Tag: ಸೈಫ್ ಅಲಿಖಾನ್

  • ಶೂಟಿಂಗ್ ವೇಳೆ ಅಪಘಾತ: ಕೈ ಕಳೆದುಕೊಳ್ಳುತ್ತಿದ್ದೆ ಎಂದ ಸೈಫ್ ಅಲಿಖಾನ್

    ಶೂಟಿಂಗ್ ವೇಳೆ ಅಪಘಾತ: ಕೈ ಕಳೆದುಕೊಳ್ಳುತ್ತಿದ್ದೆ ಎಂದ ಸೈಫ್ ಅಲಿಖಾನ್

    ಬಾಲಿವುಡ್ ನ ಖ್ಯಾತ ನಟ ಸೈಫ್ ಅಲಿಖಾನ್ (Saif Ali Khan) ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದೆ ಎನ್ನುವ ಮಾಹಿತಿ ಇತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿತ್ತು. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ (Hospital) ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ಆಗಿತ್ತು. ಆದರೆ, ಈ ಕುರಿತಂತೆ ಯಾವುದೇ ಅಧಿಕೃತ ಮಾಹಿತಿ ಇರಲಿಲ್ಲ.

    ಇದೀಗ ಸ್ವತಃ ಸೈಫ್ ಅಲಿ ಖಾನ್ ಅವರೇ ಈ ಕುರಿತಂತೆ ಮಾತನಾಡಿದ್ದಾರೆ. ಜೊತೆಗೆ ಆಸ್ಪತ್ರೆಯಿಂದ ಮನೆಗೂ ಮರಳಿದ್ದಾರೆ. ಸೈಫ್ ಅವರ ಮೊಣಕಾಲಿಗೆ ಗಂಭೀರ ಗಾಯವಾಗಿ, ಭುಜದ ಮೂಳೆ ಕೂಡ ಮುರಿದಿದೆ ಎಂದು ಹೇಳಲಾಗಿತ್ತು. ಗಂಭೀರವಾಗಿಯೇ ಗಾಯವಾಗಿದ್ದರಿಂದ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಸಾಧ್ಯತೆ ಇದೆ ಎನ್ನುವ ವದಂತಿಗಳು ಹಬ್ಬಿದ್ದವು. ಆದರೆ, ಕೈಗೆ ಮಾತ್ರ ಪೆಟ್ಟಾಗಿದ್ದು, ಅದಕ್ಕೆ ಚಿಕಿತ್ಸೆ ಪಡೆದಿದ್ದಾರೆ. ಉಳಿದಂತೆ ಭುಜದ ಮೂಳೆಗೆ ಯಾವುದೇ ಸಮಸ್ಯ ಆಗಿಲ್ಲ.

    ದೇವರ ಸಿನಿಮಾದ ಶೂಟಿಂಗ್ ವೇಳೆ ಅಪಘಾತವಾಗಿತ್ತು. ನಂತರದ ದಿನಗಳಲ್ಲಿ ಕೈ ನೋವು ಕಾಣಿಸಿಕೊಂಡಿದ್ದರಿಂದ ಸೈಫ್ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ವೇಳೆ ಅವರು ಸುಮ್ಮನೆ ಇದ್ದಿದ್ದರೆ ಕೈ ಕಳೆದುಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದಿದ್ದಾರೆ.

     

    ಆಸ್ಪತ್ರೆಯಲ್ಲಿ ಸೈಫ್ ಇದ್ದಾಗ ಪತ್ನಿ ಕರೀನಾ (Kareena Kapoor) ಕೂಡ ಅವರ ಜೊತೆಯೇ ಇದ್ದು ಆರೈಕೆ ಮಾಡಿದ್ದಾರೆ. ಚಿಕಿತ್ಸೆ ಮುಗಿಸಿಕೊಂಡು ಪತಿಯನ್ನು ಕರೆದುಕೊಂಡು ಮನೆಗೆ ಮರಳಿದ್ದಾರೆ. ಆತಂಕ ಪಡುವಂಥದ್ದು ಏನೂ ಆಗಿಲ್ಲವೆಂದು ಸ್ಪಷ್ಟ ಪಡಿಸಿದ್ದಾರೆ.

  • ರಾವಣನ ಪಾತ್ರ ಮಾಡಿದ್ದ ಸೈಫ್ ಅಲಿಖಾನ್ ಗೆ ಅಪಘಾತ: ಆಸ್ಪತ್ರೆಗೆ ದಾಖಲು

    ರಾವಣನ ಪಾತ್ರ ಮಾಡಿದ್ದ ಸೈಫ್ ಅಲಿಖಾನ್ ಗೆ ಅಪಘಾತ: ಆಸ್ಪತ್ರೆಗೆ ದಾಖಲು

    ಬಾಲಿವುಡ್ ನ ಖ್ಯಾತ ನಟ ಸೈಫ್ ಅಲಿಖಾನ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಇದೆ. ಸದ್ಯ ಅವರು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ಆಗಿದೆ.

    ಸೈಫ್ ಅವರ ಮೊಣಕಾಲಿಗೆ ಗಂಭೀರ ಗಾಯವಾಗಿ, ಭುಜದ ಮೂಳೆ ಕೂಡ ಮುರಿದಿದೆ ಎಂದು ಹೇಳಲಾಗುತ್ತಿದೆ. ಗಂಭೀರವಾಗಿಯೇ ಗಾಯವಾಗಿದ್ದರಿಂದ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಸಾಧ್ಯತೆ ಇದೆಯಂತೆ. ಗಾಯಗೊಂಡಿದ್ದಕ್ಕೆ ಕಾರಣ ತಿಳಿದು ಬಂದಿಲ್ಲವಾದರೂ, ಪತ್ನಿ ಕರೀನಾ ಕಪೂರ್ ಸದ್ಯ ಆಸ್ಪತ್ರೆಯಲ್ಲಿ ಜೊತೆಯಲ್ಲೇ ಇದ್ದಾರೆ.

     

    ಶೂಟಿಂಗ್ ಸ್ಥಳದಲ್ಲಿ ಇಂಥದ್ದೊಂದು ಗಾಯವಾಗಿದೆಯಾ ಅಥವಾ ಜಿಮ್ ನಲ್ಲಿ ಏನಾದರೂ ಹೊಡೆತ ಬಿದ್ದಿದೆಯಾ ಎನ್ನುವ ಪ್ರಶ್ನೆ ಎದುರಾಗಿದ್ದು, ಈ ಕುರಿತಂತೆ ಅವರ ಕುಟುಂಬವೇ ಪ್ರತಿಕ್ರಿಯೆ ನೀಡಬೇಕಿದೆ. ಈ ಹಿಂದೆ ರಾವಣನ ಪಾತ್ರ ಮಾಡಿದ್ದ ಸೈಫ್ ಅಲಿಖಾನ್ ಗೆ ರಾಮಮಂದಿರ ಉದ್ಘಾಟನೆ ದಿನವೇ ಅಪಘಾತವಾಗಿದ್ದು, ಕಾಕತಾಳೀಯ.

