Tag: ಸೆಲ್ಫ್ ಕ್ವಾರಂಟೈನ್

  • ಕ್ವಾರಂಟೈನ್ ಆಗದೆ ನೂರಾರು ಜನರನ್ನ ಸೇರಿಸಿ ಡಿಸಿಎಂ ಸವದಿಯಿಂದ ಕಚೇರಿ ಉದ್ಘಾಟನೆ

    ಕ್ವಾರಂಟೈನ್ ಆಗದೆ ನೂರಾರು ಜನರನ್ನ ಸೇರಿಸಿ ಡಿಸಿಎಂ ಸವದಿಯಿಂದ ಕಚೇರಿ ಉದ್ಘಾಟನೆ

    ಚಿಕ್ಕೋಡಿ/ಬೆಳಗಾವಿ: ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಸಚಿವರು ಹಾಗೂ ಅಧಿಕಾರಿಗಳು ಸೆಲ್ಫ್ ಕ್ವಾರಂಟೈನ್ ಆಗುತ್ತಿದ್ದಾರೆ. ಆದರೆ ಸಿಎಂ ಭೇಟಿ ಬಳಿಕ ಸೆಲ್ಫ್ ಕ್ವಾರಂಟೈನ್ ಆಗದ ಡಿಸಿಎಂ ಲಕ್ಷ್ಮಣ ಸವದಿ ನೂರಾರು ಜನರನ್ನ ಸೇರಿಸಿ ಆರ್‌ಟಿಓ ಕಚೇರಿ ಉದ್ಘಾಟಿಸಿ ಎಡವಟ್ಟು ಮಾಡಿಕೊಂಡಿದ್ದಾರೆ.

    ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಂಜೂರಾದ ನೂತನ ಆರ್‌ಟಿಓ ಕಚೇರಿ ಉದ್ಘಾಟನಾ ಸಮಾರಂಭ ನಡೆದಿದೆ. ಸಮಾರಂಭದಲ್ಲಿ 250ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದು, ಉದ್ಘಾಟನಾ ಸಮಾರಂಭದಲ್ಲಿ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಸಚಿವ ಶ್ರೀಮಂತ ಪಾಟೀಲ್ ಸಮಾರಂಭದಲ್ಲಿ ಸಾಮಾಜಿಕ ಅಂತರ ಮರೆತು ಕಚೇರಿ ಉದ್ಘಾಟಿಸಿದ್ದಾರೆ.

    ಅಲ್ಲದೇ ಬಿಜೆಪಿ ಶಾಸಕರಾದ ಮಹೇಶ್ ಕುಮಟಳ್ಳಿ ಹಾಗೂ ಪಿ.ರಾಜೀವ್ ಕೂಡ ಸಮಾರಂಭದಲ್ಲಿ ಸಾಮಾಜಿಕ ಅಂತರ ಮರೆತು ಭಾಗಿಯಾಗಿದ್ದರು. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ನಿಯಮಗಳನ್ನ ಮಾಡಿದೆ. ಆದರೆ ಈಗ ಅಥಣಿ ಪಟ್ಟಣದಲ್ಲಿ ನಡೆದ ಸಮಾರಂಭವನ್ನು ನೋಡಿ, ಜನರಿಗೊಂದು ನ್ಯಾಯನಾ? ಜನಪ್ರತಿನಿಧಿಗಳಿಗೆ ಒಂದು ನ್ಯಾಯನಾ? ಎಂಬ ಮಾತು ಕೇಳಿ ಬಂದಿದೆ.

    ಸಾಮಾನ್ಯ ಜನರ ಸಭೆ ಸಮಾರಂಭಗಳಿಗೆ ಅನ್ವಯಿಸುವ ನಿಯಮಗಳು ಜನಪ್ರತಿನಿಧಗಳಿಗೆ ಏಕೆ ಇಲ್ಲ? ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವ ಸಂದರ್ಭದಲ್ಲಿ ಆರ್‌ಟಿಓ ಕಚೇರಿ ಉದ್ಘಾಟನೆ ಬೇಕಿತ್ತಾ ಎಂದು ಡಿಸಿಎಂ ಲಕ್ಷ್ಮಣ ಸವದಿಯನ್ನು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

  • ಇಮ್ಯುನಿಟಿ ಪವರ್ ಹೆಚ್ಚಿಸುವ ಆಹಾರದ ಮೊರೆ ಹೋದ ಸಿಎಂ ಬಿಎಸ್‍ವೈ

    ಇಮ್ಯುನಿಟಿ ಪವರ್ ಹೆಚ್ಚಿಸುವ ಆಹಾರದ ಮೊರೆ ಹೋದ ಸಿಎಂ ಬಿಎಸ್‍ವೈ

    – ಏನೇನು ಸೇವಿಸುತ್ತಾರೆ?

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದು, ಇದೀಗ ಇಮ್ಯುನಿಟಿ ಪವರ್ ಹೆಚ್ಚಿಸುವ ಆಹಾರದ ಮೊರೆ ಹೋಗಿದ್ದಾರೆ.

    ಸೋಂಕು ಬರದಿರಲು ಸಿಎಂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಸೇವನೆ ಮಾಡುತ್ತಿದ್ದಾರೆ. ವೈದ್ಯರ ಸಲಹೆಯಂತೆ ಇಮ್ಯುನಿಟಿ ಹೆಚ್ಚಿಸಿಕೊಳ್ಳುವತ್ತ ತಮ್ಮ ಗಮನಹರಿಸಿದ್ದಾರೆ.

    ತಮ್ಮ ಆಹಾರ ಪದ್ಧತಿಯಲ್ಲಿ ಪೌಷ್ಟಿಕ ಆಹಾರಕ್ಕೆ ಹೆಚ್ಚಿನ ಮಹತ್ವ ನೀಡಿದ್ದಾರೆ. ಹೀಗಾಗಿ ವಿಟಮನ್ ಎ ಮತ್ತು ಸಿ ಇರುವ ಆಹಾರ ಪದಾರ್ಥಗಳು, ಕಷಾಯ, ಬಿಸಿ ಬಿಸಿ ಕಾಫಿ, ಡ್ರೈ ಫ್ರೂಟ್ಸ್, ತಾಜಾ ತರಕಾರಿ ಸೇರಿದಂತೆ ಹಲವು ಮಹತ್ವದ ಪೌಷ್ಟಿಕ ಆಹಾರಗಳನ್ನು ಸೇವಿಸುತ್ತಿದ್ದಾರೆ. ತಮ್ಮ ನಿವಾಸ ಕಾವೇರಿಯಲ್ಲಿ ಪ್ರೀತಿಯಿಂದ ಸಾಕಿರುವ ಹಸುವಿನ ಹಾಲನ್ನೇ ಕಾಫಿಗೆ ಬಳಸುತ್ತಿದ್ದಾರೆ. ಜೊತೆಗೆ ಮನೆಯಲ್ಲಿದ್ದರೂ ಸದಾ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಪಾಲನೆಯನ್ನು ಕೂಡ ಸಿಎಂ ಅವರು ಚಾಚು ತಪ್ಪದೆ ಮಾಡುತ್ತಿದ್ದಾರೆ. ಇದನ್ನೂ ಓದಿ: ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆರೋಗ್ಯಕರ ಕಷಾಯಗಳು

    ನಾಳೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸುತ್ತಿದ್ದು, ಈ ಮೂಲಕ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಇದನ್ನೂ ಓದಿ: ತೆಂಗಿನಕಾಯಿ, ತೆಂಗಿನ ಎಣ್ಣೆಯಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಹೇಗೆ?

    ಸಿಎಂ ಗೃಹ ಕಚೇರಿ ಕೃಷ್ಣ ಮತ್ತು ಸರ್ಕಾರಿ ನಿವಾಸ ಕಾವೇರಿಯಲ್ಲಿ ಪಾಸಿಟಿವ್ ಪ್ರಕರಣಗಳು ಹಿನ್ನೆಲೆಯಲ್ಲಿ ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ಆರೋಗ್ಯಾಧಿಕಾರಿಗಳ ಸಮ್ಮುಖದಲ್ಲಿ ಇಂದೂ ಕೂಡ ಸ್ಯಾನಿಟೈಸ್ ಮಾಡಲಾಯಿತು. ಇದನ್ನೂ ಓದಿ: ಕೊರೊನಾ ವಾರಿಯರ್ಸ್‍ಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಚ್ಯವನ್ ಪ್ರಾಶ್ ವಿತರಣೆ