Tag: ಸ್ಟೇರಿಂಗ್

  • ಚಲಿಸುತ್ತಿದ್ದ ಕಾರಿನಲ್ಲೇ ಪತಿಯೊಂದಿಗೆ ಜಗಳವಾಡುತ್ತಾ ಸ್ಟೇರಿಂಗ್ ಎಳೆದ ಪತ್ನಿ!

    ಚಲಿಸುತ್ತಿದ್ದ ಕಾರಿನಲ್ಲೇ ಪತಿಯೊಂದಿಗೆ ಜಗಳವಾಡುತ್ತಾ ಸ್ಟೇರಿಂಗ್ ಎಳೆದ ಪತ್ನಿ!

    ಬೆಂಗಳೂರು: ಚಲಿಸುತ್ತಿದ್ದ ಸಂದರ್ಭದಲ್ಲಿಯೇ ಪತಿ ಜೊತೆ ಜಗಳವಾಡುತ್ತಾ ಪತ್ನಿ ಕಾರಿನ ಸ್ಟೇರಿಂಗ್ ಎಳೆದ ಪ್ರಸಂಗವೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಘಟನೆಯಿಂದ ಪತಿ ಹಾಗೂ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳಕ್ಕೆ ಹಲಸೂರು ಗೇಟ್ ಪೊಲೀಸರು (Halasurugate Police) ಸ್ಥಳಕ್ಕೆ ದೌಡಾಯಿಸಿ ದಂಪತಿಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ದಂಪತಿ ಕಲಹದಿಂದಾಗಿ ಈ ದುರ್ಘಟನೆ ನಡೆದಿರುವುದು ಬಯಲಾಗಿದೆ.

    ಮಾರ್ಕೆಟ್ ಕಡೆಯಿಂದ ಬರುತ್ತಿದ್ದ ಐ20 ಕಾರಿನಲ್ಲಿ ಕ್ಲುಲ್ಲಕ ವಿಚರವೊಂದಕ್ಕೆ ಗಂಡ-ಹೆಂಡ್ತಿ ಮಧ್ಯೆ (Husband- Wife Fight in Moving Car) ಮಾತಿಗೆ ಮಾತು ಬೆಳೆದಿದೆ. ಇಬ್ಬರ ಮಧ್ಯೆ ವಾಗ್ವಾದಗಳಾಗುತ್ತಿದ್ದಂತೆಯೇ ಸಿಟ್ಟುಗೊಂಡ ಪತ್ನಿ ದಿಢೀರ್ ಎಂಬಂತೆ ಕಾರಿನ ಸ್ಟೇರಿಂಗ್ ಎಳೆದಿದ್ದಾಳೆ. ಪರಿಣಾಮ ಹಲಸೂರು ಗೇಟ್ ಠಾಣೆ ಸಮೀಪ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ. ಇದನ್ನೂ ಓದಿ: ಚಲುವರಾಯಸ್ವಾಮಿ ವಿರುದ್ಧ ಮತ್ತೊಂದು ಆಡಿಯೋ ಬಿಟ್ಟ ಜೆಡಿಎಸ್

    ಘಟನೆಯಿಂದ ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಭಾರೀ ಅನಾಹುತದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಹಲಸೂರು ಗೇಟ್ ಪೊಲೀಸರು, ಪಲ್ಟಿ ಹೊಡೆದ ಕಾರು ನಿಲ್ಲಿಸಿ ದಂಪತಿಯನ್ನು ರಕ್ಷಣೆ ಮಾಡಿದ್ದಾರೆ. ಪತಿ ಕುಡಿದ ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿರುವ ಶಂಕೆ ವ್ಯಕ್ತವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಸ್ಸಿನ ಸ್ಟೇರಿಂಗ್ ರಾಡ್ ಕಟ್ – ಗದ್ದೆಗೆ ನುಗ್ಗಿದ 30ಕ್ಕೂ ಅಧಿಕ ಪ್ರಯಾಣಿಕರಿದ್ದ ಸರ್ಕಾರಿ ಬಸ್

    ಬಸ್ಸಿನ ಸ್ಟೇರಿಂಗ್ ರಾಡ್ ಕಟ್ – ಗದ್ದೆಗೆ ನುಗ್ಗಿದ 30ಕ್ಕೂ ಅಧಿಕ ಪ್ರಯಾಣಿಕರಿದ್ದ ಸರ್ಕಾರಿ ಬಸ್

    ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿ ಗ್ರಾಮದ ಬಳಿ ಸರ್ಕಾರಿ ಬಸ್ಸಿನ ಸ್ಟೇರಿಂಗ್ ರಾಡ್ ಕಟ್ ಆದ ಪರಿಣಾಮ ಬಸ್ ರಸ್ತೆ ಬಿಟ್ಟು ಗದ್ದೆಗೆ ನುಗ್ಗಿದೆ.

    ಸರ್ಕಾರಿ ಬಸ್ಸೊಂದು ಪಂಡರಾಪುರದಿಂದ ವಿಜಯಪುರ ಮಾರ್ಗವಾಗಿ ಇಂಡಿಗೆ ಹೊರಟಿತ್ತು. ಬಸ್ಸಿನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಇಂಡಿಗೆ ವಾಪಸ್ಸಾಗುತ್ತಿದ್ದರು. ಆದರೆ ಇಂಡಿ ತಾಲೂಕಿನ ಇಂಚಗೇರಿ ಬಳಿ ಬರುತ್ತಿದ್ದಂತೆ ಬಸ್ಸಿನ ಸ್ಟೇರಿಂಗ್ ರಾಡ್ ಕಟ್ ಆಗಿದೆ.

    ಬಸ್ಸಿನ ಸ್ಟೇರಿಂಗ್ ರಾಡ್ ಕಟ್ ಆಗುತ್ತಿದ್ದಂತೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗದ್ದೆಗೆ ನುಗ್ಗಿದೆ. ಆದರೆ ಈ ವೇಳೆ ಚಾಲಕ ಬಸ್ಸಿನ ವೇಗ ನಿಯಂತ್ರಿಸಿ ಪ್ರಯಾಣಿಕರ ಪ್ರಾಣ ಉಳಿಸಿದ್ದಾರೆ. ಚಾಲಕನ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.

    ಈ ಅವಘಡದಲ್ಲಿ ಚಾಲಕನಿಗೆ ಗಾಯವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv