Tag: ಸೋನಾಲ್

  • ಆದಷ್ಟು ಬೇಗ ದರ್ಶನ್ ಬಿಡುಗಡೆಯಾಗಲಿ: ಹಾಸನಾಂಬೆ ಸನ್ನಿಧಿಯಲ್ಲಿ ತರುಣ್ ಸುಧೀರ್ ಮಾತು

    ಆದಷ್ಟು ಬೇಗ ದರ್ಶನ್ ಬಿಡುಗಡೆಯಾಗಲಿ: ಹಾಸನಾಂಬೆ ಸನ್ನಿಧಿಯಲ್ಲಿ ತರುಣ್ ಸುಧೀರ್ ಮಾತು

    ಸ್ಯಾಂಡಲ್‌ವುಡ್ ನಟ ಕಮ್ ನಿರ್ದೇಶಕ ತರುಣ್ ಸುಧೀರ್ (Tharun Sudhir) ಅವರು ಇಂದು (ಅ.27) ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಪತ್ನಿ ಜೊತೆ ಹಾಸನಾಂಬೆ ದೇವಿ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿ ದರ್ಶನದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ತರುಣ್, ಆದಷ್ಟು ಬೇಗ ದರ್ಶನ್ (Darshan) ಬಿಡುಗಡೆಯಾಗಲಿ ಎಂದು ದೇವಿ ಬಳಿ ಕೇಳಿಕೊಂಡಿದ್ದೇವೆ ಎಂದು ಮಾತನಾಡಿದರು. ಇದನ್ನೂ ಓದಿ:ಶ್ರೀಲೀಲಾ ನಟಿಸಬೇಕಿದ್ದ ಪಾತ್ರಕ್ಕೆ ಪೂಜಾ ಹೆಗ್ಡೆ ಎಂಟ್ರಿ?

    ಮದುವೆ ಬಳಿಕ ಮೊದಲ ಬಾರಿಗೆ ಪತ್ನಿ ಸೋನಾಲ್ (Sonal) ಜೊತೆ ತರುಣ್ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದು ಸಂತಸಪಟ್ಟಿದ್ದಾರೆ. ಆ ನಂತರ ಮಾಧ್ಯಮಕ್ಕೆ ಮಾತನಾಡಿದ ತರುಣ್ ಸುಧೀರ್, ಆದಷ್ಟು ಬೇಗ ದರ್ಶನ್ ಅವರು ಬಿಡುಗಡೆ ಆಗಲಿ ಎಂದು ಹಾಸನಾಂಬೆ ದೇವಿ ಬಳಿ ಕೇಳಿಕೊಂಡಿದ್ದೇನೆ. ಅವರು ಇದ್ದಿದ್ದರೆ ಈ ಬಾರಿ ಹಾಸನಾಂಬೆ ದೇವಿ ದರ್ಶನಕ್ಕೆ ಬರುತ್ತಿದ್ದರು. ಆದಷ್ಟು ಬೇಗ ಎಲ್ಲಾ ಒಳ್ಳೆಯದಾಗಲಿ ಎಂದು ದೇವಿಯಲ್ಲಿ ಕೇಳಿಕೊಂಡಿದ್ದೇನೆ.

    ನಾವು ಮದುವೆಯಾದ ನಂತರ ದೇವಿ ದರ್ಶನಕ್ಕೆ ಬಂದಿದ್ದೇವೆ ಅದು ನನಗೆ ವಿಶೇಷ. ಈ ತಾಯಿ ಹತ್ತಿರ ದರ್ಶನಕ್ಕೆ ಬಂದಾಗ ಮನಸ್ಸಿನಲ್ಲಿ ಇರೋದೆನ್ನೆಲ್ಲಾ ಒಮ್ಮೆಲೆ ಹೇಳಿಕೊಳ್ಳಬೇಕು ಅನ್ನಿಸುತ್ತದೆ. ಇಲ್ಲಿ ಒಂದು ವೈಬ್ರೇಷನ್ ಇದೆ. ಪ್ರತಿ ವರ್ಷ ನಾನು ಹಾಸನಾಂಬೆ ದೇವಿ ದರ್ಶನಕ್ಕೆ ಬರುತ್ತೇನೆ. ಕಳೆದ ವರ್ಷ ಶೂಟಿಂಗ್ ಇದ್ದಿದ್ದರಿಂದ ಬರಲು ಆಗಿರಲಿಲ್ಲ ಎಂದು ತರುಣ್ ಹೇಳಿದರು.

    ಅಂದಹಾಗೆ, ಆಗಸ್ಟ್ 11ರಂದು ಸೋನಾಲ್ ಜೊತೆ ತರುಣ್ ಸುಧೀರ್ ಬೆಂಗಳೂರಿನಲ್ಲಿ ಮದುವೆಯಾದರು. ಆ ನಂತರ ಮಂಗಳೂರಿನಲ್ಲಿ ಕ್ರೈಸ್ತ ಧರ್ಮದ ಪದ್ಧತಿಯಂತೆ ಸೋನಾಲ್‌ ಜೊತೆ ಮದುವೆ ನಡೆಯಿತು.

  • Tharun Sonal Wedding:  ದರ್ಶನ್ ಅನುಪಸ್ಥಿತಿ ಬೇಸರವಾಗ್ತಿದೆ- ತರುಣ್ ಸುಧೀರ್

    Tharun Sonal Wedding: ದರ್ಶನ್ ಅನುಪಸ್ಥಿತಿ ಬೇಸರವಾಗ್ತಿದೆ- ತರುಣ್ ಸುಧೀರ್

    ನಿರ್ದೇಶಕ ತರುಣ್ ಸುಧೀರ್ (Tarun Sudhir) ಮತ್ತು ಸೋನಲ್‍ (Sonal) ಮದುವೆ (Marriage) ಆಗೋಕೆ ಕಾರಣವೇ ನಟ ದರ್ಶನ್. ಅಂದುಕೊಂಡಂತೆ ಆಗಿದ್ದರೆ ದರ್ಶನ್ ಮುಂದೆ ನಿಂತು ಈ ಜೋಡಿಯ ಮದುವೆ ಮಾಡಬೇಕಿತ್ತು. ಇವರ ಮದುವೆ ನಿಶ್ಚಿಯ ಮಾಡಿ ಕೊಲೆ ಕೇಸ್‍ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿಕೊಂಡರು ದರ್ಶನ್. ಈ ಮದುವೆಗೆ ದರ್ಶನ್ (Darshan) ಬರ್ತಾರೆ ಅನ್ನೋ ಮಾತು ಸುಳ್ಳಾಯಿತು ಹಾಗಾಗಿ ಅವರ ಅನುಪಸ್ಥಿತಿ ಬೇಸರ ತರಿಸಿದೆ ಎಂದಿದ್ದಾರೆ ತರುಣ್ ಸುಧೀರ್.

    ಮದುವೆಯ ಈ ಸಂಭ್ರಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ತರುಣ್, `ಹೊಸ ಜೀವನ ಹೊಸ ಹುರುಪಿದೆ. ಇಷ್ಟು ದಿನ ಕಾದಿದ್ದಕ್ಕೂ ಬೇಸ್ಟ್ ಕೊಟ್ಟಿದಾರೆ ದೇವ್ರು. ತುಂಬಾ ಜನ ಬಂದು ವಿಶ್ ಮಾಡಿದ್ರು ಎಲ್ಲರೂ ತಮ್ಮನ ಥರ ಕುಟುಂಬದ ಥರ ಬಂದು ಹಾರೈಸಿದ್ರು ಎಂದಿದ್ದಾರೆ.

    ದರ್ಶನ್ ಅನುಪಸ್ಥಿತಿ ಬಗ್ಗೆಯೂ ಮಾತನಾಡಿದ ತರುಣ್, `ಲಗ್ನ ಪತ್ರಿಕೆ ಬರೆಸುವ ಮುಂಚೆ ಡೇಟ್ ಕನ್ಪರ್ಮ್ ಆಗಿತ್ತು. ಡೇಟ್ ಚೇಂಜ್ ಮಾಡ್ಬೇಡ ಮದ್ವೆ ಮಾಡ್ಕೊ ಅಂದ್ರು ದರ್ಶನ್. ಆಗಸ್ಟ್ 11 ಡೇಟ್ ಕೊಟ್ಟಿದ್ವಿ. ಅವರು ಹೇಳಿದಂತೆ ಮದುವೆ ಆಗ್ತಿದ್ದೇವೆ. ದರ್ಶನ್ ಅವ್ರ ಅನುಪಸ್ಥಿತಿ ಬೇಸರ ಅನ್ನಿಸ್ತಿದೆ’ ಎಂದು ದರ್ಶನ್ ಬಗ್ಗೆ ಮಾತಾಡ್ತಾ ಭಾವುಕರಾದ ತರುಣ್ ಸುಧೀರ್.

    ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮದುವೆ ಇಂದು ಬೆಳಗ್ಗೆ 10.50ಕ್ಕೆ ಬೆಂಗಳೂರಿನ ಪೂರ್ಣಿಮಾ ಪಾಲೇಸ್‍ ನಲ್ಲಿ ನಡೆಯಿತು. ಚಿತ್ರರಂಗದ ಅನೇಕ ಗಣ್ಯರ ಮತ್ತು ಕುಟುಂಬದ ಸಮ್ಮುಖದಲ್ಲಿ ಈ ಜೋಡಿ ಹೊಸ ಜೀವನಕ್ಕೆ ಕಾಲಿಟಿತು. ತಾಳಿ ಕಟ್ಟೋ ವೇಳೆ ನಟಿ ಸೋನಲ್ ಭಾವುಕರಾಗಿದ್ದರು.

     

    ತರುಣ್ -ಸೋನಲ್ ಮದುವೆಗೆ ಅದ್ದೂರಿ ಧಾರೆ ಮಂಟಪ ಸೆಟ್ ಹಾಕಲಾಗಿದೆ. ದಕ್ಷಿಣ ಭಾರತ ಶೈಲಿಯಲ್ಲಿ ಕಲ್ಯಾಣ ಮಂಟಪದ ಅಲಂಕಾರ ಮಾಡಲಾಗಿದೆ.  ಪ್ರವೇಶ ದ್ವಾರದಲ್ಲಿ ಮಹಾದ್ವಾರದ ಮಾದರಿ ಅಲಂಕಾರ ಮಾಡಲಾಗಿತ್ತು.  ವಿಷ್ಣುವಿನ ದಶಾವತಾರಗಳ ಮಧ್ಯೆ ಕಮಲ ಮಂಟಪದ ಸಿದ್ದತೆ ಮಾಡಿದ್ದು ವಿಶೇಷವಾಗಿತ್ತು.

  • ಸೋನಲ್ ಜೊತೆಗಿನ ಮದುವೆ ಸುದ್ದಿ ನಿಜ ಎಂದ ‘ಕಾಟೇರ’ ಡೈರೆಕ್ಟರ್

    ಸೋನಲ್ ಜೊತೆಗಿನ ಮದುವೆ ಸುದ್ದಿ ನಿಜ ಎಂದ ‘ಕಾಟೇರ’ ಡೈರೆಕ್ಟರ್

    ರಾಬರ್ಟ್, ಕಾಟೇರ (Kaatera) ಸಿನಿಮಾ ಮೂಲಕ ಖ್ಯಾತಿ ಗಳಿಸಿರುವ ತರುಣ್ ಸುಧೀರ್ (Tharun Sudhir) ಮದುವೆ ವಿಚಾರ ಕೆಲದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಸೋನಲ್ (Sonal) ಜೊತೆಗಿನ ಮದುವೆ ಬಗ್ಗೆ ಇದೀಗ ತರುಣ್ ಪ್ರತಿಕ್ರಿಯೆ ನೀಡಿದ್ದಾರೆ.

    ನಟಿ ಸೋನಲ್ ‌ಜೊತೆಗಿನ ಮದುವೆ ವಿಚಾರ ನಿಜ ಎಂದು ತರುಣ್ ಸುಧೀರ್ ಒಪ್ಪಿಕೊಂಡಿದ್ದಾರೆ. ಅತೀ ಶೀಘ್ರದಲ್ಲಿ ಸಿಹಿ ಸುದ್ದಿ ಹಂಚಿಕೊಳ್ತೀವಿ ಎಂದಿದ್ದಾರೆ. ಮದುವೆ ಬಗ್ಗೆ ಶೀಘ್ರದಲ್ಲಿ ತಿಳಿಸುತ್ತೇವೆ. ‘ರಾಬರ್ಟ್’ ಸಿನಿಮಾ ಸೆಟ್‌ನಲ್ಲಿ ಪರಿಚಯ ಆಗಿದ್ದು, ದರ್ಶನ್ ಸರ್ ತಮಾಷೆ ಮಾಡುತ್ತಿದ್ದರು ಎಂದು ತರುಣ್ ಮಾತನಾಡಿದ್ದಾರೆ. ಇದನ್ನೂ ಓದಿ:ಮಾಲಿಕನಾದ ಶಿವಣ್ಣ- ‘ಉತ್ತರಕಾಂಡ’ ಚಿತ್ರದ ಫಸ್ಟ್‌ ಲುಕ್‌ ಔಟ್‌

    ಇತ್ತೀಚೆಗೆ ತರುಣ್ ತಾಯಿ ಮಾಲತಿ ಕೂಡ ಮದುವೆ ಬಗ್ಗೆ ಮಾತನಾಡಿ, ಮಗನ ಮದುವೆ ದಿನಾಂಕ ಫಿಕ್ಸ್ ಆಗಿಲ್ಲ. ಆಷಾಢ ಮಾಸ ಅಲ್ವಾ? ಕನ್ಫರ್ಮ್ ಆದ್ಮೇಲೆ ಹೇಳ್ತೀವಿ ಎಂದಿದ್ದಾರೆ. ಮದುವೆ ಛತ್ರಗಳು ಅಷ್ಟು ಬೇಗ ಸಿಕ್ತಿಲ್ಲ. ಮಗನ ಕೈಲಿ ಸದ್ಯ ಜಾಸ್ತಿ ಪ್ರಾಜೆಕ್ಟ್ ಇದೆ. ಅದೆಲ್ಲಾ ನೋಡ್ಕೊಂಡು ಮದುವೆ ಮಾಡಿಕೊಳ್ತಾರೆ ಎಂದು ತಿಳಿಸಿದ್ದರು.

