Tag: ಸೋಮಶೇಖರ ರೆಡ್ಡಿ

  • ಇದು ದರದ ಪ್ರಶ್ನೆ ಅಲ್ಲ, ಬೇರೆಯವರಿಗೆ ನಾವು ಮಾರುಕಟ್ಟೆ ಬಿಟ್ಟು ಕೊಟ್ಟಂತೆ: ಸೋಮಶೇಖರ ರೆಡ್ಡಿ

    ಇದು ದರದ ಪ್ರಶ್ನೆ ಅಲ್ಲ, ಬೇರೆಯವರಿಗೆ ನಾವು ಮಾರುಕಟ್ಟೆ ಬಿಟ್ಟು ಕೊಟ್ಟಂತೆ: ಸೋಮಶೇಖರ ರೆಡ್ಡಿ

    ಬೆಂಗಳೂರು: ಇದು ದರದ ಪ್ರಶ್ನೆ ಅಲ್ಲ. ಬೇರೆಯವರಿಗೆ ಮಾರುಕಟ್ಟೆ ಬಿಟ್ಟು ಕೊಟ್ಟಂತೆ ಎಂದು ಕೆಎಂಎಫ್‌ (KMF) ಮಾಜಿ ಅಧ್ಯಕ್ಷ ಸೋಮಶೇಖರ ರೆಡ್ಡಿ (Somashekara Reddy) ಪ್ರತಿಕ್ರಿಯಿಸಿದ್ದಾರೆ.

    ತಿರುಪತಿ ಲಡ್ಡುಗೆ ನಂದಿನಿ ತುಪ್ಪದ ಟೆಂಡರ್‌ (No More Nandini Ghee for Tirupati Laddus) ಕೈತಪ್ಪಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಂದಿನಿ ತುಪ್ಪ ತಿರುಪತಿ ದೇವರ ಸಂಬಂಧ ಅವಿನಾಭಾವ. ಸರಬರಾಜು ನಿಲ್ಲಿಸಿದರೆ ರೈತರಿಗೆ ತೊಂದರೆಯಾಗಲಿದೆ. ಅಷ್ಟೇ ಅಲ್ಲದೇ ನಂದಿನಿಯ ಅಂತರಾಷ್ಟ್ರೀಯ ಮಾರುಕಟ್ಟೆ ವಿಸ್ತರಣೆಗೆ ಸಮಸ್ಯೆಯಾಗಲಿದೆ ಎಂದರು. ಇದನ್ನೂ ಓದಿ: ತಿರುಪತಿ ಲಡ್ಡುಗೆ ಇಲ್ಲ ನಂದಿನಿ ತುಪ್ಪ-ಕಾಂಗ್ರೆಸ್‌ ತನ್ನ ಅಜೆಂಡಾಕ್ಕಾಗಿ ಸುವರ್ಣ ಕರ್ನಾಟಕವನ್ನು ನಾಶ ಮಾಡಲು ಮುಂದಾಗಿದೆ: ಸಿಟಿ ರವಿ

     

    ಈ ಹಿಂದೆ ಒಂದು ಬಾರಿ ಟಿಟಿಡಿಯವರು (TTD) ದರ ಕಡಿಮೆ ಎಂದು ಬೇರೆ ಬ್ರ್ಯಾಂಡ್ ತುಪ್ಪ ಬಳಸಿದ್ದರು. ಆದರೆ ಗುಣಮಟ್ಟ ಕಡಿಮೆ ಎಂದು ಅವರಿಗೆ ಅನಿಸಿತು. ಆಮೇಲೆ ನಾನೇ ಖುದ್ದು ನಮ್ಮ ನಂದಿನಿ ತುಪ್ಪ ತೆಗೆದುಕೊಳ್ಳುವಂತೆ ಮನವೊಲಿಸಿದ್ದೆ ಎಂದು ತಿಳಿಸಿದರು.

    ಟಿಟಿಡಿಯರಿಗೆ ನಾವು ಮಾರುಕಟ್ಟೆ ದರಕ್ಕಿಂತ ಎರಡು ರೂಪಾಯಿ ಕಡಿಮೆಗೆ ಕೊಡುತ್ತಿದ್ದೆವು. ದಯವಿಟ್ಟು ಕೆಎಂಎಫ್‌ ಈ ಟೆಂಡರ್‌ ಅನ್ನು ಬಿಡಬಾರದು. ನಾನು ಖುದ್ದು ಭೀಮಾ ನಾಯ್ಕ್ (Bhima Nayak) ಜೊತೆ ಮಾತನಾಡುತ್ತೇನೆ. ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ನಂದಿನಿ ತುಪ್ಪ ಕಳುಹಿಸಬೇಕು ಎಂದರು.‌

    ಸುಮಾರು 50 ವರ್ಷಗಳ ಬಳಿಕ ತಿರುಪತಿ ತಿರುಮಲ ದೇವಸ್ಥಾನ ಮಂಡಳಿ ಕೆಎಂಎಫ್‌ನಿಂದ ನಂದಿನಿ ತುಪ್ಪದ ಖರೀದಿಯನ್ನು ಸ್ಥಗಿತ ಮಾಡಿದೆ. ಇದರಿಂದಾಗಿ ವಿಶ್ವ ಪ್ರಸಿದ್ಧ ಲಾಡುಗಳಲ್ಲಿ ಇನ್ನು ಮುಂದೆ ನಂದಿನಿ ತುಪ್ಪದ ಘಮ ಇರುವುದಿಲ್ಲ. ಈ ಬಗ್ಗೆ ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿದ ಕರ್ನಾಟಕ ಹಾಲು ಮಹಾಮಂಡಳ ಅಧ್ಯಕ್ಷ ಭೀಮಾನಾಯ್ಕ್‌, ಕೆಎಂಎಫ್ ಸಲ್ಲಿಸಿದ ತುಪ್ಪದ ದರ ಪ್ರಸ್ತಾವನೆಯನ್ನು ಟಿಟಿಡಿ ಒಪ್ಪಿಕೊಂಡಿಲ್ಲ. ತಿರುಮಲ ಆಡಳಿತ ಮಂಡಳಿ ನಿಗದಿ ಮಾಡಿದ ಬೆಲೆಗೆ ತುಪ್ಪ ಪೂರೈಕೆ ಮಾಡಲು ಸಾಧ್ಯವಾಗದ ಕಾರಣ ಟೆಂಡರ್‌ನಿಂದ ಕೆಎಂಎಫ್‌ ದೂರ ಉಳಿದಿದೆ ಎಂದಿದ್ದಾರೆ.

