Tag: ಸೈಲೆಂಟ್ ಸುನೀಲ್

  • ಬುದ್ಧ, ಅಂಬೇಡ್ಕರ್, ಸ್ವಾಮಿ ವಿವೇಕಾನಂದರ ಭಾವಚಿತ್ರದೊಂದಿಗೆ ಸೈಲೆಂಟ್ ಸುನಿ – ರಾರಾಜಿಸುತ್ತಿವೆ ಕಟೌಟ್

    ಬುದ್ಧ, ಅಂಬೇಡ್ಕರ್, ಸ್ವಾಮಿ ವಿವೇಕಾನಂದರ ಭಾವಚಿತ್ರದೊಂದಿಗೆ ಸೈಲೆಂಟ್ ಸುನಿ – ರಾರಾಜಿಸುತ್ತಿವೆ ಕಟೌಟ್

    ಚಾಮರಾಜಪೇಟೆ: ರಾಜಕೀಯ ಪಕ್ಷ ಸೇರುವ ಸುದ್ದಿ ಹರಿದಾಡಿ ವಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿ `ಸೈಲೆಂಟ್’ ಆಗಿದ್ದ ಸುನೀಲ್ ಮತ್ತೆ ಎಂಟ್ರಿ ಕೊಟ್ಟಿದ್ದಾನೆ. ಚಾಮರಾಜಪೇಟೆಯ ತುಂಬೆಲ್ಲ ಸೈಲೆಂಟ್ ಸುನೀಲ್ ಬ್ಯಾನರ್, ಕಟೌಟ್‍ಗಳು ರಾರಾಜಿಸುತ್ತಿದ್ದು, ರಾಜಕೀಯಕ್ಕೆ ಎಂಟ್ರಿ ಕೊಡುವ ಸೂಚನೆ ನೀಡಿದ್ದಾನೆ.

    ಶಿವರಾತ್ರಿ (Shivaratri) ಹಬ್ಬದ ಪ್ರಯುಕ್ತ ಸೈಲೆಂಟ್ ಸುನೀಲ್ ಶುಭ ಕೋರಿರುವ ಕಟೌಟ್‍ಗಳು ರಾಜಾಜಿಸುತ್ತಿವೆ. ಸಮಾಜ ಸೇವಕರು ಎಂದು ಬರೆದುಕೊಂಡಿರುವ ಕಟೌಟ್‍ಗಳು ನಗರದೆಲ್ಲೆಡೆ ಗೋಚರಿಸುತ್ತಿವೆ. ಇದನ್ನೂ ಓದಿ: ದೇವೇಗೌಡರನ್ನೇ ಮನೆ, ಜಿಲ್ಲೆಯಿಂದ ಹೊರಹಾಕಿದವರು ನನ್ನನ್ನು ಬಿಡ್ತಾರಾ: ರೇವಣ್ಣ ವಿರುದ್ಧ ಎ.ಟಿ.ರಾಮಸ್ವಾಮಿ ವಾಗ್ದಾಳಿ

    ಕಟೌಟ್‍ಗಳಲ್ಲಿ ಬುದ್ಧ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್, ಅಬ್ದುಲ್ ಕಲಾಂ ಅವರ ಭಾವಚಿತ್ರಗಳೊಂದಿಗೆ ಸೈಲೆಂಟ್ ಸುನೀಲ್ ಭಾವಚಿತ್ರವಿರುವ ಪೋಸ್ಟರ್‍ಗಳನ್ನು ಅಳವಡಿಸಲಾಗಿದೆ. ಸೈಲೆಂಟ್ ಸುನೀಲ್ (Silent Sunil) ಜನತೆಗೆ ಮಹಾಶಿವರಾತ್ರಿ ಹಬ್ಬದ ಶುಭಾಶಯ ತಿಳಿಸಿರುವ ಪೋಸ್ಟರ್ ಇದಾಗಿದೆ.

    41 ವಯಸ್ಸಿನ ಸುನೀಲ್ ಮೇಲೆ ಕೊಲೆ, ದರೋಡೆ, ಅಪಹರಣ, ಭೂ ಮಾಫಿಯಾದಂತಹ ಪ್ರಕರಣಗಳಿವೆ. ಇತ್ತೀಚೆಗೆ ಬಿಜೆಪಿ (BJP) ನಾಯಕರೊಂದಿಗೆ ಕಾಣಿಸಿಕೊಂಡಿದ್ದ. ಇದು ವಿಪಕ್ಷಗಳಿಂದ ತೀವ್ರ ಟೀಕೆಗೆ ಕಾರಣವಾಗಿತ್ತು. ರೌಡಿಶೀಟರ್ ರಾಜಕೀಯ ಪ್ರವೇಶಕ್ಕೆ ಬಿಜೆಪಿ ಕಾರಣವಾಗಿದೆ ಎಂದು ಕಾಂಗ್ರೆಸ್, ಜೆಡಿಎಸ್ ಟೀಕೆ ವ್ಯಕ್ತಪಡಿಸಿದ್ದವು. ಇದನ್ನೂ ಓದಿ: ಸಿನಿಮಾ ಶಿವರಾತ್ರಿ : ಬೆಂಗಳೂರಿನಲ್ಲಿ ‘ರಾಜಕುಮಾರ’, ಹೈದರಾಬಾದ್ ನಲ್ಲಿ ‘ಕಾಂತಾರ’

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾಂಗ್ರೆಸ್‌ ರೌಡಿಗಳ ಪಕ್ಷ.. ಡಿಕೆಶಿ ತಿಹಾರ್‌ ಜೈಲಿಗೆ ಹೋಗಿ ಬಂದವರು – ಈಶ್ವರಪ್ಪ ತಿರುಗೇಟು

    ಕಾಂಗ್ರೆಸ್‌ ರೌಡಿಗಳ ಪಕ್ಷ.. ಡಿಕೆಶಿ ತಿಹಾರ್‌ ಜೈಲಿಗೆ ಹೋಗಿ ಬಂದವರು – ಈಶ್ವರಪ್ಪ ತಿರುಗೇಟು

    ಶಿವಮೊಗ್ಗ: ಕಾಂಗ್ರೆಸ್‌ (Congress) ರೌಡಿಗಳ ಪಕ್ಷ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D.K.Shivakumar) ತಿಹಾರ್‌ ಜೈಲಿಗೆ ಹೋಗಿ ಬಂದವರು ಎಂದು ಕಾಂಗ್ರೆಸ್‌ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (K.S.Eshwarappa) ತಿರುಗೇಟು ನೀಡಿದರು.

    ರೌಡಿಶೀಟರ್‌ ಸೈಲೆಂಟ್‌ ಸುನೀಲ್‌ ಬಿಜೆಪಿ ಸೇರ್ಪಡೆ ವಿಚಾರವಾಗಿ ಕಾಂಗ್ರೆಸ್‌ ಲೇವಡಿ ಮಾಡಿತ್ತು. ಬಿಜೆಪಿ (BJP) ರೌಡಿಗಳ ಪಕ್ಷ ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿತ್ತು. ಇದಕ್ಕೆ ಈಶ್ವರಪ್ಪ ಟಾಂಗ್‌ ಕೊಟ್ಟಿದ್ದಾರೆ. ನಮ್ಮದು ರೌಡಿಗಳ ಪಕ್ಷ ಅಲ್ಲ. ಸುಸಂಸ್ಕೃತರ ಪಕ್ಷ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ತಿಹಾರ್ ಜೈಲಿನಲ್ಲಿ ಇದ್ದು ಬಂದವರು. ಕಾಂಗ್ರೆಸ್‌ನ ಯುವ ಮೋರ್ಚಾ ಅಧ್ಯಕ್ಷ ನಲಪಾಡ್ ಬಾರ್‌ನಲ್ಲಿ ಹೊಡೆದಾಡಿ ಜೈಲಿಗೆ ಹೋಗಿ ಬಂದವನು ಎಂದು ಕಾಂಗ್ರೆಸ್‌ಗೆ ಠಕ್ಕರ್‌ ಕೊಟ್ಟರು. ಇದನ್ನೂ ಓದಿ: ಬಿಜೆಪಿಯಲ್ಲಿ ‘ರೌಡಿ ಮೋರ್ಚಾ’ ಎಂಬ ಹೊಸ ಘಟಕ ತೆರೆಯುವ ಲಕ್ಷಣವಿದೆ: ಕಾಂಗ್ರೆಸ್

    ಮಹಾರಾಷ್ಟ್ರ ಗಡಿ ವಿವಾದ ಕುರಿತು ಮಾತನಾಡಿ, ಕರ್ನಾಟಕದ ಒಂದಿಂಚು ಭೂಮಿ ಸಹ ಮಹಾರಾಷ್ಟ್ರಕ್ಕೆ ಹೋಗುವುದಿಲ್ಲ. ರಾಜ್ಯದ ಆರೂವರೆ ಕೋಟಿ ಜನ ಒಗ್ಗಟ್ಟಾಗಿದ್ದಾರೆ. ಅಲ್ಲಿ ಕುಡಿಯುವುದಕ್ಕೆ ನೀರು ಸಹ ಇಲ್ಲ. ಗಡಿಭಾಗದ ಜನ ಕರ್ನಾಟಕಕ್ಕೆ ಸೇರಲು ಬಯಸುತ್ತಿದ್ದಾರೆ ಎಂದು ತಿಳಿಸಿದರು.

    ಡಿಕೆಶಿ, ಸಿದ್ದು ಒಳಜಗಳ ಬಗ್ಗೆ ಪ್ರತಿಕ್ರಿಯಿಸಿ, ಡಿಕೆಶಿ ಒಳಗೊಳಗೆ ದ್ವೇಷ ಮಾಡಿ, ಮೇಲೆ ಚನ್ನಾಗಿ ಮಾತನಾಡುತ್ತಾರೆ. ಇಬ್ಬರು ಒಬ್ಬರಿಗೊಬ್ಬರು ಚಾಕು ಹಾಕಿಕೊಳ್ಳುತ್ತಾರೆ. ಹಿಂದೂ ಸಮಾಜ ಬಿಜೆಪಿ ಪರವಾಗಿದೆ. ಈಗಾಗಿಯೇ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಇದನ್ನೂ ಓದಿ: ತಲೆ ಹೊಡೆದವರು, ಮನೆ ಹಾಳು ಮಾಡೋರನ್ನ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿದೆ – HDK

    ರಮೇಶ್ ಜಾರಕಿಹೊಳಿ ಜೆಡಿಎಸ್ ಸೇರ್ಪಡೆ ಸಂಬಂಧ ಸಿ.ಎಂ.ಇಬ್ರಾಹಿಂ ಹೇಳಿಕೆ ಕುರಿತು ಮಾತನಾಡಿ, ಸಿ.ಎಂ.ಇಬ್ರಾಹಿಂ ಅವರಿಗೆ ಬೇರೆ ಉದ್ಯೋಗ ಇಲ್ಲ. ರಸ್ತೆಯಲ್ಲಿ ಹೋಗುವ ನಾಯಿ ಕೂಡಾ ಜೆಡಿಎಸ್‌ಗೆ ಹೋಗುವುದಿಲ್ಲ. ಇನ್ನು ರಮೇಶ್ ಜಾರಕಿಹೊಳಿ ಅವರು ಸರ್ಕಾರ ತಂದವರು. ಅವರು ಯಾಕ್ರೀ ಬಿಜೆಪಿ ಬಿಟ್ಟು ಹೋಗ್ತಾರೆ. ಏನು ಇಲ್ಲದಿರುವ ಜೆಡಿಎಸ್‌ಗೆ ಹೋಗ್ತಾರಾ? ಯಾವ ಕಾರಣಕ್ಕೂ ಹೋಗುವ ಪ್ರಶ್ನೆ ಉದ್ಬವವಾಗುವುದಿಲ್ಲ. ಇಬ್ರಾಹಿಂಗೆ ತಾನಂತು ಹೋಗಿ ಆಗಿದೆ. ತಾನು ಹೋಗಿರುವ ಒಂದೇ ಕಾರಣಕ್ಕೆ ಅವರು ಬರುತ್ತಾರೆ, ಇವರು ಬರುತ್ತಾರೆ ಅಂತಾ ಹೇಳ್ತಿದ್ದಾರೆ. ಇಬ್ರಾಹಿಂ ಅರ್ಥ ಇಲ್ಲದೇ ಹೇಳಿಕೆ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    Live Tv
    [brid partner=56869869 player=32851 video=960834 autoplay=true]

  • ರಾಜಕಾರಣಿಗಳ ಮಧ್ಯೆ ರೌಡಿಶೀಟರ್ ಸೈಲೆಂಟ್ ಸುನೀಲನ ದರ್ಬಾರ್ – ಪೊಲೀಸರು ಗಪ್‍ಚುಪ್

    ರಾಜಕಾರಣಿಗಳ ಮಧ್ಯೆ ರೌಡಿಶೀಟರ್ ಸೈಲೆಂಟ್ ಸುನೀಲನ ದರ್ಬಾರ್ – ಪೊಲೀಸರು ಗಪ್‍ಚುಪ್

    ಬೆಂಗಳೂರು: ಮೂವತ್ತಕ್ಕೂ ಹೆಚ್ಚು ಕೇಸ್‍ಗಳಲ್ಲಿ ಭಾಗಿಯಾಗಿ ರೌಡಿ ಶೀಟರ್ (Rowdy Sheeter) ಆಗಿರುವ ಸೈಲೆಂಟ್ ಸುನೀಲ (Silent Sunila) ರಾಜಕಾರಣಿಗಳ ಮಧ್ಯೆ ದರ್ಬಾರ್ ನಡೆಸುತ್ತಿದ್ದರೆ, ಇತ್ತ ಪೊಲೀಸರು (Police) ಮಾತ್ರ ಕಣ್ಮುಂದೆ ರೌಡಿ ಇದ್ದರು ಸೈಲೆಂಟ್ ಆಗಿದ್ದಾರೆ. ಇದು ಬಾರಿ ಅನುಮಾನಕ್ಕೆ ಕಾರಣವಾಗಿದೆ.

    ಕೆಲದಿನಗಳ ಹಿಂದೆ ಬೆಂಗಳೂರಿನ 80ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ 23 ಪುಡಿರೌಡಿಗಳನ್ನು ವಶಕ್ಕೆ ಪಡೆದು ವಾರ್ನ್ ಮಾಡಿದ್ದರು. ಸೈಲೆಂಟ್ ಸುನೀಲ, ವಿಲ್ಸನ್ ಗಾರ್ಡನ್ ನಾಗ, ಸೈಕಲ್ ರವಿ, ಒಂಟೆ ರೋಹಿತ, ಕಾಡುಬೀಸನಹಳ್ಳಿ ರೋಹಿತ, ಕಾಡಬೀಸನಹಳ್ಳಿ ಲೋಕಿ ದಾಳಿ ವೇಳೆ ಪರಾರಿಯಾಗಿದ್ದರು ಎಂದು ಸಿಸಿಬಿ ಪೊಲೀಸರು ಹೇಳಿದ್ದರು. ಆದರೆ ನಿನ್ನೆ ರಾಜಕಾರಣಿಗಳ ಸಭೆಯಲ್ಲಿ ಸೈಲೆಂಟ್ ಸುನೀಲ ಪ್ರತ್ಯಕ್ಷನಾಗಿದ್ದಾನೆ. ಈ ಕಾರ್ಯಕ್ರಮದಲ್ಲಿ ರಾಜಕಾರಣಿಗಳ ಜೊತೆ ಪೊಲೀಸರು ಇದ್ದರು ಆದರೂ ಸುನೀಲ ರಾಜಾರೋಷವಾಗಿ ಮೆರೆದಾಡಿದ್ದಾನೆ. ಇದನ್ನು ಗಮನಿಸಿದಾಗ ರೌಡಿಶೀಟರ್ ಸೈಲೆಂಟ್ ಸುನೀಲನ ಬೆನ್ನಿಗೆ ಪ್ರಭಾವಿ ರಾಜಕಾರಣಿಗಳು ನಿಂತ್ರಾ ಎಂಬ ಅನುಮಾನ ಮೂಡಿದೆ. ಇದನ್ನೂ ಓದಿ: ಮದರಸಾಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಕಟ್

    ಕುಖ್ಯಾತ ರೌಡಿಶೀಟರ್ ಆಗಿರುವ ಸೈಲೆಂಟ್ ಸುನೀಲ ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಕ್ತದಾನ ಶಿಬಿರದಲ್ಲಿ ಭಾಗಿಯಾಗಿದ್ದ. ಇದೇ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ, ಪಿ.ಸಿ ಮೋಹನ್, ಶಾಸಕ ಉದಯ್ ಗರುಡಾಚಾರ್, ಎನ್.ಆರ್.ರಮೇಶ್ ಭಾಗಿಯಾಗಿದ್ದರು. ಇದೇ ವೇದಿಕೆಯಲ್ಲೇ ಸುನೀಲ ಕೂಡ ಕಾಣಿಸಿಕೊಂಡಿದ್ದು, ಚಾಮರಾಜಪೇಟೆಯ ಮುಂದಿನ ಬಿಜೆಪಿ ಎಮ್‍ಎಲ್‍ಎ ಅಭ್ಯರ್ಥಿ ಅಂತಲೇ ಬಿಂಬಿತನಾಗಿದ್ದಾನೆ. ಇದನ್ನೂ ಓದಿ: ಜೋಡೋ ಯಾತ್ರೆ ವೇಳೆ ಪಾಕ್ ಪರ ಘೋಷ – ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್

    ಅಂದು ಪೊಲೀಸರು ದಾಳಿ ವೇಳೆ ಪರಾರಿಯಾಗಿದ್ದಾನೆ. ಹೆದರಿ ಬೆಂಗಳೂರು ಬಿಟ್ಟು ತಮಿಳುನಾಡು ಸೇರಿಕೊಂಡಿದ್ದಾನೆ ಎಂದು ಸಿಸಿಬಿ ಪೊಲೀಸರು ಹೇಳಿದ್ದರು. ಆದರೆ ನಿನ್ನೆ ಸೈಲೆಂಟ್ ಸುನೀಲ ಬಹಿರಂಗವಾಗಿ ಕಾಣಿಸಿಕೊಂಡಿದ್ದ. ಆದರೂ ಅಲ್ಲೇ ಇದ್ದ ಪೊಲೀಸರು ಸೈಲೆಂಟ್ ಆಗಿದ್ದರು.

    ಒಂದು ಕಾಲದಲ್ಲಿ ರಕ್ತ ಹರಿಸಿದ್ದ ರೌಡಿಶೀಟರ್‌ನಿಂದ ಈಗ ರಕ್ತ ದಾನ ಶಿಬಿರ ನಡೆಯುತ್ತಿದೆ. ಇದೇ ಕಾರ್ಯಕ್ರಮದಲ್ಲಿ ಸುನೀಲನ ಹತ್ರ ಸೆಲ್ಫಿ ತೆಗೆದುಕೊಳ್ಳೋಕೆ ಪುಡಿ ರೌಡಿಗಳು ಮುಗಿಬಿದ್ದಿದ್ದರು. ಇಷ್ಟೇಲ್ಲಾ ರಾಜಕೀಯ ಮುಖಂಡರು, ಪೊಲೀಸರ ಮುಂದೆಯೇ ನಡೀತಿದ್ರು ಪೊಲೀಸರು ಮಾತ್ರ ಫುಲ್ ಸೈಲೆಂಟ್ ಆಗಿದ್ದಿದ್ದು ಅಚ್ಚರಿ ಮೂಡಿಸಿದೆ.

    Live Tv
    [brid partner=56869869 player=32851 video=960834 autoplay=true]