Tag: ಸೆಹ್ವಾಗ್

  • ಕೂ ಸೇರಿದ 15 ದಿನಗಳಲ್ಲೇ 1 ಲಕ್ಷ ಅನುಯಾಯಿಗಳನ್ನು ಪಡೆದ ಸೆಹ್ವಾಗ್ !

    ಕೂ ಸೇರಿದ 15 ದಿನಗಳಲ್ಲೇ 1 ಲಕ್ಷ ಅನುಯಾಯಿಗಳನ್ನು ಪಡೆದ ಸೆಹ್ವಾಗ್ !

    ಬೆಂಗಳೂರು: ಕ್ರಿಕೆಟ್ ದಿಗ್ಗಜ ವೀರೇಂದ್ರ ಸೆಹ್ವಾಗ್ ಅವರು ಬಹು-ಭಾಷೆಯ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ ಕೂ ಆಪ್ ಸೇರಿದ ಕೇವಲ 15 ದಿನಗಳಲ್ಲಿ 1 ಲಕ್ಷ ಅನುಯಾಯಿಗಳನ್ನು ಪಡೆದಿದ್ದಾರೆ.

    @VirenderSehwag ಹ್ಯಾಂಡಲ್ ಮೂಲಕ ಹಾಸ್ಯಮಯ, ನೇರ ಮಾತು ಹಾಗು ಚಮತ್ಕಾರಿ ಕಾಮೆಂಟ್ ಗಳಿಂದಾಗಿ ಸೆಹ್ವಾಗ್ ಅವರು ಮೇಕ್-ಇನ್-ಇಂಡಿಯಾ ವೇದಿಕೆಯಲ್ಲಿ ಎಲ್ಲಾ ಸ್ಥಳೀಯ ಭಾಷೆಗಳ ಜನರ ಆಕರ್ಷಣೆ ಗಳಿಸಿದ್ದಾರೆ.

    ಅವರವರದ್ದೇ ಭಾಷೆಗಳಲ್ಲಿ ಅಭಿವ್ಯಕ್ತಿಗೊಳಿಸಲು ಒಂದು ಮುಕ್ತ ವೇದಿಕೆಯಾಗಿರುವ ‘ಕೂ’ ಗೆ ಇತ್ತೀಚೆಗೆ ಕ್ರಿಕೆಟ್ ಮಾಸದಲ್ಲಿ ಹೆಸರಾಂತ ಕ್ರಿಕೆಟಿಗರು ಮತ್ತು ವ್ಯಾಖ್ಯಾನಕಾರರು ಸೇರಿದ್ದು , ಡೌನ್‌ಲೋಡ್‌ಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಕ್ರಿಕೆಟಿಗರು, ಸೆಲೆಬ್ರಿಟಿಗಳು ಸೇರಿದಂತೆ ವಿವಿಧ ಬಳಕೆದಾರರು ಪ್ಲಾಟ್‌ಫಾರ್ಮ್‌ನ ಬಹು-ಭಾಷೆಯ ವೈಶಿಷ್ಟ್ಯಗಳನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಕಳೆದ ಮಾರ್ಚ್ ನಲ್ಲಿ ಆಪ್ ಪ್ರಾರಂಭವಾಗಿದ್ದು, ಕೇವಲ 20 ತಿಂಗಳ ಅವಧಿಯಲ್ಲಿ 1.5 ಕೋಟಿ (15 ಮಿಲಿಯನ್) ಬಳಕೆದಾರರು ನೋಂದಾಯಿಸಿಕೊಂಡಿದ್ದಾರೆ. ಈ ಕ್ರಿಕೆಟ್ ಸೀಸನ್ ನಲ್ಲಿಯೇ 5 ಮಿಲಿಯನ್ ಜನರು ವೇದಿಕೆಗೆ ಸೇರಿಕೊಂಡಿದ್ದಾರೆ. ಟಿ 20 ವಿಶ್ವಕಪ್ ಸರಣಿ ನಡೆಯುತ್ತಿರುವ ಈ ಸಂದರ್ಭದಲ್ಲಿ ವೇದಿಕೆಗೆ ಮತ್ತಷ್ಟು ಜನರು ಸೇರುವ ನಿರೀಕ್ಷೆಯಿದೆ.

    KOO LOGO

    2021 ರ ಟಿ 20 ವಿಶ್ವಕಪ್‌ ಸಂದರ್ಭದಲ್ಲಿ ಕಂಟೆಂಟ್ ಕ್ರಿಯೇಟರ್‌ಗಳಿಗಾಗಿ ಕೂ ಆಕರ್ಷಕ ಪ್ರಚಾರ ಹಾಗು ಸ್ಪರ್ಧೆಗಳನ್ನು ಪ್ರಕಟಿಸಿದೆ. ಇದು ಭಾಷೆಗಳಲ್ಲಿ ತಲ್ಲೀನಗೊಳಿಸುವ ಮತ್ತು ಹೈಪರ್‌ಲೋಕಲ್ ಅನುಭವವನ್ನು ನೀಡುತ್ತದೆ. ಸೆಹ್ವಾಗ್ ಜೊತೆಗೆ, ವೆಂಕಟೇಶ್ ಪ್ರಸಾದ್, ನಿಖಿಲ್ ಚೋಪ್ರಾ, ಸೈಯದ್ ಸಾಬಾ ಕರೀಮ್, ಪಿಯೂಷ್ ಚಾವ್ಲಾ, ಹನುಮ ವಿಹಾರಿ, ಜೋಗಿಂದರ್ ಶರ್ಮಾ, ಪ್ರವೀಣ್ ಕುಮಾರ್, ವಿಆರ್‌ವಿ ಸಿಂಗ್, ಅಮೋಲ್ ಮುಜುಮ್ದಾರ್, ವಿನೋದ್ ಕಾಂಬ್ಳಿ, ವಾಸಿಂ ಜಾಫರ್, ಆಕಾಶ್ ಚೋಪ್ರಾ, ದೀಪ್ ದಾಸ್‌ಗುಪ್ತಾ ಮುಂತಾದವರು ಕೂ ಆಪ್‌ಗೆ ಸೇರಿದ್ದಾರೆ. ಮತ್ತು ಅಭಿಮಾನಿಗಳೊಂದಿಗೆ ಸಂಪರ್ಕ ಹೊಂದಲು ಅವರು ಸಕ್ರಿಯವಾಗಿ ಕೂ ಮಾಡುತ್ತಿರುವುದರಿಂದ ಭಾರೀ ಅನುಯಾಯಿಗಳನ್ನು ಗಳಿಸುತ್ತಿದ್ದಾರೆ. ಇದನ್ನೂ ಓದಿ: 14ನೇ ಆವೃತ್ತಿಯ ಐಪಿಎಲ್‍ನ ಕುತೂಹಲಕಾರಿ ಸಂಗತಿಗಳಿವು