    ಆರು ತಿಂಗಳಿಗೆ 14 ಲಕ್ಷ ಕೆಜಿ ತುಪ್ಪ ನಂದಿನಿಯಿಂದ ಸರಬರಾಜು ಆಗುತ್ತಿತ್ತು. ಈ ಹಿಂದೆ ರಿಯಾಯಿತಿ ದರದಲ್ಲಿ ತಿಮ್ಮಪ್ಪನ ಸನ್ನಿಧಿಗೆ ತುಪ್ಪ ಹೋಗುತ್ತಿತ್ತು. ಆದರೆ ಈಗ ಕೆಎಂಎಫ್‌ ಹಾಲಿನ ಬೆಲೆ ಏರಿಕೆ ಮಾಡಿದ್ದರಿಂದ ತಪ್ಪದ ದರವನ್ನು ಏರಿಸಿತ್ತು. ದರದ ಗೊಂದಲದಿಂದ ಟೆಂಡರ್‌ನಲ್ಲಿ ಕೆಎಂಎಫ್‌ ಭಾಗವಹಿಸರಲಿಲ್ಲ


    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾನು ಮನಸ್ಸು ಮಾಡಿದ್ರೆ ಇವತ್ತು ಒಂದು ದಿನ ಆದ್ರು ಸಿಎಂ ಆಗುವೆ: ಜನಾರ್ದನ ರೆಡ್ಡಿ ಹೊಸ ಬಾಂಬ್

    ನಾನು ಮನಸ್ಸು ಮಾಡಿದ್ರೆ ಇವತ್ತು ಒಂದು ದಿನ ಆದ್ರು ಸಿಎಂ ಆಗುವೆ: ಜನಾರ್ದನ ರೆಡ್ಡಿ ಹೊಸ ಬಾಂಬ್

    ಬಳ್ಳಾರಿ: ನಾನು ಮನಸ್ಸು ಮಾಡಿದ್ರೆ ಇವತ್ತು ಒಂದು ದಿನ ಆದ್ರು ಸಿಎಂ ಆಗುವೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.

    ಶಾಸಕ ಸೋಮಶೇಖರ್ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮನಬಿಚ್ಚಿ ಮಾತನಾಡಿದ ಅವರು, ರೆಡ್ಡಿ, ರಾಮುಲು ಸಹೋದರರಿಗೆ ಇಂದು ದುಡ್ಡಿನ ಅವಶ್ಯಕತೆ ಇಲ್ಲ. ನನಗೆ ಶಾಸಕ ಆಗಬೇಕು. ಮಂತ್ರಿ ಆಗಬೇಕು ಅಂತಾ ಆಸೆಯಿಲ್ಲ. ನಾನು ಮನಸ್ಸು ಮಾಡಿದ್ರೆ ಇವತ್ತು ಒಂದು ದಿನ ಆದ್ರು ಸಿಎಂ ಆಗುವೆ ಎಂದು ಶಾಂಕಿಂಗ್ ಹೇಳಿಕೆ ಕೊಟ್ಟಿದ್ದಾರೆ.

    ಲೋಕಸಭಾ ಕ್ಷೇತ್ರದ ಕೊನೆಯ ಸದಸ್ಯರಾಗಿ ಕರುಣಾಕರ ರೆಡ್ಡಿ ಕೆಲಸ ಮಾಡಿದ್ದಾರೆ. ಸೋಮಶೇಖರ್ ರೆಡ್ಡಿ ಬಳ್ಳಾರಿ ನಗರಸಭೆ ಅಧ್ಯಕ್ಷರಿಂದ ಇದೀಗ ಶಾಸಕರಾಗಿ ಕೆಲಸ ಮಾಡ್ತಿದ್ದಾರೆ. ನನಗಂತೂ ಯಾರಿಗೂ ಕೊಡಲಾರದಷ್ಟು ಕಷ್ಟ ಕೊಟ್ಟಿದ್ದಾರೆ. ಇಷ್ಟಾದ್ರೂ ನಾನಿಂದು ನಿಮ್ಮ ಮುಂದೆ ಬಂದು ನಿಲ್ಲಲು ಬಳ್ಳಾರಿ ಕನಕದುರ್ಗಮ್ಮ ದೇವಿ ವಿಶೇಷ ಆಶೀರ್ವಾದ ನೀಡಿದ್ದಾಳೆ ಎಂದು ದೇವರನ್ನು ನೆನೆದಿದ್ದಾರೆ. ಇದನ್ನೂ ಓದಿ: ನಾನ್ ವೆಜ್ ಪ್ರಿಯರು ಮರೆಯಲಾಗದ ಹೊಸ ರುಚಿ ‘ಸಿಗಡಿ ಪಲ್ಯ’ – ಟ್ರೈ ಮಾಡಿ

    ನನ್ನ ಜಾಗದಲ್ಲಿ ಬೇರೆ ಯಾರಾದರೂ ಇದ್ದಿದ್ದರೆ ಇಷ್ಟೊಂದು ಸಮಸ್ಯೆ ಎದುರಿಸಲಾಗುತ್ತಿರಲಿಲ್ಲ. ಅಷ್ಟು ತೊಂದರೆ ನನಗೆ ನೀಡಿದ್ದಾರೆ. ರೆಡ್ಡಿಯವರೇ ನಿಮಗೆ ತೊಂದರೆ ಮಾಡಬೇಕೆಂದು ಮೇಲಿನವರ ಆದೇಶ ಇದೆ ಎಂದು ಸಿಬಿಐನವರೇ ನನಗೆ ಹೇಳಿದ್ರು. ಆದರೆ ಬಳ್ಳಾರಿಯ ಜನರಿಗೆ ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ ಎಂದು ಸಿಬಿಐನವರು ಹೇಳಿದ್ದರು ಎಂದು ತಿಳಿಸಿದ್ದಾರೆ.

    Live Tv

  • ಬಳ್ಳಾರಿ ಇಬ್ಭಾಗ ಮಾಡಿದ ಸಿಟ್ಟು ಜನರಲ್ಲಿದೆ, ನನಗೆ ಸಚಿವ ಸ್ಥಾನ ಕೊಡಿ: ಸೋಮಶೇಖರ ರೆಡ್ಡಿ

    ಬಳ್ಳಾರಿ ಇಬ್ಭಾಗ ಮಾಡಿದ ಸಿಟ್ಟು ಜನರಲ್ಲಿದೆ, ನನಗೆ ಸಚಿವ ಸ್ಥಾನ ಕೊಡಿ: ಸೋಮಶೇಖರ ರೆಡ್ಡಿ

    ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ.  ಒಬ್ಬರಾದ ಬಳಿಕ ಒಬ್ಬರು ನನಗೆ ಸಚಿವ ಸ್ಥಾನ ಬೇಕೇ ಬೇಕೆಂದು ದೆಹಲಿಗೆ ಪ್ರಯಾಣ ಮಾಡುತ್ತಿದ್ದಾರೆ. ಈ ಮೊದಲು ಬಳ್ಳಾರಿ ನಗರ  ಶಾಸಕ ಸೋಮಶೇಖರ್ ರೆಡ್ಡಿ ದೆಹಲಿ ಪ್ರವಾಸ ಮಾಡಿದ್ರೆ. ಈಗ ಸಿರಗುಪ್ಪಾ ಶಾಸಕ ಸೋಮಲಿಂಗಪ್ಪ ಅವರು ದೆಹಲಿ ಪ್ರವಾಸ ಮಾಡಿ ಬಂದಿದ್ದಾರೆ.

    ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರಚನೆಯಾದ ಬಳಿಕ, ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ. ಸಚಿವಗಿರಿಗಾಗಿ ಲಾಬಿ ನಡೆಸುವಲ್ಲಿ ಜಿಲ್ಲೆಯ ಶಾಸಕರು ಕೂಡ ಹೊರತಾಗಿಲ್ಲ. ಈ ಮೊದಲು ಬಿಜೆಪಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ದೆಹಲಿ ಪ್ರವಾಸ ಮಾಡಿದ್ದ ಅವರು, ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಬಂದಿದ್ದಾರೆ. ಇದನ್ನೂ ಓದಿ: ಸಚಿವ ಸಂಪುಟ ರಚನೆಯಲ್ಲಿ ಮಧ್ಯ ಪ್ರವೇಶಿಸುವುದಿಲ್ಲ: ಬಿ.ಎಸ್ ಯಡಿಯೂರಪ್ಪ

    ರಾಜ್ಯ ಬಿಜೆಪಿ ವಿಕ್ಷಕರಾಗಿ ಆಗಮಿಸಿದ್ದ ಧರ್ಮೇಂದ್ರ ಪ್ರಧಾನ್ ಹಾಗೂ ಕಿಶನ್ ರೆಡ್ಡಿ ಅವರನ್ನು ಶಾಸಕ ಸೋಮಶೇಖರ್ ರೆಡ್ಡಿ ಭೇಟಿ ಮಾಡಿ ಜಿಲ್ಲೆಗೆ ಒಂದು ಸಚಿವ ಸ್ಥಾನ ಕೊಡಿ ಎಂದು ಮನವಿ ಮಾಡಿದ್ದಾರೆ. ಗಣಿ ನಾಡಿಗೆ ಒಂದು ಮಂತ್ರಿ ಸ್ಥಾನ ನಿಡುವಂತೆ ವರಿಷ್ಠರ ಮನವಿ ಮಾಡಿದ್ದು, ಒಂದು ಕಾಲದಲ್ಲಿ ಬಳ್ಳಾರಿಯಿಂದ ಮೂವರು ಸಚಿವರಾಗಿದ್ರು, ಈಗ ಒಬ್ಬರೂ ಇಲ್ಲ. ಬಳ್ಳಾರಿಗೆ ಸರ್ಕಾರದಲ್ಲಿ ಪ್ರಾತಿನಿಧ್ಯ ಸಿಗದ ಹಿನ್ನೆಲೆ ಗಣಿ ನಾಡಲ್ಲಿ ಬಿಜೆಪಿಗೆ ಹಿನ್ನಡೆಯಾಗುತ್ತಿದೆ. ಇದೇ ಕಾರಣಕ್ಕೆ ಪಾಲಿಕೆ ಚುನಾವಣೆ ಕೂಡಾ ಸೋತಿದ್ದೇವೆ, ಬಳ್ಳಾರಿ ಇಬ್ಬಾಗ ಮಾಡಿದ ಸಿಟ್ಟು ಜನರಲ್ಲಿದೆ. ನನಗೆ ಸಚಿವ ಸ್ಥಾನ ನೀಡಿ ಜಿಲ್ಲೆಯಲ್ಲಿ ಬಿಜೆಪಿ ಮನ್ನಣೆ ಸಿಗುವಂತೆ ಮಾಡಿ ಅಂತಾ ವಿಕ್ಷಕರಾಗಿ ಆಗಮಿಸಿದ್ದ ಧರ್ಮೇಂದ್ರ ಪ್ರಧಾನ್ ಹಾಗೂ ಕಿಶನ್ ರೆಡ್ಡಿಗೆ ಮನವಿ ಮಾಡಿದ ರೆಡ್ಡಿ ಮನವಿ ಮಾಡಿದ್ದಾರೆ.

  • ಉಪ್ಪಿ ಅಪ್ಪಟ ಅಭಿಮಾನಿಯ ಆಸಿಂಕೋಜಿಲ್ಲ!

    ಉಪ್ಪಿ ಅಪ್ಪಟ ಅಭಿಮಾನಿಯ ಆಸಿಂಕೋಜಿಲ್ಲ!

    ಹೊಸ ವರ್ಷದ ಹೊಸ್ತಿಲಾಚೆಗೂ ಕನ್ನಡ ಚಿತ್ರರಂಗಕ್ಕೆ ಹೊಸತನದ ಗಂಧ ಗಾಳಿ ಅನೂಚಾನವಾಗಿ ಹಬ್ಬಿಕೊಂಡಿದೆ. ಕನ್ನಡ ಚಿತ್ರರಂಗದ ಘನತೆಯನ್ನು ಪರಭಾಷಾ ಚಿತ್ರರಂಗದ ಮಂದಿಯೂ ಕಣ್ಣರಳಿಸಿ ನೋಡಬೇಕೆಂಬ ಮನಸ್ಥಿತಿ ಇದೆಯಲ್ಲಾ? ಅಂಥಾದ್ದರ ಭೂಮಿಕೆಯಲ್ಲಿ ಎಳಿಕೊಂಡ ಸಿನಿಮಾಗಳು ಪ್ರೇಕ್ಷಕರಲ್ಲೊಂದು ಬೆರಗು ಮೂಡಿಸುವಷ್ಟು ಶಕ್ತವಾಗಿರುತ್ತವೆಂಬ ನಂಬಿಕೆ ಬಲವಾಗಿದೆ. ಅದನ್ನು ಈ ವರ್ಷಾರಂಭದಲ್ಲಿಯೇ ನಿಜವಾಗಿಸುವಂತಿರೋ ‘ಆಸಿಂಕೋಜಿಲ್ಲ’ ಎಂಬ ಚಿತ್ರ ಈ ವಾರ ಪ್ರೇಕ್ಷಕರ ಮುಂದೆ ಪ್ರತ್ಯಕ್ಷವಾಗಲಿದೆ.

    ಹೆಸರಲ್ಲಿಯೇ ಅದೆಂಥಾದ್ದೋ ನಿಗೂಢ, ಆಕರ್ಷಣೆಯನ್ನು ಬಚ್ಚಿಕೊಂಡಿರೋ ಆಸಿಂಕೋಜಿಲ್ಲ ಶಮನ್ ನಿರ್ದೇಶನದ ಚೊಚ್ಚಲ ಚಿತ್ರ. ವಿಶೇಷವೆಂದರೆ ಅವರು ರಿಯಲ್ ಸ್ಟಾರ್ ಉಪೇಂದ್ರರ ಅಪ್ಪಟ ಅಭಿಮಾನಿ. ಉಪ್ಪಿ ಅಂದರೇನೇ ಹೊಸತನ ಎಂಬಂಥಾ ಭಾವನೆ ಇದೆ. ಈ ಕಾರಣದಿಂದಲೇ ಹೊಸದಾಗಿ ಎಂಟ್ರಿ ಕೊಡುವ ಅದೆಷ್ಟೋ ಯುವ ನಿರ್ದೇಶಕರ ಪಾಲಿಗೆ ಉಪೇಂದ್ರ ಎವರ್ ಗ್ರೀನ್ ರೋಲ್ ಮಾಡೆಲ್ ಬಹುಶಃ ಶಮನ್ ನಿರ್ದೇಶನದ ವಿಚಾರದಲ್ಲಿ ಉಪ್ಪಿಯನ್ನೇ ಆರಾಧಿಸದೇ ಹೋಗಿದ್ದರೆ ಒಂದು ಹೊಸ ಬಗೆಯ ಕಥೆಯೊಂದಿಗೆ ಆಸಿಂಕೋಜಿಲ್ಲ ಎಂಬ ಕಥೆ ರೂಪುಗೊಳ್ಳುವುದು ಸಾಧ್ಯವೇ ಇರುತ್ತಿರಲಿಲ್ಲ.

    ಬೆಂಗಳೂರಿನವರೇ ಆದ ಶಮನ್‍ಗೆ ಉಪ್ಪಿಯ ಗುಂಗು ಹತ್ತಿಕೊಂಡಿದ್ದು ಶಾಲಾ ಕಾಲೇಜು ದಿನಗಳಲ್ಲಿಯೇ. ಉಪೇಂದ್ರ ಕಾರಣದಿಂದಲೇ ಎಲ್ಲವನ್ನೂ ಭಿನ್ನ ದೃಷ್ಟಿಕೋನದಿಂದ ನೋಡುವ ಕಲೆ ಸಿದ್ಧಿಸಿಕೊಂಡಿದ್ದ ಶಮನ್ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಪರಭಾಷಾ ಚಿತ್ರರಂಗದ ಮಂದಿಯೂ ಬೆಕ್ಕಸ ಬೆರಗಾಗುವಂತಿರಬೇಕೆಂಬ ಹಂಬಲದೊಂದಿಗೇ ಈ ಕಥೆಯನ್ನು ಸಿದ್ಧಪಡಿಸಿದ್ದರಂತೆ. ಹಾಗಂತ ಪ್ರಯೋಗಾತ್ಮಕ ವಿಚಾರಗಳನ್ನು ಕೈಗೆತ್ತಿಕೊಂಡು ಕೆಲ ವರ್ಗದ ಪ್ರೇಕ್ಷಕರಿಗೆ ಮಾತ್ರವೇ ಆಸಿಂಕೋಜಿಲ್ಲ ಚಿತ್ರವನ್ನು ಸೀಮಿತಗೊಳಿಸುವ ಇರಾದೆಯೂ ಅವರಿಗಿರಲಿಲ್ಲ. ಈ ದೆಸೆಯಿಂದ ಎಲ್ಲ ವರ್ಗ, ವಯೋಮಾನದ ಪ್ರೇಕ್ಷಕರಿಗೂ ಇಷ್ಟವಾಗುವಂಥಾ ಹೂರಣದೊಂದಿಗೆ ಈ ಸಿನಿಮಾವನ್ನು ಅಣಿಗೊಳಿಸಿದ್ದಾರಂತೆ.

    ಸೋಮಶೇಖರ ರೆಡ್ಡಿ ನಿರ್ಮಾಣ ಮಾಡಿರುವ ಆಸಿಂಕೋಜಿಲ್ಲ ಎಂಬ ಪದವೇ ಎಲ್ಲರೂ ತಲೆ ಕೆದರಿಕೊಂಡು ಅರ್ಥ ಹುಡುಕುವಂತೆ ಮಾಡಿದೆ. ತೀರಾ ಗೂಗಲ್ಲಿನಲ್ಲಿ ಹುಡುಕಿದರೂ ಈ ಚಿತ್ರದ ವಿವರಗಳು ಮಾತ್ರವೇ ಸಿಗುತ್ತವೆ. ಹಾಗಾದರೆ ಈ ಪದದ ಅರ್ಥವೇನು? ಕಥಾ ಹಂದರವೆಂಥಾದ್ದೆಂಬ ಪ್ರಶ್ನೆಗಳು ಪ್ರೇಕ್ಷಕರ ವಲಯದಲ್ಲಿ ಮಿಜಿಗುಡಲಾರಂಭಿಸಿವೆ. ಅದೆಲ್ಲವನ್ನೂ ಗೌಪ್ಯವಾಗಿಡುವ ಮೂಲಕ ಚಿತ್ರತಂಡ ಕುತೂಹಲವನ್ನು ಮತ್ತಷ್ಟು ತೀವ್ರವಾಗಿಸಿದೆ. ಈ ವಾರವೇ ಅಂಥಾ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಗಲಿದೆ. ಆ ಉತ್ತರ ಅತ್ಯಾಕರ್ಷಕವಾಗಿರಲಿದೆ ಎಂಬ ಭರವಸೆಯನ್ನಂತೂ ಚಿತ್ರತಂಡ ಆತ್ಮವಿಶ್ವಾಸದಿಂದಲೇ ಕೊಡುತ್ತಿದೆ.

  • ಪಾಕ್ ಗಡಿಯಲ್ಲಿ ಜಮೀರ್ ಗಂಡಸ್ತನ ತೋರಿಸಲಿ: ಯತ್ನಾಳ್

    ಪಾಕ್ ಗಡಿಯಲ್ಲಿ ಜಮೀರ್ ಗಂಡಸ್ತನ ತೋರಿಸಲಿ: ಯತ್ನಾಳ್

    ವಿಜಯಪುರ: ಶಾಸಕ ಸೋಮಶೇಖರ ರೆಡ್ಡಿ ನಿವಾಸ ಎದುರು ಧರಣಿ ನಡೆಸಲು ಮುಂದಾಗಿದ್ದ ಮಾಜಿ ಸಚಿವ ಜಮೀರ್ ಅಹ್ಮದ್ ಅವರಿಗೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಟಾಂಗ್ ನೀಡಿದ್ದು, ಜಮೀರ್ ಪಾಕಿಸ್ತಾನದ ಗಡಿಯಲ್ಲಿ ತಮ್ಮ ಗಂಡಸ್ತನ ತೋರಿಸಲಿ ಎಂದು ಕಿಡಿಕಾರಿದ್ದಾರೆ.

    ಇಂದು ಐತಿಹಾಸಿಕ ಸಿದ್ದೇಶ್ವರ ಜಾತ್ರೆಗೆ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಚಾಲನೆ ನೀಡಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಜಮೀರ್ ಅವರಿಗೆ ತಾಕತ್ತು ಇದ್ರೆ ಪಾಕಿಸ್ತಾನದ ಗಡಿಯಲ್ಲಿ ತಮ್ಮ ಗಂಡಸ್ತನ ತೋರಿಸಲಿ. ಬಳ್ಳಾರಿಗೆ ಬರುವ ಮೂಲಕ ಷಂಡನಂತೆ ಜಮೀರ್ ಮಾಡ್ತಿದ್ದಾರೆ ಎಂದರು. ಇದನ್ನು ಓದಿ: ಧರಣಿ ಮಾಡಿದಾಕ್ಷಣ ದೊಡ್ಡ ನಾಯಕನಾಗುತ್ತೀಯಾ?- ಜಮೀರ್‌ಗೆ ಸಚಿವ ಶ್ರೀರಾಮುಲು ತಿರುಗೇಟು

    ಜಮೀರ್ ಬಳ್ಳಾರಿಗೆ ಆಗಮಿಸುವ ಮುನ್ನ ಮೊದಲು ಸಿಎಂ ಯಡಿಯೂರಪ್ಪ ಅವರ ನಿವಾಸ ಎದುರು ವಾಚ್ ಮ್ಯಾನ್ ಆಗಿ ಕಾರ್ಯನಿರ್ವಹಿಸಲಿ. ಮೊದಲು ಜಮೀರ್ ದೇಶದ ವಿರುದ್ಧ ಪ್ರಚೋಚದನಕಾರಿ ಹೇಳಿಕೆ ನೀಡಿ ಮಾತನಾಡಿದ್ದಾರೆ. ಆದ್ದರಿಂದ ಮೊದಲು ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಜಮೀರ್ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

  • ನಾವು ಊದಿದ್ರೆ ನೀವೆಲ್ಲ ಹಾರಿ ಹೋಗ್ತೀರಿ, ಸಿಎಎ ವಿರೋಧಿಗಳನ್ನು ಶೂಟ್ ಮಾಡ್ಬೇಕು – ಸೋಮಶೇಖರ ರೆಡ್ಡಿ

    ನಾವು ಊದಿದ್ರೆ ನೀವೆಲ್ಲ ಹಾರಿ ಹೋಗ್ತೀರಿ, ಸಿಎಎ ವಿರೋಧಿಗಳನ್ನು ಶೂಟ್ ಮಾಡ್ಬೇಕು – ಸೋಮಶೇಖರ ರೆಡ್ಡಿ

    ಬಳ್ಳಾರಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ಮಾಡಿದ ಎಲ್ಲರನ್ನೂ ಶೂಟ್ ಮಾಡಿದ್ದರೆ ಅನುಕೂಲ ಆಗಿರೋದು. ದೇಶದ ಜನಸಂಖ್ಯೆಯಾದರೂ ಕಡಿಮೆಯಾಗುತ್ತಿತ್ತು. ನೀವು ನಮ್ಮ ದೇಶದಲ್ಲಿ ಇರಬೇಕು ಅಂದ್ರೆ ನಾವು ಹೇಳಿದ ಹಾಗೆ ಕೇಳಬೇಕು ಎನ್ನುವ ಮೂಲಕ ಶಾಸಕ ಸೋಮಶೇಖರ ರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಬಳ್ಳಾರಿಯಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿರುವ ಶಾಸಕ ಸೋಮಶೇಖರ ರೆಡ್ಡಿ, ಪೌರತ್ವ ಕಾಯ್ದೆಯನ್ನು ವಿರೋಧಿಸುವವರು ಜಾಸ್ತಿ ನಕ್ರಾ ಮಾಡಿದರೆ ಸರಿ ಇರಲ್ಲ. ನಾವು ಶೇ.80 ರಷ್ಟು ಜನ ಇದ್ದೇವೆ. ಹಿಂದುಗಳು ಖಡ್ಗ ಹಿಡಿದುಕೊಂಡು ಬಂದರೆ ನಿಮಗೇ ಕಷ್ಟವಾಗುತ್ತದೆ. ಸಿಎಎ ವಿರೋಧಿಸಿದರೆ ರೊಚ್ಚಿಗೇಳಬೇಕಾಗುತ್ತದೆ. ನಾವು ಶೇ.80ರಷ್ಟು ಜನರಿದ್ದೇವೆ. ನೀವು ಕೇವಲ ಶೇ.17 ರಷ್ಟಿದ್ದೀರಿ. ನಾವು ಉಫ್ ಎಂದು ಊದಿದರೆ ನೀವೆಲ್ಲ ಹಾರಿ ಹೋಗುತ್ತೀರ ಎಂದು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುವವರಿಗೆ ಮತ್ತು ಮುಸ್ಲಿಮರಿಗೆ ಎಚ್ಚರಿಕೆ ನೀಡಿದ್ದಾರೆ.

    ಪೌರತ್ವ ಕಾಯ್ದೆ ಬೆಂಬಲಿಸಿ ನಡೆದ ಮೆರವಣಿಗೆಯಲ್ಲಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಈ ಎಚ್ಚರಿಕೆ ಮಾತುಗಳನ್ನು ಆಡಿದ್ದಾರೆ. ಕಾಂಗ್ರೆಸ್ ಪಕ್ಷದ ಬೇಕೂಫ್‍ಗಳು ಹೇಳುವುದನ್ನು ಕೇಳಿ ನೀವು ಬೀದಿಗೆ ಇಳಿಯಬೇಡಿ. ನಾವು ಶೇ.80 ರಷ್ಟಿದ್ದೇವೆ. ನಾವು ತಿರುಗಿ ಬಿದ್ದರೆ ನಿಮ್ಮ ಪರಿಸ್ಥಿತಿ ಏನಾಗುತ್ತದೆ ಎಂಬ ಎಚ್ಚರವಿರಲಿ. ಇದು ನಮ್ಮ ದೇಶ ಎಂಬುದನ್ನು ಮರೆಯಬೇಡಿ. ನೀವು ನಮ್ಮ ದೇಶದಲ್ಲಿ ಇರಬೇಕಾದರೆ ನಮ್ಮ ಪದ್ಧತಿ ಪ್ರಕಾರ ಇರಬೇಕು. ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡಿದರೆ ಅದಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದಿದ್ದಾರೆ.

    ಯಾಕೆ ಇಲ್ಲಿ ನಿಮಗೆ ಬಾಂಗ್ಲಾ ಮತ್ತು ಪಾಕಿಸ್ತಾನದ ಹುಳಾ ಕಡಿಯತ್ತಾ? ನಿಮಗೆ ಈ ಕಾಯ್ದೆ ಜಾರಿಗೆ ತಂದರೆ ಯಾಕೆ ನೋವಾಗುತ್ತೆ. ನಿಮಗೆ ಏನಾದರೂ ನೋವು ಆದರೆ ನಮ್ಮ ಹಿಂದೂ ಡಾಕ್ಟರ್ ಇದ್ದಾರೆ ಸರಿಯಾಗಿ ಮಾಡಿ ಕಳಿಸುತ್ತಾರೆ. ಈ ನೆಲದಲ್ಲಿ ನಾವು ಹೇಳಿದ ಹಾಗೆ ಕೇಳಬೇಕು ಎನ್ನುವ ಮೂಲಕ ರೆಡ್ಡಿ ಅವರು ಆರಿದ ಬೆಂಕಿಗೆ ಮತ್ತೆ ಕಿಡಿ ಹಚ್ಚಿದ್ದಾರೆ.

  • ಒಂದು ವರ್ಷದಲ್ಲಾಗುವ ಅಭಿವೃದ್ಧಿ 100 ದಿನಗಳಲ್ಲಿ ಮಾಡಿದ್ದಾರೆ ಬಿಎಸ್‍ವೈ: ಸೋಮಶೇಖರ ರೆಡ್ಡಿ

    ಒಂದು ವರ್ಷದಲ್ಲಾಗುವ ಅಭಿವೃದ್ಧಿ 100 ದಿನಗಳಲ್ಲಿ ಮಾಡಿದ್ದಾರೆ ಬಿಎಸ್‍ವೈ: ಸೋಮಶೇಖರ ರೆಡ್ಡಿ

    – ನಮ್ಮ ಸರ್ಕಾರದಿಂದ ಅಭಿವೃದ್ಧಿಪರ್ವ ರಾಜ್ಯದಲ್ಲಿ ಆರಂಭ

    ಬಳ್ಳಾರಿ: ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ನಂತರ ಅಭಿವೃದ್ಧಿ ಪರ್ವವೇ ಆರಂಭವಾಗಿದೆ. ಒಂದು ವರ್ಷದಲ್ಲಿ ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಕೇವಲ 100 ದಿನಗಳಲ್ಲಿ ನಮ್ಮ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಾಡಿದ್ದಾರೆ ಎಂದು ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು ಹೇಳಿದ್ದಾರೆ.

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬೃಹತ್ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿದೆ. ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಪ್ರವಾಹ ಸಂದರ್ಭದಲ್ಲಿ ಸರ್ಕಾರ ಕೈಗೊಂಡ ಕಾರ್ಯಗಳ ಬೃಹತ್ ಛಾಯಾಚಿತ್ರ ಪ್ರದರ್ಶನಕ್ಕೆ ಸೋಮಶೇಖರ ರೆಡ್ಡಿ ಅವರು ಚಾಲನೆ ನೀಡಿದರು.

    ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಭಿವೃದ್ಧಿಯೇ ಆಡಳಿತದ ಮಂತ್ರ ಎನ್ನುವ ಧೇಯದಡಿ ನಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಬಳ್ಳಾರಿ ನಗರಕ್ಕೆ ನೂರಾರು ಕೋಟಿ ರೂ. ಅನುದಾನವನ್ನು ಸರ್ಕಾರ ಒದಗಿಸಿಕೊಟ್ಟಿದೆ. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಈ ಛಾಯಾಚಿತ್ರ ಪ್ರದರ್ಶನವೇ ಸಾಕ್ಷಿ ಎಂದರು. ಈ ಛಾಯಾಚಿತ್ರ ಪ್ರದರ್ಶನವನ್ನು ಬಳ್ಳಾರಿಯ ರೈಲ್ವೆ ನಿಲ್ದಾಣದಲ್ಲಿಯೂ ಮಾಡುವಂತೆ ವಾರ್ತಾ ಇಲಾಖೆಯ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.

    ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡುವ ವಿಚಾರ ಈ ಭಾಗದ ಜನರ ಬೇಡಿಕೆಯಾಗಿದೆ. ವಾಲ್ಮೀಕಿ ಸಮುದಾಯದ ಪ್ರಬಲ ನಾಯಕ ಶ್ರೀರಾಮುಲು ಅವರಾಗಿದ್ದು, ಡಿಸಿಎಂ ವಿಷಯದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದು ವಿವರಿಸಿದರು. ಹಾಗೆಯೇ ಅಭಿವೃದ್ಧಿ ವಿಚಾರದಲ್ಲಿ ಬಳ್ಳಾರಿ ಹಿಂದೆ ಬಿದ್ದಿಲ್ಲ ಎಂದು ಸ್ಪಷ್ಟಪಡಿಸಿದರು.

  • ಜಿಲ್ಲೆ ವಿಭಜನೆ ಕುರಿತು ಸರ್ಕಾರದ ತೀರ್ಮಾನಕ್ಕೆ ಬದ್ಧವಾಗಿರಬೇಕು- ಶ್ರೀರಾಮುಲು

    ಜಿಲ್ಲೆ ವಿಭಜನೆ ಕುರಿತು ಸರ್ಕಾರದ ತೀರ್ಮಾನಕ್ಕೆ ಬದ್ಧವಾಗಿರಬೇಕು- ಶ್ರೀರಾಮುಲು

    ಉಡುಪಿ: ಬಳ್ಳಾರಿ ಜನರ ಭಾವನೆ ಬೇರೆ ಬೇರೆ ರೀತಿ ಇದೆ. ಸರಕಾರದ ತೀರ್ಮಾನಕ್ಕೆ ಕೆಲವೊಮ್ಮೆ ನಾವು ಬದ್ಧರಾಗಿರಬೇಕಾಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

    ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿ, ವಿಜಯಪುರವನ್ನು ಪ್ರತ್ಯೇಕ ಜಿಲ್ಲೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಸೋಮಶೇಖರ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಸಿಎಂ ಜೊತೆ ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇನೆ. ಆ ಭಾಗದ ಎಲ್ಲಾ ಹೋರಾಟಗಾರರ ಜೊತೆ ಮಾತನಾಡಿದ್ದೇನೆ. ನಾನು ಸಿಎಂ ಕೂತು ಒಂದು ತೀರ್ಮಾನಕ್ಕೆ ಬರುತ್ತೇವೆ. ಆ ಭಾಗ ಅಭಿವೃದ್ಧಿ ಅಗಬೇಕು ಅನ್ನೋದು ನನ್ನ ಅಭಿಪ್ರಾಯ. ದೊಡ್ಡ ಜಿಲ್ಲೆಯಾದ ಕಾರಣ ಬೇರೆ ಬೇರೆ ತೊಂದರೆ ಬರಬಾರದು ಎಂಬೂದು ನಮ್ಮ ದೃಷ್ಟಿಕೋನ ಎಂದರು.

    ನಾನು ಎಲ್ಲರ ಜೊತೆ ಮಾತನಾಡಿ ತೀರ್ಮಾನಕ್ಕೆ ಬರುತ್ತೇನೆ ಹೊರತು, ನನ್ನ ಯಾವುದೇ ವೈಯಕ್ತಿಕ ತೀರ್ಮಾನ ಇಲ್ಲ. ಶಾಸಕ ಸೋಮಶೇಖರ್ ರೆಡ್ಡಿ ನನ್ನ ಸಹೋದರ. ಅವರು ನನ್ನ ಜೊತೆಗಿರುವ ಶಾಸಕ. ಅವರ ಜೊತೆ ಕುಳಿತು ಮಾತನಾಡಿ ಅಭಿಪ್ರಾಯ ಪಡೆದು ಒಂದು ತೀರ್ಮಾನಕ್ಕೆ ಬರುತ್ತೇನೆ ಎಂದು ಹೇಳಿದರು.

    ಸೋಮಶೇಖರ ರೆಡ್ಡಿ ಹೇಳಿದ್ದೇನು?
    ಆನಂದ್ ಸಿಂಗ್ ರಾಜೀನಾಮೆಗೆ ನೀಡಿದ್ದಕ್ಕೆ ಸರ್ಕಾರ ಹೊಸ ಜಿಲ್ಲೆ ಘೋಷಣೆ ಮಾಡಬಾರದು. ಜಿಲ್ಲೆಯಲ್ಲಿ ನಾಲ್ಕು ಜನ ಬಿಜೆಪಿ ಶಾಸಕರಿದ್ದೇವೆ. ನಮ್ಮನ್ನು ಕರೆದು ಸಿಎಂ ಬಿಎಸ್‍ವೈ ಚರ್ಚೆ ನಡೆಸಬೇಕು. ಈಗಾಗಲೇ ಸಿಎಂಗೆ ಸಲಹೆ ನೀಡಿದ್ದೇವೆ. ಯಾವುದೇ ಕಾರಣಕ್ಕೂ ವಿಜಯನಗರ ಜಿಲ್ಲೆ ಘೋಷಣೆ ಮಾಡಬಾರದು. ಅಖಂಡ ಜಿಲ್ಲೆಯಾಗಿ ಇರಬೇಕು ಎಂದು ನಾವು ಒತ್ತಾಯ ಮಾಡಿದ್ದೇವೆ ಎಂದು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದರು.

  • ವಿಜಯನಗರ ಜಿಲ್ಲೆ ಘೋಷಣೆ ಮಾಡ್ಬಾರ್ದು – ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ರೆಡ್ಡಿ

    ವಿಜಯನಗರ ಜಿಲ್ಲೆ ಘೋಷಣೆ ಮಾಡ್ಬಾರ್ದು – ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ರೆಡ್ಡಿ

    – ಹಂಪಿ ಉತ್ಸವ ಆಚರಿಸದಿದ್ರೆ ಹೋರಾಟ

    ಬಳ್ಳಾರಿ: ವಿಜಯನಗರವನ್ನು ಜಿಲ್ಲೆ ಎಂದು ಘೋಷಣೆಗೆ ಸರ್ಕಾರದಿಂದ ಪ್ರಕ್ರಿಯೆ ಆರಂಭವಾಗಿದ್ದು, ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರು ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದಿದ್ದಾರೆ.

    ಬಳ್ಳಾರಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ಆನಂದ್ ಸಿಂಗ್ ರಾಜೀನಾಮೆಗೆ ನೀಡಿದ್ದಕ್ಕೆ ಸರ್ಕಾರ ಹೊಸ ಜಿಲ್ಲೆ ಘೋಷಣೆ ಮಾಡಬಾರದು. ಜಿಲ್ಲೆಯಲ್ಲಿ ನಾಲ್ಕು ಜನ ಬಿಜೆಪಿ ಶಾಸಕರಿದ್ದೇವೆ. ನಮ್ಮನ್ನು ಕರೆದು ಸಿಎಂ ಬಿಎಸ್‍ವೈ ಚರ್ಚೆ ನಡೆಸಬೇಕು. ಈಗಾಗಲೇ ಸಿಎಂಗೆ ಸಲಹೆ ನೀಡಿದ್ದೇವೆ. ಯಾವುದೇ ಕಾರಣಕ್ಕೂ ವಿಜಯನಗರ ಜಿಲ್ಲೆ ಘೋಷಣೆ ಮಾಡಬಾರದು. ಅಖಂಡ ಜಿಲ್ಲೆಯಾಗಿ ಇರಬೇಕು ಎಂದು ನಾವು ಒತ್ತಾಯ ಮಾಡಿದ್ದೇವೆ ಎಂದರು.

    ನವೆಂಬರ್ ತಿಂಗಳಲ್ಲಿ ಹಂಪಿ ಉತ್ಸವ ಆಚರಣೆ ಮಾಡುತ್ತೇವೆ. ಜಿಲ್ಲಾ ಉಸ್ತುವಾರಿ ಲಕ್ಷ್ಮಣ ಸವದಿ ಜೊತೆ ಈ ಸಂಬಂಧ ಚರ್ಚೆ ನಡೆಸುತ್ತೇವೆ. ಈ ಹಿಂದೆ ಹಂಪಿ ಉತ್ಸವ ಆಚರಣೆಗಾಗಿ ಪ್ರತಿಭಟನೆ ನಡೆಸಿದ್ದೆವು. ಈಗಲೂ ಹಂಪಿ ಉತ್ಸವ ಆಚರಣೆ ಮಾಡದಿದ್ದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ ಕೈ ಮಾಜಿ ಶಾಸಕ ಅನಿಲ್ ಲಾಡ್ ಬಿಜೆಪಿ ಸೇರ್ಪಡೆ ವಿಚಾರ ಸಂಬಂಧ ಪ್ರತಿಕ್ರಿಯಿಸಲು ನಿರಾಕರಿಸಿದರು.

    ಸೋಮಶೇಖರ್ ರೆಡ್ಡಿ ಅವರು ಈ ಹಿಂದೆಯೂ ವಿಜಯನಗರ ಜಿಲ್ಲೆಯನ್ನಾಗಿ ಘೋಷಣೆ ಮಾಡಬಾರದೆಂದು ಹೇಳಿದ್ದರು. ವಿಜಯನಗರ ಜಿಲ್ಲೆ ರಚನೆ ಮಾಡುವ ವಿಚಾರ ನಮಗೆ ಒಪ್ಪಿಗೆ ಇಲ್ಲ. ಬಳ್ಳಾರಿ ಜಿಲ್ಲೆಯ ಹೆಸರನ್ನೇ ವಿಜಯನಗರ ಎಂದು ಬದಲಿಸಿವುದು ಭಾವನಾತ್ಮಕ ವಿಚಾರ, ಮುಂದೆ ಕೂಡ ಅಖಂಡ ಜಿಲ್ಲೆ ಒಗ್ಗಟ್ಟಾಗಿಯೇ ಇರಬೇಕು. ಜಿಲ್ಲೆಯನ್ನು ವಿಭಜಿಸುವ ಪ್ರಕ್ರಿಯೆಗೆ ಸ್ವಾಮೀಜಿಗಳು ಬೆಂಬಲ ನೀಡಿರುವುದು ಬೇಸರ ತರಿಸಿದೆ ಎಂದು ಹೇಳಿದ್ದರು.

  • ತುಂಗಭದ್ರಾ ಡ್ಯಾಂ ಭರ್ತಿಗಾಗಿ ಉಪವಾಸ ಕುಳಿತ ಸೋಮಶೇಖರ ರೆಡ್ಡಿ

    ತುಂಗಭದ್ರಾ ಡ್ಯಾಂ ಭರ್ತಿಗಾಗಿ ಉಪವಾಸ ಕುಳಿತ ಸೋಮಶೇಖರ ರೆಡ್ಡಿ

    ಬಳ್ಳಾರಿ: ತುಂಗಭದ್ರಾ ಅಣೆಕಟ್ಟು ತುಂಬಲೆಂದು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಹರಕೆ ಹೊತ್ತು ಉಪವಾಸ ವೃತ ಆರಂಭಿಸಿದ್ದಾರೆ.

    ಇಂದು ಬೆಳಗ್ಗೆ ಡ್ಯಾಂ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಸೋಮಶೇಖರ ರೆಡ್ಡಿ ಅವರು ವಿಶೇಷ ಪೂಜೆಯನ್ನು ನೆರವೇರಿಸಿದ್ದಾರೆ. ಪೂಜೆ ಬಳಿಕ ಉಪವಾಸ ವ್ರತ ಆಚರಣೆ ಆರಂಭಿಸಿದ್ದಾರೆ. ಈ ಹಿಂದೆಯೂ 2009ರಲ್ಲಿ ಡ್ಯಾಂ ತುಂಬಲೆಂದು ರೆಡ್ಡಿ ಉಪವಾಸ ಮಾಡಿದ್ದರು. ಆ ಸಂದರ್ಭದಲ್ಲಿ 18 ದಿನಗಳ ಉಪವಾಸದ ಬಳಿಕ ಡ್ಯಾಂ ತುಂಬಿತ್ತು. ಪರಿಣಾಮ ಸುತ್ತಮುತ್ತಲಿನ ರೈತರಿಗೆ ಒಳ್ಳೆಯ ಬೆಳೆ ಬೆಳೆಯಲು ಸಾಧ್ಯವಾಗಿತ್ತು.

    ಈ ಬಾರಿ ಮಳೆ ಜಿಲ್ಲೆಯಲ್ಲಿ ಸರಿಯಾಗಿ ಬರುತ್ತಿಲ್ಲ. ಮುಂಗಾರು ಮುಕ್ತಾಯವಾದರೂ ಜಿಲ್ಲೆಯಲ್ಲಿ ಮಳೆ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಉಪವಾಸ ಕುಳಿತರೆ ದೇವರು ಮಳೆಯನ್ನು ಕರುಣಿಸುವನು ಎಂಬ ಭರವೆಸಯಿಂದ ಶಾಸಕರು ಈ ನಿರ್ಧಾರ ಕೈಗೊಂಡಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]