Tag: ಸೈರಾ ನರಸಿಂಹ ರೆಡ್ಡಿ

  • ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಕಿಚ್ಚ

    ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಕಿಚ್ಚ

    ಬೆಂಗಳೂರು: ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ.

    ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶೂಟಿಂಗ್ ಸೆಟ್ಟಿನಲ್ಲಿ ತಾವೇ ಕೈಯಾರೇ ತಮ್ಮ ಸಹ ಕಲಾವಿದರಿಗೆ ಹಾಗೂ ಚಿತ್ರ ತಂಡದ ಸದಸ್ಯರಿಗೆ ಮೊಟ್ಟೆ ದೋಸೆ ಮಾಡಿ ಕೊಡುತ್ತಿರುವ ವಿಡಿಯೋವನ್ನು ಅಪ್ಲೋಡ್ ಮಾಡಿ ಖುಷಿ ಪಟ್ಟಿದ್ದಾರೆ.

    ಇನ್‍ಸ್ಟಾ ಪೋಸ್ಟ್‍ನಲ್ಲಿ, ಎಸ್‍ಎನ್‍ಆರ್(ಸೈರಾ ನರಸಿಂಹ ರೆಡ್ಡಿ) ಸಿನಿಮಾ ಶೂಟಿಂಗ್ ಸೆಟ್ಟಿನಲ್ಲಿ ಕಳೆದ ಮೋಜಿನ ಸಮಯ, ಸ್ಪೇಷಲ್ ಆಮ್ಲೆಟ್ ದೋಸೆ ಎಂದು ಬರೆದು ಎಸ್‍ಎನ್‍ಆರ್ ಎಂದು ಹ್ಯಾಷ್‍ಟ್ಯಾಗ್ ಹಾಕಿ, ದೋಸೆ ಮಾಡುತ್ತಿರುವ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ವಿಡಿಯೋದಲ್ಲಿ ಸುದೀಪ್ ದೋಸೆ ಮಾಡಿ ಕೊಡುತ್ತಿದ್ದರೆ, ಸಾಲಾಗಿ ಸಿನಿಮಾ ತಂಡದ ಸದಸ್ಯರು, ಕಲಾವಿದರು ಪ್ಲೇಟ್‍ನಲ್ಲಿ ದೋಸೆ ಹಾಕಿಸಿಕೊಂಡು ಸವಿಯುತ್ತಿರುವ ದೃಶ್ಯ ಸೆರೆಯಾಗಿದೆ.

    ಈ ವಿಶೇಷ ಪೋಸ್ಟ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದು, ಶೂಟಿಂಗ್ ಸೆಟ್ಟಿನಲ್ಲಿ ಸೌಟು ಹಿಡಿದ ಕಿಚ್ಚನ ಸರಳತನಕ್ಕೆ ಮನಸೋತಿದ್ದಾರೆ. ಈವರೆಗೂ ಈ ವಿಡಿಯೋ ಸುಮಾರು 1 ಲಕ್ಷಕ್ಕೂ ಅಧಿಕ ಬಾರಿ ವಿಕ್ಷಣೆಯಾಗಿದ್ದು, ಸಾಕಷ್ಟು ಮಂದಿ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.

    https://www.instagram.com/p/B3Ci_24HOY6/

  • ಸೈರಾದಲ್ಲಿ ಕಿಚ್ಚ ಸುದೀಪ್ ಅಬ್ಬರ ನೋಡಿ!

    ಸೈರಾದಲ್ಲಿ ಕಿಚ್ಚ ಸುದೀಪ್ ಅಬ್ಬರ ನೋಡಿ!

    – ಕನ್ನಡ ಟ್ರೇಲರಲ್ಲಿ ಮೊಳಗಿತು ಸ್ವಾತಂತ್ರ್ಯ ಸಂಗ್ರಾಮದ ರಣಕಹಳೆ!

    ಬೆಂಗಳೂರು: ಕೇವಲ ದಕ್ಷಿಣ ಭಾರತ ಮಾತ್ರವಲ್ಲ; ಭಾರತೀಯ ಸಿನಿ ಪ್ರೇಕ್ಷಕರೆಲ್ಲ ತುದಿಗಾಲಲ್ಲಿ ನಿಂತು ಕಾಯುವಂತೆ ಮಾಡಿರೋ ಚಿತ್ರ ಸೈರಾ ನರಸಿಂಹ ರೆಡ್ಡಿ. ಏಕಕಾಲದಲ್ಲಿಯೇ ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಬಿಡುಗಡೆಯಾಗಲಿರೋ ಈ ಚಿತ್ರದ ಟ್ರೇಲರ್ ಇಂದು ಕನ್ನಡದಲ್ಲಿಯೂ ಬಿಡುಗಡೆಯಾಗಿದೆ. `ನರಸಿಂಹ ರೆಡ್ಡಿ ಸಾಮಾನ್ಯನಲ್ಲ. ಅವನು ಇತಿಹಾಸವನ್ನು ಸೃಷ್ಟಿಸಲು ಹೊರಟವನು. ಅವನೊಬ್ಬ ಯೋಗಿ. ಅವನೊಬ್ಬ ಯೋಧ. ಅವನನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಎಂಬ ಖಡಕ್ ಹಿನ್ನೆಲೆ ಧ್ವನಿಯೊಂದಿಗೆ ಬಿಚ್ಚಿಕೊಳ್ಳೋ ಸೈರಾ ಟ್ರೇಲರ್ ಮೇಕಿಂಗ್ ಮೂಲಕ, ಪಾತ್ರಗಳ ಅಬ್ಬರದ ಲಕ್ಷಣಗಳ ಮೂಲಕ ಕನ್ನಡದ ಪ್ರೇಕ್ಷಕರನ್ನೆಲ್ಲ ಥ್ರಿಲ್ ಆಗುವಂತೆ ಮಾಡಿದೆ.

    ಈ ಕಥೆ ಬ್ರಿಟಿಷರ ವಿರುದ್ಧ ನಡೆದ ಸಂಗ್ರಾಮದ ಕಥೆಯನ್ನಾಧರಿಸಿದೆ. ಮೆಗಾ ಸ್ಟಾರ್ ಚಿರಂಜೀವಿ ಸೈರಾ ನರಸಿಂಹ ರೆಡ್ಡಿಯಾಗಿ ದೇಶ ಭಕ್ತಿಯನ್ನು ನರನಾಡಿಗಳಲ್ಲಿಯೂ ತುಂಬಿಕೊಂಡಿರೋ ಪಾತ್ರದ ಮೂಲಕ ಅಬ್ಬರಿಸಿದ್ದಾರೆ. ಈ ಟ್ರೇಲರ್ ಮಾತ್ರವಲ್ಲದೇ ಇಡೀ ಸಿನಿಮಾ ಕನ್ನಡ ಪ್ರೇಕ್ಷಕರಿಗೆ ಮತ್ತಷ್ಟು ಆಪ್ತವಾಗಲು ಸುದೀಪ್ ಅದರಲ್ಲೊಂದು ಪಾತ್ರವನ್ನು ನಿರ್ವಹಿಸಿರೋದೂ ಕಾರಣ. ಅವುಕು ಪ್ರಾಂತ್ಯದ ರಾಜನಾಗಿ ಸುದೀಪ್ ಇಲ್ಲಿ ಸೈರಾ ನರಸಿಂಹ ರೆಡ್ಡಿಗೆ ಸಾಥ್ ನೀಡಿದ್ದಾರೆ. ಅವರ ಪಾತ್ರದ ಚಹರೆಗಳೂ ಕೂಡಾ ಈ ಟ್ರೇಲರ್‍ನಲ್ಲಿ ಸ್ಪಷ್ಟವಾಗಿಯೇ ಕಾಣಿಸಿದೆ.

    ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಬೇರೆ ಬೇರೆ ಭಾಷೆಗಳ ನಟನಟಿಯರು ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ಅದರಲ್ಲಿಯೂ ಅಮಿತಾಭ್ ಬಚ್ಚನ್ ವೀರ ಸೇನಾನಿ ಸೈರಾ ನರಸಿಂಹ ರೆಡ್ಡಿಯ ಗುರು ಗೋಸಾಯಿ ವೆಂಕಣ್ಣನಾಗಿ, ಶಿಷ್ಯನನ್ನು ಬ್ರಿಟೀಷರ ವಿರುದ್ಧ ತಿರುಗಿ ಬಿದ್ದು ಸೆಣಸಲು ಪ್ರೋತ್ಸಾಹಿಸೋ ಪಾತ್ರವಾಗಿ ಕಾಣಿಸಿಕೊಂಡಿದ್ದಾರೆ. ಸಿದ್ದಮ್ಮನ ಪಾತ್ರದಲ್ಲಿ ನಯನತಾರಾ, ಲಕ್ಷ್ಮಿಯ ಪಾತ್ರದಲ್ಲಿ ತಮನ್ನಾ, ರಾಜಪಾಂಡಿಯಾಗಿ ವಿಜಯ್ ಸೇತುಪತಿ, ವೀರರೆಡ್ಡಿಯಾಗಿ ಜಗಪತಿ ಬಾಬು ನಟಿಸಿದ್ದಾರೆ. ಈ ಎಲ್ಲ ಪಾತ್ರಗಳ ಪರಿಚಯವೂ ಈ ಟ್ರೇಲರ್ ಮೂಲಕವೇ ಆಗಿದೆ. ವಿಶೇಷವಾಗಿ ಕಿಚ್ಚ ಸುದೀಪ್ ಪಾತ್ರದ ಕನ್ನಡದ ಡೈಲಾಗ್ ಮೂಲಕವೇ ಸೈರಾ ಚಿತ್ರ ಕನ್ನಡಿಗರನ್ನು ಮತ್ತಷ್ಟು ಸೆಳೆದುಕೊಂಡಿದೆ.

    ಈ ಟ್ರೇಲರ್ ನಲ್ಲಿ ಪ್ರಧಾನವಾಗಿ ಕಾಣಿಸಿರೋದು ಮೇಕಿಂಗ್‍ನ ಅಬ್ಬರ. ಅದ್ಭುತವೆಂಬಂಥಾ ಮೇಕಿಂಗ್, ದೃಷ್ಯಾವಳಿಗಳೇ ಒಟ್ಟಾರೆಯಾಗಿ ಈ ಸಿನಿಮಾ ಮೂಡಿಬಂದಿರೋ ರೀತಿಯನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ. ಸೈರಾ ನರಸಿಂಹ ರೆಡ್ಡಿ ಕನ್ನಡಿಗರನ್ನು ಸೆಳೆದಿರೋದಕ್ಕೆ ಮತ್ತೊಂದು ಪ್ರಧಾನ ಕಾರಣವೂ ಇದೆ. ಅದು ಈ ಸಿನಿಮಾದಲ್ಲಿ ಕನ್ನಡದ ಹೆಮ್ಮೆಯ ಆಡಿಯೋ ಸಂಸ್ಥೆ ಲಹರಿ ಕೂಡಾ ಪ್ರಮುಖ ಭಾಗವಾಗಿರೋದು. ಲಹರಿ ಸಂಸ್ಥೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿಯೇ ಹೆಗ್ಗಳಿಕೆ ಹೊಂದಿರುವಂಥಾದ್ದು. ಈಗಾಗಲೇ ದಕ್ಷಿಣ ಭಾರತೀಯ ದೊಡ್ಡ ಚಿತ್ರಗಳ ಆಡಿಯೋ ಹಕ್ಕುಗಳನ್ನು ಲಹರಿ ಸಂಸ್ಥೆ ಖರೀದಿಸಿತ್ತು. ಆದರೀಗ ಸೈರಾ ನರಸಿಂಹ ರೆಡ್ಡಿಯ ಎಲ್ಲ ಭಾಷೆಗಳ ಆಡಿಯೋ ಹಕ್ಕುಗಳನ್ನೂ ಲಹರಿ ಸಂಸ್ಥೆ ಪಡೆದುಕೊಂಡಿದ್ದು ಈ ಮೂಲಕ ಈ ಬಹುನಿರೀಕ್ಷಿತ ಚಿತ್ರದ ಭಾಗವಾಗಿದೆ.

