Tag: ಸೌಹಾರ್ದ ಕ್ರಿಕೆಟ್

  • ಸೌಹಾರ್ದ ಕ್ರಿಕೆಟ್ ಆಡಲು ಹೋಗಿ ಎಡವಟ್ಟು ಮಾಡಿಕೊಂಡ ಬಿಜೆಪಿ ಕೇಂದ್ರ ಸಚಿವ

    ಸೌಹಾರ್ದ ಕ್ರಿಕೆಟ್ ಆಡಲು ಹೋಗಿ ಎಡವಟ್ಟು ಮಾಡಿಕೊಂಡ ಬಿಜೆಪಿ ಕೇಂದ್ರ ಸಚಿವ

    ಭೋಪಾಲ್: ಮಧ್ಯಪ್ರದೇಶದಲ್ಲಿ (Madhya Pradesh) ಹೊಸದಾಗಿ ನಿರ್ಮಿಸಲಾದ ಕ್ರಿಕೆಟ್ ಕ್ರೀಡಾಂಗಣದಲ್ಲಿ (Cricket Stadium) ನಡೆದ ಸೌಹಾರ್ದ ಕ್ರಿಕೆಟ್ ವೇಳೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia) ಅವರು ಹೊಡೆದ ಬಾಲ್ ತಮ್ಮದೇ ಪಕ್ಷದ ಕಾರ್ಯಕರ್ತನ ತಲೆಗೆ ಬಿದ್ದು, ತೀವ್ರ ರಕ್ತಸ್ರಾವವಾದ ಘಟನೆ ನಡೆಸಿದೆ.

    ಬ್ಯಾಟಿಂಗ್ ಮಾಡುವಾಗ ಸಚಿವರು ಹೊಡೆದ ಬಾಲ್ ಅನ್ನು ಕಾರ್ಯಕರ್ತ (BJP Worker) ವಿಕಾಸ್ ಮಿಶ್ರಾ ಕ್ಯಾಚ್ ಹಿಡಿಯಲು ಪ್ರಯತ್ನಿಸಿದರು. ಈ ವೇಳೆ ಕೈತಪ್ಪಿದ ಚೆಂಡು ಕಾರ್ಯಕರ್ತನ ಹಣೆಗೆ ಬಿದ್ದು ಪೆಟ್ಟಾಯಿತು. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನ ತಕ್ಷಣವೇ ಆಸ್ಪತ್ರೆಗೆ (Hospital) ಕರೆದೊಯ್ಯಲಾಯಿತು. ವೈದ್ಯರು ಹಣೆಗೆ ಹೊಲಿಗೆ ಹಾಕಿದ ನಂತರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇದನ್ನೂ ಓದಿ: ‘ಹೋಗತ್ಲಾಗ’ ಎಂದ ಪ್ರೇಮಲೋಕದ ದೊರೆ ಹಂಸಲೇಖ

    ಮಧ್ಯಪ್ರದೇಶದ (Madhya Pradesh) ಇಟೌರಾದಲ್ಲಿ ಹೊಸದಾಗಿ ನಿರ್ಮಿಸಲಾದ ಕ್ರೀಡಾಂಗಣದಲ್ಲಿ, ಸೌಹಾರ್ದ ಕ್ರಿಕೆಟ್ ಆಡುವ ವೇಳೆ ಈ ಘಟನೆ ನಡೆದಿದೆ ಎಂದು ಸ್ಥಳೀಯ ಬಿಜೆಪಿ ಕಾರ್ಯಾಧ್ಯಕ್ಷ ಧೀರಜ್ ದ್ವಿವೇದಿ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ರಾತ್ರೋ ರಾತ್ರಿ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆ!

    ವಿಕಾಸ್ ಗಾಯಗೊಂಡ ತಕ್ಷಣ ಆಟ ನಿಲ್ಲಿಸಿ ಅವರನ್ನ ಸಂಜಯ್ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತು. ಇಂದು ಮಾಜಿ ಸಚಿವ ರಾಜೇಂದ್ರ ಶುಕ್ಲಾ ಮತ್ತು ರೇವಾ ಸಂಸದ ಜನಾರ್ದನ್ ಮಿಶ್ರಾ ಅವರೊಂದಿಗೆ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನ ಆಸ್ಪತ್ರೆಗೆ ಭೇಟಿ ಆರೋಗ್ಯ ವಿಚಾರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k