    ನಾನೇ ಸರಿಯಾಗಿ ಇನ್ನೂ ಆ ಹುಡ್ಗಿನಾ ನೋಡಿಲ್ಲ. ಮನೆಯವರೆಲ್ಲಾ ಕೂತು ಮಾತಾಡಬೇಕು. ಛತ್ರ ಬುಕ್ ಆದ್ಮೇಲೆ ನಾವೇ ಮಾತಾಡ್ತೀವಿ ಎಂದು ತರುಣ್ ಮತ್ತು ಸೋನಲ್ ಮದುವೆ ಸುದ್ದಿಯನ್ನು ಅಧಿಕೃತವಾಗಿ ತಿಳಿಸಿದ್ದರು ಮಾಲತಿ ಸುಧೀರ್.

    ಅಂದಹಾಗೆ, ಚೌಕ, ರಾಬರ್ಟ್, ಕಾಟೇರ ಸಿನಿಮಾದ ಸಕ್ಸಸ್ ನಂತರ ತರುಣ್ ಹೊಸ ಸಿನಿಮಾದ ತಯಾರಿಯಲ್ಲಿದ್ದಾರೆ. ಇದರ ನಡುವೆ ತರುಣ್ ಶೋವೊಂದರ ಜಡ್ಜ್ ಆಗಿದ್ದಾರೆ. ಎಂಎಲ್‌ಎ, ಮದುವೆ ದಿಬ್ಬಣ, ರಾಬರ್ಟ್, ಗರಡಿ, ಶುಗರ್ ಫ್ಯಾಕ್ಟರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಸೋನಲ್ ನಟಿಸಿದ್ದಾರೆ.

  • ಕೊನೆಗೂ ಮದುವೆ ಹುಡುಗಿ ಬಗ್ಗೆ ಮೌನ ಮುರಿದ ‘ಕಾಟೇರ’ ನಿರ್ದೇಶಕ

    ಕೊನೆಗೂ ಮದುವೆ ಹುಡುಗಿ ಬಗ್ಗೆ ಮೌನ ಮುರಿದ ‘ಕಾಟೇರ’ ನಿರ್ದೇಶಕ

    ರಾಬರ್ಟ್, ಕಾಟೇರ ಸಿನಿಮಾಗಳ ನಿರ್ದೇಶಕ ತರುಣ್ ಸುಧೀರ್ (Tharun Sudhir) ಇದೀಗ ಸೋನಲ್ (Sonal) ಜೊತೆಗಿನ ಮದುವೆ ವಿಚಾರವಾಗಿ ಸುದ್ದಿಯಾಗ್ತಿದ್ದಾರೆ. ಈಗ ಮೊದಲ ಬಾರಿಗೆ ಮದುವೆಯಾಗಲಿರುವ (Wedding) ಹುಡುಗಿ ಕ್ವಾಲಿಟಿ ಹೇಗಿರಬೇಕು ಎಂದು ಬಣ್ಣಿಸಿದ್ದಾರೆ.

    ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ತರುಣ್ ಸುಧೀರ್ ಭಾಗಿಯಾದಾಗ ಮದುವೆ ಹುಡುಗಿ ಹೇಗಿರಬೇಕು ಎಂದು ಪ್ರಶ್ನೆ ಎದುರಾಗಿದೆ. ಆಗ ತಾವು ಮದುವೆಯಾಗುವ ಹುಡುಗಿ ಹೇಗಿರಬೇಕು ಎಂದು ಹೇಳಿದ್ದಾರೆ. ನನಗೆ ಮದುವೆ ಆಗಬಾರದು ಅಂತೇನೂ ಇಲ್ಲ. ಇದರ ಕುರಿತು ಡಿಸಿಷನ್ ನಾನು ಮಾಡಿಲ್ಲ ಎನ್ನುತ್ತಲೇ ನಾನು ಇಷ್ಟಪಟ್ಟಂಥ ಹುಡುಗಿ ಸಿಕ್ಕಿರೆ ಖಂಡಿತವಾಗಿಯೂ ಮದುವೆಗೆ ರೆಡಿ ಎಂದಿದ್ದಾರೆ.

    ಕನಸಿನ ಹುಡುಗಿಯಲ್ಲಿ ಎರಡೇ ಕ್ವಾಲಿಟಿ ಇದ್ದರೆ ಸಾಕು. ಮೊದಲನೆಯದ್ದು ತಮ್ಮ ಕೆಲಸವನ್ನು ಗೌರವಿಸಬೇಕು. ಇನ್ನೊಂದು ನನಗೆ ಅಮ್ಮನೇ ಎಲ್ಲ. ಆದ್ದರಿಂದ ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಇಷ್ಟು ಇದ್ದರೆ ಸಾಕು. ಅಂಥ ಹುಡುಗಿಯನ್ನು ನಾನು ಮದುವೆಯಾಗುತ್ತೇನೆ. ಬೇಕಿದ್ದರೆ ನಾಲ್ಕು ಗೋಡೆಗಳ ನಡುವೆ ಕಾಲು ಹಿಡಿದುಕೊಳ್ಳಲೂ ರೆಡಿ ಎಂದು ತಮಾಷೆ ಮಾಡಿದ್ದಾರೆ ತರುಣ್ ಸುಧೀರ್. ಆದರೆ ಎಲ್ಲೂ ಸೋನಾಲ್ ಹೆಸರು ಬಳಸದೇ ಮಾತನಾಡಿದ್ದಾರೆ.