  • ‘ದೇವರ’ ಸಿನಿಮಾದಲ್ಲಿನ ಸೈಫ್ ಅಲಿಖಾನ್ ಲುಕ್ ಗೆ ಫ್ಯಾನ್ಸ್ ಫಿದಾ

    ‘ದೇವರ’ ಸಿನಿಮಾದಲ್ಲಿನ ಸೈಫ್ ಅಲಿಖಾನ್ ಲುಕ್ ಗೆ ಫ್ಯಾನ್ಸ್ ಫಿದಾ

    ಜ್ಯೂನಿಯರ್ ಎನ್.ಟಿ.ಆರ್ ನಾಯಕನಾಗಿ ನಟಿಸುತ್ತಿರುವ ದೇವರ (Devara) ಸಿನಿಮಾದಲ್ಲಿ ಬಾಲಿವುಡ್ ನಟ ಸೈಫ್ ಅಲಿಖಾನ್ (Saif Ali Khan) ಖಳನಟರಾಗಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರದ ಟೀಸರ್ ಎರಡು ದಿನಗಳ ಹಿಂದೆಯಷ್ಟೇ ರಿಲೀಸ್ ಆಗಿದ್ದು, ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮತ್ತು ಅವರ ಲುಕ್ ವಿಶೇಷವಾಗಿದೆ.

    ರ್ ಆರ್ ಆರ್ ಚಿತ್ರದ ನಂತರ ತೆಲುಗು ನಟ ಜ್ಯೂನಿಯರ್ ಎನ್ಟಿಆರ್ (Jr NTR) ಇದೀಗ ಕೊರಟಾಲ ಶಿವ (Koratala Shiva) ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರ ಪ್ರಾರಂಭವಾದರೂ ಚಿತ್ರತಂಡ ಮಾತ್ರ ಇದುವರೆಗೂ ಶೀರ್ಷಿಕೆಯನ್ನು ಘೋಷಿಸಿರಲಿಲ್ಲ. ಜ್ಯೂನಿಯರ್ ಎನ್ಟಿಆರ್ ಹುಟ್ಟು ಹಬ್ಬದ ಸಂದರ್ಭದಲ್ಲಿ ಚಿತ್ರದ ಹೆಸರನ್ನು ಘೋಷಿಸಲಾಗಿದೆ. ಚಿತ್ರಕ್ಕೆ ‘ದೇವರ’ (Devara) ಎಂಬ ಶೀರ್ಷಿಕೆ ಇಡಲಾಗಿತ್ತು.

    ಜೊತೆಗೆ ಅಂದು ಪೋಸ್ಟರ್ ಕೂಡ ರಿಲೀಸ್ ಆಗಿತ್ತು. ಆ ಪೋಸ್ಟರ್ನಲ್ಲಿ ಜ್ಯೂನಿಯರ್ ಎನ್.ಟಿ.ಆರ್ ಕಪ್ಪು ಬಣ್ಣದ ಲುಂಗಿ ಮತ್ತು ಶರ್ಟ್ ತೊಟ್ಟು,  ಸಮುದ್ರದ ಬಂಡೆಗಳ ಮೇಲೆ ಕೊಡಲಿ ಹಿಡಿದು ನಿಂತು ತೀಕ್ಷ್ಣವಾಗಿ ನೋಡುತ್ತಿದ್ದಾರೆ. ಕಳೆಗೆ ಹೆಣಗಳ ರಾಶಿ ಇದೆ. ಪಕ್ಕದಲ್ಲಿ ಮುರಿದು ಬಿದ್ದ ದೋಣಿಯೊಂದನ್ನೂ ಕಾಣಬಹುದಾಗಿತ್ತು.

     

    ‘ದೇವರ ಚಿತ್ರದ ಮೂಲಕ ಶ್ರೀದೇವಿ ಮಗಳು ಜಾಹ್ನವಿ ಕಪೂರ್ (Jahnavi Kapoor) ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ ಬಾಲಿವುಡ್ನ ಖ್ಯಾತ ನಟ ಸೈಫ್ ಅಲಿ ಖಾನ್ ಸಹ ಖಳನಟನಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಪ್ರಕಾಶ್ ರೈ, ಶ್ರೀಕಾಂತ್ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಯುವಸುಧಾ ಆರ್ಟ್ಸ್ ಮತ್ತು ಎನ್ಟಿಆರ್ ಆರ್ಟ್ಸ್ನಡಿ ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ನಿರ್ಮಿಸುತ್ತಿರುವ ಈ ಚಿತ್ರವನ್ನು ಖ್ಯಾತ ನಟ ನಂದಮೂರಿ ಕಲ್ಯಾಣರಾಮ್ ನಿರ್ಮಿಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರೆಡ್ ಬಸ್ ಜೊತೆ ಸಾರಾ ಅಲಿಖಾನ್ ಫೋಟೋ ಶೂಟ್ : ನಿನ್ನಂಥೋರು ಯಾರು ಇಲ್ಲ ಎಂದ ಫ್ಯಾನ್ಸ್

    ರೆಡ್ ಬಸ್ ಜೊತೆ ಸಾರಾ ಅಲಿಖಾನ್ ಫೋಟೋ ಶೂಟ್ : ನಿನ್ನಂಥೋರು ಯಾರು ಇಲ್ಲ ಎಂದ ಫ್ಯಾನ್ಸ್

    ಬಾಲಿವುಡ್ ಚೆಲುವೆ, ನಟ ಸೈಫ್ (Saif Ali Khan) ಪುತ್ರಿ ಸಾರಾ ಅಲಿಖಾನ್ (Sara Ali Khan) ಡಬಲ್ ಡೆಕ್ಕರ್ ಬಸ್ ನಲ್ಲಿ ಫೋಟೋ ಶೂಟ್ ಮಾಡಿಸಿಕೊಂಡಿದ್ದು ಆ ಹಾಟ್ ಫೋಟೋಗಳನ್ನು(Photo Shoot) ಹಂಚಿಕೊಳ್ಳುವ ಮೂಲಕ ಪಡ್ಡೆಹುಡುಗರ ನಿದ್ದೆಗೆ ಕೊಳ್ಳಿ ಇಟ್ಟಿದ್ದಾರೆ. ಕೆಂಪು ಬಸ್ಸು ಹಳದಿ ಬಣ್ಣದ ಕಾಸ್ಟ್ಯೂಮ್ ಒಂದು ರೀತಿಯಲ್ಲಿ ಸಖತ್ ಕಾಂಬಿನೇಷನ್ ಆಗಿದೆ. ಕೇವಲ ಫೋಟೋ ಶೂಟ್ ಮಾತ್ರವಲ್ಲ, ಎಲ್ಲ ವಿಚಾರದಲ್ಲೂ ಸಾರಾ ಬೋಲ್ಡ್ ಆಗಿದ್ದಾರೆ.

    ಈ ಹಿಂದೆ ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಿದ್ದ ಸಾರಾ ಅಲಿಖಾನ್ ಶಾಕಿಂಗ್ ಸ್ಟೇಟ್ಮೆಂಟ್ ಕೊಟ್ಟಿದ್ದರು. ತಮಗೆ ಅವಕಾಶ ಸಿಕ್ಕರೆ ವಿಜಯ್ ದೇವರಕೊಂಡ ಜೊತೆ ಡೇಟ್ ಮಾಡುವುದಾಗಿ ಹೇಳಿಕೊಂಡಿದ್ದರು. ಅಂತಹ ಹುಡುಗನ ಜೊತೆಯೇ ಡೇಟಿಂಗ್ ಗೆ ಹೋಗಲು ಇಷ್ಟಪಡುತ್ತೇನೆ ಎಂದೂ ಶೋನಲ್ಲಿ ಹೇಳಿದ್ದರು. ವಿಜಯ್ ಈಗಾಗಲೇ ಬಾಲಿವುಡ್ ಸಿನಿಮಾದಲ್ಲೂ ಮಿಂಚುತ್ತಿರುವುದರಿಂದ, ಇದು ಸಾಧ್ಯವೂ ಆಗಬಹುದು ಎನ್ನುವ ಗಾಸಿಪ್ ಹರಡಿತ್ತು.

    ತಂದೆಯ ಕಾರಣದಿಂದ ತನಗೆ ಅವಕಾಶ ಸಿಗುವುದು ಬೇಡ, ನನ್ನ ಟ್ಯಾಲೆಂಟ್ ಮೇಲೆ ಸಿಗಲಿ ಎಂದೂ ಸಾರಾ ಹೇಳಿಕೊಂಡಿದ್ದರು. ಪ್ರತಿಭೆಯ ಕಾರಣದಿಂದಾಗಿ ಅಕ್ಷಯ್ ಕುಮಾರ್ ಹಾಗೂ ಕಾಲಿವುಡ್ ನಟ ಧನುಷ್ ಜೊತೆ ಅತ್ರಂಗಿ ರೇ ಸಿನಿಮಾದಲ್ಲಿ ನಟಿಸಿದರು. ರಣ್‍ವೀರ್ ಸಿಂಗ್ ಜೊತೆ ಸಿಂಬಾ, ನಟ ಕಾರ್ತಿಕ್ ಲವ್ ಆಜ್ ಕಲ್-2, ಸುಶಾಂತ್ ಸಿಂಗ್ ಜೊತೆ ಕೇದರನಾಥ್ ಸಿನಿಮಾದಲ್ಲೂ ನಟಿಸಿದ್ದಾರೆ.

    ತಂದೆಯ ವಿಚಾರದಲ್ಲೂ ಅಷ್ಟೇ ಖುಲ್ಲಂ ಖುಲ್ಲಾ ಆಗಿ ಸಾರಾ ಮಾತನಾಡಿದ್ದರು. ‘ನನ್ನ ತಂದೆ ಎರಡನೇ ಮದುವೆ ಆಗುವ ವಿಷಯ ನನಗೆ ತಿಳಿದಿತ್ತು. ನಾನು ಕರೀನಾ ಕಪೂರ್ ಅವರ ಅಭಿಮಾನಿ. ಅವರು ನನ್ನ ಜೀವನದಲ್ಲಿ ಇರಬೇಕೆಂದು ಬಯಸಿದ್ದೆ. ಆದರೆ ಅವರು ಈಗ ಮಲತಾಯಿ ಆಗಿದ್ದಾರೆ ಎಂದು ಜನ ಮಾತನಾಡುತ್ತಿದ್ದಾರೆ’ ಎಂದು ಸಾರಾ ಅಲಿ ಖಾನ್ ಉತ್ತರಿಸಿದ್ದರು. ನನ್ನ ತಂದೆ ಕರೀನಾ ಕಪೂರ್ ಅವರನ್ನು ಮದುವೆ ಆಗುತ್ತಿದ್ದೀನಿ ಎಂದು ಹೇಳಿದ್ದಾಗ ನಾನು ಯಾವ ಉಡುಪು ಧರಿಸಬೇಕು ಎಂದು ನನ್ನ ತಾಯಿಯ ಬಳಿ ಕೇಳಿದೆ. ಆಗ ನನ್ನ ತಾಯಿ ನೀನು ಯಾವ ಉಡುಪನ್ನು ಧರಿಸುತ್ತೀಯಾ? ಎಂದು ಕೇಳಿದ್ದರು. ನನ್ನ ತಾಯಿ ಕೂಡ ನನ್ನ ತಂದೆಯ ಎರಡನೇ ಮದುವೆಗೆ ಒಪ್ಪಿಗೆ ನೀಡಿದ್ದರು ಎಂದು ಸಾರಾ ತಿಳಿಸಿದ್ದರು.

    ಸಾರಾ ಡೇಟಿಂಗ್ ವಿಚಾರದಲ್ಲಿ ಕರಣ್ ಅಚ್ಚರಿ ಎನ್ನುವಂತೆ ಮಾತನಾಡಿದ್ದರು. ಸಾರಾ ಹಾಗೂ ಜಾಹ್ನವಿಗೆ ನೀವಿಬ್ಬರೂ ಒಂದೇ ಕುಟುಂಬದ ಹುಡುಗರ ಜೊತೆ ಡೇಟಿಂಗ್ ಮಾಡುತ್ತಿದ್ದೀರಿ ಅಲ್ಲವಾ ಎಂದು ಕರಣ್ ಕೇಳಿದ್ದರು. ಈ ಪ್ರಶ್ನೆಯನ್ನು ಕನಸು ಮನಸಲ್ಲೂ ಎಣಿಸಿರದ ಸಾರಾ ಮತ್ತು ಜಾಹ್ನವಿ ಒಂದು ಕ್ಷಣ ಕಕ್ಕಾಬಿಕ್ಕಿಯಾಗಿದ್ದರು. ಕೊನೆಗೆ ಆ ಹುಡುಗರು ಯಾರು ಎನ್ನುವುದನ್ನು ಕರಣ್ ಅವರೇ ಬಾಯ್ಬಿಟ್ಟರು. ಮಹಾರಾಷ್ಟ್ರದ ಮಾಜಿ ಸಿಎಂ. ಶಿಂಧೆ ಅವರ ಮಕ್ಕಳಾದ ವೀರ ಪಹಾರಿ, ಶಿಖರ್ ಪಹಾರಿ ಹೆಸರು ಹೇಳುವ ಮೂಲಕ ಮತ್ತೆ ಅಚ್ಚರಿಗೆ ದೂಡಿದ್ದರು ಕರಣ್.

  • ‘ಆದಿಪುರುಷ್’ ಸಿನಿಮಾ ಟೀಮ್ ಮೇಲೆ ಬಿತ್ತು ಕೇಸ್: ಅ.27ಕ್ಕೆ ವಿಚಾರಣೆ ನಿಗದಿ

    ‘ಆದಿಪುರುಷ್’ ಸಿನಿಮಾ ಟೀಮ್ ಮೇಲೆ ಬಿತ್ತು ಕೇಸ್: ಅ.27ಕ್ಕೆ ವಿಚಾರಣೆ ನಿಗದಿ

    ಪ್ರಭಾಸ್ (Prabhas) ನಟನೆಯ ‘ಆದಿಪುರುಷ್’ (Adipurush) ಸಿನಿಮಾ ನಾನಾ ಕಾರಣಗಳಿಂದಾಗಿ ಸದ್ದಾಗುತ್ತಿದೆ. ಗ್ರಾಫಿಕ್ಸ್ ಕಾರಣದಿಂದಾಗಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರೆ, ಪಾತ್ರಗಳ ಆಯ್ಕೆ ಮತ್ತು ಅದರ ಪೋಷಣೆಯ ಕಾರಣದಿಂದಾಗಿ ಹಿಂದೂಗಳ ಕಣ್ಣು ಕೆಂಪಾಗಿಸಿದೆ. ಅಯೋಧ್ಯೆಯಲ್ಲಿ ಅದ್ಧೂರಿಯಾಗಿ ಟೀಸರ್ ರಿಲೀಸ್ ಮಾಡುವ ಮೂಲಕ ಹಿಂದೂಗಳನ್ನು ತಮ್ಮತ್ತ ಸೆಳೆದುಕೊಳ್ಳುವ ಪ್ಲ್ಯಾನ್ ಉಲ್ಟಾ ಆಗಿದೆ. ಹಾಗಾಗಿ ಸಿನಿಮಾ ವಿವಾದಕ್ಕೆ ಕಾರಣವಾಗಿದೆ.

    ಆದಿಪುರುಷ್ ಸಿನಿಮಾದಲ್ಲಿ ರಾಮ, ಸೀತೆ, ಆಂಜನೇಯ, ರಾವಣ ಸೇರಿದಂತೆ ಹಲವು ಪಾತ್ರಗಳನ್ನು ಕೆಟ್ಟದ್ದಾಗಿ ಬಿಂಬಿಸಲಾಗಿದೆ ಎನ್ನುವುದು ಚಿತ್ರತಂಡದ ಮೇಲಿನ ಆರೋಪ. ಇದೀಗ ಅದು ಕೇವಲ ಆರೋಪವಾಗಿ ಉಳಿದುಕೊಂಡಿಲ್ಲ. ಕಾನೂನು ಸಮರಕ್ಕೂ ರೆಡಿಯಾಗಿದೆ. ನಟ ಪ್ರಭಾಸ್ , ಸೈಫ್ ಅಲಿಖಾನ್ (Saif Ali Khan) ಹಾಗೂ ನಿರ್ದೇಶಕ ಓಂ ರಾವತ್ (Om Rawat) ಸೇರಿ ಚಿತ್ರತಂಡದ ಐವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಇದನ್ನೂ ಓದಿ:ತಮಿಳು ಬಿಗ್ ಬಾಸ್‌ಗೆ ಕಾಲಿಟ್ಟ ಕನ್ನಡತಿ ರಚಿತಾ ಮಹಾಲಕ್ಷ್ಮಿ

    ಆದಿಪುರುಷ್ ಸಿನಿಮಾದಲ್ಲಿ ರಾಮ, ರಾವಣ ಸೇರಿದಂತೆ ಹಲವು ಪಾತ್ರಗಳನ್ನು ನೈಜವಾಗಿ ತೋರಿಸಿಲ್ಲ. ಆ ಪಾತ್ರಗಳಿಗೆ ಅವಮಾನ ಮಾಡಲಾಗಿದೆ ಎಂದು ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ದೂರು ಸಲ್ಲಿಸಿದ್ದಾರೆ. ಈ ಸಂಬಂಧ ದೂರು ಸ್ವೀಕರಿಸಿರುವ ನ್ಯಾಯಾಲಯವು (Court) ಅಕ್ಟೋಬರ್ 27ರಂದು ವಿಚಾರಣೆ ನಡೆಸಲು ದಿನಾಂಕ ನಿಗದಿ ಮಾಡಿದೆ. ಈ ಹಿಂದೆಯೂ ದೆಹಲಿಯಲ್ಲೂ ಮತ್ತೊಂದು ದೂರು ಚಿತ್ರತಂಡದ ವಿರುದ್ಧ ದಾಖಲಾಗಿತ್ತು.

    ಐನೂರು ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಸಿನಿಮಾ ತಯಾರಾಗಿದ್ದು, 3 ಡಿಯಲ್ಲೂ ಈ ಚಿತ್ರವನ್ನು ನೋಡಬಹುದಾಗಿದೆ. ಗ್ರಾಫಿಕ್ಸ್ ಕಳಪೆಯಾಗಿಲ್ಲ, ಅದು 3 ಡಿ ತಂತ್ರಜ್ಞಾನದಲ್ಲಿ ಮೂಡಿ ಬಂದಿರುವುದರಿಂದ ಮಸುಕಾಗಿ ಕಾಣಿಸುತ್ತಿದೆ ಎಂದು ಮೊನ್ನೆಯಷ್ಟೇ ನಿರ್ದೇಶಕರು ಸ್ಪಷ್ಟನೆ ಕೊಟ್ಟಿದ್ದರು. ಆ ಪಾತ್ರಗಳ ಪೋಷಣೆಯನ್ನು ಯಾಕೆ ಆ ರೀತಿಯಲ್ಲಿ ಚಿತ್ರಿಸಿದ್ದಾರೆ ಎನ್ನುವುದನ್ನು ಕೋರ್ಟನಲ್ಲಿ ನಿರ್ದೇಶಕರು ಹೇಳಬೇಕಿದೆ. ಅಲ್ಲದೇ, ಎಲ್ಲವನ್ನೂ ಸರಿ ಮಾಡಿಕೊಂಡೇ ಚಿತ್ರವನ್ನು ರಿಲೀಸ್ ಮಾಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಹಿಂದೂ ದೇವಾಲಯಗಳಿಗೆ ಭೇಟಿ ಕೊಟ್ಟ ಸಾರಾ ಅಲಿಖಾನ್

    ಹಿಂದೂ ದೇವಾಲಯಗಳಿಗೆ ಭೇಟಿ ಕೊಟ್ಟ ಸಾರಾ ಅಲಿಖಾನ್

    ಜೈಪುರ: ಬಾಲಿವುಡ್ ನಟ ಸೈಫ್ ಅಲಿಖಾನ್ ಪುತ್ರಿ ನಟಿ ಸಾರಾ ಅಲಿ ಖಾನ್ ರಾಜಸ್ಥಾನದ ಉದಯಪುರಕ್ಕೆ ಪ್ರವಾಸ ಹೋಗಿದ್ದು, ಈ ವೇಳೆ ಕ್ಲಿಕ್ಕಿಸಿಕೊಂಡ ಕೆಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

    sara ali khan

    ಬಾಲಿವುಡ್‍ನ ಯುವ ನಟಿಯರಲ್ಲಿ ಸಾರಾ ಅಲಿಖಾನ್ ಕೂಡ ಒಬ್ಬರಾಗಿದ್ದು, ಸದ್ಯ ಹಲವು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ. ಇಷ್ಟು ದಿನ ಮಾಲ್ಡೀವ್ಸ್ ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಾರಾ ಇದೀಗ ರಾಜಸ್ಥಾನದ ಉದಯಪುರಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿನ ಪ್ರಕೃತಿ ಸೌಂದರ್ಯದ ಮಧ್ಯೆ ನೆಮ್ಮದಿಯಿಂದ ಕಾಲ ಕಳೆಯುತ್ತಿರುವ ಸಾರಾ ಅಲಿ ಖಾನ್ ಕೆಲವು ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಸಾರಾ ವಿವಿಧ ದೇವಾಲಯಗಳಿಗೆ ಭೇಟಿ ನೀಡಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಶಾರೂಖ್, ಗೌರಿ ಖಾನ್ ಬೆಂಬಲಕ್ಕೆ ನಿಂತ ಹೃತಿಕ್ ಮಾಜಿ ಪತ್ನಿ, ಮಿಕಾ ಸಿಂಗ್!

    sara ali khan

    ಕೆಲವು ದಿನಗಳ ಹಿಂದೆಯಷ್ಟೇ ಕಾಶ್ಮೀರಕ್ಕೆ ಭೇಟಿ ನೀಡಿದಾಗ ಭಾರತೀಯ ಸೈನಿಕರನ್ನು ಭೇಟಿಯಾಗಿದ್ದ ಸಾರಾ ಅಲಿ ಖಾನ್ ಇದೀಗ ಉದಯಪುರದಲ್ಲಿರುವ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ ಮತ್ತು ಸರೋವರವೊಂದರ ಬಳಿ ಕುಳಿತುಕೊಂಡು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸದ್ಯ ಈ ಫೋಟೋಗಳನು ಸಾರಾ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಕೋರ್ಟ್ ಆದೇಶಕ್ಕೆ ತಲೆ ಬಾಗಿ ಬಂದಿದ್ದೇನೆ – ಸುಳ್ಯ ನ್ಯಾಯಾಲಯಕ್ಕೆ ಇಂದು ಡಿಕೆಶಿ ಹಾಜರು

    ಇತ್ತೀಚೆಗಷ್ಟೇ ಸಾರಾ ಅಲಿ ಖಾನ್ ಮಾಲ್ಡೀವ್ಸ್ ಭೇಟಿ ನೀಡಿದ್ದ ಹಳೆಯ ವೀಡಿಯೋವನ್ನು ಪೋಸ್ಟ್ ಮಾಡಿದ್ದು, ವೀಡಿಯೋದಲ್ಲಿ ಸಾರಾ ನೀಲಿ ಬಣ್ಣದ ಸ್ವಿಮ್ಮಿಂಗ್ ಡ್ರೆಸ್ ತೊಟ್ಟು ತಂಪಾದ ಗಾಳಿ ಸ್ವೀಕರಿಸುತ್ತಿರುವುದನ್ನು ಕಾಣಬಹುದಾಗಿದೆ.

     

    View this post on Instagram

     

    A post shared by Sara Ali Khan (@saraalikhan95)

    ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಕಾಲಿವುಡ್ ನಟ ಧನುಷ್ ಜೊತೆ ಅತ್ರಂಗಿ ರೇ ಎಂಬ ಸಿನಿಮಾದಲ್ಲಿ ಸಾರಾ ಅಲಿಖಾನ್ ಕಾಣಿಸಿಕೊಳ್ಳುತ್ತಿದ್ದು, ಇತ್ತೀಚೆಗಷ್ಟೇ ಈ ಸಿನಿಮಾಕ್ಕಾಗಿ ಡಬ್ ಮಾಡಿದ್ದಾರೆ. ಈ ಮುನ್ನ ರಣ್‍ವೀರ್ ಸಿಂಗ್ ಜೊತೆ ಸಿಂಬಾ, ನಟ ಕಾರ್ತಿಕ್ ಲವ್ ಆಜ್ ಕಲ್-2, ದಿವಗಂತ ನಟ ಸುಸಾಂತ್ ಸಿಂಗ್ ಜೊತೆ ಕೇದರನಾಥ್ ಸಿನಿಮಾದಲ್ಲಿ ಅಭಿನಯಿಸಿದ್ದರು.

  • ಆದಿಪುರುಷನಿಗೆ ಸೀತೆಯಾದ ಕ್ಯೂಟ್ ಬ್ಯೂಟಿ ಕೃತಿ ಸನನ್

    ಆದಿಪುರುಷನಿಗೆ ಸೀತೆಯಾದ ಕ್ಯೂಟ್ ಬ್ಯೂಟಿ ಕೃತಿ ಸನನ್

    ಮುಂಬೈ: ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ಆದಿಪುರುಷ ಸಿನಿಮಾಗೆ ಸೀತೆಯಾಗಿ ಬಾಲಿವುಡ್ ಕ್ಯೂಟ್ ಬ್ಯೂಟಿ ಕೃತಿ ಸನನ್ ಅವರು ಆಯ್ಕೆಯಾಗಿದ್ದಾರೆ ಎಂದು ಹೇಳಲಾಗಿದೆ.

