Tag: ಸ್ಕೂಬಾ ಡೈವ್

  • ಸಮುದ್ರದಾಳದಲ್ಲಿ ಟೀಂ ಇಂಡಿಯಾಕ್ಕೆ ಆಲ್‌ ದಿ ಬೆಸ್ಟ್‌ ಹೇಳಿದ ಸಾಹಸಿಗರು

    ಸಮುದ್ರದಾಳದಲ್ಲಿ ಟೀಂ ಇಂಡಿಯಾಕ್ಕೆ ಆಲ್‌ ದಿ ಬೆಸ್ಟ್‌ ಹೇಳಿದ ಸಾಹಸಿಗರು

    ಕಾರವಾರ: 13ನೇ ಆವೃತ್ತಿಯ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯವು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯುತ್ತಿದ್ದು, ಟೀಂ ಇಂಡಿಯಾ (Team India) ಗೆಲುವಿಗೆ ಕೋಟ್ಯಂತರ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಆದ್ರೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಮುರುಡೇಶ್ವರ ನೇತ್ರಾಣಿ ಅಡ್ವೆಂಚರ್ಸ್ ಸಂಸ್ಥೆಯ ಸಾಹಸಿಗರು ಸಮುದ್ರದಾಳದಲ್ಲಿ ವಿಶೇಷ ಪೋಸ್ಟರ್‌ ಹಿಡಿದು ವಿಭಿನ್ನವಾಗಿ ಶುಭ ಹಾರೈಸಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಮುರುಡೇಶ್ವರ ನೇತ್ರಾಣಿ ಅಡ್ವೆಂಚರ್ಸ್ (Netrani Adventures) ಸಂಸ್ಥೆ ನೇತ್ರಾಣಿ ಸಮುದ್ರದಾಳದ ನಡುಗಡ್ಡೆಯಲ್ಲಿ ಸ್ಕೂಬಾ ಡೈವ್ (‎Scuba Diving) ಮಾಡುವ ಮೂಲಕ ಟೀಂ ಇಂಡಿಯಾ ವಿಶ್ವಕಪ್‌ ಗೆಲ್ಲಲಿ ಎಂದು ಶುಭ ಹಾರೈಸಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ 32 ಓವರ್‌ಗಳಲ್ಲಿ4 ವಿಕೆಟ್‌ ಕಳೆದುಕೊಂಡು 162 ರನ್‌ ಗಳಿಸಿದೆ. ಇದನ್ನೂ ಓದಿ: World Cup 2023- ಬ್ಯಾಟಿಂಗ್ ಮಾಡ್ತಿರೋ ಪತಿಗಳನ್ನು ಹುರಿದುಂಬಿಸ್ತಿರೋ ಅನುಷ್ಕಾ, ಅಥಿಯಾ

    ರೋಹಿತ್‌ ಶರ್ಮಾ 47 ರನ್‌ (31 ಎಸೆತ, 3 ಸಿಕ್ಸರ್‌, 4 ಬೌಂಡರಿ), ಶುಭಮನ್‌ ಗಿಲ್‌ 4 ರನ್‌, ವಿರಾಟ್‌ ಕೊಹ್ಲಿ 54 ರನ್‌ (63 ಎಸೆತ, 4 ಬೌಂಡರಿ) ಮತ್ತು ಶ್ರೇಯಸ್‌ ಅಯ್ಯರ್‌ 4 ರನ್‌ ಗಳಿಸಿದ್ದಾರೆ.

    ಆಸ್ಟ್ರೇಲಿಯಾ ಪರ ಮಾರಕ ಬೌಲಿಂಗ್‌ ದಾಳಿ ನಡೆಸುತ್ತಿರುವ ನಾಯಕ ಪ್ಯಾಟ್‌ ಕಮ್ಮಿನ್ಸ್‌ 2 ವಿಕೆಟ್‌ ಕಿತ್ತರೆ, ಮಿಚೆಲ್‌ ಸ್ಟಾರ್ಕ್‌ ಮತ್ತು ಗ್ಲೇನ್‌ ಮ್ಯಾಕ್ಸ್‌ವೆಲ್‌ ತಲಾ ಒಂದೊಂದು ವಿಕೆಟ್‌ ಪಡೆದಿದ್ದಾರೆ. ಇದನ್ನೂ ಓದಿ: ದಾಖಲೆಗಾಗಿ ಆಡದೇ ಇದ್ದರೂ ವಿಶ್ವದಾಖಲೆ ನಿರ್ಮಿಸಿದ ರೋಹಿತ್‌ ಶರ್ಮಾ 

  • ಅರಬ್ಬಿ ಸಮುದ್ರದ ಹತ್ತು ಮೀಟರ್ ಆಳದಲ್ಲಿ ಸ್ಕೂಬಾ ಡೈವ್ ಮಾಡಿದ್ರು ಅಪ್ಪು

    ಅರಬ್ಬಿ ಸಮುದ್ರದ ಹತ್ತು ಮೀಟರ್ ಆಳದಲ್ಲಿ ಸ್ಕೂಬಾ ಡೈವ್ ಮಾಡಿದ್ರು ಅಪ್ಪು

    ಕಾರವಾರ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕನಸಿನ ಗಂಧದ ಗುಡಿ ಟೀಸರ್ ಇಂದು ಬಿಡುಗಡೆಯಾಗಿದ್ದು, ಈ ದೃಶ್ಯಗಳ ಚಿತ್ರೀಕರಣಕ್ಕಾಗಿ ಅಪ್ಪು ಅರಬ್ಬಿ ಸಮುದ್ರದ ಹತ್ತು ಮೀಟರ್ ಆಳದಲ್ಲಿ ಸ್ಕೂಬಾ ಡೈವ್ ಮಾಡಿದ್ದರು.

    ಅಪ್ಪು ಗಂಧದ ಗುಡಿ ಚಿತ್ರೀಕರಣಕ್ಕಾಗಿ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ, ಜೋಯಿಡಾ, ದಾಂಡೇಲಿ ಭಾಗದ ಅರಣ್ಯ ಹಾಗೂ ಸಮುದ್ರದಾಳದ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಈ ಹಿನ್ನೆಲೆ ಪುನೀತ್ ಅವರು ಸಮುದ್ರದಾಳದಲ್ಲಿ ಸ್ಕೂಬಾ ಡೈವ್ ಮಾಡುವ ಮೂಲಕ ಅಪರೂಪದ ಚಿತ್ರಗಳನ್ನು ಸೆರೆಹಿಡಿದಿದ್ದಾರೆ. ಇದಕ್ಕಾಗಿ ಮುರಡೇಶ್ವರದ ನೇತ್ರಾಣಿ ಅಡ್ವೇಂಚರ್ ಸಂಸ್ಥೆಯಲ್ಲಿ ಸ್ಕೂಬಾ ಡೈವ್ ತರಬೇತಿ ಪಡೆದುಕೊಂಡಿದ್ದರು ಎಂಬ ಸುದ್ದಿ ಈಗ ಬೆಳಕಿಗೆ ಬಂದಿದೆ. ಇದನ್ನೂ ಓದಿ:  ‘ಅಪ್ಪುಶ್ರೀ’ ಪ್ರಶಸ್ತಿ ನೀಡುವಂತೆ ಆಗ್ರಹಿಸಿ ಬರಿಗಾಲಲ್ಲಿ ಪಾದಯಾತ್ರೆ 

    ಅರಬ್ಬಿ ಸಮುದ್ರದ ನೇತ್ರಾಣಿ ದ್ವೀಪದ ಹತ್ತು ಮೀಟರ್ ಆಳದಲ್ಲಿ ಪುನೀತ್ ಆಕ್ಸಿಜನ್ ಸಿಲಿಂಡರ್ ಕಟ್ಟಿಕೊಂಡು ಸ್ಕೂಬಾ ಡೈವ್ ಮಾಡಿದ್ದಾರೆ. ಎರಡು ದಿನ ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವ್ ಮಾಡಿದ್ದ ಅವರು, ಸಮುದ್ರದಾಳದಲ್ಲಿ ಗಂಟೆಗಳ ಕಾಲ ಈಜಾಡಿ ಸಮುದ್ರ ಗರ್ಭದಲ್ಲಿರುವ ಅಪರೂಪದ ಹವಳದ ದಿಬ್ಬಗಳು, ಮೀನುಗಳನ್ನು ಚಿತ್ರೀಕರಿಸಿದ್ದಾರೆ.

    ಈ ಕುರಿತು ಪುನೀತ್ ಅವರಿಗೆ ತರಬೇತಿ ನೀಡಿದ ಹಾಗೂ ಅವರೊಂದಿಗೆ ಸ್ಕೂಬಾ ಡೈ ಮಾಡಿದ ನೇತ್ರಾಣಿ ಅಡ್ವೇಂಚರ್ ತರಬೇತುದಾರ ಗಣೇಶ್ ಹರಿಕಾಂತ್ರ ಅವರು ಪುನೀತ್ ಅವರ ಸಮುದ್ರದಾಳದ ಸಾಹಸ ಕುರಿತು ಹಂಚಿಕೊಂಡಿದ್ದಾರೆ. ಅವರಿಗಿದ್ದ ಪರಿಸರ ಪ್ರೇಮ ಹಾಗೂ ತಮ್ಮ ಕನಸನ್ನು ಅವರು ತಿಳಿಸಿದ್ದರು. ಅವರು ಪ್ರವಾಸೋದ್ಯಮ ಅಭಿವೃದ್ಧಿ ಕನಸು ಕಂಡಿದ್ದರು ಎಂದು ಹಿಂದೆ ಪುನೀತ್ ಅವರು ಹೇಳಿದ ಮಾತುಗಳನ್ನು ನೆನಪಿಸಿಕೊಂಡರು. ಇದನ್ನೂ ಓದಿ:  ಅಪ್ಪು ಕನಸು ನನಸು- ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಔಟ್