮಾಡಿದ್ದಾರೆ. ಇದನ್ನೂ ಓದಿ:ಶಾಹಿದ್ ಕಪೂರ್ ಜೊತೆ ಪೂಜಾ ಹೆಗ್ಡೆ ರೊಮ್ಯಾನ್ಸ್

    ಚಂದನ್ ಶೆಟ್ಟಿ ನಾಗರಭಾವಿಯಲ್ಲಿ ಮತದಾನ ಮಾಡಿದರೆ, ಕಾರುಣ್ಯ ರಾಮ್ ಆರ್ ಆರ್ ನಗರ, ಅವಿನಾಶ್  ಆರ್ ಆರ್ ನಗರ, ಜಗ್ಗೇಶ್ ಮಲ್ಲೇಶ್ವರಂ, ಶರಣ್ ಹೊಸಕೆರೆಹಳ್ಳಿ, ದುನಿಯಾ ವಿಜಯ್ ಕತ್ತಿಗುಪ್ಪೆ,  ಸಾಧು ಕೋಕಿಲ ನಾಗರಭಾವಿ, ಅರ್ಜುನ್ ಜನ್ಯ ಹೆಬ್ಬಾಳ, ಶ್ರೀಮುರುಳಿ ವಸಂತನಗರ, ವಿಜಯ್ ರಾಘವೇಂದ್ರ ಯಲಹಂಕ, ಸಪ್ತಮಿಗೌಡ ಜೆ ಪಿ ನಗರ, ರಮೇಶ್ ಅರವಿಂದ್ ಪದ್ಮನಾಭ ನಗರ, ಮಾಲಾಶ್ರೀ ಶಿವಾಜಿನಗರದಲ್ಲಿ ಮತ ಚಲಾವಣೆ ಮಾಡಿದ್ದಾರೆ.

    ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆರ್ ಆರ್ ನಗರದಲ್ಲಿ ಮತದಾನ ಮಾಡಿದರೆ, ಶ್ರುತಿ ಹೊಸಕೆರೆ ಹಳ್ಳಿ,  ಭಾರತಿ ಜಯನಗರ, ಅನಿರುದ್ದ್ ಜಯನಗರ, ಅಭಿಷೇಕ್ ಅಂಬರೀಶ್ ಹಾಗೂ ಸುಮಲತಾ ಅಂಬರೀಶ್ ಜೆ ಪಿ ನಗರ, ಪ್ರಶಾಂತ್ ನೀಲ್ ವಸಂತನಗರದಲ್ಲಿ ತಮ್ಮ ಮತದಾನದ ಹಕ್ಕುಗಳನ್ನು ಚಲಾಯಿಸಿದ್ದಾರೆ.

    ರಿಷಬ್ ಶೆಟ್ಟಿ ಕೆರಾಡಿ, ಕುಂದಾಪುರ, ರಕ್ಷಿತ್ ಶೆಟ್ಟಿ ಉಡುಪಿ, ರಾಜ್ ಬಿ ಶೆಟ್ಟಿ ಉಡುಪಿ, ನಿಖಿಲ್ ಕುಮಾರಸ್ವಾಮಿ ಕೇತಗನಹಳ್ಳಿ (ಬಿಡದಿ), ಡಾಲಿ ಧನಂಜಯ ಅರಸೀಕೆರೆ, ಅಶಿಕಾ ರಂಗನಾಥ್ ತುಮಕೂರು, ಚಿಕ್ಕಣ್ಣ ಮೈಸೂರು, ಲೀಲಾವತಿ ಸೋಲದೇವನಹಳ್ಳಿ, ವಿನೋದ್ ರಾಜ್ ಸೋಲದೇವನ ಹಳ್ಳಿ, ದೊಡ್ಡಣ್ಣ ಬಿದರುಕಲ್ಲು ಮತದಾನ ಮಾಡಿದ್ದಾರೆ.

  • ವಿಧಾನಸಭೆ ಚುನಾವಣೆ 2023 : ಮತದಾನ ಮಾಡಿದ ಸ್ಯಾಂಡಲ್ ವುಡ್ ಸುಂದರಿಯರು

    ವಿಧಾನಸಭೆ ಚುನಾವಣೆ 2023 : ಮತದಾನ ಮಾಡಿದ ಸ್ಯಾಂಡಲ್ ವುಡ್ ಸುಂದರಿಯರು

    ಬೆಳಗ್ಗೆ 7 ಗಂಟೆಯಿಂದಲೇ ವಿಧಾನಸಭೆ ಚುನಾವಣೆಯ ಮತದಾನ (Voting) ಪ್ರಕ್ರಿಯೆ ಶುರುವಾಗಿದ್ದು, ದಿನದ ಮೊದಲರ್ಧದಲ್ಲೇ ಸ್ಯಾಂಡಲ್ ವುಡ್ (Sandalwood) ನ ಬಹುತೇಕ ನಟ (Actor) -ನಟಿಯರು (Actress)ಹಾಗೂ ತಂತ್ರಜ್ಞರು ಮತದಾನ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. ತಮ್ಮ ಹಕ್ಕನ್ನು ಚಲಾಯಿಸುವುದರ ಜೊತೆಗೆ ಅಭಿಮಾನಿಗಳಿಗೆ ಸಂದೇಶವನ್ನೂ ಸಾರಿದ್ದಾರೆ.

    ಸ್ಯಾಂಡಲ್ ವುಡ್ ಬೆಡಗಿಯರಾದ ಅಮೂಲ್ಯ, ಆಶಾ ಭಟ್, ಮಿಲನಾ ನಾಗರಾಜ್, ಅನಿತಾ ಭಟ್, ಅಮೃತಾ ಅಯ್ಯಂಗಾರ್, ಮೇಘನಾ ಗಾಂವ್ಕರ್, ಸುಕೃತಾ ವಾಗ್ಲೆ, ಹರಿಪ್ರಿಯಾ, ರಚಿತಾ ರಾಮ್, ಕಾರುಣ್ಯ ರಾಮ್ ಸೇರಿದಂತೆ ಸಾಕಷ್ಟು ನಟಿಯರು ಬೆಳಗ್ಗೆಯೇ ಮತದಾನ ಮಾಡಿದ್ದಾರೆ. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಮತದಾನದ ಮಹತ್ವವನ್ನು ಸಾರಿದ್ದಾರೆ.

    ನಟ ಯಶ್ ಕತ್ರಿಗುಪ್ಪೆಯಲ್ಲಿ ಮತದಾನ ಮಾಡಿದರೆ, ಸುದೀಪ್ ಪುಟ್ಟೇನಹಳ್ಳಿ, ಶಿವರಾಜ್ ಕುಮಾರ್ ಬ್ಯಾಟರಾಯನ ಪುರ (ರಾಚೇನಹಳ್ಳಿ), ರವಿಚಂದ್ರನ್ ರಾಜಾಜಿನಗರ, ಉಪೇಂದ್ರ ಕತ್ರಿಗುಪ್ಪೆ, ಧ್ರುವ ಸರ್ಜಾ ತ್ಯಾಗರಾಜನಗರ(ಶಾಸ್ರ್ತಿ ನಗರ), ರಾಘವೇಂದ್ರ ರಾಜ್ ಕುಮಾರ್  ಸದಾಶಿವನಗರ, ಅಶ್ವಿನಿ ಪುನೀತ್ ರಾಜ್ ಕುಮಾರ್ ಸದಾಶಿವನಗರ, ರಾಧಿಕ ಪಂಡಿತ್ ದೇವಯ್ಯ ಪಾರ್ಕ್, ಸುಧಾರಾಣಿ ಮಲ್ಲೇಶ್ವರಂ, ರಕ್ಷಿತಾ ಪ್ರೇಮ್ ಚಂದ್ರ ಲೇಔಟ್ ಪ್ರೇಮ್ ಚಂದ್ರ ಲೇಔಟ್ ನಲ್ಲಿ ತಮ್ಮ ಮತದಾನ ಮಾಡಿದ್ದಾರೆ.

