ಕಲಬರುಗಿ: ಸೋದರಿಯರಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ.
ಐಶ್ವರ್ಯ(19) ಮತ್ತು ಸಾರಿಕಾ (17) ಆತ್ಮಹತ್ಯೆಗೆ ಶರಣಾದ ಸೋದರಿಯರು. ಐನಾಪುರ ಗ್ರಾಮದ ವಿಶ್ವನಾಥ್ ಎಂಬವರು ಮಕ್ಕಳು. ಮನೆಯಲ್ಲಿ ಯಾರು ಇಲ್ಲದಿದ್ದಾಗ ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಲ್ಲಿರುವ ಡೆತ್ ನೋಟ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಕ್ನೋ: ಮನೆಯಲ್ಲಿ ಮಲಗಿದ್ದ ಮೂವರು ಅಪ್ರಾಪ್ತ ಸೋದರಿಯರ ಮೇಲೆ ಆ್ಯಸಿಡ್ ದಾಳಿ ನಡೆದಿರುವ ಘಟನೆ ಉತ್ತರ ಪ್ರದೇಶದ ಗೋಂಡಾದ ಪರಸಪುರದಲ್ಲಿ ನಡೆದಿದೆ.
ಸೋಮವಾರ ರಾತ್ರಿ ಘಟನೆ ನಡೆದಿದ್ದು ಮೂವರನ್ನ ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ. ಇಬ್ಬರಿಗೆ ಸಣ್ಣ ಗಾಯಗಳಾಗಿದ್ದು, ಮತ್ತೋರ್ವ ಬಾಲಕಿಯ ಮುಖದ ಮೇಲೆ ಆ್ಯಸಿಡ್ ಬಿದ್ದಿದೆ. ಆದ್ರೆ ಆ್ಯಸಿಡ್ ಎರಚಿದ್ದು ಯಾರು ಮತ್ತು ಏಕೆ ಎಂಬುವುದು ತಿಳಿದು ಬಂದಿಲ್ಲ. ಇದನ್ನೂ ಓದಿ:ಎಸ್ಪಿಗೆ ಪತ್ರ ಬರೆದ ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ಸಂದೀಪ್
ಈ ಕುರಿತು ಪ್ರತಿಕ್ರಿಯಿಸಿರುವ ಗೋಂಡಾದ ಎಸ್ಪಿ ಶೈಲೇಶ್ ಕುಮಾರ್ ಪಾಂಡೆ, ಮೂವರು ಸೋದರಿಯ ಮೇಲೆ ಕೆಮಿಕಲ್ ದಾಳಿ ನಡೆದಿದೆ. ಅಪ್ರಾಪ್ತೆಯರ ಮೇಲೆ ಮೇಲೆ ಹಾಕಲಾದ ಕೆಮಿಕಲ್ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ವಿಧಿ ವಿಜ್ಞಾನ ತಂಡ ಭೇಟಿ ನೀಡಿದ್ದು ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹತ್ರಾಸ್ ಕೇಸ್ – ಸಂಚಲನ ಸೃಷ್ಟಿಸಿದ್ದ ವೆಬ್ಸೈಟ್ ದಿಢೀರ್ ಬಂದ್
ಕೆಮಿಕಲ್ ದಾಳಿಗೊಳಗಾದ ಮೂವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಓರ್ವ ಬಾಲಕಿಯ ದೇಹದ ಶೇ.5 ರಿಂದ 7 ರಷ್ಟು ಸುಟ್ಟಿದೆ. ಈ ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಾಲಕಿಯರಿಗೆ ಪರಿಚಯಸ್ಥನೇ ದಾಳಿ ನಡೆಸಿರುವ ಸಾಧ್ಯತೆಗಳಿವೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಶೈಲೇಶ್ ಕುಮಾರ್ ಪಾಂಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹತ್ರಾಸ್ ಯುವತಿ ಮೇಲೆ ಅತ್ಯಾಚಾರವಾಗಿಲ್ಲ – ಶಾಕಿಂಗ್ ಹೇಳಿಕೆ ನೀಡಿದ ಐಜಿ
