Tag: ಸೋಲಾರ್ ಪಾರ್ಕ್

  • ತುಮಕೂರಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ವೇಳೆ ಬಂಡೆ ಸ್ಫೋಟ – ಓರ್ವ ಕಾರ್ಮಿಕ ಸಾವು

    ತುಮಕೂರಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ವೇಳೆ ಬಂಡೆ ಸ್ಫೋಟ – ಓರ್ವ ಕಾರ್ಮಿಕ ಸಾವು

    – ಅಕ್ರಮವಾಗಿ ಸ್ಫೋಟಕ ಬಳಸಿರುವ ಶಂಕೆ

    ತುಮಕೂರು: ಸೋಲಾರ್ ಪಾರ್ಕ್ ನಿರ್ಮಾಣ ವೇಳೆ ಬಂಡೆ ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು, ಈ ಘಟನೆ ಜಿಲ್ಲೆಯ ಪಾವಗಡ (Pavagada) ತಾಲೂಕಿನ ತಿರುಮಣಿ ಬಳಿ ನಡೆದಿದೆ.

    ಮೃತ ಕಾರ್ಮಿಕನನ್ನು ರಾಯಚೂರು ಮೂಲದ ಬಸವರಾಜ್ (46) ಹಾಗೂ ಗಾಯಳುವನ್ನು ಕಾರ್ಮಿಕನನ್ನು ಶಿವಯ್ಯ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಮುಡಾ ಕೇಸ್‌ ಸಿಬಿಐಗೆ ವರ್ಗಾಯಿಸಲು ಮನವಿ – ಆದೇಶ ಕಾಯ್ದಿರಿಸಿದ ಕೋರ್ಟ್‌

    ತಿರುಮಣಿ ಬಳಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲು ಸ್ಥಳದಲ್ಲಿದ್ದ ಬಂಡೆ ಸ್ಫೋಟಿಸುವಾಗ ಈ ದುರಂತ ಸಂಭವಿಸಿದೆ. ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇನ್ನೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಬಂಡೆಯನ್ನು ಸ್ಫೋಟಿಗೊಳಿಸಲು ಅಕ್ರಮವಾಗಿ ಸ್ಫೋಟಕ ವಸ್ತುಗಳನ್ನು ಬಳಸಿರುವ ಶಂಕೆ ವ್ಯಕ್ತವಾಗಿದ್ದು, ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಕನ್ನಡ ಹೋರಾಟಗಾರರ ಮೇಲಿನ ಎಲ್ಲಾ ಕೇಸ್ ವಾಪಸ್ – ಸಿಎಂ ಘೋಷಣೆ

     

     

  • ಪಾವಗಡ ಸೋಲಾರ್ ಪಾರ್ಕ್ ಪ್ರಕರಣವನ್ನು CBIಗೆ ಒಪ್ಪಿಸಿ- ಬೊಮ್ಮಾಯಿಗೆ ಡಿಕೆಶಿ ಸವಾಲು

    ಪಾವಗಡ ಸೋಲಾರ್ ಪಾರ್ಕ್ ಪ್ರಕರಣವನ್ನು CBIಗೆ ಒಪ್ಪಿಸಿ- ಬೊಮ್ಮಾಯಿಗೆ ಡಿಕೆಶಿ ಸವಾಲು

    ನವದೆಹಲಿ: ಪಾವಗಡ ಸೋಲಾರ್ ಪಾರ್ಕ್ (Pawagada Solar Park) ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (CBI)ಗೆ ಒಪ್ಪಿಸಿ ಎಂದು ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸವಾಲು ಹಾಕಿದ್ದಾರೆ.

    ಇಡಿ ಅಧಿಕಾರಿಗಳ ಮುಂದೆ ಹಾಜರಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ (DK Shivakumar), ಯಾಕೆ ನಿವೃತ್ತ ಜಡ್ಜ್ ಸಿಬಿಐಗೆ ಒಪ್ಪಿಸಿ. ತಪ್ಪಾಗಿದ್ದರೇ ನನ್ನ ಗಲ್ಲಿಗೇರಿಸಿ. ಅತ್ಯುತ್ತಮ ಪ್ರಾಜೆಕ್ಟ್ ಅಂತ ಮೋದಿ ಸರ್ಕಾರ ಪ್ರಶಂಸೆ ವ್ಯಕ್ತಪಡಿಸಿ, ಸರ್ಟಿಫಿಕೇಟ್ ಕೊಟ್ಟಿದೆ. ದೇಶಕ್ಕೆ ಮಾದರಿ ಅಂತ ಮೋದಿ (Narendra Modi) ಸರ್ಕಾರ ಹೇಳಿದೆ ಎಂದರು.

    ಯಾವ ಪ್ರಕರಣದಲ್ಲಿ ಸಮನ್ಸ್ ನೀಡಿದ್ದಾರೆ ಗೊತ್ತಿಲ್ಲ. ಸಮನ್ಸ್ ನಿಂದ ವಿನಾಯಿತಿ ಕೋರಿ ಮನವಿ ಮಾಡಿದ್ದೆವು. ನಾವು ಸಾರ್ವಜನಿಕ ಜೀವನದಲ್ಲಿರುವವರು. ಶಾಸಕ ಮತ್ತು ಸಂಸದರಾಗಿರುವವರು ಕಾನೂನು ಪಾಲಿಸುವ ನಾಗರಿಕರಾಗಿದ್ದೇವೆ. ಆದರೆ ನಮ್ಮ ಮನವಿಯನ್ನ ತಿರಸ್ಕರಿಸಿ ಹಾಜರಾಗಲು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಭಾರತ್ ಜೋಡೋ ಯಾತ್ರೆ (Bharat Jodo Yatre) ಮೊಟಕುಗೊಳಿಸಿ ವಿಚಾರಣೆಗೆ ಇಂದು ಆಗಮಿಸಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ:  ಇಡಿ ಕೇಳುವ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಡ್ತೀವಿ – ಡಿಕೆಶಿ

    ಬೇರೊಬ್ಬ ತನಿಖಾಧಿಕಾರಿ ಈ ಬಾರಿ ಸಮನ್ಸ್ ಮಾಡಿದ್ದಾರೆ. ಸಮನ್ಸ್ ಯಾವುದಕ್ಕೆ ಅಂತ ಗೊತ್ತಿಲ್ಲ. ಯಂಗ್ ಇಂಡಿಯಾಕೆ ದೇಣಿಗೆ ನೀಡಿರೊ ಬಗ್ಗೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕಳೆದ ಬಾರಿ ಕೂಡ ಯಂಗ್ ಇಂಡಿಯಾ ಬಗ್ಗೆ ಪ್ರಶ್ನೆ ಮಾಡಿದ್ದರು. ಈ ಬಾರಿ ತನಿಖಾಧಿಕಾರಿ ಬದಲಾಗಿರುವುದರಿಂದ ಪ್ರಕರಣ ಯಾವುದೆಂದು ಸ್ಪಷ್ಟತೆ ಇಲ್ಲ ಎಂದು ಹೇಳಿ ಡಿಕೆಶಿ ಇಡಿ ಕಚೇರಿಯೊಳಗೆ ತೆರಳಿದರು.

    Live Tv
    [brid partner=56869869 player=32851 video=960834 autoplay=true]

  • ಸೋಲಾರ್ ಪಾರ್ಕ್ ಹೆಸರಲ್ಲಿ ರೈತರ ಜಮೀನು ಖರೀದಿ – ಪಕ್ಕದಲ್ಲಿದ್ದ ಸರ್ಕಾರಿ ಭೂಮಿಗೂ ಕನ್ನ

    ಸೋಲಾರ್ ಪಾರ್ಕ್ ಹೆಸರಲ್ಲಿ ರೈತರ ಜಮೀನು ಖರೀದಿ – ಪಕ್ಕದಲ್ಲಿದ್ದ ಸರ್ಕಾರಿ ಭೂಮಿಗೂ ಕನ್ನ

    -ಬಳ್ಳಾರಿಯಲ್ಲಿ ಗಣಿ ಬಳಿಕ ಸೌರಶಕ್ತಿ ಕಾಟ

    ಬಳ್ಳಾರಿ: ಗಣಿ ಆಯ್ತು, ಈಗ ಬಿಸಿಲನಾಡು ಬಳ್ಳಾರಿಯಲ್ಲಿ ಸೋಲಾರ್ ಕಂಪೆನಿಯ ಕರ್ಮಕಾಂಡದ ಕಥೆ.

    ಸಿದ್ದರಾಮಯ್ಯ ಸರ್ಕಾರದಲ್ಲಿ ಡಿಕೆ ಶಿವಕುಮಾರ್ ಇಂಧನ ಸಚಿವರಾಗಿದ್ದಾಗ ಹಗರಿಬೊಮ್ಮನಹಳ್ಳಿ ತಾಲೂಕಿನ ಸೊನ್ನಕನ್ನಿಹಳ್ಳಿಯಲ್ಲಿ ಕ್ಲೀನ್ ಮ್ಯಾಕ್ಸ್ ಸೋಲಾರ್ ಕಂಪನಿ ವಿದ್ಯುತ್ ಸ್ಥಾವರ ಆರಂಭಿಸಿತ್ತು. ರೈತರಿಂದ ಕಡಿಮೆ ಬೆಲೆಗೆ 460 ಎಕರೆಯಷ್ಟು ಭೂಮಿ ಖರೀದಿಸಿ 60 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಘಟಕ ಸ್ಥಾಪಿಸಿದ್ದು, ಇದುವರೆಗೆ ಕೈಗಾರಿಕಾ ಘಟಕ ಸ್ಥಾಪನೆಗೆ ಭೂ ಪರಿವರ್ತನೆ (ಎನ್‍ಎ) ಮಾಡಿಕೊಂಡಿಲ್ಲ.

    ರೈತರ ಜಮೀನಿನ ಪಕ್ಕದಲ್ಲಿರುವ ಸರ್ಕಾರಿ ಭೂಮಿಯನ್ನೂ ಅಕ್ರಮಿಸಿಕೊಂಡಿದ್ದು, ಅಲ್ಲೆಲ್ಲಾ ವಿದ್ಯುತ್ ಕಂಬಗಳನ್ನು ಹಾಕಿ ಲೈನ್ ಎಳೆದಿದೆ. ಬೃಹತ್ ಗುಂಡಿಗಳನ್ನು ಅಗೆದು ರಸ್ತೆಗಾಗಿ ಮಣ್ಣು ಸರಬರಾಜು ಮಾಡುತ್ತಿದೆ.

    ತಾಲೂಕು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಸಹ ಕ್ಲೀನ್ ಮ್ಯಾಕ್ಸ್ ಕಂಪೆನಿಯ ಅಕ್ರಮದ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ರು. ಆದ್ರೆ ಸಮ್ಮಿಶ್ರ ಸರ್ಕಾರದಲ್ಲಿ ಮಿನಿಸ್ಟರ್ ಪವರ್‍ಫುಲ್ ಆಗಿರೋ ಕಾರಣ ಜಿಲ್ಲಾಡಳಿತ ಸಮ್ಮನಿದೆ ಅನ್ನೋದು ಸ್ಥಳೀಯರ ಆರೋಪ.

  • ಪಾವಗಡದಲ್ಲಿರೋ ಬೃಹತ್ ಸೋಲಾರ್ ಪಾರ್ಕ್ ಗೆ ಹಾಲಿವುಡ್ ನಟ ಮೆಚ್ಚುಗೆ

    ಪಾವಗಡದಲ್ಲಿರೋ ಬೃಹತ್ ಸೋಲಾರ್ ಪಾರ್ಕ್ ಗೆ ಹಾಲಿವುಡ್ ನಟ ಮೆಚ್ಚುಗೆ

    ಬೆಂಗಳೂರು: ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಸೋಲಾರ್ ಪಾರ್ಕ್‍ಗೆ ವಿಶ್ವ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಕುರಿತು ಹಾಲಿವುಡ್‍ನ ಖ್ಯಾತ ನಟ ಲಿಯೊನಾರ್ಡೊ ಡಿ ಕಾಪ್ರಿಯೊ ಸಹ ಟ್ವಿಟ್ಟರ್‍ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

    ಸೋಲಾರ್ ಪಾರ್ಕ್ ಕುರಿತು ಅಮೆರಿಕದ ಲಾಸ್ ಏಂಜಲೀಸ್ ಟೈಮ್ಸ್ ವರದಿ ಪ್ರಕಟಿಸಿದೆ. `ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ಭಾರತದಲ್ಲಿ ನಿರ್ಮಾಣವಾಗುತ್ತಿದೆ’ ಎಂಬ ಶೀರ್ಷಿಕೆಯಡಿ ಸೋಮವಾರ ಸೋಲಾರ್ ಪಾರ್ಕ್ ಬಗ್ಗೆ ವಿಸ್ತೃತ ವರದಿ ಪ್ರಕಟಿಸಲಾಗಿದೆ. ಸೋಲಾರ್ ಪಾರ್ಕ್ ಪೂರ್ಣಗೊಂಡ ಬಳಿಕ 2,000 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗಲಿದ್ದು, 7 ಲಕ್ಷ ಮನೆಗಳಿಗೆ ವಿದ್ಯುತ್ ಪೂರೈಕೆಯಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಹಾಲಿವುಡ್ ನಟ ರೀಟ್ವೀಟ್: ವಿಶ್ವದ ಅತೀ ದೊಡ್ಡ ಸೋಲಾರ್ ಪಾರ್ಕ್ ಭಾರತದಲ್ಲಿ ನಿರ್ಮಾಣವಾಗುತ್ತಿರುವ ಬಗ್ಗೆ ನಟ ಲಿಯೊನಾರ್ಡೊ ಡಿ ಕಾಪ್ರಿಯೊ ಸಹ ಟ್ವಿಟರ್‍ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಲಾಸ್ ಏಂಜಲೀಸ್ ಟೈಮ್ಸ್‍ನ ವರದಿಯನ್ನು ಅವರು ರಿಟ್ವೀಟ್ ಮಾಡುವ ಮೂಲಕ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ `ರಾಹುಲ್ ಗಾಂಧಿ ಫ್ಯಾನ್ಸ್ ಫ್ರಮ್ ಬೆಳಗಾವಿ’ ಫೇಸ್‍ಬುಕ್ ಪುಟದಲ್ಲಿ `ಪಾವಗಡದ ಬೃಹತ್ ಸೌರಪಾರ್ಕ್ ಗೆ ಹಾಲಿವುಡ್ ನಟ ಲಿಯೊನಾರ್ಡೊ ಡಿ ಕಾಪ್ರಿಯೊ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ’ ಎಂದು ಅಪ್ಲೋಡ್ ಮಾಡಿದ್ದಾರೆ.

    `2025ರ ವೇಳೆಗೆ ಅವಶ್ಯ ಇರುವ ಶೇ. 50ರಷ್ಟು ವಿದ್ಯುತ್ ಅನ್ನು ನವೀಕರಿಸಬಹುದಾದ ಇಂಧನಗಳ ಮೂಲಕವೇ ಉತ್ಪಾದಿಸುವುದು ನಮ್ಮ ಗುರಿ. ಈ ಕನಸಿಗೆ ನಾವು ಶಂಕುಸ್ಥಾಪನೆ ಮಾಡಿದ್ದೇವೆ. ಮುಂದಿನ 5-7 ವರ್ಷಗಳಲ್ಲಿ ಇದನ್ನು ಸಾಧಿಸುವ ಆಶಾಭಾವನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಜತೆಗೆ, ಲಾಸ್ ಏಂಜಲೀಸ್ ಟೈಮ್ಸ್ ವರದಿಯನ್ನೂ ಉಲ್ಲೇಖಿಸಿದ್ದಾರೆ.

  • ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್ ಲೋಕಾರ್ಪಣೆ ಮಾಡಿದ ಸಿಎಂ

    ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್ ಲೋಕಾರ್ಪಣೆ ಮಾಡಿದ ಸಿಎಂ

    ತುಮಕೂರು: ವಿಶ್ವದಲ್ಲೇ ಅತಿದೊಡ್ಡ ಸೋಲಾರ್ ಪಾರ್ಕ್ ಎಂಬ ಹೆಮ್ಮೆಗೆ ಪಾತ್ರವಾದ ತುಮಕೂರು ಜಿಲ್ಲೆ ಪಾವಗಡದಲ್ಲಿರುವ ಸೋಲಾರ್ ಪಾರ್ಕ್ ಅನ್ನು ಇಂದು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.

    2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೊಂದಿರುವ ಸೋಲಾರ್ ಪಾರ್ಕ್‍ನಲ್ಲಿ ಮೊದಲ ಹಂತದಲ್ಲಿ 600 ಮೆ,ವ್ಯಾ ವಿದ್ಯುತ್ ಉತ್ಪಾದನೆ ನಡೆಸುವ ಘಟಕ್ಕೆ ಚಾಲನೆ ನೀಡಲಾಯಿತು. ಸೋಲಾರ್ ಪಾರ್ಕ್ ಸುಮಾರು 13 ಸಾವಿರ ಎಕರೆ ವಿಸ್ತೀರ್ಣ ಹೊಂದಿದ್ದು, 10 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

    ಸೌರ ಘಟಕವನ್ನು ಉದ್ಘಾಟನೆ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಎಂದಿನಂತೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಹಾಸ್ಯದ ದಾಟಿಯಲ್ಲಿ ವಾಗ್ದಾಳಿ ನಡೆಸಿದರು.

    ಲೆಕ್ಕ ಕೊಡಿ: ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿ ಕೇಂದ್ರದಿಂದ ಬಂದ ಹಣ ಲೆಕ್ಕ ಕೇಳುತ್ತಾರೆ. ನಮಗೆ ಲೆಕ್ಕ ಕೇಳಲು ಇವರು ಯಾರು ಎಂದು ಪ್ರಶ್ನಿಸಿದರು. ಅಮಿತ್ ಶಾ ಅವರಗೆ ಸಂವಿಧಾನದ ಅರಿವೇ ಇಲ್ಲ. ಆದರೆ ಪ್ರಧಾನಿಗಳು ಕೂಡಾ ಅಮಿತ್ ಶಾ ರಂತೆ ನಡೆದುಕೊಳ್ಳುತ್ತಾರೆ. ರಾಜ್ಯಕ್ಕೆ ಮೂರು ಬಾರಿ ಬಂದರೂ ರೈತರ ಸಾಲ ಮನ್ನಾ, ಮಹಾದಾಯಿ ವಿವಾದ ಕುರಿತು ಪ್ರಸ್ತಾಪ ಮಾಡಿಲ್ಲ. ಇದರ ಜೊತೆಗೆ ಯಡಿಯೂರಪ್ಪ ಅವರಿಗೆ `ರೈತ ಬಂಧು’ ಎಂಬ ಬಿರುದು ನೀಡಲಾಗಿದೆ. ಆದರೆ ರೈತರ ಮೇಲೆ ಗೋಲಿಬಾರ್ ನಡೆಸಿದ್ದಾರೆ. ರೈತರ ಸಾಲ ಮನ್ನಾ ಮಾಡಲು ಕೇಳಿದರೆ ಹಣ ಪ್ರಿಂಟ್ ಮಾಡುತ್ತೇನಾ ಎಂದು ಕೇಳುತ್ತಾರೆ. ಮತ್ತೊಬ್ಬರು ಮಣ್ಣಿನ ಮಗ, ರೈತ ನಾಯಕರಂತೆ ಎಂದು ದೇವೇಗೌಡರು ಹಾಗೂ ಕುಮಾರಸ್ವಾಮಿ ಹೆಸರು ಪ್ರಸ್ತಾಪಿಸದೇ ವ್ಯಂಗ್ಯವಾಡಿದರು.

    ಕಾರ್ಯಕ್ರಮದ ಬಳಿಕ ಬಿಜೆಪಿ ಬಿಡುಗಡೆ ಮಾಡಿದ ಚಾರ್ಜ್ ಶೀಟ್ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಮಾಡಿದ ಅನಾಹುತಗಳಿಗೆ ಅವರು ಮೊದಲು ಪಶ್ಚಾತ್ತಾಪ ಪಡಬೇಕು. ಅವರ ಕಾಲದಲ್ಲೇ ಫೈಲ್ ಗಳಿಗೆ ಬೆಂಕಿ ಹಾಕಿದ್ದು. ರಾತ್ರಿ ಹೊತ್ತು ಟೆಂಡರ್ ಕರೆದಿದ್ದು. ಕಾರ್ಪೊರೇಷನ್ ಆಸ್ತಿಗಳನ್ನು ಅಡಮಾನ ಮಾಡಿದ್ದು. ಅದನ್ನೆಲ್ಲಾ ಬಿಟ್ಟು ನಮ್ಮ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡಲು ಅವರಿಗೆ ನೈತಿಕತೆ ಇಲ್ಲ. ರಾಜ್ಯದ ಬೊಕ್ಕಸ ಕೊಳ್ಳೆ ಹೊಡೆದು ಸಾಲ ಮಾಡಿಟ್ಟು ಹೋಗಿದ್ದಾರೆ. ಅವರ ಸಾಲವನ್ನು ನಾವು ತೀರಿಸಿದ್ದೇವೆ. ಅವರು ಮಾಡಿದ ಪಾಪಕ್ಕೆ ಅವರೇ ಪ್ರಾಯಶ್ಚಿತ ಪಡಲಿ ಎಂದು ವಾಗ್ದಾಳಿ ನಡೆಸಿದರು.

    ಸೋಲಾರ್ ಪಾರ್ಕ್ ಲೋಕಾರ್ಪಣೆ ಕಾರ್ಯಕ್ರಮದ ವೇಳೆ ಇಂಧನ ಸಚಿವ ಡಿಕೆ ಶಿವಕುಮಾರ್, ಸಚಿವ ಜಯಚಂದ್ರ ಸೇರಿದಂತೆ ಹಲವು ಸಚಿವರು ಭಾಗವಹಿಸಿದ್ದರು. ಇದನ್ನೂ ಓದಿ: ಮೋದಿಯಂತೆ ಮಿಮಿಕ್ರಿ ಮಾಡಿದ ಸಚಿವ ಸಂತೋಷ್ ಲಾಡ್- ವೇದಿಕೆಯಲ್ಲೇ ತಿರುಗೇಟು ನೀಡಿದ ಬಿಜೆಪಿ ಜಿಪಂ ಸದಸ್ಯ!

    https://www.youtube.com/watch?v=kCE9VhsSuiA