Tag: ಸ್ಕ್ರೂಡ್ರೈವರ್

  • ಸ್ಕ್ರೂಡ್ರೈವರ್‌ನಲ್ಲಿ ಪತ್ನಿಯ ಕತ್ತು, ಎದೆಗೆ ಚುಚ್ಚಿ ಕೊಲೆಗೆ ಮುಂದಾದ ಪತಿ!

    ಸ್ಕ್ರೂಡ್ರೈವರ್‌ನಲ್ಲಿ ಪತ್ನಿಯ ಕತ್ತು, ಎದೆಗೆ ಚುಚ್ಚಿ ಕೊಲೆಗೆ ಮುಂದಾದ ಪತಿ!

    ಚಿಕ್ಕಬಳ್ಳಾಪುರ: ಸ್ಕ್ರೂಡ್ರೈವರ್ ಮೂಲಕ ಪತ್ನಿಯ ಕತ್ತು, ಎದೆಗೆ ಚುಚ್ಚಿ ಪತಿ ಕೊಲೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ದಲ್ಲಿ ನಡೆದಿದೆ. ಗಾಯಗೊಂಡಾಕೆಯನ್ನು ನಿರ್ಮಲಾ ಎಂದು ಗುರುತಿಸಲಾಗಿದೆ. ಈಕೆಯನ್ನು ಗಂಡ ರಾಜೇಶ್ ಕೊಲೆ ಮಾಡಲು ಯತ್ನಿಸಿದ್ದಾನೆ.

    ಏಮಿದು ಘಟನೆ..?: ಪ್ರೀತಿಸಿ ಮದುವೆ (Nirmala- Rajesh Love Marriage) ಯಾದ ನಿರ್ಮಲಾ, ಪತಿ ರಾಜೇಶ್‍ನನ್ನು ಬಿಟ್ಟು ತಿಂಗಳಿಂದ ನಾಪತ್ತೆಯಾಗಿದ್ದಳು. ಹೆಂಡತಿ ಎಲ್ಲೋ ಹೊದ್ಲು ಅಂತ ಹುಡುಕಾಡ್ತಿದ್ದ ಗಂಡನ ಕಣ್ಣಿಗೆ ಕಂಡಿದ್ದೇ ತಡ, ಹೆಂಡತಿನಾ ಜೊತೆ ಬರುವಂತೆ ಪರಿಪರಿಯಾಗಿ ಕೇಳಿಕೊಂಡಿದ್ದಾನೆ. ಆದರೆ ಹೆಂಡತಿ ನಾನು ಬರಲ್ಲ ಅಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಗಂಡ ಆಕೆಯ ಮುಖಮೂತಿ ನೋಡದೆ ಸ್ಕ್ರೂಡ್ರೈವರ್‍ನಿಂದ ಕುತ್ತಿಗೆಗೆ ಚುಚ್ಚಿ ಹಾಗೂ ಚಾಕುವಿನಿಂದ ಕೊಯ್ದು ಕೊಲೆ ಮಾಡಲು ಯತ್ನಿಸಿದ್ದಾನೆ. ಅದೃಷ್ಟವಶಾತ್ ಆಕೆ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆ ಸೇರಿದ್ದಾಳೆ. ಇತ್ತ ಗಂಡ, ಹೆಂಡತಿ ಸತ್ತೇ ಹೋದಳು ಅನ್ನೋ ಭಯದಿಂದ ಬಾರ್‍ಗೆ ಹೋಗಿ ಎಣ್ಣೆ ಕುಡಿದು ನಶೆಯಲ್ಲಿ ಧೈರ್ಯದಿಂದ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಇದನ್ನೂ ಓದಿ: ಅಂಕೋಲಾ ಬಸ್ ನಿಲ್ದಾಣದಲ್ಲಿ ಕಸ ಸ್ವಚ್ಛ ಮಾಡಿದ ಹಾಲಕ್ಕಿ ಮಹಿಳೆಯನ್ನು ಹೊಗಳಿದ ಆನಂದ್ ಮಹೇಂದ್ರ

    ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನಿಮ್ಮಲಕುಂಟೆ ನಿವಾಸಿಯಾಗಿರುವ ರಾಜೇಶ್, ವೃತ್ತಿಯಲ್ಲಿ ಬೋರ್ ಮೋಟಾರ್ ರಿಪೇರಿ ಮಾಡುತ್ತಿದ್ದಾನೆ. ಈತ ಬೆಂಗಳೂರಿನ ಕೆ.ಆರ್ ಪುರಂನ ಲೀಲಾ ಜೊತೆ ಮೊದಲ ಮದುವೆಯಾಗಿದ್ದ. ಆದರೆ ಲೀಲಾ ಬಾಣಂತಿಗೆ ತವರು ಮನೆ ಸೇರಿದಾಗ ಆಕೆಯ ಅಕ್ಕ ನಿರ್ಮಲಾಳನ್ನ ಪ್ರೀತಿಸಿ ಮದುವೆಯಾಗಿದ್ದಾನೆ. ನಂತರ ಕೂಲಿ ಅರಸಿ ಊರೂರು ಅಲೆದು ಸಂಸಾರ ನಡೆಸುತ್ತಿದ್ದರು. ಆದರೆ ಕಳೆದ 1 ತಿಂಗಳ ಹಿಂದೆ ದಿಬ್ಬೂರಹಳ್ಳಿಯಲ್ಲಿ ವಾಸವಿದ್ದಾಗ ನಿರ್ಮಲಾ, ರಾಜೇಶ್ ಗೆ ಏನೂ ಹೇಳದೆ ಹೊರಟು ಹೋಗಿದ್ದಳು. ಹೀಗಾಗಿ ಹೆಂಡತಿ ಹುಡುಕಾಟ ನಡೆಸುತ್ತಿದ್ದ ರಾಜೇಶ್ ಗೆ ನಿನ್ನೆ ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿ ಬಳಿ ನಿರ್ಮಲಾ ಕಂಡಿದ್ದಾಳೆ.

    ಸ್ನೇಹಿತೆ ಸುನೀತಾ ಮನೆಯಲ್ಲಿದ್ದ ನಿರ್ಮಲಾಳನ್ನ ಪರಿಪರಿಯಾಗಿ ತನ್ನ ಜೊತೆ ವಾಪಸ್ ಬರುವಂತೆ ಕೇಳಿಕೊಂಡಿದ್ದಾನೆ. ಆದರೆ ನಾನು ನಿನ್ನ ಜೊತೆ ಬರಲ್ಲ ನನ್ನ ಮರ್ಯಾದೆ ತೆಗೀಬೇಡಿ ಅಂತ ಗಲಾಟೆ ಮಾಡಿದ್ದಾಳೆ. ಇದರಿಂದ ರೋಸಿ ಹೋದ ರಾಜೇಶ್, ಸುನೀತಾ ಮನೆಯಲ್ಲಿಯೇ ಇದ್ದ ಸ್ಕ್ರೂಡ್ರೈವರ್ ತಗೊಂಡು ನಿರ್ಮಲಾ ಕುತ್ತಿಗೆಗೆ ಇರಿದಿದ್ದಾನೆ. ತನ್ನ ಬಳಿಯೇ ಇದ್ದ ಚಿಕ್ಕ ಚಾಕುವಿನಿಂದ ಎದೆ ಹಾಗೂ ಕುತ್ತಿಗೆ ಮುಖದ ಮೇಲೆ ಕೊಯ್ದಿದ್ದಾನೆ.

    ನಿರ್ಮಲಾ ಹೇಳೋ ಪ್ರಕಾರ, ಎಡಗೈ ಮೂಳೆ ಸಮಸ್ಯೆಗೆ ಗಂಡ ಚಿಕಿತ್ಸೆ ಕೊಡಿಸ್ತಿಲ್ಲ ಅಂತ ತವರು ಮನೆ ಸೇರಿದ್ದೆ. ಚಿಕಿತ್ಸೆ ಪಡೆಯೋಕೆ ದುಡ್ಡು ಇಲ್ಲ ಅಂತ ಮುದ್ದೇನಹಳ್ಳಿಯ ಪ್ರೀ ಹಾಸ್ಪಿಟಲ್ ಗೆ ಟ್ರೀಟ್ ಮೆಂಟ್ ಗೆ ಅಂತ ಬಂದಿದ್ದೆ. ಈ ವೇಳೆ ಸ್ನೇಹಿತೆ ಸುನೀತಾ ಸಿಕ್ಕಿದರು. ಅವರ ಮನೆಗೆ ಹೋಗಿದ್ದೆ. ಆದರೆ ಅಲ್ಲಿಗೆ ನನ್ನ ಗಂಡ ಬಂದು ಏಕಾಏಕಿ ಗಲಾಟೆ ಮಾಡಿ ಮರ್ಡರ್ ಮಾಡೋಕೆ ಮುಂದಾದನು. ಈ ವೇಳೆ ಸುನೀತಾ ಸಹ ನಿರ್ಮಲಾ ರಕ್ಷಣೆಗೆ ಮುಂದಾಗಿದ್ದು, ಆಕೆಯ ಕೈಗೆ ಗಾಯವಾಗಿದೆ ಎಂದು ತಿಳಿಸಿದ್ದಾಳೆ.

    ಸದ್ಯ ಗಾಯಾಳು ನಿರ್ಮಲಾಳಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

  • ತಂಪು ಪಾನೀಯ ಬಾಟಲಿಯಲ್ಲಿ ಸ್ಕ್ರೂಡ್ರೈವರ್ ಪತ್ತೆ – ಗ್ರಾಹಕ ಶಾಕ್

    ತಂಪು ಪಾನೀಯ ಬಾಟಲಿಯಲ್ಲಿ ಸ್ಕ್ರೂಡ್ರೈವರ್ ಪತ್ತೆ – ಗ್ರಾಹಕ ಶಾಕ್

    ಶಿವಮೊಗ್ಗ: ತಂಪು ಪಾನೀಯದ ಬಾಟಲಿಯೊಂದರಲ್ಲಿ ಕಬ್ಬಿಣದ ಸ್ಕ್ರೂಡ್ರೈವರ್ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಹೋಟೆಲ್ ವೊಂದರಲ್ಲಿ ನಡೆದಿದೆ.

    ಇಂದು ಸಂಜೆಯ ವೇಳೆಗೆ ಮೂರು ಮಂದಿ ಗ್ರಾಹಕರ ಗುಂಪೊಂದು ಹೋಟೆಲ್ ಗೆ ತೆರಳಿ ತಂಪು ಪಾನೀಯ ಕುಡಿಯಲು ಹೋಗಿದ್ದಾರೆ. ಹೋಟೆಲ್ ನವರು ತಂಪು ಪಾನೀಯವನ್ನು ನೀಡಿದ್ದಾರೆ. ಈ ವೇಳೆ ಗ್ರಾಹಕ ಸುರೇಂದ್ರ ಎಂಬುವರು ಕುಡಿಯುತ್ತಿದ್ದ ತಂಪು ಪಾನೀಯ ಬಾಟಲಿಯೊಂದರಲ್ಲಿ ಕಬ್ಬಿಣದ ಸ್ಕ್ರೂಡ್ರೈವರ್ ಪತ್ತೆಯಾಗಿದ್ದು ತಂಪು ಪಾನೀಯ ಕುಡಿಯುತ್ತಿದ್ದ ಗ್ರಾಹಕನಿಗೆ ಶಾಕ್ ಆಗಿದೆ.

    ಕುಡಿಯುತ್ತಿದ್ದ ಬಾಟಲಿಯನ್ನು ಅರ್ಧಕ್ಕೆ ಬಿಟ್ಟು ಹೋಟೆಲ್ ಮಾಲೀಕರನ್ನು ಕರೆದು ತೋರಿಸಿದ್ದಾರೆ. ಈ ವೇಳೆ ಹೋಟೆಲ್ ಮಾಲೀಕ ಬಾಟಲಿಯನ್ನು ಹಿಂಪಡೆದುಕೊಂಡಿದ್ದಾರೆ. ಆದರೆ ಅಷ್ಟಕ್ಕೇ ಸಮಾಧಾನಗೊಳ್ಳದ ಗ್ರಾಹಕ ಘಟನೆ ಬಳಿಕ ಆಹಾರ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿ ಸ್ಥಳಕ್ಕೆ ಬರುವಂತೆ ಮನವಿ ಮಾಡಿದ್ದರು.