ಸಿಎಂ ಯೋಗಿ ವಿರುದ್ಧ ಆಪ್ ಕಿಡಿ: ಸಿಎಂ ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಜೀವಿಸುವ ಹಕ್ಕು ಇಲ್ಲವೇ? ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ, ಆ್ಯಸಿಡ್ ದಾಳಿ ಅಂತಹ ಪ್ರಕರಣಗಳು ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬರುತ್ತಿವೆ. ಸಿಎಂ ಯೋಗಿ ಸರ್ಕಾರ ಹೆಣ್ಣು ಮಕ್ಕಳ ರಕ್ಷಿಸುವ ಬದಲಾಗಿ ಅತ್ಯಾಚಾರಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಆಪ್ ಮುಖಂಡ ಸಂಜಯ್ ಸಿಂಗ್ ಕಿಡಿಕಾರಿದ್ದಾರೆ. ಇದನ್ನೂ ಓದಿ: 18 ವರ್ಷದ ಯುವತಿಯ ಕತ್ತು ಕೊಯ್ದು ಕೊಲೆ- ಅತ್ಯಾಚಾರದ ಶಂಕೆ
ಕೆಲವೊಮ್ಮೆ ತೀವ್ರವಾಗಿ ಹಂಬಲಿಸಿ ಸಾಕಷ್ಟು ತಯಾರಿ ನಡೆಸಿದರೂ ಸಿನಿಮಾ ಅವಕಾಶವೆಂಬುದು ಅದೆಷ್ಟೋ ನಟ ನಟಿಯರ ಪಾಲಿಗೆ ಸತಾಯಿಸಿ ಬಿಡುತ್ತೆ. ಇದೀಗ ಯಶಸ್ವಿಯಾಗಿರೋ ಅದೆಷ್ಟೋ ಕಲಾವಿದರ ಹಿನ್ನೆಲೆಯಲ್ಲಿ ಅಂಥಾದ್ದೇ ಸೈಕಲ್ಲು ಹೊಡೆದ ಕಥಾನಕಗಳಿದ್ದಾವೆ. ಆದರೆ ಇನ್ನೂ ಕೆಲ ಅದೃಷ್ಟವಂತರ ಪಾಲಿಗೆ ಅದೃಷ್ಟವೆಂಬುದು ಇದ್ದಲ್ಲಿಗೇ ಸಾಗಿ ಬಂದು ಬರಸೆಳೆದುಕೊಳ್ಳುತ್ತದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮಿಸ್ಟರ್ ಆಂಡ್ ಮಿಸಸ್ ರಾಮಾಚಾರಿ ಚಿತ್ರದ ಮೂಲಕ ನಟಿಯರಾಗೋ ಅವಕಾಶ ಗಿಟ್ಟಿಸಿಕೊಂಡು ಈಗ ಬೇಡಿಕೆಯ ನಾಯಕಿಯರಾಗಿರುವ ಅದ್ವಿತಿ ಶೆಟ್ಟಿ ಮತ್ತು ಅದ್ವಿತಿ ಶೆಟ್ಟಿ ಎಂಬ ಅವಳಿ ಸಹೋದರಿಯರು ಆ ಸಾಲಿಗೆ ಸೇರಿಕೊಳ್ಳುತ್ತಾರೆ. ಇದೀಗ ಎಲ್ಲರ ಕುತೂಹಲಕ್ಕೆ ಕಾರಣರಾಗಿರುವ ಈ ಅವಳಿ ಸೋದರಿಯರ ಬಗೆಗಿನ ಕೆಲ ಅಚ್ಚರಿಯ ಸಂಗತಿಗಳು ಇಲ್ಲಿವೆ.
ಸಿನಿಮಾ ನಟಿಯರಾಗೋದೆಂದರೆ ಅದೇನು ಸಲೀಸಿನ ಸಂಗತಿಯಲ್ಲ. ಅದೇನೇ ಟ್ಯಾಲೆಂಟಿದ್ದರೂ ಕೂಡಾ ಮೊದಲ ಅವಕಾಶ ಗಿಟ್ಟಿಸಿಕೊಳ್ಳಲು ಅದೆಷ್ಟೋ ಗಾವುದ ದೂರ ಸಾಗಿ ಬರಬೇಕಾಗುತ್ತೆ. ಅಲ್ಲೆದುರಾಗೋ ನೋವು, ನಿರಾಸೆಗಳನ್ನು ನುಂಗಿಕೊಂಡು ಮುಂದುವರೆದರಷ್ಟೇ ಬದುಕು ಗುರಿಯ ನೇರಕ್ಕೆ ಬಂದು ನಿಲ್ಲುತ್ತದೆ. ಆದರೆ ಯಾವುದೋ ದಾರಿ ಮತ್ಯಾವುದೋ ನಿರೀಕ್ಷಿಸದ ನಿಲ್ದಾಣಕ್ಕೆ ತಂದು ಬಿಡುವಂಥ ಮಿರ್ಯಾಕಲ್ಗಳೂ ವಿರಳವೆಂಬಂತೆ ಘಟಿಸುತ್ತಿರುತ್ತವೆ. ಬಹುಶಃ ಅಂಥಾದ್ದೊಂದು ಪವಾಡದಂಥಾ ಅವಕಾಶ ಅರಸಿ ಬರದೇ ಇದ್ದಿದ್ದರೆ ಈವತ್ತಿಗೆ ಮಂಗಳೂರು ಮೂಲದ ಅದ್ವಿತಿ ಶೆಟ್ಟಿ ಮತ್ತು ಅಶ್ವಿತಿ ಶೆಟ್ಟಿಯೆಂಬ ಅವಳಿಗಳು ಎಂಎನ್ಸಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸುತ್ತಾ ಅನಾಮಿಕರಾಗಿಯೇ ಉಳಿದು ಬಿಡುತ್ತಿದ್ದರೇನೋ.