    ‘ವೀರೇಂದ್ರ ಸೆಹ್ವಾಗ್ ಅವರು ಇಷ್ಟು ಕಡಿಮೆ ಅವಧಿಯಲ್ಲಿ 100,000 ಮೈಲಿಗಲ್ಲನ್ನು ದಾಟಿರುವುದಕ್ಕೆ ನಾವು ಸಂತೋಷಪಡುತ್ತೇವೆ. ಸ್ಥಳೀಯ ಭಾಷೆಗಳಲ್ಲಿ ಸಂಭಾಷಣೆ ನಡೆಸಲು ಕೂ ವೇದಿಕೆಯಾಗಿದೆ. ಭಾರತೀಯರಾದ ನಮಗೆ ಕ್ರಿಕೆಟ್ ಒಂದು ಭಾವನೆ ಮತ್ತು ಪಂದ್ಯಗಳ ಸುತ್ತ ಸಂಭಾಷಣೆಗಳು ಸಾಮಾಜಿಕ ಮಾಧ್ಯಮದಲ್ಲಿ ಎಂಗೇಜ್ಮೆಂಟ್ ಉತ್ತೇಜಿಸುತ್ತದೆ. ನಮ್ಮ ಪ್ಲಾಟ್‌ಫಾರ್ಮ್ ಮೂಲಕ, ಬಳಕೆದಾರರು ತಮ್ಮ ನೆಚ್ಚಿನ ಆಟಗಾರರು ಮತ್ತು ಕಾಮೆಂಟೇಟರ್ಸ್‌ಗಳ ಬಗ್ಗೆ ತಮ್ಮ ಆಯ್ಕೆಯ ಭಾಷೆಯಲ್ಲಿ ಸಂಭಾಷಣೆಗೆ ಅವಕಾಶವಿದೆ. ವಿಶ್ವಕಪ್ ಮತ್ತು ಅದರಾಚೆಗೂ ಬಳಕೆದಾರರು ಪಾಲ್ಗೊಳ್ಳಲು ಕೂ ಮೈಕ್ರೋ ಬ್ಲಾಗಿಂಗ್ ವೇದಿಕೆಯಾಗಿದೆ’ ಎಂದು ಕೂ ವಕ್ತಾರರು ವಿಶ್ವಾಸವ್ಯಕ್ತಪಡಿಸಿದ್ದಾರೆ.

    ಕೂ ಬಗ್ಗೆ: ಮಾರ್ಚ್ 2020ರಲ್ಲಿ ‘ಕೂ’ ಸ್ಥಾಪನೆಯಾಯಿತು. ಬಹುಭಾಷಾ ಮೈಕ್ರೋ ಬ್ಲಾಗಿಂಗ್ ವೇದಿಕೆಯಾಗಿ ಭಾರತೀಯ ಭಾಷೆಗಳಲ್ಲಿ, ಭಾರತದಾದ್ಯಂತ 15 ಮಿಲಿಯನ್‌ಗಿಂತಲೂ ಹೆಚ್ಚಿನ ಬಳಕೆದಾರರನ್ನು ಹೊಂದಿದೆ. ಹಲವಾರು ಭಾರತೀಯ ಭಾಷೆಗಳಲ್ಲಿ ಲಭ್ಯವಿದ್ದು, ಭಾರತದ ವಿವಿಧ ಪ್ರದೇಶಗಳ ಜನರು ತಮ್ಮ ಮಾತೃಭಾಷೆಯಲ್ಲಿ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಬಹುದು. ಭಾರತದಂತಹ ಕೇವಲ 10% ಇಂಗ್ಲಿಷ್ ಮಾತನಾಡುವ ದೇಶದಲ್ಲಿ, ಭಾರತೀಯ ಬಳಕೆದಾರರಿಗೆ ತಮ್ಮ ಸ್ವಂತ ಭಾಷೆಯ ಅನುಭವಗಳನ್ನು ನೀಡಲು ಮತ್ತು ಜನರನ್ನು ಸಂಪರ್ಕಿಸಲು ಸಹಾಯ ಮಾಡುವ ಸಾಮಾಜಿಕ ಮಾಧ್ಯಮ ವೇದಿಕೆಯ ಅವಶ್ಯಕತೆ ಇದೆ. ಭಾರತೀಯ ಭಾಷೆಗಳಿಗೆ ಆದ್ಯತೆ ನೀಡುವ ಭಾರತೀಯರ ಧ್ವನಿಗಳಿಗೆ ಕೂ ಒಂದು ವೇದಿಕೆಯನ್ನು ಒದಗಿಸುತ್ತದೆ.

  • ಸೆಹ್ವಾಗ್‌ ಸ್ಫೋಟಕ ಅರ್ಧಶತಕ – ಬಾಂಗ್ಲಾ ವಿರುದ್ಧ ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ

    ಸೆಹ್ವಾಗ್‌ ಸ್ಫೋಟಕ ಅರ್ಧಶತಕ – ಬಾಂಗ್ಲಾ ವಿರುದ್ಧ ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ

    ರಾಯ್‌ಪುರ: ಟೀಂ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್‌ ಮತ್ತೆ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದು ಬಾಂಗ್ಲಾದೇಶ ಲೆಜೆಂಡ್‌ ವಿರುದ್ಧ ಭಾರತ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ರೋಡ್‌ ಸೇಫ್ಟಿ ವಿಶ್ವ ಸೀರಿಸ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಬಾಗ್ಲಾದೇಶ ಮೊದಲು ಬ್ಯಾಟಿಂಗ್‌ ಮಾಡಿ 19.4 ಓವರ್‌ಗಳಲ್ಲಿ 109 ರನ್‌ಗಳಿಗೆ ಆಲೌಟ್‌ ಆಯ್ತು. 110 ರನ್‌ಗಳ ಸುಲಭ ಸವಾಲನ್ನು ಪಡೆದ ಭಾರತ 10.1 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೇ 114 ರನ್‌ಗಳ ಗುರಿಯನ್ನು ಮುಟ್ಟಿತು.

    https://twitter.com/urmilpatel30/status/1367869943996416003

    ವೀರೇಂದ್ರ ಸೆಹ್ವಾಗ್‌ ಸ್ಫೋಟಕ 80 ರನ್‌(35 ಎಸೆತ, 10 ಬೌಂಡರಿ, 5 ಸಿಕ್ಸರ್‌) ಹೊಡೆದರೆ ನಾಯಕ ತೆಂಡೂಲ್ಕರ್‌ 33 ರನ್‌(26 ಎಸೆತ, 5 ಬೌಂಡರಿ) ಹೊಡೆದರು.

