Tag: ಸ್ಟಾಲಿನ್

  • ಜನಸಂಖ್ಯೆಗೆ ಆಧಾರದ ಮೇಲೆ ಕ್ಷೇತ್ರಗಳ ಪುನರ್‌ವಿಂಗಡನೆಗೆ ಅವಕಾಶ ನೀಡಬಾರದು, ನಾವು ಒಟ್ಟಾಗಬೇಕು: ಸ್ಟಾಲಿನ್‌

    ಜನಸಂಖ್ಯೆಗೆ ಆಧಾರದ ಮೇಲೆ ಕ್ಷೇತ್ರಗಳ ಪುನರ್‌ವಿಂಗಡನೆಗೆ ಅವಕಾಶ ನೀಡಬಾರದು, ನಾವು ಒಟ್ಟಾಗಬೇಕು: ಸ್ಟಾಲಿನ್‌

    – ಚೆನ್ನೈನಲ್ಲಿ ಸಭೆಯಲ್ಲಿ ಒಮ್ಮತದ ನಿರ್ಧಾರ

    ಚೆನ್ನೈ: ಜನಸಂಖ್ಯೆಗೆ (Population) ಆಧಾರದ ಮೇಲೆ ಕ್ಷೇತ್ರಗಳ ಪುನರ್ವಿಂಗಡಣೆ (Delimitation) ಆಗಬಾರದು. ನಾವೆಲ್ಲರೂ ಇದನ್ನು ವಿರೋಧಿಸುವಲ್ಲಿ ದೃಢವಾಗಿರಬೇಕು. ಸಂಸತ್ತಿನಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಕಡಿಮೆಯಾದರೆ ಸಂಸತ್ ನಲ್ಲಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ನಮ್ಮ ಶಕ್ತಿ ಕಡಿಮೆಯಾಗುತ್ತದೆ ಎಂದು ತಮಿಳುನಾಡು (Tamil Nadu) ಸಿಎಂ ಎಂ.ಕೆ ಸ್ಟಾಲಿನ್(MK Stalin) ಹೇಳಿದ್ದಾರೆ.

    ಜನಸಂಖ್ಯೆಗೆ ಆಧಾರದ ಮೇಲೆ ಕ್ಷೇತ್ರಗಳ ಪುನರ್ವಿಂಗಡಣೆ ಮಾಡಲು ಹೊರಟಿರುವ ಕೇಂದ್ರ ಸರ್ಕಾರ ನಿರ್ಧಾರವನ್ನು ಖಂಡಿಸಿ ತಮಿಳುನಾಡು ಸರ್ಕಾರದ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಕೇರಳ ಸಿಎಂ ಪಿಣರಾಯಿ ವಿಜಯನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಸೇರಿ ಹಲವು ನಾಯಕರು ಭಾಗಿಯಾಗಿದ್ದರು.

    ಸಭೆಯಲ್ಲಿ ಆರಂಭಿಕವಾಗಿ ಮಾತನಾಡಿದ ಎಂ.ಕೆ ಸ್ಟಾಲಿನ್, ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಗೆ ವಿರೋಧಿಸಬೇಕಿದೆ. ನಮ್ಮ ಪ್ರಾತಿನಿಧ್ಯ ಕಡಿಮೆಯಾದರೆ ಅದು ರಾಜ್ಯಗಳಿಗೆ ಹಣವನ್ನು ಪಡೆಯಲು ಹೋರಾಟಕ್ಕೆ ಕಾರಣವಾಗುತ್ತದೆ. ನಮ್ಮ ಇಚ್ಛೆ ಇಲ್ಲದಿದ್ದರೂ ಕಾನೂನುಗಳನ್ನು ಜಾರಿಗೆ ತರಲಾಗುತ್ತದೆ ನಮ್ಮ ಜನರ ಮೇಲೆ ಪರಿಣಾಮ ಬೀರುವ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಪ್ರಮುಖ ಅವಕಾಶಗಳನ್ನು ಕಳೆದುಕೊಳ್ಳುತ್ತಾರೆ. ರೈತರು ಬೆಂಬಲವಿಲ್ಲದೆ ಹಿನ್ನಡೆ ಎದುರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿ ಮತ್ತು ಬೆಳವಣಿಗೆ ಅಪಾಯ ಎದುರಿಸಬೇಕಾಗುತ್ತದೆ. ಸಾಮಾಜಿಕ ನ್ಯಾಯದ ಮೇಲೆ ಪರಿಣಾಮ ಬೀರುತ್ತದೆ ಎಂದರು.

    ಕ್ಷೇತ್ರಗಳ ಪುನರ್ವಿಂಗಡಣೆ ಸಂಭವಿಸಿದಲ್ಲಿ ಅಥವಾ ಪ್ರಾತಿನಿಧ್ಯ ಕಡಿಮೆಯಾದರೆ ನಾವು ನಮ್ಮದೇ ದೇಶದಲ್ಲಿ ರಾಜಕೀಯ ಅಧಿಕಾರವನ್ನು ಕಳೆದುಕೊಳ್ಳುವ ನಾಗರಿಕರಾಗುತ್ತೇವೆ. ಪ್ರಜಾಪ್ರಭುತ್ವ ಪ್ರಾತಿನಿಧ್ಯವನ್ನು ಬಲಪಡಿಸುವ ಯಾವುದನ್ನೂ ನಾವು ವಿರೋಧಿಸುವುದಿಲ್ಲ. ಆದರೆ ಆ ಕ್ರಮವು ನ್ಯಾಯಯುತವಾಗಿರಬೇಕು ಮತ್ತು ನ್ಯಾಯಯುತ ರಾಜಕೀಯ ಪ್ರಾತಿನಿಧ್ಯದ ಮೇಲೆ ಪರಿಣಾಮ ಬೀರಬಾರದು ಈ ಪ್ರತಿಭಟನೆಯು ಗಡಿ ನಿರ್ಣಯದ ವಿರುದ್ಧವಲ್ಲ. ಬದಲಾಗಿ ನ್ಯಾಯಯುತ ಗಡಿ ನಿರ್ಣಯಕ್ಕಾಗಿ ಒತ್ತಾಯಿಸುವುದಾಗಿದೆ ಎಂದು ಸ್ಪಷ್ಟಪಡಿಸಿದರು.

    ಸಭೆಯಲ್ಲಿ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಮಾತನಾಡಿ, ದಶಕಗಳಿಂದ ದಕ್ಷಿಣದ ರಾಜ್ಯಗಳು ಜನಸಂಖ್ಯಾ ಬೆಳವಣಿಗೆಯನ್ನು ನಿಯಂತ್ರಿಸಲು ಮತ್ತು ನಿರ್ವಹಿಸಲು ಗಮನಾರ್ಹ ಪ್ರಯತ್ನಗಳನ್ನು ಮಾಡಿವೆ. ಸ್ಥಿರ ಜನಸಂಖ್ಯಾ ಬೆಳವಣಿಗೆ ನಾವು ನೀತಿಗಳನ್ನು ಪರಿಚಯಿಸಿದ್ದೇವೆ. ಜಾಗೃತಿ ಮೂಡಿಸಿದ್ದೇವೆ ಮತ್ತು ರಾಷ್ಟ್ರದ ಗುರಿಯನ್ನು ಸಾಧಿಸಿದ್ದೇವೆ. ಇತರ ಕೆಲವು ರಾಜ್ಯಗಳು ತ್ವರಿತ ಜನಸಂಖ್ಯಾ ಬೆಳವಣಿಗೆಯನ್ನು ಅನುಭವಿಸುತ್ತಲೇ ಇದ್ದರೂ ನಾವು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದೇವೆ. ಪರಿಣಾಮವಾಗಿ ನಾವು ಇತರ ಹಲವು ರಾಜ್ಯಗಳಿಗಿಂತ ಬಹಳ ಮೊದಲೇ ಜನಸಂಖ್ಯಾ ನಿಯಂತ್ರಣ ದರವನ್ನು ತಲುಪಿದ್ದೇವೆ. ಆದರೆ ಈ ಸಾಧನೆಗೆ ಪ್ರತಿಫಲ ಪಡೆಯುವ ಬದಲು ನಾವು ಈಗ ನಮ್ಮ ರಾಜಕೀಯ ಪ್ರಾತಿನಿಧ್ಯವನ್ನು ಕಳೆದುಕೊಳ್ಳುವ ಅಪಾಯದಲ್ಲಿದ್ದೇವೆ ಎಂದರು.

     

    ತೆಲಂಗಾಣ ಸಿಎಂ ರೇವಂತ್ ರೆಡ್ಡಿ (Revanth Reddy) ಮಾತನಾಡಿ, ಇಂದು ನಾವು ದೇಶವನ್ನು ಎದುರಿಸುತ್ತಿರುವ ದೊಡ್ಡ ಸವಾಲನ್ನು ಎದುರಿಸುತ್ತಿದ್ದೇವೆ. ಬಿಜೆಪಿ ಜನಸಂಖ್ಯಾ ದಂಡದ ನೀತಿಯನ್ನು ಜಾರಿಗೆ ತರುತ್ತಿದೆ. ನಾವು ಒಂದೇ ದೇಶ ಅದನ್ನು ಗೌರವಿಸುತ್ತೇವೆ. ಆದರೆ ಈ ಪ್ರಸ್ತಾವಿತ ಗಡಿ ನಿರ್ಣಯವನ್ನು ನಾವು ಸ್ವೀಕರಿಸಲು ಸಾಧ್ಯವಿಲ್ಲ. ಏಕೆಂದರೆ ಅದು ನಮ್ಮನ್ನು ರಾಜಕೀಯವಾಗಿ ಮಿತಿಗೊಳಿಸುತ್ತದೆ. ಇದು ನಮ್ಮನ್ನು ಕಾರ್ಯನಿರ್ವಹಿಸುವ ರಾಜ್ಯಗಳಾಗಿರುವುದಕ್ಕೆ ಶಿಕ್ಷಿಸುತ್ತದೆ. ಬಿಜೆಪಿ ಯಾವುದೇ ಅನ್ಯಾಯದ ಗಡಿ ನಿರ್ಣಯವನ್ನು ಜಾರಿಗೆ ತರುವುದನ್ನು ನಾವು ತಡೆಯಬೇಕು ಎಂದು ಹೇಳಿದರು.

    ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan) ಮಾತನಾಡಿ, ಈ ಸಮಸ್ಯೆಯ ಗಂಭೀರತೆಯನ್ನು ಗುರುತಿಸಿ ನಾವು, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಪಂಜಾಬ್ ಈಗ ಪ್ರತಿಭಟನೆಯಲ್ಲಿ ಒಂದಾಗುತ್ತಿದ್ದೇವೆ. ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರ ಆಹ್ವಾನದ ಮೇರೆಗೆ ಜಂಟಿ ಕ್ರಿಯಾ ಸಮಿತಿಯನ್ನು ರಚಿಸುವ ಮೂಲಕ ನಮ್ಮ ಸಂಘಟಿತ ಪ್ರತಿರೋಧದ ಆರಂಭವನ್ನು ಗುರುತಿಸಲು ನಾವು ಇಲ್ಲಿ ಒಟ್ಟುಗೂಡಿದ್ದೇವೆ. ಹಣಕಾಸು ನೀತಿಗಳಿಂದ ಭಾಷಾ ನೀತಿಗಳಿಂದ ಸಾಂಸ್ಕೃತಿಕ ನೀತಿಗಳವರೆಗೆ ಮತ್ತು ಪ್ರಾತಿನಿಧ್ಯದ ಸ್ಥಿರೀಕರಣದವರೆಗೆ ಕೇಂದ್ರ ಸರ್ಕಾರದ ಕ್ರಮಗಳು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಚೌಕಟ್ಟನ್ನು ಅಸ್ಥಿರಗೊಳಿಸುತ್ತಿವೆ. ಇದನ್ನು ಅಂಗೀಕರಿಸಲು ಬಿಡಲಾಗುವುದಿಲ್ಲ ಎಂದರು. ಸಭೆ ಬಳಿಕ ಮುಂದಿನ ಸಭೆಯನ್ನು ಹೈದ್ರಬಾದ್ ನಲ್ಲಿ ನಡೆಸಲು ನಿರ್ಧರಿಸಲಾಯಿತು‌.

    ಡಿಎಂಕೆ ನೇತೃತ್ವದ ಸಭೆಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ (Annamalai) ವಿರೋಧ ವ್ಯಕ್ತಪಡಿಸಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು. ಸಭೆಯ ಬಗ್ಗೆ ಅಣ್ಣಾಮಲೈ ಪ್ರತಿಕ್ರಿಯಿಸಿ, ಡಿಎಂಕೆ ಅಧಿಕಾರಕ್ಕೆ ಬಂದ ನಂತರ ಕಳೆದ ನಾಲ್ಕು ವರ್ಷಗಳಲ್ಲಿ ರಾಜಕೀಯ ಲಾಭಕ್ಕೆ ತಮಿಳುನಾಡಿನ ಹಿತಾಸಕ್ತಿಗಳನ್ನು ನಿರಂತರವಾಗಿ ಬಲಿಕೊಟ್ಟಿದೆ. ತಮಿಳುನಾಡು ಸಿಎಂ ಎಂದಿಗೂ ಕೇರಳಕ್ಕೆ ಹೋಗಿ ಸಮಸ್ಯೆಗಳನ್ನು ಪರಿಹರಿಸಿಲ್ಲ.ಆದರೆ ಇಂದು ಕೇರಳ ಸಿಎಂ ಅವರನ್ನು ತಾವು ಸೃಷ್ಟಿಸಿರುವ ಕೃತಕ ಸಮಸ್ಯೆಯ ಬಗ್ಗೆ ಮಾತನಾಡಲು ಆಹ್ವಾನಿಸಿದ್ದಾರೆ ಎಂದು ಕಿಡಿಕಾರಿದರು.

    ಕೇರಳ ಸಿಎಂ ಅವರನ್ನು ಆಹ್ವಾನಿಸಿ ತಮಿಳುನಾಡಿನ ಸಮಸ್ಯೆಗಳನ್ನು ಪರಿಹರಿಸದಿದ್ದಕ್ಕಾಗಿ ತಮಿಳುನಾಡು ಸಿಎಂ ವಿರುದ್ಧ ನಮ್ಮ ಖಂಡನೆಯಿದೆ. ಡಿಕೆ ಶಿವಕುಮಾರ್ ಸಿದ್ದರಾಮಯ್ಯ ವಿರುದ್ಧ ತಮ್ಮ ನಡೆಯನ್ನು ರೂಪಿಸುತ್ತಿದ್ದಾರೆ. ನಾನು ರಾಷ್ಟ್ರೀಯ ನಾಯಕ, ಸಿದ್ದರಾಮಯ್ಯ ಪ್ರಾದೇಶಿಕ ನಾಯಕ ಎಂದು ತೋರಿಸಲು ತಮಿಳುನಾಡಿಗೆ ಓಡಿ ಬಂದಿದ್ದಾರೆ. ಪ್ರಧಾನಿಯವರು ಜನಸಂಖ್ಯೆ ಮಾನದಂಡವಲ್ಲ ಎಂದು ಹೇಳಿದ್ದಾರೆ. ಕ್ಷೇತ್ರ ಪುನರ್ ವಿಂಗಡನೆ ಅನುಪಾತದ ಆಧಾರದ ಮೇಲೆ ನಡೆಯಲಿದೆ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಆದರೆ ಸ್ಟಾಲಿನ್‌ ಅವರು ಈ ಎಲ್ಲಾ ಅಸಂಬದ್ಧತೆಯನ್ನು ಕೃತಕವಾಗಿ ಸೃಷ್ಟಿಸುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

     

  • ಕೇಂದ್ರದ 2 ಸಾವಿರ ಕೋಟಿ ಕಳೆದುಕೊಂಡರೂ ನಾವು ನಮ್ಮ ಸಿದ್ಧಾಂತದಲ್ಲಿ ರಾಜಿಯಾಗಲ್ಲ: ತಮಿಳುನಾಡು

    ಕೇಂದ್ರದ 2 ಸಾವಿರ ಕೋಟಿ ಕಳೆದುಕೊಂಡರೂ ನಾವು ನಮ್ಮ ಸಿದ್ಧಾಂತದಲ್ಲಿ ರಾಜಿಯಾಗಲ್ಲ: ತಮಿಳುನಾಡು

    ಚೆನ್ನೈ: ನಮ್ಮ ಸರ್ಕಾರ ದ್ವಿಭಾಷಾ ನೀತಿಗೆ (Two Language Policy) ಬದ್ಧವಾಗಿದೆ. ಕೇಂದ್ರದ 2 ಸಾವಿರ ಕೋಟಿ ರೂ. ನಿಧಿಯನ್ನು ಕಳೆದುಕೊಂಡರೂ ನಾವು ನಮ್ಮ ಸಿದ್ಧಾಂತದಲ್ಲಿ ರಾಜಿಯಾಗುವುದಿಲ್ಲ ಎಂದು ತಮಿಳುನಾಡು (Tamil Nadu) ಸರ್ಕಾರ ತನ್ನ ಬಜೆಟ್‌ನಲ್ಲಿ ಹೇಳಿಕೊಂಡಿದೆ.

    ಮುಂದಿನ ವರ್ಷ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ದ್ರಾವಿಡ ಮುನ್ನೇತ್ರ ಕಳಗಂ (DMK) ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ (Budget) ಅನ್ನು ಇಂದು ವಿಧಾನಸಭೆಯಲ್ಲಿ ಹಣಕಾಸು ಸಚಿವ ತಂಗಮ್ ತೆನರಸು ಮಂಡಿಸಿದರು. ಇದನ್ನೂ ಓದಿ: ಬಜೆಟ್ ಪ್ರತಿಯಲ್ಲಿ ರೂಪಾಯಿ ಚಿಹ್ನೆ ‘₹’ ಕೈಬಿಟ್ಟ ತಮಿಳುನಾಡು

     

    ಈ ವೇಳೆ ತಮಿಳುನಾಡು ತನ್ನ ಸ್ವಾಭಿಮಾನವನ್ನು ರಕ್ಷಿಸಿಕೊಳ್ಳುವಲ್ಲಿ ದೃಢವಾಗಿ ನಿಲ್ಲುತ್ತದೆ ಮತ್ತು ಕೇಂದ್ರ ಸರ್ಕಾರದ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ತಮಿಳುನಾಡು ಆರ್ಥಿಕ ಸಹಾಯಕ್ಕಾಗಿ ತನ್ನ ನಿಲುವನ್ನು ಕೈಬಿಡುವುದಿಲ್ಲ. ತ್ರಿಭಾಷಾ ನೀತಿಯನ್ನು ಅಳವಡಿಸಿಕೊಳ್ಳಲು ನಾವು ನಿರಾಕರಿಸಿದ ಕಾರಣ ಸಮಗ್ರ ಶಿಕ್ಷಾ ಅಭಿಯಾನ (ಎಸ್‌ಎಸ್‌ಎ) ಯೋಜನೆಯಡಿ ಕೇಂದ್ರವು 2 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ತಡೆಹಿಡಿದರೆ ನಮ್ಮ ಸರ್ಕಾರ ಶಾಲೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹಣವನ್ನು ನೀಡುತ್ತದೆ. ಶಿಕ್ಷಕರ ವೇತನವನ್ನು ತನ್ನ ಸ್ವಂತ ಸಂಪನ್ಮೂಲಗಳ ಬಳಸಿ ಪಾವತಿಸುತ್ತದೆ ಎಂದು ಅವರು ತಿಳಿಸಿದರು.

    ತಮಿಳುನಾಡು ಸರ್ಕಾರದ ಬಜೆಟ್ ಮಂಡನೆ ವೇಳೆ ಎಐಎಡಿಎಂಕೆ ಸಭಾತ್ಯಾಗ ಮಾಡಿತು.

  • ಬಜೆಟ್ ಪ್ರತಿಯಲ್ಲಿ ರೂಪಾಯಿ ಚಿಹ್ನೆ ‘₹’ ಕೈಬಿಟ್ಟ ತಮಿಳುನಾಡು

    ಬಜೆಟ್ ಪ್ರತಿಯಲ್ಲಿ ರೂಪಾಯಿ ಚಿಹ್ನೆ ‘₹’ ಕೈಬಿಟ್ಟ ತಮಿಳುನಾಡು

    ಚೆನ್ನೈ : ಕೇಂದ್ರ ಸರ್ಕಾರದೊಂದಿಗಿನ ಭಾಷಾ ವಿವಾದ ನಡೆಸುತ್ತಿರುವ ತಮಿಳುನಾಡು ಈಗ ಮತ್ತೆ ಒಂದು ಹೆಜ್ಜೆ ಮುಂದಕ್ಕೆ ಇಟ್ಟಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) 2025-26 ರ ರಾಜ್ಯ ಬಜೆಟ್‌‌ನಲ್ಲಿ ರೂಪಾಯಿಯ ಅಧಿಕೃತ ಚಿಹ್ನೆ ‘₹’ ಕೈ ಬಿಟ್ಟಿದ್ದು ಬದಲಿಗೆ ‘ರುಬಾಯಿ’ (ತಮಿಳಿನಲ್ಲಿ ರೂಪಾಯಿ) ಯಿಂದ ‘ರು’ ಅನ್ನು ಆಯ್ಕೆ ಮಾಡಿಕೊಂಡು ಹೊಸ ಚರ್ಚೆಯನ್ನು ಹುಟ್ಟು ಹಾಕಿದ್ದಾರೆ.

    ನಾಳೆ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾಗುವ ರಾಜ್ಯ ಬಜೆಟ್‌ನ (State Budget) ಟೀಸರ್ ಅನ್ನು ಸ್ಟಾಲಿನ್ ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದು, “ಸಮಾಜದ ಎಲ್ಲಾ ವರ್ಗಗಳಿಗೆ ಅನುಕೂಲವಾಗುವ, ತಮಿಳುನಾಡಿನ (Tamil Nadu) ವ್ಯಾಪಕ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಬಜೆಟ್” ಎಂದು ಬರೆದುಕೊಂಡಿದ್ದಾರೆ.

    ಹಿಂದಿನ ಎರಡು ಬಜೆಟ್‌ಗಳಲ್ಲಿ, ರಾಜ್ಯವು ತನ್ನ ಲೋಗೋಗಳಿಗಾಗಿ ರೂಪಾಯಿ ಚಿಹ್ನೆಯನ್ನು ಬಳಸಿತ್ತು. 2023-24ರ ಬಜೆಟ್‌ನಲ್ಲಿಯೂ ಸಹ ಈ ಚಿಹ್ನೆಯನ್ನು ಪ್ರಮುಖವಾಗಿ ತೋರಿಸಲಾಗಿತ್ತು, ಇದನ್ನು ಐಐಟಿ-ಗುವಾಹಟಿಯ ಪ್ರಾಧ್ಯಾಪಕರೊಬ್ಬರು ವಿನ್ಯಾಸಗೊಳಿಸಿದ್ದರು. ‘₹’ ಯಲ್ಲಿ ಹಿಂದಿಯ ‘ರಾ’ ಹೋಲಿಕೆ ಇರುವ ಹಿನ್ನೆಲೆಯಲ್ಲಿ ಬಳಸದಿರಲು ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಕರೆನ್ಸಿ ಚಿಹ್ನೆಯನ್ನು ರಾಜ್ಯವೊಂದು ತಿರಸ್ಕರಿಸಿರುವುದು ಇದೇ ಮೊದಲು.

    ರೂಪಾಯಿ ಚಿಹ್ನೆಯನ್ನು ಬದಲಾಯಿಸುವ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಮುಖ್ಯಮಂತ್ರಿ ಸ್ಟಾಲಿನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರೂಪಾಯಿ ಚಿಹ್ನೆಯನ್ನು ವಿನ್ಯಾಸಗೊಳಿಸಿದ್ದು ತಮಿಳುನಾಡಿನ ಉದಯ್ ಕುಮಾರ್, ಉದಯ್ ಕುಮಾರ್, ಮಾಜಿ ಡಿಎಂಕೆ ಶಾಸಕರ ಮಗ ಎನ್ನುವುದು ಇಲ್ಲಿ ಗಮನಿಸಬೇಕು. ನೀವು ಎಷ್ಟು ಮೂರ್ಖರು ಮಿಸ್ಟರ್ ಎಂಕೆ ಸ್ಟಾಲಿನ್ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಉಪಗ್ರಹಗಳ ಅನ್‌ಡಾಕ್ ಕಾರ್ಯ ಯಶಸ್ವಿ – ಇಸ್ರೋ ಮತ್ತೊಂದು ಸಾಧನೆ; ಚಂದ್ರಯಾನ-4ಕ್ಕೆ ದಾರಿ

     

    ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕೂಡ ಎಂ.ಕೆ ಸ್ಟಾಲಿನ್‌ ಅವರನ್ನು ಟೀಕಿಸಿದರು. ಉದಯ ಕುಮಾರ್ ಧರ್ಮಲಿಂಗಂ ಒಬ್ಬ ಭಾರತೀಯ ಶಿಕ್ಷಣ ತಜ್ಞ ಮತ್ತು ವಿನ್ಯಾಸಕಾರ, ಮಾಜಿ ಡಿಎಂಕೆ ಶಾಸಕರ ಮಗ, ಅವರು ಭಾರತೀಯ ರೂಪಾಯಿ ಚಿಹ್ನೆಯನ್ನು ವಿನ್ಯಾಸಗೊಳಿಸಿದರು, ಇದನ್ನು ಭಾರತ ಒಪ್ಪಿಕೊಂಡಿತು. 2025-26ರ ತಮಿಳುನಾಡು ಬಜೆಟ್ ದಾಖಲೆಯಿಂದ ಚಿಹ್ನೆಯನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತಮಿಳರನ್ನು ಅವಮಾನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

  • ಹಿಂದಿ ವಿರೋಧಿ ಪ್ರತಿಜ್ಞೆ ವೇಳೆ ಮಹಿಳೆಯ ಕೈ ಬಳೆ ಎಳೆದ ಡಿಎಂಕೆ ಕೌನ್ಸಿಲರ್‌

    ಹಿಂದಿ ವಿರೋಧಿ ಪ್ರತಿಜ್ಞೆ ವೇಳೆ ಮಹಿಳೆಯ ಕೈ ಬಳೆ ಎಳೆದ ಡಿಎಂಕೆ ಕೌನ್ಸಿಲರ್‌

    – ಕ್ಷೇತ್ರ ವಿಂಗಡಣೆ 30 ವರ್ಷಗಳ ಕಾಲ ಮುಂದೂಡಿ 
    – ತಮಿಳುನಾಡು ಸರ್ವಪಕ್ಷಗಳ ಸಭೆ ನಿರ್ಣಯ

    ಚೆನ್ನೈ: ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ (Lok Sabha) ಕ್ಷೇತ್ರಗಳ ಪುನರ್‌ವಿಂಗಡಣೆ ಮತ್ತು ತ್ರಿಭಾಷಾ ಸೂತ್ರ (Three Language Formula) ಜಾರಿ ವಿಚಾರದಲ್ಲಿ ತಮಿಳುನಾಡು (Tamil Nadu) ಸರ್ಕಾರ ನಿರ್ಣಾಯಕ ಸಮರ ಸಾರಿದೆ.

    ಇಂದು ಸಿಎಂ ಸ್ಟಾಲಿನ್ (CM Stalin) ಕರೆದಿದ್ದ ತಮಿಳುನಾಡು ಸರ್ವ ಪಕ್ಷ ಸಭೆಯಲ್ಲಿ ಮಹತ್ವದ ತೀರ್ಮಾನ ಪ್ರಕಟವಾಗಿದೆ. 2026ರ ಜನಗಣತಿ ಆಧಾರದಡಿ ಲೋಕಸಭೆ ಕ್ಷೇತ್ರಗಳ ಪುನರ್‌ವಿಂಗಡಣೆ ಮಾಡಬಾರದು. ಈ ಪ್ರಕ್ರಿಯೆಯನ್ನು ಮುಂದಿನ 30 ವರ್ಷಕ್ಕೆ ಮುಂದೂಡಬೇಕು. ಅಲ್ಲಿಯವರೆಗೂ 1971ರ ಜನಗಣತಿ ಆಧಾರದ ಮೇಲೆ ಹಾಲಿ ಇರುವ ಲೋಕಸಭೆ ಕ್ಷೇತ್ರಗಳೇ ಮುಂದುವರೆಯಬೇಕು ಎಂದು ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗಿದೆ.

    ಈಗ ಏನಾದರೂ ಕ್ಷೇತ್ರಗಳ ಪುನರ್‌ವಿಂಗಡಣೆ ಆದರೆ ತಮಿಳುನಾಡು 12 ಸ್ಥಾನ ಕಳೆದುಕೊಳ್ಳುತ್ತದೆ ಎಂಬ ಆತಂಕನ್ನು ವ್ಯಕ್ತಪಡಿಸಿದೆ. ತ್ರಿಭಾಷಾ ಸೂತ್ರವನ್ನು ತೀವ್ರವಾಗಿ ವಿರೋಧಿಸಿದ ಡಿಎಂಕೆ ತಮಿಳುನಾಡಿನ ಎಲ್ಲಾ ಕೇಂದ್ರ ಕಚೇರಿಗಳಲ್ಲಿ ಹಿಂದಿಯನ್ನು (Hindi) ತೊಲಗಿಸಬೇಕು. ರೈಲುಗಳಿಗೆ ಹಿಂದಿಯಲ್ಲಿ ಹೆಸರಿಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ.  ಇದನ್ನೂ ಓದಿ: ಕುಂಭಮೇಳ | ಯುಪಿಯ ಮೂರು ಹೆದ್ದಾರಿಗಳಲ್ಲಿ 40 ಲಕ್ಷ ದಾಖಲೆಯ ವಾಹನಗಳ ಸಂಚಾರ

    ಹಿಂದಿ ಹೇರಿಕೆ ಖಂಡಿಸಿ ನಡೆಸಲಾದ ಪ್ರತಿಭಟನೆಯಲ್ಲಿ ಡಿಎಂಕೆ ಕೌನ್ಸಿಲರ್ ಜಾಕೀರ್ ಹುಸೇನ್ (DMK Councillor Zakir Hussain) ತಮ್ಮ ಪಕ್ಕ ನಿಂತಿದ್ದ ಮಹಿಳೆಯ ಕೈ ಬಳೆ ಎಳೆಯುತ್ತಿರುವ ವಿಡಿಯೋ ವೈರಲ್ ಆಗಿದೆ.

    ಈ ವಿಡಿಯೋವನ್ನು ಇಟ್ಟುಕೊಂಡು ಬಿಜೆಪಿ ಡಿಎಂಕೆ ವಿರುದ್ಧ ಕಿಡಿಕಾರಿದೆ. ಹಿಂದಿ ವಿರೋಧಿ ಪ್ರತಿಜ್ಞೆ ಹೆಸರಲ್ಲಿ ಬಳೆ ಕಳ್ಳತನಕ್ಕೆ ಇಳಿದಿದ್ದಾರೆ..ಕಳ್ಳರಿಗೂ ಡಿಎಂಕೆಗೂ ವ್ಯತ್ಯಾಸವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಟೀಕಿಸಿದ್ದಾರೆ.

     

  • ಸಂಪುಟ ಪುನರ್‌ರಚನೆ – ಡಿಸಿಎಂ ಆಗಿ ಉದಯನಿಧಿ ಸ್ಟಾಲಿನ್ ಪ್ರಮಾಣವಚನ ಸ್ವೀಕಾರ

    ಸಂಪುಟ ಪುನರ್‌ರಚನೆ – ಡಿಸಿಎಂ ಆಗಿ ಉದಯನಿಧಿ ಸ್ಟಾಲಿನ್ ಪ್ರಮಾಣವಚನ ಸ್ವೀಕಾರ

    – 15 ತಿಂಗಳು ಜೈಲುವಾಸ ಅನುಭವಿಸಿದ್ದ ಸೆಂಥಿಲ್ ಬಾಲಾಜಿ ಸಚಿವನಾಗಿ ಪ್ರಮಾಣವಚನ

    ಚೆನ್ನೈ: ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (M K Stalin) ಅವರು ಮಂತ್ರಿಮಂಡಲ ಪುನರ್‌ರಚನೆ ಮಾಡಿದ್ದು, ಉದಯನಿಧಿ ಸ್ಟಾಲಿನ್ ಸೇರಿ ಮೂವರು ಡಿಎಂಕೆ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ತಮಿಳುನಾಡು ಡಿಸಿಎಂ (DCM) ಆಗಿ ಉದಯನಿಧಿ ಸ್ಟಾಲಿನ್ (Udhayanidhi Stalin) ಇಂದು (ಸೆ.29) ಪ್ರಮಾಣವಚನ ಸ್ವೀಕರಿಸಿದರು.

    ಅಲ್ಲದೇ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 15 ತಿಂಗಳು ಜೈಲುವಾಸ ಅನುಭವಿಸಿದ್ದ ಡಿಎಂಕೆ ನಾಯಕ ಸೆಂಥಿಲ್ ಬಾಲಾಜಿ (Senthil Balaji)ಅವರು ಸಚಿವರಾಗಿ ಪುನಃ ಪ್ರಮಾಣವಚನ ಸ್ವೀಕರಿಸಿದರು.ಇದನ್ನೂ ಓದಿ: ತೆಲಂಗಾಣ| 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಸಂತ್ರಸ್ತೆ ಕುಟುಂಬಸ್ಥರಿಂದ ಆರೋಪಿ ಮನೆ, ಕಾರಿಗೆ ಬೆಂಕಿ

    ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ಪ್ರಮಾಣವಚನ ಸ್ವೀಕರಿಸಿದರೇ, ಅವರೊಂದಿಗೆ ಗೋವಿ ಚೆಜಿಯಾನ್ ಅವರು ಉನ್ನತ ಶಿಕ್ಷಣ ಖಾತೆ ಸಚಿವರಾಗಿ, ಎಸ್.ಎಂ ನಾಸರ್ ಅವರು ಅಲ್ಪಸಂಖ್ಯಾತರ ಸಚಿವರಾಗಿ ಹಾಗೂ ಆರ್.ರಾಜೇಂದ್ರನ್ ಪ್ರವಾಸೋದ್ಯಮ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಜೊತೆಗೆ ಸೆಂಥಿಲ್ ಬಾಲಾಜಿ ಅವರು ವಿದ್ಯುತ್, ಅಬಕಾರಿ ಮತ್ತು ನಿಷೇಧ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಮಂತ್ರಿಮಂಡಲಕ್ಕೆ ಮರಳಿದರು.

    ಉದಯನಿಧಿ ಸ್ಟಾಲಿನ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೇರಿಸುವ ಮೂಲಕ ಮೂರನೇ ತಲೆಮಾರಿನ ನಾಯಕರಾಗಿದ್ದಾರೆ. ಇದಕ್ಕೂ ಮುಂಚೆ ಉದಯನಿಧಿ ಸ್ಟಾಲಿನ್ ಅವರ ಅಜ್ಜ, ಡಿಎಂಕೆ ಪಕ್ಷದ ಹಿರಿಯ ನಾಯಕ ದಿವಂಗತ ಎಂ.ಕರುಣಾನಿಧಿ (M Karunanidhi), ಬಳಿಕ ಉದಯನಿಧಿ ಅವರ ತಂದೆ ಎಂಕೆ ಸ್ಟಾಲಿನ್ ಬಳಿಕ ಸ್ವತಃ ತಾವೇ ಉಪಮುಖ್ಯಮಂತ್ರಿ ಸ್ಥಾನಕ್ಕೇರಿದ್ದಾರೆ.

    ಉದಯನಿಧಿ ಸ್ಟಾಲಿನ್ ಅವರು ಇದಕ್ಕೂ ಮುಂಚೆ ಸಚಿವರಾಗಿದ್ದ ಕಾರಣ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿಲ್ಲ. ಬದಲಿಗೆ ಅಧಿಕಾರ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಉದಯನಿಧಿ ಸ್ಟಾಲಿನ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಉಪಮುಖ್ಯಮಂತ್ರಿ ನನಗೆ ಅದು ಸ್ಥಾನವಲ್ಲ. ಜವಾಬ್ದಾರಿ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಲಾ ಕಾಲೇಜ್‌ಗೆ ಸೇರಿಸದಿದ್ದರೇ ಆಸ್ತಿಯಲ್ಲಿ ಭಾಗ ಕೊಡು ಅಂತ ನಮ್ಮಪ್ಪನನ್ನ ಕೇಳಿದ್ದೆ: ಸಿಎಂ

  • ತಮಿಳುನಾಡು ಡಿಸಿಎಂ ಆಗಿ ಉದಯನಿಧಿ ಸ್ಟಾಲಿನ್ ಇಂದು ಪ್ರಮಾಣವಚನ

    ತಮಿಳುನಾಡು ಡಿಸಿಎಂ ಆಗಿ ಉದಯನಿಧಿ ಸ್ಟಾಲಿನ್ ಇಂದು ಪ್ರಮಾಣವಚನ

    ನವದೆಹಲಿ: ತಮಿಳುನಾಡಿನ (Tamil Nadu) ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರನ್ನು ನೇಮಕ ಮಾಡಲಾಗಿದ್ದು, ಇಂದು ಮಧ್ಯಾಹ್ನ 3.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

    ಸದ್ಯ ಅಸ್ತಿತ್ವದಲ್ಲಿರುವ ಕ್ರೀಡಾ ಸಚಿವ ಸ್ಥಾನದ ಜೊತೆಗೆ, ಉದಯನಿಧಿ ಅವರಿಗೆ ಯೋಜನೆ ಮತ್ತು ಅಭಿವೃದ್ಧಿಯ ಖಾತೆಯನ್ನು ಸಹ ನೀಡಲಾಗಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಉದಯನಿಧಿ ಅವರಿಗೆ ಈಗಿರುವ ಖಾತೆಗಳ ಜೊತೆಗೆ ಯೋಜನೆ ಮತ್ತು ಅಭಿವೃದ್ಧಿ ಖಾತೆಯನ್ನು ಮಂಜೂರು ಮಾಡಿ ಉಪಮುಖ್ಯಮಂತ್ರಿ ಹುದ್ದೆಗೆ ನಿಯೋಜಿಸುವಂತೆ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರಿಗೆ ಶಿಫಾರಸು ಮಾಡಿದ್ದರು. ಇದನ್ನೂ ಓದಿ: ಗುಜರಾತ್‌ನ ಸೋಮನಾಥದಲ್ಲಿ 9 ಅಕ್ರಮ ಮಸೀದಿಗಳ ತೆರವು

    ಮಹತ್ವದ ಕ್ಯಾಬಿನೆಟ್ ಪುನರ್ ರಚನೆಯಲ್ಲಿ, ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅವರನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಿಸಿದೆ. ಶಿವ ವಿ.ಮೆಯ್ಯನಾಥನ್ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿ ನೇಮಕಗೊಂಡರೆ, ಎನ್.ಕಯಲ್ವಿಝಿ ಸೆಲ್ವರಾಜ್ ಅವರು ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಮಾಜಿ ಸೈನಿಕರ ಕಲ್ಯಾಣ ಖಾತೆಗಳನ್ನು ವಹಿಸಿಕೊಳ್ಳಲಿದ್ದಾರೆ. ಎಂ.ಮತಿವೆಂಥನ್ ಅವರು ಆದಿ ದ್ರಾವಿಡರ್ ಮತ್ತು ಗಿರಿಜನ ಕಲ್ಯಾಣದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

    ಆರ್‌ಎಸ್ ರಾಜಕಣ್ಣಪ್ಪನ್ ಅವರನ್ನು ಹಾಲು ಮತ್ತು ಡೈರಿ ಅಭಿವೃದ್ಧಿ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಸಚಿವರನ್ನಾಗಿ ನೇಮಿಸಲಾಗಿದೆ. ತಂಗಂ ತೆನ್ನರಸು ಅವರ ಪ್ರಸ್ತುತ ಹಣಕಾಸು ಮತ್ತು ಪುರಾತತ್ವ ಖಾತೆಗಳ ಜೊತೆಗೆ ಪರಿಸರ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಹವಾಮಾನ ಬದಲಾವಣೆಯನ್ನು ನೋಡಿಕೊಳ್ಳಲಿದ್ದಾರೆ. ವಿ.ಸೆಂಥಿಲಬಾಲಾಜಿ, ಗೋವಿ ಚೆಜಿಯಾನ್, ಆರ್.ರಾಜೇಂದ್ರನ್, ಮತ್ತು ಎಸ್.ಎಂ.ನಾಸರ್ ಸೇರಿದಂತೆ ಇತರ ಡಿಎಂಕೆ ನಾಯಕರನ್ನು ಸಚಿವ ಸಂಪುಟದಲ್ಲಿ ಮುಂದುವರಿಸಲು ಶಿಫಾರಸು ಮಾಡಲಾಗಿದೆ. ಇದನ್ನೂ ಓದಿ: Uttar Pradesh | ರೈಲು ಹಳಿಯ ಮೇಲೆ ಕಾಂಕ್ರೀಟ್ ಕಂಬ ಇರಿಸಿದ್ದ ಅಪ್ರಾಪ್ತ ವಶಕ್ಕೆ

  • ಉದಯನಿಧಿ ಸ್ಟಾಲಿನ್‌ಗೆ ಡಿಸಿಎಂ ಪಟ್ಟ – ಶೀಘ್ರವೇ ಘೋಷಣೆ ಸಾಧ್ಯತೆ

    ಉದಯನಿಧಿ ಸ್ಟಾಲಿನ್‌ಗೆ ಡಿಸಿಎಂ ಪಟ್ಟ – ಶೀಘ್ರವೇ ಘೋಷಣೆ ಸಾಧ್ಯತೆ

    ಚೆನ್ನೈ: ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (Stalin) ಅವರ ಪುತ್ರ, ತಮಿಳುನಾಡು (Tamil Nadu) ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರು ಉಪಮುಖ್ಯಮಂತ್ರಿ ಹುದ್ದೆಗೆ ಏರುವ ಸಾಧ್ಯತೆಯಿದೆ.

    ಉದಯನಿಧಿ ಅವರ ನೇಮಕದ ಕುರಿತು ಶೀಘ್ರವೇ ಘೋಷಣೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಆಧಾರಿಸಿ ವರದಿ ತಿಳಿಸಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಉದಯನಿಧಿ ಅವರು, ಇದು ಕೇವಲ ವಂದತಿ ಅಷ್ಟೇ. ನೀವು ಸಿಎಂ ಅವರಿಗೆ ಪ್ರಶ್ನೆ ಕೇಳಿ. ಈ ಬಗ್ಗೆ ಸಿಎಂ ಮಾತ್ರ ನಿರ್ಧಾರ ಕೈಗೊಳ್ಳುವ ಹಕ್ಕು ಹೊಂದಿದ್ದಾರೆ ಎಂದು ಉತ್ತರಿಸಿದರು.

     

    ಈ ವರ್ಷದ ಜುಲೈನಲ್ಲಿ ನಮ್ಮ ಸರ್ಕಾರದ ಎಲ್ಲಾ ಮಂತ್ರಿಗಳು ಉಪಮುಖ್ಯಮಂತ್ರಿಗಳು ಎಂದು ಉದಯನಿಧಿ ಸ್ಟಾಲಿನ್‌ ಪ್ರತಿಕ್ರಿಯಿಸಿದ್ದರು.

    ಚೆಪಾಕ್-ತಿರುವಲ್ಲಿಕೇಣಿ ವಿಧಾನಸಭಾ ಕ್ಷೇತ್ರದಿಂದ ಗೆದ್ದ ಒಂದು ವರ್ಷದ ನಂತರ, ಡಿಸೆಂಬರ್ 2022 ರಲ್ಲಿ ಉದಯನಿಧಿ ಅವರನ್ನು ಅವರು ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವರನ್ನಾಗಿ ಮಾಡಲಾಯಿತು. ಇದನ್ನೂ ಓದಿ: ಹಾಳಾಗುತ್ತಿದೆ ಯುವಜನತೆಯ ಆರೋಗ್ಯ – 60 ಅಲ್ಲ 30 ರಲ್ಲೇ ಬೈಪಾಸ್‌ ಸರ್ಜರಿ 

    2026ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಉದಯನಿಧಿ ಅವರನ್ನು ಉಪಮುಖ್ಯಮಂತ್ರಿ ಹುದ್ದೆಗೆ ಏರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಈಗಲೇ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದರೆ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗಲಿದೆ ಎಂದು ತಿಳಿಸಿದ್ದಾರೆ

    ಉದಯನಿಧಿ ಅವರು ಕ್ರೀಡಾ ಮತ್ತು ಯುವ ಕಲ್ಯಾಣ ಸಚಿವರಾಗಿರುವುದರ ಜೊತೆಗೆ ವಿಶೇಷ ಕಾರ್ಯಕ್ರಮ ಅನುಷ್ಠಾನದ ಪ್ರಮುಖ ಖಾತೆಯನ್ನು ನಿಭಾಯಿಸುತ್ತಾರೆ.

     

  • INDIA ಗೆದ್ದರೆ ಮೇಕೆದಾಟು ಯೋಜನೆಗೆ ತಡೆ: ಪ್ರಣಾಳಿಕೆಯಲ್ಲಿ ಡಿಎಂಕೆ ಘೋಷಣೆ

    INDIA ಗೆದ್ದರೆ ಮೇಕೆದಾಟು ಯೋಜನೆಗೆ ತಡೆ: ಪ್ರಣಾಳಿಕೆಯಲ್ಲಿ ಡಿಎಂಕೆ ಘೋಷಣೆ

    – ಕರ್ನಾಟಕದಲ್ಲಿ ಮೇಕೆದಾಟು ಯೋಜನೆಗೆ ಪಾದಯಾತ್ರೆ ನಡೆಸಿದ್ದ ಕಾಂಗ್ರೆಸ್‌

    ಚೆನ್ನೈ: ಲೋಕಸಭಾ ಚುನಾವಣೆಯಲ್ಲಿ (Lok Sabha Election) INDIA ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ (Mekedatu Project) ತಡೆ ಒಡ್ಡುವುದಾಗಿ ಡಿಎಂಕೆ ಘೋಷಣೆ ಮಾಡಿದೆ.

    ಲೋಕಸಭಾ ಚುನಾವಣೆಗೆ ತಮಿಳುನಾಡಿನಲ್ಲಿ (Tamil Nadu) ಆಡಳಿತ ನಡೆಸುತ್ತಿರುವ ಸ್ಟಾಲಿನ್‌ (CM Stalin) ನೇತೃತ್ವದ ಡಿಎಂಕೆ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಕಾವೇರಿ ನದಿಗೆ (Cauvery Water) ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟೆ ಯೋಜನೆ ನಿರ್ಮಾಣಕ್ಕೆ ತಡೆ ಒಡ್ಡುವುದಾಗಿ ಹೇಳಿದೆ.

    INDIA ಒಕ್ಕೂಟದಲ್ಲಿ ಕಾಂಗ್ರೆಸ್‌ (Congress) ಪ್ರಧಾನ ಪಕ್ಷವಾಗಿದ್ದು ಕರ್ನಾಟಕದಲ್ಲಿ (Karnataka) ಕಾಂಗ್ರೆಸ್‌ ಸರ್ಕಾರವೇ ಅಧಿಕಾರ ನಡೆಸುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೊದಲು ಡಿಕೆ ಶಿವಕುಮಾರ್‌ (DK Shivakumar) ನೇತೃತ್ವದಲ್ಲಿ ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್‌ ಪಾದಯಾತ್ರೆ ಸಹ ನಡೆಸಿತ್ತು. ಈಗ ಮೈತ್ರಿ ಭಾಗವಾಗಿರುವ ಡಿಎಂಕೆ ಈ ವಿಚಾರವನ್ನೇ ಪ್ರಣಾಳಿಕೆಯಲ್ಲಿ ಸೇರಿಸಿದ್ದು ಬಿರುಗಾಳಿ ಎಬ್ಬಿಸುವ ಸಾಧ್ಯತೆಯಿದೆ.  ಇದನ್ನೂ ಓದಿ: ಸದ್ಗುರು ಜಗ್ಗಿ ವಾಸುದೇವ್‌ಗೆ ಮೆದುಳಿನ ಶಸ್ತ್ರಚಿಕಿತ್ಸೆ!

     
    ಪ್ರಣಾಳಿಕೆಯಲ್ಲಿ ಏನಿದೆ?
    ರಾಜ್ಯಗಳಿಗೆ ಫೆಡರಲ್ ಹಕ್ಕುಗಳನ್ನು ಒದಗಿಸಲು ಭಾರತೀಯ ಸಂವಿಧಾನವನ್ನು ಬದಲಾವಣೆ, ಚೆನ್ನೈನಲ್ಲಿರುವ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆ, ಪುದುಚೇರಿಗೆ ರಾಜ್ಯ ಸ್ಥಾನಮಾನ, ರಾಷ್ಟ್ರೀಯ ಶಿಕ್ಷಣ ನೀತಿ (NEP) ಹಿಂಪಡೆಯಲಾಗುವುದು, ಮಹಿಳೆಯರಿಗೆ 33% ಮೀಸಲಾತಿ ಜಾರಿ, ಸರ್ಕಾರಿ ಶಾಲೆಗಳಿಗೆ ಬೆಳಗಿನ ಉಪಾಹಾರ ಯೋಜನೆ, NEET ನಿಷೇಧ, ಭಾರತದಾದ್ಯಂತ ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. ನೀಡಲಾಗುತ್ತದೆ.

    ಹೆದ್ದಾರಿಗಳಲ್ಲಿರುವ ಟೋಲ್ ಗೇಟ್‌ ರದ್ದು, ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ತೆಗೆದುಹಾಕಲಾಗುತ್ತದೆ. ರಾಜ್ಯಪಾಲರಿಗೆ ಅಧಿಕಾರ ನೀಡುವ 361ನೇ ವಿಧಿಯನ್ನು ರದ್ದು, ರಾಜ್ಯಪಾಲರನ್ನು ನೇಮಿಸುವ ಅಧಿಕಾರವನ್ನು ಮುಖ್ಯಮಂತ್ರಿಗೆ ನೀಡುವುದು.

  • ಸ್ಟಾಲಿನ್ ಸರ್ಕಾರದ ವಿರುದ್ಧ ರಾಜ್ಯಪಾಲ ಗರಂ

    ಸ್ಟಾಲಿನ್ ಸರ್ಕಾರದ ವಿರುದ್ಧ ರಾಜ್ಯಪಾಲ ಗರಂ

    ಚೆನ್ನೈ: ತಮಿಳುನಾಡು (Tamilnadu), ಪಶ್ಚಿಮ ಬಂಗಾಳದಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ತಾರಕಕ್ಕೆ ಏರಿದೆ. ತಮಿಳುನಾಡಿನಲ್ಲಿ ಇಂದಿನಿಂದ ಬಜೆಟ್ ಅಧಿವೇಶನ (Budget Session) ಆರಂಭ ಆಗಿದೆ.

    ಮೊದಲ ದಿನವಾದ ಇಂದು ಗವರ್ನರ್ ಅಧಿವೇಶನ ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ ಭಾಷಣ ಮಾಡಲು ನಿರಾಕರಿಸಿದ್ದಾರೆ. ರಾಷ್ಟ್ರಗೀತೆಯನ್ನ ಸ್ಟಾಲಿನ್ ಸರ್ಕಾರ ಗೌರವಿಸಿಲ್ಲ ಎಂದು ಆರೋಪಿಸಿ ಕೆಲವೇ ನಿಮಿಷಗಳಲ್ಲಿ ಸದನದಿಂದ ನಿರ್ಗಮಿಸಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ಮೊದಲು ರಾಷ್ಟ್ರಗೀತೆ ಹಾಡಿ ಎಂದು ಪದೇ ಪದೇ ಮಾಡಿಕೊಂಡ ಮನವಿಯನ್ನು ನಿರ್ಲಕ್ಷಿಸಲಾಯ್ತು.

    ಸರ್ಕಾರ ಬರೆದುಕೊಟ್ಟ ಭಾಷಣದಲ್ಲಿನ ತುಂಬಾ ವಿಷಯಗಳನ್ನು ನಾನು ನೈತಿಕ ಕಾರಣಗಳಿಂದ ಅಂಗೀಕರಿಸಿಲ್ಲ. ಅವುಗಳನ್ನು ವಿರೋಧಿಸಿದ್ದೇನೆ ಕೂಡ. ಭಾಷಣದಲ್ಲಿ ಇವನ್ನು ಪ್ರಸ್ತಾಪ ಮಾಡಿದ್ರೆ ಸಂವಿಧಾನದ ಅಣಕ ಮಾಡಿದಂತೆ. ಅದಕ್ಕೆ ಭಾಷಣ ಇಲ್ಲಿಗೆ ನಿಲ್ಲಿಸ್ತಿದ್ದೇನೆ ಎನ್ನುತ್ತಾ ಸದನದಿಂದ ರಾಜ್ಯಪಾಲ ರವಿ ನಿರ್ಗಮಿಸಿದ್ರು. ಇದನ್ನೂ ಓದಿ: ಇಡಿ, ಸಿಬಿಐ ಮೂಲಕ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ: ಡಿಕೆಶಿ

    ಇತ್ತೀಚಿಗೆ ಕೇರಳ ಗವರ್ನರ್ ಆರೀಫ್ ಮಹ್ಮದ್ ಖಾನ್ ಕೂಡ ಹೀಗೆ ಮಾಡಿದ್ರು ಎನ್ನುವುದು ಗಮನಾರ್ಹ. ಮತ್ತೊಂದ್ಕಡೆ ಮಮತಾ ಸರ್ಕಾರದ ವಿರುದ್ಧ ಬಂಗಾಳ ರಾಜ್ಯಪಾಲ ಆನಂದ್ ಬೋಸ್ ಸಮರ ಸಾರಿದ್ದಾರೆ. ಸಂದೇಶ್‍ಖಲಿಯಲ್ಲಿ ಟಿಎಂಸಿ ನಾಯಕ ಶಾಜಹಾನ್ ಮತ್ತು ಬೆಂಬಲಿಗರು ನಡೆಸಿದ ಲೈಂಗಿಕ ದೌರ್ಜನ್ಯವನ್ನು ರಾಜ್ಯಪಾಲರು ತೀವ್ರವಾಗಿ ಖಂಡಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಲ್ಲಿ ಧೈರ್ಯ ತುಂಬಿದ ಅವರು, ಈ ಘಟನೆಯಿಂದ ನನಗೆ ಆಘಾತವಾಗಿದೆ ಎಂದಿದ್ದಾರೆ.

  • ಸ್ಟಾಲಿನ್ ಸ್ನೇಹಕ್ಕಾಗಿ ನೀರು ಹರಿಸಿ ರಾಜ್ಯದ ಜನತೆಗೆ ದ್ರೋಹ ಮಾಡ್ತಿದ್ದಾರೆ: ಗೋವಿಂದ ಕಾರಜೋಳ

    ಸ್ಟಾಲಿನ್ ಸ್ನೇಹಕ್ಕಾಗಿ ನೀರು ಹರಿಸಿ ರಾಜ್ಯದ ಜನತೆಗೆ ದ್ರೋಹ ಮಾಡ್ತಿದ್ದಾರೆ: ಗೋವಿಂದ ಕಾರಜೋಳ

    ಬೆಂಗಳೂರು: ಸ್ಟಾಲಿನ್ (MK Stalin) ಸ್ನೇಹಕ್ಕಾಗಿ ನೀರು ಹರಿಸಿ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ (Govinda Karajola) ಹೇಳಿದ್ದಾರೆ.

    ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) ಯಿಂದ  ನಿನ್ನೆ ನೀರು ಬಿಡುವ ಆದೇಶ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಂಗಳವಾರ ಬಂದ್ ಶಾಂತಿಯುತವಾಗಿ ಆಚರಿಸಲಾಗಿದೆ. ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ನೀರು ಬಿಡ್ತಿದೆ. ಸರ್ಕಾರ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿದೆ. ಸ್ಟಾಲಿನ್ ಸ್ನೇಹಕ್ಕಾಗಿ ನೀರು ಹರಿಸಿ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದ್ದಾರೆ ಎಂದರು.

    ತಮಿಳುನಾಡಿಗೆ 32 ಟಿಎಂಸಿ ಅಡಿ ನೀರು ಮಾತ್ರ 1.8 ಲಕ್ಷ ಹೆಕ್ಟೇರ್ ಬೆಳೆಗೆ ಹಂಚಿಕೆ ಆಗಿರೋದು. ಆದರೆ ಅವರು 4 ಲಕ್ಷ ಹೆಕ್ಟೇರ್ ಕುರುವೈ ಬೆಳೆ ಬೆಳೆದಿದ್ದಾರೆ. ಈಗಾಗಲೇ ಅಧಿಕ ನೀರು ಹರಿದು ಹೋಗಿದೆ. ಇದನ್ನು ನಮ್ಮವರು ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಕಡಿಮೆ ಮಳೆ ಆಗಿದೆ. ಬಿದ್ದ ಮಳೆ ಎಲ್ಲಕೆ ಆರೆಸ್ ಜಲಾಶಯಕ್ಕೇ ಹರಿದು ಬರಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿಯವರೇ ತಮಿಳುನಾಡಿಗೆ ಹೋಗಿ: ಸಿ.ಟಿ ರವಿ ಆಗ್ರಹ

    ಮಳೆ ಆಧಾರದಲ್ಲಿ ನೀರು ಹಂಚಿಕೆ ಮಾಡಿರೋದು ತಪ್ಪು ಅಂತ ಕೋರ್ಟ್‍ಗೆ ಮನವರಿಕೆ ಮಾಡಿ ಕೊಟ್ಟಿಲ್ಲ. ಇವರ ಪಾರ್ಟ್‍ನರ್ ಸ್ಟಾಲಿನ್ ಸರ್ಕಾರಕ್ಕೆ ಅನುಕೂಲ ಮಾಡಿಕೊಡಲು ನೀರು ಬಿಡುತ್ತಿದ್ದಾರೆ. ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಪ್ರೀತಿ ಅನ್ನೋ ನಡೆ ತೋರಿಸ್ತಿದೆ ಸರ್ಕಾರ. 3 ಸಾವಿರ ಕ್ಯೂಸೆಕ್ಸ್ ಅಲ್ಲ ಒಂದು ಹನಿಯನ್ನೂ ನೀರು ಬಿಡಬಾರದು. ಮೇಕೆದಾಟು ಪಾದಯಾತ್ರೆ ಮಾಡಿದವರು ಕಾಂಗ್ರೆಸ್‍ನವರು. ಮೇಕೆದಾಟು ಯೋಜನೆ ನಾವು ಅಧಿಕಾರಕ್ಕೆ ಬಂದು ಮಾಡ್ತೇವೆ ಅಂದಿದ್ರು ಡಿಕೆಶಿ, ಯಾರ ನೆರವೂ ಬೇಕಿಲ್ಲ ಅಂದಿದ್ರು. ಈಗ ಅವರದ್ದೇ ಸರ್ಕಾರ ಇದೆ ಮೇಕೆದಾಟು ಯೋಜನೆ ಮಾಡಲಿ. ಇವತ್ತು ಬಿಜೆಪಿಯಿಂದ ಪ್ರತಿಭಟನೆ ನಡೆಸ್ತಿದ್ದೇವೆ, ಆಗಿರುವ ಅನ್ಯಾಯವನ್ನು ಜನತೆಗೆ ತಿಳಿಸ್ತೇವೆ ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]