Tag: ಸೈರಾ

  • ಸೈರಾ ಸಿನಿಮಾ ವೀಕ್ಷಿಸಿದ 7 ಪೊಲೀಸರ ಅಮಾನತು

    ಸೈರಾ ಸಿನಿಮಾ ವೀಕ್ಷಿಸಿದ 7 ಪೊಲೀಸರ ಅಮಾನತು

    ಹೈದರಾಬಾದ್: ಮೆಗಾ ಸ್ಟಾರ್ ಚಿರಂಜೀವಿ, ಕಿಚ್ಚ ಸುದೀಪ್ ನಟನೆಯ ‘ಸೈರಾ ನರಸಿಂಹರೆಡ್ಡಿ’ ಚಿತ್ರವನ್ನು ವೀಕ್ಷಿಸಿದ 7 ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

    ಬುಧವಾರ ಕೊಯಿಲ್ಕುಂಟ್ಲಾದ ಚಿತ್ರಮಂದಿರದಲ್ಲಿ 7 ಮಂದಿ ಸಬ್ ಇನ್ಸ್‌ಪೆಕ್ಟರ್ ತಮ್ಮ ಕರ್ತವ್ಯ ಮರೆತು ಸೈರಾ ಸಿನಿಮಾವನ್ನು ವೀಕ್ಷಿಸಿದ್ದಾರೆ. ಅವರಲ್ಲಿ ಒಬ್ಬರು ಸೆಲ್ಫಿ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ಮಾಡಿದ ತಕ್ಷಣ ಈ ಫೋಟೋ ವೈರಲ್ ಆಗಿದೆ.

    ಈ ವೈರಲ್ ಫೋಟೋ ಕರ್ನೂಲ್ ಪೊಲೀಸ್ ವರಿಷ್ಠಾಧಿಕಾರಿ ಕೆ. ಫಕೀರಪ್ಪ ಅವರ ಕಣ್ಣಿಗೆ ಬಿದ್ದಿದೆ. ತಕ್ಷಣ ಅವರು ಏಳು ಮಂದಿ ಪೊಲೀಸರ ಬಗ್ಗೆ ತನಿಖೆ ನಡೆಸುವಂತೆ ನಂದ್ಯಾಲ್, ಅಲ್ಲಗಡ್ಡ ಹಾಗೂ ಧೋನ್‍ನ ಉಪ ಅಧೀಕ್ಷಕರಿಗೆ ಹೇಳಿದ್ದಾರೆ.

    ಬೇರೆ ಬೇರೆ ಪೊಲೀಸ್ ಠಾಣೆಗಳಿಗೆ ಸೇರಿದ ಈ ಪೊಲೀಸರು ಚಿತ್ರ ವೀಕ್ಷಿಸಲು ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದರು. ಅವರು ರಜೆಗಾಗಿ ಅರ್ಜಿಯನ್ನು ಸಲ್ಲಿಸದೇ ಕೆಲಸಕ್ಕೆ ಚಕ್ಕರ್ ಹಾಕಿ ಸಿನಿಮಾ ವೀಕ್ಷಿಸಿದ್ದು ಕರ್ನೂಲ್‍ನ ಎಸ್‍ಐಗೆ ಕೋಪ ತರಿಸಿದೆ. ಹಾಗಾಗಿ ಅವರು 7 ಮಂದಿ ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

    ಸದ್ಯ ಸೈರಾ ಸಿನಿಮಾವನ್ನು ನಟ ರಾಮ್ ಚರಣ್ ನಿರ್ಮಿಸುತ್ತಿದ್ದು, ಸ್ಟಾರ್ ನಟರಾದ ಚಿರಂಜೀವಿ, ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ತಮನ್ನಾ, ನಯನತಾರ, ಜಗಪತಿ ಬಾಬು ಸೇರಿದಂತೆ ಬಹುದೊಡ್ಡ ಕಲಾವಿದರ ಬಳಗ ಚಿತ್ರದಲ್ಲಿದೆ.