    ಬಾಂಗ್ಲಾ ಪರ ನಿಜಮುದ್ದೀನ್‌ 49 ರನ್‌ ಹೊಡೆದು ಔಟಾದರು. ಭಾರತದ ಪರ ವಿನಯ್‌ ಕುಮಾರ್‌, ಪ್ರಗ್ಯಾನ್‌ ಓಜಾ, ಯುವರಾಜ್‌ ಸಿಂಗ್‌ ತಲಾ 2 ವಿಕೆಟ್‌ ಪಡೆದರು. ಮನ್‌ಪ್ರೀತ್‌ ಗೊನಿ, ಯೂಸೂಫ್‌ ಪಠಾಣ್‌ ತಲಾ ಒಂದು ವಿಕೆಟ್‌ ಪಡೆದರು.

    3 ಪಂದ್ಯಗಳನ್ನು ಗೆದ್ದಿರುವ ಭಾರತ ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ಅಗ್ರ ಸ್ಥಾನ ಪಡೆದಿದೆ. ಭಾರತ ತಂಡ ಕಳೆದ ವರ್ಷವೇ 2 ಪಂದ್ಯಗಳನ್ನು ಗೆದ್ದುಕೊಂಡಿತ್ತು. ಕೊರೊನಾ ಕಾರಣದಿಂದ ಈ ಟಿ 20 ಸರಣಿ ಈ ವರ್ಷಕ್ಕೆ ಮುಂದೂಡಿಕೆಯಾಗಿತ್ತು.

  • ದ್ವಿಶತಕ ಸಿಡಿಸಿ ಸಚಿನ್, ಸೆಹ್ವಾಗ್ ಸಾಲಿಗೆ ಸೇರಿದ ಸಂಜು ಸ್ಯಾಮ್ಸನ್

    ದ್ವಿಶತಕ ಸಿಡಿಸಿ ಸಚಿನ್, ಸೆಹ್ವಾಗ್ ಸಾಲಿಗೆ ಸೇರಿದ ಸಂಜು ಸ್ಯಾಮ್ಸನ್

    ಪಣಜಿ: ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಕೇರಳ ತಂಡದ ಯುವ ಆಟಗಾರ ಸಂಜು ಸ್ಯಾಮ್ಸನ್ ದ್ವಿಶತಕ ಸಿಡಿಸಿದ ಸಾಧನೆ ಮಾಡಿದ್ದು, ಟೂರ್ನಿಯಲ್ಲಿ ದಾಖಲಾದ ವೈಯಕ್ತಿಕ ಗರಿಷ್ಠ ಸ್ಕೋರ್ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಟೂರ್ನಿಯ ಗ್ರೂಪ್ ‘ಎ’ ನಲ್ಲಿ ಗೋವಾ ತಂಡದ ಎದುರು ಸಂಜು ಸ್ಯಾಮ್ಸನ್ 129 ಎಸೆತಗಳಲ್ಲಿ 10 ಸಿಕ್ಸರ್ ಹಾಗೂ 21 ಬೌಂಡರಿಗಳ ನೆರವಿನಿಂದ ಅಜೇಯ 212 ರನ್ ಗಳಿಸಿದ್ದಾರೆ. ಆ ಮೂಲಕ ಕಳೆದ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಉತ್ತರಖಂಡ ಆಟಗಾರ ಕರಣ್‍ವೀರ್ ಕೌಶಾಲ್ 202 ರನ್ ದಾಖಲೆಯನ್ನು ಮುರಿದಿದ್ದಾರೆ. ಈ ಪಂದ್ಯಕ್ಕೂ ಮುನ್ನ ಲಿಸ್ಟ್ ‘ಎ’ ಕ್ರಿಕೆಟ್‍ನಲ್ಲಿ 1 ಶತಕವೂ ದಾಖಲಿಸಿದ ಸಂಜು ಇದಕ್ಕೂ ಮುನ್ನ ನಡೆದ ಟೂರ್ನಿಯಲ್ಲಿ ಏಕೈಕ ಅರ್ಧ ಶತಕ ಗಳಿಸಿದ್ದರು.

    ಇಂದಿನ ಪಂದ್ಯದಲ್ಲಿ ಕೇರಳ ತಂಡ ಮತ್ತೊಬ್ಬ ಆಟಗಾರ ಸಚಿನ್ ಬೇಬಿರೊಂದಿಗೆ ಸ್ಯಾಮ್ಸನ್ 338 ರನ್ ಗಳ ಜೊತೆಯಾಟ ನೀಡಿದ್ದು, ಪರಿಣಾಮ ಕೇರಳ ಪಂದ್ಯದಲ್ಲಿ ನಿಗದಿತ 50 ಓವರ್ ಗಳಲ್ಲಿ 377 ರನ್ ಪೇರಿಸಿತು. ಸಂಜುಗೆ ಸಾಥ್ ನೀಡಿದ ಸಚಿನ್ ಬೇಬಿ ಕೂಡ 135 ಎಸೆತಗಳಲ್ಲಿ 127 ರನ್ ಗಳಿಸಿದ್ದರು.

    ಲಿಸ್ಟ್ ‘ಎ’ ಕ್ರಿಕೆಟ್‍ನಲ್ಲಿ ಸಂಜು ಸಿಡಿಸಿದ ಮೊದಲ ದ್ವಿಶಕ ಇದಾಗಿದ್ದು, ಈ ಹಿಂದೆ ಸಚಿನ್, ಸೆಹ್ವಾಗ್, ರೋಹಿತ್ ಶರ್ಮಾ, ಶಿಖರ್ ಧವನ್, ಕರಣ್ ಕೌಶಾಲ್ ಬಳಿಕ ಸ್ಥಾನವನ್ನು ಸಂಜು ಸ್ಯಾಮ್ಸನ್ ಪಡೆದಿದ್ದಾರೆ.

  • ಅಭಿಮಾನಿಯ ಟ್ವೀಟ್ ರಿಟ್ವೀಟ್ ಮಾಡಿ ಸೆಹ್ವಾಗ್ ಕಾಲೆಳೆದ ಜಡೇಜಾ

    ಅಭಿಮಾನಿಯ ಟ್ವೀಟ್ ರಿಟ್ವೀಟ್ ಮಾಡಿ ಸೆಹ್ವಾಗ್ ಕಾಲೆಳೆದ ಜಡೇಜಾ

    ಬೆಂಗಳೂರು: ಅಭಿಮಾನಿಯೊಬ್ಬರು ಟ್ವಿಟ್ಟರ್ ನಲ್ಲಿ ತನ್ನ ಬಗ್ಗೆ ವಿರೇಂದ್ರ ಸೆಹ್ವಾಗ್ ಬಳಿ ಕೇಳಿಕೊಂಡ ಪ್ರಶ್ನೆಯನ್ನು ಟೀಂ ಇಂಡಿಯಾದ ಆಲ್‍ರೌಂಡರ್ ರವೀಂದ್ರ ಜಡೇಜಾ ರಿಟ್ವೀಟ್ ಮಾಡಿದ್ದಾರೆ.

    ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ 203 ರನ್ ಗಳಿಂದ ಪಂದ್ಯವನ್ನು ಗೆದ್ದ ಹಿನ್ನೆಲೆಯಲ್ಲಿ ಸೆಹ್ವಾಗ್ ಟೀಂ ಇಂಡಿಯಾವನ್ನು ಟ್ವಿಟ್ಟರ್ ನಲ್ಲಿ ಅಭಿನಂದಿಸಿದ್ದರು.

    ರೋಹಿತ್ ಶರ್ಮಾ ಉತ್ತಮವಾಗಿ ಆಡಿದ್ದೀರಿ. ಮಯಾಂಕ್, ಶಮಿ, ಅಶ್ವಿನ್, ಪುಜಾರಾ ಅವರ ಸಂಘಟಿತ ಆಟದಿಂದ ಭಾರತ ಜಯಗಳಿಸಿದೆ ಎಂದು ಬರೆದು ಟ್ವೀಟ್ ಮಾಡಿದ್ದರು.

    ಈ ಟ್ವೀಟ್ ಗಮನಿಸಿದ ಬಿನೀತ್ ಪಟೇಲ್ ಎಂಬವರು ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ನಲ್ಲಿ ಜಡೇಜಾ ಉತ್ತಮ ಪ್ರದರ್ಶನ ನೀಡಿದ್ದರೂ ಯಾಕೆ ಅವರ ಹೆಸರನ್ನು ಉಲ್ಲೇಖ ಮಾಡಿಲ್ಲ ಎಂದು ಪ್ರಶ್ನಿಸಿದ್ದರು.

    ಬಿನೀತ್ ಪಟೇಲ್ ಟ್ವೀಟ್ ನಲ್ಲಿ ಟ್ಯಾಗ್ ಆಗಿದ್ದ ಕಾರಣ ರವೀಂದ್ರ ಜಡೇಜಾ ಅವರು ಈ ಟ್ವೀಟ್ ರಿಟ್ವೀಟ್ ಮಾಡಿ ಸೆಹ್ವಾಗ್ ಕಾಲೆಳೆದಿದ್ದಾರೆ. ಈ ಟ್ವೀಟ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಔಟಾಗದೇ 30 ರನ್ (46 ಎಸೆತ, 1 ಸಿಕ್ಸರ್) ಹೊಡೆದಿದ್ದ ಜಡೇಜಾ ಎರಡನೇ ಇನ್ನಿಂಗ್ಸ್ ನಲ್ಲಿ 40 ರನ್(32 ಎಸೆತ, 3 ಸಿಕ್ಸರ್) ಹೊಡೆದಿದ್ದರು.

    ಮೊದಲ ಇನ್ನಿಂಗ್ಸ್ ನಲ್ಲಿ 2 ವಿಕೆಟ್ ಕಿತ್ತಿದ್ದ ಜಡೇಜಾ ಎರಡನೇ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆದಿದ್ದರು.

  • ಪ್ರೀತಿ ಝಿಂಟಾ ಟೀಂಗೆ ಗುಡ್‍ಬೈ ಹೇಳಿದ್ರು ಸೆಹ್ವಾಗ್!

    ಪ್ರೀತಿ ಝಿಂಟಾ ಟೀಂಗೆ ಗುಡ್‍ಬೈ ಹೇಳಿದ್ರು ಸೆಹ್ವಾಗ್!

    ನವದೆಹಲಿ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಅವರು ಐಪಿಎಲ್‍ನ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಿಂದ ಹೊರಬಂದಿದ್ದಾರೆ ಈ ವಿಷಯವನ್ನು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

    ಸೆಹ್ವಾಗ್ ಅವರು ತಮ್ಮ ಟ್ವಿಟರ್ ಅಕೌಂಟ್‍ನಲ್ಲಿ ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳಬೇಕು ಮತ್ತು ನಾನು ಕಿಂಗ್ಸ್ ಇಲೆವೆನ್ ಪಂಜಾಬ್‍ನಲ್ಲಿ 2 ಸೀಸನ್ ನಲ್ಲಿ ಆಟಗಾರನಾಗಿ ಮತ್ತು 3 ಸೀಸನ್ ಗಳಲ್ಲಿ ಮೆಂಟರ್ ಆಗಿ ಅದ್ಭುತ ಸಮಯವನ್ನು ಕಳೆದಿದ್ದೇನೆ. ಕಿಂಗ್ಸ್ ಇಲೆವೆನ್ ಅವರೊಂದಿಗೆ ನನ್ನ ಸಹಯೋಗವು ಕೊನೆಗೊಳ್ಳುತ್ತದೆ. ನಾನು ಇಲ್ಲಿ ಒಳ್ಳೆಯ ಕ್ಷಣಗಳನ್ನು ಕಳೆದಿದ್ದೇನೆ ಅದಕ್ಕೆ ನಾನು ಕೃತಜ್ಞರಾಗಿರುತ್ತೇನೆ. ಮುಂದಿನ ದಿನಗಳಿಗೆ ಶುಭವಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

    ಸೆಹ್ವಾಗ್ ಕಿಂಗ್ಸ್ ಇಲೆವೆನ್ ಪಂಜಾನ್ ತಂಡ ಬಿಟ್ಟ ಕಾರಣವನ್ನು ಬಹಿರಂಗಪಡಿಸಿಲ್ಲ. ಹಿಂದಿನ ಸರಣಿಯಲ್ಲಿ ಸೆಹ್ವಾಗ್ ಹಾಗೂ ಕಿಂಗ್ಸ್ ಇಲವೆನ್ ಮಾಲೀಕಳಾದ ಪ್ರೀತಿ ಝಿಂಟಾ ಮಧ್ಯೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ವಿಚಾರವಾಗಿ ನನ್ನ ಮತ್ತು ಸೆಹ್ವಾಗ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಒಡತಿ ಪ್ರೀತಿ ಜಿಂಟಾ ಸ್ಪಷ್ಟನೆ ನೀಡಿದ್ದರು.

    ನಮ್ಮ ಪರವಾಗಿ ಸುದ್ದಿ ಪ್ರಕಟವಾಗುವಂತೆ ನಾವು ಮಾಧ್ಯಮಗಳಿಗೆ ಹಣ ನೀಡಲ್ಲ. ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿಗಳು ಎಲ್ಲವೂ ಸುಳ್ಳು ಎಂದು ಪ್ರೀತಿ ಝಿಂಟಾ ಟ್ವೀಟ್ ಮಾಡಿದ್ದರು. ರಾಜಸ್ಥಾನದ ವಿರುದ್ಧ ಪಂದ್ಯದಲ್ಲಿ ಸುಲಭ ಮೊತ್ತವನ್ನು ಬೆನ್ನತ್ತಲು ತಂಡ ವಿಫಲವಾಗಲು ಮೆಂಟರ್ ಸೆಹ್ವಾಗ್ ಅವರ ನಿರ್ಧಾರವೇ ಕಾರಣ ಎಂದು ಪ್ರೀತಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿತ್ತು.

    ರಾಜಸ್ಥಾನ ಪಂದ್ಯದಲ್ಲಿ ನಾಯಕ ಆಶ್ವಿನ್‍ಗೆ ಬ್ಯಾಟಿಂಗ್ ನಲ್ಲಿ ಮುಂಬಡ್ತಿ ನೀಡಿ ನಂಬರ್ 3 ಸ್ಥಾನದಲ್ಲಿ ಕಳಿಸಲಾಗಿತ್ತು. ಆದರೆ ಪಂದ್ಯದಲ್ಲಿ ಅಶ್ವಿನ್ ಶೂನ್ಯ ಸುತ್ತುವ ಮೂಲಕ ಎಲ್ಲ ಲೆಕ್ಕಾಚಾರನ್ನು ತಲೆ ಕೆಳಗೆ ಮಾಡಿದ್ದರು. ಸದ್ಯ ಪಂದ್ಯದ ಫಲಿತಾಂಶದಿಂದ ಪ್ರೀತಿ ಅಸಮಾಧಾನಗೊಂಡಿದ್ದರು ಎಂದು ಬರೆಯಲಾಗಿತ್ತು.

    ಪಂದ್ಯದ ಬಳಿಕ ಆಟಗಾರರು ಮೈದಾನದಿಂದ ಮರಳುವ ಮುನ್ನವೇ ಪ್ರೀತಿ ಝಿಂಟಾ ಈ ಕುರಿತು ಪ್ರಶ್ನೆ ಮಾಡಿದ್ದರು. ಆದ್ರೆ ಸೆಹ್ವಾಗ್ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ತಂಡ ಉತ್ತಮ ಪ್ರದರ್ಶನ ನೀಡುತ್ತಿದ್ದು, ಪ್ಲೇಆಫ್ ಗೆ ಆಯ್ಕೆ ಆಗುವ ಎಲ್ಲಾ ಅವಕಾಶ ಇರುವ ವೇಳೆ ಈ ರೀತಿಯ ಗೊಂದಲಗಳಿಗೆ ಅವಕಾಶ ನೀಡಬಾರದು. ಇದು ಆಟಗಾರ ಮೇಲೆ ಪರಿಣಾಮ ಉಂಟಾಗಬಹುದು ಎಂದು ಸೆಹ್ವಾಗ್ ಪ್ರತಿಕ್ರಿಯೇ ನೀಡಿಲ್ಲ ಎಂದು ವರದಿ ತಿಳಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಂಗಳೂರು ಟೆಸ್ಟ್ ವೇಳೆ ದ್ರಾವಿಡ್ ನೆನಪು ಮಾಡ್ಕೊಂಡ ಸೆಹ್ವಾಗ್

    ಬೆಂಗಳೂರು ಟೆಸ್ಟ್ ವೇಳೆ ದ್ರಾವಿಡ್ ನೆನಪು ಮಾಡ್ಕೊಂಡ ಸೆಹ್ವಾಗ್

    ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಫ್ಘಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಕನ್ನಡಿಗ ಕೆಎಲ್ ರಾಹುಲ್ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‍ಗೆ ಇಳಿಯುತ್ತಿದಂತೆ ಸೆಹ್ವಾಗ್ ತಮ್ಮ ಆತ್ಮೀಯ ಗೆಳೆಯ ದ್ರಾವಿಡ್ ಅವರನ್ನು ನೆನಪು ಮಾಡಿಕೊಂಡಿದ್ದಾರೆ.

    ದ್ರಾವಿಡ್ ನಿವೃತ್ತಿಯ ಬಳಿಕ ಮೊದಲ ಬಾರಿಗೆ ಟೆಸ್ಟ್ ಪಂದ್ಯದ ನಂ.3 ರ ಬ್ಯಾಟಿಂಗ್ ಕ್ರಮದಲ್ಲಿ ರಾಹುಲ್ ಹೆಸರನ್ನು ಕಾಣುತ್ತಿರುವುದಾಗಿ ಹೇಳಿದ್ದಾರೆ. ಅಫ್ಘಾನ್ ವಿರುದ್ಧದ ಮೊದಲ ಇನ್ನಿಂಗ್ಸ್ ನಲ್ಲಿ ಧವನ್ ಸ್ಫೋಟಕ ಶತಕ ಸಿಡಿಸಿ ಔಟಾಗುತ್ತಿದಂತೆ ರಾಹುಲ್ ಬ್ಯಾಟಿಂಗ್ ನಡೆಸಿ ಅರ್ಧಶತಕ (54) ಪೂರೈಸಿದರು.

    ಪಂದ್ಯದಲ್ಲಿ ಸೆಹ್ವಾಗ್ ದಾಖಲೆ ಮುರಿದ ಧವನ್ ಮೊದಲ ದಿನ ಭೋಜನ ವಿರಾಮಕ್ಕೂ ಮುನ್ನ ಅತೀ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಪಡೆದರು. ಸೆಹ್ವಾಗ್ 2006 ರಲ್ಲಿ ವೆಸ್ಟ್ ಇಂಡಿಸ್ ವಿರುದ್ಧ 99 ರನ್, 1967 ರಲ್ಲಿ ಫಾರುಖ್ ಎಂಜಿನಿಯರ್ 94 ರನ್ ಗಳಿಸಿದ್ದರು. ಅಲ್ಲದೇ ಪಂದ್ಯದ ವಿರಾಮದ ವೇಳೆ ಶತಕ ಸಿಡಿಸಿದ 6ನೇ ಆಟಗಾರ ಎಂಬ ವಿಶೇಷ ಸಾಧನೆ ಮಾಡಿದರು. ಈ ಹಿಂದೆ ಆಸೀಸ್ ನ ವಿಕ್ಟರ್ ಟ್ರಂಪರ್, ಚಾರ್ಲ್ಸ್ ಮ್ಯಾಕಾರ್ಟ್‍ನಿ, ಡಾನ್ ಬ್ರಾಡ್ ಮನ್, ಡೇವಿಡ್ ವಾರ್ನರ್ ಹಾಗೂ ಪಾಕಿಸ್ತಾನದ ಮಾಜಿ ನಾಯಕ ಮಜೀದ್ ಖಾನ್ ಈ ಸಾಧನೆ ಮಾಡಿದ್ದರು.

  • ಭಿಕ್ಷೆ ಬೇಡಲ್ಲ, ಸಾಲವನ್ನು ಮರುಪಾವತಿಸಲು 72ನೇ ವರ್ಷದಲ್ಲಿ ಟೈಪಿಸ್ಟ್ ಆದ್ರು ಸೂಪರ್ ವುಮನ್!

    ಭಿಕ್ಷೆ ಬೇಡಲ್ಲ, ಸಾಲವನ್ನು ಮರುಪಾವತಿಸಲು 72ನೇ ವರ್ಷದಲ್ಲಿ ಟೈಪಿಸ್ಟ್ ಆದ್ರು ಸೂಪರ್ ವುಮನ್!

    ಭೋಪಾಲ್: ತೆಗೆದುಕೊಂಡ ಸಾಲವನ್ನು ಪಾವತಿಸಲು 72 ವರ್ಷದ ಮಹಿಳೆಯೊಬ್ಬರು ಟೈಪಿಸ್ಟ್ ಉದ್ಯೋಗವನ್ನು ಸೇರಿಕೊಂಡಿದ್ದಾರೆ.

    ತನ್ನ ಮಗಳ ಅಪಘಾತದ ನಂತರ ಚಿಕಿತ್ಸೆಗೆ ತೆಗೆದುಕೊಂಡ ಸಾಲವನ್ನು ಪಾವತಿ ಮಾಡಲು ಲಕ್ಷ್ಮೀಬಾಯಿ ಎಂಬವರು ಜಿಲ್ಲಾಧಿಕಾರಿ ಕಛೇರಿಯ ಮುಂದೆ ಬೆರಳಚ್ಚು ಯಂತ್ರದಿಂದ ದಾಖಲೆಗಳನ್ನು ಟೈಪ್ ಮಾಡುವ ಮೂಲಕ ತನ್ನ ಜೀವನೋಪಾಯವನ್ನು ಸಾಗಿಸುತ್ತಿದ್ದಾರೆ.

    ನಾನು ಭಿಕ್ಷೆ ಬೇಡಲ್ಲ. ತೆಗೆದುಕೊಂಡಿರುವ ಸಾಲವನ್ನು ಪಾವತಿಸಲು ಈ ವೃತ್ತಿಯನ್ನು ಆಯ್ದುಕೊಂಡಿರುವುದಾಗಿ ಹೇಳಿದ್ದಾರೆ. ನನಗೆ ಡಿಸಿ ರಾಘವೇಂದ್ರ ಸಿಂಗ್ ಮತ್ತು ಎಸ್‍ಡಿಎಂ ಭಾವನ ವಿಲಂಬೆ ಅವರ ಸಹಾಯದಿಂದ ಈ ಕೆಲಸ ಸಿಕ್ಕಿದೆ ಎಂದು ತಿಳಿಸಿದ್ದಾರೆ.

    ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಜೂನ್ 12 ರಂದು ಸೂಪರ್ ಲಕ್ಷ್ಮೀಬಾಯಿ ಅವರ ಕೆಲಸ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. “ಮಧ್ಯಪ್ರದೇಶದ ಸೆಹೋರ್ ನಲ್ಲಿ ವಾಸವಾಗಿರುವ ಈ ಮಹಿಳೆಯಿಂದ ಕಲಿಯಲು ಮತ್ತು ಕೆಲಸ ಮಾಡಲು ವಯಸ್ಸು ಬೇಕಾಗಿಲ್ಲ. ಯಾವುದೇ ಒಂದು ಚಿಕ್ಕ ಕೆಲಸ ಕಲಿಕೆಯ ಪಾಠವಿದ್ದಂತೆ. ಇವರಿಂದ ಯುವಕರು ಕಲಿಯುವುದು ತುಂಬಾನೇ ಇದೆ” ಎಂದು ಬರೆದು ಟ್ವೀಟ್ ಮಾಡಿದ್ದಾರೆ.

  • ಬುರ್ಖಾ ಧರಿಸಿ ಚೆಸ್ ಆಡಲ್ಲ ಎಂದ ಸೌಮ್ಯಾ ನಡೆಗೆ ಹ್ಯಾಟ್ಸ್ ಆಫ್ ಎಂದ ಕೈಫ್

    ಬುರ್ಖಾ ಧರಿಸಿ ಚೆಸ್ ಆಡಲ್ಲ ಎಂದ ಸೌಮ್ಯಾ ನಡೆಗೆ ಹ್ಯಾಟ್ಸ್ ಆಫ್ ಎಂದ ಕೈಫ್

    ನವದೆಹಲಿ: ಇರಾನ್ ನಲ್ಲಿ ನಡೆಯುತ್ತಿರುವ 2018 ರ ಏಷ್ಯಾ ಚೆಸ್ ಟೂರ್ನಿಯಿಂದ ಇತ್ತೀಚೆಗಷ್ಟೇ ಹೊರ ನಡೆಯುವ ನಿರ್ಧಾರ ಪ್ರಕಟಿಸಿದ ಭಾರತ ತಂಡದ ಆಟಗಾರ್ತಿ ಸೌಮ್ಯಾ ಸ್ವಾಮಿನಾಥನ್ ನಡೆಗೆ ಕ್ರಿಕೆಟಿಗ ಮಹಮ್ಮದ್ ಕೈಫ್ ಬೆಂಬಲ ಸೂಚಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಕೈಫ್, ಯಾವುದೇ ಕ್ರೀಡೆಯಲ್ಲಿ ಧಾರ್ಮಿಕ ನಿಯಮಗಳನ್ನು ಅನುಸರಿಸುವಂತೆ ಒತ್ತಡ ಹೇರುವುದು ಉತ್ತಮವಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ಇರಾನ್ ಟೂರ್ನಿಯಿಂದ ಹೊರ ನಡೆದ ನಿಮ್ಮ ನಿರ್ಧಾರಕ್ಕೆ `ಹ್ಯಾಟ್ಸ್ ಅಫ್’ ಸೌಮ್ಯಾ. ಕ್ರೀಡಾಪಟುಗಳ ಮೇಲೆ ಯಾವುದೇ ಧಾರ್ಮಿಕ ವಸ್ತ್ರ ಸಂಹಿತೆಯನ್ನು ಹೇರಬಾರದು. ಅದರಲ್ಲೂ ಅಂತರಾಷ್ಟ್ರೀಯ ಟೂರ್ನಿಯನ್ನು ಆಯೋಜನೆ ಮಾಡುತ್ತಿರುವ ರಾಷ್ಟ್ರ ನಿಯಮ ರೂಪಿಸಬಾರದು. ಇದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಕೈಫ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

    ಸದ್ಯ ಸೌಮ್ಯಾ ಅವರ ನಿರ್ಧಾರಕ್ಕೆ ಕೈಫ್ ಅಲ್ಲದೇ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಸಹ ಬೆಂಬಲ ನೀಡಿದ್ದು, ಸೌಮ್ಯಾ ಅವರ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲೂ ಭಾರೀ ಪ್ರಶಂಸೆ ವ್ಯಕ್ತವಾಗಿದ್ದು, ಹಲವರು ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದಾರೆ.

    https://www.facebook.com/permalink.php?story_fbid=2177807325593182&id=218386564868611

    ಏನಿದು ಪ್ರಕರಣ?
    ಇರಾನ್ ನಲ್ಲಿ ಜೂನ್ 26 ರಿಂದ ಆಗಸ್ಟ್ 4 ವರೆಗೆ ನಡೆಯಲಿರುವ ಏಷ್ಯಾ ಚೆಸ್ ಟೂರ್ನಿಯಿಂದ ಭಾರತದ ತಂಡದ ಆಟಗಾರ್ತಿ ಸೌಮ್ಯಾ ಸ್ವತಃ ನಿರ್ಧಾರದಿಂದ ಹೊರ ನಡೆದಿದ್ದರು. ಇರಾನ್ ದೇಶ ಮಹಿಳೆಯರು ಕಡ್ಡಾಯವಾಗಿ ತಲೆಗೆ ಸ್ಕಾರ್ಫ್ ಧರಿಸಬೇಕೆಂಬ ನಿಯಮವಿದೆ. ಇದರಂತೆ ಟೂರ್ನಿಯಲ್ಲಿ ಭಾಗವಹಿಸುವ ಆಟಗಾರ್ತಿಯರು ಕಡ್ಡಾಯವಾಗಿ ತಲೆಗೆ ಸ್ಕಾರ್ಫ್ ಧರಿಸಬೇಕೆಂಬ ನಿಯಮ ರೂಪಿಸಿತ್ತು. ಈ ಕಾರಣದಿಂದ ಸ್ಕಾರ್ಫ್ ಧರಿಸಲು ನಿರಾಕರಿಸಿದ್ದ ಸೌಮ್ಯ ಟೂರ್ನಿಯಿಂದ ಹೊರ ನಡೆಯುವ ತೀರ್ಮಾನವನ್ನು ಪ್ರಕಟಿಸಿದ್ದರು.

    ಈ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದ ಸೌಮ್ಯ, ಇರಾನ್ ಕಾನೂನು ನನ್ನ ಅಭಿವ್ಯಕ್ತಿ ಸ್ವಾತಂತ್ರ್ಯ, ಚಿಂತನೆ, ಆತ್ಮಸಾಕ್ಷಿ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಹಕ್ಕಗಳು ಸೇರಿದಂತೆ ನನ್ನ ಮಾನವ ಹಕ್ಕುಗಳನ್ನು ರಕ್ಷಿಸಿ ಕೊಳ್ಳಲು ಟೂರ್ನಿಗೆ ತೆರಳದೇ ಇರುವುದು ಸೂಕ್ತ ಎಂದು ಬರೆದುಕೊಂಡಿದ್ದಾರೆ.

    ಇದೇ ಮೊದಲಲ್ಲ: ಭಾರತೀಯ ಆಟಗಾರರು ಡ್ರೆಸ್ ಕೋಡ್ ಕಾರಣದಿಂದ ಈ ಹಿಂದೆಯೂ ಹಲವು ಟೂರ್ನಿಗಳಿಂದ ಹೊರ ನಡೆದಿದ್ದರು. ಪ್ರಮುಖವಾಗಿ 2016 ರಲ್ಲಿ ಶೂಟರ್ ಹೀನಾ ಸಿಂಧು ಏಷ್ಯಾ ಏರ್ ಗನ್ ಶೂಟಿಂಗ್ ಚಾಂಪಿಯನ್ ಶಿಪ್ ನಿಂದ ಹೊರ ನಡೆದಿದ್ದರು.

  • ಸಚಿನ್ ರಾಮನಾದ್ರೆ, ಸೆಹ್ವಾಗ್ ಹನುಮಾನ್-ವೈರಲ್ ಆಗುತ್ತಿದೆ ವಿಶೇಷ ಫೋಟೋ

    ಸಚಿನ್ ರಾಮನಾದ್ರೆ, ಸೆಹ್ವಾಗ್ ಹನುಮಾನ್-ವೈರಲ್ ಆಗುತ್ತಿದೆ ವಿಶೇಷ ಫೋಟೋ

    ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಅವರು ಸಚಿನ್ ತೆಂಡೂಲ್ಕರ್ ಜೊತೆಗಿನ ವಿಶೇಷ ಫೋಟೋವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು, ಈ ಚಿತ್ರಕ್ಕೆ ಅಭಿಮಾನಿಗಳೂ ಫಿದಾ ಆಗಿದ್ದಾರೆ.

    ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಸೆಹ್ವಾಗ್, ಸಚಿನ್ ಅವರ ಮುಂದೇ ಮಂಡಿಯೂರಿ ಹನುಮಂತನಂತೆ ಕುಳಿತ್ತಿದ್ದು, ಸಚಿನ್ ರಾಮನಂತೆ ನಿಂತಿದ್ದಾರೆ. ಈ ಚಿತ್ರವನ್ನು ಸ್ವತಃ ಸೆಹ್ವಾಗ್ ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು, ಅಭಿಮಾನಿಗಳು ಇಬ್ಬರ ನಡುವಿನ ಬಾಂಧವ್ಯ ಕಂಡು ಮೆಚ್ಚುಗೆ ಸೂಚಿಸಿದ್ದಾರೆ.

    ಖಾಸಗಿ ವಾಹಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿನ್, ಸೆಹ್ವಾಗ್ ಕುರಿತ ಹಲವು ವಿಷಯಗಳನ್ನು ಬಹಿರಂಗ ಪಡಿಸಿದ್ದರು. ಮುಖ್ಯವಾಗಿ ಸೆಹ್ವಾಗ್ ತಂಡಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ತಮ್ಮೊಂದಿಗೆ ಮಾತನಾಡುತ್ತಲೇ ಇರಲಿಲ್ಲ. ಜೊತೆಯಲ್ಲೇ ಇನ್ನಿಂಗ್ ಆರಂಭಿಸಿದರು ಸಹ ಮಾತನಾಡುತ್ತಿರಲಿಲ್ಲ. ಬಳಿಕ ತಾವೇ ಮಾತನಾಡಲು ಮುಂದಾಗಿದ್ದಾಗಿ ತಿಳಿಸಿದ್ದರು.

    ಸೆಹ್ವಾಗ್ ರನ್ನು ಮಾತನಾಡಿಸಲು ಮುಂದಾದ ವೇಳೆ ಸಚಿನ್ ಪಂದ್ಯದ ಮೊದಲು ಊಟಕ್ಕೆ ಆಹ್ವಾನಿಸಿದ್ದು, ಈ ವೇಳೆ ಸೆಹ್ವಾಗ್ ತಾವು ಸಸ್ಯಾಹಾರಿ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ. ಇದೇ ವೇಳೆ ಏಕೆ ಮಾಂಸ ಸೇವನೆ ಮಾಡುವುದಿಲ್ಲ ಎಂಬ ಮರುಪ್ರಶ್ನೆಗೆ ಉತ್ತರಿಸಿ ಮನೆಯಲ್ಲಿ ಚಿಕನ್ ಸೇವಿಸಿದರೆ ದಪ್ಪವಾಗುವುದಾಗಿ ಹೇಳಿದ್ದಾರೆ. ಅದ್ದರಿಂದ ತಾವು ಮಾಂಸ ಆಹಾರ ಸೇವಿಸುವುದಿಲ್ಲ ಎನ್ನುವ ಉತ್ತರವನ್ನು ಸೆಹ್ವಾಗ್ ನೀಡಿದ್ದರು ಎಂದು ಸಚಿನ್ ಹೇಳಿದರು.

    ಮಾಜಿ ಆಟಗಾರರಾಗಿರುವ ಸೆಹ್ವಾಗ್ ಹಾಗೂ ಸಚಿನ್ ಟೀಂ ಇಂಡಿಯಾದ ಓಪನಿಂಗ್ ಬ್ಯಾಟ್ಸ್ ಮನ್ ಗಳಾಗಿದ್ದು, ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಬಳಿಕವೂ ಉತ್ತಮ ಸ್ನೇಹಿರಾಗಿ ಮುಂದುವರಿದಿದ್ದಾರೆ.

  • ಆರ್‌ಸಿಬಿ ತಂಡದಿಂದ ಡ್ರಾಪ್ ಆದ ಸತ್ಯ ಬಿಚ್ಚಿಟ್ಟ ಕ್ರಿಸ್ ಗೇಲ್

    ಆರ್‌ಸಿಬಿ ತಂಡದಿಂದ ಡ್ರಾಪ್ ಆದ ಸತ್ಯ ಬಿಚ್ಚಿಟ್ಟ ಕ್ರಿಸ್ ಗೇಲ್

    ಮೊಹಾಲಿ: ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಆಯ್ಕೆಗಾರರು ಐಪಿಎಲ್ 11 ನೇ ಆವೃತ್ತಿಗೆ ತನ್ನನ್ನು ಉಳಿಸಿಕೊಳ್ಳುವ ಬಗ್ಗೆ ಮೊದಲು ಮಾಹಿತಿ ನೀಡಿದ್ದರು. ಆದ್ರೆ ಬಳಿಕ ಅವರು ತನ್ನನ್ನು ಸಂಪರ್ಕಿಸಲಿಲ್ಲ. ಇದರಿಂದ ತನಗೆ ನಿರಾಸೆ ಅನುಭವ ಉಂಟಾಗಿತ್ತು ಎಂದು ಕಿಂಗ್ಸ್ ಇಲೆವೆನ್ ತಂಡ ಹಾಗೂ ಕೆರೆಬಿಯನ್ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ಹೇಳಿದ್ದಾರೆ.

    ಈ ಕುರಿತು ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಮೊದಲು ಆರ್‌ಸಿಬಿ ತಂಡದ ಆಯ್ಕೆ ಸಮಿತಿ ತನ್ನನ್ನು ಉಳಿಸಿಕೊಳ್ಳುವುದಾಗಿ ಮಾಹಿತಿ ನೀಡಿತ್ತು. ಆದರೆ ಬಳಿಕ ತಮ್ಮ ನಿರ್ಧಾರವನ್ನು ಬದಲಾಯಿಸಿದರು. ಆದರೆ ಈ ಕುರಿತು ಯಾರನ್ನು ಹೊಣೆ ಮಾಡಲು ಸಾಧ್ಯವಿಲ್ಲ. ತಾನು ಈ ಹಿಂದಿನ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇನೆ. ಇದಕ್ಕೆ ಸಾಕ್ಷಿ ಎಂಬಂತೆ 21 ಶತಕ ಹಾಗೂ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ಹೊಂದಿದ್ದೇನೆ ಎಂದರು.

    ಸೆಹ್ವಾಗ್ ಅಚ್ಚರಿ ಆಯ್ಕೆ: ಐಪಿಎಲ್ ಟೂರ್ನಿಯ ಹರಾಜು ಪ್ರಕ್ರಿಯೆ ವೇಳೆ ತನ್ನನ್ನು ಎರಡು ಬಾರಿಯೂ ಆಯ್ಕೆ ಮಾಡಿರಲಿಲ್ಲ. ಆದರೆ ಮೂರನೇ ಬಾರಿ ಸೆಹ್ವಾಗ್ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುವ ಅವಕಾಶ ನೀಡಿದ್ದರು. ಇದು ತನಗೆ ಅಚ್ಚರಿ ಮೂಡಿಸಿತ್ತು. ಈ ಮೊದಲು ತಾನು ಟೂರ್ನಿಗೆ ಅಗತ್ಯವಿಲ್ಲ `ಇಟ್ಸ್ ಫೈನ್’ ಎಂದು ಸಮಾಧಾನಗೊಂಡಿದ್ದೆ ಎಂದು ಹೇಳಿದರು.

    ಕಪ್ ಗೆಲ್ಲಬೇಕು: ಈ ಬಾರಿಯ ಟೂರ್ನಿಯಲ್ಲಿ ತಾನು ಕೇವಲ ಒಂದು ಉದ್ದೇಶ ಹೊಂದಿದ್ದೇನೆ. ಅದು ಪಂಜಾಬ್ ಕಪ್ ಗೆಲ್ಲುವಂತೆ ಮಾಡುವುದು. ತಂಡದ ಮಾಲೀಕರಾದ ಪ್ರೀತಿ ಜಿಂಟಾ ಅವರಿಗೆ ಕಪ್ ಗೆದ್ದು ನೀಡುತ್ತೇವೆ. ಇದಾದ ಬಳಿಕ 2019 ರ ವಿಶ್ವಕಪ್ ಅನ್ನು ತನ್ನ ದೇಶಕ್ಕೆ ಗೆಲ್ಲಿಸಿಕೊಡ ಬೇಕಿದೆ. ಆದ್ರೆ ವಿಶ್ವಕಪ್ ಗೆ ಆಯ್ಕೆಯಾಗಲು ಸಾಕಷ್ಟು ಹೋರಾಟ ನಡೆಸಬೇಕಾಯಿತು ಎಂದು ಹೇಳಿದರು.

    ಕಳೆದ 10 ಐಪಿಎಲ್ ಟೂರ್ನಿಗಳಲ್ಲಿ ಗೇಲ್ 6 ಶತಕಗಳನ್ನು ಒಳಗೊಂಡಂತೆ 3,878 ರನ್ ಗಳಿಸಿದ್ದಾರೆ. 11 ನೇ ಆವೃತ್ತಿಯಲ್ಲಿ ಉತ್ತಮ ಆರಂಭ ಪಡೆದಿರುವ ಗೇಲ್ ಈಗಾಗಲೇ ಹೈದರಾಬಾದ್ ವಿರುದ್ಧ ಸ್ಫೋಟಕ ಶತಕ (106 ರನ್) ಸಿಡಿಸಿದ್ದು, ಇದುವರೆಗೂ ಆಡಿರುವ ಪಂದ್ಯಗಳಲ್ಲಿ 161.53 ಸ್ಟ್ರೈಕ್ ರೇಟ್ ನಲ್ಲಿ 252 ರನ್ ಸಿಡಿಸಿದ್ದಾರೆ.