Tag: ಸೇಬಿನ ಹಾರ

  • ರೋಡ್ ಶೋ ಕ್ಯಾನ್ಸಲ್ – ಅಮಿತ್ ಶಾಗೆ ತಂದಿದ್ದ 250 ಕೆಜಿ ಸೇಬಿನ ಹಾರ ಕ್ಷಣದಲ್ಲೇ ಚಿಂದಿ

    ರೋಡ್ ಶೋ ಕ್ಯಾನ್ಸಲ್ – ಅಮಿತ್ ಶಾಗೆ ತಂದಿದ್ದ 250 ಕೆಜಿ ಸೇಬಿನ ಹಾರ ಕ್ಷಣದಲ್ಲೇ ಚಿಂದಿ

    ಬೆಂಗಳೂರು: ವಿಧಾನಸಭಾ ಚುನಾವಣೆ (Assembly Election)  ಹಿನ್ನೆಲೆ ಬಿಜೆಪಿ (BJP) ಪ್ರಚಾರ ಕಾರ್ಯಗಳನ್ನು ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾಜ್ಯಕ್ಕೆ ಆಗಮಿಸಿದ್ದಾರೆ. ಆದರೆ ಶುಕ್ರವಾರ ನಿಗದಿಪಡಿಸಲಾಗಿದ್ದ ಶಾ ಅವರ ರೋಡ್ ಶೋವನ್ನು (Road Show) ಮಳೆಯ ಹಿನ್ನೆಲೆ ರದ್ದುಗೊಳಿಸಲಾಗಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ, ಮಳೆ ಬರುತ್ತಿರುವ ಹಿನ್ನೆಲೆ ರೋಡ್ ಶೋ ಮುಂದೂಡಿಕೆ ಮಾಡಿದ್ದೇವೆ. ಮಳೆ ಇರುವ ಕಾರಣ ತಮಗೆ ತೊಂದರೆ ಆಗಬಹುದು. ಮುಂದಿನ ದಿನಗಳಲ್ಲಿ ದಿನಾಂಕ ನಿಗದಿ ಮಾಡಿ ರೋಡ್ ಶೋ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ಅಮಿತ್ ಶಾ ಅವರು ಈಗಾಗಲೇ ಬೆಂಗಳೂರಿಗೆ (Bengaluru) ಬಂದಿದ್ದಾರೆ. ಮಳೆ ಹೆಚ್ಚಾದ ಕಾರಣದಿಂದ ಹೈಕಮಾಂಡ್ ನಾಯಕರು ಈ ರೋಡ್ ಶೋ ಕ್ಯಾನ್ಸಲ್ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತೆ ಕಾರ್ಯಕ್ರಮ ಮಾಡುತ್ತೇವೆ. ಮತ್ತೆ ನಾವು ಇದೇ ಜಾಗದಲ್ಲಿ ಸೇರೋಣ. ವರುಣ ದೇವರು ನಮಗೆ ಆಶೀರ್ವಾದ ಮಾಡಿದ್ದಾರೆ. ಪುನಃ ಕಾರ್ಯಕ್ರಮ ಆಯೋಜಿಸಿ ಘೋಷಣೆ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮತ್ತೆ ಗೆಲ್ತಾರಾ ತಿಪ್ಪಾ ರೆಡ್ಡಿ – ಚಿತ್ರದುರ್ಗ ಅಖಾಡ ಹೇಗಿದೆ?

    ಅಮಿತ್ ಶಾ ರೋಡ್ ಶೋ ರದ್ದಾಗುತ್ತಿದ್ದಂತೆಯೇ ಅವರಿಗಾಗಿ ತರಿಸಲಾಗಿದ್ದ 250 ಕೆಜಿ ತೂಕದ ಸೇಬಿನ ಹಾರವನ್ನು (Apple Garland) ಜನರು ಚಿಂದಿ ಚಿಂದಿ ಮಾಡಿದ್ದಾರೆ. ಹಾರಕ್ಕೆ ಕೈ ಹಾಕಿ ಸೇಬುಗಳನ್ನು ಜನರು ಕಿತ್ತುಕೊಂಡು ಹೋಗಿದ್ದು, ಕ್ಷಣಾರ್ಧದಲ್ಲೇ ಹಾರದಲ್ಲಿದ್ದ ಸೇಬುಗಳೆಲ್ಲವೂ ಖಾಲಿಯಾಗಿ ಹೋಗಿದೆ. ಇದನ್ನೂ ಓದಿ: ಹಿರಿಯೂರಲ್ಲಿ ಡಿಕೆಶಿ ಆಪ್ತ ಸುಧಾಕರ್, ಬಿಎಸ್‌ವೈ ದತ್ತು ಪುತ್ರಿ ಪೂರ್ಣಿಮಾ ಮಧ್ಯೆ ಜಟಾಪಟಿ

  • ಮಾಜಿ ಸಿಎಂಗೆ 500 ಕೆಜಿ ತೂಕದ ಸೇಬು ಹಾರ ಹಾಕಿದ ಅಭಿಮಾನಿಗಳು

    ಮಾಜಿ ಸಿಎಂಗೆ 500 ಕೆಜಿ ತೂಕದ ಸೇಬು ಹಾರ ಹಾಕಿದ ಅಭಿಮಾನಿಗಳು

    ಹಾವೇರಿ: ರಾಣೇಬೆನ್ನೂರು ಉಪಚುನಾವಣೆ ಹಿನ್ನೆಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತಬೇಟೆಗೆ ಇಳಿದಿದ್ದು, ಅಭಿಮಾನಿಗಳು ಬರೋಬ್ಬರಿ 500 ಕೆ.ಜಿ ತೂಕದ ಸೇಬುಹಣ್ಣಿನ ಹಾರವನ್ನು ಹಾಕಿ ತಮ್ಮ ನೆಚ್ಚಿನ ನಾಯಕನಿಗೆ ಸ್ವಾಗತ ಕೋರಿದ್ದಾರೆ.

    ಉಪಚುನಾವಣೆ ಹಿನ್ನೆಲೆ ಎಲ್ಲೆಡೆ ಭರ್ಜರಿ ಪ್ರಚಾರ ನಡೆಸುತ್ತಿರುವ ಸಿದ್ದರಾಮಯ್ಯ ಅವರು ಇಂದು ರಾಣೆಬೆನ್ನೂರಿನಲ್ಲಿ ಮತಬೇಟೆ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಪರ ಸಿದ್ದರಾಮಯ್ಯ ಮತಯಾಚನೆ ಮಾಡಿದ್ದಾರೆ. ರಾಣೇಬೆನ್ನೂರು ತಾಲೂಕು ಕವಲತ್ತು ಗ್ರಾಮದಲ್ಲಿ ಕೆ.ಬಿ ಕೋಳಿವಾಡ ಜೊತೆಗೆ ಸಿದ್ದರಾಮಯ್ಯ ರೋಡ್ ಶೋ ಮಾಡಿದ್ದು, ಈ ವೇಳೆ ಅಭಿಮಾನಿಗಳು ಸಿದ್ದರಾಮಯ್ಯ ಅವರಿಗೆ ಬರೋಬ್ಬರಿ 500 ಕೆಜಿ ತೂಕದ ಸೇಬಿನ ಹಾರ ಹಾಕಿ ಅಭಿಮಾನ ಮೆರೆದರು.  ಇದನ್ನೂ ಓದಿ:ಚಿಕ್ಕಬಳ್ಳಾಪುರದಲ್ಲಿ ವೋಟ್‍ಗಾಗಿ ಮಾತ್ರವಲ್ಲ ಸೇಬಿಗಾಗಿಯೂ ಫೈಟೋ ಫೈಟು

    ರಾತ್ರಿ ವೇಳೆಯಲ್ಲೂ ಸಿದ್ದರಾಮಯ್ಯ ಅವರು ಬಿರುಸಿನ ಪ್ರಚಾರ ಮಾಡುತ್ತಿದ್ದು, ಅಭಿಮಾನಿಗಳು ಕ್ರೇನ್ ಮೂಲಕ ಸಿದ್ದರಾಮಯ್ಯ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ, ಹೂ ಮಳೆಗೈದು ಅದ್ಧೂರಿಯಾಗಿ ಸ್ವಾಗತಿಸಿದರು. ಅಭಿಮಾನಿಗಳ ಪ್ರೀತಿ, ಬೆಂಬಲ ನೋಡಿ ಸಿದ್ದರಾಮಯ್ಯ ಅವರು ಕೂಡ ಸಂತೋಷಪಟ್ಟರು.

  • ಚಿಕ್ಕಬಳ್ಳಾಪುರದಲ್ಲಿ ವೋಟ್‍ಗಾಗಿ ಮಾತ್ರವಲ್ಲ ಸೇಬಿಗಾಗಿಯೂ ಫೈಟೋ ಫೈಟು

    ಚಿಕ್ಕಬಳ್ಳಾಪುರದಲ್ಲಿ ವೋಟ್‍ಗಾಗಿ ಮಾತ್ರವಲ್ಲ ಸೇಬಿಗಾಗಿಯೂ ಫೈಟೋ ಫೈಟು

    ಚಿಕ್ಕಬಳ್ಳಾಪುರ: ಉಪಚುನಾವಣೆ ಕಣ ದಿನೇ ದಿನೇ ರಂಗೇರುತ್ತಿದ್ದು, ರ‍್ಯಾಲಿಗಳಲ್ಲಿ ಅಭ್ಯರ್ಥಿಗಳಿಗೆ ಸೇಬು ಹಣ್ಣಿನ ಹಾರ ಹಾಕುವ ಟ್ರೆಂಡ್ ಕೂಡ ಶುರುವಾಗಿದೆ. ಆದರೆ ಹಾರವನ್ನು ಹಾಕಿ ತೆಗೆದ ಬಳಿಕ ಈ ಸೇಬಿನ ಹಾರದ ಗತಿ ಏನಾಗುತ್ತೆ ಎಂಬುದು ಚಿಕ್ಕಬಳ್ಳಾಪುರದಲ್ಲಿ ಕೈ ಕಾರ್ಯಕರ್ತರು, ಬೆಂಬಲಿಗರು ತೋರಿಸಿದ್ದಾರೆ.

    ಹೌದು. ಉಪಚುನಾವಣೆ ಹಿನ್ನೆಲೆ ಕೇವಲ ವೋಟಿಗಾಗಿ ಮಾತ್ರವಲ್ಲ ಸೇಬಿಗಾಗಿಯೂ ಬಿಗ್ ಫೈಟ್ ನಡೆದಿದೆ. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಂಜನಪ್ಪಗೆ ಹಾಕಿದ್ದ ಸೇಬಿನ ಹಾರದ ಗತಿ ಏನಾಯ್ತು ಎಂದು ನೋಡಿದರೆ ನಗು ಬರುತ್ತೆ. ನಾಮಪತ್ರ ಸಲ್ಲಿಕೆ ರ‍್ಯಾಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಂಜನಪ್ಪ ಅವರಿಗೆ ಪ್ರೀತಿಯಿಂದ ಸೇಬಿನ ಬೃಹತ್ ಹಾರ ಹಾಕಿದ್ದರು. ಆದರೆ ಹಾರವನ್ನು ಹಾಕಿ ತೆಗೆದ ಬಳಿಕ ಆ ಸೇಬಿಗಾಗಿ ಅಲ್ಲಿದ್ದ ಕಾರ್ಯಕರ್ತರು, ಅಂಜನಪ್ಪ ಬೆಂಬಲಿಗರು ತಾ ಮುಂದು, ನಾ ಮುಂದು ಎಂದು ಹಾರವನ್ನು ಎಳೆದಾಡಿ, ಸೇಬು ಹಣ್ಣಿಗಾಗಿ ಕಿತ್ತಾಡಿದ್ದಾರೆ. ಕೊನೆಗೆ ದಾರವನ್ನು ಮಾತ್ರ ಉಳಿಸಿದ್ದಾರೆ. ಈ ವಿಡಿಯೋ ಸದ್ಯ ಸಖತ್ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ನೋಡಿ ನೆಟ್ಟಿಗರು ಕಾಂಗ್ರೆಸ್ ಕಾಲೆಳೆಯುತ್ತಿದ್ದಾರೆ.

    ಅಂಜನಪ್ಪ ಅವರಿಗೆ ಕ್ರೇನ್ ಮೂಲಕ ಸೇಬಿನ ಹಾರ ಹಾಕಿ ತೆಗೆಯಲಾಯಿತು. ಬಳಿಕ ಆ ಹಾರದಲ್ಲಿದ್ದ ಸೇಬು ಹಣ್ಣಿಗಾಗಿ ಕಾರ್ಯಕರ್ತರು, ಬೆಂಬಲಿಗರು ಕಿತ್ತಾಡಿದ ಪರಿ ನೋಡಿದರೆ ನಗು ಬರುತ್ತೆ. ಹಾರವನ್ನು ಕೆಳಗೆ ಇಳಿಸಿದ್ದೇ ತಡ ಜನರು ಸೇಬು ಹಣ್ಣಿಗಾಗಿ ಕಿತ್ತಾಡಿದ್ದಾರೆ. ಕೆಲವರಂತೂ ಸ್ಥಳದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆಲ್ಲಾ ಹತ್ತಿ ಕಸರತ್ತು ಮಾಡಿ ಸೇಬನ್ನು ಕಿತ್ತು ಮನೆಗೊಯ್ದಿದ್ದಾರೆ.

    ಸೋಮವಾರ ಗೋಕಾಕ್‍ನಲ್ಲಿ ಕೂಡ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ರ‍್ಯಾಲಿಯಲ್ಲಿ ಕಾರ್ಯಕರ್ತರು ಬೃಹತ್ ಸೇಬಿನ ಹಣ್ಣಿನ ಹಾರವನ್ನು ಹಾಕಿದ್ದರು. ಅಲ್ಲದೆ ಚಿಕ್ಕಬಳ್ಳಾಪುರದಲ್ಲಿ ಅಂಜನಪ್ಪ ಪರ ಡಿ.ಕೆ ಶಿವಕುಮಾರ್ ಅವರು ಪ್ರಚಾರಕ್ಕೆ ಬಂದಾಗಲೂ ಅವರಿಗೆ ಕಾರ್ಯಕರ್ತರು ಸೇಬಿನ ಹಾರ ಹಾಕಿ ಪ್ರೀತಿ ಮೆರೆದಿದ್ದರು.

    https://www.youtube.com/watch?v=0y6Bp5XdGVY