    ಅಮೂಲ್ಯ ಆರ್ ಆರ್ ನಗರದಲ್ಲಿ ಮತದಾನ ಮಾಡಿದರೆ, ನೆನಪಿರಲಿ ಪ್ರೇಮ್ ಆರ್ ಆರ್ ನಗರ,  ರಚಿತಾ ರಾಮ್ ಆರ್ ಆರ್ ನಗರ, ಮೇಘನಾ ಸರ್ಜಾ ಜೆಪಿ ನಗರ, ತಾರಾ ಜೆ ಪಿ ನಗರ, ದ್ವಾರಕೀಶ್ ಬೊಮ್ಮನಹಳ್ಳಿ, ಸೃಜನ್ ಲೋಕೇಶ್  ಕತ್ರಿಗುಪ್ಪೆ, ಅಜಯ್ ರಾವ್ ರಾಜಾಜಿನಗರ, ಬಿ.ಸರೋಜದೇವಿ ಮಲ್ಲೇಶ್ವರಂ, ಹರ್ಷಿಕಾ ಪೂಣಚ್ಚ ಕೆ ಆರ್ ಪುರ, ಪೂಜಾ ಗಾಂಧಿ  ಕತ್ರಿಗುಪ್ಪೆ, ಯೋಗರಾಜ್ ಭಟ್ ಗಿರಿ ನಗರ, ಅನಂತ್ ನಾಗ್  ಮಲ್ಲೇಶ್ವರಂ ಮತ ಕೇಂದ್ರಗಳಲ್ಲಿ ತಮ್ಮ ಮತದಾನ ಮಾಡಿದ್ದಾರೆ.

    ಚಂದನ್ ಶೆಟ್ಟಿ ನಾಗರಭಾವಿಯಲ್ಲಿ ಮತದಾನ ಮಾಡಿದರೆ, ಕಾರುಣ್ಯ ರಾಮ್ ಆರ್ ಆರ್ ನಗರ, ಅವಿನಾಶ್  ಆರ್ ಆರ್ ನಗರ, ಜಗ್ಗೇಶ್ ಮಲ್ಲೇಶ್ವರಂ, ಶರಣ್ ಹೊಸಕೆರೆಹಳ್ಳಿ, ದುನಿಯಾ ವಿಜಯ್ ಕತ್ತಿಗುಪ್ಪೆ,  ಸಾಧು ಕೋಕಿಲ ನಾಗರಭಾವಿ, ಅರ್ಜುನ್ ಜನ್ಯ ಹೆಬ್ಬಾಳ, ಶ್ರೀಮುರುಳಿ ವಸಂತನಗರ, ವಿಜಯ್ ರಾಘವೇಂದ್ರ ಯಲಹಂಕ, ಸಪ್ತಮಿಗೌಡ ಜೆ ಪಿ ನಗರ, ರಮೇಶ್ ಅರವಿಂದ್ ಪದ್ಮನಾಭ ನಗರ, ಮಾಲಾಶ್ರೀ ಶಿವಾಜಿನಗರದಲ್ಲಿ ಮತ ಚಲಾವಣೆ ಮಾಡಿದ್ದಾರೆ.

    ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ ಆರ್ ಆರ್ ನಗರದಲ್ಲಿ ಮತದಾನ ಮಾಡಿದರೆ, ಶ್ರುತಿ ಹೊಸಕೆರೆ ಹಳ್ಳಿ,  ಭಾರತಿ ಜಯನಗರ, ಅನಿರುದ್ದ್ ಜಯನಗರ, ಅಭಿಷೇಕ್ ಅಂಬರೀಶ್ ಹಾಗೂ ಸುಮಲತಾ ಅಂಬರೀಶ್ ಜೆ ಪಿ ನಗರ, ಪ್ರಶಾಂತ್ ನೀಲ್ ವಸಂತನಗರದಲ್ಲಿ ತಮ್ಮ ಮತದಾನದ ಹಕ್ಕುಗಳನ್ನು ಚಲಾಯಿಸಿದ್ದಾರೆ.

    ರಿಷಬ್ ಶೆಟ್ಟಿ ಕೆರಾಡಿ, ಕುಂದಾಪುರ, ರಕ್ಷಿತ್ ಶೆಟ್ಟಿ ಉಡುಪಿ, ರಾಜ್ ಬಿ ಶೆಟ್ಟಿ ಉಡುಪಿ, ನಿಖಿಲ್ ಕುಮಾರಸ್ವಾಮಿ ಕೇತಗನಹಳ್ಳಿ (ಬಿಡದಿ), ಡಾಲಿ ಧನಂಜಯ ಅರಸೀಕೆರೆ, ಅಶಿಕಾ ರಂಗನಾಥ್ ತುಮಕೂರು, ಚಿಕ್ಕಣ್ಣ ಮೈಸೂರು, ಲೀಲಾವತಿ ಸೋಲದೇವನಹಳ್ಳಿ, ವಿನೋದ್ ರಾಜ್ ಸೋಲದೇವನ ಹಳ್ಳಿ, ದೊಡ್ಡಣ್ಣ ಬಿದರುಕಲ್ಲು ಮತದಾನ ಮಾಡಿದ್ದಾರೆ.

  • ಜನಪ್ರಿಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸಮಂತಾ ನಂ 1

    ಜನಪ್ರಿಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸಮಂತಾ ನಂ 1

    ಪುಷ್ಪ ಸಿನಿಮಾದ ನಂತರ ಸಮಂತಾ ರುತ್ ಪ್ರಭು (Samantha) ಅಷ್ಟೇನೂ ಹೇಳಿಕೊಳ್ಳುವಂತಹ ಸಿನಿಮಾ ಕೊಟ್ಟಿಲ್ಲ. ಮಾಡಿರುವ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಗೆಲ್ಲಲು ತಿಣುಕಾಡಿವೆ. ಆದರೂ, ಭಾರತದ ಜನಪ್ರಿಯ ಸೆಲೆಬ್ರಿಟಿಗಳ (Celebrity) ಪಟ್ಟಿಯಲ್ಲಿ ಸಮಂತಾ ನಂಬರ್ 1 (Number 1) ಸ್ಥಾನವನ್ನು ಅಲಂಕರಿಸಿದ್ದಾರೆ.  ಸದಾ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಜೊತೆ ಮುಖಾಮುಖಿ ಆಗುವ ಸಮಂತಾ, ಇತ್ತೀಚಿನ ದಿನಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಅಪ್ ಡೇಟ್ ನೀಡಿದ್ದರು.

    ಐಎಂಡಿಬಿ (IMDb) ಪ್ರಕಟಿಸಿರುವ ಭಾರತದ ಜನಪ್ರಿಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸಮಂತಾ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿರುವುದಕ್ಕೆ ಅಭಿಮಾನಿಗಳಿಗೆ ಸಹಜವಾಗಿಯೇ ಖುಷಿ ಆಗಿದೆ. ಅನೇಕರು ಸಮಂತಾಗೆ ಶುಭ ಹಾರೈಸಿದ್ದಾರೆ. ಇನ್ನೂ ಎತ್ತರಕ್ಕೆ ನೀವು ಬೆಳೆಯಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಎಲ್ಲ ನೋವಿನಿಂದಲೂ ಬೇಗ ಆಚೆ ಬರುವಂತೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ನಟಿ ಮೇಘನಾ ರಾಜ್ ಹುಟ್ಟು ಹಬ್ಬಕ್ಕೆ ತತ್ಸಮ ತದ್ಭವ ಪೋಸ್ಟರ್ ರಿಲೀಸ್

    ಸದ್ಯ ಸಮಂತಾ ಸಿಟಾಡೆಲ್ (Citadel) ವೆಬ್ ಸೀರಿಸ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಅಲ್ಲಿಯೇ ತಮ್ಮ ಹುಟ್ಟುಹಬ್ಬವನ್ನೂ ಆಚರಿಸಿಕೊಂಡಿದ್ದರು. ಅಲ್ಲದೇ, ಐಸ್ ಬಾತ್ ಥಿರೇಪಿಗೂ ಅವರು ಒಳಗಾಗಿದ್ದರು. ಆ ಅನುಭವನ್ನು ನಿನ್ನೆಯಷ್ಟೇ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಅಲ್ಲದೇ, ಅದೊಂದು ಯಮಯಾತನೆಯ ನೋವು ಎಂದು ಹೇಳಿದ್ದರು.

    ಸಮಂತಾ ವೈಯಕ್ತಿಕ ಕಾರಣಗಳಿಂದಾಗಿ ಹಲವು ಬಾರಿ ಸುದ್ದಿ ಆಗಿದ್ದಾರೆ. ಅಲ್ಲದೇ, ನಿರ್ಮಾಪಕ ಚಿಟ್ಟಿಬಾಬು ಕೂಡ ಸಮಂತಾ ಅವರ ಮೇಲೆ ನಿರಂತರವಾಗಿ ಮಾತಿನ ದಾಳಿ ಮಾಡಿದ್ದರು. ಅದಕ್ಕೂ ಸೌಮ್ಯ ರೀತಿಯಲ್ಲಿ ಸಮಂತಾ ಉತ್ತರ ನೀಡಿದ್ದರು.

  • ಸೆಲೆಬ್ರಿಟಿ, ಸಾಮಾಜಿಕ ಮಾಧ್ಯಮ ಪ್ರಭಾವಿಗಳಿಗೆ ಹೊಸ ಗೈಡ್‌ಲೈನ್ಸ್

    ಸೆಲೆಬ್ರಿಟಿ, ಸಾಮಾಜಿಕ ಮಾಧ್ಯಮ ಪ್ರಭಾವಿಗಳಿಗೆ ಹೊಸ ಗೈಡ್‌ಲೈನ್ಸ್

    ನವದೆಹಲಿ: ಸೆಲೆಬ್ರಿಟಿಗಳು, ಸಿನಿಮಾ ನಟ-ನಟಿಯರು, ಪ್ರಭಾವಿ ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ (Social Media) ಜಾಹೀರಾತು (Advertising) ನೀಡುವುದು ಸಾಮಾನ್ಯ. ಆದರೆ ಇನ್ನು ಮುಂದೆ ಯಾವುದೇ ವಸ್ತು ಅಥವಾ ಸೇವೆಗಳನ್ನು ಪ್ರಚಾರ ಮಾಡುವಾಗ ಸೆಲೆಬ್ರಿಟಿ (Celebrity) ಅಥವಾ ಪ್ರಭಾವಿ ವ್ಯಕ್ತಿಗಳು (Influencers) ಕೆಲ ಗೈಡ್‌ಲೈನ್ಸ್ ಅನ್ನು ಪಾಲಿಸಬೇಕೆಂದು ಕೇಂದ್ರ ತಿಳಿಸಿದೆ.

    ಸೆಲೆಬ್ರಿಟಿಗಳು ಹಾಗೂ ಪ್ರಭಾವಿ ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಉತ್ಪನ್ನ ಹಾಗೂ ಸೇವೆಗಳನ್ನು ಅನುಮೋದಿಸುವಾಗ ಕಡ್ಡಾಯವಾಗಿ ಎಂಡೋರ್ಸ್ಮೆಂಟ್ಸ್ ನೋ-ಹೌ (Endorsements Know-How) ಎಂಬ ಹೊಸ ಮಾರ್ಗಸೂಚಿಯನ್ನು (Guideline) ಅನುಸರಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ತಿಳಿಸಿದೆ. ಇದರ ಪ್ರಕಾರ ಉತ್ಪನ್ನಗಳನ್ನು ಪ್ರಚಾರ ಮಾಡುವಾಗ ಜಾಹೀರಾತು (Advertisement), ಪ್ರಾಯೋಜಿತ (Sponsored), ಸಹಯೋಗ (Collaboration) ಅಥವಾ ಪಾವತಿಸಿದ ಪ್ರಚಾರದಂತಹ (Paid Promotion) ಪದಗಳನ್ನು ಬಳಸಬೇಕು ಎಂದು ಹೇಳಿದೆ.

    ಗ್ರಾಹಕ ವ್ಯವಹಾರಗಳ ಇಲಾಖೆ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಅತಿ ಹೆಚ್ಚು ಫಾಲೋರ್ಸ್‌ಗಳನ್ನು ಹೊಂದಿರುವ ವ್ಯಕ್ತಿಗಳು ಯಾವುದೇ ವಸ್ತು ಅಥವಾ ಸೇವೆಗಳನ್ನು ಪ್ರಚಾರ ಮಾಡುವಾಗ ತಾವು ಯಾವ ಉದ್ದೇಶಕ್ಕಾಗಿ ನಿರ್ದಿಷ್ಟ ಉತ್ಪನ್ನವನ್ನು ಪ್ರಚಾರ ಮಾಡುತ್ತಿರುವುದು ಎಂಬುದನ್ನು ಕಡ್ಡಾಯವಾಗಿ ತಿಳಿಸಬೇಕಿದೆ. ಹಣದ ಲಾಭಕ್ಕೋ, ಕೊಡುಗೆಯೋ ಎಂಬುದನ್ನು ಉಲ್ಲೇಖಿಸಬೇಕು ಎಂದಿದೆ. ಇದನ್ನೂ ಓದಿ: ಮತ್ತೆ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಮೆಟಾ

    ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಉತ್ಪನ್ನದ ಪ್ರಚಾರದ ಸಂದರ್ಭ ಅದರಲ್ಲಿ ಜಾಹೀರಾತು, ಪ್ರಾಯೋಜಿತ, ಸಹಯೋಗ ಅಥವಾ ಪಾಲುದಾರಿಕೆ ಎಂದು ತಿಳಿಸಬೇಕು. ಅಥವಾ ಆ ಪದಗಳನ್ನು ಹ್ಯಾಶ್‌ಟ್ಯಾಗ್ ಅಥವಾ ಶೀರ್ಷಿಕೆಗಳಲ್ಲಿ ಪಠ್ಯವಾಗಿ ಸೂಚಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

    ಮಾತ್ರವಲ್ಲದೇ ಪ್ರಚಾರ ಮಾಡುತ್ತಿರುವ ವ್ಯಕ್ತಿಗಳು ಯಾವುದೇ ಉತ್ಪನ್ನಗಳನ್ನು ತಾವು ಬಳಸದೇ ಇದ್ದಲ್ಲಿ ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ ಮಾಡುವಂತಿಲ್ಲ. ಸರಳ ಸ್ಪಷ್ಟ ಭಾಷೆಯಲ್ಲಿ ಅನುಮೋದನೆಗಳನ್ನು ಮಾಡಬೇಕು ಎಂದು ಕಟ್ಟುನಿಟ್ಟಾಗಿ ತಿಳಿಸಿದೆ. ಇದನ್ನೂ ಓದಿ: ಫಾಸ್ಟ್ ಟ್ಯಾಗ್‌ನಲ್ಲಿ ಹಣವಿಲ್ಲದೇ ಟೋಲ್ ಬಳಿಯೇ ನಿಂತ‌ ಇವಿ ಬಸ್‌ಗಳು