Tag: ಸೌಮೇಂದು ಮುಖರ್ಜಿ

  • ಸಿಡಿ ತನಿಖೆಯ ಎಸ್‍ಐಟಿ ಮುಖ್ಯಸ್ಥರ ರಜೆ ಅವಧಿ ಮತ್ತೆ ವಿಸ್ತರಣೆ

    ಸಿಡಿ ತನಿಖೆಯ ಎಸ್‍ಐಟಿ ಮುಖ್ಯಸ್ಥರ ರಜೆ ಅವಧಿ ಮತ್ತೆ ವಿಸ್ತರಣೆ

    ಬೆಂಗಳೂರು: ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಎಸ್‍ಐಟಿ ಮುಖ್ಯಸ್ಥರು ರಜೆ ಅವಧಿ ವಿಸ್ತರಣೆಯಾಗುವ ಮೂಲಕವಾಗಿ ಮತ್ತೇ ಟ್ವಿಸ್ಟ್ ಪಡೆದುಕೊಂಡಿದೆ.ಇದನ್ನೂಓದಿ:  ರಮೇಶ್ ಜಾರಕಿಹೊಳಿ ಪ್ರಕರಣ- ಎಸ್‍ಐಟಿಗೆ ಮುಖ್ಯಸ್ಥರೇ ಇಲ್ಲ..!

    ರಮೇಶ್ ಜಾರಕಿಹೊಳಿ ರೇಪ್ ಕೇಸ್ ತನಿಖೆ ನಡೆಸ್ತಾ ಇರೋ ಎಸ್‍ಐಟಿ ಮುಖ್ಯಸ್ಥರು ಈ ಹಿಂದೆ ದೀರ್ಘ ರಜೆಯ ಮೇಲೆ ಹೊರಗೆ ಉಳಿದಿದ್ದರು. ಮತ್ತೇ ಇದೀಗ ರಜೆಯನ್ನು ತೆಗೆದುಕೊಂಡಿದ್ದಾರೆ. ಮತ್ತೆ ಒಂದು ತಿಂಗಳು ರಜೆಯನ್ನು ಸೌಮೆಂದು ಮುಖರ್ಜಿ ತೆಗೆದುಕೊಂಡಿದ್ದಾರೆ. ಸದ್ಯ ಎಸ್‍ಐಟಿ ಉಸ್ತುವಾರಿ ನೋಡಿ ಕೊಳ್ಳುತ್ತಿರುವ ಸಂದೀಪ್ ಪಾಟೀಲ್ ಈಗಾಗಲೇ 2 ತಿಂಗಳಿಗೂ ಹೆಚ್ಚು ಕಾಲ ರಜೆಯಲ್ಲಿದ್ದ ಸೌಮೇಂದು ಮುಖರ್ಜಿ ಈಗ ಪುನಃ ರಜೆ ವಿಸ್ತರಣೆ ಮಾಡಿಕೊಳ್ಳುವ ಮೂಲಕವಾಗಿ ಪ್ರಕರಣದ ತನಿಖೆಯನ್ನು ಮತ್ತೆ ಅಲ್ಲಿಗೇ ಬಿಟ್ಟಿದ್ದಾರೆ.

     

    ಎಸ್‍ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ವೈದ್ಯಕೀಯ ರಜೆಯ ಮೇಲೆ ಹೊರಗೆ ಉಳಿದಿದ್ದಾರೆ. ಈ ಮೂಲಕ ಎಸ್‍ಐಟಿಗೆ ಮುಖ್ಯಸ್ಥರೇ ಇಲ್ಲದಂತಾಗಿದೆ. ಎಸ್‍ಐಟಿಯಿಂದ ತನಿಖೆ ನಡೆಯುತ್ತಾ ಇದ್ದರೂ ಎಸ್‍ಐಟಿ ಮುಖ್ಯಸ್ಥರೇ ಇಲ್ಲವಾಗಿದೆ.

