Tag: ಸ್ಕೌಟ್ಸ್ ಅಂಡ್ ಗೈಡ್ಸ್

  • ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ರಾಜ್ಯಮಟ್ಟದ ಪ್ರಕೃತಿ ಅಧ್ಯಯನ

    ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ರಾಜ್ಯಮಟ್ಟದ ಪ್ರಕೃತಿ ಅಧ್ಯಯನ

    ಬೆಂಗಳೂರು: ಅರಣ್ಯ ಸಂರಕ್ಷಣೆ ಹಾಗೂ ಪ್ರಾಣಿ ಪಕ್ಷಿಗಳ ಸಂರಕ್ಷಣೆ, ಪ್ರಕೃತಿ ಅಧ್ಯಯನ ಸೇರಿದಂತೆ ಹಲವು ವಿಚಾರಗಳನ್ನು ವಿದ್ಯಾರ್ಥಿಗಳ ಜೊತೆ ಸಮಾಲೋಚಿಸಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಎಂಬುದನ್ನು ಸ್ಕೌಟ್ಸ್ ಅಂಡ್ ಗೈಡ್ಸ್‍ನ ಬೆಂಗಳೂರು ಪೂರ್ವ ಜಿಲ್ಲಾ ಕಾರ್ಯದರ್ಶಿ ನರೇಂದ್ರ ಕುಮಾರ್ ತಿಳಿಸಿದರು.

    ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಅಕ್ಷರ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ಇದನ್ನೂ ಓದಿ: ಎಸ್‍ಪಿ ಆಡಳಿತದಲ್ಲಿ ಉತ್ತರ ಪ್ರದೇಶ ಅಪರಾಧ ಪ್ರಕರಣಗಳಲ್ಲಿ ನಂಬರ್ 1 ಆಗಿತ್ತು : ಅಮಿತ್ ಶಾ

    ಆನೇಕಲ್‍ನಲ್ಲಿ ಕಳೆದ 4 ದಿನಗಳಿಂದ ರಾಜ್ಯಮಟ್ಟದ ರೋವರ್ ರೇಂಜ್ ಪ್ರಕೃತಿ ಅಧ್ಯಯನ ಶಿಬಿರವನ್ನು ಹಮ್ಮಿಕೊಂಡಿದ್ದರು (ರೋವರ್ ರೇಂಜ್ ಅಂದರೆ ಕಾಲೇಜು ಮಟ್ಟದ ಸ್ಕೌಟ್ಸ್ ಅಂಡ್ ಗೈಡ್ಸ್) ಇನ್ನು ರಾಜ್ಯಮಟ್ಟದ ಶಿಬಿರದಲ್ಲಿ ಕರ್ನಾಟಕದಿಂದ 25 ಜಿಲ್ಲೆಗಳಿಂದ 120 ರೋವರ್ ರೇಂಜ್ ವಿದ್ಯಾರ್ಥಿಗಳು ಆಗಮಿಸಿದ್ದರು.

    ಈ ನಾಲ್ಕು ದಿನಗಳಲ್ಲಿ ಪ್ರವಾಸಿ ತಾಣಗಳ ಬಗ್ಗೆ ಪರಿಸರ ಸಂರಕ್ಷಣೆಯ ಬಗ್ಗೆ ಅರಣ್ಯ ಇಲಾಖೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಜಾಗದಲ್ಲಿ ಪ್ಲಾಸ್ಟಿಕ್ ಸಂಗ್ರಹಮಾಡಿ ಹೊರಗಡೆ ತಂದು ಪಂಚಾಯಿತಿಗೆ ನೀಡಲಾಯಿತು ಈ ಕಾರ್ಯಕ್ರಮದ ಉದ್ದಕ್ಕೂ ಪರಿಸರ ರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು.

  • 17 ವರ್ಷಗಳಿಂದ 1 ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಟ್ಟ ಪರಿಸರ ಪ್ರೇಮಿ ಹಾಸನದ ಗಿರೀಶ್

    17 ವರ್ಷಗಳಿಂದ 1 ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಟ್ಟ ಪರಿಸರ ಪ್ರೇಮಿ ಹಾಸನದ ಗಿರೀಶ್

    ಹಾಸನ: ಈಗಿನ ಕಾಲದಲ್ಲಿ ನಾನಾಯ್ತು ನನ್ನ ಮನೆ, ಕುಟುಂಬವಾಯ್ತು ಎನ್ನುವವರೆ ಜಾಸ್ತಿ. ಲೋಕದ ಕುರಿತು ಅಲೋಚಿಸುವವರು ಕಡಿಮೆ. ಆದರೆ ಹಾಸನದ ಆರ್.ಜಿ ಗಿರೀಶ್ ಅವರು ಕಳೆದ 17 ವರ್ಷಗಳಿಂದ ಪರಿಸರ ಸಂರಕ್ಷಣೆ, ಸಮಾಜ ಸೇವೆಗೆ ಶ್ರಮಿಸುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ.

    ಹಾಸನ ತಾಲೂಕಿನ ರಾಮದೇವರಪುರದ ಆರ್.ಜಿ ಗಿರೀಶ್(33) ಅವರು ಪರಿಸರ ಪ್ರೇಮಿ. ಕಳೆದ 17 ವರ್ಷಗಳಿಂದ ಜಿಲ್ಲೆಯಾದ್ಯಂತ ಸಂಚರಿಸಿ ಇದುವರೆಗೂ ಒಂದು ಲಕ್ಷಕ್ಕೂ ಹೆಚ್ಚು ಗಿಡಗಳನ್ನು ನೆಟ್ಟಿದ್ದಾರೆ. ಜೈವಿಕ ಇಂಧನ ಉತ್ಪಾದಿಸುವ ಸಸ್ಯಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

    ಅಷ್ಟೇ ಅಲ್ಲದೆ ಕಳೆದ 7-8 ವರ್ಷಗಳಿಂದ 70ಕ್ಕೂ ಹೆಚ್ಚು ಪುರಾತನ ಕಲ್ಯಾಣಿಗಳ ಹೂಳು ತೆಗೆದು ಅವುಗಳಿಗೆ ಮರುಜೀವ ನೀಡಿದ್ದಾರೆ. ಆ ಕಲ್ಯಾಣಿಗಳೀಗ ಜನ, ಜಾನುವಾರುಗಳಿಗೆ ನೀರಿನ ಮೂಲವಾಗಿವೆ. ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಹೋಯ್ಸಳ, ಚಾಲುಕ್ಯರ ಕಾಲದ ಐತಿಹಾಸಿಕ ಸ್ಥಳಗಳಿಗೆ ಹೊಸ ರೂಪ ಕೊಟ್ಟಿದ್ದಾರೆ. ಮಹಾ ಮಸ್ತಕಾಭಿಷೇಕ, ಹಾಸನಾಂಬೆ ಉತ್ಸವ ಸೇರಿ ಯಾವುದೇ ಸರ್ಕಾರಿ ಕಾರ್ಯಕ್ರಮ ನಡೆದರೂ ಗಿರೀಶ್ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಾರೆ.

    ಕಾಲೇಜು ದಿನಗಳಿಂದಲೇ ಪರಿಸರ ಕಾಳಜಿ ಬೆಳಸಿಕೊಂಡ ಗಿರೀಶ್ ಒಬ್ಬರಿಂದಲೇ ಈ ಕಾರ್ಯ ಆಗುವುದಿಲ್ಲ ಎನ್ನುವುದು ಗೊತ್ತಾಗಿ ನಾಲ್ಕು ವರ್ಷಗಳಿಂದ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ತಮ್ಮ ಪರಿಸರ ಪ್ರೇಮ, ಸಮಾಜಮುಖಿ ಕೆಲಸಗಳನ್ನು ಮುಂದುವರಿಸಿದ್ದಾರೆ.