    ಬಾಹುಬಲಿ ಮತ್ತು ಸಾಹೋ ನಂತರ ಪ್ರಭಾಸ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಘೋಷಣೆ ಮಾಡಿದ್ದಾರೆ. ಈಗಾಗಲೇ ಪ್ರಭಾಸ್ ಮತ್ತು ಕನ್ನಡತಿ ಪೂಜಾ ಹೆಗ್ಡೆ ಅಭಿನಯದ ರಾಧೆ ಶಾಮ್ ಮೂವಿ ಶೂಟಿಂಗ್ ನಡೆಯುತ್ತಿದೆ. ಇದರ ಜೊತೆಗೆ ಪ್ರಭಾಸ್ ಆದಿಪುರುಷ ಸಿನಿಮಾದ ತಯಾರಿ ಮಾಡುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ಮಾಹಿತಿಯೊಂದು ಹೊರ ಬಿದ್ದಿದ್ದು, ಸೀತೆಯ ಪಾತ್ರದಲ್ಲಿ ಕೃತಿ ಸನನ್ ಅಭಿನಯಿಸುತ್ತಿದ್ದಾರೆ ಎನ್ನಲಾಗಿದೆ.

    ಕೆಲ ತಿಂಗಳ ಹಿಂದೆ ಈ ಸಿನಿಮಾದಲ್ಲಿ ನಾಯಕನಾಗಿ ಪ್ರಭಾಸ್ ಮತ್ತು ಖಳನಾಯಕನಾಗಿ ಸೈಫ್ ಅಲಿಖಾನ್ ಕಾಣಿಸಿಕೊಳ್ಳಿದ್ದಾರೆ ಎಂದು ಪೋಸ್ಟರ್ ಮೂಲಕ ಘೋಷಣೆ ಮಾಡಲಾಗಿತ್ತು. ಇದಾದ ಬಳಿಕ ಈ ಸಿನಿಮಾದಲ್ಲಿ ನಾಯಕಿಯ ಪಾತ್ರಕ್ಕೆ ಬಾಹುಬಲಿಯ ದೇವಸೇನಾ ಅನುಷ್ಕಾ ಶೆಟ್ಟಿ, ಕಿಯಾರ ಅದ್ವಾನಿ, ದೀಪಿಕಾ ಪಡುಕೋಣೆ ಮತ್ತು ಕೀರ್ತಿ ಸುರೇಶ್ ಅವರ ಹೆಸರು ಕೇಳಿ ಬಂದಿತ್ತು. ಆದರೆ ಕೊನೆಯದಾಗಿ ಕೃತಿ ಸನನ್ ಅವರು ಸೀತೆಯ ಪಾತ್ರಕ್ಕೆ ಆಯ್ಕೆಯಾಗಿದ್ದಾರೆ.

    ಬಾಹುಬಲಿ ಮತ್ತು ಸಹೋ ಸಿನಿಮಾ ಮಾಡಿ ಗೆದ್ದು ಬೀಗಿರುವ ಪ್ರಭಾಸ್ ಅವರ ಮೇಲೆ ಹೆಚ್ಚಿನ ನೀರಿಕ್ಷೆಯಿದ್ದು, ಅವರ ಮುಂದಿನ ಮೂವಿಗೆ ವಿಶ್ವದ್ಯಾಂತ ಯಂಗ್ ರೆಬೆಲ್ ಸ್ಟಾರ್ ಅಭಿಮಾನಿಗಳು ಕಾಯುತ್ತಿದ್ದಾರೆ. ಆದಿಪುರುಷನ ಬಿಡುಗಡೆಯ ದಿನಾಂಕ ಕೂಡ ಈಗಾಗಲೇ ಘೋಷಣೆಯಾಗಿದ್ದು, 2022ರ ಆಗಸ್ಟ್ 11ಕ್ಕೆ ಬಿಡುಗಡೆಯಾಗಲಿದೆ. ಪ್ರಭಾಸ್ ಅವರ ಈ ಸಿನಿಮಾ ಕನ್ನಡ, ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ಸೇರಿದಂತೆ ಒಟ್ಟು 5 ಭಾಷೆಗಳಲ್ಲಿ ನಿರ್ಮಾಣವಾಗಲಿದೆ.

    ಈ ಸಿನಿಮಾ ರಾಮಯಾಣದ ಕಥಾ ಹಂದರವನ್ನು ಹೊಂದಿದ್ದು, ಇದಕ್ಕೆ ಅದಿಪುರುಷ ಎಂದು ಹೆಸರಿಡಲಾಗಿದೆ. ಈ ಸಿನಿಮಾದಲ್ಲಿ ರಾಮನಾಗಿ ಪ್ರಭಾಸ್ ಕಾಣಿಸಿಕೊಳ್ಳಿದ್ದು, ಅವರಿಗೆ ನಾಯಕಿಯಾಗಿ ಮೊದಲ ಬಾರಿಗೆ ಕೃತಿ ಸನನ್ ಅವರು ಅಭಿನಯಿಸಲಿದ್ದಾರೆ. ಸಿನಿಮಾದ ಇನ್ನೊಂದು ಪ್ರಮುಖ ಅಂಶವೆಂದರೆ ಮೊದಲ ಬಾರಿಗೆ ಬಾಲಿವುಡ್‍ನ ಸ್ಟಾರ್ ನಟ ಸೈಫ್ ಅಲಿಖಾನ್ ನೆಗೆಟಿವ್ ರೋಲ್ ಅಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು ಓಂ ರಾವತ್ ಅವರು ನಿರ್ದೇಶನ ಮಾಡುತ್ತಿದ್ದಾರೆ.

  • ಮಗನಿಗೆ ಮಡಿಕೆ ಮಾಡುವುದನ್ನು ಹೇಳಿಕೊಟ್ಟ ಕರೀನಾ

    ಮಗನಿಗೆ ಮಡಿಕೆ ಮಾಡುವುದನ್ನು ಹೇಳಿಕೊಟ್ಟ ಕರೀನಾ

    ಮುಂಬೈ: ಸದಾ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗುತ್ತಿರುವ ಕರೀನಾ ಕಪೂರ್ ಇಂದು ಸುದ್ದಿಯಾಗಿರುವುದು ಅವರ ಮಗನ ವಿಚಾರಕ್ಕೆ. ಅವರ ಮಗನಿಗೆ ಮಡಿಕೆ ಮಾಡುವುದನ್ನು ಕಲಿಸಿಕೊಡುವ ಮೂಲಕವಾಗಿ ಸುದ್ದಿಯಾಗುತ್ತಿದ್ದಾರೆ.

     ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಕರೀನಾ ಕಪೂರ್ ದಂಪತಿಗೆ ತಮ್ಮ ಮಗ ತೈಮೂರ್ ಅಲಿ ಖಾನ್ ಎಂದರೆ ಬಲು ಪ್ರೀತಿ. ಸೈಫ್ ಅಲಿಖಾನ್ ತಮ್ಮ ಮಗ ಹಾಗೂ ತುಂಬು ಗರ್ಭಿಣಿ ಕರೀನಾಳನ್ನು ಕರೆದುಕೊಂಡು ಪ್ರವಾಸಕ್ಕೆ ಹೋಗಿದ್ದಾರೆ. ಹಿಮಾಚಲ ಪ್ರದೇಶವನ್ನು ಸುತ್ತಾಡುತ್ತಿರುವ ಇವರು ತಮ್ಮ ಮಗನಿಗೆ ಮಡಿಕೆ ಮಾಡುವುದನ್ನು ಕಲಿಸಿಕೊಡುತ್ತಿದ್ದಾರೆ.

    ಕರೀನಾ ಕೈ ಕೆಸರು ಮಾಡಿಕೊಂಡು ಮಗನಿಗೆ ಮಡಿಕೆ ಮಾಡುವುದನ್ನು ಹೇಳಿಕೊಟ್ಟಿದ್ದಾರೆ. ಅಮ್ಮ ಹೇಳಿದಂತೆ ತೈಮೂರ್ ಕೂಡಾ ಮಣ್ಣನ್ನು ಹಿಡಿದು ಮಡಿಕೆ ಮಾಡುತ್ತಿದ್ದಾನೆ. ಕರೀನಾ ತೈಮೂರ್ ಕೈಯಲ್ಲಿ ಮಣ್ಣನ್ನು ಹಿಡಿದುಕೊಂಡು ಮಡಿಕೆ ಚಕ್ರದಲ್ಲಿ ಇಟ್ಟು ತಿರುಗಿಸುತ್ತಾ ಮಡಿಕೆ ಮಾಡುವುದನ್ನು ಹೇಳಿ ಕೊಟ್ಟಿದ್ದಾರೆ. ಕೊನೆಗೆ ಪುಟ್ಟದಾದ ಒಂದು ಮಡಿಕೆಯನ್ನು ಮಾಡಿದ್ದಾರೆ.

    ಸೆಲೆಬ್ರಿಟಿಗಳ ಮಕ್ಕಳು ಅಭಿಮಾನಿಗಳಿಗೆ ಸ್ಟಾರ್‍ಗಳು ಇದ್ದಂತೆ. ಸೈಫ್ ಅಲಿ ಖಾನ್ ಮಗ ತೈಮೂರ್ ಮಡಿಕೆ ಮಾಡುವುದನ್ನು ಅಮ್ಮನಿಂದ ಕಲಿಯುತ್ತಿರುವುದನ್ನು ನೋಡಿದ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

    ಕರೀನಾ ಕಪೂರ್ ತಮ್ಮ ಎರಡನೇ ಮಗುವಿನ ಬಗ್ಗೆ ವಿಷಯ ಹಂಚಿಕೊಂಡ ನಂತರ, ಬೇಬೊ ಪಾಪರಾಜಿಗಳ ಹಾಟ್ ಫೇವರಿಟ್ ಆಗಿದ್ದಾರೆ. ಕರೀನಾ ಮನೆಯಿಂದ ಹೊರ ಬಂದರೆ ಸಾಕು  ಫೋಟೋ ಗ್ರಾಫರಗಳು ಹಿಂದೆ ಬೀಳುತ್ತಾರೆ. ಇದರಿಂದಾಗಿ ಕರೀನಾಳ ನಿತ್ಯದ ಅಪ್ಡೇಟ್‍ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ.

    ಕರೀನಾ ಕಪೂರ್ ಗರ್ಭಿಣಿಯಾಗಿದ್ದರೂ ಕರೀನಾ ಶೂಟಿಂಗ್ ಹಾಗೂ ಪ್ರವಾಸ ಅಂತ ಸಖತ್ ಬ್ಯುಸಿಯಾಗಿ ಆಗಿದ್ದಾರೆ. ಸಾಕಷ್ಟು ಸಿನಿಮಾ ಮತ್ತು ಜಾಹಿರಾತುಗಳು ಹಾಗೂ ಸಾಲು ಸಾಲುಫೋಟೋಶೂಟ್‍ಗಳಲ್ಲಿಯೂ ಅಷ್ಟೇ ಬ್ಯುಸಿಯಾಗಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟಿವ್ ಇರುವ ಕರೀನಾ ಕಪೂರ್ ಹಿಮಾಚಲ ಪ್ರದೇಶ ಪ್ರವಾಸದ ವಿಡಿಯೋ ಹಾಗೂ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಕರೀನಾ ಹಾಗೂ ತೈಮೂರ್ ಅವರ ವಿಡಿಯೋಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

  • ಹಾಟ್ ಅವತಾರದಲ್ಲಿ ಸೈಫ್ ಪುತ್ರಿ ಸಾರಾ ಅಲಿ ಖಾನ್

    ಹಾಟ್ ಅವತಾರದಲ್ಲಿ ಸೈಫ್ ಪುತ್ರಿ ಸಾರಾ ಅಲಿ ಖಾನ್

    -ಸೋಶಿಯಲ್ ಮೀಡಿಯಾದಲ್ಲಿ ಸಾರಾ ಸಂಚಲನ

    ಮುಂಬೈ: ಬಾಲಿವುಡ್ ಕೇದಾರನಾಥ್ ಚೆಲುವೆ, ನಟ ಸೈಫ್ ಪುತ್ರಿ ಸಾರಾ ಅಲಿಖಾನ್ ಹಾಟ್ ಫೋಟೋಗಳನ್ನ ಹಂಚಿಕೊಳ್ಳುವ ಮೂಲಕ ಪಡ್ಡೆಹುಡುಗರ ನಿದ್ದೆಗೆ ಕೊಳ್ಳಿ ಇಡುತ್ತಿದ್ದಾರೆ.

    ಸಾರಾ ಇನ್‍ಸ್ಟಾಗ್ರಾಂನಲ್ಲಿ ಸ್ವಿಮಿಂಗ್‍ಪೂಲ್ ನಲ್ಲಿ ಪಿಂಕ್ ಬಿಕಿನಿ ತೊಟ್ಟು ಪಿಂಕಿಯಾಗಿ ಕಾಣಿಸಿಕೊಂಡಿರುವ ಫೋಟೋಗಳನ್ನ ಶೇರ್ ಮಾಡಿಕೊಂಡಿದ್ದರು. ಕೆಲವು ದಿನಗಳ ಹಿಂದೆ ಮಳೆಯಲ್ಲಿ ಮತ್ಸ್ಯಕನ್ನೆಯಂತೆ ಈಜಾಡಿ ಹುಡುಗರ ಕನಸಿನ ರಾಣಿಯಾಗಿದ್ದರು. ಇಂದು ಸಹ ಶಾರ್ಟ್ ಟಾಪ್ ತೊಟ್ಟು ಪೋಸ್ ಕೊಟ್ಟಿರುವ ಫೋಟೋಗಳನ್ನ ಶೇರ್ ಮಾಡಿಕೊಂಡಿದ್ದಾರೆ.

     

    View this post on Instagram

     

    Gulab in Gulabi on Gulabo ????????????????

    A post shared by Sara Ali Khan (@saraalikhan95) on

    ರಕ್ಷಾ ಬಂಧನದಂದು ಸೋದರ ಇಬ್ರಾಹಿಂ ಜೊತೆ ಈಜುಕೊಳದಲ್ಲಿ ಆಟ ಆಡಿರುವ ವಿಡಿಯೋ ಶೇರ್ ಮಾಡಿಕೊಂಡಿದ್ದ ಸಾರಾ ರಾಕಿ ಹಬ್ಬದ ಶುಭಾಶಯ ತಿಳಿಸಿದ್ದರು. ಈ ವಿಡಿಯೋ ಸಹ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆಗೆ ಕಾರಣವಾಗಿತ್ತು. ಕೆಲವರು ಸೆಕ್ಸಿ ಅಂತ ಕಮೆಂಟ್ ಮಾಡಿದ್ರೆ, ಹಲವರು ಸೋದರನ ಜೊತೆ ಈ ರೀತಿ ನಡೆದುಕೊಳ್ಳೋದಾ ಎಂದು ಬರೆದುಕೊಂಡಿದ್ದರು. ಒಟ್ಟಿನಲ್ಲಿ ಕಳೆದ ಕೆಲ ದಿನಗಳಿಂದ ಸುಂದರ ಫೋಟೋಗಳನ್ನ ಶೇರ್ ಮಾಡಿಕೊಳ್ಳುವ ಮೂಲಕ ಸಾರಾ ಸದ್ದು ಮಾಡುತ್ತಿದ್ದಾರೆ.

  • ಚುಮು ಚುಮು ಚಳಿಯಲ್ಲಿ ಬಿಕಿನಿ ತೊಟ್ಟು ಈಜುಕೊಳಕ್ಕೆ ಧಮುಕಿದ ಸಾರಾ

    ಚುಮು ಚುಮು ಚಳಿಯಲ್ಲಿ ಬಿಕಿನಿ ತೊಟ್ಟು ಈಜುಕೊಳಕ್ಕೆ ಧಮುಕಿದ ಸಾರಾ

    -ಸೈಫ್ ಪುತ್ರಿಯ ಸ್ವಿಮಿಂಗ್ ವಿಡಿಯೋ ವೈರಲ್

    ಮುಂಬೈ: ಬಾಲಿವುಡ್ ನಟಿ, ಸೈಫ್ ಪುತ್ರಿ ಸಾರಾ ಅಲಿಖಾನ್ ಸ್ವಿಮಿಂಗ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಪಾದರಸದಂತೆ ಹರಿದಾಡ್ತಿದೆ. ಈಜುಕೊಳದಲ್ಲಿ ಮತ್ಸಕನ್ನೆಯಂತೆ ಸಾರಾ ಈಜಾಡುತ್ತಿರೋದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

    ಇನ್‍ಸ್ಟಾಗ್ರಾಂನಲ್ಲಿ ವಿಡಿಯೋ ವೈರಲ್ ಆಗಿದ್ದು, ಅಭಿಮಾನಿಗಳು ತಮ್ಮ ಪ್ರತಿಕ್ರಿಯೆಯನ್ನು ನೀಡುತ್ತಿದ್ದಾರೆ. ಲಾಕ್‍ಡೌನ್ ಆದಾಗಿನಿಂದ ಕುಟುಂಬಸ್ಥರ ಜೊತೆ ಕಾಲ ಕಳೆಯುತ್ತಿರುವ ಸಾರಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಕೆಲವು ದಿನಗಳ ಹಿಂದೆ ಸಾಮಾನ್ಯರಂತೆ ಮುಂಬೈ ರಸ್ತೆಯಲ್ಲಿ ಸಾರಾ ಸೈಕಲ್ ಓಡಿಸಿದ್ದ ವಿಡಿಯೋ ವೈರಲ್ ಆಗಿತ್ತು.

    https://www.instagram.com/p/CDtoJSbpt7E/?utm_source=ig_embed

    ಸಾರಾ ಜೊತೆ ಸೋದರ ಇಬ್ರಾಹಿಂ ಅಲಿ ಖಾನ್ ಸಹ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಸೋದರ ಇಬ್ರಾಹಿಂ ಜೊತೆಗಿನ ಸೈಕಲ್ ರೇಸ್ ವಿಡಿಯೋ ಸಾರಾ ಪೋಸ್ಟ್ ಮಾಡಿಕೊಂಡಿದ್ದರು.

    https://www.instagram.com/p/CDtR2Y5JZcH/

    ಕೇದಾರನಾಥ್ ಸಿನಿಮಾ ಮೂಲಕ ಬಾಲಿವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿರುವ ಸಾರಾ ಮೊದಲ ಚಿತ್ರದ ನಟನೆಗೆ ಅಪಾರ ಮೆಚ್ಚುಗೆ ಪಡೆದುಕೊಂಡಿದ್ದರು. ತದನಂತರ ಸಿಂಬಾದಲ್ಲಿಯೂ ಸಾರಾ ನಟಿಸಿದ್ದಾರೆ. ಸದ್ಯ ವರುಣ್ ಧವನ್ ಗೆ ಜೊತೆಯಾಗಿ ಕೂಲಿ ನಂಬರ್ ಒನ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.

    https://www.instagram.com/p/CDdqAhBJ-XV/