Tag: ಸೊಳ್ಳೆ ಔಷಧಿ

  • ಸೊಳ್ಳೆ ಔಷಧಿ ಸಿಂಪಡಿಸಿದವರಿಗೆ ಬಿಲ್ ಬಾಕಿ ಆರೋಪ – ಬಿಬಿಎಂಪಿ ವಿರುದ್ಧ ಪೊಲೀಸ್ ಠಾಣೆಗೆ ದೂರು

    ಸೊಳ್ಳೆ ಔಷಧಿ ಸಿಂಪಡಿಸಿದವರಿಗೆ ಬಿಲ್ ಬಾಕಿ ಆರೋಪ – ಬಿಬಿಎಂಪಿ ವಿರುದ್ಧ ಪೊಲೀಸ್ ಠಾಣೆಗೆ ದೂರು

    ಬೆಂಗಳೂರು: ಟೆಂಡರ್ ಕೂಗೋದು, ಟೆಂಡರ್ ಆದ್ಮೇಲೆ ಬಿಲ್ ಬಾಕಿ ವಿಚಾರಗಳು ಆಗಾಗ ಬಿಬಿಎಂಪಿಯಲ್ಲಿ ಸದ್ದು ಮಾಡುತ್ತಲೇ ಇರುತ್ತವೆ. ಈಗ ಬಿಬಿಎಂಪಿ (BBMP) ಸೊಳ್ಳೆ ಔಷಧಿ ಸಿಂಪಡಿಸಿದ ಬಿಲ್‍ಗಾಗಿ ಗಲಾಟೆಯಾಗಿದೆ. ದಯಮಾಡಿ ಹಣ ಬಿಡುಗಡೆ ಮಾಡಿ ಅಂದ್ರೆ ಅಧಿಕಾರಿ ನಮ್ಮ ಮೇಲೆ ದೌರ್ಜನ್ಯ ಮಾಡಿದ್ದಾರೆ ಎಂಬ ಪ್ರಕರಣ ಪೊಲೀಸ್ ಠಾಣೆ (Police Station) ಮೆಟ್ಟಿಲೇರಿದೆ.

    ಸೊಳ್ಳೆ ಔಷಧಿ (Mosquito Spray) ಸಿಂಪಡಿಸಿದ ಬಿಲ್ ಕೇಳಿದ್ರೆ ಬಿಬಿಎಂಪಿ ಅಧಿಕಾರಿಗಳು ದರ್ಪ ಪ್ರದರ್ಶಿಸಿರುವ ಆರೋಪ ಕೇಳಿಬಂದಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ದೂರು ದಾಖಲಿಸಿದ್ದು, ಟೆಂಡರ್ ಕರೆಯದೆ, ಬಾಕಿ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಬಿಬಿಎಂಪಿ ಸೊಳ್ಳೆ ಔಷಧಿ ಸಿಂಪಡಿಸಿದ ಬಿಲ್‍ಗಾಗಿ ಆಗ್ರಹಿಸಿದಾಗ ನಮ್ಮ ಮೇಲೆ ದೌರ್ಜನ್ಯ ಮಾಡಿದ್ದಾರೆ. ಕಳೆದ 2 ವರ್ಷಗಳಿಂದ 5 ಕೋಟಿ ಬಿಲ್ ಬಾಕಿಯನ್ನು ಬಿಬಿಎಂಪಿ ಉಳಿಸಿಕೊಂಡಿದೆ. ಈ ಬಿಲ್ ಕ್ಲಿಯರ್ ಮಾಡಲು ಮನವಿ ಮಾಡಿಕೊಳ್ಳಲು ಹೋದಾಗ ಸ್ಪೆಷಲ್ ಕಮಿಷನರ್ ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

    ನಿನ್ನೆ ಬಾಕಿ ಬಿಲ್ ಕೇಳುವುದಕ್ಕೆ ಹಣಕಾಸು ವಿಭಾಗದ ವಿಶೇಷ ಆಯುಕ್ತರ ಕಚೇರಿಗೆ ಹೋದಾಗ ಮಾರ್ಷಲ್‍ಗಳಿಂದ ವಿಶೇಷ ಆಯುಕ್ತರು ನಮ್ಮ ಮೇಲೆ ದೌರ್ಜನ್ಯ ಮಾಡಿ, ಹೊರಗೆ ದೂಡಿದ್ದಾರೆ. ಮ್ಯಾನ್ ಹ್ಯಾಂಡ್ಲಿಂಗ್ ಮಾಡಿಸುವುದರ ಮೂಲಕ ಬಿಬಿಎಂಪಿ ಸ್ಪೆಷಲ್ ಕಮಿಷನರ್ ಜಯರಾಂ ರಾಯ್ಪುರ ದೌರ್ಜನ್ಯ ಮಾಡಿದ್ದಾರೆ. ಹಲವಾರು ದಿನಗಳಿಂದ ಬಿಲ್ ಪಾವತಿಗೆ ಮನವಿ ಮಾಡುತ್ತಲೇ ಇದ್ದೇವೆ. ಈ ಬಗ್ಗೆ ನಿನ್ನೆ 30ಕ್ಕೂ ಹೆಚ್ಚು ಸಿಬ್ಬಂದಿ ಬಾಕಿ ಮೊತ್ತ ಪಡೆಯಲು ಹೋದಾಗ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಪ್ರಸ್ತುತ ಸಾಲಿಗೆ 243 ವಾರ್ಡ್‍ಗೆ ಸೊಳ್ಳೆ ಔಷಧಿ ಸಿಂಪಡಣೆ ಟೆಂಡರ್ ಕರೆಯಬೇಕಿದ್ದ ಬಿಬಿಎಂಪಿ, ಇದುವರೆಗೂ ಕರೆದಿಲ್ಲ. ಆದರೆ 198 ವಾರ್ಡ್‍ಗಷ್ಟೇ ಟೆಂಡರ್ ಕರೆದು ಗೋಲ್ಮಾಲ್ ಮಾಡಿದ್ದಾರೆಂದು ಆರೋಪ ಮಾಡಲಾಗಿದೆ. ಇದನ್ನೂ ಓದಿ: ಭಾರತವು ಹಿಂದೂ ಬೆಳವಣಿಗೆ ದರದ ಅಪಾಯಕ್ಕೆ ಹತ್ತಿರದಲ್ಲಿದೆ : ಚರ್ಚೆಗೆ ಗ್ರಾಸವಾಯ್ತು ರಘುರಾಮ್‌ ರಾಜನ್‌ ಹೇಳಿಕೆ

    ಈ ಬಗ್ಗೆ ವಿಶೇಷ ಆಯುಕ್ತ ಜಯರಾಮ್ ರಾಯಪುರ ಮಾತನಾಡಿ, 198 ವಾರ್ಡ್‌ಗಳಿಗೆ ಟೆಂಡರ್ ಕರೆದಿದ್ದೇವೆ. ಈಗ ಹೊಸ ಟೆಂಡರ್ 243 ವಾರ್ಡ್‌ಗಳಿಗೆ ಕರೆಯುತ್ತೇವೆ. ಆದರೆ ಇವರು ಕೋರ್ಟಿನಲ್ಲಿ ಸ್ಟೇ ತಂದಿದ್ದಾರೆ. ಸ್ಟೇ ವೆಕೆಟ್ ಆಗಬೇಕು. ನಂತರವಷ್ಟೇ ಟೆಂಡರ್ ಕರೆಯುತ್ತೇವೆ. ನಾವು ಯಾರನ್ನೂ ತಪ್ಪಾಗಿ ನಡೆಸಿಕೊಂಡಿಲ್ಲ ಎಂದರು. ಇದನ್ನೂ ಓದಿ: ಮದುವೆ ಆಗ್ತೀನಿ ಅಂತಾ ನಂಬಿಸಿ ಯುವತಿಯನ್ನು 7 ತಿಂಗಳ ಗರ್ಭಿಣಿ ಮಾಡಿ ಕೈಕೊಟ್ಟ

  • ತನಗಿಂತ ಹೆಚ್ಚು ಅಂಕ ಪಡೆದಳೆಂದು ಕ್ಲಾಸ್‍ಮೇಟ್‍ಗೆ ವಿಷವುಣಿಸಿದ 8ನೇ ಕ್ಲಾಸ್ ಹುಡುಗಿ!

    ತನಗಿಂತ ಹೆಚ್ಚು ಅಂಕ ಪಡೆದಳೆಂದು ಕ್ಲಾಸ್‍ಮೇಟ್‍ಗೆ ವಿಷವುಣಿಸಿದ 8ನೇ ಕ್ಲಾಸ್ ಹುಡುಗಿ!

    ನವದೆಹಲಿ: ಪರೀಕ್ಷೆಯಲ್ಲಿ ತನಗಿಂತ ಹೆಚ್ಚು ಅಂಕ ಪಡೆದಳು ಎಂಬ ಕಾರಣಕ್ಕೆ 8ನೇ ಕ್ಲಾಸ್ ವಿದ್ಯಾರ್ಥಿನಿಯೊಬ್ಬಳು ತನ್ನ ಕ್ಲಾಸ್‍ಮೇಟ್‍ನ ನೀರಿನ ಬಾಟಲಿಯಲ್ಲಿ ಸೊಳ್ಳೆ ಔಷಧಿ ಬೆರೆಸಿದ ಘಟನೆ ದೆಹಲಿಯಲ್ಲಿ ನಡೆದಿದೆ.