ಮಿಸ್ಟರ್ ಆಂಡ್ ಮಿಸಸ್ ರಾಮಾಚಾರಿ ಚಿತ್ರವನ್ನು ನೋಡಿದ ಯಾರೇ ಆದರೂ ಅದ್ವಿತಿ ಮತ್ತು ಅಶ್ವಿತಿಯನ್ನು ಮರೆಯಲು ಸಾಧ್ಯವೇ ಇಲ್ಲ. ಅದರಲ್ಲಿ ರಾಧಿಕಾ ಪಂಡಿತ್ ಸ್ನೇಹಿತೆಯರಾಗಿ ನಟಿಸಿದ್ದ ಇವರದ್ದು ಡಬಲ್ ರೋಲ್ ಅಂತ ಬಹುತೇಕರು ಅಂದುಕೊಂಡಿದ್ದರೆ ಅದರಲ್ಲಿ ಅಚ್ಚರಿಯಾಗುವಂಥಾದ್ದೇನೂ ಇಲ್ಲ. ಅಂಥಾ ಅಪರೂಪದ ಚಹರೆಯೊಂದಿಗೆ ಈ ಸೋದರಿಯರು ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ. ಯಾರೇ ಕಲಾವಿದರಾದರೂ ಸಾಮಾಜಿಕ ಜವಾಬ್ದಾರಿಗಳಿರುತ್ತವೆ. ತಮ್ಮ ಕಷ್ಟಕೋಟಲೆಗಳಾಚೆಗೂ ಸಿನಿಮಾ ನೋಡಿ ಆರಾಧಿಸುವ ಜನರ ಸಂಕಷ್ಟಗಳಿಗೆ ಮಿಡಿಯುವವರೇ ನಿಜವಾದ ನಾಯಕ ನಾಯಕಿಯರಾಗಿಯೂ ಬಿಂಬಿತರಾಗುತ್ತಾರೆ. ಈ ನಿಟ್ಟಿನಲ್ಲಿ ನೋಡ ಹೋದರೆ ಕೊರೋನಾ ಬಾಧೆಯಿಂದ ಗೃಹ ಬಂಧನಕ್ಕೀಡಾಗಿ ದಿಕ್ಕೆಟ್ಟವರಿಗೆ ಸಹಾಯ ಮಾಡುವ ಮೂಲಕವೂ ಅದ್ವಿತಿ ಮತ್ತು ಅಶ್ವಿತಿ ಮೆಚ್ಚುಗೆ ಗಳಿಸಿಕೊಂಡಿದ್ದಾರೆ.
ಅದ್ವಿತಿ ಮತ್ತು ಅಶ್ವಿತಿ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಚೆಂದಗೆ ಅರಿತುಕೊಂಡಿದ್ದಾರೆ. ಆದ್ದರಿಂದಲೇ ತಮ್ಮ ಸಿನಿಮಾ ತಯಾರಿಯೂ ಸೇರಿದಂತೆ ಎಲ್ಲವನ್ನೂ ಬದಿಗೊತ್ತಿ ಇತ್ತೀಚೆಗೆ ಸ್ಲಂ ಏರಿಯಾಗಳ ಬಡವರಿಗೆ ಅಗತ್ಯ ವಸ್ತುಗಳನ್ನು ವಿತರಿಸಿದ್ದಾರೆ. ಈಗ ಎಲ್ಲೆಡೆ ಒಂದಷ್ಟು ಮಾನವೀಯ ಮನಸುಗಳು ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸುತ್ತಿವೆ. ಆದರೆ ಅದರಾಚೆಗೂ ಅಗತ್ಯವಿರುವವರಿಗೆ ನೆರವಾಗಬೇಕೆಂಬ ಉದ್ದೇಶದಿಂದ ಇವರಿಬ್ಬರೂ ಒಳ ಪ್ರದೇಶಗಳ ಸ್ಲಂ ಏರಿಯಾಗಳನ್ನು ಹುಡುಕಿ ಸಹಾಯಹಸ್ತ ಚಾಚಿದ್ದಾರೆ. ಪ್ರತಾಪ್, ಶಿವಾಜಿ ಮತ್ತು ಚೇತನ್ ಎಂಬವರ ಸಹಾಯದೊಂದಿಗೆ ಈ ಸಾರ್ಥಕ ಕೆಲಸವನ್ನು ಅವಳಿ ಸಹೋದರಿಯರು ಮಾಡಿದ್ದಾರೆ.
ಹೀಗೆ ಸಹಾಯ ಹಸ್ತ ನೀಡುವ ಪ್ರಸ್ತಾಪವನ್ನು ಸಾಮಾಜಿಕ ಜಾಲತಾಣದ ಮೂಲಕ ಅದ್ವಿತಿ ಮತ್ತಯು ಅಶ್ವಿತಿ ಅಭಿಮಾನಿಗಳ ಮುಂದಿಟ್ಟಿದ್ದರಂತೆ. ಅದಕ್ಕೆ ನೆರವಿನ ಮಹಾಪೂರವೇ ಹರಿದು ಬಂದಿದೆ. ಅದನ್ನು ಅವಶ್ಯಕತೆ ಇರುವವರಿಗೆ ಮುಟ್ಟಿಸಲಾಗಿದೆ. ಹಾಗಂತ ಅವರು ಅಷ್ಟಕ್ಕೇ ಸುಮ್ಮನಾಗಿಲ್ಲ. ಮುಂದೆ ಇನ್ನೊಂದಷ್ಟು ನೆರವು ನೀಡಲೂ ಕಾರ್ಯ ಯೋಜನೆ ಸಿದ್ಧಪಡಿಸಿಕೊಂಡಿದ್ದಾರೆ. ಅದರನ್ವಯ ಸ್ಲಂ ಪ್ರದೇಶದ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಿಗೆ ಪೌಂಶ್ಟಿಕಾಂಶಯುಕ್ತ ಆಹಾರದ ಕಿಟ್ಗಳನ್ನು ವಿತರಿಸುವ ಕಾರ್ಯಕ್ಕೂ ನೀಲನಕ್ಷೆ ಸಿದ್ಧಗೊಂಡಿದೆ. ಈ ಮೂಲಕ ಸದ್ದಿಲ್ಲದೆ ಕೊರೋನಾ ಕಾಲದಲ್ಲಿ ದಿಕ್ಕೆಟ್ಟವರಿಗೆ ನೆರವಾಗಿವ ಮಹತ್ಕಾರ್ಯವನ್ನೂ ಚಾಲನೆಯಲ್ಲಿಟ್ಟಿದ್ದಾರೆ.
ಹೀಗೆ ಸಿನಿಮಾ, ಸಾಮಾಜಿಕ ಕಾರ್ಯಗಳ ಮೂಲಕ ಹೆಸರಾಗಿರುವ ಈ ಅವಳಿ ಸೋದರಿಯರು ಸಾಗಿ ಬಂದ ಹಾದಿಯೇ ಭಿನ್ನವಾಗಿದೆ. ಸಾಮಾನ್ಯವಾಗಿ ಯಾರೇ ನಟನ ನಟಿಯರ ಹಿನ್ನೆಲೆ ಕೆದಕಿದರೆ ಅದಕ್ಕಾಗಿ ಅದೆಷ್ಟೋ ವರ್ಷಗಳಿಂದ ಕಂಡ ಕನಸಿನ ಕಥೆಯಿರುತ್ತದೆ. ಆದರೆ ಅದ್ವಿತಿ ಮತ್ತು ಅಶ್ವಿತಿಗೆ ಅಂಥಾ ಯಾವ ಇರಾದೆಯೂ ಇರಲಿಲ್ಲ. ಮಂಗಳೂರು ಸೀಮೆಯವರಾಗಿ ಅಲ್ಲಿಯೇ ವ್ಯಾಸಂಗ ಪೂರೈಸಿದ್ದ ಇವರಿಬ್ಬರಿಗೂ ಪ್ರತಿಷ್ಠಿತ ಕಂಪೆನಿಯ ಹೆಚ್ಆರ್ ಕೆಲಸ ಸಿಕ್ಕಿತ್ತು. ಆ ಪ್ರಪಂಚದಲ್ಲಿ ಮುಳುಗಿದ್ದವರಿಗೆ ನಟಿಯರಾಗಬೇಕೆಂಬ ಯಾವ ಮೋಹವೂ ಇರಲಿಲ್ಲ. ಆ ಕ್ಷೇತ್ರದಲ್ಲಿಯೇ ಮಹತ್ತರವಾದುದನ್ನು ಸಾಧಿಸಬೇಕೆಂಬ ಮಹತ್ವಾಕಾಂಕ್ಷೆ ಹೊಂದಿದ್ದವರಿಗೆ ಅನಿರೀಕ್ಷಿತವಾಗಿ ಒದಗಿಬಂದಿದ್ದು ಮಿಸ್ಟರ್ ಆಂಡ್ ಮಿಸಸ್ ರಾಮಾಚಾರಿ ಚಿತ್ರದಲ್ಲಿ ನಟಿಸೋ ಆಫರ್!
ಹಾಗೆ ರಾಕಿಂಗ್ ಸ್ಟಾರ್ ಯಶ್ ಚಿತ್ರದಲ್ಲಿ ಇವರಿಬ್ಬರೂ ಟ್ವಿನ್ಸ್ ಎಂಬ ಕಾರಣದಿಂದಲೇ ನಟಿಸೋ ಅವಕಾಶ ಒದಗಿ ಬಂದಿತ್ತು. ಆದರೆ ಆರಂಭದಲ್ಲಿ ಅದನ್ನು ನಿರಾಕರಿಸಿದದ್ದರಂತೆ. ಆ ಪಾತ್ರಕ್ಕೆ ಇವರಿಬ್ಬರೂ ಹೇಳಿ ಮಾಡಿಸಿದಂತಿದ್ದದ್ದರಿಂದ ಕಡೆಗೂ ನಿರ್ದೇಶಕರು ಒಪ್ಪಿಸಿದ್ದರಂತೆ. ನಂತರದ್ದೆಲ್ಲವೂ ಹೊಸಾ ಅನುಭವ. ರಾಧಿಕಾ ಸೇರಿದಂತೆ ಎಲ್ಲರೂ ಹೆಜ್ಜೆ ಹೆಜ್ಜೆಗೂ ಜೊತೆಗಿದ್ದು ಪೊರೆದಿದ್ದರಿಂದಾಗಿ ಅದ್ವಿತಿ ಮತ್ತು ಅಶ್ವಿತಿಗೆ ಸಿನಿಮಾ ನಟನೆಯ ಬಗ್ಗೆ ಮೆಲ್ಲಗೆ ಮೋಹ ಮೂಡಿಕೊಂಡಿತ್ತು. ಆ ಚಿತ್ರವೇ ಅವರಿಬ್ಬರಿಗೂ ವ್ಯಾಪಕ ಜನಪ್ರಿಯತೆಯನ್ನೂ ತಂದುಕೊಟ್ಟಿತ್ತು. ಆ ನಂತರದಲ್ಲಂತೂ ಪ್ರತೀ ನಟಿಯರೂ ಬಯಸುವಂಥಾ ಅಪರೂಪದ ಅವಕಾಶವೇ ಈ ಅವಳಿ ಅಕ್ಕ ತಂಗಿಯರ ಕೈ ಹಿಡಿದಿತ್ತು.
ಪಿ.ಎಚ್ ವಿಶ್ವನಾಥ್ ನಿರ್ದೇಶನದ ಸುಳಿ ಎಂಬ ಕಲಾತ್ಮಕ ಚಿತ್ರದಲ್ಲಿ ಅದ್ವಿತಿ ಮತ್ತು ಅಶ್ವಿತಿ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದರು. ಅದು ಅವರ ಪಾಲಿಗೆ ಎರಡನೇ ಚಿತ್ರ. ಹಿರಿಯ ನಟ ಶ್ರೀನಾಥ್ ಮಕ್ಕಳಾಗಿ ನಟಿಸಿದ್ದ ಅವರಿಗೆ ಇದೊಂದು ಸವಾಲು. ಯಾಕೆಂದರೆ ಅದು ಹೆಜ್ಜೆ ಹೆಜ್ಜೆಗೂ ಭಿನ್ನ ಅಭಿವ್ಯಕ್ತಿಯನ್ನು ಬಯಸುವಂಥಾ ಪಾತ್ರ. ಇದಕ್ಕಾಗಿ ನಿರ್ದೇಶಕರು ನೀನಾಸಂ ತಂಡದಿಂದ ಒಂದು ತಿಂಗಳ ಕಾಲ ನಟನಾ ತರಬೇತಿ ಕೊಡಿಸಿದ್ದರಂತೆ. ಅದಾದ ನಂತರ ಮಂಗಳೂರು ಶೈಲಿಯ ಕನ್ನಡದಾಚೆಗಿನ ಮತ್ತೊಂದು ಧಾಟಿಯ ಕನ್ನಡವನ್ನು ಅಭ್ಯಸಿಸಿ ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್ ಅನ್ನೂ ಮಾಡಿದ್ದರಂತೆ. ಇದು ಇವರಿಬ್ಬರನ್ನೂ ಕೂಡಾ ಪಳಗಿದ ನಟಿಯರನ್ನಾಗಿ ರೂಪಾಂತರಿಸಿತ್ತು. ಆ ಸಿನಿಮಾಗಾಗಿ ಹಲವಾರು ಪ್ರಶಸ್ತಿಗೂ ಅರಸಿ ಬಂದಿದ್ದವು.
ಅದಾದ ನಂತರ ಅದ್ವಿತಿ ದೊಡ್ಮನೆ ಹುಡುಗ ಸೇರಿದಂತೆ ಕೆಲ ಚಿತ್ರಗಳಲ್ಲಿ ಪಾತ್ರ ನಿರ್ವಹಿಸಿದ್ದರು. ಸೀರಿಯಲ್ನಲ್ಲಿಯೂ ಕಾಣಿಸಿಕೊಂಡಿದ್ದರು. ತದ ನಂತರ ಫ್ಯಾನ್ ಮತ್ತು ಕಾರ್ಮೋಡ ಸರಿದು ಎಂಬ ಚಿgತ್ರಗಳಲ್ಲಿಯೂ ಬಣ್ಣ ಹಚ್ಚಿದ್ದರು. ಸದ್ಯ 188 ಮತ್ತು ಧೀರ ಸಾಮ್ರಾಟ್ ಎಂಬ ಚಿತ್ರಗಳಲ್ಲಿ ಅದ್ವಿತಿ ನಟಿಸುತ್ತಿದ್ದಾರೆ. ಸೈಕೋ ಖ್ಯಾತಿಯ ನಿರ್ದೇಶಕರ ಎಸ್ ಎಂಬ ಚಿತ್ರದಲ್ಲಿಯೂ ಅವರದ್ದು ಮಹತ್ವದ ಪಾತ್ರ. ಇದೆಲ್ಲವೂ ಲಾಕ್ಡೌನ್ ಮುಗಿದಾದ ನಂತರವಷ್ಟೇ ಟೇಕಾಫ್ ಆಗಲಿದೆ. ಇನ್ನುಳಿದಂತೆ ಮಹಾನ್ ಹುತಾತ್ಮ ಎಂಬ ಶಾರ್ಟ್ ಮೂವಿ ಅದ್ವಿತಿ ಪಾಲಿಗೆ ರಾಷ್ಟ್ರಪ್ರಶಸ್ತಿಯ ಸವಿಯೂಡಿದೆ. ಮತ್ತೊಂದಷ್ಟು ಕಿರುಚಿತ್ರಗಳೂ ಅವರನ್ನು ನಟಿಯಾಗಿ ಪೊರೆದಿವೆ.
ಇನ್ನುಳಿದಂತೆ ಅಶ್ವಿತಿ ಶೆಟ್ಟಿಯೂ ತಮ್ಮದೇ ರೀತಿಯಲ್ಲಿ ಸಕ್ರಿಯರಾಗಿದ್ದಾರೆ. ಸುಳಿಯ ನಂತರದಲ್ಲಿ ಏನ್ ಬರ್ತೀಯಾ ಎಂಬ ಶಾರ್ಟ್ ಮೂವಿಯಲ್ಲಿಯೂ ನಟಿಸಿ ಸೈ ಅನ್ನಿಸಿಕೊಂಡಿದ್ದಾರೆ. ಇದಕ್ಕಾಗಿ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ. ಚಂದನ್ ಶೆಟ್ಟಿಯ ಶೋಕಿಲಾಲ ಎಂಬ ಆಲ್ಬಂ ಸಾಂಗ್ ಕೂಡಾ ಅವರಿಗೆ ಮೈಲೇಜು ತಂದುಕೊಟ್ಟಿದೆ. ಜೈನ್ ಯುನಿವರ್ಸಿಟಿಯ ವಿಮೆನ್ ಅಚೀವರ್ಸ್ ಅವಾರ್ಡನ್ನೂ ಅಶ್ವಿತಿ ತಮ್ಮದಾಗಿಸಿಕೊಂಡಿದ್ದಾರೆ. ಅನಂತು ವರ್ಸಸ್ ನುಸ್ರತ್ ಚಿತ್ರದಲ್ಲಿನ ಪಾತ್ರಕ್ಕಾಗಿಯೂ ಅವರನ್ನು ಪ್ರಶಸ್ತಿ ಅರಸಿ ಬಂದಿದೆ. ಈ ಕ್ಷಣದವರೆಗೂ ಹೀಗೆ ಸಾಗಿ ಬಂದಿರುವ ಈ ಅವಳಿ ಸಹೋದರಿಯರ ಪ್ರಧಾನ ಆಸಕ್ತಿ ಡ್ಯಾನ್ಸ್. ಈಗಾಗಲೇ ಹಲವಾರು ಶೋಗಳನ್ನು ನೀಡಿರೋ ಅವರಿಗೆ ಆ ಕ್ಷೇತ್ರದಲ್ಲಿಯೂ ಸಾಧಿಸೋ ಹಂಬಲವಿದೆಯಾದರೂ ನಟನೆಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ.
ಹೀಗೆ ಈವತ್ತಿಗೆ ಕನ್ನಡ ಸಿನಿಮಾ ರಂಗದಲ್ಲಿಮೆಲ್ಲಗೆ ನೆಲೆ ಕಂಡುಕೊಳ್ಳುತ್ತಿರೋ ಅದ್ವಿತಿ-ಅಶ್ವಿತಿ ಶೆಟ್ಟಿ ತಕ್ಷಣಕ್ಕೆ ಗುರುತಿಸಲು ತುಣಿಕಾಡುವಷ್ಟು ಹೋಲಿಕೆಗಳಿರೋ ಅಪರೂಪದ ಅವಳಿಗಳು. ಈ ಇಬ್ಬರ ನಡುವೆ ಯಾರು ದೊಡ್ಡವರೆಂಬ ಕುತೂಹಲವಿದ್ದರೆ, ಅದಕ್ಕೆ ಕೇವಲ ಐದಾರು ಸೆಕೆಂಡುಗಳ ಸೀನಿಯಾರಿಟಿಯಷ್ಟೇ ಗೋಚರಿಸುತ್ತದೆ. ಅದರನ್ವಯ ಹೇಳೋಡಾದರೆ ಅದ್ವಿತಿ ಆಶ್ವಿತಿಗಿಂತ ಐದು ಸೆಕೆಂಡ್ ದೊಡ್ಡವರು ಅನ್ನಲಡ್ಡಿಯಿಲ್ಲ!
ಮಂಗಳೂರಿನಲ್ಲಿಯೇ ಹುಟ್ಟಿ ಬೆಳೆದ ಅದ್ವಿತಿ ಮತ್ತು ಆಶ್ವಿತಿ ಸದಾ ಸುತ್ತಲಿನವರಿಗೆ ನಡೆದಾಡುವ ಅಚ್ಚರಿಯಂತಿದ್ದವರು. ಹೇಳಿಕೊಳ್ಳುವಂಥಾ ಸಾಂಸ್ಕೃತಿಕ ಚಟುವಟಿಕೆಗಳ ಗುಂಗಿಲ್ಲದ ಇವರಿಬ್ಬರೂ ಅಚಾನಕ್ಕಾಗಿ ಶಾಲಾ ದಿನಗಳಲ್ಲಿ ಕೋಟಿ ಚೆನ್ನಯರಾಗಿ ಅಭಿನಯಿಸುವ ಸಂದರ್ಭ ಎದುರಾಗಿತ್ತು. ತುಳುನಾಡಿನ ಪರಂಪರೆಯ ಅಸ್ಮಿತೆಯಂತಿರೋ ಕೋಟಿ ಚೆನ್ನಯರಾಗಿ ಅಭಿನಯಿಸಿದ್ದೇ ತಮ್ಮ ಬದುಕಿನ ಕಲಾ ಯಾನಕ್ಕೆ ಶ್ರೀಕಾರ ಹಾಡಿದೆ ಎಂಬ ಸುಳಿವು ಈ ಸಹೋದರಿಯರಿಗೆ ಅಚಾನಕ್ಕಾದ ಅವಕಾಶ ಕೂಡಿ ಬರುವವರೆಗೂ ತಿಳಿದಿರಲಿಲ್ಲ. ತಾವು ಎತ್ತ ಹೊರಳಿಕೊಂಡರೂ ತಮ್ಮನ್ನು ತೆಕ್ಕೆಗೆಳೆದುಕೊಂಡಿರೋ ಕಲೆಗೆ ಈ ಸಹೋದರಿಯರೀಗ ಶರಣಾಗಿದ್ದಾರೆ. ನಟನೆಗೆ ಅವಕಾಶವಿರೋ ಪಾತ್ರಗಳಲ್ಲಿ ನಟಿಸುತ್ತಾ ಮತ್ತಷ್ಟು ಪ್ರೇಕ್ಷಕರಿಗೆ ಹತ್ತಿರಾಗಬೇಕೆಂಬ ಸಮಾನ ಆಸಕ್ತಿಯನ್ನೂ ಹೊಂದಿದ್ದಾರೆ.
ಜೈಪುರ: ಮದುವೆಯಾದ ನಾಲ್ಕು ದಿನದಲ್ಲಿ ಪತಿಯಂದರಿಗೆ ಹಾಲಿನಲ್ಲಿ ನಶೆ ಪದಾರ್ಥ ಬೆರೆಸಿ ಸೋದರಿಯರಿಬ್ಬರು ಮನೆಯಲ್ಲಿ ನಗದು-ಆಭರಣದೊಂದಿಗೆ ಪರಾರಿಯಾಗಿದ್ದಾರೆ. ಮನೆಯಲ್ಲಿಯ ಆಭರಣಗಳ ಜೊತೆಗೆ 11 ಲಕ್ಷದೊಂದಿಗೆ ಸೋದರಿಯರು ಮಿಂಚಿನಂತೆ ಎಸ್ಕೇಪ್ ಆಗಿದ್ದಾರೆ. ಈ ಘಟನೆ ಜೈಪುರದ ಹರಮಾಡ ಪೊಲೀಸ್ ಠಾಣಾ ವ್ಯಾಪ್ತಿಯ ಪೊಖರಿಯಾವಸ ಎಂಬಲ್ಲಿ ನಡೆದಿದೆ.
ಈ ಸಂಬಂಧ ಮೋಸಕ್ಕೊಳಗಾದ ಸಹೋದರರಲ್ಲಿ ಹಿರಿಯಣ್ಣ, ಮದುವೆ ಮಾಡಿಸಿದ ದಲ್ಲಾಳಿ ಮತ್ತು ಯುವತಿಯರಿಬ್ಬರ ವಿರುದ್ಧ ಹರಮಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳ ಮೊಬೈಲ್ ಸ್ವಿಚ್ಛ್ ಆಫ್ ಆಗಿದ್ದು, ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ರಾಮನಾರಾಯಣ್ ಮತ್ತು ರಾಜೇಶ್ ಎಂಬ ಸೋದರರಿಗೆ ಚೌಥಮಲ್ (ಹಿರಿಯ ಸೋದರ) ಎಂಬವರು ದಲ್ಲಾಳಿ ಗಜಾನಂದ್ ಎಂಬಾತನನ್ನು ಸಂಪರ್ಕಿಸಿದ್ದರು. ದಲ್ಲಾಳಿ ಸುರೇಶ್ ಎಂಬವರ ಮನೆಯಲ್ಲಿ ಕನ್ಯೆಯರನ್ನು ತೋರಿಸಿದ್ದನು. ಈ ವೇಳೆ ಸುರೇಶ್ ಮತ್ತು ಗಜಾನಂದ್ ವಧು ದಕ್ಷಿಣೆ ಮತ್ತು ಕಮೀಷನ್ 11 ಲಕ್ಷ ರೂ. ನೀಡಬೇಕೆಂದು ಡಿಮ್ಯಾಂಡ್ ಮಾಡಿದ್ದರು.
ವಧುದಕ್ಷಿಣೆಯೊಂದಿಗೆ ಕಮೀಷನ್ ನೀಡಿದ ಚೌಥಮಲ್, ಫೆಬ್ರವರಿ 19ರಂದು ಸಾಮೇದ್ ಬಳಿಯ ಮೈರಿಜ್ ಗಾರ್ಡನ್ ನಲ್ಲಿ ಅದ್ಧೂರಿಯಾಗಿ ಮದುವೆ ನಡೆದಿತ್ತು. ಮದುವೆಗಾಗಿಯೇ ವರನ ಕುಟುಂಬಸ್ಥರು 9 ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದ್ದರು. ಫೆಬ್ರವರಿ 23ರಂದು ಸೋದರಿಯರಿಬ್ಬರು ತಮ್ಮ ಪತಿಯಂದಿರಿಗೆ ಮದ್ದು ಬರುವ ಔಷಧಿ ನೀಡಿ ಮನೆಯಲ್ಲಿಯ ನಗದು, ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾರೆ. .
ಭೋಪಾಲ್: ಅಪ್ರಾಪ್ತ ಇಬ್ಬರು ಸಹೋದರಿಯರನ್ನು ಅಪಹರಿಸಿ, ಅತ್ಯಾಚಾರ ಎಸೆಗಿದ ಬಳಿಕ ಗ್ರಾಮಕ್ಕೆ ಬಿಟ್ಟು ಹೋದ ಘಟನೆ ಮಧ್ಯಪ್ರದೇಶ ರಾಜ್ಯದ ಅಷ್ಟತೆಹಸಿಲ್ ಎಂಬಲ್ಲಿ ನಡೆದಿದೆ.
9 ಮತ್ತು 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಹೋದರಿಯರು ಅತ್ಯಾಚಾರಕ್ಕೊಳಗಾದ ಬಾಲಕಿಯರು. ಬಾಲಕಿ ಇಬ್ಬರನ್ನು ಅಪಹರಿಸಿದ ಇಂದೋರ್-ಭೋಪಾಲ್ ರಸ್ತೆಯ ಹೋಟೆಲ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸೆಗಿದ್ದಾರೆ. ಈಗಾಗಲೇ ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ಯಾಚಾರಗೈದ ಇಬ್ಬರು ಯುವಕರು ಬಾಲಕಿಯರ ಗ್ರಾಮದ ನಿವಾಸಿಗಳಾಗಿದ್ದು, ಇನ್ನಿಬ್ಬರ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ. ಲೋಕೇಂದ್ರ (19) ಮತ್ತು ಕ್ರಿಪಲ್ (21) ಬಂಧಿತ ಆರೋಪಿಗಳಾಗಿದ್ದು, ಸಂಜಯ್ ಹಾಗು ರಾಜ್ ಎಂಬಾತರು ಘಟನೆ ಬಳಿಕ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಬಾಲಕಿಯರಿಬ್ಬರನ್ನು ಅಪಹರಿಸಿದ ಯುವಕರು ಹೋಟೆಲ್ ಗೆ ಕರೆದುಕೊಂಡು ಹೋಗಿ ಇಬ್ಬರನ್ನ ಬೇರೆ ಬೇರೆ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ. ಹೋಟೆಲ್ನಲ್ಲಿ ಕಿರುಚಿದ್ರೆ ನಿಮ್ಮನ್ನು ಕೊಲ್ಲುತ್ತೇವೆ ಎಂದು ಕಾಮುಕರು ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸೆಗಿದ್ದಾರೆ. ಸಂಜೆ ಹೋಟೆಲಿಗೆ ಬಂದ ಮತ್ತಿಬ್ಬರು ಸಹ ಬಾಲಕಿಯರನ್ನು ಅತ್ಯಾಚಾರಗೈದಿದ್ದಾರೆ.
ಆರೋಪಿಗಳು ಶನಿವಾರ ಇಬ್ಬರು ಸಹೋದರಿಯರನ್ನು ಅವರ ಗ್ರಾಮಕ್ಕೆ ಬಿಟ್ಟು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಮನೆ ತಲುಪಿದ ಸಹೋದರಿಯರ ತಮ್ಮ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಪೋಷಕರಿಗೆ ತಿಳಿಸಿದ್ದಾರೆ. ಕೂಡಲೇ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಇಬ್ಬರ ಪತ್ತೆಗಾಗಿ ಬಲೆ ಬೀಸಿದ್ದಾರೆ. ಪೊಲೀಸರು ಹೋಟೆಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.