Tag: ಸ್ತಬ್ಧ ಚಿತ್ರ

  • ಕರ್ನಾಟಕದ ಸ್ತಬ್ಧಚಿತ್ರ ಅತ್ಯದ್ಭುತ

    ಕರ್ನಾಟಕದ ಸ್ತಬ್ಧಚಿತ್ರ ಅತ್ಯದ್ಭುತ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗಣರಾಜೋತ್ಸವ ಪರೇಡ್‍ನಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗುತ್ತೆ: ಸಿಎಂ

    ಗಣರಾಜೋತ್ಸವ ಪರೇಡ್‍ನಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗುತ್ತೆ: ಸಿಎಂ

    ಮೈಸೂರು: ಈ ಬಾರಿಯ ಗಣರಾಜೋತ್ಸವ (Republic Day 2023) ಪರೇಡ್‍ನಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗುತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷ ಬೇರೆ ಬೇರೆ ರಾಜ್ಯಗಳಿಗೆ ಅವಕಾಶ ಕೊಡಲಾಗುತ್ತದೆ. ಈ ವರ್ಷವೂ ಭಾಗವಹಿಸಲು ಅವಕಾಶ ಕೊಡಿ ಅಂತ ಕೇಳುತ್ತೇವೆ. ಈ ವರ್ಷವೂ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗಲಿದೆ ಎಂದರು.

    ಕೇಂದ್ರದ ವಿರುದ್ಧ ಆಕ್ರೋಶ: ಕಳೆದ 13 ವರ್ಷಗಳಿಂದ ಸತತವಾಗಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಾಲ್ಗೊಳ್ಳುತ್ತಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಈ ಬಾರಿ ಮನ್ನಣೆ ನೀಡಿಲ್ಲ. ಈಗ 13 ವರ್ಷಗಳ ಬಳಿಕ ಕರ್ನಾಟಕ ಅವಕಾಶ ಕಳೆದುಕೊಂಡಿದ್ದು, ಕೇಂದ್ರ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತವಾಗಿದೆ. ಪ್ರತಿಬಾರಿ ರಾಜ್ಯದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿತ್ತು. ಹಲವು ಬಾರಿ ರಾಜ್ಯ ತಂಡ ಪ್ರಶಸ್ತಿಯನ್ನೂ ಗೆದ್ದಿತ್ತು. ಆದ್ರೀಗ ರಾಜ್ಯವನ್ನು ಕಡೆಗಣಿಸಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: 13 ವರ್ಷಗಳ ಬಳಿಕ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶ

    ಈ ಬಾರಿ ಕರ್ನಾಟಕ ಸರ್ಕಾರ ಸಿರಿಧಾನ್ಯ ರೇಷ್ಮೆ, ನಾರಿಶಕ್ತಿ ಸೇರಿ ನಾಲ್ಕು ವಿಷಯಗಳನ್ನ ಕೊಟ್ಟಿತ್ತು. ಅದರಲ್ಲಿ ನಾರಿಶಕ್ತಿ ಥೀಮ್ ಗೆ ಮೆಚ್ಚುಗೆ ವ್ಯಕ್ತವಾಗಿ ಅವಕಾಶ ಕೊಡುವ ಸಾಧ್ಯತೆ ಇತ್ತು. ಆದರೆ ಕೇಂದ್ರದಿಂದ ರಾಜ್ಯದ ಸ್ತಬ್ದ ಚಿತ್ರಕ್ಕೆ ಅನುಮತಿ ನಿರಾಕರಿಸಲಾಗಿದೆ. ಆದ್ರೆ ನೆರೆಯ ರಾಜ್ಯದ ತಮಿಳುನಾಡು (Tamilnadu) ಮತ್ತು ಕೇರಳ (Kerala) ಕ್ಕೆ ಈ ಬಾರಿ ಅವಕಾಶ ಕೊಟ್ಟಿದ್ದಾರೆ. ಈ ಬಾರಿ ಗಣರಾಜ್ಯೋತದಲ್ಲಿ ಒಟ್ಟು 13 ರಾಜ್ಯಗಳ ಸ್ತಬ್ಧಚಿತ್ರಗಳಿಗೆ ಅವಕಾಶ ಕೊಡಲಾಗಿದ್ದು ರಾಜ್ಯಕ್ಕೆ ಮಾತ್ರ ಮಣೆ ಹಾಕಿಲ್ಲ. ಇದನ್ನೂ ಓದಿ: ಸ್ತಬ್ಧ ಚಿತ್ರಕ್ಕೆ ಅವಕಾಶ ಕೊಡದಿದ್ರೆ ಕೇಂದ್ರ ಸಚಿವರಿಗೆ ಘೇರಾವ್‌ ಹಾಕ್ತೇವೆ: ಡಿಕೆ ಸುರೇಶ್‌ ಎಚ್ಚರಿಕೆ

    ಕಳೆದ ವರ್ಷ ನಾರಾಯಣಗುರು ಸ್ತಬ್ಧಚಿತ್ರ (Narayanaguru Tableau) ಕ್ಕೆ ಅವಕಾಶ ನೀಡದ ಕೇಂದ್ರ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು. ನಾರಾಯಣಗುರು ಅನುಯಾಯಿಗಳ ಕೆಂಗಣ್ಣಿಗೆ ಕೇಂದ್ರ ಸರ್ಕಾರ ಗುರಿಯಾಗಿತ್ತು. ಈಗ ರಾಜ್ಯದ ಸ್ತಬ್ಧ ಚಿತ್ರವನ್ನೇ ರಿಜೆಕ್ಟ್ ಮಾಡುವ ಮೂಲಕ ರಾಜ್ಯದ ಜನರ ಆಕ್ರೋಶಕ್ಕೆ ಗುರಿಯಾಗಿದ್ದು, ಚುನಾವಣಾ ವರ್ಷದಲ್ಲಿ ಡಬ್ಬಲ್ ಎಂಜಿನ್ ಸರ್ಕಾರ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೆ ಕಾದುನೋಡಬೇಕು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸ್ತಬ್ಧ ಚಿತ್ರಕ್ಕೆ ಅವಕಾಶ ಕೊಡದಿದ್ರೆ ಕೇಂದ್ರ ಸಚಿವರಿಗೆ ಘೇರಾವ್‌ ಹಾಕ್ತೇವೆ: ಡಿಕೆ ಸುರೇಶ್‌ ಎಚ್ಚರಿಕೆ

    ಸ್ತಬ್ಧ ಚಿತ್ರಕ್ಕೆ ಅವಕಾಶ ಕೊಡದಿದ್ರೆ ಕೇಂದ್ರ ಸಚಿವರಿಗೆ ಘೇರಾವ್‌ ಹಾಕ್ತೇವೆ: ಡಿಕೆ ಸುರೇಶ್‌ ಎಚ್ಚರಿಕೆ

    – ಗುಜರಾತ್‍ಗೆ ಅವಕಾಶ ಕೊಟ್ಟು, ಕರ್ನಾಟಕಕ್ಕೆ ಅನ್ಯಾಯ

    ಬೆಂಗಳೂರು: ಗಣರಾಜ್ಯೋತ್ಸವದ ಸಂದರ್ಭದಲ್ಲಿ ಆಗುತ್ತಿರುವ ಅಪಮಾನ ಕನ್ನಡಿಗರು ಸಹಿಸುವುದಿಲ್ಲ. ಎಲ್ಲ ಸಂಸತ್ ಸದಸ್ಯರು ಪ್ರಧಾನಿಗೆ ಹಾಗೂ ಸಂಬಂಧಪಟ್ಟ ಸಚಿವರಿಗೆ ಒತ್ತಡ ಹೇರಿ ಇಲ್ಲದೇ ಹೋದರೆ ಕೇಂದ್ರ ಸಚಿವರಿಗೆ ಘೇರಾವ್ ಹಾಕಬೇಕಾಗುತ್ತದೆ ಎಂದು ಸಂಸದ ಡಿ.ಕೆ ಸುರೇಶ್ (DK Suresh) ಎಚ್ಚರಿಕೆ ನೀಡಿದರು.

    ಗಣರಾಜ್ಯೋತ್ಸವದ (Republic Day) ಪರೇಡ್ ವೇಳೆ ರಾಜ್ಯದ ಸ್ತಬ್ಧ ಚಿತ್ರ  (Tableau) ನಿರಾಕರಣೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಮಾತ್ರವಲ್ಲ ಇಡೀ ವಿಶ್ವದಲ್ಲಿ ತನ್ನದೇ ಆದ ಇತಿಹಾಸ ಛಾಪು ಇಟ್ಟುಕೊಂಡ ಪ್ರಗತಿಪರ ರಾಜ್ಯ ಕರ್ನಾಟಕವಾಗಿದೆ (Karnataka). ಗಣರಾಜ್ಯೋತ್ಸವ ಸಂದರ್ಭದಲ್ಲಿ ಪ್ರತಿವರ್ಷ ರಾಜ್ಯಕ್ಕೆ ತನ್ನದೇ ಆದ ಸ್ಥಾನಮಾನ ಭಾರತ ಕೊಟ್ಟುಕೊಂಡು ಬರುತ್ತಿತ್ತು. ಆದರೆ ಈ ಬಾರಿ ರಾಜ್ಯದ ಪರಂಪರೆ ಶಕ್ತಿ ತೋರಿಸಲು 26ರ ಗಣರಾಜ್ಯೋತ್ಸವದ ಟ್ಯಾಬ್ಲೋಗೂ ಅವಕಾಶ ಮಾಡಿಕೊಟ್ಟಿಲ್ಲ. ಕೇಂದ್ರ ಸರ್ಕಾರ ಯಾವ ಮಟ್ಟಿಗಿನ ಅನ್ಯಾಯ ಮಾಡುತ್ತಿದೆ ಎನ್ನೋದು ಗೊತ್ತಾಗುತ್ತದೆ ಎಂದು ಕಿಡಿಕಾರಿದರು.

    ಗುಜರಾತ್ ಅನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿಕೊಂಡು ಗುಜರಾತಿಗೆ ಕೊಡುವ ಆದ್ಯತೆಯನ್ನು ಉಳಿದ ರಾಜ್ಯಗಳಿಗೆ ಕೊಡುತ್ತಿಲ್ಲ. ಏರ್ ಶೋ ವಿಚಾರದಲ್ಲೂ ಗೊಂದಲ ಸೃಷ್ಟಿ ಮಾಡಿದ್ದರು. ಗಣರಾಜ್ಯೋತ್ಸವದ ಸಂದರ್ಭದಲ್ಲಿ ಆಗುತ್ತಿರುವ ಅಪಮಾನ ಕನ್ನಡಿಗರು ಸಹಿಸುವುದಿಲ್ಲ. ಈ ಕುರಿತು ಎಲ್ಲ ಸಂಸತ್ ಸದಸ್ಯರು ಪ್ರಧಾನಿಗೆ ಹಾಗೂ ಸಂಬಂಧಪಟ್ಟ ಸಚಿವರಿಗೆ ಒತ್ತಡ ಹೇರಬೇಕು, ಇಲ್ಲದೇ ಹೋದರೆ ಕೇಂದ್ರ ಸಚಿವರಿಗೆ ಘೇರಾವ್ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಶಂಕರ್ ಮಿಶ್ರಾ ಬೆಂಗಳೂರಲ್ಲಿ ಬಂಧನ

    ಚುನಾವಣೆ ಸಂದರ್ಭದಲ್ಲಿ ಕೇವಲ ಭಾವನಾತ್ಮಕ ವಿಷಯ ಮುಂದಿಟ್ಟುಕೊಂಡು ಹೋಗುತ್ತಾರೆ. ನಮ್ಮ ಯೋಜನೆಗಳು ಐದೈದು ವರ್ಷ ಆದರೂ ಕೇಂದ್ರದಿಂದ ಅಪ್ರೂವ್ ಆಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಳೇ ಕೇಸ್ ರೀ ಓಪನ್ ಮಾಡ್ಬಿಡಿ- ಪಕ್ಷದ ಹಿರಿಯ ನಾಯಕರ ಚಾಟಿಗೆ ಬೊಮ್ಮಾಯಿ ಏನ್ಮಾಡ್ತಾರೆ..!?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜಂಬೂ ಸವಾರಿ: ಚಾಮರಾಜನಗರ ಪ್ರತಿನಿಧಿಸುವ ಸ್ತಬ್ಧ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್

    ಜಂಬೂ ಸವಾರಿ: ಚಾಮರಾಜನಗರ ಪ್ರತಿನಿಧಿಸುವ ಸ್ತಬ್ಧ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್

    ಮೈಸೂರಿನ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ. ವಿಶ್ವವಿಖ್ಯಾತಿ ಜಂಬೂ ಸವಾರಿಯಲ್ಲಿ ನಾನಾ ಇಲಾಖೆಗಳ ಹಾಗೂ ಜಿಲ್ಲೆಗಳ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಇರುತ್ತವೆ. ನಾಡು, ನುಡಿ, ಸಂಸ್ಕೃತಿ, ಸಾಂಸ್ಕೃತಿಕ ರೂಪಕಗಳನ್ನು ಬಿಂಬಿಸುವಂತಹ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಇಲ್ಲಿ ಅವಕಾಶ ಕಲ್ಪಿಸಲಾಗುತ್ತದೆ. ಈ ಬಾರಿ ಪುನೀತ್ ರಾಜ್ ಕುಮಾರ್ ಕೂಡ ಸ್ತಬ್ಧ ಚಿತ್ರ ರೂಪದಲ್ಲಿ ಇರಲಿದ್ದಾರೆ.

    ಚಾಮರಾಜನಗರವನ್ನು ಪ್ರತಿನಿಧಿಸುವ ಸ್ತಬ್ಧ ಚಿತ್ರದಲ್ಲಿ ಈ ಬಾರಿ ಪುನೀತ್ ರಾಜ್ ಕುಮಾರ್ ಕಾಣಿಸಿಕೊಳ್ಳುತ್ತಿದ್ದು, ಈ ಮೂಲಕ ಮೇರು ನಟನಿಗೆ ಗೌರವ ಸಲ್ಲಿಸಲಾಗುತ್ತಿದೆ. ಡಾ.ರಾಜ್ ಕುಟುಂಬವು ಇದೇ ಭಾಗದವರು ಆಗಿರುವುದರಿಂದ ಜಿಲ್ಲಾಡಳಿತ ಇಂಥದ್ದೊಂದು ನಿರ್ಧಾರ ತಗೆದುಕೊಂಡಿದೆ. ಈ ಬಾರಿಯ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಪುನೀತ್ ಅವರ ಸ್ತಬ್ಧ ಚಿತ್ರ ಗಮನ ಸೆಳೆಯಲಿದೆ. ಇದನ್ನೂ ಓದಿ:ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಮೂರು ದಿನದ ಗಳಿಕೆ 230 ಕೋಟಿಗೂ ಅಧಿಕ

    ಪುನೀತ್ ರಾಜ್ ಕುಮಾರ್ ಅಗಲಿಕೆ ಇದೇ ತಿಂಗಳು ಒಂದು ವರ್ಷ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಇಂಥದ್ದೊಂದು ಗೌರವಕ್ಕೆ ಚಾಮರಾಜನಗರ ನಿರ್ಧಾರ ತಗೆದುಕೊಳ್ಳಲಾಗಿದೆ. ಅಲ್ಲದೇ ಪುನೀತ್ ಅವರ ವ್ಯಕ್ತಿತ್ವವನ್ನು ಬಿಂಬಿಸುವಂತಹ ಕೆಲಸವನ್ನೂ ಈ ಸ್ತಬ್ಧ ಚಿತ್ರದ ಮೂಲಕ ಮಾಡಲಾಗಿದೆ. ನಾನಾ ಕಲಾ ಪ್ರಕಾರಗಳ, ಮೇರು ವ್ಯಕ್ತಿಗಳ ಸ್ತಬ್ಧ ಚಿತ್ರಗಳು ಕೂಡ ಈ ಮೆರವಣಿಗೆಯ ಅಂದವನ್ನು ಮತ್ತಷ್ಟು ಹೆಚ್ಚಿಸಲಿವೆ.

    Live Tv
    [brid partner=56869869 player=32851 video=960834 autoplay=true]

  • ರಾಜಪಥದಲ್ಲಿ ಭಾರತದ ವೈಭವ ಅನಾವರಣ

    ರಾಜಪಥದಲ್ಲಿ ಭಾರತದ ವೈಭವ ಅನಾವರಣ

    ನವದೆಹಲಿ: ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಗಿದೆ. ದೆಹಲಿ ರಾಜಪಥ್‍ನಲ್ಲಿ ಭಾರತದ ಸ್ವತಂತ್ರ್ಯೋತ್ಸವದ ಅಮೃತಮಹೋತ್ಸವ ಸಂಭ್ರಮ, ಕೋವಿಡ್ ಮಾರ್ಗಸೂಚಿಯ ನಡುವೆ ಗಣರಾಜ್ಯೋತ್ಸವ ಪರೇಡ್ ಸಂಭ್ರಮದಿಂದ ನಡೆಯಿತು.

    ವಿಶೇಷತೆ ಏನು?
    ರಾಜಪಥ್‍ನಲ್ಲಿ ವಿರಾಟ್ ಭಾರತದ ಒಂದು ವಿಹಾಂಗಮ ನೋಟವನ್ನು ಪ್ರದರ್ಶಿಸಲಾಯಿತು. ನವ ಭಾರತದ ಮಿಲಿಟರಿ ಶಕ್ತಿ ಇಂದಿನ ಸಮಾರಂಭದಲ್ಲಿ ಅನಾವರಣಗೊಂಡಿತು. ಈ ಸಮಾರಂಭದಲ್ಲಿ ಮೊಟ್ಟ ಮೊದಲ ಬಾರಿಗೆ 75 ವಿಮಾನಗಳು ಭವ್ಯ ಫ್ಲೈ-ಪಾಸ್ಟ್ ಮಾಡಿದವು. ಇದರೊಂದಿಗೆ ಪರೇಡ್‍ನಲ್ಲಿ ಹಲವು ರಾಜ್ಯಗಳ ಸ್ತಬ್ಧ ಚಿತ್ರ, ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡಗರ ಕಣ್ಮನ ಸೆಳೆಯಿತು. ಇದನ್ನೂ ಓದಿ: ಜೈ ಹಿಂದ್ – ಗಣರಾಜ್ಯೋತ್ಸವಕ್ಕೆ ಶುಭಕೋರಿದ ಪ್ರಧಾನಿ ಮೋದಿ

    ಬೆಳಗ್ಗೆ 10:30 ಸುಮಾರಿಗೆ ಆರಂಭಗೊಂಡ ಪರೇಡ್ ಕಾರ್ಯಕ್ರಮ 12:15ಕ್ಕೆ ಮುಕ್ತಾಯಗೊಂಡಿತು. ಪ್ರತಿ ವರ್ಷ ಈ ಕಾರ್ಯಕ್ರಮ ಬೆಳಗ್ಗೆ 10 ಗಂಟೆಯಿಂದ ಆರಂಭವಾಗುತ್ತಿತ್ತು. ಈ ಬಾರಿ 30 ನಿಮಿಷ ತಡವಾಗಿ ಆರಂಭಗೊಂಡಿತು. ರಾಜಪಥ್‍ನಲ್ಲಿ ಮಂಜು ಆವರಿಸಿಕೊಂಡಿದ್ದ ಕಾರಣ ಈ ಬಾರಿ ಕಾರ್ಯಕ್ರಮವನ್ನು ಪೂರ್ವನಿಗದಿಯಂತೆ 10:30ಕ್ಕೆ ಆರಂಭಿಸಲಾಯಿತು. ಕೊರೊನಾ ಕಾಟದಿಂದಾಗಿ ಕಳೆದ ಬಾರಿಯಂತೆ ಈ ವರ್ಷ ಕೂಡಾ ಯಾವುದೇ ವಿದೇಶಿ ಮುಖ್ಯ ಅತಿಥಿಗೆ ಆಹ್ವಾನ ನೀಡಿಲ್ಲ. ಈ ಮೂಲಕ ಸತತ 2ನೇ ವರ್ಷ ಯಾವುದೇ ವಿದೇಶಿ ಅತಿಥಿ ಇಲ್ಲದೆ ಗಣರಾಜ್ಯೋತ್ಸವದ ಆಚರಣೆ ನಡೆಯಿತು.  ಇದನ್ನೂ ಓದಿ: ಗಣರಾಜ್ಯೋತ್ಸವ ಸಂಭ್ರಮ: ಮೋದಿ ಟೋಪಿ, ಶಾಲು ವಿಶೇಷತೆ ಏನು?