    ಅನಾರೋಗ್ಯ ಕಾರಣದಿಂದಾಗಿ ಎಸ್‍ಐಟಿ ಮುಖ್ಯಸ್ಥರು ಸುದೀರ್ಘ ರಜೆಗೆ ಹೋಗಿದ್ದಾರೆ. ಆದರೆ ಈಗ ಈ ರಜೆಯ ಹಿಂದೆಯೇ ಸಾಕಷ್ಟು ಅನುಮಾನ ಹುಟ್ಟಿಕೊಂಡಿದೆ. ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಒತ್ತಡ ಸಹಿಲಾರದೇ ರಜೆ ಮೇಲೆ ತೆರಳಿದ್ರಾ..? ಎಂಬ ಅನುಮಾನಗಳು ಕೂಡ ಇದೆ. ಇಡೀ ಪ್ರಕರಣ ಬೇರೆ ರೀತಿ ಸಾಗುತ್ತಾ ಇದೆ. ಅದೇ ವಿಚಾರಕ್ಕೆ ಹೊರನಡೆದ್ರಾ..? ಈ ಅನುಮಾನಗಳು ಈಗ ಶುರುವಾಗಿದ್ದು, ಯಾವುದೇ ಮಾಹಿತಿಯನ್ನು ಹೊರಗೆ ಹಾಕಿಲ್ಲ. ಸೌಮೇಂದು ಮುಖರ್ಜಿ ಅವರ ಅನುಪಸ್ಥಿತಿಯಲ್ಲಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತನಿಖೆಯ ಜವಬ್ದಾರಿ ಹೊತ್ತಿದ್ದಾರೆ.

  • ರಮೇಶ್ ಜಾರಕಿಹೊಳಿ ಪ್ರಕರಣ- ಎಸ್‍ಐಟಿಗೆ ಮುಖ್ಯಸ್ಥರೇ ಇಲ್ಲ..!

    ರಮೇಶ್ ಜಾರಕಿಹೊಳಿ ಪ್ರಕರಣ- ಎಸ್‍ಐಟಿಗೆ ಮುಖ್ಯಸ್ಥರೇ ಇಲ್ಲ..!

    ಬೆಂಗಳೂರು: ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.

    ಹೌದು, ರಮೇಶ್ ಜಾರಕಿಹೊಳಿ ರೇಪ್ ಕೇಸ್ ಅಲ್ಲಿ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ತನಿಖೆ ನಡೆಸ್ತಾ ಇರೋ ಎಸ್‍ಐಟಿ ಮುಖ್ಯಸ್ಥರೇ ದೀರ್ಘ ರಜೆಯ ಮೇಲೆ ಹೊರಗೆ ಉಳಿದಿದ್ದಾರೆ.

    ಎಸ್ ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿ ವೈದ್ಯಕೀಯ ರಜೆಯ ಮೇಲೆ ಹೊರಗೆ ಉಳಿದಿದ್ದರು. ಈ ಮೂಲಕ ಎಸ್‍ಐಟಿಗೆ ಮುಖ್ಯಸ್ಥರೇ ಇಲ್ಲದಂತಾಗಿದೆ. ಎಸ್‍ಐಟಿಯಿಂದ ತನಿಖೆ ನಡೆಯುತ್ತಾ ಇದ್ದರೂ ಎಸ್‍ಐಟಿ ಮುಖ್ಯಸ್ಥರೇ ಇಲ್ಲವಾಗಿದೆ. ಇದನ್ನೂ ಓದಿ: ಜಾರಕಿಹೊಳಿ ಕೇಸ್ ಆರೋಪಿಗಳಿಗೆ ಜಾಮೀನು

    ಅನಾರೋಗ್ಯ ಕಾರಣದಿಂದಾಗಿ ಎಸ್‍ಐಟಿ ಮುಖ್ಯಸ್ಥರು ಸುದೀರ್ಘ ರಜೆಗೆ ಹೋಗಿದ್ದಾರೆ. ಆದರೆ ಈಗ ಈ ರಜೆಯ ಹಿಂದೆಯೇ ಸಾಕಷ್ಟು ಅನುಮಾನ ಹುಟ್ಟಿಕೊಂಡಿದೆ. ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಒತ್ತಡ ಸಹಿಲಾರದೇ ರಜೆ ಮೇಲೆ ತೆರಳಿದ್ರಾ..? ಎಂಬ ಅನುಮಾನಗಳು ಕೂಡ ಇದೆ.

    ಇಡೀ ಪ್ರಕರಣ ಬೇರೆ ರೀತಿ ಸಾಗುತ್ತಾ ಇದೆ. ಅದೇ ವಿಚಾರಕ್ಕೆ ಹೊರನಡೆದ್ರಾ..? ಈ ಅನುಮಾನಗಳು ಈಗ ಶುರುವಾಗಿದ್ದು, ಯಾವುದೇ ಮಾಹಿತಿಯನ್ನು ಹೊರಗೆ ಹಾಕಿಲ್ಲ. ಸೌಮೆಂದು ಮುಖರ್ಜಿ ಅವರ ಅನುಪಸ್ಥಿತಿಯಲ್ಲಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತನಿಖೆಯ ಜವಬ್ದಾರಿ ಹೊತ್ತಿದ್ದಾರೆ.