Tag: ಸೌರಭ್ ಭಾರದ್ವಾಜ್

  • ಆಪ್ ನಾಯಕ ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ

    ಆಪ್ ನಾಯಕ ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ

    – 12 ಸ್ಥಳಗಳಲ್ಲಿ ದಾಖಲೆಗಳಿಗಾಗಿ ಶೋಧ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧ ಮಾಜಿ ಸಚಿವ ಹಾಗೂ ಹಿರಿಯ ಆಮ್ ಆದ್ಮಿ ಪಕ್ಷದ ನಾಯಕ (AAP leader) ಸೌರಭ್ ಭಾರದ್ವಾಜ್ (Saurabh Bhardwaj) ಅವರಿಗೆ ಸೇರಿದ 12ಕ್ಕೂ ಹೆಚ್ಚು ಸ್ಥಳಗಳ ಮೇಲೆ ಇಡಿ (Enforcement Directorate) ಅಧಿಕಾರಿಗಳು ದಾಳಿ ಮಾಡಿದ್ದಾರೆ.

    ಜಿಎನ್‌ಸಿಟಿಡಿ ಆರೋಗ್ಯ ಯೋಜನೆಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದ್ದು, ಇದರಲ್ಲಿ ಸೌರಭ್ ಭಾರದ್ವಾಜ್ ಭಾಗಿಯಾಗಿದ್ದಾರೆ ಎಂದು ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಆರೋಪಿಸಿದ್ದರು. ಇದನ್ನೂ ಓದಿ: ಭಾರತೀಯ ನೌಕಾಪಡೆಗೆ ಬಲ; 2 ನೀಲಗಿರಿ ವರ್ಗದ ಯುದ್ಧನೌಕೆಗಳ ನಿಯೋಜನೆ

    ಈ ಸಂಬಂಧ ಮಂಗಳವಾರ ಇಡಿ ಅಧಿಕಾರಿಗಳು ಸೌರಭ್ ಭಾರದ್ವಾಜ್ ಅವರಿಗೆ ಸೇರಿದ 12ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಮಂತ್ರಾಲಯ ಶ್ರೀಗಳಿಂದ ಪರಿಸರ ಜಾಗೃತಿ – 100ಕ್ಕೂ ಹೆಚ್ಚು ಮಣ್ಣಿನ ಗಣೇಶ ವಿತರಣೆ

    2018-2019ರಲ್ಲಿ, ಆಪ್ ನೇತೃತ್ವದ ದೆಹಲಿ ಸರ್ಕಾರವು 24 ಆಸ್ಪತ್ರೆಗಳ ನಿರ್ಮಾಣಕ್ಕಾಗಿ 5,590 ಕೋಟಿ ರೂ. ಹಣದ ಯೋಜನೆಗಳನ್ನು ಅನುಮೋದಿಸಿತ್ತು. ಐಸಿಯು ಆಸ್ಪತ್ರೆಯನ್ನು 6 ತಿಂಗಳಲ್ಲಿ ಪೂರ್ಣಗೊಳಿಸಬೇಕಿತ್ತು. ಆದರೆ ಮೂರು ವರ್ಷಗಳ ನಂತರವೂ ಕೆಲಸ ಅಪೂರ್ಣವಾಗಿಯೇ ಇತ್ತು. 800 ಕೋಟಿ ರೂ. ಹಣ ಖರ್ಚು ಮಾಡಿದರೂ, 50% ರಷ್ಟು ಕೆಲಸ ಮಾತ್ರ ಪೂರ್ಣಗೊಂಡಿದೆ ಎಂದು ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ದೆಹಲಿ ಪೊಲೀಸರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎಫ್‌ಐಆರ್ ದಾಖಲಿಸಿತ್ತು.

    ದಾಳಿ ವೇಳೆ ವಶಪಡಿಸಿಕೊಂಡ ಆಸ್ತಿಗಳ ವಿವರ ಮತ್ತು ಪತ್ತೆಯಾದ ಆರ್ಥಿಕ ಅಕ್ರಮಗಳ ವಿವರಗಳನ್ನು ಕೇಂದ್ರ ತನಿಖಾ ಸಂಸ್ಥೆ ಇನ್ನೂ ಬಹಿರಂಗಪಡಿಸಿಲ್ಲ.

    ಗ್ರೇಟರ್ ಕೈಲಾಶ್‌ನಿಂದ ಮೂರು ಬಾರಿ ಶಾಸಕರಾಗಿರುವ ಭಾರದ್ವಾಜ್, ದೆಹಲಿಯ ಆರೋಗ್ಯ, ನಗರಾಭಿವೃದ್ಧಿ ಮತ್ತು ಜಲ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ದೆಹಲಿ ಜಲ ಮಂಡಳಿಯ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇದನ್ನೂ ಓದಿ: ರಾಹು-ಕೇತು ದೋಷಗಳನ್ನು ಗಣೇಶ ಹೇಗೆ ಗುಣಪಡಿಸುತ್ತಾನೆ?

    ಇಡಿ ದಾಳಿ ಬೆನ್ನಲ್ಲೇ ಎಎಪಿ ನಾಯಕಿ, ಮಾಜಿ ಸಿಎಂ ಆತಿಶಿ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಇದು ಪ್ರಧಾನಿ ಮೋದಿ ಅವರ ಪದವಿ ವಿಚಾರದ ಕುರಿತ ವಿಷಯವನ್ನು ಬೇರೆಡೆ ಸೆಳೆಯುವ ಪ್ರಯತ್ನ ಎಂದು ಕಿಡಿಕಾರಿದ್ದಾರೆ.

    ಅಲ್ಲದೇ ಎಎಪಿ ನಾಯಕ ಮನೀಶ್ ಸಿಸೋಡಿಯಾ ಪ್ರತಿಕ್ರಿಯಿಸಿ, ಸೋಮವಾರ ಇಡೀ ದೇಶವೇ ಪ್ರಧಾನಿ ಮೋದಿಯವರ ಪದವಿ ಕುರಿತು ಪ್ರಶ್ನೆ ಎತ್ತಿತ್ತು. ಯಾವಾಗೆಲ್ಲಾ ಪದವಿ ವಿಚಾರ ಹೊರಬಂದಿದೆಯೋ ಆ ಸಂದರ್ಭಗಳಲ್ಲೆಲ್ಲ ಗಮನ ಬೇರೆಡೆ ಸೆಳೆಯಲು ಈ ರೀತಿ ದಾಳಿ ನಡೆಸಲಾಗಿತ್ತು ಎಂದು ದೂರಿದ್ದಾರೆ.

  • 4ನೇ ಬಾರಿಗೂ ಕೇಜ್ರಿವಾಲ್‌ ಸಿಎಂ ಆಗ್ತಾರೆ – ಸಚಿವ ಸೌರಭ್ ಭಾರದ್ವಾಜ್ ವಿಶ್ವಾಸ

    4ನೇ ಬಾರಿಗೂ ಕೇಜ್ರಿವಾಲ್‌ ಸಿಎಂ ಆಗ್ತಾರೆ – ಸಚಿವ ಸೌರಭ್ ಭಾರದ್ವಾಜ್ ವಿಶ್ವಾಸ

    ನವದೆಹಲಿ: ಅರವಿಂದ್‌ ಕೇಜ್ರಿವಾಲ್‌ (Arvind Kejriwal) 3ನೇ ಬಾರಿಗೆ ಸಿಎಂ ಆಗಿ ಶೀಘ್ರದಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತಾರೆ. 4ನೇ ಬಾರಿಗೂ ಸಿಎಂ ಆಗ್ತಾರೆ ಅನ್ನೋ ವಿಶ್ವಾಸ ನನಗಿದೆ ಎಂದು ಆಪ್‌ ಸಚಿವ ಸೌರಭ್ ಭಾರದ್ವಾಜ್ (Saurabh Bharadwaj) ಹೇಳಿದರು.

    ಗ್ರೇಟರ್‌ ಕೈಲಾಶ್‌ ಕ್ಷೇತ್ರದ ಅಭ್ಯರ್ಥಿಯೂ ಆಗಿರುವ ಸಚಿವ ಸೌರಭ್ ಭಾರದ್ವಾಜ್ ಮತ ಎಣಿಕೆ ಆರಂಭಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದರು. ಅರವಿಂದ್‌ ಕೇಜ್ರಿವಾಲ್‌ 4ನೇ ಬಾರಿಗೂ ಸಿಎಂ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಎಎಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ಬಿಜೆಪಿ ಬೇಕಾದ ಎಲ್ಲಾ ಪ್ರಯತ್ನಗಳನ್ನ ಬಿಜೆಪಿ ಮಾಡಿತು. ಇಡಿ, ಐಟಿ, ಸಿಬಿಐ, ಚುನಾವಣಾ ಆಯೋಗ, ಪೊಲೀಸ್‌ ಇಲಾಖೆ ಸೇರಿ ಎಲ್ಲಾ ಅಧಿಕಾರಿಗಳನ್ನು ಆಪ್‌ ವಿರುದ್ಧ ಪ್ರಯೋಗಿಸಿತು. ಆದ್ರೆ ಜನರ ಆಶೀರ್ವಾದ ಎಎಪಿಗೆ ಇದೆ. ಸಾರ್ವಜನಿಕರು ಕೇಜ್ರಿವಾಲ್‌ರನ್ನ 4ನೇ ಬಾರಿಗೂ ಸಿಎಂ ಮಅಡ್ತಾರೆ. ಶೀಘ್ರದಲ್ಲೇ 3ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ವಿಶ್ವಾಸ ವ್ಯಕ್ತಪಡಿಸಿದರು.

    ಈ ಬಾರಿ ಆಪ್‌ ಕನಿಷ್ಠ 40-45 ಸ್ಥಾನಗಳನ್ನ ಪಡೆಯಲಿದೆ. ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸಲಿದೆ ಎಂಬ ಮಾಹಿತಿ ವಿವಿಧ ಕ್ಷೇತ್ರಗಳಿಂದ ನಮಗೆ ಬರುತ್ತಿದೆ ಎಂದು ಭಾರದ್ವಾಜ್ ಹೇಳಿದ್ದಾರೆ.

    ಸದ್ಯದ ವರದಿ ಪ್ರಕಾರ ಬಿಜೆಪಿ 48 ಕ್ಷೇತ್ರಗಳಲ್ಲಿ ಆಪ್‌ 21 ಹಾಗೂ ಕಾಂಗ್ರೆಸ್‌ 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

  • ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ ರಾಜೀನಾಮೆ – ಸೌರಭ್ ಭಾರದ್ವಾಜ್ ಮತ್ತು ಅತಿಶಿಗೆ ಮಂತ್ರಿ ಸ್ಥಾನ?

    ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ ರಾಜೀನಾಮೆ – ಸೌರಭ್ ಭಾರದ್ವಾಜ್ ಮತ್ತು ಅತಿಶಿಗೆ ಮಂತ್ರಿ ಸ್ಥಾನ?

    ನವದೆಹಲಿ: ಆರೋಗ್ಯ ಸಚಿವ ಸತ್ಯೇಂದ್ರ ಜೈನ್ (Satyendar Jain) ಮತ್ತು ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia) ರಾಜೀನಾಮೆಯಿಂದ ತೆರವಾದ 2 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ನಿರ್ಧರಿಸಿದ್ದು, ಶಾಸಕರಾದ ಸೌರಭ್ ಭಾರದ್ವಾಜ್ (Saurabh Bhardwaj) ಮತ್ತು ಅತಿಶಿ (Atishi) ಹೆಸರನ್ನು ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೆನಾ ಅನುಮತಿಗಾಗಿ ಕಳುಹಿಸಿದೆ.

    ಹೊಸ ಮದ್ಯ ನೀತಿಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಆರೋಪದಲ್ಲಿ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ ಸತ್ಯೇಂದ್ರ ಜೈನ್ ಮತ್ತು ಮನೀಶ್ ಸಿಸೋಡಿಯಾ ರಾಜೀನಾಮೆ ನೀಡಿದ್ದರು. ರಾಜೀನಾಮೆ ಅಂಗೀಕರಿಸಿ ಲೆಫ್ಟಿನೆಂಟ್ ಗವರ್ನರ್ ಮಾಹಿತಿ ನೀಡಿದ್ದ ಕೇಜ್ರಿವಾಲ್ ಹೊಸ ಹೆಸರುಗಳನ್ನು ಕಳುಹಿಸಿಕೊಟ್ಟಿದ್ದಾರೆ.

    ಮನೀಶ್ ಸಿಸೋಡಿಯಾ ಡಿಸಿಎಂ ಮಾತ್ರವಲ್ಲದೇ ಶಿಕ್ಷಣ, ಹಣಕಾಸು, ಯೋಜನೆ, ಭೂಮಿ ಮತ್ತು ಕಟ್ಟಡ, ಸೇವೆಗಳು, ಪ್ರವಾಸೋದ್ಯಮ, ಕಲೆ-ಸಂಸ್ಕೃತಿ ಮತ್ತು ಭಾಷೆ, ಕಾರ್ಮಿಕ ಮತ್ತು ಉದ್ಯೋಗ, ಆರೋಗ್ಯ, ಕೈಗಾರಿಕೆ, ವಿದ್ಯುತ್, ಗೃಹ, ನಗರಾಭಿವೃದ್ಧಿ, ನೀರಾವರಿ, ಲೋಕೋಪಯೋಗಿ ಸೇರಿ 18 ಇಲಾಖೆಗಳನ್ನು ನಿಭಾಯಿಸುತ್ತಿದ್ದರು. ಸತ್ಯೇಂದ್ರ ಜೈನ್ ಆರೋಗ್ಯ, ಗೃಹ, ಕೈಗಾರಿಕೆ ಸೇರಿದಂತೆ 7 ಖಾತೆಗಳನ್ನು ನಿರ್ವಹಿಸುತ್ತಿದ್ದರು. ಇಬ್ಬರ ರಾಜೀನಾಮೆ ಬಳಿಕ ಖಾತೆಗಳನ್ನು ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಮತ್ತು ಸಮಾಜ ಕಲ್ಯಾಣ ಸಚಿವ ರಾಜ್ ಕುಮಾರ್ ಆನಂದ್ ನಡುವೆ ಹಂಚಿಕೆ ಮಾಡಿದೆ. ಇದನ್ನೂ ಓದಿ: ಬಿಜೆಪಿ ಮಾಡದಿದ್ರೆ, ನಾವು ಅಧಿಕಾರಕ್ಕೆ ಬಂದ್ಮೇಲೆ 7ನೇ ವೇತನ ಆಯೋಗ ಜಾರಿ ಮಾಡ್ತೀವಿ: ಸಿದ್ದರಾಮಯ್ಯ