    ಗ್ರಾಹಕರು ನೀಡಿದ ದೂರಿನ ಮೇರೆಗೆ ಹೋಟೆಲ್ ಗೆ ಆಗಮಿಸಿದ ಅಧಿಕಾರಿಗಳು ತಂಪು ಪಾನೀಯ ಬಾಟಲಿಯನ್ನು ಪರಿಶೀಲನೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಈ ಬಗ್ಗೆ ತಂಪು ಪಾನೀಯ ಕಂಪನಿಯ ಅಧಿಕಾರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಆಹಾರ ಇಲಾಖೆ ಅಧಿಕಾರಿ ಡಾ. ಶಮಾ ತಿಳಿಸಿದ್ದಾರೆ.

  • ಬೆಕ್ಕನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದವನಿಗೆ 9 ಸಾವಿರ ದಂಡ

    ಬೆಕ್ಕನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದವನಿಗೆ 9 ಸಾವಿರ ದಂಡ

    ಮುಂಬೈ: 2018 ರಲ್ಲಿ ಬೆಕ್ಕನ್ನು ಸ್ಕ್ರೂಡ್ರೈವರ್‌ನಿಂದ  ಚುಚ್ಚಿ ಕೊಂದವನಿಗೆ ಮುಂಬೈ ಕೋರ್ಟ್ 9,150 ರೂ. ದಂಡ ಹಾಕಿದೆ.

    40 ವರ್ಷ ಸಂಜಯ್ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದು ಕೋರ್ಟ್ ದಂಡ ವಿಧಿಸಿದೆ. ಈತ 2018 ಮೇ 14 ರಂದು ತನ್ನ ಮನೆಗೆ ಬಂದ ಬೆಕ್ಕನ್ನು ಸ್ಕ್ರೂಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿದ್ದ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಂಜಯ್ ವಿರುದ್ಧ ಆರ್.ಸಿ.ಎಫ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಮೇ 14 ರಂದು ಮನೆಗೆ ಬಂದು ಮನೆಯಲ್ಲಿ ಆಟವಾಡುತ್ತಿದ್ದ ಬೆಕ್ಕನ್ನು ಸಂಜಯ್ ಗಡೆ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಸಾಯಿಸಿ ಹಾಕಿದ್ದ. ನಂತರ ಆದರ ಮೃತದೇಹವನ್ನು ಕೋಲಿನ ಮೇಲೆ ಇಟ್ಟುಕೊಂಡು ಅದನ್ನು ಬಿಸಾಡಲು ಹೋಗಿದ್ದಾನೆ. ಈ ಸಮಯದಲ್ಲಿ ಸ್ಥಳೀಯರು ಯಾರೋ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಈ ಫೋಟೋ ವೈರಲ್ ಆದ ನಂತರ ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ನಿರಾಲಿ ಕೊರಡಿಯಾ ಅವರು ಸಂಜಯ್ ವಿರುದ್ಧ ಮೇ 21, 2018 ರಂದು ದೂರು ನೀಡಿದ್ದರು. ಇದನ್ನು ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ಗುಪ್ತಾಂಗಕ್ಕೆ ಸ್ಕ್ರೂ ಡ್ರೈವರ್‌ನಿಂದ ಇರಿತ – ಐಸಿಯುನಲ್ಲಿದ್ದ ಯುವತಿ ಸಾವು

    ದೂರನ್ನು ದಾಖಲಿಸಿಕೊಂಡ ಪೊಲೀಸರು ಸಂಜಯ್ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಕಟ್ಟುವ ಕಾಯ್ದೆ ಮತ್ತು ವಿವಿಧ ವಿಭಾಗಗಳ ಆಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಫೋಟೋವನ್ನು ಸಾಕ್ಷಿಯಾಗಿ ನೀಡಿದ್ದರು. ಇಂದು ಈ ಪ್ರಕರಣದ ತೀರ್ಪು ಪ್ರಕಟಿಸಿದ ನ್ಯಾಯಾಧೀಶರು ಸಂಜಯ್ ಗಡೆಗೆ 9,150 ರೂ. ದಂಡ ವಿಧಿಸಿದ್ದಾರೆ.

    ಪೊಲೀಸರು ನೀಡಿರುವ ಸಾಕ್ಷಿಯನ್ನು ಪರಿಶೀಲನೆ ಮಾಡಿದರೆ ಸಂಜಯ್ ಗಡೆ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಬೇಕು. ಆದರೆ ಅವರು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಾಗಿ ಇಲ್ಲದ ಕಾರಣ ಆತನಿಗೆ ಕೇವಲ ದಂಡ ವಿಧಿಸಲಾಗಿದೆ ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.