Tag: ಸೈಕ್ಲೋನ್

  • ಇರಾಕ್, ಬಾಂಗ್ಲಾದೇಶ ಸೈಕ್ಲೋನ್ ಎಫೆಕ್ಟ್ – ಭಾರತದ 18 ರಾಜ್ಯಗಳಿಗೆ ಮಳೆ ಅಲರ್ಟ್

    ಇರಾಕ್, ಬಾಂಗ್ಲಾದೇಶ ಸೈಕ್ಲೋನ್ ಎಫೆಕ್ಟ್ – ಭಾರತದ 18 ರಾಜ್ಯಗಳಿಗೆ ಮಳೆ ಅಲರ್ಟ್

    ನವದೆಹಲಿ: ಇರಾಕ್ (Iraq) ಹಾಗೂ ಬಾಂಗ್ಲಾದೇಶದಲ್ಲಿ (Bangladesh) ಹುಟ್ಟಿಕೊಂಡ ಚಂಡಮಾರುತದ (Cyclone) ಪರಿಣಾಮ ಭಾರತದ 18 ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಮಳೆಯ ಎಚ್ಚರಿಕೆ ಕೊಟ್ಟಿದೆ.

    ಜಮ್ಮು ಮತ್ತು ಕಾಶ್ಮೀರ, ಬಿಹಾರ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ದೇಶದ 18 ರಾಜ್ಯಗಳಲ್ಲಿ ಮಾ.15ರವರೆಗೆ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ. ಇದನ್ನೂ ಓದಿ: ಮಾ.27 ರಿಂದ ಶ್ರೀಶೈಲ ಮಹಾಕ್ಷೇತ್ರದಲ್ಲಿ ಯುಗಾದಿ ಮಹೋತ್ಸವ

    ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್‌ನಲ್ಲಿ ಮಾ.15ರವರೆಗೆ ಮಳೆ, ಭಾರೀ ಹಿಮಪಾತ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಮಾ.12 ಮತ್ತು 13ರಂದು ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಮಾ.13ರಿಂದ 15ರ ನಡುವೆ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಅಕ್ರಮ ಮದರಸಾಗಳ ಮೇಲೆ ಕ್ರಮ – 15 ದಿನಗಳಲ್ಲಿ 52 ಮದರಸಾಗಳು ಬಂದ್

    ಅರುಣಾಚಲ ಪ್ರದೇಶ, ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ ಮತ್ತು ತ್ರಿಪುರಾಗಳಲ್ಲಿ ಮಾ.15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಮಾ.13ರೊಳಗೆ ಅರುಣಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗುವ ಸಂಭವವಿದೆ. ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿಯೂ ಮಾ.13ರ ಒಳಗಾಗಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದನ್ನೂ ಓದಿ: ಭಾರತಕ್ಕೆ ಶೀಘ್ರವೇ ಸ್ಟಾರ್‌ಲಿಂಕ್‌ ಸ್ಯಾಟಲೈಟ್‌ ಇಂಟರ್ನೆಟ್‌ – ಮಸ್ಕ್‌ ಕಂಪನಿ ಜೊತೆ ಜಿಯೋ, ಏರ್‌ಟೆಲ್‌ ಒಪ್ಪಂದ

    ಪೂರ್ವ ಕರಾವಳಿಯ ಮೀನುಗಾರರು ಪರಿಸ್ಥಿತಿ ಸ್ಥಿರವಾಗುವವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಪೂರ್ವ ಕರಾವಳಿಯಲ್ಲಿ ಅತಿಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮಾರ್ಚ್ 15ರ ನಂತರ ಚಂಡಮಾರುತದ ಪರಿಸ್ಥಿತಿ ದುರ್ಬಲಗೊಳ್ಳುವ ಸಾಧ್ಯತೆಯಿದ್ದು, ಕೆಲವು ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಂಭವವಿದೆ. ಇದನ್ನೂ ಓದಿ: ಪ್ರಯಾಣಿಕರ ಸೋಗಿನಲ್ಲಿ ಗಾಂಜಾ ಸಾಗಾಟ – 14 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

  • Rain Alert: ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲೂ ಭಾರೀ ಮಳೆ ಸಾಧ್ಯತೆ

    Rain Alert: ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲೂ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ರೌದ್ರ ರೂಪ ತಾಳಿದ ಮಿಂಚಾಂಗ್‌ ಚಂಡ ಮಾರುತಕ್ಕೆ ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಈ ಬೆನ್ನಲ್ಲೇ ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಮಿಚಾಂಗ್‌ ಚಂಡ ಮಾರುತದ ಎಫೆಕ್ಟ್‌ನಿಂದ ರಾಜ್ಯದಲ್ಲೂ ಮೋಡ ಕವಿವ ವಾತಾವರಣ ಇದೆ. ಅಲ್ಲಲ್ಲಿ ಮಳೆ ಹನಿಗಳು ಬೀಳುತ್ತಿದ್ದು ಚಳಿಯ ವಾತಾವರಣ ಸೃಷ್ಟಿಸಿದೆ. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಆರೋಪ ಸತ್ಯಕ್ಕೆ ದೂರವಾದದ್ದು: ಚನ್ನರಾಜ ಹಟ್ಟಿಹೊಳಿ

    ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಮಳೆ ಸಾಧ್ಯತೆಯಿದೆ. ಬೆಂಗಳೂರಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ನಗರದಲ್ಲಿಂದು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮುಂದಿನ 24 ಗಂಟೆಗಳ ನಂತರ ಈ ತಾಪಮಾನ ಬದಲಾಗಲಿದ್ದು, ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ಗೆ ಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್ – ಮನೆಯ 2ನೇ ಯಜಮಾನರ ಖಾತೆಗೆ ಅನ್ನಭಾಗ್ಯ ಹಣ

    ಮಿಚಾಂಗ್‌ ಚಂಡಮಾರುತದಿಂದ ಕಳೆದ 80 ವರ್ಷಗಳಲ್ಲಿ ಕಂಡು ಕೇಳರಿಯದಂತಹ ಮಳೆಯಾಗಿದೆ. ಬಿರುಗಾಳಿ ಸಹಿತ ಭಾರೀ ಮಳೆಗೆ ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಅನೇಕ ರಸ್ತೆಗಳು ಜಲಾವೃತಗೊಂಡಿವೆ. ಬಿಟ್ಟುಬಿಡದೇ ಸುರಿತಿರೋ ಮಳೆಯ ಪರಿಣಾಮ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಚೆನ್ನೈನಲ್ಲಿ 6 ಮಂದಿ ಬಲಿಯಾಗಿದ್ದು, ನೀರುಪಾಲಾಗ್ತಿದ್ದ 20ಕ್ಕೂ ಹೆಚ್ಚು ಜನರನ್ನು ರಕ್ಷಣಾ ಪಡೆಗಳು ಕಾಪಾಡಿವೆ. ನಗರದ 14 ರೈಲ್ವೇ ಸಬ್‌ವೇಗಳು ಬಂದ್ ಆಗಿವೆ. ರೈಲು-ವಿಮಾನ-ರಸ್ತೆ ಸಂಚಾರದಲ್ಲಿ ತೀವ್ರ ವ್ಯತ್ಯಯವಾಗಿವೆ.. ಚೆನ್ನೈ ವಿಮಾನ ನಿಲ್ದಾಣದಲ್ಲಿ ನೀರು ಆವರಿಸಿದೆ. ಪ್ರಮುಖ ರಸ್ತೆಗಳು ಜಲಮಯವಾಗಿವೆ. ಇದನ್ನೂ ಓದಿ: ನಿಮ್ಗೂ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು, ಅನ್ಯಾಯ ಆಗೋಕೆ ಬಿಡಲ್ಲ – ಮುಸ್ಲಿಂ ಸಮಾವೇಶದಲ್ಲಿ ಸಿಎಂ ಅಭಯ

  • Cyclone Michaung ರೌದ್ರಾವತಾರಕ್ಕೆ ಚೆನ್ನೈನಲ್ಲಿ ಐವರು ಬಲಿ; ಶಾಲಾ-ಕಾಲೇಜುಗಳಿಗೆ ರಜೆ

    Cyclone Michaung ರೌದ್ರಾವತಾರಕ್ಕೆ ಚೆನ್ನೈನಲ್ಲಿ ಐವರು ಬಲಿ; ಶಾಲಾ-ಕಾಲೇಜುಗಳಿಗೆ ರಜೆ

    ಚೆನ್ನೈ: ಮಿಚಾಂಗ್ ಚಂಡಮಾರುತ (Cyclone Michaung) ರೌದ್ರರೂಪ ತಾಳಿದೆ. ಪರಿಣಾಮ ತಮಿಳುನಾಡು (Tamilnadu), ಆಂಧ್ರದಲ್ಲಿ (Andhra Pradesh) ಭಾರೀ ಮಳೆಯಾಗಿದೆ. ಕಳೆದ 80 ವರ್ಷಗಳಲ್ಲಿ ಕಂಡು ಕೇಳರಿಯದ ಭಾರೀ ಬಿರುಗಾಳಿ ಸಹಿತ ಮಳೆಗೆ ಚೆನ್ನೈ ನಗರವಂತೂ ಪ್ರವಾಹ ಕಾರಣ ಹೆಚ್ಚು ಕಡಿಮೆ ಸ್ತಂಭಿಸಿದೆ. ಬಿಟ್ಟುಬಿಡದೇ ಸುರಿತಿರೋ ಮಳೆಯ (Rain) ಪರಿಣಾಮ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.

    ಚೆನ್ನೈನಲ್ಲಿ 5 ಮಂದಿ ಬಲಿಯಾಗಿದ್ದು, ನೀರುಪಾಲಾಗುತ್ತಿದ್ದ 20ಕ್ಕೂ ಹೆಚ್ಚು ಜನರನ್ನು ರಕ್ಷಣಾ ಪಡೆಗಳು ಕಾಪಾಡಿವೆ. ನಗರದ 14 ರೈಲ್ವೇ ಸಬ್‍ವೇಗಳು ಬಂದ್ ಆಗಿವೆ. ರೈಲು-ವಿಮಾನ-ರಸ್ತೆ ಸಂಚಾರದಲ್ಲಿ ತೀವ್ರ ವ್ಯತ್ಯಯವಾಗಿವೆ. ಚೆನ್ನೈ ಏರ್ ಪೋರ್ಟ್‍ನಲ್ಲಿ ನೀರು ಆವರಿಸಿದೆ. ಪ್ರಮುಖ ರಸ್ತೆಗಳು ಜಲಮಯವಾಗಿವೆ. ಚೆನ್ನೈ ಸಾರಿಗೆ ಬಸ್‍ಗಳು ಸಹ ರಸ್ತೆಗೆ ಇಳಿದಿಲ್ಲ. ಮನೆಗಳಿಗೂ ನೀರು ನುಗ್ಗಿದೆ. ವಾಹನಗಳು ನೀರಲ್ಲಿ ಮುಳುಗಿವೆ. ಕೋರ್ಟ್-ಕಚೇರಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯುತ್, ನೀರು ಸರಬರಾಜು ವ್ಯವಸ್ಥೆ ಅಸ್ಥವ್ಯಸ್ತವಾಗಿದೆ. ಸಾಧ್ಯವಾದಷ್ಟು ಜನ ಮನೆಗೆ ಸೀಮಿತ ಆಗಬೇಕು ಎಂದು ಸರ್ಕಾರ ಕೋರಿದೆ.

    ಕಾಂಚಿಪುರಂ, ಚೆಂಗಲ್‍ಪಟ್ಟು, ತಿರುವಳ್ಳುವರ್ ಜಿಲ್ಲೆಗಳಲ್ಲೂ ವ್ಯಾಪಕ ಮಳೆ ಆಗುತ್ತಿದೆ. ಆಂಧ್ರದ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಆಗುತ್ತಿದೆ. ತಿರುಮಲದಲ್ಲಿ ಮಳೆ ಕಾರಣ ಭಕ್ತರು ಪರದಾಡಿದರು. ಇಂದು ಮಧ್ಯಾಹ್ನ 12 ಗಂಟೆಗೆ ಮಿಚೌಂಗ್ ಚಂಡಮಾರುತ ನಿಜಾಂಪಟ್ಟಣಂ ಬಳಿ ತೀರ ದಾಟಲಿದೆ. ನಂತರ ಕೋಸ್ತಾ ಆಂಧ್ರ ತೀರಕ್ಕೆ ಸಮನಾಂತವಾರವಾಗಿ ಚಲಿಸಲಿದೆ.  ಇದನ್ನೂ ಓದಿ: ಚೆನ್ನೈನಲ್ಲಿ ಸೈಕ್ಲೋನ್ ಅಬ್ಬರ – ವಿಮಾನಗಳು ಬೆಂಗಳೂರಿಗೆ ಡೈವರ್ಟ್

    ಸದ್ಯ ಚೆನ್ನೈನಿಂದ 90 ಕಿಲೋಮೀಟರ್ ದೂರದಲ್ಲಿ ಚಲಿಸುತ್ತಿದೆ. 90ರಿಂದ 100 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಮುದ್ರ ಪ್ರಕುಬ್ಧಗೊಂಡಿದೆ. ಚೆನ್ನೈ ತಲುಪಬೇಕಿದ್ದ 27ಕ್ಕೂ ಹೆಚ್ಚು ವಿಮಾನಗಳು ಬೆಂಗಳೂರು ಸೇರಿವೆ. ಕರ್ನಾಟಕದಿಂದ ತಮಿಳುನಾಡಿಗೆ ತೆರಳುವ ರೈಲು ಸೇವೆ ಕೂಡ ಬಂದ್ ಆಗಿದೆ.

  • Biparjoy Cyclone: 100 ಕಿ.ಮೀ ವೇಗದಲ್ಲಿ ತೀರ ತಾಕಿದ ತೂಫಾನ್- ಗುಜರಾತ್ ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

    Biparjoy Cyclone: 100 ಕಿ.ಮೀ ವೇಗದಲ್ಲಿ ತೀರ ತಾಕಿದ ತೂಫಾನ್- ಗುಜರಾತ್ ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

    – ಸುರಕ್ಷಿತ ಸ್ಥಳಗಳಿಗೆ 1 ಲಕ್ಷ ಮಂದಿ ಶಿಫ್ಟ್

    ಗಾಂಧಿನಗರ: ಬಿಪರ್‌ಜಾಯ್ ತೂಫಾನ್ (Biparjoy Cyclone) ತೀವ್ರತೆಗೆ ಅರಬ್ಬಿ ಸಮುದ್ರ ತೀರ ಪ್ರದೇಶ ತತ್ತರಿಸಿದೆ. ಭೀಕರ ಚಂಡಮಾರುತ ಸಂಜೆ 7.10ರ ಸುಮಾರಿಗೆ ಗುಜರಾತ್‍ (Gujrat) ನ ಕಛ್ ಪ್ರಾಂತ್ಯ (Kutch) ದ ಕೋಟ್ ಲಖಪತ್ ಬಳಿ ತೀರವನ್ನು ತಾಕಿದೆ.

    ಗುಜರಾತ್ ತೀರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಬೀಸುತ್ತಿದೆ. ಕೆಲವೆಡೆ ಇದಕ್ಕೆ ಭಾರೀ ಮಳೆ ಜೊತೆಯಾಗಿದೆ. ದೊಡ್ಡ ಮಟ್ಟದಲ್ಲಿ ಹಾನಿ ಸಂಭವಿಸ್ತಿದೆ. ಗುಜರಾತ್ ತೀರದಲ್ಲಿ ದಟ್ಟ ಕಾರ್ಮೋಡಗಳು ಆವರಿಸಿದ್ದು, ಸಮುದ್ರ ಪ್ರಕ್ಷುಬ್ಧಗೊಂಡಿದೆ. ಈ ತೂಫಾನ್ ಸಂಪೂರ್ಣವಾಗಿ ತೀರವನ್ನು ದಾಟಲು ಕನಿಷ್ಠ ಐದಾರು ಗಂಟೆ ಬೇಕಾಗುತ್ತದೆ. ಸದ್ಯ ಗಂಟೆಗೆ 100 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಪೂರ್ಣ ಪ್ರಮಾಣದಲ್ಲಿ ತೀರ ದಾಟುವ ಹೊತ್ತಿಗೆ ಈ ಗಾಳಿಯ ವೇಗ 120ರಿಂದ 130 ಕಿಲೋಮೀಟರ್ ಗೆ ಹೆಚ್ಚಾಗಬಹುದು. ಜನತೆ ಎಚ್ಚರಿಂದ ಇರಬೇಕು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

    ತೀರ ಪ್ರದೇಶದ 20ಕ್ಕೂ ಹೆಚ್ಚು ಗ್ರಾಮಗಳಿಂದ ಜನರನ್ನು ಖಾಲಿ ಮಾಡಿಸಲಾಗಿದೆ. ಅಂದಾಜು 1 ಲಕ್ಷ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸರ್ಕಾರ ಶಿಫ್ಟ್ ಮಾಡಿದೆ. ಹೀಗಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಬಿಪರ್‌ಜಾಯ್ ರಾತ್ರಿ 11.30ರ ಹೊತ್ತಿಗೆ ತೀರವನ್ನು ದಾಟುವ ನಿರೀಕ್ಷೆ ಇದ್ದು, ತೀರ ದಾಟಿದ ನಂತರ ಇದು ತೀವ್ರ ತೂಫಾನ್ ಆಗಿ. ನಂತರ ದುರ್ಬಲಗೊಳ್ಳಲಿದೆ. ಇದರ ಪ್ರಭಾವ ಕಛ್-ಸೌರಾಷ್ಟ್ರ ಪ್ರಾಂತ್ಯದಲ್ಲಿ ಭಾರೀ ಮಳೆ ಆಗಲಿದೆ. ಇದನ್ನೂ ಓದಿ: ಗುಜರಾತ್‍ಗೆ Biparjoy Cyclone ಕಂಟಕ – 150 ಕಿ.ಮೀ ವೇಗದಲ್ಲಿ ಗಾಳಿ ಮಳೆ

    ಈಗಾಗಲೇ ದ್ವಾರಕ, ಪೋರಬಂದರ್, ಜಾಮ್‍ನಗರ, ಮೋರ್ಬಿ ಸೇರಿ ಹಲವೆಡೆ ಮೂರರಿಂದ ಆರು ಮೀಟರ್ ಎತ್ತರದವರೆಗೂ ರಕ್ಕಸಗಾತ್ರದ ಅಲೆಗಳು ಏಳುತ್ತಿವೆ. ತೂಫಾನ್ ತೀವ್ರತೆಯನ್ನು ಗಮನದಲ್ಲಿರಿಸಿಕೊಂಡು ಸಮೀಪ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ದೇಗುಲಗಳು, ಕಚೇರಿಗಳು, ಶಾಲೆಗಳು ಬಂದ್ ಆಗಿವೆ. 76 ರೈಲುಗಳ ಸಂಚಾರ ಬಂದ್ ಆಗಿದೆ. ಭೂಸೇನೆ, ನೌಕಾಪಡೆ, ವಾಯುಪಡೆಗಳು ಸನ್ನದ್ಧವಾಗಿವೆ. ಅರಬ್ಬಿ ಸಮುದ್ರದಲ್ಲಿ ಏರ್ಪಟ್ಟ ಚಂಡಮಾರುತಗಳಲ್ಲಿ ಇದು ಹೆಚ್ಚು ಕಾಲ ಚಾಲ್ತಿಯಲ್ಲಿರುವ ಸೈಕ್ಲೋನ್ ಆಗಿರುವುದು ವಿಶೇಷ.

    ಈ ಸೈಕ್ಲೋನ್ ಪ್ರಭಾವ ಗುಜರಾತ್ ಜೊತೆಗೆ 8 ರಾಜ್ಯಗಳ ಮೇಲಿದೆ. ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ, ಗೋವಾ, ಡಿಯು-ಡಾಮನ್, ಲಕ್ಷದ್ವೀಪ, ದಾದ್ರಾ ನಗರ್ ಹವೇಲಿ ಮೇಲೆ ಬೀರಿದೆ. ನೆರೆಯ ಪಾಕಿಸ್ತಾನ (Pakistan) ದಲ್ಲಿಯೂ ಬಿರುಗಾಳಿ ಸಹಿತ ಜೋರು ಮಳೆ ಆಗುತ್ತಿದೆ. ಇನ್ನು, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಬಿಪರ್‌ಜಾಯ್ ಚಂಡಮಾರುತ ತೀವ್ರತೆಯನ್ನು ಸೌದಿಅರೇಬಿಯಾದ ಗಗನಯಾನಿ ಸುಲ್ತಾನ್ ಅಲ್‍ನೆಯಾಡಿ ಸೆರೆ ಹಿಡಿದಿದ್ದಾರೆ.

    ಬಿಪರ್‌ಜಾಯ್ ಸೈಕ್ಲೋನ್ ಕರ್ನಾಟಕದ ಕರಾವಳಿ ತೀರದಲ್ಲೇನೂ ದೊಡ್ಡ ಅವಾಂತರ ಉಂಟು ಮಾಡಿಲ್ಲ. ಹೆಚ್ಚಿದ ಗಾಳಿಯಿಂದಾಗಿ ಮಳೆ ಆಗಿಲ್ಲ. ಆದರೆ ಸಮುದ್ರ ಪಕ್ಷುಬ್ಧಗೊಂಡಿದೆ. ಪರಿಣಾಮ ಮಲ್ಪೆ ಪಡುಕೆರೆಯ ತೀರದಲ್ಲಿ ಕಡಲ್ಕೊರೆತ ಹೆಚ್ಚಿದೆ. ಅರ್ಧ ಕಿಲೋಮೀಟರ್‍ನಷ್ಟು ದೂರ ಕಡಲು ಕೊರೆತ ಉಂಟಾಗಿದೆ. ಭಾರೀ ಗಾತ್ರದ ಕಲ್ಲುಗಳನ್ನು ಭಾರೀ ಅಲೆಗಳು ಸಮುದ್ರದೊಳಕ್ಕೆ ಹೊತ್ತೊಯ್ದಿವೆ. ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದ ಕಡಲ ತೀರಗಳಲ್ಲಿ ರಕ್ಕಸಗಾತ್ರದ ಅಲೆಗಳು ಕಂಡುಬರ್ತಿವೆ. ಜೂನ್ 19ರವರೆಗೂ ಇದೇ ಪರಿಸ್ಥಿತಿ ಇರಲಿದೆ.. ಹೀಗಾಗಿ ಮೀನುಗಾರಿಕೆ ಬಂದ್ ಮಾಡಲಾಗಿದೆ. ಮೀನುಗಾರರು ತಮ್ಮ ಬೋಟುಗಳನ್ನು ಮುಂಜಾಗ್ರತಾ ಕ್ರಮವಾಗಿ ಬೇರೆಡೆಗೆ ಶಿಫ್ಟ್ ಮಾಡ್ತಿದ್ದಾರೆ.

  • Cyclone Biparjoy: ಇಂದು ಸಂಜೆ ಅಪ್ಪಳಿಸಲಿದೆ ಸೈಕ್ಲೋನ್‌ – 74 ಸಾವಿರ ಮಂದಿ ಸ್ಥಳಾಂತರ

    Cyclone Biparjoy: ಇಂದು ಸಂಜೆ ಅಪ್ಪಳಿಸಲಿದೆ ಸೈಕ್ಲೋನ್‌ – 74 ಸಾವಿರ ಮಂದಿ ಸ್ಥಳಾಂತರ

    – ಗಂಟೆಗೆ 150 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಅಬ್ಬರ
    – ಗುಜರಾತಿನ 8 ಜಿಲ್ಲೆಗಳಲ್ಲಿ ಹೈಅಲರ್ಟ್‌

    ನವದೆಹಲಿ: ಉಗ್ರಸ್ವರೂಪ ಪಡೆದುಕೊಂಡು ಮುನ್ನುಗ್ಗುತ್ತಿರುವ ಬಿಪರ್‌ಜಾಯ್‌ ಚಂಡಮಾರುತ (Cyclone Biparjoy) ಇಂದು ಸಂಜೆ ಗುಜರಾತ್‍ನ ಕಛ್ (Gujarat Kutch) ತೀರಕ್ಕೆ ಅಪ್ಪಳಿಸಲಿದೆ.

    ಸಂಜೆ 4 ಮತ್ತು ರಾತ್ರಿ 8 ಗಂಟೆಯ ಒಳಗಡೆ ಚಂಡಮಾರುತ ಕಛ್‌ ತೀರಕ್ಕೆ ಅಪ್ಪಳಿಸಿ ಪಾಕಿಸ್ತಾನದ (Pakistan) ಕಡೆಗೆ ಸಾಗಲಿದೆ. ಕಳೆದ 58 ವರ್ಷಗಳಲ್ಲೇ ಜೂನ್ ತಿಂಗಳಲ್ಲಿ ಕಾಣಿಸಿಕೊಳ್ಳುತ್ತಿರುವ ದೊಡ್ಡ ಚಂಡಮಾರುತ ಇದಾಗಿದ್ದು ಅರಬ್ಬಿ ಸಮುದ್ರದ ಸಮೀಪದ ಪ್ರದೇಶಗಳಲ್ಲಿ (Arabian Sea) ಭಾರೀ ಅನಾಹುತ ಸೃಷ್ಟಿಸಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

    ಗುಜರಾತ್‍ನ ಸೌರಾಷ್ಟ್ರ, ಕಛ್, ಜಾಮ್‍ನಗರ, ದ್ವಾರಕಾ ಸೇರಿ 8 ಜಿಲ್ಲೆಗಳಿಗೆ ಹೈಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಮುದ್ರ ತೀರದಿಂದ 10 ಕಿ.ಮೀ. ಅಂತರದಲ್ಲಿನ ಸುಮಾರು 74 ಸಾವಿರ ಮಂದಿಯನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗಿದೆ. ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ ಬಗ್ಗೆ ಅಭಿಪ್ರಾಯ ತಿಳಿಸಿ: ಸಾರ್ವಜನಿಕರಿಗೆ ಕೇಂದ್ರ ಕಾನೂನು ಆಯೋಗ ಮನವಿ

    ಪಶ್ಚಿಮ ರೈಲ್ವೇ 76 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಗಾಳಿಯ ವೇಗ ಗಂಟೆಗೆ 125 ರಿಂದ 150 ಕಿ.ಮೀ ಇರಲಿದ್ದು, ಪ್ರವಾಹ ಪರಿಸ್ಥಿತಿಯೂ ಎದುರಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

    18 ಎನ್‍ಡಿಆರ್‌ಎಫ್,12 ಎಸ್‌ಡಿಆರ್‌ಎಫ್‌, 115 ರಾಜ್ಯ ರಸ್ತೆ ಹಾಗೂ ನಿರ್ಮಾಣ ಕೇಂದ್ರ ತಂಡಗಳು, 397 ವಿದ್ಯುತ್‌ ಇಲಾಖೆಯ ತಂಡಗಳನ್ನು ರಕ್ಷಣಾ ಕೆಲಸಕ್ಕೆ ನಿಯೋಜಿಸಲಾಗಿದೆ. ವಾಯುಪಡೆ, ನೌಕಾಪಡೆಗೆ ಯಾವುದಕ್ಕೂ ಸನ್ನದ್ಧವಾಗಿರುವಂತೆ ಸೂಚಿಸಲಾಗಿದೆ.

    ಬಿರುಗಾಳಿಯಿಂದ ಈಗಾಗಲೇ ಗುಜರಾತ್‌ ತೀರದ ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಮೊಬೈಲ್‌ ಹಾಗೂ ಸ್ಥಿರ ದೂರವಾಣಿಯಲ್ಲಿ ಸಂಪರ್ಕ ವ್ಯತ್ಯಯವಾಗಲಿರುವ ಕಾರಣ ರಕ್ಷಣಾ ತಂಡಗಳಿಗೆ ಸ್ಯಾಟಲೈಟ್‌ ಫೋನ್‌ಗಳನ್ನು ನೀಡಲಾಗಿದೆ. ಶಾಲೆ ಮತ್ತು ಇತರ ಸಭಾಭವನದಂತಹ ದೊಡ್ಡ ಕಟ್ಟಡಗಳಲ್ಲಿ ತಾತ್ಕಾಲಿಕ ಆಶ್ರಯ ಶಿಬಿರ ನಿರ್ಮಾಣ ಮಾಡಲಾಗಿದೆ.

     

    ಚಂಡಮಾರುತರದಿಂದ ಸಮುದ್ರ ಪ್ರಕ್ಷುಬ್ಧವಾಗಿದು ಸೌರಾಷ್ಟ್ರ ಮತ್ತು ಕಛ್‌ ತೀರದಲ್ಲಿ 6 ಅಡಿ ಎತ್ತರದ ಅಲೆಗಳು ಏಳಲು ಆರಂಭಿಸಿದೆ. ಇಂದು ಅಲೆಗಳ ಎತ್ತರ 9 ಅಡಿಗೆ ಹೋಗಬಹುದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಗುಜರಾತ್ ಜೊತೆಗೆ ಮಹಾರಾಷ್ಟ್ರ, ಗೋವಾ, ಕರ್ನಾಟಕದ ಕರಾವಳಿ ತೀರದ ಮೇಲೂ ನಿಗಾ ಇಡಲಾಗಿದೆ.

  • ಚೆನ್ನೈನ ಸೈಕ್ಲೋನ್ ಹೊಡೆತಕ್ಕೆ ಸಿಲುಕಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ

    ಚೆನ್ನೈನ ಸೈಕ್ಲೋನ್ ಹೊಡೆತಕ್ಕೆ ಸಿಲುಕಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ

    ಕನ್ನಡದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಸೈಕ್ಲೋನ್ ಹೊಡೆತಕ್ಕೆ ಸಿಕ್ಕು ತತ್ತರಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ತಾವು ಎದುರಿಸಿದ ಸೈಕ್ಲೋನ್ ರಾಡಾರ್ ಸಿನಿಮಾದ ಸೈಕ್ಲೋನ್ ಸುತ್ತುವ ಮಧ್ಯ ಭಾಗದಲ್ಲಿ ಇದ್ದೇವೆ ಎನ್ನುವಂತೆ ಭಾಸವಾಯಿತು ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಸಿನಿಮಾದ ನಿರ್ಮಾಪಕ ದೇವರಾಜ್.ಆರ್ ಕೂಡ ಇದ್ದರು ಎಂದು ಹೇಳಿದ್ದಾರೆ.

    ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿಅವರು, ‘ತುರ್ತು ಕೆಲಸದ ಮೇಲೆ ಚೆನ್ನೈಗೆ ಬಂದಿದ್ದೆ, ವಾಪಾಸ್ಸು ಬರಲು ಟಿಕೆಟ್ ಬುಕ್ ಆಗಿದ್ದ ವಿಮಾನ ರದ್ದಾದ ಕಾರಣ ನಾನು ನಮ್ಮ ನಿರ್ಮಾಪಕರು, ರಸ್ತೆಯ ಮೂಲಕ ಬೆಂಗಳೂರು ತಲುಪಲು ನಿರ್ಧರಿಸಿ ಚೆನ್ನೈ ಸಿಟಿಯಿಂದ ಒಂದು ಐವತ್ತು ಕಿಮೀ ಬಂದು ರಸ್ತೆ ಸಾಗಲು ಸಹ ತ್ರಾಸದಾಯಕವಾದ ಸೈಕ್ಲೋನ್ ನೋಡುತ್ತಾ ಕೂತಿರುವ ಕ್ಷಣ. ರಾಡಾರ್ ಚಿತ್ರದಲ್ಲಿ ಸೈಕ್ಲೋನ್ ಸುತ್ತುವ ಮಧ್ಯ ಭಾಗದಲ್ಲಿ ನಾವಿದ್ದೇವೆ ಎಂದು ತೋರಿಸುತ್ತಿದೆ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಹುಡುಗಿಯ ಜೊತೆ ಸಲ್ಮಾನ್ ಖಾನ್‌ಗೆ ಪ್ಯಾರ್

    ಬರಹದ ಜೊತೆಗೆ ವಿಡಿಯೋ ಪೋಸ್ಟ್ ಮಾಡಿದ್ದು, ಅದನ್ನು ನೋಡಿದ ಹಲವರು ಇಂತಹ ಸಾಹಸವನ್ನು ಇನ್ನೊಮ್ಮೆ ಮಾಡಬೇಡಿ ಎಂದು ಪ್ರೀತಿಯಿಂದ ಗದರಿದ್ದಾರೆ. ಆ ಸೈಕ್ಲೋನ್ ನಿಂದ ಪಾರಾಗಿ ಬಂದಿರುವ ಮಂಸೋರೆ ಮತ್ತು ನಿರ್ಮಾಪಕರು ಸುರಕ್ಷಿತವಾಗಿ ಮನೆ ತಲುಪಿದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ವಿಡಿಯೋ ವೀಕ್ಷಿಸಿದ ಹಲವರು ಆತಂಕವನ್ನು ವ್ಯಕ್ತಪಡಿಸುವ ಮೂಲಕ ಸುರಕ್ಷಿತವಾಗಿ ಮನೆ ತಲುಪಿ ಎಂದು ಹಾರೈಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ನವೆಂಬರ್ 26ರಿಂದ ಮತ್ತೆ ಸೈಕ್ಲೋನ್ ಸಾಧ್ಯತೆ

    ನವೆಂಬರ್ 26ರಿಂದ ಮತ್ತೆ ಸೈಕ್ಲೋನ್ ಸಾಧ್ಯತೆ

    ಬೆಂಗಳೂರು: ಭಾರೀ ಮಳೆಯಿಂದ ಈಗಾಗಲೇ ಕಂಗೆಟ್ಟಿರುವ ರಾಜ್ಯಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ನವೆಂಬರ್ 26ರಿಂದ ಮೂರು ದಿನ ಬೆಂಗಳೂರು ಸೇರಿ ಹಲವೆಡೆ ಮತ್ತೆ ವರುಣಾರ್ಭಟದ ಮುನ್ಸೂಚನೆ ಸಿಕ್ಕಿದೆ.

    kerala rain

    ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತ, ಚಂಡಮಾರುತವಾಗಿ ರೂಪುಗೊಳ್ಳುವ ಸಂಭವ ಇದೆ. ಇದರ ಪರಿಣಾಮ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಆರಗ ಜ್ಞಾನೇಂದ್ರ ಇಡೀ ರಾಜ್ಯಕ್ಕೆ ಅಲ್ಲ, ಕೇವಲ ತೀರ್ಥಹಳ್ಳಿಗೆ ಮಾತ್ರ ಗೃಹ ಸಚಿವ: ಕಿಮ್ಮನೆ ರತ್ನಾಕರ್

    ಸಮಾಧಾನದ ವಿಚಾರ ಅಂದ್ರೆ ನಾಳೆಯಿಂದ ಮೂರು ದಿನ ವರುಣದೇವ ರಾಜ್ಯದ ಜನತೆಗೆ ಒಂದಿಷ್ಟು ಬಿಡುವು ಕೊಡಲಿದ್ದಾನೆ. ಆದರೆ ಬೆಂಗಳೂರಲ್ಲಿ ಮಾತ್ರ ತುಂತುರು ಮಳೆ ಮುಂದುವರಿಯುವ ಸಾಧ್ಯತೆ ಇದೆ. ಪ್ರಸಕ್ತ ತಿಂಗಳಲ್ಲಿ ಈವರೆಗೂ ಬೆಂಗಳೂರಿನಲ್ಲಿ ವಾಡಿಕೆಗಿಂತ 4 ಪಟ್ಟು ಹೆಚ್ಚು ಮಳೆಯಾಗಿದೆ. ನವೆಂಬರ್ ತಿಂಗಳಲ್ಲಿ 57 ಮಿ.ಮೀ ಮಳೆಯಾಗಬೇಕಿತ್ತು. ಆದರೆ ಬರೋಬ್ಬರಿ 267 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಪರಿಷತ್‌ ಚುನಾವಣೆ- ಕಾಂಗ್ರೆಸ್‌ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ

  • ರಾಜ್ಯಕ್ಕೆ ತಪ್ಪದ ಮಳೆ ಕಾಟ – ರಾಜ್ಯಕ್ಕೆ ವಕ್ಕರಿಸಲಿದೆ ಮತ್ತೊಂದು ಸೈಕ್ಲೋನ್

    ರಾಜ್ಯಕ್ಕೆ ತಪ್ಪದ ಮಳೆ ಕಾಟ – ರಾಜ್ಯಕ್ಕೆ ವಕ್ಕರಿಸಲಿದೆ ಮತ್ತೊಂದು ಸೈಕ್ಲೋನ್

    ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಅಪಾರ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಜನ ರೋಸಿ ಹೋಗಿದ್ದಾರೆ. ಈ ನಡುವೆ ರಾಜ್ಯಕ್ಕೆ ಮತ್ತೊಂದು ಸೈಕ್ಲೋನ್ ಆವರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ನವೆಂಬರ್ 26ಕ್ಕೆ ರಾಜ್ಯದಲ್ಲಿ ಮತ್ತೊಂದು ಸೈಕ್ಲೋನ್ ಬರಲಿದ್ದು, ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅನಾಹುತ – ರಾಜಕಾಲುವೆ ಒಡೆದು ರಸ್ತೆ, ಮನೆಗಳಿಗೆ ನುಗ್ಗಿದ ನೀರು

    ವಾಯುಭಾರ ಕುಸಿತದಿಂದಾಗಿ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಲಾಗಿದೆ. ಸದ್ಯದ ಮಳೆ 25ಕ್ಕೆ ಕ್ಷೀಣಿಸಲಿದ್ದು, ಇದಾದ ಬೆನ್ನಲ್ಲೇ ಒಂದೇ ದಿನಕ್ಕೆ ರಾಜ್ಯಕ್ಕೆ ಮತ್ತೊಂದು ಚಂಡಮಾರುತ ಬರುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಜ್ಯದಲ್ಲಿ ಅಕಾಲಿಕ ಪ್ರವಾಹದಿಂದ ಅಪಾರ ನಷ್ಟ – ಮಳೆಗೆ 24 ಮಂದಿ ಬಲಿ

    ಈಗಾಗಲೇ ಮಳೆಯಿಂದಾಗಿ ರಾಜ್ಯದಲ್ಲಿ ಅಪಾರ ಬೆಳೆ, ಮನೆ ಹಾಗೂ ಪ್ರಾಣ ಹಾನಿ ಹೀಗೆ ಅನೇಕ ನಷ್ಟ ಸಂಭವಿಸಿದ್ದು, ಜನ ಕಂಗಲಾಗಿದ್ದು ಚಂಡಮಾರುತದಿಂದ ಮತ್ತಷ್ಟು ಸಮಸ್ಯೆಯಾಗಲಿದೆ.

  • ಕರಾವಳಿಯಲ್ಲಿ ಕೆರಳಿ ಕನಲಿದ ನಿಸರ್ಗ ಚಂಡಮಾರುತ

    ಕರಾವಳಿಯಲ್ಲಿ ಕೆರಳಿ ಕನಲಿದ ನಿಸರ್ಗ ಚಂಡಮಾರುತ

    -ದಕ್ಷಿಣ ಕನ್ನಡದಲ್ಲಿ ಆರೆಂಜ್ ಅಲರ್ಟ್ ಮುಂದುವರಿಕೆ

    ಬೆಂಗಳೂರು: ನಿಸರ್ಗ ಚಂಡಮಾರುತದ ಎಫೆಕ್ಟ್ ನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡು ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಜಿಲ್ಲೆಯಲ್ಲಿ ಇಂದು ಸಹ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಮಂಗಳೂರಿಗೆ ಆಗಮಿಸಿದೆ.

    ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಿಸರ್ಗ ಚಂಡಮಾರುತದ ಎಫೆಕ್ಟ್ ರಾಜ್ಯದ ಕರಾವಳಿಗೂ ತಟ್ಟಿದೆ. ಸಮುದ್ರದಲ್ಲಿ ಗಂಟೆಗೆ 70ರಿಂದ 80 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಬಂದು ಅಪ್ಪಳಿಸುತ್ತಿದೆ. ಮಂಗಳೂರಿನ ಸೋಮೇಶ್ವರ ಉಚ್ಚಿಲ, ಉಳ್ಳಾಲ ಮೊಗವೀರ ಪಟ್ನ, ಕೈಕೋ, ಹಿಲರಿಯ ನಗರ ಪ್ರದೇಶಗಳಲ್ಲಿ ಕಡಲಿನ ಅಬ್ಬರ ಜಾಸ್ತಿಯಾಗಿದೆ.

    ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ರು. ಜಿಲ್ಲಾಧಿಕಾರಿ, ಬಂದರು ಇಲಾಖೆ ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಡೆಗೋಡೆ ಹೇಗೆ ನಿರ್ಮಿಸುವುದು ಮತ್ತು ತುರ್ತಾಗಿ ಯಾವ ಕಾರ್ಯ ಮಾಡಬೇಕುಂಬುದರ ಬಗ್ಗೆ ಗಮನ ಹರಿಸುತ್ತೇವೆ ಎಂದರು.

    ಎನ್‍ಡಿಆರ್‍ಎಫ್ ತಂಡ: ಮುಂದಿನ 24 ಗಂಟೆ ಕರಾವಳಿಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಳೆಗಾಲದಲ್ಲಿ ಸಂಭವಿಸಬಹುದಾದ ದುರಂತಗಳನ್ನು ನಿರ್ವಹಿಸಲು ಎನ್.ಡಿ.ಆರ್.ಎಫ್ ತಂಡ ಮಂಗಳೂರಿಗೆ ಆಗಮಿಸಿದೆ. ಸುಮಾರು 25 ಸದಸ್ಯರ ಎನ್.ಡಿ.ಆರ್.ಎಫ್ ತಂಡವು ಪಿಲಿಕುಳ ಸ್ಕೌಟ್ಸ್ ಭವನದಲ್ಲಿ ವಾಸ್ತವ್ಯ ಹೂಡಿದೆ. ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ಸನ್ನಿವೇಶ ಎದುರಿಸಲು ಜಿಲ್ಲಾಡಳಿತಕ್ಕೆ ಎನ್.ಡಿ.ಆರ್.ಎಫ್ ಆಗಮನ ನೆರವಾಗಲಿದೆ.

    ಉಡುಪಿಯಲ್ಲೂ ನಿಸರ್ಗ ಚಂಡಮಾರುತ ಅಬ್ಬರ ಜೋರಾಗಿದೆ. ಗಂಟೆಗೆ 50-60 ಕಿಲೋ ಮೀಟರ್ ವೇಗದ ವಿಪರೀತ ಗಾಳಿ ಆರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ನಿಸರ್ಗ ಚಂಡಮಾರುತ ಅಬ್ಬರ ಹೆಚ್ಚಾಗಿದ್ದು, ಕಾರವಾರದಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಕಾರವಾರ ಸೇರಿದಂತೆ ಹಲವು ಭಾಗಗಳಲ್ಲಿ ಮರಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಐದು ದಿನಗಳ ಕಾಲ ಮೀನುಗಾರಿಕೆಯನ್ನು ಬಂದ್ ಮಾಡು, ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.

    ಕಳೆದ ಬಾರಿಯ ಮಳೆಗಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಭಾಗದಲ್ಲಿ ಸಾಕಷ್ಟು ಪ್ರಾಕೃತಿಕ ಹಾನಿ ಸಂಭವಿಸಿತ್ತು. ಇದೀಗ ಸೈಕ್ಲೋನ್ ಮಳೆಗೆ ತಾಲೂಕಿನ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಜನ ಆತಂಕಗೊಂಡಿದ್ದಾರೆ.

  • ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ಭಾರತಕ್ಕೆ ಅಪ್ಪಳಿಸಲಿದೆ ಭಾರೀ ಚಂಡಮಾರುತ

    ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ಭಾರತಕ್ಕೆ ಅಪ್ಪಳಿಸಲಿದೆ ಭಾರೀ ಚಂಡಮಾರುತ

    – ಕರ್ನಾಟಕದಲ್ಲಿ ಹಲವೆಡೆ ಭಾರೀ ಮಳೆ ಸಾಧ್ಯತೆ
    – ಮುಂಬೈಗೆ ಅಪ್ಪಳಿಸಲಿದೆ ನಿಸರ್ಗ

    ಬೆಂಗಳೂರು: ಇವತ್ತು ರಾತ್ರಿ ಅಥವಾ ನಾಳೆ ಬೆಳಗ್ಗೆ ಭಾರೀ ಚಂಡಮಾರುತ ಏಳುವ ಎಲ್ಲಾ ಲಕ್ಷಣಗಳು ಇವೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮುನ್ಸೂಚನೆ ನೀಡಿದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶ್ರೀನಿವಾಸ್ ರೆಡ್ಡಿ, ನಮಗೆ ಬಂದಿರುವ ಮುನ್ಸೂಚನೆ ಪ್ರಕಾರ ಇಂದು ‘ನಿಸರ್ಗ’ ಸೈಕ್ಲೋನ್ ಏಳುವ ಸಾಧ್ಯತೆ ಇದೆ. ಪೂರ್ವ ಅರಬ್ಬಿ ಸಮುದ್ರದಲ್ಲಿ ಮುಂದಿನ 12 ಗಂಟೆಗಳಲ್ಲಿ ಸೈಕ್ಲೋನ್ ಆಗಬಹುದು. ಗಾಳಿಯ ವೇಗ ಪ್ರತಿ ಗಂಟೆಗೆ 60-70 ಕಿ.ಮೀ ಇರುತ್ತದೆ. ತದನಂತರ ಇವತ್ತು ರಾತ್ರಿ ಅಥವಾ ನಾಳೆ ಬೆಳಗ್ಗೆ ಪ್ರಬಲ ಚಂಡಮಾರುವಾಗಿ ಬದಲಾಗುವ ಎಲ್ಲಾ ಲಕ್ಷಣಗಳು ಇವೆ. ಆದರೆ ಇದರ ಪಥ ನೋಡಿದಾಗ ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ಮುಂಬೈಗೆ ಹೋಗಿ ಅಪ್ಪಳಿಸುವ ಸಾಧ್ಯತೆ ಇದೆ. ಅಲ್ಲಿಂದ ಮುಂದುವರಿದು ಮಧ್ಯ ಪ್ರದೇಶ, ಉತ್ತರ ಪ್ರದೇಶದ ಕೆಲವು ಕಡೆ ಹೋಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

    ಕಳೆದ ಒಂದು ವಾರದಿಂದ ಉತ್ತರ ಭಾಗದ ಒಳನಾಡಿನಲ್ಲಿ ಮಳೆಯಾಗಿರಲಿಲ್ಲ. ಆದರೆ ವಾಯುಭಾರದ ಕುಸಿತನ ನಂತರ ಬೆಳಗಾವಿ, ಧಾರವಾಡ, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಂಗಳೂರು, ಹಾಸನ, ಕೊಡಗು, ಹಾವೇರಿ ಅನೇಕ ಕಡೆ ಮಳೆಯಾಗುತ್ತಿದೆ. ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಬಹುದು. ಇದರ ಪರಿಣಾಮ ಸ್ವಲ್ಪ ಪ್ರವಾಹ ಕೂಡ ಆಗಬಹುದು. ನಂತರ ಮಳೆ ಕಡಿಮೆಯಾಗಿತ್ತದೆ. ಆದರೆ ಮಳೆಯಿಂದ ನಮಗೆ ದೊಡ್ಡ ಪರಿಣಾಮದ ನಷ್ಟ ಉಂಟಾಗುವ ಸಾಧ್ಯತೆ ಕಡಿಮೆ ಇದೆ. ಯಾಕೆಂದರೆ ಅದು ಮುಂದಕ್ಕೆ ಚಲಿಸುವುದರಿಂದ ಇಷ್ಟು ದಿನದ ಮಳೆಗಿಂತ ನಾಳೆ ಮಳೆ ಕಡಿಮೆಯಾಗಲಿದೆ ಎಂದು ಸೂಚನೆ ನೀಡಿದರು.

    ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಣ ಕನ್ನಡ ಮತ್ತು ಉಡುಪಿಯಲ್ಲಿ ಸಮುದ್ರದ ಅಲೆಗಳ ಉಬ್ಬರ ಜಾಸ್ತಿಯಾಗುತ್ತವೆ. ಸುಮಾರು 2.6 ರಿಂದ 3.7 ಮೀಟರ್ ಎತ್ತರದವರೆಗೂ ಅಬ್ಬರ ಹೆಚ್ಚಾಗುವ ಸಾಧ್ಯತೆ. ನಾಳೆ ಇದೇ ರೀತಿ ಮುಂದುವರಿಯಲಿದೆ. ಇನ್ನೂ ಎರಡು-ಮೂರು ದಿನಗಳಲ್ಲಿ ಮಳೆ ಕಡಿಮೆಯಾಗುತ್ತವೆ. ಈಗಾಗಲೇ ಮುಂಗಾರು ಮಳೆ ಸೋಮವಾರ ಕೇರಳದಲ್ಲಿ ಬಂದಿದೆ. ಈ ಮುಂಗಾರು ಮಳೆ ತರಲು ಈ ಸೈಕ್ಲೋನ್ ಸಹಾಯ ಮಾಡಿತ್ತು. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ ಎಂದು ಶ್ರೀನಿವಾಸ್ ರೆಡ್ಡಿ ಹೇಳಿದರು.