  • My dear hero ಅಂದ್ರು ಮಿಸಸ್ ಪ್ರಿಯಾ

    My dear hero ಅಂದ್ರು ಮಿಸಸ್ ಪ್ರಿಯಾ

    ಬೆಂಗಳೂರು: ಇಂದು ರಾಜ್ಯಾದ್ಯಂತ ಬಹುನಿರೀಕ್ಷಿತ ಸಿನಿಮಾ ‘ದಿ ವಿಲನ್’ ಚಿತ್ರ ಬಿಡುಗಡೆಯಾಗಿದೆ. ಆದರೆ ಸಿನಿಮಾ ಬಿಡುಗಡೆಯ ಮೊದಲೇ ಈ ಬಗ್ಗೆ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ.

    ಪ್ರಿಯಾ ಸುದೀಪ್ ಅವರು, ”ನಾನು ಇದುವೆರೆಗೂ ಈ ರೀತಿಯ ಕ್ರೇಜ್ ಅನ್ನು ಈ ಹಿಂದೆ ನೋಡಿಯೇ ಇರಲಿಲ್ಲ. ರಾಜ್ಯಾದ್ಯಂತ ಇದು ಹಬ್ಬದ ರೀತಿ ಆಗಿದೆ. ಎನರ್ಜಿಟಿಕ್ ಶಿವಣ್ಣ, ನಿರ್ದೇಶಕ ಪ್ರೇಮ್ ಹಾಗೂ ನನ್ನ ಪ್ರೀತಿಯ ಹೀರೋ ಸುದೀಪ್ ಸೇರಿದಂತೆ ಇಡೀ ‘ದಿ ವಿಲನ್’ ಚಿತ್ರತಂಡಕ್ಕೆ ನನ್ನ ಶುಭಾಶಯಗಳು”  ಎಂದು ಬರೆದು  ಟ್ವೀಟ್ ಮಾಡಿದ್ದಾರೆ.

    ಇಂದು ಹಲವು ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ ಆಗಿ ಭರ್ಜರಿ ಯಶಸ್ವಿ ಪ್ರದರ್ಶನವನ್ನು ಕಾಣುತ್ತಿದೆ. ಇತ್ತೀಚೆಗೆ ಸುದೀಪ್ ಕುಟುಂಬ ಮೆಗಾಸ್ಟಾರ್ ಚಿರಂಜೀವಿ ಅವರನ್ನು ಭೇಟಿಯಾಗಿದ್ದರು. ಭೇಟಿಯಾಗಿದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

    ಮೆಗಾ ಸ್ಟಾರ್ ಚಿರಂಜೀವಿ ಅಭಿನಯದ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ನಟ ಸುದೀಪ್ ‘ಅವುಕು ರಾಜಾ’ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಮುಖ್ಯ ಪಾತ್ರ ಪೋಷಿಸುತ್ತಿರುವ ಸುದೀಪ್ ಅವರ ಲುಕ್ ಈಗಾಗಲೇ ಬಹಿರಂಗವಾಗಿದೆ.

    ‘ಸೈರಾ ನರಸಿಂಹ ರೆಡ್ಡಿ’ ಚಿತ್ರದ ಶೂಟಿಂಗ್ ನ ಬಿಡುವಿನ ವೇಳೆ ಚಿರಂಜೀವಿ ಜೊತೆಗೆ ಸುದೀಪ್ ಕುಟುಂಬ ಸಮಯ ಕಳೆದಿದೆ. ಚಿರಂಜೀವಿ ಜೊತೆಗೆ ಸುದೀಪ್ ಪುತ್ರಿ ಸಾನ್ವಿ ಕೂಡ ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿದೆ.

    ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಚಿರಂಜೀವಿ, ಸುದೀಪ್ ಜೊತೆಗೆ ಜಗಪತಿ ಬಾಬು, ವಿಜಯ್ ಸೇತುಪತಿ, ನಯನತಾರಾ, ತಮನ್ನಾ, ಪೂನಂ ಕೌರ್ ನಟಿಸಿದ್ದಾರೆ. ವಿಶೇಷ ಪಾತ್ರವೊಂದರಲ್ಲಿ ಬಿಗ್ ಬಿ ಅಮಿತಾಬ್ ಬಚ್ಚನ್ ಕೂಡ ಬಣ್ಣ ಹಚ್ಚಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv