Tag: ಸೋಮಶೇಖರ್

  • ಬಿಜೆಪಿಯಿಂದ ಎಸ್‌ಟಿ ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಉಚ್ಚಾಟನೆ

    ಬಿಜೆಪಿಯಿಂದ ಎಸ್‌ಟಿ ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಉಚ್ಚಾಟನೆ

    ಬೆಂಗಳೂರು: ಬಿಜೆಪಿಯ (BJP)  ಬೆಂಗಳೂರಿನ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್‌ (ST Somashekar)  ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್‌ (Shivaram Hebbar) ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

    ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್‌ ಕೊನೆಯಲ್ಲಿ ಇಬ್ಬರಿಗೂ ಶೋಕಾಸ್‌ ನೋಟಿಸ್‌ ನೀಡಲಾಗಿತ್ತು. ಶೋಕಾಸ್‌ ನೋಟಿಸ್‌ಗೆ ಸರಿಯಾದ ಉತ್ತರ ನೀಡದ ಕಾರಣ ಇಬ್ಬರನ್ನೂ ಬಿಜೆಪಿ ಉಚ್ಚಾಟನೆ ಮಾಡಿದೆ.

    ಇಬ್ಬರು ನಾಯಕರು ಬಹಿರಂಗವಾಗಿ ಕಾಂಗ್ರೆಸ್‌ ಸಭೆಯಲ್ಲಿ ಭಾಗಿಯಾಗುತ್ತಿದ್ದರು. ಅಷ್ಟೇ ಅಲ್ಲದೇ ಪಕ್ಷದ ನಾಯಕರ ವಿರುದ್ಧವೇ ಹೇಳಿಕೆ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಇಬ್ಬರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಂಡಿದೆ.  ಇದನ್ನೂ ಓದಿ: ಚಂಚಲಗೂಡ ಜೈಲಿನಿಂದ ಪರಪ್ಪನ ಅಗ್ರಹಾರಕ್ಕೆ ರೆಡ್ಡಿ ಶಿಫ್ಟ್‌

     
    ಉಚ್ಚಾಟನೆಗೆ ಕಾರಣ ಏನು?
    ಪದೇ ಪದೇ ಡಿಕೆಶಿ ನಿವಾಸದ ಕದ ತಟ್ಟುತ್ತಿದ್ದ ಇಬ್ಬರು ಶಾಸಕರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸಾರ್ವಜನಿಕ ಸಭೆಗಳಲ್ಲಿ ಹೊಗಳುತ್ತಿದ್ದರು. ಗ್ಯಾರಂಟಿ, ಸರ್ಕಾರದ ಯೋಜನೆಗಳಿಗೆ ಶಹಬ್ಬಾಸ್‌ಗಿರಿ ನೀಡುತ್ತಿದ್ದರು.

    ಕಾಂಗ್ರೆಸ್ ಸರ್ಕಾರದ ವಿರುದ್ಧದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸದೇ ಡೋಂಟ್ ಕೇರ್ ಎನ್ನುತ್ತಿದ್ದರು. ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ, ಸಂಘಟನಾ ಸಭೆಗಳಿಂದ ದೂರ ಉಳಿದಿದ್ದರು. ಬಿಜೆಪಿಯೊಳಗಿನ ಭಿನ್ನಮತದ ಬಗ್ಗೆ ಬಹಿರಂಗ ವ್ಯಂಗ್ಯ, ಒಂದು ಗುಂಪಿನ ಬಗ್ಗೆ ನಿರಂತರ ವಾಗ್ದಾಳಿ ನಡೆಸುತ್ತಿದ್ದರು.

  • ಯುವತಿಗೆ ಮದ್ಯ ಕುಡಿಸಿ ಬಿಜೆಪಿ ಮುಖಂಡನಿಂದ ಅತ್ಯಾಚಾರ – ಎಫ್‌ಐಆರ್ ದಾಖಲು

    ಯುವತಿಗೆ ಮದ್ಯ ಕುಡಿಸಿ ಬಿಜೆಪಿ ಮುಖಂಡನಿಂದ ಅತ್ಯಾಚಾರ – ಎಫ್‌ಐಆರ್ ದಾಖಲು

    – ಮದುವೆಗೆ ಸಾಲ ಕೊಡುವುದಾಗಿ ಕರೆಸಿಕೊಂಡು ಕೃತ್ಯ

    ಬೆಂಗಳೂರು: ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡನೋರ್ವ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    26 ವರ್ಷದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ (BJP) ಮುಖಂಡ ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ಮೇಲೆ ಅಶೋಕನಗರ (Ashoknagar) ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತ ಯುವತಿಗೆ ಆಕೆಯ ಸ್ನೇಹಿತೆ ಮೂಲಕ ಸೋಮಶೇಖರ್ ಪರಿಚಯವಾಗಿತ್ತು. ಕಳೆದ ವರ್ಷ ಯುವತಿಗೆ ಮದುವೆ ಫಿಕ್ಸ್ ಆಗಿತ್ತು. ಈ ಸಮಯದಲ್ಲಿ ಯುವತಿ ಮದುವೆಗಾಗಿ ಸೋಮಶೇಖರ್ ಬಳಿ ಸುಮಾರು 6 ಲಕ್ಷ ಹಣದ ಸಹಾಯ ಕೇಳಿದ್ದರು. ಇದನ್ನೂ ಓದಿ: ಚೀನಿ ವೈರಸ್‌ ಪತ್ತೆಯಾದ 8 ತಿಂಗಳ ಮಗು ಇಂದು ಡಿಸ್ಚಾರ್ಜ್‌

    ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹಣ ಕೊಡುವುದಾಗಿ ಸಂತ್ರಸ್ತೆಯನ್ನು ಪಿಜಿಯಿಂದ ಲ್ಯಾಂಗ್ ಫೋರ್ಡ್ ರಸ್ತೆಯ ತನ್ನ ಫ್ಲಾಟ್‌ಗೆ ಕರೆದೊಯ್ದು ಇಚ್ಚೆಗೆ ವಿರುದ್ಧವಾಗಿ ಮದ್ಯಕುಡಿಸಿ ಅತ್ಯಾಚಾರವೆಸಗಿದ್ದಾನೆ. ಈ ವಿಚಾರ ಹೊರಗಡೆ ಹೇಳಿದರೆ ಪ್ರಾಣ ತೆಗೆಯೋದಾಗಿ ಬೆದರಿಕೆ ಹಾಕಿದ್ದು, ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದಾಳೆ. ಇದನ್ನೂ ಓದಿ: Tumakuru| ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ – ಅರಣ್ಯ ಇಲಾಖೆ ಸಿಬ್ಬಂದಿ ಶಾಕ್

    ಘಟನೆ ನಡೆದು ಮೂರು ತಿಂಗಳ ಬಳಿಕ ಸಂತ್ರಸ್ತೆ ಅಶೋಕನಗರ ಠಾಣೆಗೆ ದೂರು ನೀಡಿದ್ದಾಳೆ. ಸಕಲೇಶಪುರ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಫರ್ಧಿಸಿ ಪರಾಜಯಗೊಂಡಿದ್ದ ಸೋಮಶೇಖರ್ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ಚುನಾವಣಾ ದಿನಾಂಕ ಪ್ರಕಟ

  • ಕನ್ನಡದಲ್ಲಿ ಮತ್ತೊಂದು ‘ಮುಂಗಾರು ಮಳೆ’ ಆಗಮನ: ನಾಳೆ ಟ್ರೈಲರ್ ರಿಲೀಸ್

    ಕನ್ನಡದಲ್ಲಿ ಮತ್ತೊಂದು ‘ಮುಂಗಾರು ಮಳೆ’ ಆಗಮನ: ನಾಳೆ ಟ್ರೈಲರ್ ರಿಲೀಸ್

    ಗಾಗಲೇ ಕನ್ನಡ ಚಿತ್ರೋದ್ಯಮದ ಹಲವು ಮುಂಗಾರುಗಳನ್ನು ಕಂಡಿದೆ. ಮುಂಗಾರು ಮಳೆಯಂತೂ ನೆನಪಿಡುವಂತೆ ಸುರಿದಿದೆ. ಇದೀಗ ಮತ್ತೊಂದು ಮುಂಗಾರು ಮಳೆಯ (Munagaru Male) ಕಥೆಯನ್ನು ಹೇಳಲು ಹೊರಟಿದ್ದಾರೆ ಹಿರಿಯ ಪತ್ರಕರ್ತ ಮಾ.ಸೋಮಶೇಖರ್ (Somashekhar). ಹಲವು ಕಥೆಗಳ ಗುಚ್ಛವನ್ನು ಹುಡುಕಿ ತೆಗೆದಿದ್ದು, ಒಂದೊಂದೇ ಕಥೆಗಳನ್ನು ಶಾರ್ಟ್ ಸಿನಿಮಾಗಳ ಮೂಲಕ ಹೇಳುತ್ತಾ ಹೋಗುತ್ತಿದ್ದಾರೆ.

    ಪ್ರೀತಿ, ಪ್ರೇಮ, ವಿರಹ ಹೀಗೆ ಕಥಾವಸ್ತುಗಳನ್ನು ಆಯ್ಕೆ ಮಾಡಿಕೊಂಡು ಹಲವು ಕಂತುಗಳಲ್ಲಿ ಈ ಕಥೆಗಳನ್ನು ಹೇಳುತ್ತಾ ಹೋಗುತ್ತಾರಂತೆ. ಅದರ ಮೊದಲ ಭಾಗವಾಗಿ ಮುಂಗಾರು ಮಳೆ ಕಥೆಯನ್ನು ಹೇಳುತ್ತಿದ್ದಾರೆ. ಈ ಎಲ್ಲ ಗುಚ್ಛಕ್ಕೆ ಅವರು ‘ಖಾಸಗಿ ಕಥೆಗಳು’ (Khasagi Kathegalu) ಎಂದು ಹೆಸರನ್ನು ಇಟ್ಟಿದ್ದಾರೆ. ಭಾಗ 2ರಲ್ಲಿ ಮತ್ತೊಂದು ಕಥೆಯನ್ನು ಹೇಳುತ್ತಾರಂತೆ. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ

    ಖಾಸಗಿ ಕಥೆಗಳು ಶಾರ್ಟ್ ಮೂವೀಯಲ್ಲಿ ಹಲವು ಬಗೆಯ ಕಥೆಗಳನ್ನು ಹೇಳುತ್ತಿದ್ದೇನೆ. ಪ್ರತಿ ಕಥೆಗೂ ಕಲಾವಿದರು ಬದಲಾಗುತ್ತಾರೆ. ಪ್ರೀತಿ, ಪ್ರೇಮ, ವಿರಹವೇ ಇಲ್ಲಿ ಪ್ರಧಾನವಾಗಿರಲಿದೆ. ಯಾರೂ ಹೇಳಿಕೊಳ್ಳಲಾಗದ ಕಥೆಗಳನ್ನು ಹುಡುಕಿದ್ದೇನೆ. ಕಥೆಯ ಮಧ್ಯ ಮಧ್ಯೆ ಕವಿತೆಗಳು ಬಂದು ಹೋಗುತ್ತವೆ. ಇದೇ ಈ ಸೀರಿಸ್‍್ ನ ಬ್ಯೂಟಿ ಎನ್ನುತ್ತಾರೆ ನಿರ್ದೇಶಕ ಸೋಮಶೇಖರ್.

    ಮುಂಗಾರು ಮಳೆ ಕಥೆಯಲ್ಲಿ ಹೇಮಲತಾ (Hemalatha) ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೊನ್ನೆಯಷ್ಟೇ ಅವರ ಫಸ್ಟ್ ಲುಕ್ ಅನ್ನು ನಿರ್ದೇಶಕರು ಬಿಡುಗಡೆ ಮಾಡಿದ್ದರು. ನಾಳೆ ಸಂಜೆ 5 ಗಂಟೆಗೆ ಮುಂಗಾರು ಮಳೆಯ ಟ್ರೈಲರ್ (Trailer) ರಿಲೀಸ್ ಆಗುತ್ತಿದೆ. ಎಸ್.ಜೆ ದೊಡ್ಮನೆ ಈ ಶಾರ್ಟ್ ಮೂವೀಗೆ ಹಣ ಹೂಡಿದ್ದು, ಚೇತನ್ ಚಾರ್ಲಿ ಕ್ರಿಯೇಟಿವ್ ಹೆಡ್ ಆಗಲಿ ಕೆಲಸ ಮಾಡಿದ್ದಾರೆ. ಪ್ರಸನ್ನ ಕುಮಾರ್ ಅವರ ಸಂಗೀತ, ಲೋಕೇಶ್ ನಾಯ್ಡು ಅವರ ಕ್ಯಾಮೆರಾ, ನಿತಿನ್ ರಾಜ್ ಅವರ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಪ್ಪ JDS, ಮಗ BJPಗೆ ಬೆಂಬಲ – ಮತದಾರ, ಕಾರ್ಯಕರ್ತರಲ್ಲಿ ಗೊಂದಲ

    ಅಪ್ಪ JDS, ಮಗ BJPಗೆ ಬೆಂಬಲ – ಮತದಾರ, ಕಾರ್ಯಕರ್ತರಲ್ಲಿ ಗೊಂದಲ

    ಚಿತ್ರದುರ್ಗ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಪ್ರಥಮ ಬಿಜೆಪಿ (BJP)‌ ಶಾಸಕರೆಂದೇ ಗುರುತಿಸಿಕೊಂಡಿದ್ದ ಬಸವರಾಜ ಮಂಡಿಮಠ್ (Basavaraj Mandimatta) ಇತ್ತೀಚೆಗೆ ಜೆಡಿಎಸ್‌ಗೆ (JDS) ಸೇರಿದ್ದು, ಚಳ್ಳಕೆರೆ (Challekere) ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಪರ ಪ್ರಚಾರ ನಡೆಸುತ್ತಿದ್ದಾರೆ. ಆದರೆ ಈವರೆಗೆ ತಮ್ಮ ತಂದೆಯನ್ನೇ ಹಿಂಬಾಲಿಸುತ್ತಿದ್ದ ಸೋಮಶೇಖರ್ ಮಂಡಿಮಠ್ ಈ ಬಾರಿ ಬಿಜೆಪಿಯನ್ನೇ‌ ಬೆಂಬಲಿಸಿರುವುದು ಮತದಾರರಲ್ಲಿ ‌ಭಾರೀ ಗೊಂದಲ ಸೃಷ್ಟಿಸಿದೆ.

    ಅಪ್ಪನ ಪರ ಬೆಂಬಲಿಸಬೇಕೊ, ಮಗನ ಪರ ಓಡಾಡಬೇಕೊ ಎಂಬ ಗೊಂದಲದಲ್ಲಿ‌ ಕಾರ್ಯಕರ್ತರು ಹಾಗೂ ಮತದಾರರಿದ್ದಾರೆ. ಈ ಕ್ಷೇತ್ರದಲ್ಲಿ ಬಾರಿ ಪ್ರಭಾವಗಳಿಸಿರುವ ತಂದೆ, ಮಗನ ನಡೆಯಿಂದ 2 ಪಕ್ಷಗಳ ಕಾರ್ಯಕರ್ತರಲ್ಲೂ ಇರಿಸುಮುರಿಸಾಗಿದೆ.

    ಆರಂಭದಿಂದಲೂ ಬಿಜೆಪಿಗೆ ಬೆಂಬಲವಾಗಿ ನಿಂತಿದ್ದ‌ ಈ ಕುಟುಂಬ ಅಭ್ಯರ್ಥಿ ಗೆಲ್ಲಿಸುವಲ್ಲಿ ನಿರ್ಣಾಯಕ‌ ಪಾತ್ರ ವಹಿಸಿತ್ತು. ಆದರೆ ಕಳೆದ ಬಾರಿಯ ಚುನಾವಣೆಯಿಂದ‌ ಬಸವರಾಜ ಮಂಡಿಮಠ್ ಹಾಗೂ ಸೋಮಶೇಖರ್ ಮಂಡಿಮಠ್ ಬಿಜೆಪಿಗೆ ಒಳಹೊಡೆತ ಕೊಟ್ಟಿದ್ದರು. ಇದನ್ನೂ ಓದಿ: ಹಾರಾಟಕ್ಕೆ ಕೆಲವೇ ಕ್ಷಣಗಳಿದ್ದಾಗ ವಿಶ್ವದ ಅತಿ ದೊಡ್ಡ ಸ್ಟಾರ್‌ಶಿಪ್ ರಾಕೆಟ್ ಪರೀಕ್ಷೆ ರದ್ದು

    ಬಿಜೆಪಿಯಿಂದ‌ ಅಂತರ‌ ಕಾಯ್ದುಕೊಂಡಿದ್ದರು. ಆದರೆ‌ ಈ ಬಾರಿ ಮಾಜಿ ಶಾಸಕ ಬಸವರಾಜ ಮಂಡಿಮಠ್ ನೇರವಾಗಿ ಜೆಡಿಎಸ್ ಸೇರ್ಪಡೆಯಾಗಿದ್ದು, ರವೀಶ್ ಅವರನ್ನು ಗೆಲ್ಲಿಸಲು ಶ್ರಮವಹಿಸುತಿದ್ದಾರೆ. ಆದರೆ‌ ಬಸವರಾಜ ಮಂಡಿಮಠ್ ಪುತ್ರ ಸೋಮಶೇಖರ್ ಮಾತ್ರ ಬಿಜೆಪಿ ಅಭ್ಯರ್ಥಿ ಅನಿಲ್‌ಕುಮಾರ್‌ ಬೆನ್ನಿಗೆ ನಿಂತಿರೋದು ಇದು ತಂತ್ರನಾ ಅಥವಾ ಸ್ವಪಕ್ಷದ‌ ಮೇಲಿನ ವ್ಯಾಮೋಹದಿಂದ‌ ಇಲ್ಲೇ‌ ಉಳಿದಿದ್ದಾರಾ‌ ಅನ್ನೋದು ‌ಯಕ್ಷ‌ ಪ್ರಶ್ನೆಯಾಗಿದೆ. ಇದನ್ನೂ ಓದಿ: 1,214 ಕೋಟಿ ಆಸ್ತಿಯ ಒಡೆಯ ಡಿಕೆ ಶಿವಕುಮಾರ್‌- ಪತ್ನಿ, ಮಕ್ಕಳ ಬಳಿ ಎಷ್ಟು ಆಸ್ತಿಯಿದೆ?

  • ಚಲನಚಿತ್ರ ನಿರ್ಮಾಣ ನಿರ್ವಾಹಕರ ಸಂಘಕ್ಕೆ ಸೋಮಶೇಖರ್ ನೂತನ ಸಾರಥಿ

    ಚಲನಚಿತ್ರ ನಿರ್ಮಾಣ ನಿರ್ವಾಹಕರ ಸಂಘಕ್ಕೆ ಸೋಮಶೇಖರ್ ನೂತನ ಸಾರಥಿ

    ರ್ನಾಟಕ ಚಲನಚಿತ್ರ (Film) ನಿರ್ಮಾಣ ನಿರ್ವಾಹಕ ಸಂಘದ 2022 ಹಾಗೂ 2023ರ ಸಾಲಿನ ಚುನಾವಣೆ ಕಳೆದ ತಿಂಗಳ 12ರಂದು‌ ನಡೆದಿತ್ತು. ಇದೀಗ ವಿಜೇತರಾದ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ನೂತನ ಅಧ್ಯಕ್ಷರಾಗಿ ಸೋಮಶೇಖರ್ ಎಸ್ (Somashekhar) ಆಯ್ಕೆಯಾಗಿದ್ದಾರೆ.

    ಉಳಿದಂತೆ ಉಪಾಧ್ಯಕ್ಷರಾಗಿ ಚಲುವರಾಜು.ಎಸ್ ಮತ್ತು  ರಮೇಶ್ ಬಿ.ಜಿ,  ಪ್ರಧಾನ ಕಾರ್ಯದರ್ಶಿಯಾಗಿ ನರಸಿಂಹಮೂರ್ತಿ ಬಿ.ಜಿ, ಸಹಕಾರ್ಯದರ್ಶಿ ಆಗಿ ನರಸಿಂಹ ಹೆಚ್, ನರೇಶ್ ಕುಮಾರ್ ಆರ್ ಹಾಗೂ ಶಶಿಧರ್ ಜಿ, ಖಂಜಾಚಿಯಾಗಿ ಸುನಿಲ್ ಕುಮಾರ್ ಬಿ.ಕೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಯಶ್‌ ಜೊತೆ ದಿಲ್‌ ರಾಜು ಹೊಸ ಸಿನಿಮಾ- ಅಪ್‌ಡೇಟ್‌ ಹಂಚಿಕೊಂಡ ನಿರ್ಮಾಪಕ

    ಚುನಾವಣೆಯಲ್ಲಿ ಗೆಲುವು ಪಡೆದ ಎಲ್ಲಾ ಪದಾಧಿಕಾರಿಗಳು ಇತ್ತೀಚೆಗಷ್ಟೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ.ಹರೀಶ್ (B.M. Harish) ಅವರನ್ನು ಭೇಟಿ ಮಾಡಿ ಸಹಕಾರ ಕೋರಿದ್ದಾರೆ. ಪ್ರಕಾಶ್ ಮಧುಗಿರಿ, ಸುಧೀಂದ್ರ, ರವಿಶಂಕರ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.

  • ನಟ ಸೋಮಶೇಖರ್ ಪ್ರಚಾರಕ್ಕಾಗಿ ಹೀಗೆಲ್ಲ ಮಾಡುತ್ತಿದ್ದಾನೆ : ನಟಿ ನಯನಾ

    ನಟ ಸೋಮಶೇಖರ್ ಪ್ರಚಾರಕ್ಕಾಗಿ ಹೀಗೆಲ್ಲ ಮಾಡುತ್ತಿದ್ದಾನೆ : ನಟಿ ನಯನಾ

    ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟಿ ನಯನಾ ತಮಗೆ ಜೀವ ಬೆದರಿಕೆ ಹಾಗೂ ನಿಂದನೆ ಮಾಡಿದ್ದಾರೆ ಎಂದು ನಟಿ ಸೋಮಶೇಖರ್ ನಿನ್ನೆಯಷ್ಟೇ ಬೆಂಗಳೂರಿನ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಯನಾ, ಪ್ರಚಾರಕ್ಕಾಗಿ ಸೋಮಶೇಖರ್ ಹೀಗೆಲ್ಲ ಮಾಡುತ್ತಿದ್ದಾನೆ. ಅಥವಾ ಅವನ ಹಿಂದೆ ಯಾರೂ ನಿಂತು ಈ ರೀತಿ ಮಾಡಿಸುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

    ಈ ಘಟನೆಗೆ ಸಂಬಂಧಿಸಿದಂತೆ ಮೂರು ಆಡಿಯೋಗಳು ವೈರಲ್ ಆಗಿದ್ದು, ನಯನಾ ಸಭ್ಯವಲ್ಲದ ಪದಗಳನ್ನು ಆಡಿದ್ದಾರೆ. ‘ನಾನು ಎಂಥವಳು ಅಂತ ನಿನಗೆ ಗೊತ್ತಿಲ್ಲ. ಬೆಂಗಳೂರಿಗೆ ಬಂದ ಮೇಲೆ ನನ್ನನ್ನು ನೀನು ಕಾಣದೇ ಇದ್ದರೆ, ನಾನು ಏನು ಅಂತ ತೋರಿಸ್ತೇನೆ. ನಾನು ಏನು ಮಾಡಬಹುದು ಅಂತ ಅಂದಾಜು ನಿನಗಿರಲ್ಲ’ ಎಂದು ಧಮಕಿ ಕೂಡ ಹಾಕಿದ್ದಾರೆ. ಅಲ್ಲದೇ, ಮಾತಿನ ಮಧ್ಯ ಒಂದೊಂದು ಅಸಭ್ಯ ಪದಗಳನ್ನೂ ಬಳಸುತ್ತಾರೆ. ಈ ಆಡಿಯೋಗಳು ಸೋಷಿಯಲ್ ಮೀಡಿಯಾದಲ್ಲೂ ಹರಿದಾಡುತ್ತಿವೆ

    ಹಣದ ಹಂಚಿಕೆ ವಿಚಾರಕ್ಕೆ ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೋಮಶೇಖರ್ ಆರೋಪ ಮಾಡಿದ್ದು, ಜೀವ ಬೆದರಿಕೆ ಮತ್ತು ನಿಂದನೆ ಆರೋಪದಡಿ ದೂರು ದಾಖಲಾಗಿದೆ. ಖಾಸಗಿ ಚಾನಲ್ ನಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ಕಾರ್ಯಕ್ರಮದಲ್ಲಿ ನಯನಾ ಮತ್ತು ಟೀಮ್ ಬಹುಮಾನವಾಗಿ 3 ಲಕ್ಷ ರೂಪಾಯಿ ಹಣ ಪಡೆದಿತ್ತು. ಈ ತಂಡದಲ್ಲಿ ಸೋಮಶೇಖರ್ ಕೂಡ ಇದ್ದ. ಈ ಹಣದಲ್ಲಿ ಸರಿಯಾದ ಪಾಲು ಆಗಿಲ್ಲ ಎನ್ನುವ ಕಾರಣಕ್ಕಾಗಿ ಸೋಮಶೇಖರ್ ಮತ್ತು ನಯನಾ ಮಧ್ಯ ಮನಸ್ತಾಪ ಆಗಿತ್ತು ಎಂದು ಹೇಳಲಾಗುತ್ತಿದೆ.

    ನಯನಾರ ಧ್ವನಿ ಎಂದು ಹೇಳಲಾದ ಆಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ ಸೋಮಶೇಖರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಪೊಲೀಸರು ಬಂದು ನಿನ್ನ ಅರೆಸ್ಟ್ ಮಾಡುತ್ತಾರೆ. ನಾನು ಸ್ಟೇಶನ್ ನಲ್ಲೇ ಇದ್ದೇನೆ. ನೀನು ಹಣ ಕೊಡದೇ ಇದ್ದರೆ, ನಿನ್ನನ್ನು ಏನು ಬೇಕಾದರೂ ಮಾಡುವುದಕ್ಕೆ ರೆಡಿ ಎಂದು ನಯನಾರ ಧ್ವನಿ ಎಂದು ಹೇಳಲಾದ ಆಡಿಯೋದಲ್ಲಿ ಅವಾಜ್ ಹಾಕುವಂತಹ ಮಾತುಗಳು ಇವೆ.

    ನಯನಾ ಆರೋಪದಲ್ಲಿ ಹುರುಳಿಲ್ಲ. ನಾನು ಯಾರಿಗೂ ಹಣ ಕೊಡಬೇಕಾಗಿಲ್ಲ. ಚಾನಲ್ ಹೇಳಿದಂತೆ ನಾನು ಮಾಡಿದ್ದೇನೆ. ಆದರೆ, ನಯನಾ ಹಣದ ವಿಚಾರವಾಗಿ ಕೆಟ್ಟದ್ದಾಗಿ ಮಾತನಾಡಿದ್ದಾರೆ. ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ಬರೆದಿದ್ದಾರೆ ಸೋಮಶೇಖರ್. ಸದ್ಯ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ಎನ್.ಸಿ.ಆರ್ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನಟ ಸೋಮಶೇಖರ್ ಗೆ ಅವಾಚ್ಯ ಪದಗಳಿಂದ ಬೈದ ನಟಿ ನಯನಾರ ಆಡಿಯೋ ವೈರಲ್

    ನಟ ಸೋಮಶೇಖರ್ ಗೆ ಅವಾಚ್ಯ ಪದಗಳಿಂದ ಬೈದ ನಟಿ ನಯನಾರ ಆಡಿಯೋ ವೈರಲ್

    ಣಕಾಸಿನ ವಿಚಾರಕ್ಕೆ ಸಂಬಂಧಪಟ್ಟಂತೆ ನಟಿ ನಯನಾ ತಮ್ಮದೇ ತಂಡದ ಸದಸ್ಯನೊಬ್ಬನಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾದ ಆಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ನಯನಾ ಆಡಿದ ಮಾತುಗಳಿಂದ ನೊಂದುಕೊಂಡಿರುವ ನಟ ಸೋಮಶೇಖರ್, ಬೆಂಗಳೂರಿನ ಆರ್.ಆರ್ ನಗರದ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಸೋಮಶೇಖರ್ ಅವರೇ ನೀಡಿರುವ ಆಡಿಯೋದಲ್ಲಿ ನಯನಾ ಆಡಬಾರದ ಪದಗಳನ್ನು ಆಡಿದ್ದಾರೆ. ಆ ಆಡಿಯೋ ವಾಟ್ಸಪ್ ಅಮೂಲಕ ಸಾಕಷ್ಟು ಜನರಿಗೆ ಹಂಚಿಕೆಯಾಗಿದೆ.

    ಈ ಘಟನೆಗೆ ಸಂಬಂಧಿಸಿದಂತೆ ಮೂರು ಆಡಿಯೋಗಳು ವೈರಲ್ ಆಗಿದ್ದು, ನಯನಾ ಸಭ್ಯವಲ್ಲದ ಪದಗಳನ್ನು ಆಡಿದ್ದಾರೆ. ‘ನಾನು ಎಂಥವಳು ಅಂತ ನಿನಗೆ ಗೊತ್ತಿಲ್ಲ. ಬೆಂಗಳೂರಿಗೆ ಬಂದ ಮೇಲೆ ನನ್ನನ್ನು ನೀನು ಕಾಣದೇ ಇದ್ದರೆ, ನಾನು ಏನು ಅಂತ ತೋರಿಸ್ತೇನೆ. ನಾನು ಏನು ಮಾಡಬಹುದು ಅಂತ ಅಂದಾಜು ನಿನಗಿರಲ್ಲ’ ಎಂದು ಧಮಕಿ ಕೂಡ ಹಾಕಿದ್ದಾರೆ. ಅಲ್ಲದೇ, ಮಾತಿನ ಮಧ್ಯ ಒಂದೊಂದು ಅಸಭ್ಯ ಪದಗಳನ್ನೂ ಬಳಸುತ್ತಾರೆ. ಈ ಆಡಿಯೋಗಳು ಸೋಷಿಯಲ್ ಮೀಡಿಯಾದಲ್ಲೂ ಹರಿದಾಡುತ್ತಿವೆ. ಇದನ್ನೂ ಓದಿ: ಮೆಗಾಸ್ಟಾರ್ ಚಿರಂಜೀವಿಗೆ IFFI ವ್ಯಕ್ತಿತ್ವ ಪ್ರಶಸ್ತಿ ಗೌರವ

    ಹಣದ ಹಂಚಿಕೆ ವಿಚಾರಕ್ಕೆ ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೋಮಶೇಖರ್ ಆರೋಪ ಮಾಡಿದ್ದು, ಜೀವ ಬೆದರಿಕೆ ಮತ್ತು ನಿಂದನೆ ಆರೋಪದಡಿ ದೂರು ದಾಖಲಾಗಿದೆ. ಖಾಸಗಿ ಚಾನಲ್ ನಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ಕಾರ್ಯಕ್ರಮದಲ್ಲಿ ನಯನಾ ಮತ್ತು ಟೀಮ್ ಬಹುಮಾನವಾಗಿ 3 ಲಕ್ಷ ರೂಪಾಯಿ ಹಣ ಪಡೆದಿತ್ತು. ಈ ತಂಡದಲ್ಲಿ ಸೋಮಶೇಖರ್ ಕೂಡ ಇದ್ದ. ಈ ಹಣದಲ್ಲಿ ಸರಿಯಾದ ಪಾಲು ಆಗಿಲ್ಲ ಎನ್ನುವ ಕಾರಣಕ್ಕಾಗಿ ಸೋಮಶೇಖರ್ ಮತ್ತು ನಯನಾ ಮಧ್ಯ ಮನಸ್ತಾಪ ಆಗಿತ್ತು ಎಂದು ಹೇಳಲಾಗುತ್ತಿದೆ.

    ನಯನಾರ ಧ್ವನಿ ಎಂದು ಹೇಳಲಾದ ಆಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ ಸೋಮಶೇಖರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಪೊಲೀಸರು ಬಂದು ನಿನ್ನ ಅರೆಸ್ಟ್ ಮಾಡುತ್ತಾರೆ. ನಾನು ಸ್ಟೇಶನ್ ನಲ್ಲೇ ಇದ್ದೇನೆ. ನೀನು ಹಣ ಕೊಡದೇ ಇದ್ದರೆ, ನಿನ್ನನ್ನು ಏನು ಬೇಕಾದರೂ ಮಾಡುವುದಕ್ಕೆ ರೆಡಿ ಎಂದು ನಯನಾರ ಧ್ವನಿ ಎಂದು ಹೇಳಲಾದ ಆಡಿಯೋದಲ್ಲಿ ಅವಾಜ್ ಹಾಕುವಂತಹ ಮಾತುಗಳು ಇವೆ.

    ನಯನಾ ಆರೋಪದಲ್ಲಿ ಹುರುಳಿಲ್ಲ. ನಾನು ಯಾರಿಗೂ ಹಣ ಕೊಡಬೇಕಾಗಿಲ್ಲ. ಚಾನಲ್ ಹೇಳಿದಂತೆ ನಾನು ಮಾಡಿದ್ದೇನೆ. ಆದರೆ, ನಯನಾ ಹಣದ ವಿಚಾರವಾಗಿ ಕೆಟ್ಟದ್ದಾಗಿ ಮಾತನಾಡಿದ್ದಾರೆ. ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ಬರೆದಿದ್ದಾರೆ ಸೋಮಶೇಖರ್. ಸದ್ಯ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ಎನ್.ಸಿ.ಆರ್ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಮಿಡಿ ಕಿಲಾಡಿ’ ನಯನಾ ವಿರುದ್ಧ ಜೀವ ಬೆದರಿಕೆ ದೂರು ದಾಖಲು

    ‘ಕಾಮಿಡಿ ಕಿಲಾಡಿ’ ನಯನಾ ವಿರುದ್ಧ ಜೀವ ಬೆದರಿಕೆ ದೂರು ದಾಖಲು

    ನ್ನಡದ ಜನಪ್ರಿಯ ಶೋ ಕಾಮಿಡಿ ಕಿಲಾಡಿಗಳ (Comedy Khiladigalu) ಮೂಲಕ ಫೇಮಸ್ ಆಗಿರುವ ಹಾಗೂ ಕನ್ನಡದಲ್ಲಿ ಹಲವಾರು ಸಿನಿಮಾಗಳಲ್ಲಿ ಹಾಸ್ಯ ಪಾತ್ರ ಮಾಡಿರುವ ನಯನಾ ವಿರುದ್ಧ ಬೆಂಗಳೂರಿನ ಆರ್.ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾಸ್ಯ ಕಲಾವಿದೆ ನಯನಾ ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಮತ್ತು ನಿಂದನೆ ಮಾಡಿದ್ದಾರೆ ಎಂದು ಸೋಮಶೇಖರ್ ಎನ್ನುವವರು ದೂರು ನೀಡಿದ್ದಾರೆ.

    ಹಣದ ಹಂಚಿಕೆ ವಿಚಾರಕ್ಕೆ ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೋಮಶೇಖರ್ ಆರೋಪ ಮಾಡಿದ್ದು, ಜೀವ ಬೆದರಿಕೆ ಮತ್ತು ನಿಂದನೆ ಆರೋಪದಡಿ ದೂರು ದಾಖಲಾಗಿದೆ. ಖಾಸಗಿ ಚಾನಲ್ ನಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿ ಗ್ಯಾಂಗ್ಸ್ ಕಾರ್ಯಕ್ರಮದಲ್ಲಿ ನಯನಾ ಮತ್ತು ಟೀಮ್ ಬಹುಮಾನವಾಗಿ 3 ಲಕ್ಷ ರೂಪಾಯಿ ಹಣ ಪಡೆದಿತ್ತು. ಈ ತಂಡದಲ್ಲಿ ಸೋಮಶೇಖರ್ ಕೂಡ ಇದ್ದ. ಈ ಹಣದಲ್ಲಿ ಸರಿಯಾದ ಪಾಲು ಆಗಿಲ್ಲ ಎನ್ನುವ ಕಾರಣಕ್ಕಾಗಿ ಸೋಮಶೇಖರ್ ಮತ್ತು ನಯನಾ ಮಧ್ಯ ಮನಸ್ತಾಪ ಆಗಿತ್ತು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಕನ್ನಡತಿ ಅನುಷಾ ಶೆಟ್ಟಿ ಜೊತೆ ಹಸೆಮಣೆ ಏರಿದ ತೆಲುಗು ನಟ ನಾಗಶೌರ್ಯ

    ನಯನಾರ ಧ್ವನಿ ಎಂದು ಹೇಳಲಾದ ಆಡಿಯೋ ಒಂದು ವೈರಲ್ ಆಗಿದ್ದು, ಅದರಲ್ಲಿ ಸೋಮಶೇಖರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಪೊಲೀಸರು ಬಂದು ನಿನ್ನ ಅರೆಸ್ಟ್ ಮಾಡುತ್ತಾರೆ. ನಾನು ಸ್ಟೇಶನ್ ನಲ್ಲೇ ಇದ್ದೇನೆ. ನೀನು ಹಣ ಕೊಡದೇ ಇದ್ದರೆ, ನಿನ್ನನ್ನು ಏನು ಬೇಕಾದರೂ ಮಾಡುವುದಕ್ಕೆ ರೆಡಿ ಎಂದು ನಯನಾರ ಧ್ವನಿ ಎಂದು ಹೇಳಲಾದ ಆಡಿಯೋದಲ್ಲಿ ಅವಾಜ್ ಹಾಕುವಂತಹ ಮಾತುಗಳು ಇವೆ.

    ನಯನಾ ಆರೋಪದಲ್ಲಿ ಹುರುಳಿಲ್ಲ. ನಾನು ಯಾರಿಗೂ ಹಣ ಕೊಡಬೇಕಾಗಿಲ್ಲ. ಚಾನಲ್ ಹೇಳಿದಂತೆ ನಾನು ಮಾಡಿದ್ದೇನೆ. ಆದರೆ, ನಯನಾ ಹಣದ ವಿಚಾರವಾಗಿ ಕೆಟ್ಟದ್ದಾಗಿ ಮಾತನಾಡಿದ್ದಾರೆ. ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ಬರೆದಿದ್ದಾರೆ ಸೋಮಶೇಖರ್. ಸದ್ಯ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ಎನ್.ಸಿ.ಆರ್ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿ APMC ಕಾಯ್ದೆ ವಾಪಸ್ ಇಲ್ಲ: ಸೋಮಶೇಖರ್

    ರಾಜ್ಯದಲ್ಲಿ APMC ಕಾಯ್ದೆ ವಾಪಸ್ ಇಲ್ಲ: ಸೋಮಶೇಖರ್

    ಬೆಳಗಾವಿ: ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ ವಾಪಸ್ ಇಲ್ಲ ಎಂದು ಸಹಕಾರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

    ಎಪಿಎಂಸಿ ಕಾಯ್ದೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಕಾಯ್ದೆಯಿಂದ ರೈತರಿಗೆ ಯಾವುದೇ ಅನಾನುಕೂಲ ಇಲ್ಲ. ರೈತರು ಎಲ್ಲಿ ಬೇಕಾದ್ರು ತಮ್ಮ ಉತ್ಪನ್ನಗಳನ್ನ ಮಾರಾಟ ಮಾಡಲು ಈ ಕಾಯ್ದೆಯಲ್ಲಿ ಅವಕಾಶ ಇರುತ್ತೆ. ಇದರಿಂದ ರೈತನಿಗೆ ಅನುಕೂಲ ಆಗುತ್ತೆ. ಈ ಮೊದಲು ಎಪಿಎಂಸಿ ಬಿಟ್ಟು ಹೊರಗೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ ಇತ್ತು. ಈಗ ಹೊಸ ಕಾಯ್ದೆಯಲ್ಲಿ ಅದನ್ನ ತೆಗೆಯಲಾಗಿದೆ ಎಂದು ತಿಳಿಸಿದರು.

    ಕರ್ನಾಟಕದಲ್ಲಿ ರೈತ ತಾನು ಬೆಳೆದ ಬೆಳೆ ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ಇದರಿಂದ ರೈತರಿಗೆ ಯಾವುದೇ ಧಕ್ಕೆ ಆಗೊಲ್ಲ. ಹೀಗಾಗಿ ಎಪಿಎಂಸಿ ಕಾಯ್ದೆ ವಾಪಸ್ ಪಡೆಯೊಲ್ಲ. ಎಪಿಎಂಸಿಗಳನ್ನ ಯಾವುದೇ ಕಾರಣಕ್ಕೂ ಮುಚ್ಚೋದಿಲ್ಲ. ಎಪಿಎಂಸಿ ಲಾಭದಲ್ಲಿ ನಡೆಯುತ್ತಿದೆ. ಲಾಭದಿಂದ ನಡೆಯೋ ಸಂಸ್ಥೆಯನ್ನ ಯಾಕೆ ಮುಚ್ಚೋಣ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಲವ್ ಇದ್ಮೇಲೆ ಜಿಹಾದ್ ಯಾಕೆ ಬರುತ್ತೆ – ಇಬ್ರಾಹಿಂ ತಿರುಗೇಟು

    ಕಾಂಗ್ರೆಸ್ ನಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋ ವಿಚಾರವಾಗಿ ಮಾತನಾಡಿದ ಅವರು, 7-8 ವರ್ಷಗಳಿಂದ ನಾವು ಅಧಿವೇಶನ ನೋಡುತ್ತಿದ್ದೇನೆ. ವಿರೋಧ ಪಕ್ಷದವರು ಇರೋದು ವಿರೋಧ ಮಾಡೋಕೆ. ವಿರೋಧ ಮಾಡೋದು ಬಿಟ್ಟು ಸಾರ್ವಜನಿಕ ಕುಂದು ಕೊರತೆ ಸರ್ಕಾರದ ಗಮನಕ್ಕೆ ತಂದು ಅದಕ್ಕೆ ಪರಿಹಾರ ಕೊಡಿಸೋ ಕೆಲಸ ವಿಪಕ್ಷ ಮಾಡಲಿ. ಇತ್ತೀಚೆಗೆ ಅಧಿವೇಶನದಲ್ಲಿ ಸಾರ್ವಜನಿಕ ವಿಷಯಗಳು ಚರ್ಚೆ ಆಗ್ತಿಲ್ಲ. ಈ ಬಗ್ಗೆ ನಾವು ಅರ್ಥ ಮಾಡಿಕೊಂಡು ಚರ್ಚೆ ಮಾಡಬೇಕು. ಬೆಳಗಾವಿ ಅಧಿವೇಶನ ಈ ಭಾಗದ ಸಮಸ್ಯೆ ಪರಿಹಾರಕ್ಕೆ ಮಾಡ್ತಿರೋದು. ಹೀಗಾಗಿ ವಿಪಕ್ಷಗಳು ವಿರೋಧ ಮಾಡೋದು ಬಿಟ್ಟು ಸಾರ್ವಜನಿಕ ವಿಷಯಗಳ ಬಗ್ಗೆ ಚರ್ಚೆ ಮಾಡಲಿ ಎಂದು ತಿರುಗೇಟು ನೀಡಿದರು.

    BJP - CONGRESS

    40% ಸರ್ಕಾರ ಎಂಬ ಕಾಂಗ್ರೆಸ್ ಆರೋಪ ಬಗ್ಗೆ ಮಾತನಾಡಿದ ಅವರು, 40% ಸರ್ಕಾರ ಅಂತ ಯಾರು ಸಾಬೀತು ಮಾಡಿದ್ದಾರೆ. ಯಾರ ಕಾಲದಲ್ಲಿ ಎಷ್ಟು ಇತ್ತು ಅಂತ ಎಲ್ಲರಿಗೂ ಗೊತ್ತಿದೆ. ಸುಮ್ಮನೆ ಆರೋಪ ಮಾಡಿದ್ರೆ ಆಗುತ್ತಾ ಸಾಬೀತು ಮಾಡಬೇಕು. ಸುಮ್ಮನೆ ಪ್ರಧಾನಿಗೆ ಪತ್ರ ಬರೆದರೆ ಆಗೊಲ್ಲ. ವಿಪಕ್ಷಗಳು ಏನೇ ಆರೋಪ ಮಾಡಲಿ, ದಾಖಲಾತಿ ಬಿಡುಗಡೆ ಮಾಡಲಿ. ನಾವು ಎಲ್ಲದ್ದಕ್ಕೂ ಸಿದ್ಧರಾಗಿದ್ದೇವೆ. ಕಾಂಗ್ರೆಸ್ ಏನು ಆರೋಪ ಮಾಡಿದ್ರು ಅದಕ್ಕೆ ಉತ್ತರ ಕೊಡೋದು ಸರ್ಕಾರ 100% ಸಿದ್ಧವಾಗಿದೆ. ಸುಮ್ಮನೆ ಆರೋಪ ಮಾಡಿದ್ರೆ ಒಪ್ಪಲು ಸಾಧ್ಯವಿಲ್ಲ. ಚರ್ಚೆ ಮಾಡಲಿ ಸರ್ಕಾರ ಸಮರ್ಥವಾಗಿ ಉತ್ತರ ನೀಡುತ್ತೆ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಪರೀಕ್ಷೆ ಬರೆದು ಬರುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ಮೇಲೆ ಚಾಕು ಇರಿತ

  • 116 ಕೋಟಿ ಒಡೆಯ ಸೋಮಶೇಖರ್ ಕಾಂಗ್ರೆಸ್‍ನಿಂದ ಸ್ಪರ್ಧೆ

    116 ಕೋಟಿ ಒಡೆಯ ಸೋಮಶೇಖರ್ ಕಾಂಗ್ರೆಸ್‍ನಿಂದ ಸ್ಪರ್ಧೆ

    ಚಿತ್ರದುರ್ಗ: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ 116 ಕೋಟಿ ರೂಪಾಯಿ ಆಸ್ತಿ ಒಡೆಯ ಬಿ.ಸೋಮಶೇಖರ್ ಕಣಕ್ಕಿಳಿದಿದ್ದಾರೆ.

    ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಸೋಮಶೇಖರ್ ಮೂಲತಃ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನವರಾಗಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಇವರು ನೆಲೆಸಿದ್ದು, ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಹೊಂದಿದ್ದಾರೆ. ಇವರಿಗೆ ಪತ್ನಿ ಮಂಜುಳಾ ಹಾಗೂ ಮೂವರು ಮಕ್ಕಳು ಇದ್ದಾರೆ.

    ಸೋಮಶೇಖರ್ ಅವರ ಹೆಸರಲ್ಲಿ 35 ಕೋಟಿ ರೂ. ಚರಾಸ್ತಿ ಹಾಗೂ 80 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. ಐದು ಬ್ಯಾಂಕುಗಳಲ್ಲಿ 6.32 ಕೋಟಿ ರೂ. ಠೇವಣಿ ಇಟ್ಟಿದ್ದಾರೆ. 28.52 ಕೋಟಿ ಹಣವನ್ನು ಉದ್ಯಮದಲ್ಲಿ ತೊಡಗಿಸಿದ್ದಾರೆ. ಇದರಲ್ಲಿ ಬಹುತೇಕ ಹಣವನ್ನು ಜಮೀನು ಮುಂಗಡ ನೀಡಿದ್ದಾರೆ. 30 ಲಕ್ಷ ಮೌಲ್ಯದ ರೇಂಜ್ ರೋವರ್ ಕಾರು, ಪತ್ನಿಗೆ ಇನ್ನೊವಾ ಕಾರು ಇದೆ. ಇದನ್ನೂ ಓದಿ: ಅಕಾಲಿಕ ಮಳೆ – ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಸಭೆ ಕರೆದ ಸಿಎಂ

    ಸೋಮಶೇಖರ್ ಅವರ ಪತ್ನಿ ಮಂಜುಳಾ ಅವರ ಬಳಿಯೂ 1.4 ಲಕ್ಷ ರೂ. ಮೌಲ್ಯದ ಮೊಬೈಲ್ ಫೋನ್, 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಇವೆ. 22.4 ಕೋಟಿ ಮೌಲ್ಯದ ಕೃಷಿಯೇತರ ಭೂಮಿ ಇದೆ. ಪ್ರಸ್ತುತ ಸೋಮಶೇಖರ್ ಅವರ ಬಳಿ 116 ಕೋಟಿ ರೂಪಾಯಿ ಆಸ್ತಿ ಹೊಂದಿರುವುದಾಗಿ ಘೋಷಣೆ ಮಾಡಿಕೊಂಡಿದ್ದಾರೆ. ಇವರ ಪತ್ನಿಯೂ ಕೂಡ 23 ಕೋಟಿ ರೂ. ಆಸ್ತಿಯ ಒಡತಿ ಎಂದು ಘೋಷಿಸಿಕೊಂಡಿದ್ದಾರೆ.

    ಅದು ಅಲ್ಲದೇ ಮಂಜುಳಾ ಅವರು 91 ಲಕ್ಷ ಹಾಗೂ ಸೋಮಶೇಖರ್ 71 ಲಕ್ಷ ರೂ. ಸಾಲ ಮಾಡಿದ್ದಾರೆಂದು ಇಂದು ಸಲ್ಲಿಸಿರುವ ನಾಮಪತ್ರದ ಆಸ್ತಿ ವಿವರಣೆಯಲ್ಲಿ ಘೋಷಿಸಿದ್ದಾರೆ. ಇದನ್ನೂ ಓದಿ: ತುಂಗಭದ್ರಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಜಾನುವಾರುಗಳ ರಕ್ಷಣೆ