    3 ಬಾರಿ ಶಾಸಕರಾಗಿರುವ ಮತ್ತು ಪ್ರಸ್ತುತ ದೆಹಲಿ ಜಲ ಮಂಡಳಿಯ ಉಪಾಧ್ಯಕ್ಷ ಹುದ್ದೆಯನ್ನು ಹೊಂದಿರುವ ಎಎಪಿ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಮತ್ತು ಮನೀಶ್ ಸಿಸೋಡಿಯಾ ಜೊತೆಗೆ ಕಾರ್ಯ ನಿರ್ವಹಿಸಿದ ಕಾಲ್ಕಾಜಿ ಶಾಸಕಿ ಅತಿಶಿ ಅವರಿಗೆ ರಾಜ್ಯ ಖಾತೆ ನೀಡಲು ನಿರ್ಧರಿಸಿದ್ದು, ಲೆಫ್ಟಿನೆಂಟ್ ಗವರ್ನರ್ ಅನುಮತಿ ಮಾತ್ರ ಬಾಕಿ ಉಳಿದಿದೆ. ಇದನ್ನೂ ಓದಿ: ಏಪ್ರಿಲ್ 1 ರಿಂದಲೇ ವೇತನ ಹೆಚ್ಚಳ ಜಾರಿಗೆ- ಸರ್ಕಾರದಿಂದ ಅಧಿಕೃತ ಆದೇಶ

  • ದೆಹಲಿ ಯುವತಿ ಹತ್ಯೆ ಕೇಸ್ – ಬಂಧಿತ ಐವರಲ್ಲಿ ಓರ್ವ ಬಿಜೆಪಿ ಸದಸ್ಯ: ಎಎಪಿ ಆರೋಪ

    ದೆಹಲಿ ಯುವತಿ ಹತ್ಯೆ ಕೇಸ್ – ಬಂಧಿತ ಐವರಲ್ಲಿ ಓರ್ವ ಬಿಜೆಪಿ ಸದಸ್ಯ: ಎಎಪಿ ಆರೋಪ

    ನವದೆಹಲಿ: ಹೊಸ ವರ್ಷದ ದಿನದಂದೇ ದೆಹಲಿಯಲ್ಲಿ (Newdelhi) ನಡೆದ ಯುವತಿಯ ಭೀಕರ ಹತ್ಯೆ ಪ್ರಕರಣದಲ್ಲಿ ಸಿಕ್ಕ ಐವರು ಆರೋಪಿಗಳಲ್ಲಿ ಒಬ್ಬರು ಬಿಜೆಪಿ (BJP) ಸದಸ್ಯ ಎಂದು ಆಮ್ ಆದ್ಮಿ ಪಕ್ಷ (AAP) ಆರೋಪಿಸಿದೆ.

    ಸುಲ್ತಾನ್‌ಪುರಿಯಲ್ಲಿ ಯುವತಿ ಅಂಜಲಿ ಚಲಿಸುತ್ತಿದ್ದ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಸುಮಾರು 12 ಕಿಮೀ ಎಳೆದೊಯ್ದು ಆಕೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ (Saurabh Bhardwaj) ಮಾತನಾಡಿದ್ದಾರೆ. ಇದನ್ನೂ ಓದಿ: ನಾಟಕದಲ್ಲಿ ಸಿದ್ದರಾಮಯ್ಯಗೆ ಅವಮಾನ- ರಂಗಾಯಣದ ವಿರುದ್ಧ ಅಭಿಮಾನಿಗಳ ಆಕ್ರೋಶ

    ಪ್ರಕರಣದಲ್ಲಿ ಬಂಧಿರಾಗಿರುವ ಐವರು ಆರೋಪಿಗಳಲ್ಲಿ ಒಬ್ಬರಾದ ಮನೋಜ್ ಮಿತ್ತಲ್ ಬಿಜೆಪಿ (BJP) ಸದಸ್ಯನಾಗಿದ್ದಾನೆ. ಆದ್ರೆ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ (Vinai Kumar Saxena) ಹಾಗೂ ಪೊಲೀಸ್ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಈ ಮಾಹಿತಿಯನ್ನ ಮರೆಮಾಚಿದ್ದಾರೆ. ಪೊಲೀಸ್ ಠಾಣೆಯ (Police Station) ಪಕ್ಕದಲ್ಲೇ ಇರುವ ಭಾವಚಿತ್ರದ ಬೋರ್ಡಿಂಗ್ ಸಹ ಮಿತ್ತಲ್ ಬಿಜೆಪಿ ಸದಸ್ಯ ಎಂಬುದನ್ನ ಸ್ಪಷ್ಟಪಡಿಸುತ್ತದೆ ಎಂದು ಹೇಳಿದ್ದಾರೆ.

    ಕಾರಿನಲ್ಲಿ ಸಿಕ್ಕಿಕೊಂಡಿದ್ದ ಮಹಿಳೆಯನ್ನು ಬೀದಿಯಲ್ಲಿ ಎಳೆದೊಯ್ಯುತ್ತಿರುವ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು 22 ಬಾರಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಆದರೂ ಪೊಲೀಸರು ಆರೋಪಿಯನ್ನ ರೆಡ್‌ಹ್ಯಾಂಡಾಗಿ ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲದೇ ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ, ಅವರು ತಮ್ಮ ಕಾರು ಅಪಘಾತಕ್ಕೀಡಾಗಿದೆ ಎಂದು ಆರೋಪಿಗಳು ಹೇಳಿದ್ದರು. ಆದ್ರೆ ಮಹಿಳೆಯನ್ನು ಎಳೆದೊಯ್ದಿರುವುದು ತಿಳಿದಿರಲಿಲ್ಲವೆಂಬುದಾಗಿ ಹೇಳಿದ್ದಾರೆ.

    ಇದಕ್ಕೆ ಪ್ರತಿಕ್ರಿಯಿಸಿರುವ ದೆಹಲಿ ಬಿಜೆಪಿ ಮಾಧ್ಯಮ ಘಟಕದ ಮುಖ್ಯಸ್ಥ ಹರೀಶ್ ಖುರಾನಾ, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತಪ್ಪಿತಸ್ಥರು ಯಾವುದೇ ಪಕ್ಷಕ್ಕೆ ಸೇರಿದ್ದರೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನೋಟು ನಿಷೇಧದ ಅಧಿಸೂಚನೆಯೇ ಕಾನೂನುಬಾಹಿರ: ನ್ಯಾ.ನಾಗರತ್ನ

    ಏನಿದು ಘಟನೆ?
    ದೆಹಲಿಯಲ್ಲಿ ಯುವತಿ ಅಮನ್ ವಿಹಾರ್ ನಿವಾಸಿ ಅಂಜಲಿ (20) ಚಲಿಸುತ್ತಿದ್ದ ಸ್ಕೂಟಿಯು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಯುವತಿಯನ್ನ 12 ಕಿಮೀ ಎಳೆದೊಯ್ದು ಆಕೆ ಸಾವನ್ನಪ್ಪಿದ್ದಳು. ಬಳಿ ನೋಂದಾಯಿತ ಕಾರಿನ ಸಂಖ್ಯೆಯ ಆಧಾರದ ಮೇಳೆ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ, ಘಟನೆಗೆ ಸಂಬಂಧಿಸಿ ಮಾರುತಿ ಸುಜಕಿ ಬಲೆನೊ ಕಾರಿನಲ್ಲಿದ್ದ ಐವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರಲ್ಲಿ ಕ್ರೆಡಿಟ್ ಕಾರ್ಡ್ ಸಂಗ್ರಹ ಏಜೆಂಟ್, ಚಾಲಕ ಹಾಗೂ ಪಡಿತರ ಅಂಗಡಿ ಮಾಲೀಕರಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಲೈವ್ ಡೆಮೋ ಮಾಡಿ ಆಪ್‍ನಿಂದ ಇವಿಎಂ ಹ್ಯಾಕ್: ಯಾರಿಗೆ ಎಷ್ಟು ವೋಟ್ ಬಿತ್ತು?

    ಲೈವ್ ಡೆಮೋ ಮಾಡಿ ಆಪ್‍ನಿಂದ ಇವಿಎಂ ಹ್ಯಾಕ್: ಯಾರಿಗೆ ಎಷ್ಟು ವೋಟ್ ಬಿತ್ತು?

    – ಆಪ್ ಆರೋಪವನ್ನು ತಿರಸ್ಕರಿಸಿದ ಚುನಾವಣಾ ಆಯೋಗ

    ನವದೆಹಲಿ: ಚುನಾವಣೆಯಲ್ಲಿ ಕೇಂದ್ರ ಸರ್ಕಾರದಿಂದ ಇವಿಎಂ ದುರ್ಬಳಕೆ ಆಗುತ್ತಿದೆ ಎಂದು ಆರೋಪ ಮಾಡಿದ್ದ ಆಪ್ ಇಂದು ವಿಧಾನಸಭೆಯಲ್ಲಿ ಲೈವ್ ಡೆಮೋ ನಡೆಸಿ ಹೇಗೆ ಹ್ಯಾಕ್ ಮಾಡಬಹುದು ಎನ್ನುವುದನ್ನು ವಿವರಿಸಿದೆ.

    ಆಪ್ ಶಾಸಕ ಸೌರಭ್ ಭಾರದ್ವಾಜ್ ಸದನದಲ್ಲಿ ಇವಿಎಂ ಹಿಡಿದು ಲೈವ್ ಡೆಮೋ ನೀಡಿದ್ದಾರೆ. ಕೋಡ್ ಬಳಸಿಕೊಂಡು, ಇವಿಎಂ ತಿರುಚಿ ಯಾವುದೇ ಪಕ್ಷ ಗೆಲುವು ಸಾಧಿಸಬಹುದು. ಆಡಳಿತರೂಢ ಕೇಂದ್ರ ಸರ್ಕಾರಕ್ಕೆ ಇದು ಅಸಾಧ್ಯವಲ್ಲ. ಬಿಜೆಪಿ ಇವಿಎಂ ದುರ್ಬಳಕೆ ಮಾಡಿಕೊಂಡು ಚುನಾವಣೆ ಗೆಲ್ಲುತ್ತಿದೆ ಎಂದು ದೂರಿದರು.

    ಡೆಮೋ ತೋರಿಸುವ ಮುನ್ನ ಮಾತನಾಡಿದ ಅವರು, ಇಲ್ಲಿ ತೋರಿಸುತ್ತಿರುವುದು ಚುನಾವಣೆಯಲ್ಲಿ ಬಳಕೆಯಾಗುತ್ತಿರುವ ಇವಿಎಂ ಅಲ್ಲ. ಇವಿಎಂ ರೀತಿಯಲ್ಲೇ ತಯಾರಾಗಿರುವ ಯಂತ್ರವಿದು. ನಾನು ಕಂಪ್ಯೂಟರ್ ಸೈನ್ಸ್ ಎಂಜಿನಿಯರ್ ಆಗಿದ್ದು, ರಾಜಕೀಯಕ್ಕೆ ಸೇರುವ ಮೊದಲು ಹಲವಾರು ಕಂಪೆನಿಗಳಲ್ಲಿ ಕೆಲಸ ಮಾಡಿದ್ದೇನೆ. ಎವಿಎಂ ಹ್ಯಾಕ್ ಮಾಡುವುದು ಕಷ್ಟದ ಕೆಲಸವಲ್ಲ. ಕೇವಲ 90 ಸೆಕೆಂಡ್ ನಲ್ಲಿ ಮದರ್‍ಬೋರ್ಡ್ ಬದಲಾಯಿಸಿ ಹ್ಯಾಕ್ ಮಾಡಬಹುದು ಎಂದು ಅವರು ವಿವರಿಸಿದರು.

    ಡೆಮೋದಲ್ಲಿ ಏನಾಯ್ತು?
    ಪ್ರಾತ್ಯಕ್ಷಿಕೆ ಸಂದರ್ಭದಲ್ಲಿ ಆಪ್‍ಗೆ 10, ಬಿಎಸ್‍ಪಿ 2, ಬಿಜೆಪಿ 3, ಕಾಂಗ್ರೆಸ್ 2, ಎಸ್‍ಪಿ 2 ಮತಗಳನ್ನು ಹಾಕಿದ್ದಾರೆ. ಆದರೆ ಫಲಿತಾಂಶ ಬಂದಾಗ ಆಪ್‍ಗೆ 2 ವೋಟ್ ಬಿದ್ದಿದ್ದರೆ, ಬಿಜೆಪಿಗೆ ಆಪ್‍ನ ವೋಟ್ ಸೇರಿ 11 ವೋಟ್ ಬಿದ್ದಿದೆ. ಬಿಎಸ್‍ಪಿಗೆ 2, ಕಾಂಗ್ರೆಸ್ 2, ಎಸ್‍ಪಿ 2 ವೋಟ್ ಬಿದ್ದಿದೆ.

    ಇವಿಎಂ ತಯಾರಿಸಿದ್ದು ಯಾರು?
    ಐಐಟಿಯ ಹಳೆ ವಿದ್ಯಾರ್ಥಿಗಳು ವಿಶೇಷ ಇವತ್ತಿನ ಡೆಮೋಗಾಗಿ ಇವಿಎಂ ಹೋಲುವ ಯಂತ್ರವನ್ನು ತಯಾರಿಸಿದ್ದಾರೆ. ಅಷ್ಟೇ ಅಲ್ಲದೇ ಇವಿಎಂ ತಜ್ಞರು ಸಹ ಇದನ್ನು ಪರಿಶೀಲಿಸಿದ್ದಾರೆ ಎಂದು ಎಎಪಿಯ ಮೂಲಗಳು ಮಾಹಿತಿ ನೀಡಿವೆ.

    ಇದೆ ವೇಳೆ, ನಾನು ಸವಾಲು ಎಸೆಯುತ್ತೇನೆ, ಮುಂದೆ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪೇಪರ್ ಬ್ಯಾಲೆಟ್ ಬಳಸಿದರೆ ಬಿಜೆಪಿ ಜಯಗಳಿಸಲು ಸಾಧ್ಯವೇ ಇಲ್ಲ ಎಂದು ಸೌರಭ್ ಭಾರದ್ವಾಜ್ ಹೇಳಿದರು. ಈ ವೇಳೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಕೋಲಾಹಲ ಸೃಷ್ಟಿಯಾಯ್ತು.

    ಈ ಮಧ್ಯೆ ಚುನಾವಣಾ ಆಯೋಗ ಆಮ್ ಆದ್ಮಿ ಆರೋಪ ನಿರಾಕರಿಸಿದೆ. ಆಯೋಗ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ಆಪ್ ಚುನಾವಣೆಯಲ್ಲಿ ಬಳಕೆಯಾಗದ ಇವಿಎಂ ಬಳಸಿ ಡೆಮೋ ತೋರಿಸಿದ್ದಾರೆ. ಅಷ್ಟೇ ಅಲ್ಲದೇ ನಮ್ಮ ಅನುಮತಿ ಪಡೆಯದೇ ಪ್ರಾತ್ಯಕ್ಷಿಕೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

    ಈ ವಿಚಾರದ ಬಗ್ಗೆ ಮೇ 12ರಂದು ಎಲ್ಲ ಪಕ್ಷಗಳ ಸಭೆಯನ್ನು ಚುನಾವಣಾ ಆಯೋಗ ಕರೆದಿದ್ದು, ಈ ಸಭೆಯ ಬಳಿಕ ಇವಿಎಂ ಹ್ಯಾಕಥಾನ್ ನಡೆಯುವ ದಿನಾಂಕ ಪ್ರಕಟವಾಗಲಿದೆ.