    ಅಂದಹಾಗೆ, ತರುಣ್ ಸುಧೀರ್ ಶೀಘ್ರದಲ್ಲೇ ಮದುವೆಯಾಗುತ್ತಿದ್ದಾರೆ. ನಟಿ ಸೋನಾಲ್ ಜೊತೆ ತರುಣ್ ಕಲ್ಯಾಣ ನಡೆಯುತ್ತಿದೆ. ಖುಷಿ ಸುದ್ದಿ ಸದ್ಯದಲ್ಲೇ ಕೊಡ್ತೀವಿ ಎಂದು ಮಾಲತಿ ಸುಧೀರ್ ‘ಪಬ್ಲಿಕ್ ಟಿವಿ’ ಜೊತೆ ಹಂಚಿಕೊಂಡಿದ್ದಾರೆ. ಮಗನ ಮದುವೆ ದಿನಾಂಕ ಫಿಕ್ಸ್ ಆಗಿಲ್ಲ. ಆಷಾಢ ಮಾಸ ಅಲ್ವಾ? ಕನ್ಫರ್ಮ್ ಆದ್ಮೇಲೆ ಹೇಳ್ತೀವಿ ಎಂದಿದ್ದಾರೆ. ಮದುವೆ ಛತ್ರಗಳು ಅಷ್ಟು ಬೇಗ ಸಿಕ್ತಿಲ್ಲ. ಮಗನ ಕೈಲಿ ಸದ್ಯ ಜಾಸ್ತಿ ಪ್ರಾಜೆಕ್ಟ್ ಇದೆ. ಅದೆಲ್ಲಾ ನೋಡ್ಕೊಂಡು ಮದುವೆ ಮಾಡಿಕೊಳ್ತಾರೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:ತಮಿಳಿನತ್ತ ನಟಿ- ಶಶಿಕುಮಾರ್‌ಗೆ ಚೈತ್ರಾ ಆಚಾರ್ ನಾಯಕಿ

    ನಾನೇ ಸರಿಯಾಗಿ ಇನ್ನೂ ಆ ಹುಡ್ಗಿನಾ ನೋಡಿಲ್ಲ. ಮನೆಯವರೆಲ್ಲಾ ಕೂತು ಮಾತಾಡಬೇಕು. ಛತ್ರ ಬುಕ್ ಆದ್ಮೇಲೆ ನಾವೇ ಮಾತಾಡ್ತೀವಿ ಎಂದು ತರುಣ್ ಮತ್ತು ಸೋನಾಲ್ ಮದುವೆ ಸುದ್ದಿಯನ್ನು ಅಧಿಕೃತವಾಗಿ ಖಾತ್ರಿ ಮಾಡಿದ್ದಾರೆ ಮಾಲತಿ ಸುಧೀರ್.

    ಚೌಕ, ರಾಬರ್ಟ್, ಕಾಟೇರ ಸಿನಿಮಾದ ಸಕ್ಸಸ್ ನಂತರ ತರುಣ್ ಹೊಸ ಸಿನಿಮಾದ ತಯಾರಿಯಲ್ಲಿದ್ದಾರೆ. ಇದರ ನಡುವೆ ತರುಣ್ ಶೋವೊಂದರ ಜಡ್ಜ್ ಆಗಿದ್ದಾರೆ. ಎಂಎಲ್‌ಎ, ಮದುವೆ ದಿಬ್ಬಣ, ರಾಬರ್ಟ್, ಗರಡಿ, ಶುಗರ್ ಫ್ಯಾಕ್ಟರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಸೋನಾಲ್ ನಟಿಸಿದ್ದಾರೆ.

  • ಖುಷಿ ಸುದ್ದಿ ಸದ್ಯದಲ್ಲೇ ಕೊಡ್ತೀವಿ- ತರುಣ್ ಮದುವೆ ಬಗ್ಗೆ ಮಾಲತಿ ಸುಧೀರ್ ಪ್ರತಿಕ್ರಿಯೆ

    ಖುಷಿ ಸುದ್ದಿ ಸದ್ಯದಲ್ಲೇ ಕೊಡ್ತೀವಿ- ತರುಣ್ ಮದುವೆ ಬಗ್ಗೆ ಮಾಲತಿ ಸುಧೀರ್ ಪ್ರತಿಕ್ರಿಯೆ

    ರಾಬರ್ಟ್, ಕಾಟೇರ, ಸಿನಿಮಾಗಳ ನಿರ್ದೇಶಕ ತರುಣ್ ಸುಧೀರ್ (Tharun Sudhir) ಮತ್ತು ನಟಿ ಸೋನಾಲ್ (Sonal) ಮದುವೆ ಆಗ್ತಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡಿತ್ತು. ಆದರೆ ಸ್ಪಷ್ಟನೆ ಸಿಕ್ಕಿರಲಿಲ್ಲ. ಇದೀಗ ತರುಣ್, ಸೋನಾಲ್ ಮದುವೆ (Wedding) ವಿಷ್ಯ ನಿಜನಾ? ಎಂದು ತಾಯಿ ಮಾಲತಿ ಸುಧೀರ್ ಕ್ಲ್ಯಾರಿಟಿ ನೀಡಿದ್ದಾರೆ. ಇದನ್ನೂ ಓದಿ:ದುಬೈನಲ್ಲಿ ಚಂದನ್ ಶೆಟ್ಟಿ ನಟನೆಯ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಪ್ರೀಮಿಯರ್ ಶೋ

    ತರುಣ್ ಸುಧೀರ್ ಶೀಘ್ರದಲ್ಲೇ ಮದುವೆಯಾಗುತ್ತಿದ್ದಾರೆ. ನಟಿ ಸೋನಾಲ್ ಜೊತೆ ತರುಣ್ ಕಲ್ಯಾಣ ನಡೆಯುತ್ತಿದೆ. ಖುಷಿ ಸುದ್ದಿ ಸದ್ಯದಲ್ಲೇ ಕೊಡ್ತೀವಿ ಎಂದು ಮಾಲತಿ ಸುಧೀರ್ ‘ಪಬ್ಲಿಕ್ ಟಿವಿ’ ಜೊತೆ ಹಂಚಿಕೊಂಡಿದ್ದಾರೆ. ಮಗನ ಮದುವೆ ದಿನಾಂಕ ಫಿಕ್ಸ್ ಆಗಿಲ್ಲ. ಆಷಾಢ ಮಾಸ ಅಲ್ವಾ? ಕನ್ಫರ್ಮ್ ಆದ್ಮೇಲೆ ಹೇಳ್ತೀವಿ ಎಂದಿದ್ದಾರೆ. ಮದುವೆ ಛತ್ರಗಳು ಅಷ್ಟು ಬೇಗ ಸಿಕ್ತಿಲ್ಲ. ಮಗನ ಕೈಲಿ ಸದ್ಯ ಜಾಸ್ತಿ ಪ್ರಾಜೆಕ್ಟ್ ಇದೆ. ಅದೆಲ್ಲಾ ನೋಡ್ಕೊಂಡು ಮದುವೆ ಮಾಡಿಕೊಳ್ತಾರೆ ಎಂದು ಮಾತನಾಡಿದ್ದಾರೆ.

    ನಾನೇ ಸರಿಯಾಗಿ ಇನ್ನೂ ಆ ಹುಡ್ಗಿನಾ ನೋಡಿಲ್ಲ. ಮನೆಯವರೆಲ್ಲಾ ಕೂತು ಮಾತಾಡಬೇಕು. ಛತ್ರ ಬುಕ್ ಆದ್ಮೇಲೆ ನಾವೇ ಮಾತಾಡ್ತೀವಿ ಎಂದು ತರುಣ್ ಮತ್ತು ಸೋನಾಲ್ ಮದುವೆ ಸುದ್ದಿಯನ್ನು ಅಧಿಕೃತವಾಗಿ ಖಾತ್ರಿ ಮಾಡಿದ್ದಾರೆ ಮಾಲತಿ ಸುಧೀರ್. ಇದನ್ನೂ ಓದಿ:ಪ್ರಜ್ವಲ್ ದೇವರಾಜ್‌ ನಟನೆಯ ಹುಟ್ಟುಹಬ್ಬಕ್ಕೆ ‘ಕರಾವಳಿ’ಯಿಂದ ಸಿಕ್ತು ಭರ್ಜರಿ ಗಿಫ್ಟ್

    ಅಂದಹಾಗೆ, ಚೌಕ, ರಾಬರ್ಟ್, ಕಾಟೇರ ಸಿನಿಮಾದ ಸಕ್ಸಸ್ ನಂತರ ತರುಣ್ ಹೊಸ ಸಿನಿಮಾದ ತಯಾರಿಯಲ್ಲಿದ್ದಾರೆ. ಇದರ ನಡುವೆ ತರುಣ್ ಶೋವೊಂದರ ಜಡ್ಜ್ ಆಗಿದ್ದಾರೆ. ಎಂಎಲ್‌ಎ, ಮದುವೆ ದಿಬ್ಬಣ, ರಾಬರ್ಟ್, ಗರಡಿ, ಶುಗರ್ ಫ್ಯಾಕ್ಟರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಸೋನಾಲ್ ನಟಿಸಿದ್ದಾರೆ.

  • ಉಪೇಂದ್ರ ನಟನೆಯ ‘ಬುದ್ದಿವಂತ 2’ ಚಿತ್ರದಲ್ಲಿ ಶ್ರೀನಗರ ಕಿಟ್ಟಿ

    ಉಪೇಂದ್ರ ನಟನೆಯ ‘ಬುದ್ದಿವಂತ 2’ ಚಿತ್ರದಲ್ಲಿ ಶ್ರೀನಗರ ಕಿಟ್ಟಿ

    ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಬುದ್ದಿವಂತ 2 (Buddhivanta 2) ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ (Srinagar Kitty) ವಿಶೇಷಪಾತ್ರದಲ್ಲಿ  ಕಾಣಿಸಿಕೊಂಡಿದ್ದಾರೆ. ಅದೊಂದು ಹೊಸ ಬಗೆಯ ಪಾತ್ರವಾಗಿದ್ದು, ಹಾಗಾಗಿ ಕಿಟ್ಟಿ ಒಪ್ಪಿಕೊಂಡು ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಪಾತ್ರದ ಮೂಲಕ ಚಿತ್ರಕ್ಕೆ ಹೊಸ ಆಯಾಮವನ್ನು ನೀಡುವ ಪ್ರಯತ್ನ ಮಾಡಿದ್ದಾರಂತೆ ನಿರ್ದೇಶಕರು.

    ತಮ್ಮ ಅಮೋಘ ಅಭಿನಯದ ಮೂಲಕ‌ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ (Upendra) ಅಭಿನಯದ ‘ಬುದ್ದಿವಂತ 2’ ಚಿತ್ರ ಯಾವಾಗ ಬಿಡುಗಡೆಯಾಗಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು.‌ ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.‌ ವಿಡಿಯೋ ತುಣುಕೊಂದರ(ಗ್ಲಿಂಪ್ಸ್) ಮೂಲಕ  ಚಿತ್ರತಂಡ ಬುದ್ದಿವಂತ 2 ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.

    ಬುದ್ದಿವಂತ ಎಂದೇ ಜನಪ್ರಿಯರಾಗಿರುವ ಉಪೇಂದ್ರ ಅವರ ಹುಟ್ಟುಹಬ್ಬ ಸೆಪ್ಟೆಂಬರ್ 18 ರಂದು. ಅವರ ಹುಟ್ಟುಹಬ್ಬದ ಸಮಯದಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳ ಸಂತಸ ಇಮ್ಮಡಿಯಾಗಲಿದೆ. ಇದನ್ನೂ ಓದಿ:ಉಪ್ಪಿ ಅಭಿಮಾನಿಗಳಿಗೆ ಗುಡ್ ನ್ಯೂಸ್- ‌’ಬುದ್ಧಿವಂತ 2′ ಬಿಗ್ ಅಪ್‌ಡೇಟ್

     

    ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಡಾ.ಟಿ.ಆರ್ ಚಂದ್ರಶೇಖರ್,  ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ ಮತ್ತೊಂದು ಅದ್ದೂರಿ ಚಿತ್ರ ಬುದ್ದಿವಂತ 2.

    ಜೈದೇವ್ (Jaidev) ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ.  ಎಸ್ ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಜಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಉಪೇಂದ್ರ ಅವರಿಗೆ ನಾಯಕಿಯರಾಗಿ  ಸೋನಾಲ್ ಮೊಂಟೆರೊ ಹಾಗೂ  ಮೇಘನರಾಜ್ (Meghana Raj)ನಟಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಪ್ಪಿ ಹುಟ್ಟು ಹಬ್ಬಕ್ಕೆ ‘ಬುದ್ದಿವಂತ’ 2 ರಿಲೀಸ್

    ಉಪ್ಪಿ ಹುಟ್ಟು ಹಬ್ಬಕ್ಕೆ ‘ಬುದ್ದಿವಂತ’ 2 ರಿಲೀಸ್

    ಮಕ್, ಅಯೋಗ್ಯ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ಟಿ.ಆರ್ ಚಂದ್ರಶೇಖರ್,  ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ಮತ್ತೊಂದು ಬಹುನಿರೀಕ್ಷಿತ ಚಿತ್ರ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ (Upendra) ದ್ವಿಪಾತ್ರದಲ್ಲಿ ನಟಿಸಿರುವ ಚಿತ್ರ ‘ಬುದ್ದಿವಂತ 2’. (Buddhivanta 2) ನಿರ್ಮಾಣ ಪೂರ್ಣಗೊಂಡಿದ್ದು ಇದೀಗ ಬಿಡುಗಡೆ ಸಮಯವನ್ನು ಚಿತ್ರದ ನಿರ್ಮಾಪಕರು ಬಹಿರಂಗಗೊಳಿಸಿದ್ದಾರೆ.

    ಈ ಬಾರಿಯ ಉಪೇಂದ್ರ ಅವರ ಹುಟ್ಟುಹಬ್ಬಕ್ಕೆ  ಅವರ ಅಭಿಮಾನಿಗಳಿಗೆ ಉಡುಗೊರೆಯಾಗಿ  ಚಿತ್ರವನ್ನು ಬೃಹತ್ ಪ್ರಮಾಣದಲ್ಲಿ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಪ್ರಕಟಿಸಿದ್ದಾರೆ. ಹಾಗೂ ಬುದ್ದಿವಂತ -2  ಚಿತ್ರದ ಟೀಸರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಟೀಸರ್ ಮೂಲಕವೇ ಚಿತ್ರದ ಬಿಡುಗಡೆಯ ದಿನಾಂಕ ಕೂಡ ಘೋಷಣೆಯಾಗಲಿದೆ ಎಂದು ಚಿತ್ರತಂಡ ಪ್ರಕಟಿಸಿದೆ. ಇದನ್ನೂ ಓದಿ:ಕೋಟಿ ಕೊಟ್ರೂ ಸಿನಿಮಾದಲ್ಲಿ ಕಿಸ್‌ ಮಾಡಲ್ಲ- ಪ್ರಿಯಾಮಣಿ ಖಡಕ್‌ ಉತ್ತರ

    ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜಯರಾಮ್ ಮಾಧವನ್ ಬುದ್ಧಿವಂತ 2 ಚಿತ್ರದ ನಿರ್ದೇಶಕರು. ಗುರುಕಿರಣ್ ಸಂಗೀತ ನೀಡಿದ್ದಾರೆ.  ಎಸ್ ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಜಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

    ಉಪೇಂದ್ರ ಅವರಿಗೆ ನಾಯಕಿಯರಾಗಿ ಸೋನಾಲ್ (Sonal) ಮೊಂಟೆರೊ ಹಾಗೂ  ಮೇಘನಾ ರಾಜ್ (Meghana Raj)  ನಟಿಸಿದ್ದಾರೆ. ಶ್ರೀನಗರ ಕಿಟ್ಟಿ (Srinagar Kitty) ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಉಪೇಂದ್ರ ಹೊಸ ಬಗೆಯ ಪಾತ್ರ ಮಾಡಿದ್ದು, ಆ ಪಾತ್ರವೇ ಸಿನಿಮಾದ ವಿಶೇಷತೆಗಳಲ್ಲಿ ಒಂದು ಅಂತಾರೆ ನಿರ್ದೇಶಕರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಝೈದ್ ಖಾನ್ ನಟನೆಯ `ಬನಾರಸ್’ ಸಾಂಗ್ ರಿಲೀಸ್ ಮಾಡಲು ಸಂಜಯ್ ದತ್ ಸಾಥ್

    ಝೈದ್ ಖಾನ್ ನಟನೆಯ `ಬನಾರಸ್’ ಸಾಂಗ್ ರಿಲೀಸ್ ಮಾಡಲು ಸಂಜಯ್ ದತ್ ಸಾಥ್

    ರಾಜಕಾರಣಿ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ `ಬನಾರಸ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಇತ್ತೀಚೆಗೆ ಚಿತ್ರದ ಮಾಯಾಗಂಗೆ ಸಾಂಗ್ ಕನ್ನಡ ಮತ್ತು ಮಲಯಾಳಂ ರಿಲೀಸ್ ಆಗಿತ್ತು. ಈಗ ಹಿಂದಿ ವರ್ಷನ್‌ನ `ಮಾಯಾ ಗಂಗೆ’ ಹಾಡನ್ನ ಸಂಜಯ್ ದತ್ ರಿಲೀಸ್ ಮಾಡಲಿದ್ದಾರೆ.

    ಝೈದ್ ಖಾನ್ ನಟನೆಯ `ಬನಾರಸ್’ ಪ್ಯಾನ್ ಇಂಡಿಯಾ ಚಿತ್ರವಾಗಿ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ಇತ್ತೀಚೆಗಷ್ಟೇ `ಮಾಯಾ ಗಂಗೆ’ ಸಾಂಗ್ ಕನ್ನಡ ಮತ್ತು ಮಲಯಾಳಂ ರಿಲೀಸ್ ಆಗಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯುತ್ತಿದೆ. ಝೈದ್ ಮತ್ತು ನಟಿ ಸೋನಾಲ್ ಜೋಡಿ ಮಾಡುತ್ತಿದೆ. ಈ ಬೆನ್ನಲ್ಲೇ ಚಿತ್ರದ ಮಾಯಾಗಂಗೆ ಹಿಂದಿ ವರ್ಷನ್‌ನ ಸಾಂಗ್‌ ಕೆಜಿಎಫ್ ಅಧೀರ ಸಂಜಯ್ ದತ್ ರಿಲೀಸ್ ಮಾಡಲಿದ್ದಾರೆ.

     

    View this post on Instagram

     

    A post shared by Zaid Khan (@urszaidkhan)

    ಜಯತೀರ್ಥ ನಿರ್ದೇಶನದ `ಬನಾರಸ್’ ಮಾಯಾ ಗಂಗೆ ಹಿಂದಿ ಸಾಂಗ್ ರಿಲೀಸ್ ಮಾಡಲು ಮುಂಬೈಗೆ ಸಂಜಯ್ ದತ್ ಮುಂಬೈಗೆ ಬಂದಿಳಿದಿದ್ದಾರೆ. ಇನ್ನೂ ಮುಂಬೈ ಏರ್‌ಪೋರ್ಟ್‌ನಲ್ಲಿ ಸಂಜಯ್ ದತ್ ಮತ್ತು ಝೈದ್ ಖಾನ್ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

    Live Tv

  • ಕೂಲ್ ಕೂಲ್ ಪ್ರದೇಶದಲ್ಲಿ ಕನ್ನಡದ ಹಾಟ್ ಹಾಟ್ ನಟಿಯರು

    ಕೂಲ್ ಕೂಲ್ ಪ್ರದೇಶದಲ್ಲಿ ಕನ್ನಡದ ಹಾಟ್ ಹಾಟ್ ನಟಿಯರು

    ಚಂದನವನದ ಚೆಂದದ ತಾರೆಯರು ಹಾಲಿಡೇ ಎಂಜಾಯ್ ಮಾಡಲು ನಾನಾ ದೇಶಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಬೇಸಿಗೆ ಬಿಸಿಯನ್ನು ಕಳೆಯಲೆಂದೇ ಅವರು ಕೂಲ್ ಕೂಲ್ ಪ್ರದೇಶಕ್ಕೆ ಹಾರಿ, ಪ್ರಕೃತಿಯೊಂದಿಗೆ ಬೆರೆತಿದ್ದಾರೆ. ರಿಲ್ಯಾಕ್ಸೇಷನ್‌ಗಾಗಿ ದೂರದ ಊರಿನಲ್ಲಿ ಬೀಡು ಬಿಟ್ಟಿರೋ ನಟಿಮಣಿಯರು ಅಲ್ಲಿನ ಕ್ಷಣಗಳನ್ನು ಹಿಡಿದಿಟ್ಟು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಗಂಡ್ ಹೈಕ್ಳ ನಿದ್ದೆಕೆಡಿಸಿದ್ದಾರೆ. ಕೂಲ್ ಕೂಲ್ ಪ್ರದೇಶದಲ್ಲಿ ಪಯಣ ಬೆಳೆಸಿರುವ ನಟಿಯರು ಯಾರು? ಅವರು ಎಲ್ಲಿದ್ದಾರೆ ಎನ್ನುವ ಕಂಪ್ಲೀಟ್ ಸ್ಟೋರಿ ಇದು.

    ಬೇಸಿಗೆ ಬಂತು ಅಂದ್ರೆ ಸಾಕು ಎಲ್ಲರಿಗೂ ನೆನಪಾಗೋದು ರಜಾ ಮಜಾ ಅಷ್ಟೇ. ಬೇಸಿಗೆ ಶುರುವಾಗುತ್ತಿದ್ದಂತೆ ಹಾಲಿಡೇ ಟ್ರೀಪ್ ಪ್ಲ್ಯಾನ್‌ ಶುರುವಾಗುತ್ತದೆ. ಅದೇ ರೀತಿ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಛಾಪು ಮೂಡಿಸಿರೋ ನಟಿಯರಾದ ಅನುಪಮ ಗೌಡ, ನೇಹಾ ಗೌಡ, ಸೋನಾಲ್, ನಮೃತಾ ಗೌಡ, ಕಾರುಣ್ಯ ರಾಮ್ ಸೇರಿದಂತೆ ಹಲವು ನಟಿಮಣಿಯರು ಹಾಲಿಡೇಯಲ್ಲಿ ಮಸ್ತ್ ಮಜಾ ಮಾಡುತ್ತಿದ್ದಾರೆ. ಸದ್ಯ ಅವರ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.

    ಟಿವಿ ಪರದೆಯ ಕ್ವೀನ್ ಅನುಪಮ ಗೌಡ, ಬಿಗ್ ಬಾಸ್, ನಮ್ಮಮ್ಮ ಸೂಪರ್ ಸ್ಟಾರ್ ಶೋ ಮೂಲಕ ಸದ್ದು ಮಾಡಿದವರು. ಇದೀಗ ಕೆಲಸದ ಮಧ್ಯೆ ಕೊಂಚ ಫ್ರೀ ಮಾಡಿಕೊಂಡು ಗೋವಾ ಟ್ರೀಪ್‌ಗೆ ಹೋಗಿದ್ದಾರೆ. ಅನುಪಮಾಗೆ ಜತೆಗೆ ಸ್ನೇಹಿತೆಯರಾದ ನಟಿ ನೇಹಾ ಗೌಡ, ಇಶಿತಾ ವರ್ಷ ಕೂಡ ಸಾಥ್ ನೀಡಿದ್ದಾರೆ.

     

    View this post on Instagram

     

    A post shared by Anupama Anandkumar (@anupamagowda)

    ಕಿರುತೆರೆ ನಟಿ ಅನುಪಮಾ ಗೌಡ ಗೋವಾದ ಸುಂದರ ತಾಣದಲ್ಲಿ ರಿಲ್ಯಾಕ್ಸ್ ಮಾಡುತ್ತಾ, ಬೆಸ್ಟ್ ಫ್ರೆಂಡ್ಸ್ ನೇಹಾ,ಇಶಿತಾ ಜೊತೆಗಿನ ಫೋಟೋ ಶೇರ್ ಮಾಡಿ, 6 ತಿಂಗಳ ಹಳೆಯ ಟ್ರಿಪ್ ಫ್ಲ್ಯಾನ್, ಕೊನೆಗೂ ಗೋವಾ ಪ್ಲ್ಯಾನ್‌ ಪೂರ್ಣವಾಯಿತು ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದು ಶೇರ್ ಮಾಡಿದ್ದಾರೆ.

     

    View this post on Instagram

     

    A post shared by namratha (@namratha__gowdaofficial)

    ಸ್ಮಾಲ್ ಸ್ಕ್ರೀನ್‌ನಲ್ಲಿ ಒನ್ ಆಫ್ ದಿ ಫೇಮಸ್ ನಟಿ ನಮೃತಾ ಗೌಡ `ನಾಗಿಣಿ 2′ ಸೀರಿಯಲ್ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದಿದ್ದಾರೆ. ಶಿವಾನಿ ಪಾತ್ರಧಾರಿಯಾಗಿ ಸೈ ಎನಿಸಿಕೊಂಡವರು. ಸೀರಿಯಲ್‌ನಿಂದ ಕೊಂಚ ಬ್ರೇಕ್ ತೆಗೆದುಕೊಂಡು ತಮ್ಮ ಹುಟ್ಟು ಹಬ್ಬದ ಅಂಗವಾಗಿ ಸ್ನೇಹಿತೆಯ ಜತೆ ಥೈಲ್ಯಾಂಡ್‌ಗೆ ಹೋಗಿದ್ದಾರೆ. ಸಖತ್ ಹಾಟ್ ಫೋಟೋಶೂಟ್‌ನಿಂದ ಗಂಡ್ ಹೈಕ್ಳ ನಿದ್ದೆಗೆಡಿಸಿದ್ದಾರೆ. ಈ ಸದ್ಯ ಈ ಫೋಟೋಗಳು ಇನ್ಸ್ಟಾಗ್ರಾಂನಲ್ಲಿ ವೈರಲ್ ಆಗಿವೆ.

    `ರಾಬರ್ಟ್’ ಖ್ಯಾತಿಯ ನಟಿ ಸೋನಾಲ್ ಮಾಂಟೆರೊ ಸದ್ಯ ಸರೋಜಿನಿ ನಾಯ್ಡು ಬಯೋಪಿಕ್ ಮೂಲಕ ಬಾಲಿವುಡ್ ಅಂಗಳಕ್ಕೆ ಲಗ್ಗೆ ಇಟ್ಟಿದ್ದಾರೆ. ಕನ್ನಡದ `ಗಾಳಿಪಟ 2′, `ಬನಾರಸ್’, `ಬುದ್ಧಿವಂತ 2′ ಸೇರಿದಂತೆ ಸಾಲು ಸಾಲು ಚಿತ್ರಗಳು ಸೋನಾಲ್ ಕೈಯಲ್ಲಿವೆ. ಬ್ಯಾಕ್ ಟು ಬ್ಯಾಕ್ ಸಿನಿಮಾ ಶೂಟ್‌ನಿಂದ ಬ್ಯುಸಿಯಿದ್ದ ಸೋನಾಲ್, ಕೆಲಸಕ್ಕೆ ಬ್ರೇಕ್ ಹಾಕಿ ಕಜಕಿಸ್ತಾನಲ್ಲಿ ಬೀಡು ಬಿಟ್ಟಿದ್ದಾರೆ. ತಮ್ಮ ತಾಯಿಯ ಜತೆ ಕಜಕಸ್ತಾನ ಸುಂದರ ತಾಣಗಳಿಗೆ ಭೇಟಿ ನೀಡಿರೋ ಫೋಟೋಸ್, ವಿಡಿಯೋ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ಮತ್ತೆ ತುಂಡುಡುಗೆ ತೊಟ್ಟು ಟ್ರೋಲ್ ಆದ ಸಮಂತಾ

    ಸ್ಯಾಂಡಲ್‌ವುಡ್ ನಟಿಮಣಿಯರು ಬೇಸಿಗೆ ಕಾಲದಲ್ಲಿ ಭೇಟಿ ಕೊಟ್ಟಿರೋ ಟ್ರಾವೆಲ್ ಸ್ಟೋರಿ ನೋಡಿ ಅಭಿಮಾನಿಗಳು ಫುಲ್ ಥ್ರಿಲ್ ಆಗಿದ್ದಾರೆ. ನೆಚ್ಚಿನ ನಟಿಯರ ಖುಷಿ ನೋಡಿ ಫ್ಯಾನ್ಸ್ ದಿಲ್ ಖುಷ್ ಆಗಿದ್ದಾರೆ.

  • 17,500 ಅಡಿ ಎತ್ತರದಲ್ಲಿ 55ರ ಐಟಿಬಿಪಿ ಅಧಿಕಾರಿಯ 65 ಪುಶ್ ಅಪ್ ವಿಡಿಯೋ ವೈರಲ್

    17,500 ಅಡಿ ಎತ್ತರದಲ್ಲಿ 55ರ ಐಟಿಬಿಪಿ ಅಧಿಕಾರಿಯ 65 ಪುಶ್ ಅಪ್ ವಿಡಿಯೋ ವೈರಲ್

    ನವದೆಹಲಿ: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು (ಐಟಿಬಿಪಿ) ತಮ್ಮ ಕೇಂದ್ರ ಪರ್ವತಾರೋಹಣ ತಂಡದೊಂದಿಗೆ ಹಿಮಾಲಯ ಪರ್ವತವಾದ ಮೌಂಟ್ ಕಾರ್ಜೋಕ್ ಕಂಗ್ರಿಯನ್ನು ಏರಿದೆ. ಕಮಾಂಡೆಂಟ್ ರತನ್ ಸಿಂಗ್ ಸೋನಾಲ್ ನೇತೃತ್ವದ ಪಡೆಯ ಆರು ಉನ್ನತ ಪರ್ವತಾರೋಹಿಗಳ ತಂಡವು ಫೆಬ್ರವರಿ 20 ರಂದು 20,177 ಅಡಿ ಎತ್ತರದ ಶಿಖರವನ್ನು ಏರಿದೆ ಎಂದು ಐಟಿಬಿಪಿ ತಿಳಿಸಿದೆ.

    ಐಟಿಬಿಪಿ ಬಾರ್ಡರ್ ಪೊಲೀಸ್ ತಂಡವು ಮೌಂಟ್ ಕಾರ್ಜೋಕ್ ಕಾಂಗ್ರಿಯನ್ನು ಮೊದಲ ಬಾರಿ ಆರೋಹಣ ಮಾಡಿದ್ದಾರೆ. ಏಸ್ ಪರ್ವತಾರೋಹಿ ಕಮಾಂಡೆಂಟ್ ರತನ್ ಸಿಂಗ್ ಸೋನಾಲ್ ನೇತೃತ್ವದ ಐಟಿಬಿಪಿಯ 6 ಉನ್ನತ ದರ್ಜೆಯ ಪರ್ವತಾರೋಹಿಗಳ ತಂಡವು ಲಡಾಖ್‍ನ ಹಿಮಪರ್ವತವಾದ 20,177 ಅಡಿ ಎತ್ತರದ ಶಿಖರವನ್ನು ಏರಿತು ಎಂದು ಐಟಿಬಿಪಿ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

    ತೀವ್ರವಾದ ಚಳಿಗಾಲದಲ್ಲಿ ದೈಹಿಕ ಮತ್ತು ಮಾನಸಿಕ ಗಟ್ಟಿತನವನ್ನು ತಡೆದುಕೊಂಡು ತಂಡವು ಯಾವುದೇ ವಿಶೇಷ ಪರ್ವತಾರೋಹಣ ಉಪಕರಣಗಳು ಮತ್ತು ಬೆಂಬಲ ವ್ಯವಸ್ಥೆಯನ್ನು ಬಳಸಿಕೊಳ್ಳದೆ ಆರೋಹಣವನ್ನು ಪೂರ್ಣಗೊಳಿಸಿತು ಎಂದು ಐಟಿಬಿಪಿಯ ಅಧಿಕಾರಿ ತಿಳಿಸಿದರು.

    ಮೌಂಟ್ ಕಾರ್ಜೋಕ್ ಕಂಗ್ರಿಯನ್ನು ಏರುತ್ತಿರುವ ಕೆಲ ದೃಶ್ಯಗಳನ್ನು ಐಟಿಬಿಪಿ ತಂಡವು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

    ಮೈ ನಡುಗಿಸುವ ಚಳಿಯಲ್ಲಿ, ಮೈನಸ್ 30 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ 17,500 ಅಡಿ ಎತ್ತರದಲ್ಲಿ ಒಂದೇ ಬಾರಿಗೆ 65 ಪುಷ್-ಅಪ್‍ಗಳನ್ನು ಪೂರ್ಣಗೊಳಿಸಿದ ಕಮಾಂಡೆಂಟ್ ಸೋನಾಲ್ ಅವರ ವೀಡಿಯೋ ಕೂಡ ವೈರಲ್ ಆಗುತ್ತಿದೆ. ಇದನ್ನೂ ಓದಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತೃತೀಯಲಿಂಗಿ

    65 ಪುಷ್-ಅಪ್‍ಗಳನ್ನು ಹೊಡೆದ ಸೋನಾಲ್ 55 ವರ್ಷ ವಯಸ್ಸಿನ ಕಮಾಂಡೆಂಟ್ ಆಗಿದ್ದು, ಅವರ ಈ ಧಾಡಸಿ ವಾಯ್ಯಾಮವನ್ನು ನೋಡಿದ ನೆಟ್ಟಿಗರೊಬ್ಬರು ನಮ್ಮ ಸೇನಾ ಸಿಬ್ಬಂದಿ ಎಷ್ಟು ಪ್ರಬಲರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಸೋನಾಲ್ ಅವರ ಈ ಧಾಡಸಿ ವ್ಯಾಯಾಮದ ವೀಡಿಯೋವು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. 13,000 ಕ್ಕೂ ಹೆಚ್ಚು ಲೈಕ್‍ಗಳನ್ನು ಪಡೆದುಕೊಂಡಿದ್ದು, 1,800 ಕ್ಕೂ ಹೆಚ್ಚು ಜನರು ಶೇರ್ ಮಾಡಿಕೊಂಡಿದ್ದಾರೆ.

    1962 ರಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ರಚಿಸಲಾಯಿತು. ಹಿಮಾಲಯದ 3,488 ಕಿಮೀ ಉದ್ದದ ಗಡಿ ಅಲ್ಲದೇ ನಕ್ಸಲ್ ವಿರೋಧಿ ಕಾರ್ಯಾಚರಣೆ ಮತ್ತು ಇತರ ಆಂತರಿಕ ಭದ್ರತಾ ಕರ್ತವ್ಯಗಳಿಗೆ ಈ ಪಡೆಯನ್ನು ನಿಯೋಜಿಸಲಾಗಿದೆ.