    ಚಿರಂಜೀವಿ ನಾಯಕನಾಗಿರುವ ಈ ಚಿತ್ರ ಸ್ವಾತಂತ್ರ್ಯ ಹೋರಾಟಗಾರ ಉಯ್ಯಾಲುವಾಡ ನರಸಿಂಹ ರೆಡ್ಡಿಯ ಕಥೆಯಾಧಾರಿತವಾಗಿದೆ. ಮೆಗಾ ಸ್ಟಾರ್, ರೆಡ್ಡಿಯ ಪಾತ್ರದಲ್ಲಿ ಕಾಣಿಸಿಕೊಂಡರೆ, ಸುದೀಪ್ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಸೆಣಸಾಡುವ ಅವುಕು ಪ್ರಾಂತ್ಯದ ರಾಜನಾಗಿ ಕಾಣಿಸಿಕೊಂಡಿದ್ದಾರೆ. ಇತಿಹಾಸದಲ್ಲಿಯೂ ಕೂಡ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಈ ಅವುಕು ರಾಜನ ಕ್ರಾಂತಿಯ ಬಗ್ಗೆ ಉಲ್ಲೇಖಗಳಿವೆ.

  • ಲಹರಿ ಸಂಸ್ಥೆಯಿಂದ 5 ಕೋಟಿಗೆ ‘ಸೈರಾ’ ಆಡಿಯೋ ಹಕ್ಕು ಖರೀದಿ

    ಲಹರಿ ಸಂಸ್ಥೆಯಿಂದ 5 ಕೋಟಿಗೆ ‘ಸೈರಾ’ ಆಡಿಯೋ ಹಕ್ಕು ಖರೀದಿ

    ಟಾಲಿವುಡ್‍ನ ‘ಸೈರಾ ನರಸಿಂಹ ರೆಡ್ಡಿ’ ಭಾರತೀಯ ಚಿತ್ರರಂಗದಲ್ಲೇ ಭಾರೀ ನಿರೀಕ್ಷೆ ಮೂಡಿಸಿರುವ ಸಿನಿಮಾವಾಗಿದೆ. ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ ಇದು ತೆರೆ ಕಾಣಲಿದೆ. ಸದ್ಯ ಆಡಿಯೋ ಹಕ್ಕುಗಳ ವಿಚಾರವಾಗಿ ಎಲ್ಲರ ಚಿತ್ತವಿತ್ತು. ಈಗ ಈ ಸಿನಿಮಾದ ಆಡಿಯೋ ಹಕ್ಕು ಯಾರ ಪಾಲಾಗಲಿದೆ ಎಂಬ ನಿರೀಕ್ಷೆಗೆ ತೆರೆ ಬಿದ್ದಿದೆ. ಕನ್ನಡದ ಅತಿ ಹೆಚ್ಚು ಹಾಡುಗಳ ಸರದಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪ್ರತಿಷ್ಠಿತ ಲಹರಿ ಸಂಸ್ಥೆ ‘ಸೈರಾ’ ಆಡಿಯೋ ಹಕ್ಕುಗಳನ್ನು ದೊಡ್ಡ ಮೊತ್ತ ಕೊಟ್ಟು ಖರೀದಿಸಿದೆ.

    ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಯ ಸೈರಾ ಸಿನಿಮಾದ ಆಡಿಯೋ ಹಕ್ಕು ಲಹರಿ ಸಂಸ್ಥೆ ಮಡಿಲಿಗೆ ಬಿದ್ದಿದೆ. ಈ ಹಕ್ಕುಗಳನ್ನು ಕೊಳ್ಳಲು ಹಲವಾರು ಕಂಪನಿಗಳು ತುದಿಗಾಲಲ್ಲಿ ನಿಂತಿದ್ದವು. ಆದರೆ ಎಲ್ಲರನ್ನು ಹಿಮ್ಮೆಟ್ಟಿಸಿ ಮತ್ತೊಂದು ಬಿಗ್‍ಬಜೆಟ್ ಸಿನಿಮಾವನ್ನು ಈ ಸಂಸ್ಥೆ ತನ್ನದಾಗಿಸಿಕೊಂಡಿದೆ. ಲಹರಿ ಸಂಸ್ಥೆ ಬರೋಬ್ಬರಿ ಐದು ಕೋಟಿಗೆ ಸಿನಿಮಾದ ಆಡಿಯೂ ಹಕ್ಕನ್ನು ಖರೀದಿ ಮಾಡಿದೆ ಎಂದು ವರದಿಯಾಗಿದೆ.

    ಈಗಾಗಲೇ ಲಹರಿ ಆಡಿಯೋ ಸಂಸ್ಥೆ ಪಂಚಭಾಷೆಗಳ ಹಲವಾರು ಸ್ಟಾರ್‌ಗಳ ಸಿನಿಮಾ ಆಡಿಯೋ ಹಕ್ಕು ಖರೀದಿಸಿದೆ. ಹಾಗೇ ಯೂಟ್ಯೂಬ್ ಗೋಲ್ಡ್ ಮೆಂಬರ್ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ. ಅದರಲ್ಲೂ ಕನ್ನಡದ ಸಕ್ಸಸ್ ಫುಲ್ ಸಿನಿಮಾಗಳಾದ ಕೆ.ಜಿ.ಎಫ್, ಕುರುಕ್ಷೇತ್ರ, ಜಾಗ್ವಾರ್, ಕಿಲ್ಲಿಂಗ್ ವೀರಪ್ಪನ್, ಪೈಲ್ವಾನ್ ಸೇರಿದಂತೆ ಬಿಗ್ ಸ್ಟಾರ್‌ಗಳ ಸಿನಿಮಾದ ಆಡಿಯೋ ಹಕ್ಕನ್ನು ಕೊಂಡಿದೆ.

  • ಕಪಿಲ್ ಶರ್ಮಾ ಶೋದಲ್ಲಿ ಪೈಲ್ವಾನನ ಹವಾ!

    ಕಪಿಲ್ ಶರ್ಮಾ ಶೋದಲ್ಲಿ ಪೈಲ್ವಾನನ ಹವಾ!

    ಮುಂಬೈ: ದೇಶದ ಕಿರುತೆರೆಯಲ್ಲಿ ತನ್ನ ಮನರಂಜನೆಯ ಮೂಲಕ ಹೆಸರು ಪಡೆದಿರುವ ಕಪಿಲ್ ಶರ್ಮಾ ಶೋದಲ್ಲಿ ಮೊದಲ ಬಾರಿಗೆ ಕನ್ನಡದ ನಟ ಸುದೀಪ್ ತಮ್ಮ ಪೈಲ್ವಾನ ಚಿತ್ರದ ಪ್ರಚಾರಕ್ಕೆ ತೆರಳಿದ್ದಾರೆ.

    ಕಪಿಲ್ ಶರ್ಮಾ ಶೋದಲ್ಲಿ ಕಿಚ್ಚ ಸುದೀಪ್ ಭಾಗವಹಿಸಿದ್ದು, ಕಾರ್ಯಕ್ರಮದ ಕುರಿತು ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಕಪಿಲ್ ಶೋನಲ್ಲಿ ಬಾಲಿವುಡ್ ಸಿನಿಮಾ ಸ್ಟಾರ್ ಗಳಿಂದ ಹಿಡಿದು ಹಲವು ರಾಜಕೀಯ ನಾಯಕರು, ಕ್ರೀಡಾಪಟುಗಳು, ಸಾಮಾಜಿಕ ಹೋರಾಟಗಾರರು ಸೇರಿದಂತೆ ಹಲವು ಮಂದಿ ಭಾಗವಹಿಸಿದ್ದಾರೆ. ಇಂತಹ ಶೋನಲ್ಲಿ ಸುದೀಪ್ ಭಾಗವಹಿಸಿದ್ದು, ಕಪಿಲ್ ಅವರ ಶೋನಲ್ಲಿ ನಗು ಸಮೃದ್ಧವಾಗಿದ್ದು, ಅಪರೂಪ ಸಂದರ್ಭ ಎಂಬಂತೆ ಹೆಚ್ಚು ನಕ್ಕಿದ್ದೇನೆ ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

    ಕಪಿಲ್ ಶರ್ಮಾ, ನವಜೋತ್ ಸಿಂಗ್ ಸಿಧು, ಸುನಿಲ್ ಶೆಟ್ಟಿ ಜೊತೆಯಲ್ಲಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ಸುದೀಪ್ ಹಂಚಿಕೊಂಡಿದ್ದಾರೆ. ಬಾಲಿವುಡ್ ಕಲಾವಿದರು ಸಿನಿಮಾ ಪ್ರಚಾರಕ್ಕಾಗಿ ಶೋದಲ್ಲಿ ಭಾಗವಹಿಸುತ್ತಾರೆ. ಕೆಲವೊಮ್ಮೆ ಕಾರ್ಯಕ್ರಮದ ಆಯೋಜಕರು ವಿಶೇಷ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ ಶೋ ಮಾಡುತ್ತಾರೆ. ಸದ್ಯ ಸುದೀಪ್ ಪೈಲ್ವಾನ ಸಿನಿಮಾ ಪ್ರಚಾರಕ್ಕಾಗಿ ಶೋಗೆ ತೆರಳಿದ್ದಾರೆ.

    ಈ ಹಿಂದೆ ಕುಡ್ಲದ ಬೆಡಗಿ ತಮ್ಮ ಹಿಂದಿ ಸಿನಿಮಾ ಮೆಹೆಂಜೋದಾರೋ ಚಿತ್ರದ ಪ್ರಮೋಶನ್ ಗಾಗಿ ಹೃತಿಕ್ ರೋಷನ್ ಜೊತೆ ತೆರಳಿದ್ದರು. ಆದ್ರೆ ಕನ್ನಡದ ಖ್ಯಾತ ನಟರೊಬ್ಬರು ಇದೇ ಮೊದಲ ಬಾರಿಗೆ ಶೋ ನಲ್ಲಿ ಕಾಣಿಸಿಕೊಂಡಿದ್ದಾರೆ. ಮದುವೆ ಬಳಿಕ ಎರಡನೇ ಸೀಸನ್ ಆರಂಭಿಸಿರುವ ಕಪಿಲ್ ಎಂದಿನಂತೆ ಸಾರ್ವಜನಿಕರನ್ನು ನಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಸ್ಯ ಕಾರ್ಯಕ್ರಮದ ಕಿರೀಟ್ ಅಂತಾನೇ ಕರೆಸಿಕೊಳ್ಳುವ ಸಚಿವ ನವಜೋತ್ ಸಿಂಗ್ ಸಿಧು ಕೆಲಸದ ಒತ್ತಡದ ನಡುವೆ ಶೋನಲ್ಲಿ ತಮ್ಮ ಸುಂದರ ಶಾಯರಿಗಳ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

    ಪೈಲ್ವಾನ್ ಮತ್ತು ಸೈರಾ ಸಿನಿಮಾದಲ್ಲಿ ಬ್ಯುಸಿಯಾಗಿರುವ ಸುದೀಪ್, ಹಿಂದಿಯ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅಭಿನಯಿಸುತ್ತಿರುವ ದಬಾಂಗ್-3 ಚಿತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ಹಿಂದಿಯ ಹಾರರ್ ಚಿತ್ರಗಳಲ್ಲಿ ನಟಿಸಿದ್ದಾರೆ. ಕೇವಲ ಫೋಟೋ ಹಂಚಿಕೊಂಡಿರುವ ಸುದೀಪ್ ಸಂಚಿಕೆ ಯಾವಾಗ ಪ್ರಸಾರವಾಗಲಿದೆ ಎಂಬುದನ್ನು ತಿಳಿಸಿಲ್ಲ.

    ಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಹುಟ್ಟುಹಬ್ಬಕ್ಕೆ ಸೈರಾ ಚಿತ್ರದಲ್ಲಿನ ಸುದೀಪ್ ಲುಕ್ ರಿವೀಲ್

    ಹುಟ್ಟುಹಬ್ಬಕ್ಕೆ ಸೈರಾ ಚಿತ್ರದಲ್ಲಿನ ಸುದೀಪ್ ಲುಕ್ ರಿವೀಲ್

    ಬೆಂಗಳೂರು: ತೆಲುಗಿನ ಸೈರಾ ನರಸಿಂಹರೆಡ್ಡಿ ಚಿತ್ರದ ಸುದೀಪ್ ಲುಕ್ ರಿವೀಲ್ ಆಗಿದೆ. ಕಿಚ್ಚ ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸೈರಾ ಚಿತ್ರತಂಡ ಮೋಷನ್ ಪೋಸ್ಟರ್ ರಿಲೀಸ್ ಮಾಡಿದೆ.

    ಸದ್ಯ ತೆಲುಗು ಮಾತ್ರವಲ್ಲದೇ ಇಡೀ ದಕ್ಷಿಣ ಭಾರತೀಯ ಚಿತ್ರರಂಗವೇ ಬೆರಗಾಗಿ ನೋಡುವಂತೆ ಮಾಡಿರುವ ಚಿತ್ರ ಸೈರಾ. ಸ್ವಾತಂತ್ರ್ಯ ಹೋರಾಟದ ವೀರೋದ್ಧಾತ ಕಥೆ ಹೊಂದಿರೋ ಈ ಚಿತ್ರದಲ್ಲಿ ಬೇರೆ ಬೇರೆ ಭಾಷೆಗಳ ಸ್ಟಾರ್ ನಟರು ಪಾತ್ರ ನಿರ್ವಹಿಸುತ್ತಿದ್ದಾರೆ. ಇದರಲ್ಲಿ ಕಿಚ್ಚ ಸುದೀಪ್ ಅವುಕು ಎಂಬೊಂದು ಪ್ರಾಂತ್ಯದ ರಾಜನಾಗಿ ನಟಿಸಲಿದ್ದಾರೆ. ಕಪ್ಪು ಬಟ್ಟೆ ಧರಿಸಿ ಖಡಕ್ ಲುಕ್‍ನಲ್ಲಿ ಕಿಚ್ಚ ಮಿಂಚಿದ್ದಾರೆ.

    ಮೆಗಾ ಸ್ಟಾರ್ ಚಿರಂಜೀವಿ ನಾಯಕನಾಗಿರೋ ಈ ಚಿತ್ರ ಸ್ವಾತಂತ್ರ್ಯ ಹೋರಾಟಗಾರ ಉಯ್ಯಾಲುವಾಡ ನರಸಿಂಹ ರೆಡ್ಡಿಯ ಕಥೆಯಾಧಾರಿತ ಚಿತ್ರ. ಮೆಗಾ ಸ್ಟಾರ್ ರೆಡ್ಡಿಯ ಪಾತ್ರದಲ್ಲಿ ಕಾಣಿಸಿಕೊಂಡರೆ, ಸುದೀಪ್ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಸೆಣಸಾಡುವ ಅವುಕು ಪ್ರಾಂತ್ಯದ ರಾಜನಾಗಿ ಕಾಣಿಸಿಕೊಳ್ಳಲಿದ್ದಾರೆ.

    ಇತಿಹಾಸದಲ್ಲಿಯೂ ಕೂಡಾ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಈ ಅವುಕು ರಾಜನ ಕ್ರಾಂತಿಯ ಬಗ್ಗೆ ಉಲ್ಲೇಖಗಳಿವೆ. ಈ ಮೂಲಕ ಸುದೀಪ್ ಐತಿಹಾಸಿಕ ಚಿತ್ರದಲ್ಲಿನ ಖದರು ತುಂಬಿರೋ ಪಾತ್ರಕ್ಕೆ ಜೀವ ತುಂಬಲಿದ್ದಾರೆ. ಬಹು ಕಾಲದಿಂದಲೂ ಕೂಡಾ ತೆಲುಗಿನ ಕಿಚ್ಚನ ಅಭಿಮಾನಿಗಳು ಅವರ ನಟನೆಗಾಗಿ ಕಾದು ಕೂತಿದ್ದರು. ಅವರೆಲ್ಲ ಸುದೀಪ್ ಸೈರಾ ಚಿತ್ರದಲ್ಲಿ ನಟಿಸುವ ಸುದ್ದಿ ಕೇಳಿ ಸಂತಸಗೊಂಡಿದ್ದಾರೆ.

    ಅಮಿತಾಬ್ ಬಚ್ಚನ್ ಸೇರಿದಂತೆ ಹಲವು ದಿಗ್ಗಜ ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದು ಬಿಗ್ ಬಜೆಟ್ ಚಿತ್ರ ಇದಾಗಿದೆ. ರಾಮ್‍ಚರಣ್ ನಿರ್ಮಾಣ ಸುರೇಂದ್ರ ರೆಡ್ಡಿ ನಿರ್ದೇಶನ ಈ ಚಿತ್ರಕ್ಕಿದ್ದು 2019ರಲ್ಲಿ ಬಿಡುಗಡೆಯಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೆಗಾ ಸ್ಟಾರ್ ಸೈರಾ ಚಿತ್ರದಲ್ಲಿ ಸುದೀಪ್ ರಾಜ!

    ಮೆಗಾ ಸ್ಟಾರ್ ಸೈರಾ ಚಿತ್ರದಲ್ಲಿ ಸುದೀಪ್ ರಾಜ!

    ಕಿಚ್ಚ ಸುದೀಪ್ ಅವರು ತೆಲುಗಿನ ಸೈರಾ ಚಿತ್ರದಲ್ಲಿ ನಟಿಸುತ್ತಿದ್ದಾರೆಂಬ ಸುದ್ದಿಯೊಂದು ತಿಂಗಳ ಹಿಂದೆಯೇ ಸಂಚಲನ ಸೃಷ್ಟಿಸಿತ್ತು. ಈ ವಿಚಾರ ತಿಳಿದು ಸಂತಸಗೊಂಡಿದ್ದ ಅಭಿಮಾನಿಗಳಲ್ಲಿ ಸುದೀಪ್ ನಟಿಸಲಿರೋ ಪಾತ್ರ ಯಾವುದೆಂಬ ಕುತೂಹಲ ಮಾತ್ರ ಹಾಗೆಯೇ ಉಳಿದು ಹೋಗಿತ್ತು. ಆದರೀಗ ಸೈರಾ ಚಿತ್ರದಲ್ಲಿ ಬ್ರಿಟಿಷರ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದ ತೆಲುಗಿನ ರಾಜನಾಗಿ ಕಿಚ್ಚ ನಟಿಸಲಿದ್ದಾರೆಂಬ ಸುದ್ದಿ ಸ್ಪಷ್ಟವಾಗುವ ಮೂಲಕ ಎಲ್ಲವೂ ಜಾಹೀರಾಗಿದೆ!

    ಸದ್ಯ ತೆಲುಗು ಮಾತ್ರವಲ್ಲದೇ ಇಡೀ ದಕ್ಷಿಣ ಭಾರತೀಯ ಚಿತ್ರರಂಗವೇ ಬೆರಗಾಗಿ ನೋಡುವಂತೆ ಮಾಡಿರುವ ಚಿತ್ರ ಸೈರಾ. ಸ್ವಾತಂತ್ರ್ಯ ಹೋರಾಟದ ವೀರೋದ್ಧಾತ ಕಥೆ ಹೊಂದಿರೋ ಈ ಚಿತ್ರದಲ್ಲಿ ಬೇರೆ ಬೇರೆ ಭಾಷೆಗಳ ಸ್ಟಾರ್ ನಟರು ಪಾತ್ರ ನಿರ್ವಹಿಸುತ್ತಿದ್ದಾರೆ. ಇದರಲ್ಲಿ ಕಿಚ್ಚ ಸುದೀಪ್ ಅವುಕು ಎಂಬೊಂದು ಪ್ರಾಂತ್ಯದ ರಾಜನಾಗಿ ನಟಿಸಲಿದ್ದಾರಂತೆ.

    ಮೆಗಾ ಸ್ಟಾರ್ ಚಿರಂಜೀವಿ ನಾಯಕನಾಗಿರೋ ಈ ಚಿತ್ರ ಸ್ವಾತಂತ್ರ್ಯ ಹೋರಾಟಗಾರ ಉಯ್ಯಾಲುವಾಡ ನರಸಿಂಹ ರೆಡ್ಡಿಯ ಕಥೆಯಾಧಾರಿತ ಚಿತ್ರ. ಮೆಗಾ ಸ್ಟಾರ್ ರೆಡ್ಡಿಯ ಪಾತ್ರದಲ್ಲಿ ಕಾಣಿಸಿಕೊಂಡರೆ, ಸುದೀಪ್ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಸೆಣಸಾಡುವ ಅವುಕು ಪ್ರಾಂತ್ಯದ ರಾಜನಾಗಿ ಕಾಣಿಸಿಕೊಳ್ಳಲಿದ್ದಾರೆ.

    ಇತಿಹಾಸದಲ್ಲಿಯೂ ಕೂಡಾ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಈ ಅವುಕು ರಾಜನ ಕ್ರಾಂತಿಯ ಬಗ್ಗೆ ಉಲ್ಲೇಖಗಳಿವೆ. ಈ ಮೂಲಕ ಸುದೀಪ್ ಐತಿಹಾಸಿಕ ಚಿತ್ರದಲ್ಲಿನ ಖದರು ತುಂಬಿರೋ ಪಾತ್ರಕ್ಕೆ ಜೀವ ತುಂಬಲಿದ್ದಾರೆ. ಬಹು ಕಾಲದಿಂದಲೂ ಕೂಡಾ ತೆಲುಗಿನ ಕಿಚ್ಚನ ಅಭಿಮಾನಿಗಳು ಅವರ ನಟನೆಗಾಗಿ ಕಾದು ಕೂತಿದ್ದರು. ಅವರೆಲ್ಲ ಸುದೀಪ್ ಸೈರಾ ಚಿತ್ರದಲ್ಲಿ ನಟಿಸುವ ಸುದ್ದಿ ಕೇಳಿ ಸಂತಸಗೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಿಚ್ಚ ಸುದೀಪ್ ಈ ಸಿನಿಮಾದಲ್ಲಿ ಬೇಕೇ ಬೇಕು ಎಂದು ಹಠ ಹಿಡಿದಿದ್ದಾರೆ ನಿರ್ದೇಶಕ!

    ಕಿಚ್ಚ ಸುದೀಪ್ ಈ ಸಿನಿಮಾದಲ್ಲಿ ಬೇಕೇ ಬೇಕು ಎಂದು ಹಠ ಹಿಡಿದಿದ್ದಾರೆ ನಿರ್ದೇಶಕ!

    ಬೆಂಗಳೂರು: ಕಿಚ್ಚ ಸುದೀಪ್ ಎಂದಿಗೂ ಅಭಿಮಾನಕ್ಕೆ ಸದಾ ಆಭಾರಿ. ತನ್ನ ಅಗತ್ಯ ಅನಿವಾರ್ಯ ಅಲ್ಲಿ ಇದೆ ಎಂದರೆ ಸಾಕು ಅದೆಷ್ಟೇ ಕಮಿಟ್‍ ಮೆಂಟ್ ಇದ್ದರೂ ಸ್ನೇಹ-ಪ್ರೀತಿಗೆ ಅಸಿಸ್ಟೆಂಟ್ ಆಗಿ ಬಿಡುತ್ತಾರೆ.

    ಸದ್ಯ ಪ್ರೇಮ್ ಸಾರಥ್ಯದ ದಿ-ವಿಲನ್ ಚಿತ್ರದಲ್ಲಿ ಕಿಚ್ಚ ಬ್ಯುಸಿಯಾಗಿದ್ದಾರೆ. ದಿ-ವಿಲನ್ ಚಿತ್ರದ ನಂತರ ಪೈಲ್ವಾನ್, ಕೋಟಿಗೊಬ್ಬ-3, ರೆಬಲ್ ಸ್ಟಾರ್ ಜೊತೆಗೆ ಅಂಬಿ ನಿಂಗೆ ವಯಸ್ಸಾಯಿತೋದಲ್ಲಿ ಅಭನಯಿಸಲಿದ್ದಾರೆ. ಈ ಮೂರು ಸಿನಿಮಾಗಳು ಮಾಡುತ್ತಿದ್ದು, ಗ್ಯಾಪ್ ನಲ್ಲಿ ಹಾಲಿವುಡ್ `ರೈಸನ್’ ಸಿನಿಮಾ ಕೂಡ ಮಾಡುತ್ತಿದ್ದಾರೆ.

    ಈ ಎಲ್ಲಾ ಕಮೀಟ್ ಮೆಂಟ್ ಗಾಗಿ ಸುದೀಪ್ ಮೆಗಾ ಸ್ಟಾರ್ ಚಿರಂಜೀವಿ ನಟನೆಯ `ಸೈರಾ’ ಚಿತ್ರದ ಆಫರ್ ಪಕ್ಕಕ್ಕೆ ಸರಿಸಿಬಿಟ್ಟರು. ಕಿಚ್ಚನ ಈ ನಿರ್ಧಾರದಿಂದ ಕಿಚ್ಚನ ಫ್ಯಾನ್ಸ್ ಕೊಂಚ ಬೇಸರ ತಂದಿತ್ತು.

    ಸೈರಾ ಚಿತ್ರವನ್ನು ಸುದೀಪ್ ಬಿಟ್ಟರು ಆ ಸಿನಿಮಾದ ನಿರ್ದೇಶಕರು ಹಾಗೂ ನಿರ್ಮಾಪಕರು ಬಿಡುತ್ತಿಲ್ಲ. ಸರ್ ನೀವು ಈ ಪಾತ್ರವನ್ನು ಮಾಡಲೇ ಬೇಕು. ನೀವು ನಮ್ಮ ಸಿನಿಮಾದಲ್ಲಿದ್ದರೆ ಚೆಂದ. ನೀವು ಬಿಟ್ಟರೇ ಈ ಪಾತ್ರವನ್ನು ಬೇರೆ ಯಾರಿಂದಲೂ ಮಾಡಲು ಸಾದ್ಯವಿಲ್ಲ ಎಂದು `ಸೈರಾ’ ಚಿತ್ರದ ನಿರ್ದೇಶಕ ಸುರೇಂದ್ರ ರೆಡ್ಡಿ ಪಟ್ಟು ಹಿಡಿದಿದ್ದಾರೆ.

    ಸೈರಾ ಚಿತ್ರದ ನಿರ್ಮಾಪಕರ ಜೊತೆ ಸ್ವತಃ ಸುರೇಂದ್ರ ರೆಡ್ಡಿಯವರೇ ಸುದೀಪ್ ಮನೆಗೆ ಬಂದು ಆಫರ್ ಮಾಡಿದ್ದಾರಂತೆ. ಪಾತ್ರ ಹಾಗೂ ತನ್ನ ಅಗತ್ಯತೆಯನ್ನು ಮನಗಂಡ ಸುದೀಪ್ ಒಪ್ಪಿಕೊಂಡಿದ್ದಾರೆ. 45 ರಿಂದ 50 ದಿನ ಕಾಲ್‍ ಶೀಟ್ ಕೂಡ ಕೊಟ್ಟಿದ್ದಾರೆ ಎಂಬ ಸುದ್ದಿ ಕೇಳಿ ಬುರತ್ತಿದೆ.

    ಕಿಚ್ಚ ಸುದೀಪ್ ಅಭಿನಯದ ಹವಾ ಬೇರೆ. ಅದು ಬೇರೆ ಇಂಡಸ್ಟ್ರಿಯ ಮಂದಿಗೂ ಗೊತ್ತು. ಈ ಕಾರಣಕ್ಕೆ ಕಿಚ್ಚನ ಕಾಲ್ ಶೀಟ್ ಗಾಗಿ ಎಲ್ಲೊ ಇದ್ದವರು ಬೆಂಗಳೂರಿನ ಪುಟ್ಟೇನಹಳ್ಳಿಯ ಶ್ರೀನಿಧಿ ನಿಲಯಕ್ಕೆ ಬಂದು ಕಿಚ್ಚನ ಜೊತೆ ಕುಳಿತು ಕಾಫಿ ಕುಡಿಯುತ್ತಾರೆ. ಒಟ್ಟಿನಲ್ಲಿ ಚಿರಂಜೀವಿ ಸಿನಿಮಾದಲ್ಲಿ ಸುದೀಪ್ ನಟಿಸುತ್ತಿರುವುದಂತು ನಿಜಕ್ಕೂ ಕಿಚ್ಚನ ಫ್ಯಾನ್ಸ್ ಗೆ ಸಂತೋಷವಾಗಿದೆ.

    ಟಾಲಿವುಡ್ ಮತ್ತು ಬಾಲಿವುಡ್‍ನ ಮೆಗಾ ಸ್ಟಾರ್‍ ಗಳಾದ ಚಿರಂಜೀವಿ ಮತ್ತು ಅಮಿತಾಬ್ ಬಚ್ಚನ್ ಜೊತೆಯಾಗಿ ನಟಿಸುತ್ತಿರುವುದು ಚಿತ್ರದ ವಿಶೇಷವಾಗಿದೆ. ಸ್ವಾತಂತ್ರ್ಯ ಹೋರಾಟಗಾರ ನರಸಿಂಹರೆಡ್ಡಿ ಅವರ ಐತಿಹಾಸಿಕ ಕಥೆಯನ್ನು ಹೊಂದಿರುವ ಸೈರಾ ದೊಡ್ಡ ತಾರಾಬಳಗವನ್ನೇ ಹೊಂದಿದೆ. ಸಿಲ್ವರ್ ಸ್ಕ್ರೀನ್ ಕ್ವೀನ್ ನಯನತಾರಾ, ತಮಿಳಿನ ಸ್ಟಾರ್ ವಿಜಯ್ ಸೇಥುಪತಿ, ಟಾಲಿವುಡ್‍ ನ ಡೇರಿಂಗ್ ಸ್ಟಾರ್ ಜಗಪತಿ ಬಾಬು ಒಳಗೊಂಡಂತೆ ಅನುಭವಿ ಕಲಾವಿದರನ್ನೇ ಸಿನಿಮಾ ಆಯ್ಕೆ ಮಾಡಿಕೊಂಡಿದೆ.

    ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಸಾರಥ್ಯದಲ್ಲಿ ಹಾಡುಗಳು ಮೂಡಿಬರಲಿವೆ. ಸೈರಾ ಗೆ ನಿರ್ದೇಶಕ ಸುರೇಂದ್ರ ರೆಡ್ಡಿ ಆ್ಯಕ್ಷನ್ ಕಟ್ ಹೇಳಲಿದ್ದು, ನಟ ರಾಮ್ ಚರಣ್ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಸಿನಿಮಾ ತೆಲಗು, ತಮಿಳು, ಮಲೆಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಮೂಡಿ ಬರಲಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಅಭಿಮಾನಿಗಳಲ್ಲಿ ಭಾರೀ ಕುತೂಹಲವನ್ನು ಹುಟ್ಟು ಹಾಕಿದೆ.

    https://www.youtube.com/watch?v=mdY7MK9jIS8