    ಘಟನೆಯ ನಂತರ ಪೊಲೀಸರ ಭಯದಿಂದ ಆರೋಪಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಸದ್ಯ ಆಕೆಯ ಪರಿಸ್ಥಿತಿ ಗಂಭಿರವಾಗಿದೆ ಎಂದು ಪೊಲೀಸ್ ಅಧಿಕರಿಗಳು ಹೇಳಿದ್ದಾರೆ.

    ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಸೋಮವಾರದಂದು ತನ್ನ ಕ್ಲಾಸ್‍ಮೇಟ್‍ನ ನೀರಿನ ಬಾಟಲಿಯಲ್ಲಿ ಸೊಳ್ಳೆ ಔಷಧಿ ಬೆರೆಸಿದ್ದಾಳೆ. ನಂತರ ಬಾಲಕಿ ಆ ಬಾಟಲಿಯಿಂದ ನೀರು ಕುಡಿದಿದ್ದು ವಾಂತಿಯಾಗಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಾಲಕಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಉಸ್ತುವಾರಿ ಭೂಪೇಂದ್ರ ಸಿಂಗ್ ಹೇಳಿದ್ದಾರೆ.

    13-14 ವರ್ಷ ವಯಸ್ಸಿನ ಈ ಇಬ್ಬರು ಹುಡುಗಿಯರು ಒಂದೇ ತರಗತಿಯಲ್ಲಿ ಓದುತ್ತಿದ್ದಾರೆ. ಸಂತ್ರಸ್ತ ಬಾಲಕಿ ತನ್ನ ಬಾಟಲಿಯಿಂದ ನೀರು ಕುಡಿದ ನಂತರ ಏನೋ ಸೊಳ್ಳೆ ಔಷಧಿ ವಾಸನೆ ಬರುತ್ತಿದೆ ಎಂದು ತನ್ನ ಗೆಳತಿಗೆ ಹೇಳಿದ್ದಳು. ನಂತರ ಬಾಲಕಿಯ ಆರೋಗ್ಯದಲ್ಲಿ ಏರುಪೇರಾದಾಗ ಶಾಲೆಯವರು ಪೋಷಕರಿಗೆ ವಿಷಯ ತಿಳಿಸಿದ್ದಾರೆ. ನಂತರ ಅವರು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.

    ಬಳಿಕ ಶಾಲಾ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಶಾಲೆಯ ಸಿಸಿಟಿವಿ ದೃಶ್ಯಾವಳಿಯನ್ನ ಪರಿಶೀಲಿಸಲಾಗಿದ್ದು, ಆರೋಪಿ ವಿದ್ಯಾರ್ಥಿನಿ ತನ್ನ ಕ್ಲಾಸ್‍ಮೇಟ್‍ನ ನೀರಿನ ಬಾಟಲಿಗೆ ಸೊಳ್ಳೆ ಔಷಧಿ ಬೆರೆಸಿ ನಂತರ ಅದನ್ನು ಮತ್ತೊಬ್ಬ ವಿದ್ಯಾರ್ಥಿಯ ಬ್ಯಾಗ್‍ನಲ್ಲಿ ಬಚ್ಚಿಟ್ಟಿದ್ದಾಳೆ ಎಂದು ಸಿಂಗ್ ತಿಳಿಸಿದ್ದಾರೆ.

    ಸಂತ್ರಸ್ತ ಬಾಲಕಿ ಈ ಬಗ್ಗೆ ಹೇಳಿಕೆ ನೀಡಿದ್ದು, ಪರೀಕ್ಷೆಯಲ್ಲಿ ನಾನು ಆಕೆಗಿಂತ ಹೆಚ್ಚಿನ ಅಂಕ ಪಡೆದಿದ್ದಕ್ಕೆ ಈ ರೀತಿ ಮಾಡಿರಬಹುದು ಎಂದು ಹೇಳಿದ್ದಾಳೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಾರೆಂದು ಹೆದರಿ ಆರೋಪಿ ವಿದ್ಯಾರ್ಥಿನಿ ತನ್ನ ಮನೆಯಲ್ಲಿ ಸೊಳ್ಳೆ ಔಷಧಿ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಕೆಯನ್ನು ಸದ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಸಿಂಗ್ ಹೇಳಿದ್ದಾರೆ.

    ನಾವು ಆಕೆಗೆ ಚಿಕಿತ್ಸೆ ನೀಡುತ್ತಿದ್ದೇವೆ. ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಡಾ ಸುಧೀರ್ ಸಿಂಗ್ ಹೇಳಿದ್ದಾರೆ. ಐಪಿಸಿ ಸಸೆಕ್ಷನ್ 328ರ ಅಡಿ ಆರೋಪಿ ವಿದ್ಯಾರ್ಥಿನಿಯ ವಿರುದ್ಧ ಪ್ರಕರಣ ದಾಖಲಾಗಿದೆ.