– ದಕ್ಷಿಣ ಕನ್ನಡ ಎಸ್ಪಿಗೆ ದೂರು ಸಲ್ಲಿಸಿದ ಸಾಮಾಜಿಕ ಹೋರಾಟಗಾರ
ಮಂಗಳೂರು: ಸೌಜನ್ಯ ಕೊಲೆ ಮಾಡಿದ್ದು ಆಕೆಯ ಮಾವ ವಿಠಲ ಗೌಡ (Vittal Gowda) ಎಂದು ಮೈಸೂರಿನ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ (Snehamayi Krishna) ಆರೋಪಿಸಿದ್ದಾರೆ. ಈ ಕುರಿತು ದಕ್ಷಿಣ ಕನ್ನಡ ಎಸ್ಪಿ ಡಾ.ಅರುಣ್ ಕುಮಾರ್ಗೆ ದೂರು ಅರ್ಜಿ ಸಲ್ಲಿಸಿದ್ದಾರೆ.
ಸೌಜನ್ಯಳ ಮೇಲೆ ಸೋದರಮಾವ ವಿಠಲ ಗೌಡಗೆ ಕೆಟ್ಟ ದೃಷ್ಟಿ ಇತ್ತು. ಆಕೆಯನ್ನು ಬಳಸಿಕೊಳ್ಳಲು ಬಹಳ ಸಮಯದಿಂದ ಹವಣಿಸುತ್ತಿದ್ದ. ಒಪ್ಪದೇ ಇದ್ದಂತ ಸಂದರ್ಭದಲ್ಲಿ ಆಕೆ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಂಗ್ಲೆಗುಡ್ಡಕ್ಕೆ ಸೌಜನ್ಯ ಮಾವ ವಿಠಲಗೌಡನ ಕರೆದೊಯ್ದ SIT
ಸಾಂದರ್ಭಿಕ ಸಾಕ್ಷಿಗಳನ್ನು ಇಟ್ಟುಕೊಂಡು ದಕ್ಷಿಣ ಕನ್ನಡ ಎಸ್ಪಿ ತನಿಖೆ ನಡೆಸಬೇಕೆಂದು ಸ್ನೇಹಮಯಿ ಕೃಷ್ಣ ದೂರಿನ ಮೂಲಕ ಮಂಪರು ಪರೀಕ್ಷೆ ಮಾಡಲು ಆಗ್ರಹಿಸಿದ್ದಾರೆ.
ಸೌಜನ್ಯ ತಾಯಿ ಕುಸುಮಾವತಿಗೂ ಸಹೋದರ ವಿಠಲ ಗೌಡನ ಮೇಲೆ ಸಂಶಯವಿತ್ತು. ಸೌಜನ್ಯ ಮೃತದೇಹವನ್ನು ನೋಡಲು ಕುಸುಮಾವತಿ ಹೋಗಿರಲಿಲ್ಲ. ಸಂತೋಷ್ ರಾವ್ ಅವರನ್ನು ಈ ಕೃತ್ಯಕ್ಕೆ ಬಳಸಿಕೊಂಡಿರಬಹುದು. ಈ ಬಗ್ಗೆ ನಾನು ಬಹಳ ದಿನಗಳಿಂದ ಮಾಹಿತಿಗಳನ್ನು ಕಲೆ ಹಾಕುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೌಜನ್ಯ ಕೇಸ್| ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಉದಯ್ ಜೈನ್ ಪತ್ರ
ಸಂಪೂರ್ಣ ಮರುತನಿಖೆ ನಡೆಸಿ ಆರೋಪಿಗೆ ಶಿಕ್ಷೆ ವಿಧಿಸಬೇಕು. ವಿಠಲ ಗೌಡನ ಮಂಪರು ಪರೀಕ್ಷೆ ಮಾಡಬೇಕು. ಮಂಪರು ಪರೀಕ್ಷೆಯಿಂದ ಸತ್ಯ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.
– ಬುರುಡೆ ಪ್ರಕರಣ ದಿಕ್ಕು ತಪ್ಪಿಸುವ ಹುನ್ನಾರ, ಯಾವ್ದೇ ತನಿಖೆಗೆ ಸಿದ್ಧ: ಉದಯ್ ಕುಮಾರ್ ಜೈನ್
– ಸೌಜನ್ಯ ಮನೆ ಮೇಲೆ ಇಡಿ ರೇಡ್ ಆಗಲಿ ಅಂತ ಒತ್ತಾಯ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ (Dharmasthala Case) ಈಗ ಬಹುದೊಡ್ಡ ತಿರುವು ಸಿಕ್ಕಿದೆ. ಸೌಜನ್ಯ ಪ್ರಕರಣದ ತನಿಖೆಯನ್ನು ಎಸ್ಐಟಿ ಕೈಗೆತ್ತಿಕೊಂಡಿತಾ ಅನ್ನೋ ಕುತೂಹಲ ಶುರುವಾಗಿದೆ. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ (Soujanya Case) ಆರೋಪ ಹೊತ್ತು ಕ್ಲೀನ್ಚಿಟ್ ಪಡೆದವರಿಗೆ ವಿಶೇಷ ತನಿಖಾ ತಂಡ ಬುಲಾವ್ ನೀಡಿರುವುದು ಇದಕ್ಕೆ ಕಾರಣವಾಗಿದೆ.
ಕರ್ನಾಟಕ ಪೊಲೀಸ್, ಸಿಬಿಐ ತನಿಖೆ ಬಳಿಕವೂ ಪ್ರಕರಣದಲ್ಲಿ ಕ್ಲೀನ್ಚಿಟ್ ಪಡೆದುಕೊಂಡಿದ್ದ ಉದಯ್ ಕುಮಾರ್ ಜೈನ್ ಸೇರಿದಂತೆ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್ಗೆ ಎಸ್ಐಟಿ ಬುಲಾವ್ ನೀಡಿದೆ. ಹೀಗಾಗಿ ಆರೋಪ ಹೊತ್ತ ಉದಯ್ ಕುಮಾರ್ ಜೈನ್ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶಿ ಫಂಡಿಂಗ್ – ತನಿಖೆಗೆ ಇಡಿ ಎಂಟ್ರಿ
ಎಸ್ಐಟಿ ಕಚೇರಿಗೆ ಭೇಟಿ ನೀಡುವ ಮುನ್ನ ʻಪಬ್ಲಿಕ್ ಟಿವಿʼ ಜೊತೆಗೆ ಉದಯ್ ಕುಮಾರ್ ಜೈನ್ ಮಾತನಾಡಿದ್ದಾರೆ. ಸೌಜನ್ಯ ತಾಯಿ ಎಸ್ಐಟಿಗೆ ಕೊಟ್ಟ ದೂರಿನ ಮೇರೆಗೆ ಅಥವಾ ಚಿನ್ನಯ್ಯ ನೀಡಿದ ಕೇಳಿಕೆಯ ಕಾರಣದಿಂದಲೂ ನನ್ನನ್ನ ಎಸ್ಐಟಿ ಕರೆದಿರಬಹುದು. ಯಾವುದೇ ತನಿಖೆಗೂ ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸುಡಾನ್ನಲ್ಲಿ ಭೂಕುಸಿತಕ್ಕೆ ಇಡೀ ಗ್ರಾಮವೇ ಭೂಸಮಾಧಿ – 1,000 ಜನ ಬಲಿ; ಬದುಕುಳಿದಿದ್ದು ಒಬ್ಬ ಮಾತ್ರ
ಮುಂದುವರಿದು.. ಇದು ಬುರುಡೆ ಪ್ರಕರಣದ ದಿಕ್ಕು ತಪ್ಪಿಸುವ ಹುನ್ನಾರ. ಒಂದು ವಿಡಿಯೋನಲ್ಲಿ ಸೌಜನ್ಯ ಕೊಲೆಯಾದ ಸಂದರ್ಭದಲ್ಲಿ ನಾನು ಇರಲಿಲ್ಲ ಅಂತ ಒಂದು ವಿಡಿಯೋನಲ್ಲಿ ಹೇಳಿದ್ದಾನೆ. ಮತ್ತೊಂದು ವಿಡಿಯೋನಲ್ಲಿ ನಾನೇ ಆಕೆಯನ್ನ ಹೊತ್ಕೊಂಡು ಹೋಗೋದು ನೋಡಿದ್ದೇನೆ ಅಂತ ಹೇಳಿದ್ದಾನೆ. ಸಿನಿಮೀಯ ರೀತಿಯಲ್ಲಿ ಕಥೆ ಕಟ್ಟಿದ್ದಾನೆ. ಈಗ ಸೌಜನ್ಯ ಪ್ರಕರಣದಲ್ಲಿ ನನ್ನ ಬಗ್ಗೆ ಆರೋಪ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಈಗಾಗಲೇ ಗುಂಡಿ ಎಲ್ಲಾ ತೋಡಿಯಾಗಿದೆ, ಈಗ ವಿಷಯಾಂತರ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಬುರುಡೆ ಪ್ರಕರಣ ಮುಚ್ಚಿ ಹಾಕಲು ಈ ಪ್ರಕರಣವನ್ನ ಮತ್ತೆ ಮುನ್ನಲೆಗೆ ತರುತ್ತಿದ್ದಾರೆ. ಸಿಐಡಿ, ಸಿಬಿಐ ನನ್ನನೂ ತನಿಖೆ ನಡೆಸಿದ್ದಾರೆ. ಬ್ರೈನ್ ಮ್ಯಾಪಿಂಗ್ ಕೂಡ ಮಾಡಿದ್ದಾರೆ, ಇವತ್ತು ಮತ್ತೆ ಎಸ್ಐಟಿ ಕರೆದಿದ್ದಾರೆ. ನಾವು ಯಾವುದೇ ವಿಚಾರಣೆಗೂ ಸಿದ್ಧ ಎಂದು ಉದಯ್ ಕುಮಾರ್ ಜೈನ್ ಹೇಳಿದ್ದಾರೆ. ಇದನ್ನೂ ಓದಿ: ಕಾನ್ಸ್ಟೆಬಲ್, ಸಹೋದರ ಸೇರಿ 7 ವರ್ಷಗಳಿಂದ ಚಿಕ್ಕಮ್ಮನ ಮೇಲೆ ಅತ್ಯಾಚಾರ ಆರೋಪ
ಸೌಜನ್ಯ ಮನೆ ಮೇಲೆ ಇಡಿ ದಾಳಿಯಾಗಲಿ
ಸೌಜನ್ಯ ಸತ್ತು ಒಂದು ವರ್ಷದ ನಂತರ ನಮ್ಮ ಹೆಸರು ಸೇರಿಸುವ ಕುತಂತ್ರ ನಡೆಯಿತು. ಆದ್ರೆ ಲೋಕಲ್ ಪೊಲೀಸ್ ತನಿಖೆ ವೇಳೆ ಎಫ್ಐಆರ್ನಲ್ಲಿ ನನ್ನ ಹೆಸರೇ ಇರಲಿಲ್ಲ. ಗೌರ್ಮೆಂಟ್ ವಕೀಲನನ್ನ ಕ್ಯಾಚ್ ಮಾಡಿ ಕುತಂತ್ರ ನಡೆಸಿದ್ರು. ಈಗ ನಮ್ಮನ್ನೆಲ್ಲಾ ದಿಕ್ಕಾಪಾಲು ಮಾಡಿ ಸೌಜ್ಯ ತಾಯಿ ದೊಡ್ಡ ಮನೆಯಲ್ಲಿ ಆರಾಮಾಗಿದ್ದಾರೆ. ಅವರ ಮನೆ ಮೇಲೂ ಇಡಿ ರೇಡ್ ಆಗಬೇಕು ಅಂತ ಒತ್ತಾಯಿಸಿದ್ದಾರೆ.
ಮಂಗಳೂರು: ಧರ್ಮಸ್ಥಳದಲ್ಲಿ ಹೆಗ್ಗಡೆ ಶಾಂತವಾಗಿದ್ದಾರೆ ಅಂದ್ರೆ ಅದಕ್ಕೆ ಮಂಜುನಾಥ ಸ್ವಾಮಿ, ಚಂದ್ರನಾಥ ಸ್ವಾಮಿ ಕಾರಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ (Dr.Veerendra Heggade) ಅವರು ಹೇಳಿದರು.
ಧರ್ಮಸ್ಥಳದಲ್ಲಿ (Dharmasthala) ನಡೆದ ಧರ್ಮ ಸಂರಕ್ಷಣಾ ಯಾತ್ರೆ ವೇಳೆ ಮಾತನಾಡಿದ ಅವರು, ಭಕ್ತರು ಧರ್ಮ ಸೈನಿಕರು. ಧರ್ಮಸ್ಥಳದಲ್ಲಿ ಹೆಗ್ಗಡೆ ಶಾಂತವಾಗಿದ್ದಾರೆ ಎಂದರೆ ಅದಕ್ಕೆ ಮಂಜುನಾಥ ಸ್ವಾಮಿ, ಚಂದ್ರನಾಥ ಸ್ವಾಮಿ ಕಾರಣ. ದುಷ್ಟ ಶಕ್ತಿಗಳು ವಿಜೃಂಭಿಸುತ್ತಿವೆ. ನೀವೇ ಶಿಷ್ಟ ರಕ್ಷಣೆಯನ್ನ ಮಾಡಬೇಕು ಭಕ್ತರಿಗೆ ತಿಳಿಸಿದರು. ಇದನ್ನೂ ಓದಿ: ಪವರ್ ಶೇರಿಂಗ್ ಬಗ್ಗೆ ಪಕ್ಷ ತೀರ್ಮಾನಿಸುತ್ತೆ: ಕೃಷ್ಣ ಭೈರೇಗೌಡ
ಕ್ಷೇತ್ರದ ಕಾರ್ಯವನ್ನು ಎಲ್ಲಾ ಜನರು ಮೆಚ್ಚಿದ್ದಾರೆ. ಇಲ್ಲಿಗೆ ಇಂದು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದೀರಿ. ನಮ್ಮ ವಾಹನವನ್ನ ಅಪೇಕ್ಷಿಸದೆ ನಿಮ್ಮ ಪರವಾಗಿ ಇದ್ದೇವೆ ಎಂದು ಬೆಂಬಲ ನೀಡಿದ್ದೀರಿ. ದೇಶವನ್ನ ಹಾಳು ಮಾಡಬೇಕಾದರೆ, ಮೊದಲು ಸಂಸ್ಕೃತಿಯನ್ನ ನಾಶ ಮಾಡುತ್ತಾರೆ. ನಮ್ಮ ಕ್ಷೇತ್ರಕ್ಕೆ ಬಂದ ಅಪಾಯ ಬೇರೆ ಕ್ಷೇತ್ರಗಳಿಗೂ ಬರಬಹುದು ಎಂದು ಕಳವಳ ವ್ಯಕ್ತಪಡಿಸಿದರು.
ವಿಷವನ್ನು ಸೇವಿಸುವ ಶಕ್ತಿ ಎಲ್ಲರಿಗೂ ಬರುವುದಿಲ್ಲ. ಇದು ದೇವರ ಪರೀಕ್ಷೆ. ಮಳೆ ಬರುತ್ತಿದೆ, ಆದರೆ ಯಾರು ಸಹ ಓಡುತ್ತಿಲ್ಲ, ನಿಂತಿದ್ದೀರಿ. ವೈಯಕ್ತಿಕವಾದ ನಿಂದನೆಯಿಂದ ಸಂಸ್ಕೃತಿ ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ. ನೀವೆಲ್ಲರೂ ಸ್ವಾಸ್ಥ್ಯ ಸಂಕಲ್ಪವನ್ನ ಮಾಡಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಬಿಜೆಪಿಯವರಿಗೆ ಬೇರೆಯವರ ಕೆರೆಯಲ್ಲಿ ಮೀನು ಹಿಡಿಯುವುದೇ ಕೆಲಸ: ವೀರಪ್ಪ ಮೊಯ್ಲಿ
ಸೌಜನ್ಯ ಪ್ರಕರಣದ ಆರೋಪಗಳ ಬಗ್ಗೆ ಮೌನ ಮುರಿದ ವೀರೇಂದ್ರ ಹೆಗ್ಗಡೆ ಅವರು, ಯಾವುದೇ ರೀತಿಯ ತನಿಖೆಯಾಗಲಿ. ನಾವೂ ಸಿದ್ಧ. ದಾಖಲೆಯಿಲ್ಲದೆ ಆರೋಪ ಮಾಡುತ್ತಿದ್ದಾರೆ. ನಿಮ್ಮ ದೀಕ್ಷೆಯಿಂದ ಈ ಎಲ್ಲಾ ಕಷ್ಟಗಳೂ ದೂರವಾಗಲಿ. ಧರ್ಮಸ್ಥಳಕ್ಕೆ ಆಪತ್ತು ಬಂದಾಗ ನೀವು ಕೈಗೊಂಡ ಈ ಪ್ರಾರ್ಥನೆಯನ್ನ ಸ್ವಾಮಿಯ ಪಾದಕ್ಕೆ ಅರ್ಪಿಸುತ್ತೇನೆ ಎಂದು ತಿಳಿಸಿದರು.
ಮಂಗಳೂರು: ಹನ್ನೊಂದು ವರ್ಷಗಳ ಬಳಿಕ ಮತ್ತೆ ಮುನ್ನೆಲೆಗೆ ಬಂದ ಧರ್ಮಸ್ಥಳದ ಸೌಜನ್ಯಾ (Soujanya Murder Case) ಅತ್ಯಾಚಾರ, ಕೊಲೆ ಪ್ರಕರಣ ಇದೀಗ ಮುಂಜುನಾಥನ ಸನ್ನಿಧಿ ಬಳಿಯಲ್ಲಿರುವ ಅಣ್ಣಪ್ಪನ ಬೆಟ್ಟದವರೆಗೆ (Annappa Swamy Betta) ಹೋಗಿದೆ.
ಹೌದು. ಇಂದು ಸೌಜನ್ಯ ತಾಯಿ (Soujanya Mother Kusumavathi) ಹಾಗೂ ಆರೋಪ ಹೊತ್ತವರು ಕೂಡ ಅಣ್ಣಪ್ಪನ ಬೆಟ್ಟಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮೊದಲು ನೇತ್ರಾವತಿಯಿಂದ ಧರ್ಮಸ್ಥಳದವರೆಗೆ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗಳ ಕಾರ್ಯಕರ್ತರು ಪಾದಯಾತ್ರೆ ನಡೆಸಿದ್ದಾರೆ. ಈ ಪಾದಯಾತ್ರೆಯಲ್ಲಿ ನೇತ್ರಾವತಿ ಸ್ನಾನಘಟ್ಟದ ಬಳಿಯಿಂದ ಸೌಜನ್ಯ ತಾಯಿ ಕುಸುಮಾವತಿ ಕೂಡ ಸೇರಿಕೊಂಡಿದ್ದಾರೆ. ನೇತ್ರಾವತಿಯಿಂದ ಧರ್ಮಸ್ಥಳದವರೆಗೆ ಪಾದಯಾತ್ರೆ ಮಾಡಿ, ನಂತರ ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗಕ್ಕೆ ತೆರಳಿದೆ.
ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಕಣ್ಣೀರಿಟ್ಟ ಸೌಜನ್ಯ ತಾಯಿ ಕುಸುಮಾವತಿ, ಅಣ್ಣಪ್ಪನಿಗೆ ನಾಣ್ಯ ಕಾಣಿಕೆ ಹಾಕಿ ಪ್ರಾರ್ಥನೆ ಸಲ್ಲಿಸಿದರು. ವಿಹಿಂಪ, ಬಜರಂಗಳ ಮುಖಂಡರ ಜೊತೆಗೂಡಿ ನೈಜ ಆರೋಪಿಗಳ ಪತ್ತೆ ಮಾಡಿಕೊಡುವಂತೆ ಅಣ್ಣಪ್ಪನಲ್ಲಿ ಬೇಡಿಕೊಂಡರು. ಕುಸುಮಾವತಿ ಪ್ರಾರ್ಥನೆಯ ಬಳಿಕ ಸೌಜನ್ಯ ತಾಯಿ ಆರೋಪಿಸಿದವರು ಕೂಡ ಪ್ರಾರ್ಥನೆ ಸಲ್ಲಿಸಲು ಬಂದಿದ್ದಾರೆ. ಮಲ್ಲಿಕ್ ಜೈನ್, ಉದಯ್ ಜೈನ್ ಹಾಗೂ ಧೀರಜ್ ಜೈನ್ ಕೂಡ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಬಂದು, ಈ ಪ್ರಕರಣದಲ್ಲಿ ನಮ್ಮ ಯಾವುದೇ ಪಾತ್ರ ಇಲ್ಲ. ನಮ್ಮ ಹೆಸರನ್ನು ಅನಾವಶ್ಯಕವಾಗಿ ಎಳೆದು ತರಲಾಗಿದೆ ಎಂದು ಕೈಮುಗಿದಿದ್ದಾರೆ. ಇದನ್ನೂ ಓದಿ: ಸೌಜನ್ಯ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ರೆ ನನ್ನನ್ನೂ ಸಾಯಿಸ್ಬೋದು: ವಸಂತ ಬಂಗೇರ
ಒಟ್ಟಿನಲ್ಲಿ ಸಾವಿರಾರು ಜನರ ಮುಂಭಾಗ ಇಂದು ಎರಡೂ ಕಡೆಯವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿತ್ತು. ಸೌಜನ್ಯ ತಾಯಿ ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ಬರುವಾಗ ಗೊಂದಲ ಆಗದಂತೆ ಕ್ರಮವಹಿಸಲಾಗಿತ್ತು.
ಮಂಗಳೂರು: ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ (Sowjanya Case) ಸಂಬಂಧಿಸಿದಂತೆ ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳಿಗೆ ಭಕ್ತರು ಹಾಗೂ ಸಾರ್ವಜನಿಕರು ಗೊಂದಲಕ್ಕೀಡಾಗಬೇಡಿ ಎಂದು ಧರ್ಮಸ್ಥಳದ (Dharmasthala) ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ (Veerendra Heggade) ಅವರು ವಿನಂತಿಸಿಕೊಂಡಿದ್ದಾರೆ.
ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ ಅವರು ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬದ ವಿರುದ್ಧ ಆರೋಪದ ಹಿನ್ನೆಲೆ ಬೇಸರ ವ್ಯಕ್ತಪಡಿಸಿದ್ದಾರೆ.
2012ರಲ್ಲಿ ನಡೆದ ಸೌಜನ್ಯ ಹತ್ಯೆಗೆ ನ್ಯಾಯ ದೊರಕಿಸಿಕೊಡಲು ನಮ್ಮ ಕುಟುಂಬ ಒತ್ತಾಯಿಸಿತ್ತು. ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದೇವೆ. ಸಿಐಡಿ ಬಳಿಕ ದೇಶದ ಅತ್ಯುನ್ನತ ತನಿಖಾ ಸಂಸ್ಥೆ ಸಿಬಿಐ ತನಿಖೆ ನಡೆಸಿತ್ತು. ಇದೀಗ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ರಕ್ಷಾ ಬಂಧನವನ್ನು ಮುಸ್ಲಿಂ ಮಹಿಳೆಯರೊಂದಿಗೂ ಆಚರಿಸಿ: ಬಿಜೆಪಿ ನಾಯಕರಿಗೆ ಮೋದಿ ಕರೆ
ಇದೀಗ ಮತ್ತೆ ಕ್ಷೇತ್ರ ಹಾಗೂ ನಮ್ಮ ಕುಟುಂಬದ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ. ಈ ಪ್ರಕರಣ ಸರ್ಕಾರ ಹಾಗೂ ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿದೆ. ಹೀಗಾಗಿ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಕೊಡಲು ಒತ್ತಾಯಿಸುತ್ತೇನೆ. ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳಿಗೆ ಭಕ್ತರು ಹಾಗೂ ಸಾರ್ವಜನಿಕರು ಗೊಂದಲಕ್ಕೀಡಾಗಬೇಡಿ ಎಂದು ಧರ್ಮಾಧಿಕಾರಿಯವರು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊಂಡಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ – ಒಂದು ಸಭೆ, 5 ವಿಷಯಗಳೇ ಹೈಕಮಾಂಡ್ ಟಾರ್ಗೆಟ್
ಬೆಂಗಳೂರು: ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣದ (Sowjanya Murder) ಮರು ತನಿಖೆ ಮಾಡುವಂತೆ ಸೌಜನ್ಯ ಕುಟುಂಬ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಬಳಿ ಮನವಿ ಮಾಡಿದ್ದಾರೆ.
ಬುಧವಾರ ಸಂಜೆ ಸೌಜನ್ಯ ಕುಟುಂಬ ಸದಸ್ಯರು ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮರು ತನಿಖೆ ನಡೆಸುವಂತೆ ಮನವಿ ಮಾಡಿದರು.
ಏನಿದು ಪ್ರಕರಣ?
ಉಜಿರೆಯ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್ 9ರಂದು ಕಾಣೆಯಾಗಿದ್ದಳು ಎಂದು ತಂದೆ ಚಂದ್ರಪ್ಪ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅಕ್ಟೋಬರ್ 10ರಂದು ಅರೆನಗ್ನ ಸ್ಥಿತಿಯಲ್ಲಿ ಸೌಜನ್ಯ ಶವ ಪತ್ತೆಯಾಗಿತ್ತು. ಬಳಿಕ ಆಕೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: ನೀಲಿ ಬಣ್ಣದ ಜೀನ್ಸ್ ಬ್ಯಾನ್, ಆತ್ಮಹತ್ಯೆಗೈದ್ರೆ ಕುಟುಂಬಕ್ಕೆ ಶಿಕ್ಷೆ – ಉತ್ತರ ಕೊರಿಯಾದಲ್ಲಿದೆ ವಿಚಿತ್ರ ಕಾನೂನುಗಳು
ಮೊದಲು ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ್ದರು. ನಂತರ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಆ ಬಳಿಕ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. 2016ರಲ್ಲಿ ತನಿಖೆ ಪೂರ್ಣಗೊಳಿಸಿದ ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು. ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ನನ್ನು (Santosh Rao) ಕೋರ್ಟ್ ದೋಷಮುಕ್ತಗೊಳಿಸಿತ್ತು. ಸಿಬಿಐ ವಿಶೇಷ ನ್ಯಾಯಾಲಯದ (CBI Special Court) ನ್ಯಾಯಾಧೀಶ ಸಂತೋಷ್.ಸಿ.ಬಿ. ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಯನ್ನು ಖುಲಾಸೆಗೊಳಿಸಿ ಆದೇಶ ಪ್ರಕಟಿಸಿದ್ದರು.
ಮಂಗಳೂರು: ಧರ್ಮಸ್ಥಳದ ಸೌಜನ್ಯ (Dharmasthala Sowjanya Case) ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಹೆತ್ತವರು ಆರೋಪಿಸಿದ್ದ ಧರ್ಮಸ್ಥಳದ ಧೀರಜ್ ಕೆಲ್ಲ, ಉದಯ್ ಜೈನ್ ಮತ್ತು ಮಲ್ಲಿಕ್ ಜೈನ್ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ್ದಾರೆ.
ಮಂಗಳೂರಿನ ಸುದ್ದಿಗೋಷ್ಠಿಯಲ್ಲಿ ಧೀರಜ್ ಕೆಲ್ಲಾ ಮಾತನಾಡಿ, ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಮತ್ತು ಇತರರು ನಮ್ಮ ವಿರುದ್ಧ ಆರೋಪ ಮಾಡಿದ್ದರು. ದುಡ್ಡು ಮಾಡುವ ಏಕೈಕ ಉದ್ದೇಶದಿಂದ ತಿಮರೋಡಿ ಆರೋಪ ಮಾಡಿದ್ದರು. ನಾವು ತನಿಖೆಗೆ ಹಾಜರಾದರೂ ಸುಖಾಸುಮ್ಮನೆ ಆರೋಪ ಮಾಡಲಾಗಿತ್ತು. ಹೀಗಾಗಿ ನಾವು ಕಾನತ್ತೂರು ದೈವದ ಮೊರೆ ಹೋಗಿ ಆಣೆಗೆ ಕರೆದಿದ್ದೆವು, ಆದರೆ ಅದನ್ನು ತಪ್ಪಿಸಿದ್ದರು ಎಂದರು.
2014 ರ ಜುಲೈ ಹಾಗೂ ಆಗಸ್ಟ್ ನಲ್ಲಿ ಸಿಬಿಐ (CBI) ನಮ್ಮನ್ನು ಎರಡೆರೆಡು ಬಾರಿ ಬೆಳ್ತಂಗಡಿಯಲ್ಲಿ ತನಿಖೆ ಮಾಡಿತ್ತು. ಚೆನ್ನೈ, ಬೆಂಗಳೂರಿಗೂ ಕರೆಸಿ ನಮ್ಮನ್ನು ತನಿಖೆ ಮಾಡಿದ್ದಾರೆ. ನಮ್ಮ ರಕ್ತದ ಪರೀಕ್ಷೆ, ಡಿಎನ್ಎ ಪರೀಕ್ಷೆ, ಮಂಪರು ಪರೀಕ್ಷೆ (ಬ್ರೈನ್ ಮ್ಯಾಪಿಂಗ್) ಕೂಡ ಸಿಬಿಐ ಮಾಡಿದೆ. ಮೊಬೈಲ್ ಲೊಕೇಶನ್ ಟ್ರೇಸ್, ಸುಳ್ಳು ಪತ್ತೆಯ ಪಾಲಿಗ್ರಾಫ್ ಟೆಸ್ಟ್ ಜೊತೆ ಅನೇಕ ವೈಜ್ಞಾನಿಕ ಪರೀಕ್ಷೆ ಮಾಡಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಸೌಜನ್ಯ ರೇಪ್, ಮರ್ಡರ್ ಕೇಸ್- ಆರೋಪಿ ಸಂತೋಷ್ ರಾವ್ ಖುಲಾಸೆ
2015ರ ಫೆ.23 ರಂದು ನಮ್ಮ ಮನವಿ ಮೇರೆಗೆ ಸಿಬಿಐ ಬೆಂಗಳೂರಿನ ಕೋರ್ಟ್ ಗೆ ಬ್ರೈನ್ ಮ್ಯಾಪಿಂಗ್ ಗೆ ಅರ್ಜಿ ಹಾಕಿತ್ತು. ಕೋರ್ಟ್ ಅನೇಕ ಬಾರಿ ಇದರ ಅಡ್ಡ ಪರಿಣಾಮಗಳ ಬಗ್ಗೆ ಹೇಳಿತ್ತು. ಆದರೆ ನಮ್ಮ ಮನವಿ ಮೇರೆಗೆ ಕೋರ್ಟ್ ಮಂಪರು ಪರೀಕ್ಷೆ ಮತ್ತು ಬ್ರೈನ್ ಮ್ಯಾಪಿಂಗ್ ಗೆ ಅನುಮತಿ ನೀಡಿತ್ತು. ಕೊನೆಗೆ ಎಲ್ಲಾ ತನಿಖೆ ಬಳಿಕ ಸಿಬಿಐ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು. ಆದರೆ ಆ ಆರೋಪ ಪಟ್ಟಿಯಲ್ಲಿ ಎಲ್ಲೂ ನಮ್ಮನ್ನ ಅಪರಾಧಿ ಮಾಡಿಲ್ಲ. ಆದರೆ ಮತ್ತೆ ಸೌಜನ್ಯ ತಂದೆ ನಮ್ಮನ್ನು ಆರೋಪಿಯನ್ನಾಗಿ ಮಾಡಲು ಅರ್ಜಿ ಹಾಕಿದ್ರು. ಆದರೆ ನಮ್ಮ ಅನುಪಸ್ಥಿತಿಯಲ್ಲಿ ಕೋರ್ಟ್ ನಮಗೆ ಸಮನ್ಸ್ ನೀಡಿತು. ಹೀಗಾಗಿ ನಾವು ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದಾಗ ನ್ಯಾಯಾಲಯ ಸಿಬಿಐ ಆರೋಪ ಪಟ್ಟಿ ಉಲ್ಲೇಖಿಸಿತು ಎಂದು ಹೇಳಿದರು.
ನಮ್ಮ ವಿರುದ್ಧ ಯಾವುದೇ ಸಾಕ್ಷ್ಯ, ಆರೋಪ ಇಲ್ಲದ ಕಾರಣ ಆರೋಪಿತರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್, ಆಕೆಯ ತಂದೆಯ ಮನವಿ ರದ್ದು ಮಾಡಿತು. ಇದೀಗ ಇಡೀ ಕೇಸ್ ನಲ್ಲಿ ಕೋರ್ಟ್ ತೀರ್ಪು ಕೊಟ್ಟಿದೆ. ಹೀಗಿದ್ದರೂ ಮಹೇಶ್ ಶೆಟ್ಟಿ ಮತ್ತೆ ನಮ್ಮ ವಿರುದ್ಧ ಮಾಧ್ಯಮಗಳ ಮುಂದೆ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ನಾವು ಮತ್ತೆ ಅವರನ್ನು ಆಣೆ ಪ್ರಮಾಣಕ್ಕೆ ಕರೀತಾ ಇದ್ದೇವೆ. ಕಾನತ್ತೂರು ನಾಲ್ವರ್ ದೈವಗಳ ಎದುರು ಬಂದು ಆಣೆ ಮಾಡಲಿ ಎಂದು ಧೀರಜ್ ಕೆಲ್ಲಾ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಅಭಯ ಚಂದ್ರ ಜೈನ್ ಉಪಸ್ಥಿತರಿದ್ದರು.