Tag: ಸೋಫಿಯಾ ಖುರೇಷಿ

  • ವಡೋದರಾದಲ್ಲಿ ಮೋದಿ ರೋಡ್‌ ಶೋ – ಪುಷ್ಪವೃಷ್ಟಿಗೈದು ಸ್ವಾಗತಿಸಿದ ಕರ್ನಲ್ ಸೋಫಿಯಾ ಕುಟುಂಬಸ್ಥರು

    ವಡೋದರಾದಲ್ಲಿ ಮೋದಿ ರೋಡ್‌ ಶೋ – ಪುಷ್ಪವೃಷ್ಟಿಗೈದು ಸ್ವಾಗತಿಸಿದ ಕರ್ನಲ್ ಸೋಫಿಯಾ ಕುಟುಂಬಸ್ಥರು

    ಗಾಂಧಿನಗರ: ಗುಜರಾತ್‌ನ ವಡೋದರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್‌ ಶೋ ಕಾರ್ಯಕ್ರಮದಲ್ಲಿ ಕರ್ನಲ್ ಸೋಫಿಯಾ ಖುರೇಷಿ (Colonel Sofiya Qureshi) ಅವರ ಕುಟುಂಬಸ್ಥರು ಭಾಗಿಯಾಗಿದ್ದರು.

    ಪ್ರಧಾನಿ ಮೋದಿ (PM Narendra Modi) ಅವರು ಹತ್ತಿರ ಬರುತ್ತಿದ್ದಾಗ ಸೋಫಿಯಾ ತಾಯಿ ಹಲೀಮಾ ಬೀಬಿ ಸೇರಿದಂತೆ ಕುಟುಂಬ ಸದಸ್ಯರು ಪುಷ್ಪವೃಷ್ಟಿ ಮಾಡಿ ಸ್ವಾಗತಿಸಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರವನ್ನು ಜಗತ್ತಿಗೆ ವಿವರಿಸಿದ್ದ ಕರ್ನಲ್ ಸೋಫಿಯಾ ಬೆಳಗಾವಿಯ ಸೊಸೆ!

    ಮಾಧ್ಯಮದ ಜೊತೆ ಮಾತನಾಡಿದ ಹಲೀಮಾ ಬೀಬಿ, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದನ್ನು ನೋಡಿ ಸಂತೋಷವಾಯಿತು. ಮಹಿಳೆಯರು ಮತ್ತು ಸಹೋದರಿಯರು ಆಪರೇಷನ್ ಸಿಂಧೂರ ಬಗ್ಗೆ ಸಂತೋಷಪಟ್ಟಿದ್ದಾರೆ ಎಂದು ತಿಳಿಸಿದರು.


    ಕರ್ನಲ್ ಸೋಫಿಯಾ ಖುರೇಷಿ ಅವರ ಅವಳಿ ಸಹೋದರಿ ಶೈನಾ ಸುನ್ಸಾರಾ ಮಾತನಾಡಿ, ಮಹಿಳಾ ಸಬಲೀಕರಣಕ್ಕಾಗಿ ಪ್ರಧಾನಿ ಮೋದಿ ಬಹಳಷ್ಟು ಕೆಲಸ ಮಾಡಿದ್ದಾರೆ. ಸೋಫಿಯಾ ನನ್ನ ಅವಳಿ ಸಹೋದರಿ. ಸಹೋದರಿ ದೇಶಕ್ಕಾಗಿ ಏನಾದರೂ ಮಾಡಿದಾಗ, ಅದು ನನಗೆ ಮಾತ್ರವಲ್ಲದೆ ಇತರರಿಗೂ ಸ್ಫೂರ್ತಿ ನೀಡುತ್ತದೆ. ಆಕೆ ಇನ್ನು ಮುಂದೆ ನನ್ನ ಸಹೋದರಿ ಮಾತ್ರವಲ್ಲ, ದೇಶದ ಸಹೋದರಿ ಎಂದು ಹೇಳಿದರು. ಇದನ್ನೂ ಓದಿ: ಸಿಂಧೂರ ಅಳಿಸಿದವರಿಗೆ ನಾರಿ ಶಕ್ತಿಯಿಂದಲೇ ಭಾರತ ಉತ್ತರ – ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಬಗ್ಗೆ ಗೊತ್ತಾ?

  • ಸೋಫಿಯಾ‌ ವಿರುದ್ಧ ಅವಹೇಳನಕಾರಿ ಹೇಳಿಕೆ – ಮಧ್ಯಪ್ರದೇಶದ ಮಂತ್ರಿ ವಿರುದ್ಧ ಎಫ್‌ಐಆರ್‌ಗೆ ಸೂಚನೆ

    ಸೋಫಿಯಾ‌ ವಿರುದ್ಧ ಅವಹೇಳನಕಾರಿ ಹೇಳಿಕೆ – ಮಧ್ಯಪ್ರದೇಶದ ಮಂತ್ರಿ ವಿರುದ್ಧ ಎಫ್‌ಐಆರ್‌ಗೆ ಸೂಚನೆ

    ಭೋಪಾಲ್‌: ಹೊಗಳುವ ಭರದಲ್ಲಿ ಕರ್ನಲ್‌ ಸೋಫಿಯಾ ಖುರೇಷಿ (Colonel Sofiya Qureshi) ಅವರನ್ನು ಭಯೋತ್ಪಾದಕರ ಸಹೋದರಿ ಎಂದಿದ್ದ ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್‌ ಶಾ (Vijay Shah) ವಿರುದ್ಧ ಜಬ್ಬಲ್ಪುರ  ಹೈಕೋರ್ಟ್‌ (Madhya Pradesh High Court) ಎಫ್‌ಐಆರ್‌ ದಾಖಲಿಸುವಂತೆ ಆದೇಶಿಸಿದೆ.

    ತನ್ನ ಹೇಳಿಕೆ ವಿವಾದ ಆಗುತ್ತಿದ್ದಂತೆ ವಿಜಯ್‌ ಶಾ ಒಂದು ಬಾರಿಯಲ್ಲ 10 ಬಾರಿ ಕ್ಷಮೆ (Apology) ಕೇಳಲು ಸಿದ್ಧ. ನನ್ನ ಹೇಳಿಕೆಯ ಪೈಕಿ ಕೆಲ ಸಾಲನ್ನು ಹಿಡಿದುಕೊಂಡು ತಿರುಚಿ ವಿವಾದ ಸೃಷ್ಟಿಸಿದ್ದಾರೆ ಎಂದು ದೂರಿದ್ದಾರೆ. ವಿಜಯ್ ಶಾ ಹೇಳಿಕೆಯನ್ನು ರಾಷ್ಟ್ರೀಯ ಮಹಿಳಾ ಆಯೋಗವೂ ಖಂಡಿಸಿದೆ. ಇದನ್ನೂ ಓದಿ: Boycott Turkey – ಸೇಬು, ಚೆರ‍್ರಿ, ಮಾರ್ಬಲ್‌ಗಳ ಆಮದು ಬ್ಯಾನ್‌ಗೆ ನಿರ್ಧಾರ

    ವಿಜಯ್‌ ಶಾ ಹೇಳಿದ್ದೇನು?
    ಇಂದೋರ್ ಜಿಲ್ಲೆಯ ಮಾಹುವಿನ ರಾಯ್ಕುಂಡ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ್ ಶಾ ಅವರು ಪಾಕಿಸ್ತಾನ ವಿರುದ್ಧ ನಡೆದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಸಿಕ್ಕಿದ ಯಶಸ್ಸನ್ನು ಹೇಳಿ ಮೋದಿ ಸರ್ಕಾರವನ್ನು ಶ್ಲಾಘಿಸುತ್ತಿದ್ದರು.

    ಭಾಷಣದಲ್ಲಿ, ಭಯೋತ್ಪಾದಕರು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದ್ದರು. ಆ ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ನಾವು ಕಳುಹಿಸಿದ್ದೇವೆ ಎಂದು ಹೇಳಿದ್ದರು. ಇದನ್ನೂ ಓದಿ: ಪ್ಲೀಸ್‌ ನೀರು ಹರಿಸಿ – ಸಿಂಧೂ ಜಲ ಒಪ್ಪಂದವನ್ನು ಪರಿಶೀಲಿಸುವಂತೆ ಪಾಕ್‌ ಪತ್ರ

    ಭಾಷಣದಲ್ಲಿ ವಿಜಯ್ ಶಾ ಮುಸ್ಲಿಂ ಸಮುದಾಯಕ್ಕೆ ಸೇರಿದ ಉಗ್ರರನ್ನು ಸದೆ ಬಡಿಯಲು ಮುಸ್ಲಿಂ ಸಮುದಾಯಕ್ಕೆ ಸೇರಿದ ಕರ್ನಲ್ ಸೋಫಿಯಾ ಖುರೇಷಿ ಅವರ ಹೆಸರನ್ನು ಸ್ಪಷ್ಟವಾಗಿ ಹೇಳದೇ ಇದ್ದರೂ ಅವರನ್ನು ಉಲ್ಲೇಖಿಸಿಯೇ ಭಾಷಣ ಮಾಡಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.

  • ಭಾರತದ ವಿರುದ್ಧ ಪಾಕಿಸ್ತಾನ ಸುಳ್ಳು ಸುದ್ದಿಗಳನ್ನು ಹಬ್ಬಿಸಿದೆ: ಸೋಫಿಯಾ ಖುರೇಷಿ

    ಭಾರತದ ವಿರುದ್ಧ ಪಾಕಿಸ್ತಾನ ಸುಳ್ಳು ಸುದ್ದಿಗಳನ್ನು ಹಬ್ಬಿಸಿದೆ: ಸೋಫಿಯಾ ಖುರೇಷಿ

    – ಭಾರತೀಯ ವಾಯುನೆಲೆಗಳು ಸುರಕ್ಷಿತ
    – ನಮ್ಮ ಪ್ರತಿದಾಳಿಯಿಂದ ಪಾಕ್ ಸೇನೆಗೆ ಅಪಾರ ನಷ್ಟ: ಕರ್ನಲ್ ಸೋಫಿಯಾ

    ನವದೆಹಲಿ: ಭಾರತದ ವಿರುದ್ಧ ಪಾಕಿಸ್ತಾನ ಸುಳ್ಳು ಆರೋಪ ಮಾಡಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ(Sofiya Qureshi) ಹೇಳಿದ್ದಾರೆ.

    ಶನಿವಾರ ಭಾರತ(India) ಹಾಗೂ ಪಾಕಿಸ್ತಾನದ(Pakistan) ನಡುವಿನ ಕದನ ವಿರಾಮದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್400 ಕ್ಷಿಪಣಿ, ಬ್ರಹ್ಮೋಸ್ ನೆಲೆ ನಾಶವಾಗಿಲ್ಲ. ಭಾರತದ ವಿರುದ್ಧ ಪಾಕಿಸ್ತಾನ ಸುಳ್ಳು ಆರೋಪಗಳನ್ನ ಮಾಡ್ತಿದೆ. ಚಂಡೀಗಢದಲ್ಲಿ ಪಾಕ್ ಶೆಲ್ ಮೇಲೆ ದಾಳಿ ಮಾಡಿರೋದು ಸುಳ್ಳು ಸುದ್ದಿಯಾಗಿದೆ. ಭಾರತೀಯ ಸೇನೆಯು ಪಾಕಿಸ್ತಾನದ ಡ್ರೋನ್‌ಗಳನ್ನ ಹೊಡೆದುರುಳಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಗುಂಡಿನ ದಾಳಿ, ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ-ಪಾಕ್‌ ಒಪ್ಪಂದ: ಜೈಶಂಕರ್‌

    ಭಾರತೀಯ ಸೇನೆಯು(Indian Army) ಕೇವಲ ಪಾಕ್‌ನ ಸೇನಾವಲಯಗಳನ್ನ ಮಾತ್ರ ಗುರಿ ಮಾಡಿ ದಾಳಿ ಮಾಡಿದೆ. ಪಾಕಿಸ್ತಾನ ಸುಳ್ಳು ಸುದ್ದಿಗಳನ್ನ ಹಬ್ಬಿಸುತ್ತಿದೆ. ನಮ್ಮ ದಾಳಿಯಿಂದ ಪಾಕಿಸ್ತಾನ ಸೇನೆಗೆ ಸಾಕಷ್ಟು ನಷ್ಟವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿದೆ: ಪಾಕ್ ವಿದೇಶಾಂಗ ಸಚಿವ ಘೋಷಣೆ

    ಭಾರತೀಯ ಸೇನೆಯು ಪಾಕಿಸ್ತಾನದ ಯಾವುದೇ ಮಸೀದಿಗಳನ್ನ ಟಾರ್ಗೆಟ್ ಮಾಡಿಲ್ಲ. ಕೇವಲ ಪಾಕ್ ಉಗ್ರರ ನೆಲೆಗಳನ್ನ ಧ್ವಂಸ ಮಾಡಿದ್ದೇವೆ. ಪಾಕಿಸ್ತಾನ ಏರ್‌ಬೇಸ್‌ಗಳನ್ನ ಹೊಡೆದುರುಳಿಸಿದ್ದೇವೆ. ಎಲ್‌ಓಸಿಯಲ್ಲಿಯೂ ಪಾಕಿಸ್ತಾನ ಗುಂಡಿನ ದಾಳಿ ಮಾಡಿತ್ತು. ಅದಕ್ಕೆ ಪ್ರತಿಯಾಗಿ ಭಾರತ ದಾಳಿ ಮಾಡಿದ ವೇಳೆ ಅವರಿಗೂ ನಷ್ಟವಾಗಿದೆ. ಎಲ್ಲಾ ಸಮಯದಲ್ಲೂ ನಮ್ಮ ಸೇನೆ ಅಲರ್ಟ್ ಇರಲಿದೆ. ಪಾಕ್ ದಾಳಿಗೆ ಪ್ರತಿದಾಳಿ ಮಾಡಲು ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.