    ಪರೇಡ್‍ನಲ್ಲಿ ಮೊದಲ ಬಾರಿಗೆ ಭಾರತೀಯ ವಾಯುಪಡೆಯ 75 ವಿಮಾನಗಳ ಭವ್ಯ ಫ್ಲೈ-ಪಾಸ್ಟ್ ಮಾಡಿದವು. ಸ್ಪರ್ಧಾತ್ಮಕ ಪ್ರಕ್ರಿಯೆಯ ಮೂಲಕ ಆಯ್ಕೆಯಾದ 480 ಸ್ಪರ್ಧಿಗಳು ಸಾಂಸ್ಕೃತಿಕ ಪ್ರದರ್ಶನಗಳನ್ನು ನೀಡಿದರು. ಪ್ರತಿ 75 ಮೀಟರ್ ಅಂತರದಲ್ಲಿ 10 ದೊಡ್ಡ ಎಲ್‍ಇಡಿ ಪರದೆಗಳನ್ನು ಅಳವಡಿಸಲಾಗಿತ್ತು. ಈ ಮೂಲಕ ಕಾರ್ಯಕ್ರಮ ನಡೆಯುವ ಸ್ಥಳದಿಂದ ದೂರ ಕುಳಿತಿರುವ ಜನರಿಗೂ ಕಾರ್ಯಕ್ರಮ ವೀಕ್ಷಿಸುವ ಅವಕಾಶ ಕಲ್ಪಿಸಿಕೊಡಲಾಗಿತ್ತು.

    ಪರೇಡ್‍ನಲ್ಲಿ ಲಸಿಕೆಯ ಎರಡೂ ಡೋಸ್‍ಗಳನ್ನು ಪಡೆದುಕೊಂಡವರಿಗೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಯಿತು. 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಕ್ಕಳು ಯಾರು ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ ಅವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶಕ್ಕೆ ನೀಡಲಾಗಿತ್ತು. ಕೊರೊನಾ ಭೀತಿಯಿಂದಾಗಿ ಈ ಬಾರಿ ವೀಕ್ಷಕರ ಸಂಖ್ಯೆಯನ್ನು 5 ರಿಂದ 8 ಸಾವಿರ ಪ್ರೇಕ್ಷಕರಿಗೆ ಮಾತ್ರ ಮಿತಿಗೊಳಿಸಲಾಗಿತ್ತು. ಕಳೆದ ವರ್ಷ 25 ಸಾವಿರ ಜನರು ಪರೇಡ್ ವೀಕ್ಷಿಸಿದ್ದರು.

    ರಾಜಪಥ್‍ನಲ್ಲಿ 25 ಟ್ಯಾಬ್ಲೋಗಳ ಪರೇಡ್:
    12 ರಾಜ್ಯ, 9 ಕೇಂದ್ರ ಸಚಿವಾಲಯಗಳು, 2 DRDO, ವಾಯುಪಡೆ ಮತ್ತು ನೌಕಾಪಡೆಯಿಂದ ತಲಾ ಒಂದು ಟ್ಯಾಬ್ಲೋ ಸೇರಿ ಒಟ್ಟು 25 ಟ್ಯಾಬ್ಲೋಗಳು ಪರೇಡ್‍ನಲ್ಲಿ ಸಾಗಿದವು. ಪರೇಡ್‍ನಲ್ಲಿ, ಸಿಆರ್‍ಪಿಎಫ್, ಎಸ್‍ಎಸ್‍ಬಿ ಸಿಬ್ಬಂದಿಯಿಂದ ಶೌರ್ಯ ಪ್ರದರ್ಶನ ನಡೆಯಿತು. ದೆಹಲಿ ಪೆÇಲೀಸರು, ಎನ್‍ಸಿಸಿ ಸ್ಕ್ವಾಡ್ ಸಹ ಪರೇಡ್ ನಲ್ಲಿ ಭಾಗಿಯಾದರು. ವಾಯುಪಡೆ, ನೌಕಾಪಡೆ ಮತ್ತು ಸೇನೆಯ 75 ವಿಮಾನಗಳು ಗ್ರ್ಯಾಂಡ್ ಫ್ಲೈಪಾಸ್ಟ್‍ನಲ್ಲಿ ಭಾಗಿಯಾದರು. ಸ್ವಾತಂತ್ರ್ಯದ 75 ನೇ ವರ್ಷದಲ್ಲಿ ಅಮೃತಮಹೋತ್ಸವದ ಸಂಭ್ರಮಕ್ಕೆ ಸಾಕ್ಷಿ ಎಂಬಂತೆ ಗಣರಾಜ್ಯೋತ್ಸವದಲ್ಲಿ 17 ಜಾಗ್ವಾರ್ ಹೋರಾಟಗಾರರು ಭಾಗವಹಿಸಿದರು. ರಾಜಪಥ್‍ನ ಮೇಲ್ಭಾಗದಲ್ಲಿ 75ರ ಆಕೃತಿ ರಚನೆ ಮಾಡಲಾಗಿತ್ತು. ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಬುದ್ಧದೇವ್ ಭಟ್ಟಾಚಾರ್ಯ

    ಪರೇಡ್ ಮಾರ್ಗದಲ್ಲಿ ಕಡಿತ:
    ಈ ಬಾರಿ ಪರೇಡ್ ಮಾರ್ಗವನ್ನೂ ಕಡಿತಗೊಳಿಸಲಾಗಿತ್ತು. ಈ ಹಿಂದೆ 8.3 ಕಿಮೀ ಇದ್ದ ಮಾರ್ಗವನ್ನು 3.3 ಕಿಮೀಗೆ ಇಳಿಸಲಾಗಿತ್ತು. ಸುಮಾರು 2 ಗಂಟೆಗಳ ಕಾಲ ಪರೇಡ್‍ನಲ್ಲಿ 965 ಮತ್ತು 1971 ರ ಭಾರತ-ಪಾಕಿಸ್ತಾನ ಯುದ್ಧಗಳಲ್ಲಿ ಬಳಸಿದ ಶಸ್ತ್ರಾಸ್ತ್ರಗಳು ಮತ್ತು ಉಪಕರಣಗಳು, ಹಳೆಯ ಶಸ್ತ್ರಸಜ್ಜಿತ ವಾಹನಗಳು ಮತ್ತು ಫಿರಂಗಿಗಳು, ಹಳೆಯ ಉಪಕರಣಗಳು, ಶಸ್ತ್ರಾಸ್ತ್ರಗಳು ಮತ್ತು ತಂತ್ರಜ್ಞಾನದ ಸ್ಥಾನದಲ್ಲಿ ಹೊಸ ಹೊಸ ವಿಷಯಗಳನ್ನು ಕೂಡಾ ಇಂದು ಪ್ರದರ್ಶನಕ್ಕೆ ಇಡಲಾಗಿತ್ತು. ಹೀಗೆ ಹತ್ತು ಹಲವು ವೈಶಿಷ್ಟ್ಯಗಳ ಸಂಭ್ರಮಕ್ಕೆ ರಾಜಪಥ್ ವೇದಿಕೆಯಾಯಿತು.

    ದಕ್ಷಿಣ ಭಾರತದಿಂದ ಕರ್ನಾಟಕದ ಏಕೈಕ ಸ್ತಬ್ಧ ಚಿತ್ರ:
    ಪ್ರತಿ ವರ್ಷದಂತೆ ಈ ವರ್ಷವೂ ದೆಹಲಿ ರಾಜಪಥ್‍ನಲ್ಲಿ ಸಂಚರಿಸಲು ಕರ್ನಾಟಕದ ಸ್ತಬ್ಧ ಚಿತ್ರ ಗಮನಸೆಳೆಯಿತು. ಈ ಬಾರಿ ದಕ್ಷಿಣ ಭಾರತದಿಂದ ಕರ್ನಾಟಕದ ಏಕೈಕ ಸ್ತಬ್ಧ ಚಿತ್ರ ಪ್ರದರ್ಶನಗೊಂಡಿತು. ಕರ್ನಾಟಕದ ಟ್ಯಾಬ್ಲೋ ಸತತ 13ನೇ ವರ್ಷವೂ ಪ್ರದರ್ಶನಗೊಂಡಿತು. ಈ ಬಾರಿ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳಗಳ ತೊಟ್ಟಿಲು ವಿಷಯಧಾರಿತ ಸ್ತಬ್ಧ ಚಿತ್ರ ಪ್ರದರ್ಶನಗೊಂಡಿದ್ದು, ಟ್ಯಾಬ್ಲೋ ತಯಾರಿ ಕಾರ್ಯದಲ್ಲಿ ಕಲಾವಿದ ಶಶಿಧರ್ ಅಡಪ ನೇತೃತ್ವ ವಹಿಸಿದ್ದರು. ಈ ಸ್ತಬ್ಧ ಚಿತ್ರವನ್ನು ತಯಾರು ಮಾಡಲು ಒಂದೂವರೆ ತಿಂಗಳು ಕಾಲ ನೂರಾರು ಜನರು ಒಟ್ಟಾಗಿ ಸೇರಿ ಕೆಲಸ ನಿರ್ವಹಿಸಿ ಕರ್ನಾಟಕದ ಕರಕುಶಲ ಕಲೆಯನ್ನು ದೇಶಕ್ಕೆ ಪರಿಚಯಿಸಿದ್ದಾರೆ. ಇದನ್ನೂ ಓದಿ: ಗಣರಾಜ್ಯೋತ್ಸವದ ನಿಮಿತ್ತ ಗೂಗಲ್ ಡೂಡಲ್‍ನಿಂದ ವಿಶೇಷ ಗೌರವ

    ಸ್ತಬ್ಧ ಚಿತ್ರದಲ್ಲಿ ಏನಿತ್ತು?
    ಕರ್ನಾಟಕದ ಸ್ತಬ್ದಚಿತ್ರದ ಮುಂಭಾಗದಲ್ಲಿ ಮೈಸೂರಿನ ಬೀಟೆ ಮರ ಹಾಗೂ ದಂತದ ಕಸೂತಿ ಕೆತ್ತನೆಯ ಬೃಹದಾಕಾರದ ಆನೆಯ ಕಲಾಕೃತಿ ಇದ್ದು, ಈ ಕಲಾಕೃತಿಯ ಕೆಳಗಿನ ಭಾಗದಲ್ಲಿ ಯಕ್ಷಗಾನ ಬೊಂಬೆಯಾಟದ ಚಿತ್ರಣವಿದೆ ಜೊತೆಗೆ ಗಂಜೀಫಾ ಕಲಾಕೃತಿ ಇತ್ತು. ಸ್ತಬ್ದಚಿತ್ರದ ಮಧ್ಯದಲ್ಲಿ ಕಣ್ಮನ ಸೆಳೆಯುವ ಬಿದರಿ ಕಲೆಯಲ್ಲಿ ರೂಪಿಸಿರುವ ದೊಡ್ಡ ಪ್ರಮಾಣದ ಹೂಜಿ. ಹೂಜಿಯ ಇಕ್ಕೆಲೆಗಳಲ್ಲಿ ಕರಾವಳಿಯ ವೈಶಿಷ್ಠ್ಯವನ್ನು ಬಿಂಬಿಸುವ ಭೂತಾರಾಧನೆಯ ಮುಖವಾಡವನ್ನು ಹೊತ್ತ ಲೋಹದ ಕಲಾಕೃತಿಗಳು, ಹೂಜಿಯ ಹಿಂಬದಿಯಲ್ಲಿ ಬಿದರಿ ಕಲೆ ಬಳಸಿ ಸಿದ್ದಪಡಿಸಿರುವ ನವಿಲುಗಳಿದ್ದವು. ಅಲ್ಲದೆ, ಮಧ್ಯ ಭಾಗದ ಹಿಂಬಂದಿಯಲ್ಲಿ ಕಿನ್ನಾಳದ ವೈಶಿಷ್ಠಪೂರ್ಣ ಕಲೆಯಲ್ಲಿ ಮೇಳೈಸಿದ ಬೃಹತ್ ಗಾತ್ರದ ಆಂಜನೇಯ ಸ್ವಾಮಿಯ ಮೂರ್ತಿ ಸ್ತಬ್ದಚಿತ್ರದ ಕೇಂದ್ರ ಬಿಂದುವಿನಂತೆ ಕಂಗೊಳಿಸಿತು.

    ಆಂಜನೇಯ ಸ್ವಾಮಿಯ ಮೂರ್ತಿಯ ಅಕ್ಕ-ಪಕ್ಕದಲ್ಲಿ ಚೆನ್ನಪಟ್ಟಣದ ಬೊಂಬೆಗಳು, ಮೆರುಗೆಣ್ಣೆಯ ಆಟಿಕೆಗಳು, ನವಲಗುಂದ ಧರಿ (ಜಮಖಾನೆ), ಶ್ರೀಗಂಧ ಮರದ ಕೆತ್ತನೆಯ ಹಾಗೂ ಮಣ್ಣಿನ ಕಲಾಕೃತಿಗಳು ಇತ್ತು. ಸ್ತಬ್ದಚಿತ್ರದ ಕೊನೆಯಲ್ಲಿ ಪಾರಂಪರಿಕ ಕರಕುಶಲ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಿ ಪ್ರೋತ್ಸಾಹಿಸಿದ ಕಲಾಲೋಕದ ಮಹಾಮಾತೆ, ಸ್ವಾತಂತ್ರ್ಯ ಹೋರಾಟಗಾರ್ತಿ ಹಾಗೂ ಕನ್ನಡತಿ ಕಮಲಾದೇವಿ ಚಟ್ಟೋಪಾದ್ಯಾಯ ಅವರು ಗಂಧದ ಪೆಟ್ಟಿಗೆ, ನವಿಲಿನಾಕಾರದ ದೀಪದ ಕಲಶಗಳು, ಸಂಡೂರಿನ ಬಾಳೆ ನಾರಿನ ಚೀಲಗಳು ಹೀಗೆ ವಿವಿಧ ಕರಕುಶಲ ವಸ್ತುಗಳನ್ನು ಬಾಗಿನ ರೂಪದಲ್ಲಿ ನೀಡುತ್ತಿರುವ ದೃಶ್ಯಾವಳಿಯ ದೊಡ್ಡ ಪ್ರತಿಮೆ. ಹಿಂಭಾಗದ ಎಡ – ಬಲ ಭಾಗದಲ್ಲಿ ಕೈಮಗ್ಗದ ಹಿರಿಮೆಯ ಇಳಕಲ್ ಕಸೂತಿ ಸೀರೆಗಳು, ಮೊಳಕಾಲ್ಮೋರು ಸೀರೆಗಳು ಹಾಗೂ ಮೈಸೂರು ರೇಷ್ಮೆ ಸೀರೆ. ಹಿಂಭಾಗದಲ್ಲಿ ಕಿನ್ನಾಳ ಕಲೆಯಲ್ಲಿ ತಯಾರಿಸಿದ ಬಾಲೆಯರ ಕಲಾಕೃತಿಗಳು, ಪಶ್ಚಿಮ ಘಟ್ಟಗಳಲ್ಲಿ ಲಭ್ಯವಿರುವ ಬೆತ್ತ, ಬಿದಿರು, ಕಾಡುಬಳ್ಳಿಗಳು ಹಾಗೂ ತಾಟಿನಿಂಗು ಮರದ ಎಲೆಯಿಂದ ತಯಾರಿಸಿದ ಬಗೆ ಬಗೆಯ ಬುಟ್ಟಿಗಳೂ ಕೂಡಾ ಸ್ತಬ್ದಚಿತ್ರಕ್ಕೆ ವಿಶೇಷ ಮೆರುಗನ್ನು ನೀಡಿತ್ತು. ಇದನ್ನೂ ಓದಿ: ಕೊರೊನಾ ನಿಯಂತ್ರಣದಲ್ಲಿ ಸರ್ಕಾರದಿಂದ ಅತ್ಯುತ್ತಮ ಸಾಧನೆ: ಗೆಹ್ಲೋಟ್

    ಜಾನಪದ ತಜ್ಞ ಡಾ.ರಾಧಾಕೃಷ್ಣ ಉರಾಳ ನೇತೃತ್ವದ ಕಲಾ ಕದಂಬ ಕಲಾ ಕೇಂದ್ರದ ತಂಡ ಯಕ್ಷಗಾನ ಪಾತ್ರಗಳಲ್ಲಿ ಹೆಜ್ಜೆ ಹಾಕಿ ರಾಜ್‍ಪಥ್‍ನಲ್ಲಿ ಕರ್ನಾಟಕದ ಸಂಸ್ಕೃತಿಯನ್ನು ಅನಾವರಣಗೊಳಿಸಿದರು.

    ಬೀಟಿಂಗ್ ದಿ ರಿಟ್ರೇಟ್:
    ಈ ಬಾರಿ ವಿಶೇಷವೆಂದರೆ ಗಣರಾಜ್ಯೋತ್ಸವ ಅಂಗವಾಗಿ ಜ.29 ರಂದು ನಡೆಯುವ ‘ಬೀಟಿಂಗ್ ದಿ ರಿಟ್ರೀಟ್’ ಸಮಾರಂಭವನ್ನು ವೀಕ್ಷಿಸಲು ಆಟೋ-ರಿಕ್ಷಾ ಚಾಲಕರು, ಕಾರ್ಮಿಕರು, ನೈರ್ಮಲ್ಯ ಕಾರ್ಯಕರ್ತರು ಮತ್ತು ಫ್ರಂಟ್ ಲೈನ್ ಆರೋಗ್ಯ ಕಾರ್ಯಕರ್ತರಿಗೆ ವಿಶೇಷ ಆಹ್ವಾನ ನೀಡಲಾಗಿದೆ.

  • 70ನೇ ಗಣರಾಜ್ಯೋತ್ಸವ ಸಂಭ್ರಮ- ಸಕಲ ರೀತಿಯಲ್ಲೂ ರಾಜಪಥ್ ರೆಡಿ

    70ನೇ ಗಣರಾಜ್ಯೋತ್ಸವ ಸಂಭ್ರಮ- ಸಕಲ ರೀತಿಯಲ್ಲೂ ರಾಜಪಥ್ ರೆಡಿ

    ನವದೆಹಲಿ: ಇಂದು 70ನೇ ಗಣರಾಜ್ಯೋತ್ಸವದ ಸಂಭ್ರಮ. ರಾಷ್ಟ್ರ ರಾಜಧಾನಿ ನವದೆಹಲಿಯ ರಾಜಪಥ್ ರಸ್ತೆ ಕಾರ್ಯಕ್ರಮಕ್ಕೆ ಸಕಲ ರೀತಿಯಲ್ಲೂ ಸಜ್ಜಾಗಿದೆ.

    ದಟ್ಟ ಮಂಜು ಹಿನ್ನೆಲೆಯಲ್ಲಿ ಬೆಳಗ್ಗೆ 10ರಿಂದ ಕಾರ್ಯಕ್ರಮಗಳು ಆರಂಭವಾಗಲಿದೆ. ಈ ಬಾರಿ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಾಫೋಸಾ ಗಣರಾಜೋತ್ಸವದ ಅತಿಥಿ ಆಗಿದ್ದಾರೆ. ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ್ ಜ್ಯೋತಿ ಬಳಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಬಳಿಕ ಪ್ರಧಾನಿ, ಅತಿಥಿ, ಗಣ್ಯರ ಸಮ್ಮುಖದಲ್ಲಿ ರಾಷ್ಟ್ರಪತಿ ಕೋವಿಂದ್ ಧ್ವಜಾರೋಹಣ ಮಾಡಲಿದ್ದಾರೆ. ಇದನ್ನೂ ಓದಿ: ದೇಶದ ಹಬ್ಬಕ್ಕೆ ಕ್ಷಣಗಣನೆ : ಸಿಂಗಾರಗೊಂಡಿದೆ ರಾಜಪಥ್: ಈ ಬಾರಿಯ ಪರೇಡ್ ವಿಶೇಷತೆ ಏನು?

    ಈ ಬಾರಿ 16 ರಾಜ್ಯಗಳ ಮತ್ತು 6 ಇಲಾಖೆಗಳ ಒಟ್ಟು 22 ಸ್ತಬ್ಧ ಚಿತ್ರಗಳು ಪ್ರದರ್ಶನವಾಗುತ್ತಿದೆ. ಗಾಂಧೀಜಿ 150ನೇ ಜನ್ಮದಿನದ ಹಿನ್ನೆಲೆ ಸ್ತಬ್ಧ ಚಿತ್ರಗಳಲ್ಲಿ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ. ಬೆಂಗಳೂರಿನ ಗೋಕುಲ್ ಎಕ್ಸ್ ಟೆನ್ಷನ್‍ನ ನಾವ್ಕೀಸ್ ಶಾಲೆಯ ವಿದ್ಯಾರ್ಥಿನಿ ದೇವಿಕಾ ಸಂತೋಷ್‍ಗೆ ಪ್ರ್ರಧಾನ ಮಂತ್ರಿ ಬಾಕ್ಸ್ ನಲ್ಲಿ ಕುಳಿತು ಪರೇಡ್ ವೀಕ್ಷಿಸುವ ಅವಕಾಶ ಸಿಕ್ಕಿದೆ.

    ಕಳೆದ ವರ್ಷದ ಸಿಬಿಎಸ್‍ಇ 10ನೇ ತರಗತಿಯಲ್ಲಿ ದೇವಿಕಾ ದೇಶಕ್ಕೇ ಅತೀ ಹೆಚ್ಚು ಅಂಕಗಳನ್ನು ಪಡೆದಿದ್ದರು. ಉಗ್ರರ ಕರಿನೆರಳಿನ ಭೀತಿಯಿಂದ ಎಲ್ಲೆಡೆ ಹದ್ದಿನ ಕಣ್ಣಿಡಲಾಗಿದೆ. ಇದನ್ನೂ ಓದಿ: ಫಸ್ಟ್ ಟೈಂ ಆರ್‌ಡಿಯಲ್ಲಿ ಪುರುಷ ದಳವನ್ನು ಮುನ್ನಡೆಸಲಿದ್ದಾರೆ ಮಹಿಳಾ ಅಧಿಕಾರಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv